ನವದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ (BRICS) ಶೃಂಗಸಭೆಯ ನೇಪಥ್ಯದಲ್ಲಿ ಉಗಾಂಡಾದ ಉಪಾಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

September 13th, 05:13 pm

ನವದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉಗಾಂಡಾ ಗಣರಾಜ್ಯದ ಉಪಾಧ್ಯಕ್ಷರಾದ ಘನತೆವೆತ್ತ ಜೆಸ್ಸಿಕಾ ರೋಸ್ ಎಪೆಲ್ ಅಲುಪೋ ಅವರೊಂದಿಗೆ ಇಂದು ಸೌಹಾರ್ದಯುತ ಹಾಗೂ ಫಲಪ್ರದ ದ್ವಿಪಕ್ಷೀಯ ಸಭೆಯನ್ನು ನಡೆಸಿದರು.

ನವದೆಹಲಿಯಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಕಜಕಿಸ್ತಾನ್ ಗಣರಾಜ್ಯದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

September 13th, 04:31 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಕಜಕಿಸ್ತಾನ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಕಾಸಿಮ್-ಜೋಮಾರ್ಟ್ ಟೊಕಾಯೆವ್ ಅವರನ್ನು ಭೇಟಿಯಾದರು.

18ನೇ ಬ್ರಿಕ್ಸ್ (BRICS) ಶೃಂಗಸಭೆಯ "ಸ್ಥಿತಿಸ್ಥಾಪಕತ್ವ, ನಾವೀನ್ಯತೆ, ಸಹಕಾರ ಮತ್ತು ಸುಸ್ಥಿರತೆ: ಅಂತರ್ಗತ ಜಾಗತಿಕ ಬೆಳವಣಿಗೆಗಾಗಿ ಭವಿಷ್ಯವನ್ನು ರೂಪಿಸುವುದು" ಅಧಿವೇಶನದಲ್ಲಿ ಪ್ರಧಾನ ಮಂತ್ರಿಯವರ ಆರಂಭಿಕ ಪ್ರತಿಕ್ರಿಯೆಯ ಕನ್ನಡ ಅನುವಾದ

September 13th, 11:00 am

ಬ್ರಿಕ್ಸ್ (BRICS)ನ ವಿಸ್ತೃತ ಕುಟುಂಬಕ್ಕೆ ನಿಮ್ಮೆಲ್ಲರಿಗೂ ನಾನು ಆತ್ಮೀಯ ಸ್ವಾಗತವನ್ನು ಕೋರುತ್ತೇನೆ.ಇಂದು, ಈ ಸಭಾಂಗಣವು ವಿವಿಧ ಖಂಡಗಳು, ಸಂಸ್ಕೃತಿಗಳು ಮತ್ತು ವೈವಿಧ್ಯಮಯ ಅಭಿವೃದ್ಧಿ ಪಯಣಗಳನ್ನು ಒಗ್ಗೂಡಿಸಿದೆ. ಇದು ಬ್ರಿಕ್ಸ್ ನ ಬೆಳೆಯುತ್ತಿರುವ ಶಕ್ತಿ, ಆಕರ್ಷಣೆ ಮತ್ತು ಅದರ ಮೇಲಿರುವ ಅಭೂತಪೂರ್ವ ವಿಶ್ವಾಸಕ್ಕೆ ಸಾಕ್ಷಿಯಾಗಿದೆ.

ಗೌರವಾನ್ವಿತ ಯುವರಾಜ 5ನೇ ರಹೀಮ್ ಆಗಾ ಖಾನ್ ಅವರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭೇಟಿ

September 10th, 02:59 pm

ಆಗಾ ಖಾನ್ ಅಭಿವೃದ್ಧಿ ಜಾಲ (ಎ ಎಕೆ ಡಿ ಎನ್ ) ಅಧ್ಯಕ್ಷರಾದ ಮಾನ್ಯ ಯುವರಾಜ 5ನೇ ರಹೀಮ್ ಆಗಾ ಖಾನ್ ಅವರು ನವದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಗುಜರಾತಿನ ವಡೋದರಾದಲ್ಲಿ 'ನಮೋ ಫಾರ್ ವಿಕಸಿತ ಭಾರತ' ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

September 08th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ವಡೋದರಾದಲ್ಲಿ ₹35,000 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಉದ್ಘಾಟಿಸಿದರು ಹಾಗೂ ರಾಷ್ಟ್ರಕ್ಕೆ ಸಮರ್ಪಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರಿಗೆ ಆತ್ಮೀಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಪ್ರತ್ಯಕ್ಷವಾಗಿ ಮತ್ತು ಆನ್‌ಲೈನ್ ಮೂಲಕ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸೇರ್ಪಡೆಯಾಗಿದ್ದ ನಾಗರಿಕರನ್ನು ಅವರು ಸ್ವಾಗತಿಸಿದರು. ನನ್ನ ಗುಜರಾತ್‌ನ ಸಹೋದರ ಸಹೋದರಿಯರಿಗೆ ಸ್ವಾಗತ ಎಂದು ಮೋದಿ ಹೇಳಿದರು.

ಗುಜರಾತ್‌ನ ವಡೋದರಾದಲ್ಲಿ ₹35,000 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ

September 08th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ವಡೋದರಾದಲ್ಲಿ ₹35,000 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಉದ್ಘಾಟಿಸಿದರು ಹಾಗೂ ರಾಷ್ಟ್ರಕ್ಕೆ ಸಮರ್ಪಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಗಣ್ಯರಿಗೆ ಆತ್ಮೀಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಪ್ರತ್ಯಕ್ಷವಾಗಿ ಮತ್ತು ಆನ್‌ಲೈನ್ ಮೂಲಕ ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸೇರ್ಪಡೆಯಾಗಿದ್ದ ನಾಗರಿಕರನ್ನು ಅವರು ಸ್ವಾಗತಿಸಿದರು. ನನ್ನ ಗುಜರಾತ್‌ನ ಸಹೋದರ ಸಹೋದರಿಯರಿಗೆ ಸ್ವಾಗತ ಎಂದು ಮೋದಿ ಹೇಳಿದರು.

ಸೆಪ್ಟೆಂಬರ್ 8ರಂದು ಗುಜರಾತ್ ಮತ್ತು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

September 07th, 11:51 am

ಪ್ರಧಾನಿ ಮೋದಿ ಸೆಪ್ಟೆಂಬರ್ 8 ರಂದು ಗುಜರಾತ್ ಮತ್ತು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದು, ವಡೋದರಾದಲ್ಲಿ ₹35,000 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಉದ್ಘಾಟಿಸಲಿದ್ದಾರೆ ಮತ್ತು ಮುಂಬೈನಲ್ಲಿ ಗ್ಲೋಬಲ್ ಫಿನ್‌ಟೆಕ್ ಫೆಸ್ಟ್ 2026 ಅನ್ನು ಉದ್ಘಾಟಿಸಲಿದ್ದಾರೆ. ಸರಕು ಸಾಗಣೆ ಸಂಪರ್ಕವನ್ನು ಬಲಪಡಿಸುವುದರಿಂದ ಹಿಡಿದು ಡಿಜಿಟಲ್ ಹಣಕಾಸಿನ ಭವಿಷ್ಯವನ್ನು ರೂಪಿಸುವವರೆಗೆ, ಈ ಭೇಟಿಯು ಭಾರತದ ಬೆಳವಣಿಗೆ ಮತ್ತು ನಾವೀನ್ಯತೆ ಪ್ರಯಾಣವನ್ನು ಮುನ್ನಡೆಸಲಿದೆ.

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ವಿಜೇತರೊಂದಿಗೆ ಪ್ರಧಾನಮಂತ್ರಿ ಸಂವಾದ

September 05th, 10:00 am

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ವಿಜೇತರೊಂದಿಗೆ ಸಂವಾದ ನಡೆಸಿದರು. ಈ ವರ್ಷ 3 ವಿಭಾಗಗಳಿಂದ ಒಟ್ಟು 82 ಶಿಕ್ಷಕರು ಮತ್ತು ಶಿಕ್ಷ ತಜ್ಞರನ್ನು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ. ಇವರಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ 48 ಶಿಕ್ಷಕರು, ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ಪಾಲಿಟೆಕ್ನಿಕ್‌ಗಳ 21 ಶಿಕ್ಷಕರು ಮತ್ತು ಅಧ್ಯಾಪಕರು, ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯದ 13 ಕೌಶಲ್ಯ ತರಬೇತುದಾರರು ಸೇರಿದ್ದಾರೆ.

ಉಜ್ಬೆಕಿಸ್ತಾನ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಗೋಷ್ಠಿಯ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರು ನೀಡಿದ ಮಾಧ್ಯಮ ಹೇಳಿಕೆಯ ಕನ್ನಡ ಅನುವಾದ

August 30th, 01:30 pm

ಉಜ್ಬೆಕಿಸ್ತಾನ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಗೋಷ್ಠಿಯ ಸಂದರ್ಭದಲ್ಲಿ, ಪ್ರಧಾನಮಂತ್ರಿಯವರು ನೀಡಿದ ಮಾಧ್ಯಮ ಹೇಳಿಕೆಯ ಕನ್ನಡ ಅನುವಾದ

ಆಗಸ್ಟ್ 27ರಂದು 'ಖೇಲೋ ಇಂಡಿಯಾ' ಸಂವಾದದಲ್ಲಿ ಯುವಜನರನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಮಂತ್ರಿ

August 26th, 10:22 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 27ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಖೇಲೋ ಇಂಡಿಯಾ' ಸಂವಾದವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಯುವಕರಿಗೆ ಭಾರತದ ಕ್ರೀಡಾ ಪ್ರಯಾಣದಲ್ಲಿ ತೊಡಗಿಸಿಕೊಳ್ಳಲು, ಅವರ ಆಕಾಂಕ್ಷೆಗಳನ್ನು ಹಂಚಿಕೊಳ್ಳಲು ಮತ್ತು ಬಲವಾದ ಯುವಕರ ನೇತೃತ್ವದ 'ವಿಕಸಿತ ಭಾರತ'ಕ್ಕಾಗಿ ತಮ್ಮ ವಿಚಾರಗಳನ್ನು ನೀಡಲು ಸಹಾಯ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ.

2025ರ ಬ್ಯಾಚ್ ನ ಐ ಎಫ್ ಎಸ್ ತರಬೇತಿ ನಿರತ ಅಧಿಕಾರಿಗಳಿಂದ ಪ್ರಧಾನಮಂತ್ರಿ ಭೇಟಿ

August 24th, 07:13 pm

ಭಾರತೀಯ ವಿದೇಶಾಂಗ ಸೇವೆಯ (ಐ ಎಫ್ ಎಸ್) 2025ರ ಬ್ಯಾಚ್ ನ ತರಬೇತಿ ನಿರತ ಅಧಿಕಾರಿಗಳು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು 'ಸೇವಾ ತೀರ್ಥ'ದಲ್ಲಿ ಭೇಟಿಯಾದರು. ಈ ತಂಡವು ದೇಶದ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೇರಿದ 50 ಐಎಫ್ ಎಸ್ ತರಬೇತಿ ನಿರತ ಅಧಿಕಾರಿಗಳನ್ನು ಒಳಗೊಂಡಿತ್ತು.

ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್

August 22nd, 06:11 pm

ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ - 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

August 21st, 09:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ 2026ನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ನಾಯಕರ ವೇದಿಕೆಯಲ್ಲಿ ನೆರೆದಿದ್ದ ಗಣ್ಯರು, ನೀತಿ ನಿರೂಪಕರು ಮತ್ತು ವಾಣಿಜ್ಯ ನಾಯಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು, ಪ್ರತಿಷ್ಠಿತ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು.

ಎಕನಾಮಿಕ್ ಟೈಮ್ಸ್ ವಿಶ್ವ ನಾಯಕರ ವೇದಿಕೆ 2026ನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 21st, 08:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ 2026ನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ನಾಯಕರ ವೇದಿಕೆಯಲ್ಲಿ ನೆರೆದಿದ್ದ ಗಣ್ಯರು, ನೀತಿ ನಿರೂಪಕರು ಮತ್ತು ವಾಣಿಜ್ಯ ನಾಯಕರಿಗೆ ಶುಭಾಶಯ ಕೋರಿದ ಪ್ರಧಾನಮಂತ್ರಿಯವರು, ಪ್ರತಿಷ್ಠಿತ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ಅವರಿಂದ ಭಾರತ ಸರ್ಕಾರದ ಕಾರ್ಯದರ್ಶಿಗಳೊಂದಿಗೆ 3ನೇ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ

August 20th, 09:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಅಧಿಕೃತ ನಿವಾಸವಾದ 7, ಲೋಕ ಕಲ್ಯಾಣ ಮಾರ್ಗದಲ್ಲಿ ಭಾರತ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ಮೂರನೇ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮೂಲಸೌಕರ್ಯ ಮತ್ತು ಸಂಪರ್ಕ, ಭದ್ರತೆ ಮತ್ತು ವಿದೇಶಾಂಗ ವ್ಯವಹಾರಗಳು ಹಾಗೂ ಆಡಳಿತಕ್ಕೆ ಸಂಬಂಧಿಸಿದ ಸಚಿವಾಲಯಗಳು ಮತ್ತು ಇಲಾಖೆಗಳ ಭವಿಷ್ಯದ ಕಾರ್ಯಸೂಚಿಯ ಬಗ್ಗೆ ಅವರು ಚರ್ಚಿಸಿದರು.

ಜಪಾನ್ ರಕ್ಷಣಾ ಸಚಿವರಿಂದ ಪ್ರಧಾನಮಂತ್ರಿ ಮೋದಿ ಭೇಟಿ

August 20th, 09:04 pm

ಪ್ರಸ್ತುತ ಭಾರತಕ್ಕೆ ಅಧಿಕೃತ ಭೇಟಿಯಲ್ಲಿರುವ ಜಪಾನ್ ರಕ್ಷಣಾ ಸಚಿವರಾದ ಶ್ರೀ ಶಿಂಜಿರೊ ಕೊಯಿಜುಮಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪಶ್ಚಿಮ ಬಂಗಾಳ, ಒಡಿಶಾ, ತಮಿಳುನಾಡು ಮತ್ತು ಆಂಧ್ರಪ್ರದೇಶದ ಎಂಟು ಜಿಲ್ಲೆಗಳನ್ನು ಒಳಗೊಂಡ ನಾಲ್ಕು ಮಲ್ಟಿಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರ ಸಂಪುಟ ಅನುಮೋದನೆ; ಇದು ಭಾರತೀಯ ರೈಲ್ವೆಯ ಪ್ರಸ್ತುತ ಜಾಲವನ್ನು ಸುಮಾರು 410 ಕಿ.ಮೀ ಹೆಚ್ಚಿಸಲಿದೆ

August 19th, 03:18 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ರೈಲ್ವೆ ಸಚಿವಾಲಯದ ಒಟ್ಟು ಸುಮಾರು 9,450 ಕೋಟಿ ರೂ. ವೆಚ್ಚದ ನಾಲ್ಕು ಯೋಜನೆಗಳಿಗೆ ಅನುಮೋದನೆ ನೀಡಿದೆ. ಈ ಯೋಜನೆಗಳು ಹೀಗಿವೆ:

ಅಮೆರಿಕ ಉಪಾಧ್ಯಕ್ಷರಿಂದ ದೂರವಾಣಿ ಕರೆ ಸ್ವೀಕರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

August 08th, 10:58 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಮೆರಿಕ ಉಪಾಧ್ಯಕ್ಷರಾದ ಶ್ರೀ ಜೆ.ಡಿ. ವ್ಯಾನ್ಸ್ ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು.

ಭಾರತದ ರಾಷ್ಟ್ರೀಯ ಏಕೀಕೃತ ಸಂಕುಚಿತ ಜೈವಿಕ ಅನಿಲ ಯೋಜನೆ ಗೋಬರ್ಧನ್ ಗೆ ಸಂಪುಟದ ಅನುಮೋದನೆ. ಈ ಯೋಜನೆಗೆ ರೂ. 23,731 ಕೋಟಿ ವೆಚ್ಚವಾಗಲಿದೆ.

August 06th, 04:08 pm

ಭಾರತದ ಶುದ್ಧ ಇಂಧನ ಪ್ರಯಾಣದಲ್ಲಿ ನಿರ್ಣಾಯಕ ಕ್ಷಣವನ್ನು ಗುರುತಿಸುವ ಸಲುವಾಗಿ, ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು, 2026-27ನೇ ಹಣಕಾಸು ವರ್ಷದಿಂದ 2035-36ನೇ ಹಣಕಾಸು ವರ್ಷಕ್ಕೆ ಒಟ್ಟು 23,731 ಕೋಟಿ ರೂ.ಗಳ ವೆಚ್ಚದ ರಾಷ್ಟ್ರೀಯ ವೃತ್ತಾಕಾರದ ಜೈವಿಕ ಇಂಧನ ಯೋಜನೆಯಾದ ಗೋಬರ್ಧನ್ ಅನ್ನು ಅನುಮೋದಿಸಿದೆ. ಈ ಯೋಜನೆಯು ಇಂಧನ ಸುರಕ್ಷತೆ, ರೈತರು ಮತ್ತು ಗ್ರಾಮೀಣ ಉದ್ಯಮಗಳು, ತ್ಯಾಜ್ಯದಿಂದ ಸಂಪತ್ತಿಗೆ, ಆತ್ಮನಿರ್ಭರ ಭಾರತ ಮತ್ತು ವಿಕ್ಷಿತ್ ಭಾರತದ ದೃಷ್ಟಿಕೋನಕ್ಕೆ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

370 ಮತ್ತು 35(A) ವಿಧಿಗಳ ರದ್ದತಿಯ ಏಳು ವರ್ಷಗಳು.

August 05th, 02:25 pm

370 ಮತ್ತು 35(A) ವಿಧಿಗಳನ್ನು ಐತಿಹಾಸಿಕವಾಗಿ ರದ್ದುಗೊಳಿಸಿ ಭಾರತ ಏಳು ವರ್ಷಗಳನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ಕಳೆದ ಏಳು ವರ್ಷಗಳಲ್ಲಿ, ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಜನರು ವಿವಿಧ ಕ್ಷೇತ್ರಗಳಲ್ಲಿ ವ್ಯಾಪಕ ಪರಿವರ್ತನೆಗೆ ಸಾಕ್ಷಿಯಾಗಿದ್ದಾರೆ ಎಂದು ಪ್ರಧಾನಿ ಮೋದಿ ಗಮನಿಸಿದರು. ರಾಷ್ಟ್ರೀಯ ಏಕತೆಗೆ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಜೀವಮಾನದ ಬದ್ಧತೆಯನ್ನು ಅವರು ಎತ್ತಿ ತೋರಿಸಿದರು ಮತ್ತು ವಿಕ್ಷಿತ ಭಾರತಕ್ಕೆ ಪ್ರತಿಯೊಬ್ಬ ನಾಗರಿಕರ ಕೊಡುಗೆಯನ್ನು ಒತ್ತಿ ಹೇಳಿದರು.