ವಿಶ್ವದ ಎಲ್ಲಾ ನಾಯಕರು ಮತ್ತು ನಾಗರಿಕರ ಆತ್ಮೀಯ ಹಾಗೂ ಹೃತ್ಪೂರ್ವಕವಾದ ಶುಭಾಶಯಗಳಿಗೆ ಪ್ರಧಾನಮಂತ್ರಿಯವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ

June 10th, 11:50 pm

ಪ್ರಧಾನಮಂತ್ರಿಯವರು ವಿಶ್ವದ ಎಲ್ಲಾ ನಾಯಕರು ಮತ್ತು ಎಲ್ಲಾ ವರ್ಗದ ಜನರಿಗೆ ಅವರ ಆತ್ಮೀಯ ಶುಭಾಶಯಗಳು ಮತ್ತು ಅಭಿನಂದನಾ ಸಂದೇಶಗಳಿಗಾಗಿ ತಮ್ಮ ಹೃತ್ಪೂರ್ವಕವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಶುಭಾಶಯಗಳಿಂದ ತೀವ್ರವಾಗಿ ಪ್ರಭಾವಿತರಾದ ಅವರು, ಭಾರತಕ್ಕೆ ಸೇವೆ ಸಲ್ಲಿಸುವುದು ಮತ್ತು ರಾಷ್ಟ್ರದ ಅಭಿವೃದ್ಧಿಯ ಹಾದಿಯಲ್ಲಿ ಕೊಡುಗೆ ನೀಡುವುದು ತಮ್ಮ ಒಂದು ಸೌಭಾಗ್ಯ ಎಂದು ಹೇಳಿದರು. ಜನರ ನಂಬಿಕೆಯೇ ತಮ್ಮ ಶಕ್ತಿಯ ದೊಡ್ಡ ಮೂಲ ಎಂದು ಒತ್ತಿ ಹೇಳಿದ ಪ್ರಧಾನಿಯವರು, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸಲು, 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ಭಾರತದ ಜಾಗತಿಕ ಪಾಲುದಾರಿಕೆಗಳನ್ನು ಮತ್ತಷ್ಟು ಬಲಪಡಿಸಲು ಇನ್ನೂ ಹೆಚ್ಚಿನ ಸಮರ್ಪಣೆಯೊಂದಿಗೆ ಕೆಲಸ ಮಾಡುವ ತಮ್ಮ ಸಂಪೂರ್ಣ ಬದ್ಧತೆಯನ್ನು ಪುನರುಚ್ಚರಿಸಿದರು.

ಭಾರತದಲ್ಲಿ ಅತ್ಯಂತ ದೀರ್ಘಕಾಲ ಸತತವಾಗಿ ಸೇವೆ ಸಲ್ಲಿಸಿದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಪ್ರಧಾನಮಂತ್ರಿಯಾಗಿ ಹೊರಹೊಮ್ಮಿದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಜಾಗತಿಕ ನಾಯಕರಿಂದ ಅಭಿನಂದನೆಗಳ ಮಹಾಪೂರ

June 10th, 02:08 pm

ಭಾರತದ ಇತಿಹಾಸದಲ್ಲಿ ಅತ್ಯಂತ ದೀರ್ಘಕಾಲ ಸತತವಾಗಿ ಸೇವೆ ಸಲ್ಲಿಸಿದ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಪ್ರಧಾನಮಂತ್ರಿಯಾಗಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ವಿಶ್ವದಾದ್ಯಂತದ ಹಲವು ದೇಶಗಳ ಮುಖ್ಯಸ್ಥರು ಮತ್ತು ಸರ್ಕಾರಗಳು ಅಭಿನಂದನಾ ಸಂದೇಶಗಳನ್ನು ಕಳುಹಿಸಿದ್ದಾರೆ.

Prime Minister congratulates Ms. Mette Frederiksen on assuming office as the Prime Minister of Denmark

June 03rd, 06:45 pm

Prime Minister Shri Narendra Modi today congratulated Ms. Mette Frederiksen on assuming office as the Prime Minister of Denmark for a remarkable third consecutive term.

ಪ್ರಧಾನಮಂತ್ರಿಗಳಿಂದ 3ನೇ ಭಾರತ-ನಾರ್ಡಿಕ್ ಶೃಂಗಸಭೆಯ ನೇಪಥ್ಯದಲ್ಲಿ ಡೆನ್ಮಾರ್ಕ್ ಹಂಗಾಮಿ ಪ್ರಧಾನಮಂತ್ರಿಯೊಂದಿಗೆ ಸಭೆ

May 19th, 06:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 3ನೇ ಭಾರತ-ನಾರ್ಡಿಕ್ ಶೃಂಗಸಭೆಯ ನೇಪಥ್ಯದಲ್ಲಿ ಇಂದು ಓಸ್ಲೋದಲ್ಲಿ ಡೆನ್ಮಾರ್ಕ್ ಹಂಗಾಮಿ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸನ್ ಅವರನ್ನು ಭೇಟಿ ಮಾಡಿದರು.

3ನೇ ಭಾರತ-ನಾರ್ಡಿಕ್ ಶೃಂಗಸಭೆಯ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

May 19th, 04:25 pm

ಇಂದು 3ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವುದು ನನಗೆ ತುಂಬಾ ಸಂತೋಷ ತಂದಿದೆ. ಮೊದಲನೆಯದಾಗಿ, ಈ ಶೃಂಗಸಭೆ ಆಯೋಜಿಸಿದ್ದಕ್ಕಾಗಿ ನಾರ್ವೆ ಪ್ರಧಾನಮಂತ್ರಿ ಅವರಿಗೆ ನಾನು ಹೃತ್ಪೂರ್ವಕವಾಗಿ ಧನ್ಯವಾದ ಹೇಳುತ್ತೇನೆ. ಇಲ್ಲಿ ಉಪಸ್ಥಿತರಿರುವ ಎಲ್ಲಾ ನಾರ್ಡಿಕ್ ನಾಯಕರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ.

ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿಯವರ ಭೇಟಿ (ಮೇ 15 - 20, 2026)

May 11th, 09:00 pm

ಮೇ 15 ರಿಂದ ಮೇ 20, 2026 ರವರೆಗೆ ಯುಎಇ, ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿಗೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಮಯದಲ್ಲಿ, ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ. ನೆದರ್ಲ್ಯಾಂಡ್ಸ್‌ನಲ್ಲಿ, ಪ್ರಧಾನಿ ರಾಜ ವಿಲ್ಲೆಮ್-ಅಲೆಕ್ಸಾಂಡರ್ ಅವರನ್ನು ಭೇಟಿ ಮಾಡಿ ಪ್ರಧಾನಿ ರಾಬ್ ಜೆಟ್ಟನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಸ್ವೀಡನ್‌ನಲ್ಲಿ, ಅವರು ಪ್ರಧಾನಿ ಕ್ರಿಸ್ಟರ್ಸನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಾರ್ವೆಯಲ್ಲಿ, ಅವರು ಕಿಂಗ್ ಹೆರಾಲ್ಡ್ V ಅವರನ್ನು ಭೇಟಿ ಮಾಡಿ ಪ್ರಧಾನಿ ಜೋನಾಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ನಂತರ, ಅವರು ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಮಾತುಕತೆ ನಡೆಸಲು ಇಟಲಿಗೆ ಭೇಟಿ ನೀಡಲಿದ್ದಾರೆ.

ಸೆಪ್ಟೆಂಬರ್ 25 ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ 'ವಿಶ್ವ ಆಹಾರ ಮೇಳ ಭಾರತ 2025' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ

September 24th, 06:33 pm

'ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ' (PMFME) ಯೋಜನೆಯಡಿ, ಆಹಾರ ಸಂಸ್ಕರಣಾ ವಲಯದಲ್ಲಿನ ಸೂಕ್ಷ್ಮ ಯೋಜನೆಗಳಿಗಾಗಿ ಸುಮಾರು 26,000 ಫಲಾನುಭವಿಗಳಿಗೆ ₹770 ಕೋಟಿಗೂ ಅಧಿಕ ಮೊತ್ತದ ಸಾಲ-ಸಂಯೋಜಿತ ನೆರವನ್ನು ವಿತರಿಸಲಾಗುವುದು.

ಡೆನ್ಮಾರ್ಕ್ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ದೂರವಾಣಿ ಸಂಭಾಷಣೆ

September 16th, 07:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆನ್ಮಾರ್ಕ್ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಡೆನ್ಮಾರ್ಕ್ ದೇಶದ ಪ್ರಧಾನಮಂತ್ರಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು

April 15th, 06:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಡೆನ್ಮಾರ್ಕ್ ಪ್ರಧಾನಿ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಇಂದು ದೂರವಾಣಿ ಸಂಭಾಷಣೆ ನಡೆಸಿದರು. ಇಬ್ಬರೂ ನಾಯಕರು ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳು ಹಾಗೂ ಜಾಗತಿಕ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.

ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

April 08th, 08:30 pm

ಈ ಶೃಂಗಸಭೆಯ ಮೂಲಕ ದೇಶ ಮತ್ತು ವಿಶ್ವಾದ್ಯಂತದ ಗೌರವಾನ್ವಿತ ಅತಿಥಿಗಳೊಂದಿಗೆ ಮತ್ತು ನಿಮ್ಮ ಪ್ರೇಕ್ಷಕರೊಂದಿಗೆ ಸಂಪರ್ಕ ಸಾಧಿಸಲು ನೀವು ನನಗೆ ಅವಕಾಶ ನೀಡಿದ್ದಕ್ಕಾಗಿ ನಾನು “ನೆಟ್‌ವರ್ಕ್ 18”ಗೆ ನನ್ನ ಕೃತಜ್ಞತೆ ವ್ಯಕ್ತಪಡಿಸುತ್ತೇನೆ. ಈ ವರ್ಷದ ಶೃಂಗಸಭೆಯನ್ನು ಭಾರತದ ಯುವಕರ ಆಕಾಂಕ್ಷೆಗಳೊಂದಿಗೆ ನೀವು ಸಂಪರ್ಕಿಸಿದ್ದೀರಿ ಎಂಬುದನ್ನು ತಿಳಿದು ನನಗೆ ಸಂತೋಷವಾಗಿದೆ. ಈ ವರ್ಷದ ಆರಂಭದಲ್ಲಿ, ವಿವೇಕಾನಂದ ಜಯಂತಿಯಂದು, ಭಾರತ್ ಮಂಟಪದಲ್ಲಿ ವಿಕಸಿತ ಭಾರತ ಯುವ ನಾಯಕರ ಸಂವಾದ ನಡೆಸಲಾಯಿತು. ಆ ಸಮಯದಲ್ಲಿ, ಯುವಕರ ಕಣ್ಣುಗಳಲ್ಲಿ ಕನಸುಗಳ ಮಿಂಚು, ಅವರ ಸಂಕಲ್ಪ ಶಕ್ತಿ ಮತ್ತು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಅವರ ಉತ್ಸಾಹವನ್ನು ನಾನು ನೋಡಿದೆ. 2047ರ ವೇಳೆಗೆ ನಾವು ಭಾರತವನ್ನು ಕೊಂಡೊಯ್ಯಲು ಬಯಸುವ ಎತ್ತರ ಮತ್ತು ನಾವು ಅನುಸರಿಸುತ್ತಿರುವ ಮಾರ್ಗಸೂಚಿಯನ್ನು ನಾವು ಪ್ರತಿ ಹಂತದಲ್ಲೂ ಚರ್ಚಿಸುವುದನ್ನು ಮುಂದುವರಿಸಿದರೆ, 'ಅಮೃತ' (ಅಮೃತ ಕಾಲ) ಖಂಡಿತವಾಗಿಯೂ ಹೊರಹೊಮ್ಮುತ್ತದೆ. ಈ 'ಅಮೃತ'ವು 'ಅಮೃತ ಕಾಲ'ದ ಪೀಳಿಗೆಗೆ ಶಕ್ತಿ ಮತ್ತು ನಿರ್ದೇಶನ ನೀಡುವ ಜತೆಗೆ, ಭಾರತಕ್ಕೆ ಆವೇಗವನ್ನು ನೀಡುತ್ತದೆ. ಈ ಶೃಂಗಸಭೆಯಲ್ಲಿ ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ನ್ಯೂಸ್18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಭಾಷಣ

April 08th, 08:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ನ್ಯೂಸ್18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಮಾವೇಶದಲ್ಲಿ ಭಾರತ ಮತ್ತು ಪ್ರಪಂಚದಾದ್ಯಂತದ ಗಣ್ಯ ಅತಿಥಿಗಳೊಂದಿಗೆ ಸಂವಹನ ನಡೆಸಲು ಅವಕಾಶ ನೀಡಿದ್ದಕ್ಕಾಗಿ ಅವರು ನೆಟ್ವರ್ಕ್18 ಗೆ ಕೃತಜ್ಞತೆ ಸಲ್ಲಿಸಿದರು. ಈ ವರ್ಷದ ಶೃಂಗಸಭೆಯು ಭಾರತದ ಯುವಕರ ಆಕಾಂಕ್ಷೆಗಳ ಮೇಲೆ ಗಮನ ಕೇಂದ್ರೀಕರಿಸಿದ್ದನ್ನು ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವರ್ಷದ ಆರಂಭದಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯಂದು ಭಾರತ್ ಮಂಟಪದಲ್ಲಿ ನಡೆದ ‘ವಿಕಸಿತ ಭಾರತ ಯುವ ನಾಯಕರ ಸಂವಾದ’ (Viksit Bharat Young Leaders Dialogue) ಮಹತ್ವವನ್ನು ಒತ್ತಿ ಹೇಳಿದ ಅವರು, ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಯುವಕರ ಕನಸುಗಳು, ದೃಢಸಂಕಲ್ಪ ಮತ್ತು ಉತ್ಸಾಹದ ಬಗ್ಗೆ ಮಾತನಾಡಿದರು. ಭಾರತದ ಪ್ರಗತಿಗಾಗಿ 2047 ರವರೆಗಿನ ಮಾರ್ಗಸೂಚಿಯನ್ನು ಅವರು ಒತ್ತಿ ಹೇಳಿದರು, ಪ್ರತಿ ಹಂತದಲ್ಲೂ ನಿರಂತರ ಚಿಂತನೆ ಅಮೂಲ್ಯವಾದ ಒಳನೋಟಗಳನ್ನು ನೀಡುತ್ತದೆ ಎಂದು ಅವರು ಹೇಳಿದರು. ಈ ಒಳನೋಟಗಳು ಅಮೃತ ಕಾಲದ ಪೀಳಿಗೆಗೆ ಶಕ್ತಿ ತುಂಬುತ್ತವೆ, ಮಾರ್ಗದರ್ಶನ ನೀಡುತ್ತವೆ ಮತ್ತು ವೇಗವನ್ನು ಹೆಚ್ಚಿಸುತ್ತವೆ ಎಂದು ಅವರು ಹೇಳಿದರು. ಅವರು ಶೃಂಗಸಭೆಯ ಯಶಸ್ಸಿಗೆ ತಮ್ಮ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳನ್ನು ತಿಳಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಡೆನ್ಮಾರ್ಕ್ ಪ್ರಧಾನಿ ಜೊತೆ ದೂರವಾಣಿ ಸಂಭಾಷಣೆ ನಡೆಸಿದರು

April 20th, 06:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಗೌರವಾನ್ವಿತ ಡೆನ್ಮಾರ್ಕ್ ‌ನ ಪ್ರಧಾನಿ ಶ್ರೀಮತಿ. ಮೆಟ್ಟೆ ಫ್ರೆಡೆರಿಕ್ಸೆನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಪ್ರಧಾನ ಮಂತ್ರಿಯವರಿಂದ ಡೆನ್ಮಾರ್ಕ್ ಪ್ರಧಾನ ಮಂತ್ರಿಗಳಾಗಿ ಮರು ಆಯ್ಕೆಯಾದ ಶ್ರೀಮತಿ. ಮೆಟ್ಟೆ ಫೆಡರಿಕ್ಸೆನ್ ರವರಿಗೆ ಅಭಿನಂದನೆ.

December 15th, 11:01 pm

ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಡೆನ್ಮಾರ್ಕ್ ಪ್ರಧಾನ ಮಂತ್ರಿಗಳಾಗಿ ಮರು ಆಯ್ಕೆಯಾದ ಶ್ರೀಮತಿ ಮೆಟ್ಟೆ ಫೆಡರಿಕ್ಸೆನ್ ರವರಿಗೆ ಅಭಿನಂದಿಸಿದ್ದಾರೆ.

One nation, one fertilizer: PM Modi

October 17th, 11:11 am

Mantri Kisan Samruddhi Kendras (PMKSK) under the Ministry of Chemicals & Fertilisers. Furthermore, the Prime Minister also launched Pradhan Mantri Bhartiya Jan Urvarak Pariyojana - One Nation One Fertiliser.

PM inaugurates PM Kisan Samman Sammelan 2022 at Indian Agricultural Research Institute, New Delhi

October 17th, 11:10 am

The Prime Minister, Shri Narendra Modi inaugurated PM Kisan Samman Sammelan 2022 at Indian Agricultural Research Institute in New Delhi today. The Prime Minister also inaugurated 600 Pradhan Mantri Kisan Samruddhi Kendras (PMKSK) under the Ministry of Chemicals & Fertilisers. Furthermore, the Prime Minister also launched Pradhan Mantri Bhartiya Jan Urvarak Pariyojana - One Nation One Fertiliser.

2ನೇ ಭಾರತ-ನಾರ್ಡಿಕ್ ಶೃಂಗಸಭೆ

May 04th, 07:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆನ್ಮಾರ್ಕ್ ನ ಪ್ರಧಾನಮಂತ್ರಿ ಮೆಟ್ಟೆ ಫ್ರೆಡೆರಿಕ್ಸೆನ್, ಐಸ್ ಲ್ಯಾಂಡ್ ನ ಪ್ರಧಾನಮಂತ್ರಿ ಕತ್ರಿನ್ ಜಾಕೋಬ್ಸ್ ಡೊಟ್ಟಿರ್, ನಾರ್ವೆಯ ಪ್ರಧಾನಮಂತ್ರಿ ಜೋನಸ್ ಗಹರ್ ಸ್ಟೋರ್, ಸ್ವೀಡನ್ ನ ಪ್ರಧಾನಮಂತ್ರಿ ಮ್ಯಾಗ್ಡಲೀನಾ ಆಂಡರ್ಸನ್ ಮತ್ತು ಫಿನ್ ಲ್ಯಾಂಡ್ ನ ಪ್ರಧಾನಮಂತ್ರಿ ಸನ್ನಾ ಮರಿನ್ ಅವರೊಂದಿಗೆ 2ನೇ ಭಾರತ-ನಾರ್ಡಿಕ್ ಶೃಂಗಸಭೆಯಲ್ಲಿ ಭಾಗವಹಿಸಿದ್ದರು.

ಡೆನ್ಮಾರ್ಕ್‌ ನ ಮಹಾರಾಣಿ ಘನತೆವೆತ್ತ 2ನೇ( II ) ಮಾರ್ಗರೆಥೆ ಅವರು ಪ್ರಧಾನಮಂತ್ರಿಯವರನ್ನು ಸ್ವಾಗತಿಸಿದರು

May 04th, 08:05 am

ಕೋಪನ್‌ ಹೇಗನ್‌ ನಲ್ಲಿರುವ ತಮ್ಮ ಅಮಾಲಿಯನ್‌ ಬೋರ್ಗ್ ಅರಮನೆಗೆ ಇಂದು ಆಗಮಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಡೆನ್ಮಾರ್ಕ್‌ ನ ಮಹಾರಾಣಿ ಘನತೆವೆತ್ತ 2ನೇ( II ) ಮಾರ್ಗರೆಥೆ ಅವರು ಸ್ವಾಗತಿಸಿ ಬರಮಾಡಿಕೊಂಡರು.

ಕೋಪನ್ ಹ್ಯಾಗನ್ ನಲ್ಲಿ ಭಾರತೀಯ ಸಮುದಾಯದೊಂದಿಗೆ ಪ್ರಧಾನಮಂತ್ರಿಯವರು ಸಂವಾದ ನಡೆಸಿದರು

May 03rd, 09:14 pm

ಕೋಪನ್ ಹ್ಯಾಗನ್ ನ ಬೆಲ್ಲಾ ಕೇಂದ್ರದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜೊತೆಗೆ ಡೆನ್ಮಾರ್ಕ್ನ ಘನತೆವೆತ್ತ ಶ್ರೀಮತಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮತ್ತು ಸಂವಾದ ನಡೆಸಿದರು. ವಿದ್ಯಾರ್ಥಿಗಳು, ಸಂಶೋಧಕರು, ವೃತ್ತಿಪರರು ಮತ್ತು ಉದ್ಯಮಿಗಳನ್ನು ಒಳಗೊಂಡ ಡೆನ್ಮಾರ್ಕ್ನಲ್ಲಿರುವ ಭಾರತೀಯ ಸಮುದಾಯದ 1000 ಕ್ಕೂ ಹೆಚ್ಚು ಸದಸ್ಯರು ಸಂವಾದ ಸಮಾರಂಭದಲ್ಲಿ ಭಾಗವಹಿಸಿದರು.

ಭಾರತ-ಡೆನ್ಮಾರ್ಕ್ ವ್ಯಾಪಾರ ವೇದಿಕೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದಾರೆ

May 03rd, 07:40 pm

ಕೋಪನ್‌ಹೇಗನ್‌ನಲ್ಲಿ ನಡೆದ ಭಾರತ-ಡೆನ್ಮಾರ್ಕ್ ಬಿಸಿನೆಸ್ ಫೋರಂನಲ್ಲಿ ಪ್ರಧಾನಿ ಮೋದಿ ಅವರು ಉದ್ಯಮಿಗಳನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಿಯವರು ತಮ್ಮ ಹೇಳಿಕೆಯಲ್ಲಿ, ಇತ್ತೀಚಿನ ದಿನಗಳಲ್ಲಿ ಫೋಮೋ ಅಥವಾ 'ಕಳೆದುಹೋಗುವ ಭಯ' ಎಂಬ ಪದವು ಸಾಮಾಜಿಕ ಮಾಧ್ಯಮದಲ್ಲಿ ಸೆಳೆತವನ್ನು ಪಡೆಯುತ್ತಿದೆ. ಭಾರತದ ಸುಧಾರಣೆಗಳು ಮತ್ತು ಹೂಡಿಕೆಯ ಅವಕಾಶಗಳನ್ನು ನೋಡಿದರೆ, ನಮ್ಮ ರಾಷ್ಟ್ರದಲ್ಲಿ ಹೂಡಿಕೆ ಮಾಡದಿರುವವರು ಖಂಡಿತವಾಗಿಯೂ ಅವಕಾಶವನ್ನ ಕಳೆದುಕೊಳ್ಳಬಹುದು.ಎಂದು ನಾನು ಹೇಳಬಲ್ಲೆ

ಡೆನ್ಮಾರ್ಕಿನಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆಯ ಇಂಗ್ಲೀಷ್ ಭಾಷಾಂತರ.

May 03rd, 07:11 pm

ಗೌರವಾನ್ವಿತ ಪ್ರಧಾನ ಮಂತ್ರಿ ಅವರೇ ಅದ್ಭುತ ಸ್ವಾಗತ ನೀಡಿದುದಕ್ಕಾಗಿ ಮತ್ತು ನನಗೆ ಹಾಗು ನನ್ನ ನಿಯೋಗಕ್ಕೆ ಡೆನ್ಮಾರ್ಕಿನಲ್ಲಿ ಆತಿಥ್ಯ ಒದಗಿಸಿದುದಕ್ಕಾಗಿ ನಿಮಗೆ ಮತ್ತು ನಿಮ್ಮ ತಂಡಕ್ಕೆ ಧನ್ಯವಾದಗಳು. ನಿಮ್ಮ ಸುಂದರ ದೇಶಕ್ಕೆ ಇದು ನನ್ನ ಮೊದಲ ಭೇಟಿ. ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ನನಗೆ ನಿಮ್ಮನ್ನು ಭಾರತದಲ್ಲಿ ಸ್ವಾಗತಿಸುವ ಅವಕಾಶ ದೊರಕಿತ್ತು. ಈ ಎರಡು ಭೇಟಿಗಳ ಮೂಲಕ ನಮಗೆ ನಮ್ಮ ಬಾಂಧವ್ಯಗಳಲ್ಲಿ ನಿಕಟತೆ ಮತ್ತು ಚಲನಶೀಲತೆಯನ್ನು ತರಲು ಸಾಧ್ಯವಾಗಿದೆ. ನಮ್ಮೆರಡು ದೇಶಗಳು ಪ್ರಜಾಪ್ರಭುತ್ವದ ಮೌಲ್ಯಗಳನ್ನು, ಅಭಿವ್ಯಕ್ತಿ ಸ್ವಾತಂತ್ರ್ಯದ ಮೌಲ್ಯಗಳನ್ನು ಮಾತ್ರವೇ ಹಂಚಿಕೊಳ್ಳುತ್ತಿರುವುದಲ್ಲ ಕಾನೂನಿನ ಆಡಳಿತದ ಜೊತೆ ಉಭಯ ಕಡೆಗಳಲ್ಲು ಪರಸ್ಪರ ಪೂರಕವಾದಂತಹ ಶಕ್ತಿಗಳಿವೆ.