ನವ ರಾಯ್‌ಪುರದ “ಸತ್ಯಸಾಯಿ ಸಂಜೀವಿನಿ ಮಕ್ಕಳ ಹೃದ್ರೋಗ ಆಸ್ಪತ್ರೆ”ಯಲ್ಲಿ ಯಶಸ್ವೀ ಹೃದ್ರೋಗ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಕ್ಕಳೊಂದಿಗೆ ಪ್ರಧಾನಮಂತ್ರಿ ಸಂವಾದ

November 01st, 05:30 pm

ನಾನು ಹಾಕಿ ಚಾಂಪಿಯನ್. ನಾನು ಹಾಕಿಯಲ್ಲಿ 5 ಪದಕಗಳನ್ನು ಗೆದ್ದಿದ್ದೇನೆ. ನನ್ನ ಶಾಲೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿದಾಗ, ನನ್ನ ಹೃದಯದಲ್ಲಿ ರಂಧ್ರವಿದೆ ಎಂದು ವೈದ್ಯರು ಪತ್ತೆ ಹಚ್ಚಿದರು. ನಾನು ಚಿಕಿತ್ಸೆಗಾಗಿ ಇಲ್ಲಿಗೆ ಬಂದೆ, ಶಸ್ತ್ರಚಿಕಿತ್ಸೆಗೆ ಒಳಗಾದೆ, ನಾನೀಗ ಗುಣಮುಖವಾಗಿದ್ದು, ನಾನು ಮತ್ತೆ ಹಾಕಿ ಆಡಬಹುದು.

ಜನ್ಮಜಾತ ಹೃದಯ ಕಾಯಿಲೆಗಳನ್ನು ಉತ್ತಮ ಚಿಕಿತ್ಸೆ ಮೂಲಕ ನಿವಾರಿಸಿಕೊಂಡ ಮಕ್ಕಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ

November 01st, 05:15 pm

'ಹೃದಯದ ಮಾತು (ದಿಲ್ ಕಿ ಬಾತ್)' ಕಾರ್ಯಕ್ರಮದ ಭಾಗವಾಗಿ, ಛತ್ತೀಸ್‌ ಗಢದ ನವ ರಾಯ್‌ ಪುರದ ಶ್ರೀ ಸತ್ಯ ಸಾಯಿ ಸಂಜೀವನಿ ಆಸ್ಪತ್ರೆಯಲ್ಲಿ ನಡೆದ 'ಜೀವನದ ಉಡುಗೊರೆ' ಸಮಾರಂಭದಲ್ಲಿ ಜನ್ಮಜಾತ ಹೃದಯ ಕಾಯಿಲೆಗಳಿಂದ ಯಶಸ್ವಿಯಾಗಿ ಚಿಕಿತ್ಸೆ ಪಡೆದ 2500 ಮಕ್ಕಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂವಾದ ನಡೆಸಿದರು.

ದೇಶದಲ್ಲಿ ಸ್ನಾತಕೋತ್ತರ ಮತ್ತು ಪದವಿಪೂರ್ವ ವೈದ್ಯಕೀಯ ಶಿಕ್ಷಣ ಸಾಮರ್ಥ್ಯದ ಪ್ರಮುಖ ವಿಸ್ತರಣೆಗೆ ಸಂಪುಟ ಅನುಮೋದನೆ

September 24th, 05:52 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಪ್ರಸ್ತುತ ಅಸ್ತಿತ್ವದಲ್ಲಿರುವ ರಾಜ್ಯ ಸರ್ಕಾರ/ಕೇಂದ್ರ ಸರ್ಕಾರಿ ವೈದ್ಯಕೀಯ ಕಾಲೇಜುಗಳು/ಸ್ವತಂತ್ರ ಸ್ನಾತಕೋತ್ತರ ಸಂಸ್ಥೆಗಳು/ಸರ್ಕಾರಿ ಆಸ್ಪತ್ರೆಗಳ ಬಲಪಡಿಸುವಿಕೆ ಮತ್ತು ಮೇಲ್ದರ್ಜೆಗೇರಿಸುವ ಕೇಂದ್ರೀಯ ಪ್ರಾಯೋಜಿತ ಯೋಜನೆಯ (ಸಿಎಸ್ಎಸ್) ಹಂತ-ಹಂತದ ಅನುಷ್ಠಾನಕ್ಕೆ ಅನುಮೋದನೆ ನೀಡಿದೆ. 5,000 ಸ್ನಾತಕೋತ್ತರ ಸೀಟುಗಳನ್ನು ಹೆಚ್ಚಿಸಲು ಮತ್ತು ಅಸ್ತಿತ್ವದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೇಲ್ದರ್ಜೆಗೇರಿಸುವ ಸಿಎಸ್ಎಸ್ ವಿಸ್ತರಣೆಗೆ ಅನುಮೋದನೆ ನೀಡಿದೆ. 5,023 ಎಂಬಿಬಿಎಸ್ ಸೀಟುಗಳನ್ನು ಹೆಚ್ಚಿಸಲು ಪ್ರತಿ ಸೀಟಿಗೆ ರೂ. 1.50 ಕೋಟಿಗಳ ಹೆಚ್ಚಿನ ವೆಚ್ಚದ ಮಿತಿಯನ್ನು ಹೊಂದಿಸಬೇಕಾಗುತ್ತದೆ. ಈ ಉಪಕ್ರಮವು ಗಮನಾರ್ಹವಾಗಿ: ಪದವಿಪೂರ್ವ ವೈದ್ಯಕೀಯ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ; ಹೆಚ್ಚುವರಿ ಸ್ನಾತಕೋತ್ತರ ಸೀಟುಗಳನ್ನು ರಚಿಸುವ ಮೂಲಕ ತಜ್ಞ ವೈದ್ಯರ ಲಭ್ಯತೆ; ಮತ್ತು ಸರ್ಕಾರಿ ವೈದ್ಯಕೀಯ ಸಂಸ್ಥೆಗಳಲ್ಲಿ ಹೊಸ ವಿಶೇಷತೆಗಳನ್ನು ಪರಿಚಯಿಸಲು ಅನುವು ಮಾಡಿಕೊಡುತ್ತದೆ. ಇದು ದೇಶದಲ್ಲಿ ವೈದ್ಯರ ಒಟ್ಟಾರೆ ಲಭ್ಯತೆಯನ್ನು ಬಲಪಡಿಸುತ್ತದೆ.

ಅಸ್ಸಾಂನ ದರ್ರಾಂಗ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 14th, 11:30 am

ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್ ಜಿ, ಅಸ್ಸಾಂ ಸರ್ಕಾರದ ಎಲ್ಲಾ ಸಚಿವರು, ಸಂಸತ್ ಸದಸ್ಯರು ಮತ್ತು ಶಾಸಕರು, ಇಲ್ಲಿರುವ ಸಾರ್ವಜನಿಕ ಪ್ರತಿನಿಧಿಗಳೆ, ನಿರಂತರ ಮಳೆಯ ನಡುವೆಯೂ ನಮ್ಮನ್ನು ಆಶೀರ್ವದಿಸಲು ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ – ನಿಮ್ಮೆಲ್ಲರಿಗೂ ಹೃತ್ಪೂರ್ವಕ ನಮಸ್ಕಾರ.

ಅಸ್ಸಾಂನ ದರ್ರಾಂಗ್‌ನಲ್ಲಿ ಸುಮಾರು 6,500 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ

September 14th, 11:00 am

ಆಪರೇಷನ್ ಸಿಂದೂರ್ ಯಶಸ್ಸಿನ ನಂತರ, ನಿನ್ನೆ ಮೊದಲ ಬಾರಿಗೆ ಅಸ್ಸಾಂಗೆ ಭೇಟಿ ನೀಡಿದ್ದಾಗಿ ಪ್ರಧಾನಮಂತ್ರಿ ಅವರು ಹೇಳಿದರು. ಕಾರ್ಯಾಚರಣೆಯ ಅದ್ಭುತ ಯಶಸ್ಸಿಗೆ ಮಾತೆ ಕಾಮಾಕ್ಯಳ ಆಶೀರ್ವಾದ ಕಾರಣ. ಆಕೆಯ ಪವಿತ್ರ ಭೂಮಿಯಲ್ಲಿ ಕಾಲಿಟ್ಟಾಗ ಆಳವಾದ ಆಧ್ಯಾತ್ಮಿಕ ತೃಪ್ತಿ ತಂದಿತು. ಅಸ್ಸಾಂನಲ್ಲಿ ಆಚರಿಸಲಾಗುತ್ತಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಶುಭಾಶಯಗಳನ್ನು ಸಲ್ಲಿಸಿದರು. ಕೆಂಪುಕೋಟೆಯ ಮೇಲೆ ಮಾಡಿದ ಭಾಷಣವನ್ನು ಪುನರುಚ್ಚರಿಸಿದ ಶ್ರೀ ಮೋದಿ, ಭಾರತದ ಭದ್ರತಾ ಕಾರ್ಯತಂತ್ರದಲ್ಲಿ 'ಸುದರ್ಶನ-ಚಕ್ರ'ದ ಕಲ್ಪನೆಯನ್ನು ತಾವು ಪ್ರಸ್ತುತಪಡಿಸಿದೆವು. ಮಂಗಲ್ಡೋಯ್ ತಾಣವು ಸಂಸ್ಕೃತಿ, ಐತಿಹಾಸಿಕ ಹೆಮ್ಮೆ ಮತ್ತು ಭವಿಷ್ಯದ ಭರವಸೆಯ ಸಂಗಮ ಸ್ಥಳ. ಈ ಪ್ರದೇಶವು ಅಸ್ಸಾಂನ ಗುರುತಿನ ಕೇಂದ್ರದ ಸಂಕೇತವಾಗಿದೆ. ಸ್ಫೂರ್ತಿ ಮತ್ತು ಶೌರ್ಯದಿಂದ ತುಂಬಿರುವ ಈ ಭೂಮಿಯಲ್ಲಿ, ಜನರನ್ನು ಭೇಟಿ ಮಾಡಲು ಮತ್ತು ಅವರೊಂದಿಗೆ ಮಾತುಕತೆ ನಡೆಸಲು ಅವಕಾಶ ಸಿಕ್ಕಿದ್ದು ತಮ್ಮ ಅದೃಷ್ಟ ಎಂದು ಪ್ರಧಾನಮಂತ್ರಿ ಹೇಳಿದರು.

ನಮೀಬಿಯಾದ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

July 09th, 08:14 pm

ಪ್ರಜಾಪ್ರಭುತ್ವದ ತಾಯಿ ಎನಿಸಿದ ದೇಶದ ಪ್ರತಿನಿಧಿಯಾಗಿ ನಾನು ನಿಮ್ಮ ಮುಂದೆ ನಿಂತಿದ್ದೇನೆ. ನಾನು ನನ್ನೊಂದಿಗೆ 140 ಕೋಟಿ ಭಾರತೀಯರ ಆತ್ಮೀಯ ಶುಭಾಶಯಗಳನ್ನು ತಂದಿದ್ದೇನೆ.

Prime Minister addresses the Namibian Parliament

July 09th, 08:00 pm

PM Modi addressed the Parliament of Namibia and expressed gratitude to the people of Namibia for conferring upon him their highest national honour. Recalling the historic ties and shared struggle for freedom between the two nations, he paid tribute to Dr. Sam Nujoma, the founding father of Namibia. He also called for enhanced people-to-people exchanges between the two countries.

ಟ್ರಿನಿಡಾಡ್ ಮತ್ತು ಟೊಬಾಗೋ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 04th, 09:30 pm

ಈ ಐತಿಹಾಸಿಕ 'ರೆಡ್ ಹೌಸ್'ನಲ್ಲಿ ನಿಮ್ಮನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭಾರತೀಯ ಪ್ರಧಾನಿಯಾಗಿರುವುದು ನನಗೆ ದೊರೆತ ವಿನಮ್ರ ಗೌರವ. ಈ ಐತಿಹಾಸಿಕ ಕಟ್ಟಡವು ಟ್ರಿನಿಡಾಡ್ ಮತ್ತು ಟೊಬಾಗೋ ಜನರ ಸ್ವಾತಂತ್ರ್ಯ ಮತ್ತು ಘನತೆಗಾಗಿ ನಡೆದ ಹೋರಾಟ ಹಾಗೂ ತ್ಯಾಗಗಳಿಗೆ ಸಾಕ್ಷಿಯಾಗಿದೆ. ಕಳೆದ ಆರು ದಶಕಗಳಲ್ಲಿ ನೀವು ನ್ಯಾಯನಿಷ್ಠ, ಸರ್ವಸಮ್ಮತ ಹಾಗೂ ಸಮೃದ್ಧಿಯುತ ಪ್ರಜಾಪ್ರಭುತ್ವವನ್ನು ರೂಪಿಸುವಲ್ಲಿ, ಈ ಭವನವು ನಿಮ್ಮ ಪಯಣದ ದೃಢ ಹೆಗ್ಗುರುತಾಗಿ ನಿಂತಿದೆ.

ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

July 04th, 09:00 pm

ಸೆನೆಟ್ ಅಧ್ಯಕ್ಷರಾದ ಗೌರವಾನ್ವಿತ ವೇಡ್ ಮಾರ್ಕ್ ಮತ್ತು ಸದನದ ಸ್ಪೀಕರ್ ಗೌರವಾನ್ವಿತ ಜಗದೇವ್ ಸಿಂಗ್ ಅವರ ಆಹ್ವಾನದ ಮೇರೆಗೆ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತಿನ ಜಂಟಿ ಸಭೆಯನ್ನು ಉದ್ದೇಶಿಸಿ ಇಂದು ಮಾತನಾಡಿದರು. ಟ್ರಿನಿಡಾಡ್ ಮತ್ತು ಟೊಬಾಗೊ ಸಂಸತ್ತನ್ನು ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನ ಮಂತ್ರಿ ಮೋದಿ ಅವರು, ಈ ಸಂದರ್ಭವು ಭಾರತ-ಟ್ರಿನಿಡಾಡ್ ಮತ್ತು ಟೊಬಾಗೊ ನಡುವಿನ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮೈಲಿಗಲ್ಲು ಗುರುತಿಸಿದೆ ಎಂದರು.

ಘಾನಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

July 03rd, 12:32 am

ಮೂರು ದಶಕಗಳ ಸುದೀರ್ಘ ಅಂತರದ ನಂತರ, ಭಾರತದ ಪ್ರಧಾನಮಂತ್ರಿಯೊಬ್ಬರು ಘಾನಾಗೆ ಭೇಟಿ ನೀಡುತ್ತಿದ್ದಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ

June 29th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.

ಪಾಡ್‌ಕ್ಯಾಸ್ಟ್‌ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ

March 16th, 11:47 pm

ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್‌ʼನಲ್ಲಿ ಸಂವಾದ ನಡೆಸಿದರು

March 16th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್‌ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್‌ ಆಫ್‌ ದಿ ಬಾಕ್ಸ್‌) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್‌) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.

ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಿಲಾನ್ಯಾಸ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

February 23rd, 06:11 pm

ಸಹೋದರ ಸಹೋದರಿಯರೆ, ನೀವೆಲ್ಲಾ ದಯಮಾಡಿ ಮಾತಂಗೇಶ್ವರನಿಗೆ ಜೈ, ಬಾಗೇಶ್ವರ ಧಾಮಕ್ಕೆ ಜೈ, ಜಟಾಶಂಕರ ಧಾಮಕ್ಕೆ ಜೈ ಎಂದು ಹೇಳಿ, ನಾನು ನನ್ನ ಎರಡೂ ಕೈಗಳನ್ನು ಎತ್ತಿ ಹಿಡಿದು ನಿಮ್ಮ ಪರವಾಗಿ ನಮಿಸುತ್ತಿದ್ದೇನೆ, ಜೋರಾಗಿ ರಾಮ್-ರಾಮ್ ಎಂದು ಹೇಳಿ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಗೆ ಶಂಕುಸ್ಥಾಪನೆ ಮಾಡಿದರು

February 23rd, 04:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ಛತ್ತರಪುರ ಜಿಲ್ಲೆಯ ಗರ್ಹಾ ಗ್ರಾಮದಲ್ಲಿ ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯ ಶಂಕುಸ್ಥಾಪನೆ ನೆರವೇರಿಸಿದರು. ಅಲ್ಪಾವಧಿಯಲ್ಲಿಯೇ ಎರಡನೇ ಬಾರಿಗೆ ಬುಂದೇಲಖಂಡಕ್ಕೆ ಮತ್ತೆ ಬಂದಿರುವುದು ತಮ್ಮ ಅದೃಷ್ಟ ಎಂದು ಹೇಳಿದ ಶ್ರೀ ಮೋದಿ, ಆಧ್ಯಾತ್ಮಿಕ ಕೇಂದ್ರ ಬಾಗೇಶ್ವರ ಧಾಮ ಶೀಘ್ರದಲ್ಲೇ ಆರೋಗ್ಯ ಕೇಂದ್ರವಾಗಲಿದೆ ಎಂದು ಹೇಳಿದರು. ಬಾಗೇಶ್ವರ ಧಾಮ ವೈದ್ಯಕೀಯ ಮತ್ತು ವಿಜ್ಞಾನ ಸಂಶೋಧನಾ ಸಂಸ್ಥೆಯನ್ನು 10 ಎಕರೆ ಪ್ರದೇಶದಲ್ಲಿ ನಿರ್ಮಿಸಲಾಗುವುದು ಮತ್ತು ಮೊದಲ ಹಂತದಲ್ಲಿ 100 ಹಾಸಿಗೆಗಳ ಸೌಲಭ್ಯ ಸಿದ್ಧವಾಗಲಿದೆ ಎಂದು ಅವರು ಹೇಳಿದರು. ಶ್ರೀ ಧೀರೇಂದ್ರ ಶಾಸ್ತ್ರಿ ಅವರ ಉದಾತ್ತ ಕಾರ್ಯಕ್ಕಾಗಿ ಅವರು ಅವರನ್ನು ಅಭಿನಂದಿಸಿದರು ಮತ್ತು ಬುಂದೇಲಖಂಡದ ಜನರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

People from different walks of life support PM’s clarion call to fight obesity

January 31st, 06:25 pm

Prime Minister Shri Narendra Modi recently gave a clarion call to fight obesity and reduce oil consumption. This has received wide support from doctors, sportspersons as well as people from different walks of life.

The National Games are a celebration of India's incredible sporting talent: PM Modi in Dehradun

January 28th, 09:36 pm

PM Modi during the 38th National Games inauguration in Dehradun addressed the nation's youth, highlighting the role of sports in fostering unity, fitness, and national development. He emphasized the government's efforts in promoting sports, the importance of sports infrastructure, and India's growing sports economy.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡೆಹ್ರಾಡೂನ್‌ನಲ್ಲಿ 38ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು

January 28th, 09:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ 38ನೇ ರಾಷ್ಟ್ರೀಯ ಕ್ರೀಡಾಕೂಟವನ್ನು ಉದ್ಘಾಟಿಸಿದರು. ನಂತರ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಉತ್ತರಾಖಂಡ ಇಂದು ಯುವಜನರ ಶಕ್ತಿಯಿಂದ ಬೆಳಗುತ್ತಿದೆ ಎಂದರು. ಬಾಬಾ ಕೇದಾರನಾಥ, ಬದರೀನಾಥ ಮತ್ತು ಗಂಗಾ ಮಾತೆಯ ಆಶೀರ್ವಾದದಿಂದ 38ನೇ ರಾಷ್ಟ್ರೀಯ ಕ್ರೀಡಾಕೂಟ ಇಂದು ಆರಂಭವಾಗುತ್ತಿದೆ ಎಂದರು. ಇದು ಉತ್ತರಾಖಂಡದ ರಚನೆಯ 25ನೇ ವರ್ಷವಾಗಿದೆ ಎಂಬುದನ್ನು ಒತ್ತಿ ಹೇಳಿದ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರದಾದ್ಯಂತದ ಯುವಕರು ಈ ಯುವ ರಾಜ್ಯದಲ್ಲಿ ತಮ್ಮ ಸಾಮರ್ಥ್ಯ‌ವನ್ನು ಪ್ರದರ್ಶಿಸಲಿದ್ದಾರೆ ಎಂದರು. ಈ ಕಾರ್ಯಕ್ರಮವು ‘ಏಕ್‌ ಭಾರತ್‌, ಶ್ರೇಷ್ಠ ಭಾರತ್‌’ ನ ಸುಂದರವಾದ ಚಿತ್ರವನ್ನು ಪ್ರದರ್ಶಿಸಿತು ಎಂದು ಅವರು ಹೇಳಿದರು. ರಾಷ್ಟ್ರೀಯ ಕ್ರೀಡಾಕೂಟದ ಈ ಆವೃತ್ತಿಯಲ್ಲಿಅನೇಕ ಸ್ಥಳೀಯ ಆಟಗಳನ್ನು ಸೇರಿಸಲಾಗಿದೆ ಮತ್ತು ಪರಿಸರ ಸ್ನೇಹಿ ವಸ್ತುಗಳ ಬಳಕೆ ಇರುವುದರಿಂದ ‘ಗ್ರೀನ್‌ ಗೇಮ್ಸ್’(ಹಸಿರು ಕ್ರೀಡಾಕೂಟ) ಘೋಷವಾಕ್ಯವಾಗಿದೆ ಎಂದು ಅವರು ಹೇಳಿದರು. ಈ ವಿಷಯದ ಬಗ್ಗೆ ಮತ್ತಷ್ಟು ವಿವರಿಸಿದ ಪ್ರಧಾನಮಂತ್ರಿ ಅವರು, ಟ್ರೋಫಿಗಳು ಮತ್ತು ಪದಕಗಳನ್ನು ಸಹ ಇ-ತ್ಯಾಜ್ಯದಿಂದ ತಯಾರಿಸಲಾಗಿದೆ ಮತ್ತು ಪ್ರತಿ ಪದಕ ವಿಜೇತರ ಹೆಸರಿನಲ್ಲಿಒಂದು ಮರವನ್ನು ನೆಡಲಾಗುವುದು, ಇದು ಉತ್ತಮ ಉಪಕ್ರಮವಾಗಿದೆ ಎಂದು ಅವರು ಹೇಳಿದರು. ಉತ್ತಮ ಪ್ರದರ್ಶನಕ್ಕಾಗಿ ಅವರು ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಇಂತಹ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಉತ್ತರಾಖಂಡ ಸರ್ಕಾರ ಮತ್ತು ಜನರನ್ನು ಅವರು ಅಭಿನಂದಿಸಿದರು.

ಹೃದಯ ಶಸ್ತ್ರಚಿಕಿತ್ಸಕರಾದ ಡಾ. ಕೆ. ಎಂ. ಚೆರಿಯನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರಿಂದ ಸಂತಾಪ ಸೂಚನೆ

January 26th, 03:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಖ್ಯಾತ ಹೃದಯ ಶಸ್ತ್ರಚಿಕಿತ್ಸಕರಾದ ಡಾ. ಕೆ. ಎಂ. ಚೆರಿಯನ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 15th, 11:20 am

ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್‌ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.