Prime Minister reviews flood situation in Assam with MPs from the state

July 28th, 02:12 pm

The Prime Minister, Shri Narendra Modi, met Members of Parliament from Assam and discussed the prevailing flood situation in various parts of the state.

ಆಸ್ಟ್ರೇಲಿಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮವೊಂದರಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

July 09th, 03:22 pm

ನಾವು ಭೇಟಿಯಾಗುವ ಭೂಮಿಯ ಸಾಂಪ್ರದಾಯಿಕ ಮಾಲೀಕರನ್ನು ಗುರುತಿಸುವ ಮೂಲಕ ನಾನು ಇಂದು ಮಾತು ಆರಂಭಿಸಲು ಬಯಸುತ್ತೇನೆ ಮತ್ತು ಅವರ ಹಿಂದಿನ, ವರ್ತಮಾನ ಮತ್ತು ಉದಯೋನ್ಮುಖ ಹಿರಿಯರಿಗೆ ನನ್ನ ಗೌರವವನ್ನು ಸಲ್ಲಿಸುತ್ತೇನೆ.

ಆಸ್ಟ್ರೇಲಿಯಾದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

July 09th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೆಲ್ಬೋರ್ನ್ ನ ಮಾರ್ವೆಲ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ವಿಶೇಷ ಸದ್ಭಾವನೆಯ ಸಂಕೇತವಾಗಿ, ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಆಂಥೋನಿ ಅಲ್ಬನೀಸ್ ಅವರೂ ಸಹ ಈ ಭಾರತೀಯ ಸಮುದಾಯದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇಂಡೋನೇಷ್ಯಾದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಅಧಿಕೃತ ಮಾತುಕತೆ

July 07th, 02:51 pm

ಇಂಡೋನೇಷ್ಯಾ ದೇಶಕ್ಕೆ ತಮ್ಮ ಅಧಿಕೃತ ಪ್ರವಾಸದ ಭಾಗವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೊವೊ ಸುಬಿಯಾಂತೊ ಅವರು ಇಸ್ತಾನಾ ಮೆರ್ಡೆಕಾ (ಅಧ್ಯಕ್ಷರ ಭವನ) ದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು, ಔಪಚಾರಿಕ ಸ್ವಾಗತವನ್ನು ನೀಡಿದರು. ಜನವರಿ 2025 ರಲ್ಲಿ ಭಾರತದ 76ನೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಅಧ್ಯಕ್ಷ ಪ್ರಬೊವೊ ಅವರು ಭಾರತಕ್ಕೆ ಭೇಟಿ ನೀಡಿದ ನಂತರ, ಉಭಯ ನಾಯಕರ ನಡುವೆ ನಡೆದ ಮೊದಲ ಭೇಟಿ ಇದಾಗಿದೆ.

ಪ್ರಧಾನಮಂತ್ರಿಯವರ ಇಂಡೋನೇಷ್ಯಾ ಭೇಟಿಯ ಫಲಪ್ರದತೆಯ ವಿವರ

July 07th, 01:03 pm

ಶಾಂತಿಯುತ ಉದ್ದೇಶಕ್ಕಾಗಿ ಬಾಹ್ಯಾಕಾಶ ಬಳಕೆ ಮತ್ತು ಶೋಧನೆಯ ಸಹಕಾರಕ್ಕಾಗಿ ನೀತಿ ಚೌಕಟ್ಟು ಒಪ್ಪಂದದ ವಿಸ್ತರಣೆ

ಇಂಡೋನೇಷ್ಯಾ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

July 07th, 11:21 am

2018ರಲ್ಲಿ ಸ್ಥಾಪನೆಯಾದ ನಮ್ಮ ʻಸಮಗ್ರ ಕಾರ್ಯತಂತ್ರದ ಸಹಭಾಗಿತ್ವʼವು ಇಂದು ಹೊಸ ಎತ್ತರವನ್ನು ತಲುಪುತ್ತಿದೆ. ಅಭಿವೃದ್ಧಿ, ಭದ್ರತೆ, ತಂತ್ರಜ್ಞಾನ, ಸಂಸ್ಕೃತಿ ಮತ್ತು ಶಿಕ್ಷಣ ಸೇರಿದಂತೆ ಸಹಕಾರದ ಪ್ರತಿಯೊಂದು ಕ್ಷೇತ್ರದಲ್ಲೂ ನಾವು ಗಮನಾರ್ಹ ದಾಪುಗಾಲು ಹಾಕುತ್ತಿದ್ದೇವೆ.

ಅಸ್ಸಾಂನ ದಿಬ್ರುಗಢದಲ್ಲಿ ಈಶಾನ್ಯ ಭಾರತದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ (ELF) ಉದ್ಘಾಟಿಸಿದ ಪ್ರಧಾನಮಂತ್ರಿ

February 14th, 07:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ದಿಬ್ರುಗಢದಲ್ಲಿ ಈಶಾನ್ಯ ಭಾರತದ ಮೊಟ್ಟಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ (Emergency Landing Facility - ELF) ವನ್ನು ಉದ್ಘಾಟಿಸಿದರು. ಈಶಾನ್ಯ ಭಾರತ ಪ್ರದೇಶಕ್ಕೆ ತುರ್ತು ಲ್ಯಾಂಡಿಂಗ್ ಸೌಲಭ್ಯ ದೊರೆತಿರುವುದು ಅಪಾರ ಹೆಮ್ಮೆಯ ವಿಷಯವಾಗಿದ್ದು, ತಂತ್ರಾತ್ಮಕ ದೃಷ್ಟಿಯಿಂದ ಹಾಗೂ ಪ್ರಕೃತಿ ವಿಕೋಪಗಳ ಸಂದರ್ಭಗಳಲ್ಲಿ ಈ ಸೌಲಭ್ಯ ಅತ್ಯಂತ ಮಹತ್ವದ್ದಾಗಿದೆ ಎಂದು ಪ್ರಧಾನ ಮಂತ್ರಿ ಶ್ರೀ ಮೋದಿ ತಿಳಿಸಿದ್ದಾರೆ.

ಫೆಬ್ರವರಿ 14 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ ಪ್ರಧಾನಮಂತ್ರಿ

February 13th, 11:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 14 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10:30ರ ಸುಮಾರಿಗೆ, ಪ್ರಧಾನಮಂತ್ರಿ ಅವರು ದಿಬ್ರುಗಢದ ಮೋರನ್ ಬೈಪಾಸ್‌ನಲ್ಲಿರುವ ತುರ್ತು ಲ್ಯಾಂಡಿಂಗ್ ಸೌಲಭ್ಯ (ELF)ದಲ್ಲಿ ಇಳಿಯಲಿದ್ದಾರೆ, ಅಲ್ಲಿ ಅವರು ಯುದ್ದ ವಿಮಾನಗಳು, ಸಾರಿಗೆ ಮತ್ತು ಹೆಲಿಕಾಪ್ಟರ್‌ಗಳ ವೈಮಾನಿಕ ಪ್ರದರ್ಶನವನ್ನು ವೀಕ್ಷಿಸಲಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ, ಪ್ರಧಾನ ಮಂತ್ರಿ ಅವರು ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಾಣವಾಗಿರುವ ಕುಮಾರ್ ಭಾಸ್ಕರ್ ವರ್ಮಾ ಸೇತುಗೆ ಭೇಟಿ ನೀಡಲಿದ್ದಾರೆ. ನಂತರ, ಮಧ್ಯಾಹ್ನ 1:30 ರ ಸುಮಾರಿಗೆ, ಪ್ರಧಾನ ಮಂತ್ರಿ ಅವರು ಗುವಾಹಟಿಯ ಲಚಿತ್ ಘಾಟ್‌ನಲ್ಲಿ 5,450 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಚಾಲನೆ ನೀಡಲಿದ್ದಾರೆ.

2030 ರ ಕಡೆಗೆ: ಜಂಟಿ ಭಾರತ-ಇಯು ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿ

January 27th, 06:48 pm

ಜಂಟಿ ಭಾರತ-ಇಯು ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿಯು, ಜನವರಿ 27, 2026 ರಂದು ನವದೆಹಲಿಯಲ್ಲಿ ನಡೆದ 16 ನೇ ಭಾರತ-ಇಯು ಶೃಂಗಸಭೆಯಲ್ಲಿ ಅನುಮೋದಿಸಲ್ಪಟ್ಟಿದೆ, ಎರಡೂ ಪಾಲುದಾರರಿಗೆ ಮತ್ತು ವಿಶಾಲ ಪ್ರಪಂಚಕ್ಕೆ ಪರಸ್ಪರ ಪ್ರಯೋಜನಕಾರಿ, ಕಾಂಕ್ರೀಟ್ ಮತ್ತು ಪರಿವರ್ತಕ ಫಲಿತಾಂಶಗಳನ್ನು ನೀಡಲು ಇಯು -ಭಾರತ ಸಹಕಾರವನ್ನು ವಿಸ್ತರಿಸುವ, ಆಳಗೊಳಿಸುವ ಮತ್ತು ಉತ್ತಮವಾಗಿ ಸಂಯೋಜಿಸುವ ಮೂಲಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಹೊಂದಿದೆ.

ಭಾರತ - ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರು ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರು ಭಾರತಕ್ಕೆ ನೀಡಿದ ಅಧಿಕೃತ ಭೇಟಿ ಮತ್ತು 16 ನೇ ಭಾರತ-ಇಯು ಶೃಂಗಸಭೆಯ ಕುರಿತು ಇಯು ಜಂಟಿ ಹೇಳಿಕೆ

January 27th, 06:15 pm

ಪ್ರಧಾನಿ ಮೋದಿ ಅವರ ಆಹ್ವಾನದ ಮೇರೆಗೆ, ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಭಾರತದ 77 ನೇ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಭಾರತಕ್ಕೆ ರಾಜ್ಯ ಭೇಟಿ ನೀಡಿದರು. ಭೇಟಿಯ ಸಮಯದಲ್ಲಿ, ನಾಯಕರು ಹೆಗ್ಗುರುತಾದ ಭಾರತ-ಇಯು ಎಫ್‌ಟಿಎ ಕುರಿತು ಮಾತುಕತೆಗಳ ಯಶಸ್ವಿ ಮುಕ್ತಾಯವನ್ನು ಶ್ಲಾಘಿಸಿದರು ಮತ್ತು 2030 ರ ಕಡೆಗೆ: ಭಾರತ-ಇಯು ಜಂಟಿ ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿಯನ್ನು ಅಳವಡಿಸಿಕೊಂಡರು.

ಫಲಿತಾಂಶಗಳ ಪಟ್ಟಿ: ಐರೋಪ್ಯ ಮಂಡಳಿಯ ಅಧ್ಯಕ್ಷರು ಮತ್ತು ಐರೋಪ್ಯ ಆಯೋಗದ ಅಧ್ಯಕ್ಷರ ಭಾರತ ಭೇಟಿ

January 27th, 02:53 pm

2030ರ ಕಡೆಗೆ: ಜಂಟಿ ಭಾರತ-ಐರೋಪ್ಯ ಒಕ್ಕೂಟದ ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿ ಭಾರತ-ಐರೋಪ್ಯ ಒಕ್ಕೂಟ ವ್ಯೂಹಾತ್ಮಕ ಪಾಲುದಾರಿಕೆಯ

ರಾಯ್‌ಪುರದಲ್ಲಿ ನಡೆದ 60ನೇ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ಇನ್‌ಸ್ಪೆಕ್ಟರ್ ಜನರಲ್‌ಗಳ ಸಮ್ಮೇಳನದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

November 30th, 05:17 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಯ್ ಪುರದಲ್ಲಿಂದು ನಡೆದ 60ನೇ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ ಇನ್ಸ್‌ ಪೆಕ್ಟರ್‌ ಜನರಲ್‌ ಆಫ್ ಪೊಲೀಸ್‌ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮೂರು ದಿನಗಳ ಸಮಾವೇಶದ ಘೋಷವಾಕ್ಯ “ವಿಕಸಿತ ಭಾರತ; ಭದ್ರತಾ ಆಯಾಮಗಳು’’ ಎಂಬುದಾಗಿದೆ.

ಪ್ರಧಾನಮಂತ್ರಿ ನವೆಂಬರ್ 29-30 ರಂದು ರಾಯ್‌ಪುರದಲ್ಲಿ ನಡೆಯಲಿರುವ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ಇನ್‌ಸ್ಪೆಕ್ಟರ್ ಜನರಲ್‌ಗಳ 60 ನೇ ಸಮ್ಮೇಳನದಲ್ಲಿ ಭಾಗಿ

November 27th, 12:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ನವೆಂಬರ್ 29-30ರಂದು ಛತ್ತೀಸ್‌ಗಢದ ರಾಯ್‌ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್‌ನಲ್ಲಿ ನಡೆಯಲಿರುವ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರು/ಇನ್‌ಸ್ಪೆಕ್ಟರ್ ಜನರಲ್‌ಗಳ 60 ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ಜಿ20 ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ 2

November 22nd, 09:57 pm

ನೈಸರ್ಗಿಕ ವಿಕೋಪಗಳು ಮಾನವೀಯತೆಗೆ ಪ್ರಮುಖ ಸವಾಲನ್ನು ಒಡ್ಡುತ್ತಲೇ ಇವೆ. ಈ ವರ್ಷವೂ ಅವು ಜಾಗತಿಕ ಜನಸಂಖ್ಯೆಯ ಹೆಚ್ಚಿನ ಭಾಗದ ಮೇಲೆ ಪರಿಣಾಮ ಬೀರಿವೆ. ಪರಿಣಾಮಕಾರಿ ವಿಪತ್ತು ಸಿದ್ಧತೆ ಮತ್ತು ಪ್ರತಿಕ್ರಿಯೆಗಾಗಿ ಅಂತಾರಾಷ್ಟ್ರೀಯ ಸಹಕಾರವನ್ನು ಬಲಪಡಿಸುವ ಅಗತ್ಯವನ್ನು ಈ ಘಟನೆಗಳು ಸ್ಪಷ್ಟವಾಗಿ ಉಲ್ಲೇಖಿಸುತ್ತವೆ.

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ

November 19th, 11:00 am

ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳು, ರಾಮಮೋಹನ್ ನಾಯ್ಡು ಜಿ, ಜಿ. ಕಿಶನ್ ರೆಡ್ಡಿ ಜಿ, ಭೂಪತಿ ರಾಜು ಶ್ರೀನಿವಾಸ ವರ್ಮಾ ಜಿ, ಸಚಿನ್ ತೆಂಡೂಲ್ಕರ್ ಜಿ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಜಿ, ರಾಜ್ಯ ಸರ್ಕಾರದ ಸಚಿವ ನಾರಾ ಲೋಕೇಶ್ ಜಿ, ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಆರ್. ಜೆ. ರತ್ನಾಕರ್ ಜಿ, ಉಪಕುಲಪತಿ ಕೆ. ಚಕ್ರವರ್ತಿ ಜಿ, ಐಶ್ವರ್ಯ ಜಿ, ಇತರ ಎಲ್ಲಾ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ, ಎಲ್ಲರಿಗೂ ಸಾಯಿ ರಾಮ್!

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 19th, 10:30 am

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು ಸಾಯಿ ರಾಮ್ ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ ಸಿಕ್ಕಿತು ಎಂಬುದನ್ನೂ ಅವರು ಹಂಚಿಕೊಂಡರು. ಬಾಬಾ ಅವರ ಪಾದಗಳಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆಯುವುದು ಸದಾ ಹೃದಯವನ್ನು ತುಂಬುವ ಆಳವಾದ ಭಾವನಾತ್ಮಕ ಕ್ಷಣ ಎಂದವರು ಬಣ್ಣಿಸಿದರು.

ನವ ರಾಯಪುರದಲ್ಲಿ ಬ್ರಹ್ಮಕುಮಾರಿಯರ ಧ್ಯಾನ ಕೇಂದ್ರ “ಶಾಂತಿ ಶಿಖರ್” ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 01st, 11:15 am

ಛತ್ತೀಸ್‌ಗಢ ರಾಜ್ಯಪಾಲರಾದ ಶ್ರೀ ರಾಮೆನ್ ಡೇಕಾ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಶ್ರೀ ವಿಷ್ಣು ದೇವ್ ಸಾಯಿ, ರಾಜಯೋಗಿನಿ ಸಹೋದರಿ ಜಯಂತಿ, ರಾಜಯೋಗಿ ಮೃತ್ಯುಂಜಯ್, ಎಲ್ಲಾ ಬ್ರಹ್ಮ ಕುಮಾರಿ ಸಹೋದರಿಯರೆ, ಇಲ್ಲಿ ಉಪಸ್ಥಿತರಿರುವ ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ಛತ್ತೀಸ್‌ ಗಢದ ನವ ರಾಯ್‌ ಪುರದಲ್ಲಿ ಶಾಂತಿ ಶಿಖರ - ಧ್ಯಾನ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ನೆರೆದಿದ್ದ ಬ್ರಹ್ಮ ಕುಮಾರಿಗಳನ್ನುದ್ದೇಶಿಸಿ ಭಾಷಣ ಮಾಡಿದರು

November 01st, 11:00 am

ಛತ್ತೀಸ್‌ ಗಢದ ನವ ರಾಯ್‌ ಪುರದಲ್ಲಿ ಇಂದು ಆಧ್ಯಾತ್ಮಿಕ ಕಲಿಕೆ, ಶಾಂತಿ ಮತ್ತು ಧ್ಯಾನಕ್ಕಾಗಿ ಆಧುನಿಕ ಕೇಂದ್ರವಾದ ಶಾಂತಿ ಶಿಖರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರಹ್ಮ ಕುಮಾರಿಗಳನ್ನು ಉದ್ದೇಶಿಸಿ ಭಾಷಣ ಮಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಛತ್ತೀಸ್‌ ಗಢ ರಚನೆಯಾಗಿ 25 ವರ್ಷಗಳು ತುಂಬುತ್ತಿರುವುದರಿಂದ ಇಂದು ಅತ್ಯಂತ ವಿಶೇಷ ದಿನವಾಗಿದೆ ಎಂದು ಹೇಳಿದರು. ಛತ್ತೀಸ್‌ ಗಢ, ಜಾರ್ಖಂಡ್ ಮತ್ತು ಉತ್ತರಾಖಂಡ್‌ ಗಳ ಜೊತೆಗೆ ಸ್ಥಾಪನೆಯಾಗಿ 25 ವರ್ಷಗಳು ಪೂರ್ಣಗೊಂಡಿವೆ . ದೇಶಾದ್ಯಂತ ಹಲವಾರು ಇತರ ರಾಜ್ಯಗಳು ಇಂದು ತಮ್ಮ ರಾಜ್ಯತ್ವ ದಿನವನ್ನು ಆಚರಿಸುತ್ತಿವೆ ಎಂದು ಹೇಳಿದರು. ಈ ಎಲ್ಲಾ ರಾಜ್ಯಗಳ ಜನತೆಗೆ ಅವರ ರಾಜ್ಯತ್ವ ದಿನದಂದು ಶ್ರೀ ಮೋದಿ ಅವರು ಶುಭಾಶಯಗಳನ್ನು ತಿಳಿಸಿದರು. ರಾಜ್ಯಗಳ ಅಭಿವೃದ್ಧಿಯು ರಾಷ್ಟ್ರದ ಪ್ರಗತಿಗೆ ಇಂಧನ ನೀಡುತ್ತದೆ ಎಂಬ ಮಾರ್ಗದರ್ಶಿ ತತ್ವದಿಂದ ಪ್ರೇರಿತರಾಗಿ, ನಾವು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಧ್ಯೇಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.

ನವದೆಹಲಿಯಲ್ಲಿ ನಡೆದ 2025ರ ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

October 31st, 06:08 pm

ನವದೆಹಲಿಯ ರೋಹಿಣಿಯಲ್ಲಿ ಇಂದು ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ, ಈಗಷ್ಟೇ ಕೇಳಿದ ಮಂತ್ರಗಳ ಶಕ್ತಿಯನ್ನು ಎಲ್ಲರೂ ಅನುಭವಿಸಬಹುದು ಎಂದು ಹೇಳಿದರು. ತಾವು ಸಭೆಗೆ ಬಂದಾಗಲೆಲ್ಲಾ ತಮಗೆ ಆಗಿರುವ ಅನುಭವವು ದೈವಿಕ ಮತ್ತು ಅಸಾಮಾನ್ಯವಾದುದು ಎಂದು ಅವರು ಒತ್ತಿ ಹೇಳಿದರು. ಈ ಭಾವನೆಗೆ ಸ್ವಾಮಿ ದಯಾನಂದ ಜೀ ಅವರ ಆಶೀರ್ವಾದ ಕಾರಣವೆಂದೂ ಅವರು ಹೇಳಿದರು. ಸ್ವಾಮಿ ದಯಾನಂದ ಜೀ ಅವರ ಆದರ್ಶಗಳ ಬಗ್ಗೆ ಪ್ರಧಾನಮಂತ್ರಿ ತಮ್ಮ ಆಳವಾದ ಗೌರವವನ್ನು ವ್ಯಕ್ತಪಡಿಸಿದರು. ಹಾಜರಿದ್ದ ಎಲ್ಲಾ ಚಿಂತಕರೊಂದಿಗಿನ ತಮ್ಮ ದಶಕಗಳಷ್ಟು ಹಳೆಯದಾದ ಬಾಂಧವ್ಯವನ್ನು ಅವರು ನೆನೆಪಿಸಿಕೊಂಡರು. ಅದು ತಮಗೆ ಪದೇ ಪದೇ ಅವರ ನಡುವೆ ಇರಲು ಅವಕಾಶವನ್ನು ನೀಡಿದೆ. ಅವರನ್ನು ಭೇಟಿಯಾದಾಗಲೆಲ್ಲಾ ಮತ್ತು ಅವರ ಜೊತೆ ಸಂವಹನ ನಡೆಸಿದಾಗಲೆಲ್ಲಾ ತಾವು ವಿಶಿಷ್ಟ ಶಕ್ತಿ ಮತ್ತು ಅನನ್ಯ ಸ್ಫೂರ್ತಿಯನ್ನು ಪಡೆಯುತ್ತಿರುವುದಾಗಿಯೂ ಅವರು ಹೇಳಿದರು.

ಡಾರ್ಜಿಲಿಂಗ್ ಪ್ರದೇಶದಲ್ಲಿ ಮಳೆ ಮತ್ತು ಭೂಕುಸಿತದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಅವರಿಂದ ಸಹಾಯ ನೀಡುವ ಭರವಸೆ

October 05th, 04:18 pm

ಭಾರೀ ಮಳೆ ಮತ್ತು ಭೂಕುಸಿತದಿಂದ ತೀವ್ರವಾಗಿ ಹಾನಿಗೊಳಗಾದ ಡಾರ್ಜಿಲಿಂಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಪರಿಸ್ಥಿತಿಯ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.