ಜಂಟಿ ಹೇಳಿಕೆ: ಯುಎಇ ಅಧ್ಯಕ್ಷರಾದ ಗೌರವಾನ್ವಿತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಭಾರತ ಭೇಟಿ
January 19th, 08:10 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಯುನೈಟೆಡ್ ಅರಬ್ ಎಮಿರೇಟ್ಸ್ನ ಅಧ್ಯಕ್ಷರಾದ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು 19 ಜನವರಿ 2026 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಕಳೆದ ಹತ್ತು ವರ್ಷಗಳಲ್ಲಿ ಘನತೆವೆತ್ತ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಭಾರತಕ್ಕೆ ನೀಡಿದ ಐದನೇ ಭೇಟಿ ಇದಾಗಿದ್ದು, ಯುಎಇ ಅಧ್ಯಕ್ಷರಾಗಿ ಇದು ಅವರ ಮೂರನೇ ಅಧಿಕೃತ ಭಾರತ ಭೇಟಿಯಾಗಿದೆ.ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
January 11th, 02:45 pm
2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.ರಾಜ್ಕೋಟ್ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು
January 11th, 02:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್ನ ರಾಜ್ಕೋಟ್ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್ಕೋಟ್ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.ಇಥಿಯೋಪಿಯಾ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 17th, 12:25 pm
ಪುರಾತನ ಜ್ಞಾನ ಮತ್ತು ಆಧುನಿಕ ಆಕಾಂಕ್ಷೆಗಳನ್ನು ಹೊಂದಿರುವ ರಾಷ್ಟ್ರದ ಹೃದಯಭಾಗದಲ್ಲಿರುವ ಈ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಉಪಸ್ಥಿತರಿರುವುದು ನನಗೆ ಗೌರವದ ಸಂಗತಿಯಾಗಿದೆ. ನಿಮ್ಮ ಸಂಸತ್ತು, ನಿಮ್ಮ ಜನತೆ ಮತ್ತು ನಿಮ್ಮ ಪ್ರಜಾಪ್ರಭುತ್ವದ ಪಯಣದ ಬಗ್ಗೆ ಅಪಾರ ಗೌರವವನ್ನಿಟ್ಟುಕೊಂಡು ನಾನು ಇಲ್ಲಿಗೆ ಬಂದಿದ್ದೇನೆ. ಭಾರತದ 140 ಕೋಟಿ ಜನರ ಪರವಾಗಿ, ನಾನು ಸ್ನೇಹ, ಸದ್ಭಾವನೆ ಮತ್ತು ಸಹೋದರತ್ವದ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ.ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 17th, 12:12 pm
ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. - ರೈತರು, ಉದ್ಯಮಿಗಳು, ಹೆಮ್ಮೆಯ ಮಹಿಳೆಯರು ಮತ್ತು ಯುವಜನರು - ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಥಿಯೋಪಿಯಾದ ಗ್ರೇಟ್ ಹಾನರ್ ನಿಶಾನ್ ಎಂಬ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಅವರು ಇಥಿಯೋಪಿಯಾದ ಜನರು ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಸಂಬಂಧದ ಮಹತ್ವವನ್ನು ಪರಿಗಣಿಸಿ, ಭೇಟಿಯ ಸಮಯದಲ್ಲಿ ಎರಡೂ ದೇಶಗಳ ನಡುವಿನ ಹಳೆಯ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಉನ್ನತೀಕರಿಸಲಾಗಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು ಇದಕ್ಕೆ ತಮ್ಮ ಸಂತೃಪ್ತಿಯನ್ನು ವ್ಯಕ್ತಪಡಿಸಿದರು.'ವಂದೇ ಮಾತರಂ' ನ ಚೈತನ್ಯವು ಭಾರತದ ಅಮರ ಪ್ರಜ್ಞೆಗೆ ಸಂಬಂಧಿಸಿದೆ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ
October 26th, 11:30 am
ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಅಕ್ಟೋಬರ್ 31 ರಂದು ನಡೆದ ಸರ್ದಾರ್ ಪಟೇಲ್ ಅವರ 150 ನೇ ಜನ್ಮ ದಿನಾಚರಣೆಯಂದು ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಸಿದರು. ಛಠ್ ಪೂಜಾ ಉತ್ಸವ, ಪರಿಸರ ಸಂರಕ್ಷಣೆ, ಭಾರತೀಯ ನಾಯಿ ತಳಿಗಳು, ಭಾರತೀಯ ಕಾಫಿ, ಬುಡಕಟ್ಟು ಸಮುದಾಯದ ನಾಯಕರು ಮತ್ತು ಸಂಸ್ಕೃತ ಭಾಷೆಯ ಪ್ರಾಮುಖ್ಯತೆಯಂತಹ ಆಸಕ್ತಿದಾಯಕ ವಿಷಯಗಳನ್ನು ಅವರು ಸ್ಪರ್ಶಿಸಿದರು. 'ವಂದೇ ಮಾತರಂ' ಹಾಡಿನ 150 ನೇ ವರ್ಷದ ಬಗ್ಗೆ ಪ್ರಧಾನಿಯವರು ವಿಶೇಷವಾಗಿ ಉಲ್ಲೇಖಿಸಿದರು.ಇಂಡಿಯಾ ಸೆಮಿಕಂಡಕ್ಟರ್ ಮಿಷನ್ (ISM) ಅಡಿಯಲ್ಲಿ ಮತ್ತೊಂದು ಸೆಮಿಕಂಡಕ್ಟರ್ (ಅರೆವಾಹಕ) ಘಟಕಕ್ಕೆ ಕ್ಯಾಬಿನೆಟ್ ಅನುಮೋದನೆ
September 02nd, 03:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಗುಜರಾತ್ನ ಸನಂದ್ನಲ್ಲಿ ಅರೆವಾಹಕ ಘಟಕವನ್ನು ಸ್ಥಾಪಿಸುವ ಕೇನ್ಸ್ ಸೆಮಿಕಾನ್ ಪ್ರೈವೇಟ್ ಲಿಮಿಟೆಡ್ನ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಅರೆವಾಹಕ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.Strong intent leads to good ideas, good ideas power innovation & innovation builds New India: PM Modi
January 17th, 03:15 pm
PM Narendra Modi and Israeli PM Benjamin Netanyahu today inaugurated iCreate - International Centre for Entrepreneurship and Technology at Ahmedabad, Gujarat. Encouraging the youngsters to innovate, the PM said that the Government was working to make the country’s system innovation-friendly. He said, “Intent leads to ideas, ideas have the power to drive innovation and innovation ultimately will lead to the creation of a New India.”ಐ ಕ್ರಿಯೇಟ್ ಅನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಿ ಮೋದಿ, ಇಸ್ರೇಲ್ ಪ್ರಧಾನಿ ನೆತನ್ಯಾಹು
January 17th, 03:14 pm
ಪ್ರಧಾನಮಂತ್ರಿ ಮೋದಿ ಮತ್ತು ಇಸ್ರೇಲ್ ಪ್ರಧಾನಮಂತ್ರಿ ನೆತನ್ಯಾಹು ಅವರಿಂದು ಅಹ್ಮದಾಬಾದ್ ನ ಹೊರ ವಲಯದಲ್ಲಿ ಸ್ಥಾಪನೆಯಾಗಿರುವ ಐ ಕ್ರಿಯೇಟ್ ಸೌಲಭ್ಯವನ್ನು ದೇಶಕ್ಕೆ ಸಮರ್ಪಿಸಿದರು. ಐ ಕ್ರಿಯೇಟ್, ಸೃಜನಶೀಲತೆ, ನಾವಿನ್ಯತೆ, ಎಂಜಿನಿಯರಿಂಗ್, ಉತ್ಪನ್ನ ವಿನ್ಯಾಸ ಮತ್ತು ಆಹಾರ ಭದ್ರತೆ, ಜಲ, ಸಂಪರ್ಕ, ಸೈಬರ್ ಸುರಕ್ಷತೆ, ಐಟಿ ಮತ್ತು ವಿದ್ಯುನ್ಮಾನ, ಇಂಧನ, ಜೈವಿಕ – ವೈದ್ಯಕೀಯ ಸಲಕರಣೆ ಮತ್ತು ಸಾಧನಗಳು ಇತ್ಯಾದಿ ಪ್ರಮುಖ ವಿಷಯಗಳ ನಿರ್ವಹಣೆಗೆ ಹೊರಹೊಮ್ಮುತ್ತಿರುವ ಹೊಸ ತಂತ್ರಜ್ಞಾನ ಬಳಕೆಯ ಉದ್ದೇಶದೊಂದಿಗೆ ರೂಪುಗೊಂಡ ಒಂದು ಸ್ವತಂತ್ರ ಕೇಂದ್ರವಾಗಿದೆ. ಐ ಕ್ರಿಯೇಟ್ ಭಾರತದಲ್ಲಿ ಗುಣಮಟ್ಟದ ಉದ್ಯಮಶೀಲತೆಯನ್ನು ಸೃಷ್ಟಿಸುವ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಿದೆ.Creating dynamic, people oriented cities of the future: The Gujarat Experience
August 21st, 12:05 pm
Creating dynamic, people oriented cities of the future: The Gujarat ExperienceCM chairs meeting of Gujarat Infrastructure Development Board
July 23rd, 06:50 pm
CM chairs meeting of Gujarat Infrastructure Development BoardDholera has made its place on the map of the world! No one could have imagined there would be so much money here: CM
October 18th, 05:27 pm
Dholera has made its place on the map of the world! No one could have imagined there would be so much money here: CMDholera SIR to be developed on Shanghai model – Shri Narendra Modi at Yangshang
November 10th, 09:19 am
Dholera SIR to be developed on Shanghai model – Shri Narendra Modi at YangshangSabir Bhatia makes presentation before CM on creating global knowledge centre near Dholera SIR
September 08th, 07:48 am
Sabir Bhatia makes presentation before CM on creating global knowledge centre near Dholera SIRDholera SIR on DMIC-DFC route being developed as global model for urban and economic development
June 21st, 11:44 am
Dholera SIR on DMIC-DFC route being developed as global model for urban and economic development