ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ

May 23rd, 04:20 pm

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಗೌರವಾನ್ವಿತ ಮಾರ್ಕೊ ರುಬಿಯೊ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ

ಸೈಪ್ರಸ್ ಅಧ್ಯಕ್ಷರ ಅಧಿಕೃತ ಭಾರತ ಭೇಟಿ ಕುರಿತು ಜಂಟಿ ಹೇಳಿಕೆ

May 22nd, 09:31 pm

ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ 2026 ಮೇ 20-23ರ ವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಐರೋಪ್ಯ ಒಕ್ಕೂಟ ಮಂಡಳಿ ಸಭೆಯು ಸೈಪ್ರಸ್ ಅಧ್ಯಕ್ಷತೆಯ ಅವಧಿಯಲ್ಲಿ ನಡೆಯುವುದರಿಂದ ಈ ಭೇಟಿ ನಿರ್ದಿಷ್ಟ ಮತ್ತು ವಿಶೇಷ ಮಹತ್ವ ಹೊಂದಿದೆ.

ಇಟಲಿ ಪ್ರಧಾನಮಂತ್ರಿ ಜತೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

May 20th, 05:00 pm

ಕಳೆದ ಸುಮಾರು ಮೂರೂವರೆ ವರ್ಷಗಳಲ್ಲಿ ಪ್ರಧಾನಮಂತ್ರಿ ಮೆಲೋನಿ ಅವರನ್ನು ಭೇಟಿ ಮಾಡಲು ನನಗೆ ಹಲವಾರು ಅವಕಾಶಗಳು ಸಿಕ್ಕಿವೆ. ಇದು ಭಾರತ ಮತ್ತು ಇಟಲಿ ನಡುವಿನ ನಿಕಟ ಸಹಕಾರ ಮತ್ತು ತಿಳಿವಳಿಕೆಯನ್ನು ಪ್ರತಿಬಿಂಬಿಸುತ್ತದೆ. ಅವರ ನಾಯಕತ್ವದಲ್ಲಿ, ನಮ್ಮ ಸಂಬಂಧಗಳು ಹೊಸ ಆವೇಗ, ಹೊಸ ದಿಕ್ಕು ಮತ್ತು ನವೀಕೃತ ವಿಶ್ವಾಸವನ್ನು ಪಡೆದುಕೊಂಡಿವೆ. ನಾವು ನಮ್ಮ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸುತ್ತಿದ್ದಂತೆ, ನಾವು ವಿಶೇಷ ಕಾರ್ಯತಂತ್ರ ಪಾಲುದಾರಿಕೆಯನ್ನು ಘೋಷಿಸುತ್ತಿದ್ದೇವೆ ಎಂಬುದರಿಂದ ನನಗೆ ಸಂತೋಷವಾಗಿದೆ.

ನಾರ್ವೆ ಪ್ರಧಾನಮಂತ್ರಿ ಜತೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಪತ್ರಿಕಾ ಅವರ ಹೇಳಿಕೆ

May 18th, 04:44 pm

ಕಳೆದ ವರ್ಷ ನಾನು ನಾರ್ವೆಗೆ ಭೇಟಿ ನೀಡಬೇಕಿತ್ತು, ಆದರೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಪ್ರವಾಸ ಮುಂದೂಡಬೇಕಾಯಿತು. ಆ ಕಷ್ಟದ ಸಮಯದಲ್ಲಿ, ಭಯೋತ್ಪಾದನೆಯ ವಿರುದ್ಧ ನಾರ್ವೆ ಭಾರತದೊಂದಿಗೆ ಸದೃಢವಾಗಿ ನಿಂತಿತು. ಇದು ನಮ್ಮ ಸ್ನೇಹದ ಬಲವನ್ನು ಪ್ರತಿಬಿಂಬಿಸುತ್ತದೆ. ಇಂದು ನಾನು ನಾರ್ವೆಗೆ ಭೇಟಿ ನೀಡಿರುವಾಗ ಆ ಬೆಂಬಲ ಮತ್ತು ಒಗ್ಗಟ್ಟಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.

India-Netherlands Joint Statement on the visit of Prime Minister of India to Netherlands

May 17th, 03:45 am

At the invitation of Netherlands PM Rob Jetten, PM Modi paid an official visit to the Netherlands. They held discussions and expressed their desire to further expand and deepen the multifaceted relationship between the two countries. Noting with satisfaction the progress achieved in recent years, they elevated bilateral ties to a 'Strategic Partnership' and welcomed the adoption of a Strategic Partnership Roadmap.

ರಷ್ಯಾದ ವಿದೇಶಾಂಗ ಸಚಿವರು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು

May 14th, 04:43 pm

ರಷ್ಯಾದ ಒಕ್ಕೂಟದ ವಿದೇಶಾಂಗ ಸಚಿವರಾದ ಗೌರವಾನ್ವಿತ ಶ್ರೀ ಸೆರ್ಗೆಯ್ ಲಾವ್ರೊವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಯುಎಇ ಮೇಲಿನ ದಾಳಿಯನ್ನು ಖಂಡಿಸಿದ ಪ್ರಧಾನಮಂತ್ರಿ, ಶಾಂತಿ ಮತ್ತು ಪ್ರಾದೇಶಿಕ ಸ್ಥಿರತೆಗೆ ಬೆಂಬಲವನ್ನು ಪುನರುಚ್ಚರಿಸಿದರು

May 05th, 01:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮೂವರು ಭಾರತೀಯ ಪ್ರಜೆಗಳು ಗಾಯಗೊಂಡ ಯುಎಇ ಮೇಲೆ ನಡೆದ ದಾಳಿಯನ್ನು ಬಲವಾಗಿ ಖಂಡಿಸಿದ್ದಾರೆ.

ಭಾರತ-ಕೊರಿಯಾ ಗಣರಾಜ್ಯ (ಆರ್‌ಒಕೆ-ದಕ್ಷಿಣ ಕೊರಿಯಾ) ವಿಶೇಷ ಕಾರ್ಯತಂತ್ರ ಪಾಲುದಾರಿಕೆಗಾಗಿ ಜಂಟಿ ಕಾರ್ಯತಂತ್ರ ದೃಷ್ಟಿಕೋನ

April 20th, 10:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಕೊರಿಯಾ ಗಣರಾಜ್ಯದ(ದಕ್ಷಿಣ ಕೊರಿಯಾ-ಆರ್‌ಒಕೆ) ಅಧ್ಯಕ್ಷ ಗೌರವಾನ್ವಿತ ಲೀ ಜೇ ಮ್ಯುಂಗ್ ಅವರು 2026 ಏಪ್ರಿಲ್ 19ರಿಂದ 21ರ ವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಇದು ಕೊರಿಯಾದ ಅಧ್ಯಕ್ಷರೊಬ್ಬರು ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಚೊಚ್ಚಲ ಭೇಟಿಯಾಗಿದೆ. ಅಧ್ಯಕ್ಷ ಲೀ ಜೇ ಮ್ಯುಂಗ್ ಅವರೊಂದಿಗೆ ಸಚಿವರು, ಹಿರಿಯ ಅಧಿಕಾರಿಗಳು ಮತ್ತು ಕೊರಿಯಾ ಉದ್ಯಮ ರಂಗದ ಪ್ರಮುಖ ಸಿಇಒಗಳು ಸೇರಿದಂತೆ ಉನ್ನತ ಮಟ್ಟದ ನಿಯೋಗ ಆಗಮಿಸಿತ್ತು.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಕುರಿತು ಲೋಕಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

March 23rd, 02:15 pm

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅದು ಭಾರತಕ್ಕೆ ಎದುರಾಗಿರುವ ಸವಾಲುಗಳ ಕುರಿತು ಮಾತನಾಡಲು ನಾನು ಈ ಗೌರವಾನ್ವಿತ ಸದನದ ಮುಂದೆ ಬಂದಿದ್ದೇನೆ. ಪಶ್ಚಿಮ ಏಷ್ಯಾದಲ್ಲಿನ ಪರಿಸ್ಥಿತಿ ತುಂಬಾ ಕಳವಳಕಾರಿಯಾಗಿದೆ. ಕಳೆದ 2-3 ವಾರಗಳಲ್ಲಿ ಶ್ರೀ ಜೈಶಂಕರ್ ಜಿ ಮತ್ತು ಶ್ರೀ ಹರ್‌ದೀಪ್ ಪುರಿ ಅವರು ಪರಿಷ್ಕೃತ ವಿಷಯಗಳನ್ನು ಸದನಕ್ಕೆ ಒದಗಿಸಿದ್ದಾರೆ. ಬಿಕ್ಕಟ್ಟು 3 ವಾರಗಳಿಗೂ ಹೆಚ್ಚು ಕಾಲ ಇರುವುದರಿಂದ, ಜಾಗತಿಕ ಆರ್ಥಿಕತೆ ಮತ್ತು ಜನರ ಜೀವನದ ಮೇಲೆ ಅದರ ಪ್ರತಿಕೂಲ ಪರಿಣಾಮವು ಸ್ಪಷ್ಟವಾಗಿದೆ. ಈ ಬಿಕ್ಕಟ್ಟಿಗೆ ತ್ವರಿತ ಪರಿಹಾರಕ್ಕಾಗಿ ಇಡೀ ಜಗತ್ತು ಎಲ್ಲಾ ಪಕ್ಷಗಳನ್ನು ಒತ್ತಾಯಿಸುತ್ತಾ ಬಂದಿದೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಲೋಕಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

March 23rd, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅದು ಭಾರತಕ್ಕೆ ಒಡ್ಡುತ್ತಿರುವ ವ್ಯಾಪಕ ಸವಾಲುಗಳ ಬಗ್ಗೆ ಪ್ರಸ್ತಾಪಿಸಿದರು. ಈ ಬಿಕ್ಕಟ್ಟು ಈಗ ಮೂರು ವಾರಗಳಿಗೂ ಹೆಚ್ಚು ಕಾಲ ಮುಂದುವರಿದಿದ್ದು, ಜಾಗತಿಕ ಆರ್ಥಿಕತೆ ಮತ್ತು ಮಾನವ ಜೀವಗಳ ಮೇಲೆ ಗಂಭೀರ ಪ್ರತಿಕೂಲ ಪರಿಣಾಮಗಳನ್ನು ಬೀರುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು, ಇದರ ಪರಿಹಾರದ ತುರ್ತು ಅಗತ್ಯವನ್ನು ಒತ್ತಿಹೇಳಿದರು. ಪರಿಸ್ಥಿತಿಯ ಗಂಭೀರತೆಯನ್ನು ಉಲ್ಲೇಖಿಸುತ್ತಾ ಶ್ರೀ ಮೋದಿಯವರು, ಈ ಬಿಕ್ಕಟ್ಟನ್ನು ಆದಷ್ಟು ಬೇಗ ಪರಿಹರಿಸುವಂತೆ ಇಡೀ ಜಗತ್ತು ಎಲ್ಲಾ ಪಕ್ಷಗಳನ್ನು ಒತ್ತಾಯಿಸುತ್ತಿದೆ ಎಂದು ಹೇಳಿದರು.

ಜೋರ್ಡಾನ್ ನ ರಾಜನೊಂದಿಗೆ ಪ್ರಧಾನಮಂತ್ರಿ ಅವರ ಮಾತುಕತೆ

March 19th, 07:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜೋರ್ಡಾನ್ ದೊರೆ ಎರಡನೇ ಅಬ್ದುಲ್ಲಾ ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿ, ಈದ್ ಹಬ್ಬದ ಶುಭಾಶಯಗಳನ್ನು ವಿನಿಮಯ ತಿಳಿಸಿ, ಆ ಪ್ರದೇಶದಲ್ಲಿನ ಭದ್ರತಾ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು.

ಓಮನ್ ಸುಲ್ತಾನರೊಂದಿಗೆ ಪ್ರಧಾನಮಂತ್ರಿ ಮಾತುಕತೆ

March 19th, 04:39 pm

ಪ್ರಧಾನಮಂತ್ರಿ ಅವರು ಓಮನ್ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರೊಂದಿಗೆ ಫಲಪ್ರದ ಸಂಭಾಷಣೆ ನಡೆಸಿ, ಈದ್ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು ಮತ್ತು ಈ ಪ್ರದೇಶದಲ್ಲಿನ ಪರಿಸ್ಥಿತಿಯ ಬಗ್ಗೆ ಸಮಾಲೋಚನೆ ನಡೆಸಿದರು.

ಫ್ರೆಂಚ್ ಅಧ್ಯಕ್ಷರಾದ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತನಾಡಿದ ಪ್ರಧಾನಮಂತ್ರಿ

March 05th, 07:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಾದ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತನಾಡಿದರು.

ಕತಾರ್‌ ಅಮೀರ್‌ ಅವರೊಂದಿಗೆ ಮಾತನಾಡಿದ ಪ್ರಧಾನಮಂತ್ರಿ

March 03rd, 07:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕತಾರ್‌ನ ಅಮೀರ್‌ ಘನತೆವೆತ್ತ ಶೇಖ್‌ ತಮೀಮ್‌ ಬಿನ್‌ ಹಮದ್‌ ಅಲ್‌ ಥಾನಿ ಅವರೊಂದಿಗೆ ಮಾತುಕತೆ ನಡೆಸಿದರು.

ಕುವೈತ್‌ನ ರಾಜಕುಮಾರರೊಂದಿಗೆ ಪ್ರಧಾನಮಂತ್ರಿ ಮಾತುಕತೆ

March 03rd, 07:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕುವೈತ್‌ನ ರಾಜಕುಮಾರ ಘನತೆವೆತ್ತ ಶೇಖ್‌ ಸಭಾ ಅಲ್‌-ಖಾಲೆದ್‌ ಅಲ್‌-ಹಮದ್‌ ಅಲ್‌-ಮುಬಾರಕ್‌ ಅಲ್‌-ಸಬಾಹ್‌ ಅವರೊಂದಿಗೆ ಫಲಪ್ರದ ದೂರವಾಣಿ ಸಂಭಾಷಣೆ ನಡೆಸಿದರು.

ಕೆನಡಾ ಪ್ರಧಾನಮಂತ್ರಿ ಅವರೊಂದಿಗೆ ಪ್ರಧಾನಮಂತ್ರಿ ಮೋದಿ ಅವರಿಂದ ಜಂಟಿ ಪತ್ರಿಕಾ ಹೇಳಿಕೆ

March 02nd, 11:40 am

ನಮ್ಮ ಮೊದಲ ಸಭೆಯಿಂದಲೇ ನಮ್ಮ ಸಂಬಂಧವು ನವೀಕೃತ ಶಕ್ತಿ, ಪರಸ್ಪರ ನಂಬಿಕೆ ಮತ್ತು ಸಕಾರಾತ್ಮಕ ಮನೋಭಾವದಿಂದ ತುಂಬಿದೆ. ಸಹಕಾರದ ಎಲ್ಲಾ ಕ್ಷೇತ್ರಗಳಲ್ಲಿ ಬೆಳೆಯುತ್ತಿರುವ ಆವೇಗಕ್ಕೆ ನನ್ನ ಸ್ನೇಹಿತ ಪ್ರಧಾನಿ ಕಾರ್ನಿ ಅವರು ಕಾರಣ ಎಂದು ನಾನು ಹೇಳಲು ಬಯಸುತ್ತೇನೆ.

ಭಾರತ-ಫ್ರಾನ್ಸ್ ಜಂಟಿ ಹೇಳಿಕೆ

February 18th, 08:10 am

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.

ಫ್ರಾನ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

February 17th, 04:00 pm

ಗೌರವಾನ್ವಿತರೇ, ನನ್ನ ಪ್ರೀತಿಯ ಸ್ನೇಹಿತ, ಅಧ್ಯಕ್ಷರಾದ ಮ್ಯಾಕ್ರನ್ ಅವರೇ,

ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 03rd, 12:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು

January 03rd, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.