Participants of Viksit Vibrant Village Programme share their experiences with PM Modi
July 26th, 10:27 pm
PM Modi interacts with participants of the Viksit Vibrant Village Programme 2026, as MYBharat volunteers share inspiring stories from India's border villages. Participants recount how the journey transformed their perspectives through interactions with local communities, firsthand experiences of life in border villages and a deeper understanding of the spirit of Ek Bharat, Shreshtha Bharatಚಂಡೀಗಢದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
July 17th, 02:08 pm
ಚಂಡೀಗಢ ಕೇವಲ ಒಂದು ನಗರವಲ್ಲ - ಇದು ಭಾರತಕ್ಕೆ ಅಭಿವೃದ್ಧಿಯ ಮಾದರಿಯಾಗಿದೆ. ಚಂಡೀಗಢವು ಯೋಜಿತ ಬೆಳವಣಿಗೆಗೆ, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನ ಶೈಲಿಯ ನಗರವಾಗಿ ತನ್ನ ಗುರುತಿಸುವಿಕೆಗಾಗಿ ಹೆಸರುವಾಸಿಯಾಗಿದೆ. ಇದು ಸುಧಾರಿತ ವೈದ್ಯಕೀಯ ಸೌಲಭ್ಯಗಳಿಗೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಮಾ ಚಂಡಿಯ ಆಶೀರ್ವಾದಕ್ಕಾಗಿ ಗುರುತಿಸಲ್ಪಟ್ಟಿದೆ. ಅದಕ್ಕಾಗಿಯೇ ಚಂಡೀಗಢದ ಅಭಿವೃದ್ಧಿಯು ಎನ್.ಡಿಎ. ಸರ್ಕಾರಕ್ಕೆ ಸದಾ ಆದ್ಯತೆಯಾಗಿದೆ. ನಿಮಗೆ ನೆನಪಿರಬಹುದು, ಸುಮಾರು ಒಂದೂವರೆ ವರ್ಷಗಳ ಹಿಂದೆ, ದೇಶವು ತನ್ನ ನ್ಯಾಯ ವ್ಯವಸ್ಥೆಯಲ್ಲಿ ಪ್ರಮುಖ ಸುಧಾರಣೆಯನ್ನು ಮಾಡಿದೆ. ನಾವು ದಂಡ ಸಂಹಿತೆಯನ್ನು ಶಿಕ್ಷೆ ಆಧಾರಿತ ಕಾನೂನುಗಳ ಬದಲಿಗೆ ನ್ಯಾಯ ಆಧಾರಿತ ಕಾನೂನು ಚೌಕಟ್ಟಾದ ಭಾರತೀಯ ನ್ಯಾಯ ಸಂಹಿತದೊಂದಿಗೆ ಬದಲಾಯಿಸಿದ್ದೇವೆ. ಮತ್ತು ಭಾರತೀಯ ನ್ಯಾಯ ಸಂಹಿತದ ಅನುಷ್ಠಾನವು ಇಲ್ಲಿಯೇ ಚಂಡೀಗಢದಲ್ಲಿ ಪ್ರಾರಂಭವಾಯಿತು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯ ಸೇರಿದಂತೆ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಕೆಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು
July 17th, 01:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚಂಡೀಗಢದಲ್ಲಿ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ರಸ್ತೆ ಮೂಲಸೌಕರ್ಯವನ್ನು ಒಳಗೊಂಡ ₹4,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ವ್ಯವಸ್ಥಿತ ರಾಷ್ಟ್ರೀಯ ಪ್ರಗತಿಗೆ ಅನುಕರಣೀಯ ಮಾದರಿಯಾಗಿ ನಗರದ ವಿಶಿಷ್ಟ ಸ್ಥಾನಮಾನವನ್ನು ವಿವರಿಸಿದ ಅವರು, ಉತ್ತಮ ಜೀವನಶೈಲಿ ಮತ್ತು ಸುಲಭ ಜೀವನವನ್ನು ಖಾತ್ರಿಪಡಿಸಿಕೊಳ್ಳುವ ಅದರ ಖ್ಯಾತಿಯನ್ನು ವಿವರಿಸಿದರು. ಈ ಪ್ರದೇಶದ ಮೇಲೆ ಮಾ ಚಂಡಿಯವರ ದೈವಿಕ ಅನುಗ್ರಹ ಇರುವುದು ಸ್ಪಷ್ಟವಾಗಿದೆ. ಆಡಳಿತವು ಅದರ ನಿರಂತರ, ರಚನಾತ್ಮಕ ಬೆಳವಣಿಗೆಗೆ ಹೊಂದಿರುವ ಅಚಲ ಬದ್ಧತೆಯನ್ನು ಹೊಂದಿದೆ ಎಂದರು. ಚಂಡೀಗಢದ ಅಭಿವೃದ್ಧಿ ಯಾವಾಗಲೂ ಪ್ರಸ್ತುತ ಸರ್ಕಾರದ ಸಂಪೂರ್ಣ ಆದ್ಯತೆಯಾಗಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.ಇಂಡೋನೇಷ್ಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
July 07th, 11:47 pm
ಇಂಡೋನೇಷ್ಯಾದಲ್ಲಿ ನಡೆದ ಈ ಮೂರು ಕಾರ್ಯಕ್ರಮಗಳಲ್ಲೂ 'ಪಂದ್ಯ ಶ್ರೇಷ್ಠ' ಪ್ರಶಸ್ತಿ ಒಂದೇ ಆಗಿತ್ತು - ನೀವೆಲ್ಲರೂ ಇಂಡೋನೇಷ್ಯಾದಲ್ಲಿ ವಾಸಿಸುತ್ತಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಜವಾದ 'ಪಂದ್ಯ ಶ್ರೇಷ್ಠರು'!ಜಕಾರ್ತದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
July 07th, 05:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಕಾರ್ತದಲ್ಲಿಂದು ನಡೆದ ಅನಿವಾಸಿ ಭಾರತೀಯ ಸಮುದಾಯದ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಅವರಿಗೆ, ಅನಿವಾಸಿ ಭಾರತೀಯರು ಮತ್ತು ಭಾರತದ ಇಂಡೋನೇಷ್ಯಾದ ಸ್ನೇಹಿತರು ದೊಡ್ಡ ಸಂಖ್ಯೆಯಲ್ಲಿ ಸೇರಿ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತ ನೀಡಿದರು. ವಿಶೇಷ ಗೌರವದ ಸಂಕೇತವಾಗಿ ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೋವೊ ಸುಬಿಯಾಂಟೊ ಅವರು ಕೂಡ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರೊಂದಿಗೆ ಪಾಲ್ಗೊಂಡರು.India-Indonesia Joint Statement on the State Visit by Prime Minister of India to Indonesia
July 07th, 05:15 pm
At the invitation of Indonesian President Prabowo Subianto, PM Modi is on a State Visit to Indonesia from 6-8 July 2026. PM Modi's visit reflects the shared commitment of the two leaders to achieve a substantial upward trajectory in the India-Indonesia Comprehensive Strategic Partnership. The two leaders held discussions at Istana Merdeka in Jakarta, covering the full spectrum of bilateral relations.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್ ಗಾರ್ ಯೋಜನೆಯ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 19th, 05:15 pm
ನನ್ನ ಸಂಪುಟ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಜಿ, ಸಹೋದರಿ ಶೋಭಾ ಜಿ, ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ಮತ್ತು ತಂತ್ರಜ್ಞಾನದೊಂದಿಗೆ ಸಂಪರ್ಕ ಹೊಂದಿದ ಎಲ್ಲಾ ಗಣ್ಯ ವ್ಯಕ್ತಿಗಳೆ, ದೂರದಿಂದಲೇ ಈ ಕಾರ್ಯಕ್ರಮದೊಂದಿಗೆ 200 ಸ್ಥಳಗಳಿಂದ ಸಂಪರ್ಕ ಹೊಂದಿರುವ ಸುಮಾರು 2 ಲಕ್ಷ ಜನರಿಗೆ ನಾನು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ, ಇಂದು ಇಲ್ಲಿ ಕೈಗಾರಿಕಾ ಕ್ಷೇತ್ರದ ಅನೇಕ ಗಣ್ಯ ವ್ಯಕ್ತಿಗಳು ಹಾಜರಿರುವುದನ್ನು ನಾನು ನೋಡುತ್ತಿದ್ದೇನೆ. ಸಹಜವಾಗಿ ಯುವ ಸಮುದಾಯ ಇಲ್ಲಿ ಉತ್ಸಾಹದಿಂದ ದೊಡ್ಡ ಸಂಖ್ಯೆಯಲ್ಲಿ ಇರುವುದು ಗೋಚರಿಸುತ್ತಿದೆ.ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 19th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ'ಯ ಫಲಾನುಭವಿಗಳು, ಉದ್ಯಮದ ಪ್ರತಿನಿಧಿಗಳು ಮತ್ತು ಪಾಲುದಾರರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ, ದೇಶದ ಯುವಕರನ್ನು ಸಬಲೀಕರಣಗೊಳಿಸಲು ಮತ್ತು ದೇಶಾದ್ಯಂತ ಉದ್ಯೋಗ ಸೃಷ್ಟಿಯನ್ನು ವೇಗಗೊಳಿಸಲು ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಭಾರತ ಸರ್ಕಾರದ ಪ್ರಮುಖ ಉದ್ಯೋಗ-ಸಂಯೋಜಿತ ಪ್ರೋತ್ಸಾಹಕ ಯೋಜನೆಯಾದ ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ (PM-VBRY) ಅನುಷ್ಠಾನದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಸಲುವಾಗಿ ಮತ್ತು ವಿವಿಧ ವಲಯಗಳಲ್ಲಿ ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ವಿಸ್ತರಿಸಲು, ಶ್ರೀ ಮೋದಿ ಅವರು PM-VBRY ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದರು. ಈ ಪ್ರೋತ್ಸಾಹಕ ಧನವು ದೇಶಾದ್ಯಂತ 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿಗೆ ಬೆಂಬಲ ನೀಡಿದೆ.ಭಾರತದ ಡಿಜಿಟಲ್ ಮೂಲಸೌಕರ್ಯ ಪ್ರಯಾಣದ ಗಮನಾರ್ಹ ಆವೇಗವನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ
June 05th, 05:10 pm
ಭಾರತದ ಡಿಜಿಟಲ್ ಮೂಲಸೌಕರ್ಯ ಪ್ರಯಾಣವು ಗಮನಾರ್ಹ ವೇಗವನ್ನು ಪಡೆಯುತ್ತಿರುವ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಒತ್ತಿ ಹೇಳಿದರು. ಏರ್ಟ್ರಂಕ್ ಭಾರತದಲ್ಲಿ ಸುಮಾರು 3 ಲಕ್ಷ ಕೋಟಿ ರೂ. (30 ಬಿಲಿಯನ್ ಡಾಲರ್) ಹೂಡಿಕೆ ಮಾಡುವ ಮತ್ತು 5 ಗಿಗಾವ್ಯಾಟ್ ಡೇಟಾ ಸೆಂಟರ್ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುವ ಯೋಜನೆಯನ್ನು ಪ್ರಕಟಿಸಿದೆ ಎಂದು ಪ್ರಧಾನಮಂತ್ರಿಯವರು ಗಮನಿಸಿ, ಇದು ದೇಶದ ಡಿಜಿಟಲ್ ಮೂಲಸೌಕರ್ಯ ಪರಿಸರ ವ್ಯವಸ್ಥೆಯಲ್ಲಿ ಅತಿದೊಡ್ಡ ಪ್ರಸ್ತಾವಿತ ಹೂಡಿಕೆಗಳಲ್ಲಿ ಒಂದಾಗಿದೆ ಎಂದು ಹೇಳಿದರು.ನಾರ್ವೆ ಪ್ರಧಾನಮಂತ್ರಿ ಜತೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಪತ್ರಿಕಾ ಅವರ ಹೇಳಿಕೆ
May 18th, 04:44 pm
ಕಳೆದ ವರ್ಷ ನಾನು ನಾರ್ವೆಗೆ ಭೇಟಿ ನೀಡಬೇಕಿತ್ತು, ಆದರೆ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಪ್ರವಾಸ ಮುಂದೂಡಬೇಕಾಯಿತು. ಆ ಕಷ್ಟದ ಸಮಯದಲ್ಲಿ, ಭಯೋತ್ಪಾದನೆಯ ವಿರುದ್ಧ ನಾರ್ವೆ ಭಾರತದೊಂದಿಗೆ ಸದೃಢವಾಗಿ ನಿಂತಿತು. ಇದು ನಮ್ಮ ಸ್ನೇಹದ ಬಲವನ್ನು ಪ್ರತಿಬಿಂಬಿಸುತ್ತದೆ. ಇಂದು ನಾನು ನಾರ್ವೆಗೆ ಭೇಟಿ ನೀಡಿರುವಾಗ ಆ ಬೆಂಬಲ ಮತ್ತು ಒಗ್ಗಟ್ಟಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.ಕೊರಿಯಾ ಗಣರಾಜ್ಯದ ರಾಷ್ಟ್ರಾಧ್ಯಕ್ಷರ ಭಾರತ ಭೇಟಿ: ಫಲಿತಾಂಶಗಳ ಪಟ್ಟಿ
April 20th, 03:57 pm
ಭಾರತ-ಕೊರಿಯಾ ಗಣರಾಜ್ಯ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಗಾಗಿ ಜಂಟಿ ಕಾರ್ಯತಂತ್ರದ ದೃಷ್ಟಿಕೋನಭಾರತ-ಫ್ರಾನ್ಸ್ ಜಂಟಿ ಹೇಳಿಕೆ
February 18th, 08:10 am
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.ಮಲೇಷ್ಯಾಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿ: ಫಲಪ್ರದತೆಯ ವಿವರ
February 08th, 11:05 am
ಭಾರತ ಸರ್ಕಾರ ಮತ್ತು ಮಲೇಷ್ಯಾ ಸರ್ಕಾರದ ನಡುವೆ ದೃಶ್ಯ-ಶ್ರಾವ್ಯ ಸಹ ನಿರ್ಮಾಣ ಒಪ್ಪಂದಮಲೇಷ್ಯಾ ಪ್ರಧಾನಮಂತ್ರಿ ಅವರ ಜೊತೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
February 08th, 08:35 am
ಮೊದಲನೆಯದಾಗಿ, ಆತ್ಮೀಯ ಸ್ವಾಗತಕ್ಕಾಗಿ ನನ್ನ ಆಪ್ತ ಮಿತ್ರರಾದ ಪ್ರಧಾನಮಂತ್ರಿ ಅನ್ವರ್ ಇಬ್ರಾಹಿಂ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಕಳೆದ ವರ್ಷ, ಆಸಿಯಾನ್ (ASEAN) ಶೃಂಗಸಭೆಯ ಸಂದರ್ಭದಲ್ಲಿ ನನಗೆ ಮಲೇಷ್ಯಾಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ಆದರೆ ಶೀಘ್ರದಲ್ಲೇ ಮಲೇಷ್ಯಾಕ್ಕೆ ಬರುತ್ತೇನೆ ಎಂದು ನಾನು ನನ್ನ ಪ್ರಿಯ ಮಿತ್ರರಿಗೆ ಮಾತು ಕೊಟ್ಟಿದ್ದೆ. ಅದರಂತೆ ಇಂದು, 2026ರ ಸಾಲಿನ ನನ್ನ ಮೊದಲ ವಿದೇಶಿ ಪ್ರವಾಸದ ಅಂಗವಾಗಿ ನಾನು ಮಲೇಷ್ಯಾದಲ್ಲಿದ್ದೇನೆ.ಭಾರತದ ಪ್ರಧಾನಮಂತ್ರಿ ಅವರು ಮಲೇಷ್ಯಾಕ್ಕೆ ನೀಡಿದ ಅಧಿಕೃತ ಭೇಟಿಯ ಸಂದರ್ಭದಲ್ಲಿ ಭಾರತ - ಮಲೇಷ್ಯಾ ಜಂಟಿ ಹೇಳಿಕೆ
February 08th, 08:30 am
ಮಲೇಷ್ಯಾ ಪ್ರಧಾನಮಂತ್ರಿ ಗೌರವಾನ್ವಿತ ಡಾಟೋ ಸೆರಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 7 ರಿಂದ 8 ರವರೆಗೆ ಮಲೇಷ್ಯಾಕ್ಕೆ ಅಧಿಕೃತ ಭೇಟಿ ನೀಡಿದರು. ಈ ಭೇಟಿಯು ಉಭಯ ದೇಶಗಳ ನಡುವಿನ ನಾಗರಿಕ ಸಂಬಂಧಗಳ ಆಧಾರದ ಮೇಲೆ ಆಳವಾಗಿ ಬೇರೂರಿರುವ ಸ್ನೇಹ ಮತ್ತು ಜನರ ನಡುವಿನ ಸುದೀರ್ಘ ಬಾಂಧವ್ಯವನ್ನು ಪ್ರತಿಫಲಿಸುತ್ತದೆ. ಭಾರತ-ಮಲೇಷ್ಯಾ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ವಿಸ್ತರಿಸಲು ಉಭಯ ನಾಯಕರ ಹಂಚಿಕೆಯ ಬದ್ಧತೆಯನ್ನು ಇದು ಪುನರುಚ್ಚರಿಸಿದೆ.ಮಲೇಷ್ಯಾದ ಕೌಲಾಲಂಪುರಕ್ಕೆ ಗೌರವಾನ್ವಿತ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಅಧಿಕೃತ ಭೇಟಿ
February 04th, 04:17 pm
ಮಲೇಷ್ಯಾದ ಪ್ರಧಾನಿ ಅನ್ವರ್ ಇಬ್ರಾಹಿಂ ಅವರ ಆಹ್ವಾನದ ಮೇರೆಗೆ, ಪ್ರಧಾನಿ ಮೋದಿ ಅವರು ಫೆಬ್ರವರಿ 7–8, 2026 ರವರೆಗೆ ಮಲೇಷ್ಯಾಕ್ಕೆ ಭೇಟಿ ನೀಡಲಿದ್ದಾರೆ. ಭೇಟಿಯ ಸಮಯದಲ್ಲಿ, ಪ್ರಧಾನಿಯವರು ಮಲೇಷ್ಯಾದ ಪ್ರಧಾನಿಯೊಂದಿಗೆ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಲಿದ್ದಾರೆ ಮತ್ತು ದ್ವಿಪಕ್ಷೀಯ ಸಹಕಾರದ ಸಂಪೂರ್ಣ ವ್ಯಾಪ್ತಿಯನ್ನು ಪರಿಶೀಲಿಸಲಿದ್ದಾರೆ. ಅವರು ಭಾರತೀಯ ಸಮುದಾಯದ ಸದಸ್ಯರು, ಕೈಗಾರಿಕೆ ಮತ್ತು ವ್ಯಾಪಾರ ಪ್ರತಿನಿಧಿಗಳೊಂದಿಗೆ ಸಂವಹನ ನಡೆಸಲಿದ್ದಾರೆ ಮತ್ತು 10 ನೇ ಭಾರತ-ಮಲೇಷ್ಯಾ ಸಿಇಒ ವೇದಿಕೆಯಲ್ಲಿ ಭಾಗವಹಿಸಲಿದ್ದಾರೆ.ಓಮನ್ನಲ್ಲಿ ಭಾರತೀಯ ವಿದ್ಯಾರ್ಥಿಗಳು ಮತ್ತು ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 18th, 12:32 pm
ನಿಮ್ಮೆಲ್ಲರ ಯೌವನದ ಉತ್ಸಾಹ ಮತ್ತು ಚೈತನ್ಯವು ಇಲ್ಲಿನ ವಾತಾವರಣವನ್ನು ನಿಜವಾಗಿಯೂ ಚೈತನ್ಯಗೊಳಿಸಿದೆ. ಈ ಸಭಾಂಗಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದ ಕಾರಣಕ್ಕೆ ಹತ್ತಿರದ ಸಭಾಂಗಣದಲ್ಲಿ ಕುಳಿತು ಪರದೆಗಳಲ್ಲಿ ನೇರ ಪ್ರಸಾರದ ಕಾರ್ಯಕ್ರಮ ವೀಕ್ಷಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇಲ್ಲಿಯವರೆಗೆ ಬಂದಿದ್ದರೂ ಸಭಾಂಗಣಕ್ಕೆ ಪ್ರವೇಶಿಸಲು ಸಾಧ್ಯವಾಗದ ಅವರಿಗೆ ಹೇಗೆ ಅನಿಸುತ್ತಿರಬಹುದು ಎಂಬುದನ್ನು ನೀವೇ ಊಹಿಸಬಹುದು.ಒಮಾನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 18th, 12:31 pm
ಪ್ರಧಾನಮಂತ್ರಿ ಅವರು ಇಂದು ಮಸ್ಕತ್ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ವಿವಿಧ ಭಾರತೀಯ ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಓಮನ್ ನಲ್ಲಿ ಭಾರತೀಯ ಶಾಲೆಗಳು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷವು ಅಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ವಿಶೇಷವಾಗಿದೆ.ಇಥಿಯೋಪಿಯಾ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
December 17th, 12:25 pm
ಪುರಾತನ ಜ್ಞಾನ ಮತ್ತು ಆಧುನಿಕ ಆಕಾಂಕ್ಷೆಗಳನ್ನು ಹೊಂದಿರುವ ರಾಷ್ಟ್ರದ ಹೃದಯಭಾಗದಲ್ಲಿರುವ ಈ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಉಪಸ್ಥಿತರಿರುವುದು ನನಗೆ ಗೌರವದ ಸಂಗತಿಯಾಗಿದೆ. ನಿಮ್ಮ ಸಂಸತ್ತು, ನಿಮ್ಮ ಜನತೆ ಮತ್ತು ನಿಮ್ಮ ಪ್ರಜಾಪ್ರಭುತ್ವದ ಪಯಣದ ಬಗ್ಗೆ ಅಪಾರ ಗೌರವವನ್ನಿಟ್ಟುಕೊಂಡು ನಾನು ಇಲ್ಲಿಗೆ ಬಂದಿದ್ದೇನೆ. ಭಾರತದ 140 ಕೋಟಿ ಜನರ ಪರವಾಗಿ, ನಾನು ಸ್ನೇಹ, ಸದ್ಭಾವನೆ ಮತ್ತು ಸಹೋದರತ್ವದ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ.ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 17th, 12:12 pm
ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. - ರೈತರು, ಉದ್ಯಮಿಗಳು, ಹೆಮ್ಮೆಯ ಮಹಿಳೆಯರು ಮತ್ತು ಯುವಜನರು - ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಥಿಯೋಪಿಯಾದ ಗ್ರೇಟ್ ಹಾನರ್ ನಿಶಾನ್ ಎಂಬ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಅವರು ಇಥಿಯೋಪಿಯಾದ ಜನರು ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಸಂಬಂಧದ ಮಹತ್ವವನ್ನು ಪರಿಗಣಿಸಿ, ಭೇಟಿಯ ಸಮಯದಲ್ಲಿ ಎರಡೂ ದೇಶಗಳ ನಡುವಿನ ಹಳೆಯ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಉನ್ನತೀಕರಿಸಲಾಗಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು ಇದಕ್ಕೆ ತಮ್ಮ ಸಂತೃಪ್ತಿಯನ್ನು ವ್ಯಕ್ತಪಡಿಸಿದರು.