'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ

December 28th, 11:30 am

ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.

PM to chair the fifth National Conference of Chief Secretaries in Delhi on 27th and 28th December

December 26th, 11:06 am

In line with his commitment to strengthening Centre–State partnership, PM Modi will chair the fifth National Conference of Chief Secretaries in Delhi on 27th and 28th December 2025. Anchored in the Prime Minister’s vision of cooperative federalism, the Conference serves as a forum where the Centre and the States collaborate to design a unified roadmap, with a focus on the theme ‘Human Capital for Viksit Bharat’.

India - Oman Joint Statement during the visit of Prime Minister of India, Shri Narendra Modi to Oman

December 18th, 05:28 pm

Prime Minister Narendra Modi visited Oman from 17–18 December 2025 at the invitation of Sultan Haitham bin Tarik, marking 70 years of diplomatic ties. The visit strengthened the India Oman strategic partnership with the signing of CEPA, key MoUs and adoption of a Joint Vision on Maritime Cooperation.

“Maitri Parv” celebrates the friendship between India and Oman: PM Modi during community programme in Muscat

December 18th, 12:32 pm

While addressing a large gathering of members of the Indian community in Muscat, PM Modi remarked that co-existence and cooperation have been hallmarks of the Indian diaspora. He noted that over the last 11 years, India has witnessed transformational changes across perse fields. He reaffirmed India’s deep commitment to the welfare of the diaspora and invited students to participate in ISRO’s YUVIKA programme.

ಒಮಾನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 18th, 12:31 pm

ಪ್ರಧಾನಮಂತ್ರಿ ಅವರು ಇಂದು ಮಸ್ಕತ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ವಿವಿಧ ಭಾರತೀಯ ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಓಮನ್ ನಲ್ಲಿ ಭಾರತೀಯ ಶಾಲೆಗಳು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷವು ಅಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ವಿಶೇಷವಾಗಿದೆ.

ದೇಶಭಕ್ತಿ ಗೀತೆಯಾಗಿ ವಂದೇ ಮಾತರಂ ಅಳವಡಿಸಿಕೊಂಡು 150 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಲೋಕಸಭೆಯಲ್ಲಿ ನಡೆದ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

December 08th, 12:30 pm

ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿದ್ದಕ್ಕಾಗಿ ನಿಮಗೆ ಮತ್ತು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇನೆ. ರಾಷ್ಟ್ರದ ಸ್ವಾತಂತ್ರ್ಯ ಚಳುವಳಿಗೆ ಶಕ್ತಿ, ಸ್ಫೂರ್ತಿ, ತ್ಯಾಗ ಮತ್ತು ಕಾಠಿನ್ಯದ ಮನೋಭಾವ ತುಂಬಿದ ಆ ಮಂತ್ರ, ಆ ಸ್ಪಷ್ಟ ಕರೆಯನ್ನು ಗೌರವದಿಂದ ನೆನಪಿಸಿಕೊಳ್ಳುವುದು, ಈ ಸದನದೊಳಗೆ ವಂದೇ ಮಾತರಂ(ಇದನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳು ಸಂದಿವೆ, ಕವಿ ರವೀಂದ್ರನಾಥ್ ಠ್ಯಾಗೋರ್ ಅವರ ಜನ ಗಣ ಮನ ಅಧಿನಾಯಕ ಜಯ ಹೇ – ಹಾಗೂ ಬಂಕಿಮ್ ಚಂದ್ರ ಚಟರ್ಜಿ ಅವರ ವಂದೇ ಮಾತರಂಗೆ 1950 ಜನವರಿ 24ರಂದು ರಾಷ್ಟ್ರಗೀತೆಯ ಸ್ಥಾನಮಾನ ನೀಡಲಾಗಿದೆ) ಅನ್ನು ಸ್ಮರಿಸುವುದು ನಮಗೆಲ್ಲರಿಗೂ ಸೌಭಾಗ್ಯದ ವಿಷಯವಾಗಿದೆ. ವಂದೇ ಮಾತರಂ ಅನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳನ್ನು ಗುರುತಿಸುವ ಐತಿಹಾಸಿಕ ಸಂದರ್ಭಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ ಎಂಬುದು ಬಹಳ ಹೆಮ್ಮೆಯ ವಿಷಯ. ಈ ಅವಧಿಯು ಇತಿಹಾಸ ಪುಟದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ. ಈ ಚರ್ಚೆಯು ಖಂಡಿತವಾಗಿಯೂ ಈ ಸದನದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ, ಆದರೆ ನಾವು ಈ ಕ್ಷಣವನ್ನು ಸಾಮೂಹಿಕವಾಗಿ ಬಳಸಿಕೊಂಡರೆ, ಅದು ಮುಂದಿನ ಪೀಳಿಗೆಗೆ, ಪ್ರತಿ ಪೀಳಿಗೆಗೂ ಸತತ ಕಲಿಕೆಯ ಮೂಲವಾಗಿಯೂ ಕಾರ್ಯ ನಿರ್ವಹಿಸಬಹುದು.

ಲೋಕಸಭೆಯಲ್ಲಿ ನಡೆದ ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ವರ್ಷಗಳ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

December 08th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಮಾತನಾಡಿದರು. ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ರಾಷ್ಟ್ರದ ಸ್ವಾತಂತ್ರ್ಯ ಚಳವಳಿಗೆ ಶಕ್ತಿ ತುಂಬಿದ ಮತ್ತು ಸ್ಫೂರ್ತಿ ನೀಡಿದ, ತ್ಯಾಗ ಮತ್ತು ತಪಸ್ಸಿನ ಮಾರ್ಗವನ್ನು ತೋರಿಸಿದ ವಂದೇ ಮಾತರಂ ಎಂಬ ಮಂತ್ರ ಮತ್ತು ಘೋಷವಾಕ್ಯವನ್ನು ನೆನಪಿಸಿಕೊಳ್ಳಲಾಗುತ್ತಿದೆ ಮತ್ತು ಇದು ಸದನದಲ್ಲಿರುವ ಎಲ್ಲರಿಗೂ ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ವಂದೇ ಮಾತರಂನ 150 ವರ್ಷಗಳ ಐತಿಹಾಸಿಕ ಸಂದರ್ಭಕ್ಕೆ ದೇಶ ಸಾಕ್ಷಿಯಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ಹೇಳಿದರು. ಈ ಅವಧಿಯು ಇತಿಹಾಸದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ ಎಂದು ಅವರು ಹೇಳಿದರು. ಈ ಚರ್ಚೆಯು ಸದನದ ಬದ್ಧತೆಯನ್ನು ಪ್ರತಿಬಿಂಬಿಸುವುದಲ್ಲದೆ, ಎಲ್ಲರೂ ಸಾಮೂಹಿಕವಾಗಿ ಇದನ್ನು ಸದುಪಯೋಗಪಡಿಸಿಕೊಂಡರೆ ಭವಿಷ್ಯದ ಪೀಳಿಗೆಗೆ ಶಿಕ್ಷಣದ ಮೂಲವೂ ಆಗುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.

ರಷ್ಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

December 05th, 02:00 pm

ಇಂದು 23 ನೇ ಭಾರತ-ರಷ್ಯಾ ಶೃಂಗಸಭೆಗೆ ಅಧ್ಯಕ್ಷ ಪುಟಿನ್ ಅವರನ್ನು ಸ್ವಾಗತಿಸಲು ನನಗೆ ಸಂತೋಷವಾಗಿದೆ. ನಮ್ಮ ದ್ವಿಪಕ್ಷೀಯ ಸಂಬಂಧವು ಹಲವಾರು ಐತಿಹಾಸಿಕ ಮೈಲಿಗಲ್ಲುಗಳ ಮೂಲಕ ಸಾಗುತ್ತಿರುವ ಸಮಯದಲ್ಲಿ ಅವರ ಭೇಟಿ ಬಂದಿದೆ. ನಿಖರವಾಗಿ 25 ವರ್ಷಗಳ ಹಿಂದೆ, ಅಧ್ಯಕ್ಷ ಪುಟಿನ್ ನಮ್ಮ ಕಾರ್ಯತಂತ್ರದ ಪಾಲುದಾರಿಕೆಗೆ ಅಡಿಪಾಯ ಹಾಕಿದರು. ಹದಿನೈದು ವರ್ಷಗಳ ಹಿಂದೆ, 2010 ರಲ್ಲಿ, ನಮ್ಮ ಪಾಲುದಾರಿಕೆಯನ್ನು ವಿಶೇಷ ಮತ್ತು ಸವಲತ್ತು ಪಡೆದ/ಆದ್ಯತೆಯ ಕಾರ್ಯತಂತ್ರದ ಪಾಲುದಾರಿಕೆ ಮಟ್ಟಕ್ಕೆ ಏರಿಸಲಾಯಿತು.

PM Modi’s remarks during the joint press meet with Russian President Vladimir Putin

December 05th, 01:50 pm

PM Modi addressed the joint press meet with President Putin, highlighting the strong and time-tested India-Russia partnership. He said the relationship has remained steady like the Pole Star through global challenges. PM Modi announced new steps to boost economic cooperation, connectivity, energy security, cultural ties and people-to-people linkages. He reaffirmed India’s commitment to peace in Ukraine and emphasised the need for global unity in the fight against terrorism.

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 03:35 pm

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೇ ಮಹಾಂತರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಅಶೋಕ್ ಗಜಪತಿ ರಾಜು ಜಿ, ಜನಪ್ರಿಯ ಮುಖ್ಯಮಂತ್ರಿ ಮತ್ತು ಸಹೋದರ ಪ್ರಮೋದ್ ಸಾವಂತ್ ಜಿ, ಮಠ ಸಮಿತಿಯ ಅಧ್ಯಕ್ಷ ಶ್ರೀ ಶ್ರೀನಿವಾಸ ಡೆಂಪೊ ಜಿ, ಉಪಾಧ್ಯಕ್ಷರಾದ ಶ್ರೀ ಆರ್.ಆರ್. ಕಾಮತ್ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಶ್ರೀಪಾದ ನಾಯಕ್ ಜಿ ಮತ್ತು ದಿಗಂಬರ್ ಕಾಮತ್ ಜಿ ಮತ್ತು ಇಲ್ಲಿರುವ ಇತರೆ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ,

ಗೋವಾದಲ್ಲಿ ನಡೆದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 28th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದಲ್ಲಿ ನಡೆದ 'ಶ್ರೀ ಸಂಸ್ಥಾನ ಗೋಕರ್ಣ ಪರ್ತಗಳಿ ಜೀವೋತ್ತಮ ಮಠ'ದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಈ ಪವಿತ್ರ ಸಂದರ್ಭದಲ್ಲಿ ತಮ್ಮ ಮನಸ್ಸು ಅತೀವ ಶಾಂತಿಯಿಂದ ತುಂಬಿದೆ ಎಂದು ಪ್ರಧಾನಮಂತ್ರಿ ಅವರು ಬಣ್ಣಿಸಿದರು. ಸಂತರ ಸಾನ್ನಿಧ್ಯದಲ್ಲಿ ಇರುವುದೇ ಒಂದು ಆಧ್ಯಾತ್ಮಿಕ ಅನುಭವ ಎಂದು ಅವರು ಅಭಿಪ್ರಾಯಪಟ್ಟರು. ಇಲ್ಲಿ ನೆರೆದಿರುವ ಅಪಾರ ಸಂಖ್ಯೆಯ ಭಕ್ತರು, ಈ ಮಠದ ಶತಮಾನಗಳಷ್ಟು ಹಳೆಯದಾದ ಚೈತನ್ಯವನ್ನು ಇನ್ನಷ್ಟು ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದ ಶ್ರೀ ಮೋದಿ, ಇಂದು ಈ ಸಮಾರಂಭದಲ್ಲಿ ಜನರ ನಡುವೆ ಉಪಸ್ಥಿತರಿರುವುದಕ್ಕೆ ತಾವು ಅತ್ಯಂತ ಭಾಗ್ಯಶಾಲಿ ಎಂದು ಭಾವಿಸುವುದಾಗಿ ತಿಳಿಸಿದರು. ಇಲ್ಲಿಗೆ ಬರುವ ಮುನ್ನ ರಾಮ ಮಂದಿರ ಮತ್ತು ವೀರ ವಿಠಲ ಮಂದಿರಕ್ಕೆ ಭೇಟಿ ನೀಡುವ ಸೌಭಾಗ್ಯ ತಮಗೆ ದೊರೆಯಿತು ಎಂದು ಅವರು ಸ್ಮರಿಸಿದರು. ಅಲ್ಲಿನ ಶಾಂತಿಯುತ ವಾತಾವರಣವು ಈ ಸಮಾರಂಭದ ಆಧ್ಯಾತ್ಮಿಕತೆಯನ್ನು ಇನ್ನಷ್ಟು ಗಾಢವಾಗಿಸಿದೆ ಎಂದು ಅವರು ಹೇಳಿದರು.

ಕರ್ನಾಟಕದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 11:45 am

ನಾನು ಮಾತು ಆರಂಭಿಸುವ ಮೊದಲು, ಕೆಲವು ಮಕ್ಕಳು ತಮ್ಮ ಚಿತ್ರಕಲೆಗಳನ್ನು ಇಲ್ಲಿಗೆ ತಂದಿದ್ದಾರೆ. ದಯವಿಟ್ಟು ಎಸ್‌ಪಿಜಿ ಮತ್ತು ಸ್ಥಳೀಯ ಪೊಲೀಸರು ಅವುಗಳನ್ನು ಸಂಗ್ರಹಿಸಿ. ನೀವು ನಿಮ್ಮ ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ನಾನು ಖಂಡಿತವಾಗಿಯೂ ನಿಮಗೆ ಧನ್ಯವಾದ ಪತ್ರವನ್ನು ಕಳುಹಿಸುತ್ತೇನೆ. ಯಾರಾದರೂ ಏನನ್ನಾದರೂ ನನಗೆ ತಂದಿದ್ದರೆ, ದಯವಿಟ್ಟು ಭದ್ರತಾ ಸಿಬ್ಬಂದಿಗೆ ನೀಡಿ, ಅವರು ಅದನ್ನು ಸಂಗ್ರಹಿಸುತ್ತಾರೆ, ನೀವು ಆರಾಮವಾಗಿ ಕುಳಿತು ವಿಶ್ರಾಂತಿ ಪಡೆಯಿರಿ. ಈ ಮಕ್ಕಳು ತುಂಬಾ ಕಷ್ಟಪಟ್ಟು ಕೆಲಸ ಮಾಡಿರುತ್ತಾರೆ, ಹಾಗಾಗಿ, ಅವರಿಗೆ ಅನ್ಯಾಯವಾಗಬಾರದು. ಹಾಗೆ ಮಾಡಿದರೆ, ಅದು ನನಗೆ ನೋವುಂಟು ಮಾಡುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 28th, 11:30 am

ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠದಲ್ಲಿ ಇಂದು ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಭಗವಾನ್ ಶ್ರೀ ಕೃಷ್ಣನ ದಿವ್ಯ ದರ್ಶನದ ತೃಪ್ತಿ, ಶ್ರೀಮದ್ ಭಗವದ್ಗೀತೆಯ ಮಂತ್ರಗಳ ಆಧ್ಯಾತ್ಮಿಕ ಅನುಭವ ಮತ್ತು ಹಲವಾರು ಪೂಜ್ಯ ಸಂತರು ಮತ್ತು ಗುರುಗಳ ಉಪಸ್ಥಿತಿಯು ತಮಗೆ ದೊರೆತ ಪರಮ ಭಾಗ್ಯ. ಇದು ಅಸಂಖ್ಯಾತ ಆಶೀರ್ವಾದಗಳನ್ನು ಪಡೆದಂತೆ ಎಂದು ಅವರು ಹೇಳಿದರು.

ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

November 25th, 04:40 pm

ಹರಿಯಾಣ ರಾಜ್ಯಪಾಲರಾದ ಆಶಿಮ್ ಘೋಷ್ ಜಿ, ಜನಪ್ರಿಯ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜಿ, ರಾವ್ ಇಂದರ್ಜಿತ್ ಸಿಂಗ್ ಜಿ, ಕೃಷನ್ ಪಾಲ್ ಜಿ, ಹರಿಯಾಣ ಎಸ್‌ಜಿಪಿಸಿ ಅಧ್ಯಕ್ಷ ಜಗದೀಶ್ ಸಿಂಗ್ ಜಿಂದಾ ಜಿ, ಇತರೆ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು

November 25th, 04:38 pm

ಹರಿಯಾಣದ ಕುರುಕ್ಷೇತ್ರದಲ್ಲಿ ಇಂದು ನಡೆದ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಇಂದು ಭಾರತದ ಪರಂಪರೆಯ ಮಹತ್ವದ ಸಂಗಮವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ತಾವು ಬೆಳಿಗ್ಗೆ ರಾಮಾಯಣ ನಗರವಾದ ಅಯೋಧ್ಯೆಯಲ್ಲಿ ಮತ್ತು ಈಗ ಗೀತಾ ನಗರವಾದ ಕುರುಕ್ಷೇತ್ರದಲ್ಲಿರುವುದಾಗಿ ಅವರು ಉಲ್ಲೇಖಿಸಿದರು. ಶ್ರೀ ಗುರು ತೇಜ್ ಬಹದ್ದೂರ್ ಅವರ 350 ನೇ ಹುತಾತ್ಮ ದಿನಾಚರಣೆಯ ಸಂದರ್ಭದಲ್ಲಿ ಎಲ್ಲರೂ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸಂತರು ಮತ್ತು ಗಣ್ಯರ ಉಪಸ್ಥಿತಿಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು ಮತ್ತು ಎಲ್ಲರಿಗೂ ಗೌರವದಿಂದ ನಮಸ್ಕರಿಸಿದರು.

ಜೋಹಾನ್ಸ್‌ಬರ್ಗ್‌ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

November 23rd, 09:41 pm

ಭಾರತ-ಕೆನಡಾ ಪಾಲುದಾರಿಕೆಯ ಪ್ರಗತಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜೋಹಾನ್ಸ್‌ಬರ್ಗ್‌ ನಲ್ಲಿ ನಡೆದ ಜಿ20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಮಾರ್ಕ್‌ ಕಾರ್ನೆ ಅವರನ್ನು ಭೇಟಿ ಮಾಡಿದರು.

ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

November 23rd, 12:45 pm

ಐಬಿಎಸ್‌ಎ ಕೇವಲ ಮೂರು ದೇಶಗಳ ವೇದಿಕೆಯಲ್ಲ; ಇದು ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ಶಕ್ತಿಗಳು ಮತ್ತು ಮೂರು ಮಹತ್ವದ ಆರ್ಥಿಕತೆಗಳನ್ನು ಜೋಡಿಸುವ ಪ್ರಮುಖ ವೇದಿಕೆಯಾಗಿದೆ. ಇದು ನಮ್ಮ ವೈವಿಧ್ಯತೆ, ಹಂಚಿಕೆಯ ಮೌಲ್ಯಗಳು ಮತ್ತು ಹಂಚಿಕೆಯ ಆಕಾಂಕ್ಷೆಗಳಲ್ಲಿ ಬೇರೂರಿರುವ ಆಳವಾದ ಮತ್ತು ನಿರಂತರ ಪಾಲುದಾರಿಕೆಯಾಗಿದೆ.

ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಐ.ಬಿ.ಎಸ್‌.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಭಾಗಿ

November 23rd, 12:30 pm

ಸಭೆಯನ್ನು ಸಕಾಲಿಕ ಎಂದು ಬಣ್ಣಿಸಿದ ಪ್ರಧಾನಮಂತ್ರಿ, ಕಾಕತಾಳೀಯವೆಂದರೆ ಇದು ಆಫ್ರಿಕಾದ ನೆಲದಲ್ಲಿ ನಡೆದ ಮೊದಲ ಜಿ20 ಶೃಂಗಸಭೆಯಾಗಿದೆ ಮತ್ತು ಜಾಗತಿಕ ದಕ್ಷಿಣ ದೇಶಗಳು ಸತತ ನಾಲ್ಕು ಜಿ20 ಸಭೆಗಳ ಅಧ್ಯಕ್ಷತೆಗಳನ್ನು ವಹಿಸಿಕೊಂಡವು, ಅವುಗಳಲ್ಲಿ ಕೊನೆಯ ಮೂರು ಐ.ಬಿ.ಎಸ್‌.ಎ ಸದಸ್ಯ ರಾಷ್ಟ್ರಗಳದ್ದಾಗಿದ್ದವು ಎಂದು ಉಲ್ಲೇಖಿಸಿದರು. ಇದು ಮಾನವ ಕೇಂದ್ರಿತ ಅಭಿವೃದ್ಧಿ, ಬಹುಪಕ್ಷೀಯ ಸುಧಾರಣೆ ಮತ್ತು ಸುಸ್ಥಿರ ಬೆಳವಣಿಗೆಯ ಮೇಲೆ ಕೇಂದ್ರೀಕರಿಸಿದ ಹಲವಾರು ಪ್ರಮುಖ ಉಪಕ್ರಮಗಳಿಗೆ ಕಾರಣವಾಗಿದೆ ಎಂದು ಅವರು ಉಲ್ಲೇಖಿಸಿದರು.

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ನಡೆದ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಅನುವಾದ

November 19th, 11:00 am

ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ಕೇಂದ್ರದಲ್ಲಿರುವ ನನ್ನ ಸಹೋದ್ಯೋಗಿಗಳು, ರಾಮಮೋಹನ್ ನಾಯ್ಡು ಜಿ, ಜಿ. ಕಿಶನ್ ರೆಡ್ಡಿ ಜಿ, ಭೂಪತಿ ರಾಜು ಶ್ರೀನಿವಾಸ ವರ್ಮಾ ಜಿ, ಸಚಿನ್ ತೆಂಡೂಲ್ಕರ್ ಜಿ, ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಜಿ, ರಾಜ್ಯ ಸರ್ಕಾರದ ಸಚಿವ ನಾರಾ ಲೋಕೇಶ್ ಜಿ, ಶ್ರೀ ಸತ್ಯಸಾಯಿ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಆರ್. ಜೆ. ರತ್ನಾಕರ್ ಜಿ, ಉಪಕುಲಪತಿ ಕೆ. ಚಕ್ರವರ್ತಿ ಜಿ, ಐಶ್ವರ್ಯ ಜಿ, ಇತರ ಎಲ್ಲಾ ಗಣ್ಯರು, ಮಹಿಳೆಯರೇ ಮತ್ತು ಮಹನೀಯರೇ, ಎಲ್ಲರಿಗೂ ಸಾಯಿ ರಾಮ್!

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 19th, 10:30 am

ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು ಸಾಯಿ ರಾಮ್ ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ ಸಿಕ್ಕಿತು ಎಂಬುದನ್ನೂ ಅವರು ಹಂಚಿಕೊಂಡರು. ಬಾಬಾ ಅವರ ಪಾದಗಳಿಗೆ ನಮಸ್ಕರಿಸಿ ಅವರ ಆಶೀರ್ವಾದ ಪಡೆಯುವುದು ಸದಾ ಹೃದಯವನ್ನು ತುಂಬುವ ಆಳವಾದ ಭಾವನಾತ್ಮಕ ಕ್ಷಣ ಎಂದವರು ಬಣ್ಣಿಸಿದರು.