The resolution of a 'Viksit Bharat' will definitely be fulfilled: PM Modi in Mann Ki Baat

December 28th, 11:30 am

In the year’s final Mann Ki Baat episode, PM Modi said that in 2025, India made its mark in national security, sports, science laboratories and global platforms. He expressed hope that the country is ready to move forward in 2026 with fresh resolutions. The PM also highlighted youth-centric initiatives such as the Viksit Bharat Young Leaders Dialogue, Quiz competition, Smart India Hackathon 2025 and Fit India Movement.

Assam has picked up a new momentum of development: PM Modi at the foundation stone laying of Ammonia-Urea Fertilizer Project in Namrup

December 21st, 04:25 pm

In a major boost to the agricultural sector, PM Modi laid the foundation stone of Ammonia-Urea Fertilizer Project at Namrup in Assam. He highlighted the start of new industries, the creation of modern infrastructure, semiconductor manufacturing, new opportunities in agriculture, the advancement of tea gardens and their workers as well as the growing potential of tourism in Assam. The PM reiterated his commitment to preserving Assam’s identity and culture.

PM Modi lays foundation stone of Ammonia-Urea Fertilizer Project of Assam Valley Fertilizer and Chemical Company Limited at Namrup, Assam

December 21st, 12:00 pm

In a major boost to the agricultural sector, PM Modi laid the foundation stone of Ammonia-Urea Fertilizer Project at Namrup in Assam. He highlighted the start of new industries, the creation of modern infrastructure, semiconductor manufacturing, new opportunities in agriculture, the advancement of tea gardens and their workers as well as the growing potential of tourism in Assam. The PM reiterated his commitment to preserving Assam’s identity and culture.

ಹಿಂದೂಸ್ತಾನ್ ಟೈಮ್ಸ್ ಲೀಡರ್‌ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

December 06th, 08:14 pm

ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್‌ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

December 06th, 08:13 pm

ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ಭೂತಾನ್ ನ ಮಹಾರಾಜ ಅವರ ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

November 11th, 12:00 pm

ನಮ್ಮ ಸಂಸ್ಥೆಗಳು ಈ ಪಿತೂರಿಯ ಆಳವನ್ನು ಕಂಡುಕೊಳ್ಳುತ್ತವೆ. ಇದರ ಹಿಂದಿನ ಅಪರಾಧಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸದೆ ಬಿಡಲಾಗುವುದಿಲ್ಲ.

ಭೂತಾನ್ ನ ಘನತೆವೆತ್ತ ನಾಲ್ಕನೇ ದೊರೆಯವರ 70ನೇ ಜನ್ಮ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 11th, 11:39 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭೂತಾನ್ ನ ಥಿಂಪು ನಗರದಲ್ಲಿರುವ ಚಾಂಗ್ಲಿಮೆಥಾಂಗ್ ಸಂಭ್ರಮಾಚರಣೆ ಮೈದಾನದಲ್ಲಿ ನಡೆದ, ಭೂತಾನ್ನ ಘನತೆವೆತ್ತ ನಾಲ್ಕನೇ ದೊರೆಯವರ 70ನೇ ಜನ್ಮ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭೂತಾನ್ನ ದೊರೆ, ಘನತೆವೆತ್ತ ಜಿಗ್ಮೆ ಖೇಸರ್ ನಾಮ್ಗ್ಯೆಲ್ ವಾಂಗ್ ಚುಕ್ ಅವರಿಗೆ ಹಾಗೂ ನಾಲ್ಕನೇ ದೊರೆ, ಘನತೆವೆತ್ತ ಜಿಗ್ಮೆ ಸಿಂಗ್ಯೆ ವಾಂ ಗ್ಚುಕ್ ಅವರಿಗೆ ಹಾರ್ದಿಕ ಶುಭಾಶಯಗಳನ್ನು ಸಲ್ಲಿಸಿದರು. ಅಲ್ಲದೆ, ರಾಜಮನೆತನದ ಗೌರವಾನ್ವಿತ ಸದಸ್ಯರು, ಭೂತಾನ್ ನ ಪ್ರಧಾನ ಮಂತ್ರಿಗಳಾದ ಘನತೆವೆತ್ತ ಶ್ರೀ ಶೆರಿಂಗ್ ತೊಬ್ಗೆ ಅವರು ಹಾಗೂ ಅಲ್ಲಿ ಉಪಸ್ಥಿತರಿದ್ದ ಇತರ ಗಣ್ಯಾತಿಗಣ್ಯರಿಗೆ ಪ್ರಧಾನಮಂತ್ರಿಗಳು ಗೌರವಪೂರ್ವಕ ವಂದನೆಗಳನ್ನು ಸಲ್ಲಿಸಿದರು.

ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜಗಾರ್ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸಿಂಗ್ ಸಂವಾದ

September 26th, 03:00 pm

ಈಗ, ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯ(ಮುಖ್ಯಮಂತ್ರಿ ಮಹಿಳಾ ಉದ್ಯೋಗ ಯೋಜನೆ) ಆಯ್ದ ಫಲಾನುಭವಿಗಳು ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಾರೆ. ಮೊದಲು, ಪಶ್ಚಿಮ ಚಂಪಾರಣ್ ಜಿಲ್ಲೆಯ ರಂಜಿತಾ ಕಾಜಿ ದೀದಿ ಅವರಿಗೆ ತಮ್ಮ ಅನುಭವ ಹಂಚಿಕೊಳ್ಳುವಂತೆ ನಾನು ಮನವಿ ಮಾಡುತ್ತೇನೆ.

ಬಿಹಾರದ ಮುಖ್ಯಮಂತ್ರಿ ಮಹಿಳಾ ರೋಜ್‌ಗಾರ್ ಯೋಜನೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

September 26th, 02:49 pm

ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬುಡಕಟ್ಟು ಮಹಿಳಾ ಫಲಾನುಭವಿ ಶ್ರೀಮತಿ ರಂಜೀತಾ ಕಾಜಿ ಅವರು ತಮ್ಮ ಪ್ರದೇಶದಲ್ಲಿ ತಂದ ಪರಿವರ್ತನಾತ್ಮಕ ಬದಲಾವಣೆಗಳಿಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು. ಜೀವಿಕಾ ಸ್ವಸಹಾಯ ಗುಂಪಿನೊಂದಿಗೆ ಸಂಬಂಧ ಹೊಂದಿದ್ದ ಅವರು, ಒಂದು ಕಾಲದಲ್ಲಿ ಮೂಲಭೂತ ಮೂಲಸೌಕರ್ಯಗಳಿಂದ ವಂಚಿತವಾಗಿದ್ದ ತಮ್ಮ ಅರಣ್ಯ ಪ್ರದೇಶವು ಈಗ ರಸ್ತೆಗಳು, ವಿದ್ಯುತ್, ನೀರು, ನೈರ್ಮಲ್ಯ ಮತ್ತು ಶಿಕ್ಷಣದ ಪ್ರವೇಶವನ್ನು ಹೊಂದಿದೆ ಎಂದು ಎತ್ತಿ ತೋರಿಸಿದರು. ಸರ್ಕಾರಿ ಉದ್ಯೋಗಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮಹಿಳಾ ಪ್ರಾತಿನಿಧ್ಯವನ್ನು ಹೆಚ್ಚಿಸಿರುವ ಮೀಸಲಾತಿ ನಿಬಂಧನೆಗಳು ಸೇರಿದಂತೆ ಮಹಿಳೆಯರ ಮೇಲೆ ಗಮನ ಕೇಂದ್ರೀಕರಿಸಿದ ಉಪಕ್ರಮಗಳಿಗಾಗಿ ಅವರು ಮುಖ್ಯಮಂತ್ರಿಯವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಹುಡುಗಿಯರು ಶಾಲಾ ಸಮವಸ್ತ್ರದಲ್ಲಿ ಸೈಕಲ್ ಸವಾರಿ ಮಾಡುವಾಗ ಅನುಭವಿಸುವ ಹೆಮ್ಮೆಯತ್ತ ಅವರು ಗಮನ ಸೆಳೆದರು, ಸೈಕಲ್ ಮತ್ತು ಸಮವಸ್ತ್ರ ಯೋಜನೆಗಳನ್ನು ಶ್ಲಾಘಿಸಿದರು.

ರಾಜಸ್ಥಾನದ ಬನ್ಸ್‌ವಾರಾದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 25th, 02:32 pm

ಮಾತೆ ತ್ರಿಪುರ ಸುಂದರಿ ಕೀ ಜೈ, ಬೆನೇಶ್ವರ್ ಧಾಮ್ ಕಿ ಜೈ, ಮಂಗರ್ ಧಾಮ್ ಕಿ ಜೈ, ನಿಮ್ಮೆಲ್ಲರಿಗೂ ಜೈ ಗುರು! ರಾಮ್-ರಾಮ್! ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಹರಿಭಾವು ಬಗಡೆ ಜಿ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭಜನಲಾಲ್ ಶರ್ಮಾ ಜಿ, ಮಾಜಿ ಮುಖ್ಯಮಂತ್ರಿ ಸಹೋದರಿ ವಸುಂಧರಾ ರಾಜೇ ಜಿ, ಸಚಿವ ಸಂಪುಟದ ನನ್ನ ಸಹೋದ್ಯೋಗಿ ಪ್ರಹ್ಲಾದ್ ಜೋಶಿ ಜಿ, ಗಜೇಂದ್ರ ಸಿಂಗ್ ಶೇಖಾವತ್ ಜಿ ಮತ್ತು ಜೋಧ್‌ಪುರದಿಂದ ನಮ್ಮೊಂದಿಗೆ ಸೇರ್ಪಡೆಯಾಗಿರುವ ಅಶ್ವಿನಿ ವೈಷ್ಣವ್ ಜಿ, ಉಪಮುಖ್ಯಮಂತ್ರಿ ಶ್ರೀ ಅರ್ಜುನ್ ರಾಮ್ ಮೇಘವಾಲ್ ಜಿ ಮತ್ತು ದಿಯಾ ಕುಮಾರಿ ಜಿ, ಬಿಜೆಪಿ ರಾಜ್ಯಾಧ್ಯಕ್ಷ ಶ್ರೀ ಮದನ್ ರಾಥೋಡ್ ಜಿ, ರಾಜಸ್ಥಾನ ಸರ್ಕಾರದ ಸಚಿವರೆ, ಇಲ್ಲಿ ಉಪಸ್ಥಿತರಿರುವ ಎಲ್ಲಾ ಗಣ್ಯರೆ, ಸಹೋದರ ಸಹೋದರಿಯರೆ,

ರಾಜಸ್ಥಾನದ ಬನ್ಸ್ವಾರಾದಲ್ಲಿ 1,22,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

September 25th, 02:30 pm

ರಾಜಸ್ಥಾನದ ಬನ್ಸ್ವಾರಾದಲ್ಲಿ 1,22,100 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೆರವೇರಿಸಿದರು. ನವರಾತ್ರಿಯ ನಾಲ್ಕನೇ ದಿನದಂದು, ಬನ್ಸ್ವಾರಾದಲ್ಲಿರುವ ಮಾ ತ್ರಿಪುರ ಸುಂದರಿಯ ಪವಿತ್ರ ಭೂಮಿಗೆ ಭೇಟಿ ನೀಡುವುದು ಒಂದು ಸೌಭಾಗ್ಯ ಎಂದು ಪ್ರಧಾನಮಂತ್ರಿ ಸಂತಸ ವ್ಯಕ್ತಪಡಿಸಿದರು. ಕಾಂತಲ್ ಮತ್ತು ವಾಗಡ್‌ನ ಗಂಗೆ ಎಂದು ಪೂಜಿಸಲ್ಪಡುವ ಮಾ ಮಾಹಿಯನ್ನು ವೀಕ್ಷಿಸುವ ಅವಕಾಶವೂ ತಮಗೆ ಸಿಕ್ಕಿದೆ ಎಂದು ಅವರು ಹೇಳಿದರು. ಮಾಹಿಯ ನೀರು ಭಾರತದ ಬುಡಕಟ್ಟು ಸಮುದಾಯಗಳ ಸ್ಥಿತಿಸ್ಥಾಪಕತ್ವ ಮತ್ತು ಹೋರಾಟವನ್ನು ಸಂಕೇತಿಸುತ್ತದೆ ಎಂದೂ ಪ್ರಧಾನಮಂತ್ರಿ ಹೇಳಿದರು. ಮಹಾಯೋಗಿ ಗೋವಿಂದ ಗುರು ಜೀ ಅವರ ಸ್ಪೂರ್ತಿದಾಯಕ ನಾಯಕತ್ವವನ್ನು ಅವರು ಉಲ್ಲೇಖಿಸಿದರು, ಅವರ ಪರಂಪರೆ ನಿರಂತರವಾಗಿ ಪ್ರತಿಧ್ವನಿಸುತ್ತಿದೆ, ಮಾಹಿಯ ಪವಿತ್ರ ನೀರು ಆ ಮಹಾನ್ ಸಾಹಸಗಾಥೆಗೆ ಸಾಕ್ಷಿಯಾಗಿದೆ ಎಂದ ಶ್ರೀ ಮೋದಿ ಮಾ ತ್ರಿಪುರ ಸುಂದರಿ ಮತ್ತು ಮಾ ಮಾಹಿಗೆ ಗೌರವ ಸಲ್ಲಿಸಿದರು ಮತ್ತು ಭಕ್ತಿ ಹಾಗು ಶೌರ್ಯದ ಈ ಭೂಮಿಯಿಂದ ಅವರು ಮಹಾರಾಣಾ ಪ್ರತಾಪ್ ಮತ್ತು ರಾಜಾ ಬನ್ಸಿಯಾ ಭಿಲ್ ಅವರಿಗೆ ತಮ್ಮ ಗೌರವ ಸಮರ್ಪಿಸಿದರು.

ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 22nd, 11:36 am

ಅರುಣಾಚಲ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಕೆ.ಟಿ. ಪರ್ನಾಯಕ್ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಪೇಮಾ ಖಂಡು ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಕಿರಣ್ ರಿಜಿಜು, ರಾಜ್ಯ ಸರ್ಕಾರದ ಸಚಿವರು, ನನ್ನ ಸಹ ಸಂಸದರಾದ ನಬಮ್ ರೆಬಿಯಾ ಜಿ ಮತ್ತು ಟ್ಯಾಪಿರ್ ಗಾವೊ ಜಿ, ಎಲ್ಲಾ ಶಾಸಕರು, ಇತರ ಜನಪ್ರತಿನಿಧಿಗಳೆ ಮತ್ತು ಅರುಣಾಚಲ ಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಅರುಣಾಚಲಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ

September 22nd, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವಶಕ್ತ ಡೊನ್ಯಿ ಪೊಲೊಗೆ ಗೌರವ ಸಲ್ಲಿಸಿ, ಎಲ್ಲರಿಗೂ ಆಶೀರ್ವಾದ ಮಾಡಬೇಕೆಂದು ಪ್ರಾರ್ಥಿಸಿದರು.

ಮಣಿಪುರದ ಚುರಚಂದಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 13th, 12:45 pm

ಮಣಿಪುರವು ಧೈರ್ಯ ಮತ್ತು ದೃಢಸಂಕಲ್ಪದ ಭೂಮಿ. ಈ ಬೆಟ್ಟ ಗುಡ್ಡಗಳು ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿದೆ. ಅದೇ ಸಮಯದಲ್ಲಿ, ಈ ಬೆಟ್ಟಗಳು ನಿಮ್ಮೆಲ್ಲರ ನಿರಂತರ ಕಠಿಣ ಪರಿಶ್ರಮದ ಸಂಕೇತವೂ ಹೌದು. ಮಣಿಪುರದ ಜನರ ಚೈತನ್ಯಕ್ಕೆ ನಾನು ನಮಸ್ಕರಿಸುತ್ತೇನೆ. ಈ ಭಾರಿ ಮಳೆಯಲ್ಲೂ ನೀವು ಇಲ್ಲಿಗೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ, ನಿಮ್ಮ ಈ ಪ್ರೀತಿಗೆ ನಾನು ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಭಾರಿ ಮಳೆಯಿಂದಾಗಿ ನನ್ನ ಹೆಲಿಕಾಪ್ಟರ್ ಬರಲು ಸಾಧ್ಯವಾಗಲಿಲ್ಲ, ಆದ್ದರಿಂದ ನಾನು ರಸ್ತೆಯ ಮೂಲಕ ಪ್ರಯಾಣಿಸಲು ನಿರ್ಧರಿಸಿದೆ. ಇಂದು ನಾನು ರಸ್ತೆಯಲ್ಲಿ ನೋಡಿದ ದೃಶ್ಯಗಳು, ನನ್ನ ಹೆಲಿಕಾಪ್ಟರ್ ಇಂದು ಹಾರದಂತೆ ದೇವರು ಒಳ್ಳೆಯದನ್ನು ಮಾಡಿದನೆಂದು ನನ್ನ ಹೃದಯ ಹೇಳುತ್ತಿದೆ. ನಾನು ರಸ್ತೆಯ ಮೂಲಕ ಬರುವಾಗ ದಾರಿಯಲ್ಲಿ ತ್ರಿವರ್ಣ ಧ್ವಜ ಹಿಡಿದು ಚಿಕ್ಕವರಿಂದ ದೊಡ್ಡವರು ಸಹ ಎಲ್ಲರೂ ತೋರಿಸಿದ ಪ್ರೀತಿ ಮತ್ತು ವಾತ್ಸಲ್ಯವನ್ನು ನಾನು ನೋಡಿದೆ. ಈ ಕ್ಷಣವನ್ನು ನಾನು ನನ್ನ ಜೀವನದಲ್ಲಿ ಎಂದಿಗೂ ಮರೆಯಲು ಸಾಧ್ಯವಿಲ್ಲ. ಮಣಿಪುರದ ಜನರಿಗೆ ನಾನು ತಲೆ ಬಾಗುತ್ತೇನೆ.

ಮಣಿಪುರದ ಚುರಚಂದಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು

September 13th, 12:30 pm

ಮಣಿಪುರದ ಚುರಚಂದಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಮಣಿಪುರ ಧೈರ್ಯ ಮತ್ತು ದೃಢಸಂಕಲ್ಪದ ಭೂಮಿಯಾಗಿದೆ ಮತ್ತು ಮಣಿಪುರದ ಗುಡ್ಡಗಾಡುಗಳು ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿವೆ ಎಂದು ಒತ್ತಿ ಹೇಳಿದರು. ಈ ಗುಡ್ಡಗಾಡು ಜನರ ನಿರಂತರ ದಣಿವರಿಯದ ಪರಿಶ್ರಮದ ಸಂಕೇತವಾಗಿವೆ ಎಂದು ಅವರು ಹೇಳಿದರು. ಮಣಿಪುರದ ಜನರ ಉತ್ಸಾಹಕ್ಕೆ ನಮನ ಸಲ್ಲಿಸಿದ ಶ್ರೀ ಮೋದಿ, ಇಷ್ಟೊಂದು ಸಂಖ್ಯೆಯಲ್ಲಿ ಬಂದಿದ್ದಕ್ಕಾಗಿ ಜನರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಅವರ ಪ್ರೀತಿಗೆ ಧನ್ಯವಾದ ತಿಳಿಸಿದರು.

ಮಿಜೋರಾಂನಲ್ಲಿ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

September 13th, 10:30 am

ಮಿಜೋರಾಂ ರಾಜ್ಯಪಾಲ ಶ್ರೀ ವಿ ಕೆ ಸಿಂಗ್ ಜಿ, ಮುಖ್ಯಮಂತ್ರಿ ಶ್ರೀ ಲಾಲ್ದುಹೋಮ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜಿ, ಮಿಜೋರಾಂ ಸರ್ಕಾರದ ಸಚಿವರು, ಸಂಸದರು ಮತ್ತು ಇತರ ಚುನಾಯಿತ ಪ್ರತಿನಿಧಿಗಳು, ಮಿಜೋರಾಂನ ಆತ್ಮೀಯ ಜನತೆಗೆ ನನ್ನ ನಮಸ್ಕಾರಗಳು.

ಮಿಜೋರಾಂನ ಐಜ್ವಾಲ್‌ನಲ್ಲಿ 9,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ

September 13th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಜೋರಾಂನ ಐಜ್ವಾಲ್‌ನಲ್ಲಿಂದು 9,000 ಕೋಟಿ ರೂ.ಗಿಂತ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ನೆರವೇರಿಸಿದರು. ಈ ಯೋಜನೆಗಳು ರೈಲ್ವೆ, ರಸ್ತೆ ಮಾರ್ಗಗಳು, ಇಂಧನ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿವೆ. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ನೀಲಿ ಪರ್ವತಗಳ ಸುಂದರ ಭೂಮಿಯನ್ನು ರಕ್ಷಿಸುತ್ತಿರುವ ಪರಮಾತ್ಮ ಪಥಿಯಾನ್‌ಗೆ ತಲೆಬಾಗಿ ನಮಸ್ಕರಿಸುವೆ. ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದ ಪ್ರತೀಕೂಲ ಹವಾಮಾನದಿಂದಾಗಿ ಐಜ್ವಾಲ್‌ನಲ್ಲಿ ಜನರೊಂದಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯ ಹೊರತಾಗಿಯೂ, ಈ ಮಾಧ್ಯಮದ ಮೂಲಕವೂ ಜನರ ಪ್ರೀತಿ ಮತ್ತು ವಾತ್ಸಲ್ಯವನ್ನು ಅನುಭವಿಸುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಹೇಳಿದರು.

ಆಗಸ್ಟ್ 6 ರಂದು ಕರ್ತವ್ಯ ಭವನ ಉದ್ಘಾಟಿಸಲಿರುವ ಪ್ರಧಾನಮಂತ್ರಿ

August 04th, 05:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 6 ರಂದು ಮಧ್ಯಾಹ್ನ 12:15ರ ಸುಮಾರಿಗೆ ದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನಕ್ಕೆ ಭೇಟಿ ನೀಡಿ ಅದನ್ನು ಉದ್ಘಾಟಿಸಲಿದ್ದಾರೆ. ನಂತರ, ಪ್ರಧಾನ ಮಂತ್ರಿಗಳು ಸಂಜೆ 6:30ರ ಸುಮಾರಿಗೆ ಕರ್ತವ್ಯ ಪಥದ ಕುರಿತು ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಸ್ಥಾಪಿಸಲು ಎನ್ ಟಿ ಪಿ ಸಿ ರಿನ್ಯೂಯಬಲ್ ಎನರ್ಜಿ ಲಿಮಿಟೆಡ್ ಮತ್ತು ಅದರ ಇತರ ಜಂಟಿ ಉದ್ಯಮಗಳು/ ಅಂಗಸಂಸ್ಥೆಗಳಲ್ಲಿ ಹೂಡಿಕೆ ಮಾಡಲು ಎನ್ ಟಿ ಪಿ ಸಿ ಲಿಮಿಟೆಡ್ ಗೆ ಹೆಚ್ಚಿನ ಅಧಿಕಾರ ನೀಡಲು ಸಂಪುಟ ಅನುಮೋದನೆ ನೀಡಿದೆ

July 16th, 02:46 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು, ಮಹಾರತ್ನ ಸಿ ಪಿ ಎಸ್ ಇ ಗಳಿಗೆ ಅಧಿಕಾರ ನಿಯೋಜನೆಗಾಗಿ ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳನ್ನು ಮೀರಿ ಎನ್ ಟಿ ಪಿ ಸಿ ಲಿಮಿಟೆಡ್ ಗೆ ಹೆಚ್ಚಿನ ಅಧಿಕಾರ ನೀಡಲು ಅನುಮೋದನೆ ನೀಡಿದೆ. ಇದು ಅಂಗಸಂಸ್ಥೆಯಾದ ಎನ್ ಟಿ ಪಿ ಸಿ ಗ್ರೀನ್ ಎನರ್ಜಿ ಲಿಮಿಟೆಡ್ (ಎನ್ ಜಿ ಇ ಎಲ್) ನಲ್ಲಿ ಹೂಡಿಕೆ ಮಾಡಲು ಅನುವು ಮಾಡಿಕೊಡುತ್ತದೆ ಮತ್ತು ತರುವಾಯ, ಎನ್ ಟಿ ಪಿ ಸಿ ರಿನ್ಯೂಯಬಲ್ ಎನರ್ಜಿ ಲಿಮಿಟೆಡ್ (ಎನ್ ಆರ್ ಇ ಎಲ್) ಮತ್ತು ಅದರ ಇತರ ಜಂಟಿ ಉದ್ಯಮಗಳು/ಅಂಗಸಂಸ್ಥೆಗಳಲ್ಲಿ ಹೂಡಿಕೆ ಮಾಡಲು ಅನುವು ಮಾಡಿಕೊಡುತ್ತದೆ. ಈ ಹಿಂದೆ ಅನುಮೋದಿಸಲಾದ ರೂ. 7,500 ಕೋಟಿ ಮಿತಿಯನ್ನು ಮೀರಿ ನವೀಕರಿಸಬಹುದಾದ ಇಂಧನ (ಆರ್ ಇ) ಸಾಮರ್ಥ್ಯ ಸೇರ್ಪಡೆಗಾಗಿ ಎನ್ ಜಿ ಇ ಎಲ್ ರೂ. 20,000 ಕೋಟಿ ವರೆಗೆ ಹೂಡಿಕೆ ಮಾಡಲು ಸಾಧ್ಯವಾಗುತ್ತದೆ, ಇದು 2032 ರ ವೇಳೆಗೆ 60 ಗಿಗಾವ್ಯಾಟ್ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಸಾಧಿಸಲು ಕಾರಣವಾಗುತ್ತದೆ.

2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ (ಎಂ ಎಸ್‌ ಪಿ) ಸಂಪುಟದ ಅನುಮೋದನೆ

May 28th, 03:49 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2025-26ನೇ ಸಾಲಿನ ಮಾರುಕಟ್ಟೆ ಹಂಗಾಮಿಗಾಗಿ 14 ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆಗಳನ್ನು (ಎಂ ಎಸ್‌ ಪಿ) ಹೆಚ್ಚಿಸಲು ಅನುಮೋದನೆ ನೀಡಿದೆ.