ಸೆಶೆಲ್ಸ್‌ನ ನ್ಯಾಷನಲ್ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ

June 28th, 05:00 pm

ಘನತೆವೆತ್ತ ಗೌರವಾನ್ವಿತ ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಮಿಸೆಸ್ ಅಜಾರೆಲ್ ಅರ್ನೆಸ್ಟಾ,

ಪ್ರಧಾನಮಂತ್ರಿ ಅವರಿಗೆ ಅಧ್ಯಕ್ಷೀಯ ಪ್ರಶಸ್ತಿ 'ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್' ಗೌರವ ಪ್ರದಾನ

June 28th, 03:07 pm

ವಿಶೇಷ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಸೀಶೆಲ್ಸ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಪ್ಯಾಟ್ರಿಕ್ ಹರ್ಮಿನಿ ಅವರು ಇಂದು ಅಧ್ಯಕ್ಷೀಯ ಪ್ರಶಸ್ತಿ 'ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್' ಪ್ರದಾನ ಮಾಡಿದರು. ಪ್ರಧಾನಮಂತ್ರಿಗಳಿಗೆ ಅವರ ಹಸಿರು ನಾಯಕತ್ವ, ಅಭಿವೃದ್ಧಿಶೀಲ ರಾಷ್ಟ್ರಗಳ ಹಿತಾಸಕ್ತಿಗಳನ್ನು ಮುನ್ನಡೆಸುವ ಪ್ರಯತ್ನಗಳು ಮತ್ತು ನೀಲಿ ಆರ್ಥಿಕತೆ, ಹವಾಮಾನ ನಿಯಂತ್ರಣ ಕ್ರಮಗಳು, ಸಾಗರ ಸಂಪನ್ಮೂಲಗಳ ಸುಸ್ಥಿರ ನಿರ್ವಹಣೆ ಮತ್ತು ಸಣ್ಣ ದ್ವೀಪ ಅಭಿವೃದ್ಧಿಶೀಲ ರಾಜ್ಯಗಳ ಅಭಿವೃದ್ಧಿಯ ಆಕಾಂಕ್ಷೆಗಳನ್ನು ಉತ್ತೇಜಿಸುವ ಅವರ ದೀರ್ಘಕಾಲದ ಬದ್ಧತೆಗಾಗಿ ಈ ಗೌರವವನ್ನು ನೀಡಲಾಗಿದೆ. ಈ ವಿಶಿಷ್ಟ ಗೌರವವನ್ನು ನೀಡುತ್ತಿರುವುದು ಇದೇ ಮೊದಲು.

Today, the world does not suffer from a shortage of resources; it suffers from a shortage of trust: PM Modi at G7 Summit in Evian, France

June 16th, 10:12 pm

Addressing the Outreach Session on “Forging New Partnerships and Rebuilding International Solidarity” at the G7 Summit in France, PM Modi emphasized that building trust, transparency and stronger international partnerships is essential in an interconnected world. He highlighted India’s “Humanity First” approach, called for greater global solidarity, and stressed the importance of dialogue, diplomacy and respect for international law in ensuring peace and stability.

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ “ಹೊಸ ಪಾಲುದಾರಿಕೆಗಳನ್ನು ರೂಪಿಸುವುದು ಮತ್ತು ಅಂತಾರಾಷ್ಟ್ರೀಯ ಒಗ್ಗಟ್ಟಿನ ಪುನರ್ ನಿರ್ಮಾಣ’’ ಕುರಿತ ಗೋಷ್ಠಿಯನ್ನುದ್ದೇಶಿ ಭಾಷಣ ಮಾಡಿದ ಪ್ರಧಾನಮಂತ್ರಿ

June 16th, 10:07 pm

ಪ್ರಧಾನಮಂತ್ರಿ ತಮ್ಮ ಭಾಷಣದಲ್ಲಿ ಇಂಧನ, ಆಹಾರ, ಆರೋಗ್ಯ, ಸೈಬರ್ ಮತ್ತು ಆರ್ಥಿಕ ಭದ್ರತೆ ಬೆಸೆದುಕೊಂಡಿರುವ ಅಂತರ ಸಂಪರ್ಕಿತ ಜಗತ್ತಿನಲ್ಲಿ ಅಂತಾರಾಷ್ಟ್ರೀಯ ಪಾಲುದಾರಿಕೆಗಳನ್ನು ನಿರ್ಮಿಸುವುದು ಮಾನವೀಯತೆಯ ಪ್ರಗತಿ ಮತ್ತು ಸಮೃದ್ಧಿಗೆ ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು. ಅನಿಶ್ಚಿತತೆಯ ಜಗತ್ತಿನಲ್ಲಿ ವ್ಯಾಪಾರ ಮತ್ತು ತಂತ್ರಜ್ಞಾನವನ್ನು ಸಂಕುಚಿತ ಹಿತಾಸಕ್ತಿಗಳಿಗಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ, ಇದು ಅಂತಾರಾಷ್ಟ್ರೀಯ ರಂಗದಲ್ಲಿ ನಂಬಿಕೆಯ ಕೊರತೆಗೆ ಕಾರಣವಾಗುತ್ತದೆ ಎಂದು ಅವರು ಹೇಳಿದರು. ಕೋವಿಡ್ ಸಾಂಕ್ರಾಮಿಕ ರೋಗದಿಂದ ಕಲಿತ ಪಾಠಗಳನ್ನು ಉಲ್ಲೇಖಿಸಿದ ಅವರು, ಜಾಗತಿಕ ಪಾಲುದಾರಿಕೆಗಳಲ್ಲಿ ನಂಬಿಕೆ ಮತ್ತು ಪಾರದರ್ಶಕತೆಯನ್ನು ನಿರ್ಮಿಸುವತ್ತ ಗಮನಹರಿಸಲು ರಾಷ್ಟ್ರಗಳಿಗೆ ಕರೆ ನೀಡಿದರು.

'ಏಕ್ ಪೇಡ್ ಮಾ ಕೆ ನಾಮ್' ಅಭಿಯಾನದಡಿಯಲ್ಲಿ ಐತಿಹಾಸಿಕ ಗಿಡ ನೆಡುವ ಮೈಲಿಗಲ್ಲನ್ನು ಸಾಧಿಸಿದ ಉತ್ತರ ಪ್ರದೇಶದ ಜನತೆಗೆ ಪ್ರಧಾನಮಂತ್ರಿ ಅಭಿನಂದನೆ

June 05th, 11:40 pm

ಪ್ರತಿಯೊಬ್ಬ ದೇಶವಾಸಿಗೂ ಸ್ಫೂರ್ತಿ ನೀಡುವ ಅದ್ಭುತ ಸಾಧನೆಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಜನರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. 'ಏಕ್ ಪೇಡ್ ಮಾ ಕೆ ನಾಮ್' ಅಭಿಯಾನಕ್ಕೆ ಸಂಬಂಧಿಸಿದ ಈ ಅದ್ಭುತ ಯಶಸ್ಸು ಇಂದಿನ ಜನತೆ ಪರಿಸರ ಸಂರಕ್ಷಣೆಗೆ ಸಂಪೂರ್ಣವಾಗಿ ಬದ್ಧರಾಗಿದ್ದಾರೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಪ್ರಧಾನಮಂತ್ರಿಯವರು ಹೇಳಿದರು.

ವಿಶ್ವ ಪರಿಸರ ದಿನದ ಅಂಗವಾಗಿ ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನದಡಿ ಸೂರತ್‌ನಲ್ಲಿ ಗಿಡ ನೆಟ್ಟ ಪ್ರಧಾನಮಂತ್ರಿ

June 05th, 10:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಶ್ವ ಪರಿಸರ ದಿನದ ಅಂಗವಾಗಿ ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನದಡಿ ಸೂರತ್‌ನಲ್ಲಿ ಒಂದು ಗಿಡವನ್ನು ನೆಟ್ಟರು.

ವಿಶ್ವ ಪರಿಸರ ದಿನದಂದು ಎಲ್ಲರಿಗೂ ಶುಭ ಕೋರಿದ ಪ್ರಧಾನಮಂತ್ರಿ

June 05th, 09:53 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಶ್ವ ಪರಿಸರ ದಿನದಂದು ಎಲ್ಲರಿಗೂ ತಮ್ಮ ಶುಭಾಶಯಗಳನ್ನು ತಿಳಿಸಿದ್ದು, ಪರಿಸರ ಸಂರಕ್ಷಣೆಯ ಬಗ್ಗೆ ಉತ್ಸುಕರಾಗಿರುವ ಎಲ್ಲರನ್ನೂ ಶ್ಲಾಘಿಸಿದ್ದಾರೆ.

ಮನ್ ಕಿ ಬಾತ್‌ನಲ್ಲಿ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ನಿವಾರಿಸಲು 140 ಕೋಟಿ ಭಾರತೀಯರ ಒಗ್ಗಟ್ಟಿನಲ್ಲಿ ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ

March 29th, 11:30 am

ಈ ತಿಂಗಳ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ, ಪ್ರಧಾನಿ ಮೋದಿ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದರು ಮತ್ತು ಬಿಕ್ಕಟ್ಟನ್ನು ನಿವಾರಿಸಲು ಒಗ್ಗಟ್ಟಾಗಿ ಉಳಿಯುವ ಅಗತ್ಯವನ್ನು ಒತ್ತಿ ಹೇಳಿದರು. ನಾಗರಿಕರು ವದಂತಿಗಳಿಂದ ದಾರಿತಪ್ಪಿಸಬೇಡಿ ಮತ್ತು ಸರ್ಕಾರ ನೀಡುವ ಮಾಹಿತಿಯನ್ನು ಮಾತ್ರ ಅವಲಂಬಿಸಬೇಕೆಂದು ಅವರು ಮನವಿ ಮಾಡಿದರು. ಜ್ಞಾನ ಭಾರತಂ ಸಮೀಕ್ಷೆ, ಕ್ರೀಡೆ ಮತ್ತು ಫಿಟ್‌ನೆಸ್, ನೀರಿನ ಸಂರಕ್ಷಣೆ, ಮೀನು ಸಾಕಣೆ ಮತ್ತು ಸೌರಶಕ್ತಿಯಂತಹ ಪ್ರಮುಖ ವಿಷಯಗಳ ಮೇಲೂ ಪ್ರಧಾನಿ ಮಾತನಾಡಿದರು.

ಹವಾಮಾನ ಬದಲಾವಣೆ ಕುರಿತ ವಿಶ್ವಸಂಸ್ಥೆಯ ಚೌಕಟ್ಟಿನ ಸಮಾವೇಶಕ್ಕೆ (ಯು ಎನ್‌ ಎಫ್‌ ಸಿ ಸಿ ಸಿ) ಸಲ್ಲಿಸಲಿರುವ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಗೆ (2031-2035) ಕೇಂದ್ರ ಸಂಪುಟದ ಅನುಮೋದನೆ

March 25th, 05:35 pm

ಭಾರತದ ಕ್ರಮಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆಯಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು 2031 ರಿಂದ 2035ರ ಅವಧಿಯ ಭಾರತದ ರಾಷ್ಟ್ರೀಯ ನಿರ್ಧರಿತ ಕೊಡುಗೆಯನ್ನು (ಎನ್‌ ಡಿ ಸಿ) ಅನುಮೋದಿಸಿದೆ. ಇದು ಯು ಎನ್‌ ಎಫ್‌ ಸಿ ಸಿ ಸಿ ಮತ್ತು ಪ್ಯಾರಿಸ್ ಒಪ್ಪಂದದ ಅಡಿಯಲ್ಲಿ ದೇಶದ ಮಹತ್ವಾಕಾಂಕ್ಷೆಯನ್ನು ಹೆಚ್ಚಿಸುವುದಲ್ಲದೆ, ಸುಸ್ಥಿರ ಅಭಿವೃದ್ಧಿ ಮತ್ತು ಹವಾಮಾನ ನ್ಯಾಯದ ಬಗೆಗಿನ ತನ್ನ ಬದ್ಧತೆಯನ್ನು ಪುನರುಚ್ಚರಿಸುತ್ತದೆ.

ಪ್ರಧಾನಮಂತ್ರಿ ಮೋದಿ ಅವರಿಂದ ಇಸ್ರೇಲ್ ಅಧ್ಯಕ್ಷರ ಭೇಟಿ

February 26th, 09:00 pm

ಪ್ರಧಾನಮಂತ್ರಿಗಳು 2017 ರಲ್ಲಿನ ತಮ್ಮ ಇಸ್ರೇಲ್ ಭೇಟಿಯ ಸಮಯದಲ್ಲಿ ಮತ್ತು 2023ರಲ್ಲಿ ದುಬೈನಲ್ಲಿ ಅಧ್ಯಕ್ಷ ಹರ್ಜೋಗ್ ಅವರೊಂದಿಗಿನ ತಮ್ಮ ಹಿಂದಿನ ಭೇಟಿಯನ್ನು ಆತ್ಮೀಯವಾಗಿ ನೆನಪು ಮಾಡಿಕೊಂಡರು. ಭಾರತ-ಇಸ್ರೇಲ್ ಬಾಂಧವ್ಯವನ್ನು ಶಾಂತಿ, ನಾವೀನ್ಯತೆ ಮತ್ತು ಸಮೃದ್ಧಿಗಾಗಿ ವಿಶೇಷ ಕಾರ್ಯತಂತ್ರದ ಪಾಲುದಾರಿಕೆ ಯ ಮಟ್ಟಕ್ಕೆ ಹೆಚ್ಚಿಸಿರುವುದು ದ್ವಿಪಕ್ಷೀಯ ಸಂಬಂಧಗಳಲ್ಲಿ ಹೊಸ ಆರಂಭವನ್ನು ಸೂಚಿಸುತ್ತದೆ ಮತ್ತು ಇದು ಎರಡೂ ದೇಶಗಳ ನಡುವಿನ ಆಳವಾದ ನಂಬಿಕೆ, ಹಂಚಿತ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ವಿಶೇಷ ಮೈತ್ರಿಯನ್ನು ಪ್ರತಿಬಿಂಬಿಸುತ್ತದೆ ಎಂದು ಇಬ್ಬರೂ ನಾಯಕರು ಹೇಳಿದ್ದಾರೆ. ಭಯೋತ್ಪಾದನೆ ನಿಗ್ರಹ ಸೇರಿದಂತೆ ವ್ಯಾಪಾರ ಮತ್ತು ತಂತ್ರಜ್ಞಾನ, ನಾವೀನ್ಯತೆ ಮತ್ತು ಉದ್ಯಮ, ರಕ್ಷಣೆ ಮತ್ತು ಭದ್ರತೆ ವಲಯಗಳಲ್ಲಿನ ಪ್ರಸ್ತುತದ ಸಹಕಾರದ ಬಗ್ಗೆ ಇಬ್ಬರೂ ನಾಯಕರು ತೃಪ್ತಿ ವ್ಯಕ್ತಪಡಿಸಿದರು.

ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 04th, 01:00 pm

ಉತ್ತರ ಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶದ ಸಚಿವರಾದ ಸಹೋದರ ರವೀಂದ್ರ ಜೈಸ್ವಾಲ್ ಜಿ, ದಯಾಶಂಕರ್ ಜಿ, ಗಿರೀಶ್ ಯಾದವ್ ಜಿ, ಬನಾರಸ್ ಮೇಯರ್ ಅಶೋಕ್ ತಿವಾರಿ ಜಿ, ಇತರೆ ಜನಪ್ರತಿನಿಧಿಗಳೆ, ವಾಲಿಬಾಲ್ ಸಂಘಟನೆಯ ಎಲ್ಲಾ ಪದಾಧಿಕಾರಿಗಳೆ, ದೇಶಾದ್ಯಂತ ಬಂದಿರುವ ಆಟಗಾರರೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆಲ್ಲರಿಗೂ ನಮಸ್ಕಾರ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ʻ72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿʼಯನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಿದರು

January 04th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ವಾರಣಾಸಿಯ ಸಂಸತ್ ಸದಸ್ಯನಾಗಿ, ಎಲ್ಲಾ ಆಟಗಾರರನ್ನು ಸ್ವಾಗತಿಸಲು ಮತ್ತು ಅಭಿನಂದಿಸಲು ಸಂತಸವಾಗುತ್ತಿದೆ ಎಂದು ಹೇಳಿದರು. ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಇಂದಿನಿಂದ ವಾರಣಾಸಿಯಲ್ಲಿ ಪ್ರಾರಂಭವಾಗುತ್ತಿದೆ. ಆಟಗಾರರು ಅಪಾರ ಕಠಿಣ ಪರಿಶ್ರಮದ ಬಳಿಕ ಈ ರಾಷ್ಟ್ರೀಯ ಪಂದ್ಯಾವಳಿಯನ್ನು ತಲುಪಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ವಾರಣಾಸಿಯ ಮೈದಾನದಲ್ಲಿ ಅವರ ಪ್ರಯತ್ನಗಳನ್ನು ಪರೀಕ್ಷಿಗೆ ಒಡ್ಡಲಾಗುವುದು ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ದೇಶದ 28 ರಾಜ್ಯಗಳ ತಂಡಗಳು ಒಟ್ಟುಗೂಡಿ ʻಏಕ ಭಾರತ, ಶ್ರೇಷ್ಠ ಭಾರತʼದ ಸುಂದರ ಚಿತ್ರಣವನ್ನು ಪ್ರಸ್ತುತಪಡಿಸಿವೆ ಎಂದು ಅವರು ಹೇಳಿದರು. ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ಆಟಗಾರರಿಗೆ ಪ್ರಧಾನಮಂತ್ರಿಯವರು ತಮ್ಮ ಶುಭಾಶಯಗಳನ್ನು ತಿಳಿಸಿದರು.

ಇಥಿಯೋಪಿಯಾ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

December 17th, 12:25 pm

ಪುರಾತನ ಜ್ಞಾನ ಮತ್ತು ಆಧುನಿಕ ಆಕಾಂಕ್ಷೆಗಳನ್ನು ಹೊಂದಿರುವ ರಾಷ್ಟ್ರದ ಹೃದಯಭಾಗದಲ್ಲಿರುವ ಈ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಉಪಸ್ಥಿತರಿರುವುದು ನನಗೆ ಗೌರವದ ಸಂಗತಿಯಾಗಿದೆ. ನಿಮ್ಮ ಸಂಸತ್ತು, ನಿಮ್ಮ ಜನತೆ ಮತ್ತು ನಿಮ್ಮ ಪ್ರಜಾಪ್ರಭುತ್ವದ ಪಯಣದ ಬಗ್ಗೆ ಅಪಾರ ಗೌರವವನ್ನಿಟ್ಟುಕೊಂಡು ನಾನು ಇಲ್ಲಿಗೆ ಬಂದಿದ್ದೇನೆ. ಭಾರತದ 140 ಕೋಟಿ ಜನರ ಪರವಾಗಿ, ನಾನು ಸ್ನೇಹ, ಸದ್ಭಾವನೆ ಮತ್ತು ಸಹೋದರತ್ವದ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ.

ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 17th, 12:12 pm

ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. - ರೈತರು, ಉದ್ಯಮಿಗಳು, ಹೆಮ್ಮೆಯ ಮಹಿಳೆಯರು ಮತ್ತು ಯುವಜನರು - ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಥಿಯೋಪಿಯಾದ ಗ್ರೇಟ್ ಹಾನರ್ ನಿಶಾನ್ ಎಂಬ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಅವರು ಇಥಿಯೋಪಿಯಾದ ಜನರು ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಸಂಬಂಧದ ಮಹತ್ವವನ್ನು ಪರಿಗಣಿಸಿ, ಭೇಟಿಯ ಸಮಯದಲ್ಲಿ ಎರಡೂ ದೇಶಗಳ ನಡುವಿನ ಹಳೆಯ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಉನ್ನತೀಕರಿಸಲಾಗಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು ಇದಕ್ಕೆ ತಮ್ಮ ಸಂತೃಪ್ತಿಯನ್ನು ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಟೈಮ್ಸ್ ಲೀಡರ್‌ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

December 06th, 08:14 pm

ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್‌ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

December 06th, 08:13 pm

ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 03:35 pm

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೇ ಮಹಾಂತರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಅಶೋಕ್ ಗಜಪತಿ ರಾಜು ಜಿ, ಜನಪ್ರಿಯ ಮುಖ್ಯಮಂತ್ರಿ ಮತ್ತು ಸಹೋದರ ಪ್ರಮೋದ್ ಸಾವಂತ್ ಜಿ, ಮಠ ಸಮಿತಿಯ ಅಧ್ಯಕ್ಷ ಶ್ರೀ ಶ್ರೀನಿವಾಸ ಡೆಂಪೊ ಜಿ, ಉಪಾಧ್ಯಕ್ಷರಾದ ಶ್ರೀ ಆರ್.ಆರ್. ಕಾಮತ್ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಶ್ರೀಪಾದ ನಾಯಕ್ ಜಿ ಮತ್ತು ದಿಗಂಬರ್ ಕಾಮತ್ ಜಿ ಮತ್ತು ಇಲ್ಲಿರುವ ಇತರೆ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ,

ಗೋವಾದಲ್ಲಿ ನಡೆದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 28th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದಲ್ಲಿ ನಡೆದ 'ಶ್ರೀ ಸಂಸ್ಥಾನ ಗೋಕರ್ಣ ಪರ್ತಗಳಿ ಜೀವೋತ್ತಮ ಮಠ'ದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಈ ಪವಿತ್ರ ಸಂದರ್ಭದಲ್ಲಿ ತಮ್ಮ ಮನಸ್ಸು ಅತೀವ ಶಾಂತಿಯಿಂದ ತುಂಬಿದೆ ಎಂದು ಪ್ರಧಾನಮಂತ್ರಿ ಅವರು ಬಣ್ಣಿಸಿದರು. ಸಂತರ ಸಾನ್ನಿಧ್ಯದಲ್ಲಿ ಇರುವುದೇ ಒಂದು ಆಧ್ಯಾತ್ಮಿಕ ಅನುಭವ ಎಂದು ಅವರು ಅಭಿಪ್ರಾಯಪಟ್ಟರು. ಇಲ್ಲಿ ನೆರೆದಿರುವ ಅಪಾರ ಸಂಖ್ಯೆಯ ಭಕ್ತರು, ಈ ಮಠದ ಶತಮಾನಗಳಷ್ಟು ಹಳೆಯದಾದ ಚೈತನ್ಯವನ್ನು ಇನ್ನಷ್ಟು ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದ ಶ್ರೀ ಮೋದಿ, ಇಂದು ಈ ಸಮಾರಂಭದಲ್ಲಿ ಜನರ ನಡುವೆ ಉಪಸ್ಥಿತರಿರುವುದಕ್ಕೆ ತಾವು ಅತ್ಯಂತ ಭಾಗ್ಯಶಾಲಿ ಎಂದು ಭಾವಿಸುವುದಾಗಿ ತಿಳಿಸಿದರು. ಇಲ್ಲಿಗೆ ಬರುವ ಮುನ್ನ ರಾಮ ಮಂದಿರ ಮತ್ತು ವೀರ ವಿಠಲ ಮಂದಿರಕ್ಕೆ ಭೇಟಿ ನೀಡುವ ಸೌಭಾಗ್ಯ ತಮಗೆ ದೊರೆಯಿತು ಎಂದು ಅವರು ಸ್ಮರಿಸಿದರು. ಅಲ್ಲಿನ ಶಾಂತಿಯುತ ವಾತಾವರಣವು ಈ ಸಮಾರಂಭದ ಆಧ್ಯಾತ್ಮಿಕತೆಯನ್ನು ಇನ್ನಷ್ಟು ಗಾಢವಾಗಿಸಿದೆ ಎಂದು ಅವರು ಹೇಳಿದರು.

ಕರ್ನಾಟಕದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 11:45 am

ನಾನು ಮಾತು ಆರಂಭಿಸುವ ಮೊದಲು, ಕೆಲವು ಮಕ್ಕಳು ತಮ್ಮ ಚಿತ್ರಕಲೆಗಳನ್ನು ಇಲ್ಲಿಗೆ ತಂದಿದ್ದಾರೆ. ದಯವಿಟ್ಟು ಎಸ್‌ಪಿಜಿ ಮತ್ತು ಸ್ಥಳೀಯ ಪೊಲೀಸರು ಅವುಗಳನ್ನು ಸಂಗ್ರಹಿಸಿ. ನೀವು ನಿಮ್ಮ ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ನಾನು ಖಂಡಿತವಾಗಿಯೂ ನಿಮಗೆ ಧನ್ಯವಾದ ಪತ್ರವನ್ನು ಕಳುಹಿಸುತ್ತೇನೆ. ಯಾರಾದರೂ ಏನನ್ನಾದರೂ ನನಗೆ ತಂದಿದ್ದರೆ, ದಯವಿಟ್ಟು ಭದ್ರತಾ ಸಿಬ್ಬಂದಿಗೆ ನೀಡಿ, ಅವರು ಅದನ್ನು ಸಂಗ್ರಹಿಸುತ್ತಾರೆ, ನೀವು ಆರಾಮವಾಗಿ ಕುಳಿತು ವಿಶ್ರಾಂತಿ ಪಡೆಯಿರಿ. ಈ ಮಕ್ಕಳು ತುಂಬಾ ಕಷ್ಟಪಟ್ಟು ಕೆಲಸ ಮಾಡಿರುತ್ತಾರೆ, ಹಾಗಾಗಿ, ಅವರಿಗೆ ಅನ್ಯಾಯವಾಗಬಾರದು. ಹಾಗೆ ಮಾಡಿದರೆ, ಅದು ನನಗೆ ನೋವುಂಟು ಮಾಡುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 28th, 11:30 am

ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠದಲ್ಲಿ ಇಂದು ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಭಗವಾನ್ ಶ್ರೀ ಕೃಷ್ಣನ ದಿವ್ಯ ದರ್ಶನದ ತೃಪ್ತಿ, ಶ್ರೀಮದ್ ಭಗವದ್ಗೀತೆಯ ಮಂತ್ರಗಳ ಆಧ್ಯಾತ್ಮಿಕ ಅನುಭವ ಮತ್ತು ಹಲವಾರು ಪೂಜ್ಯ ಸಂತರು ಮತ್ತು ಗುರುಗಳ ಉಪಸ್ಥಿತಿಯು ತಮಗೆ ದೊರೆತ ಪರಮ ಭಾಗ್ಯ. ಇದು ಅಸಂಖ್ಯಾತ ಆಶೀರ್ವಾದಗಳನ್ನು ಪಡೆದಂತೆ ಎಂದು ಅವರು ಹೇಳಿದರು.