ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ವಿಸಿ ಮೂಲಕ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 27th, 11:01 am

ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜಿ. ಕಿಶನ್ ರೆಡ್ಡಿ ಜೀ; ಆಂಧ್ರಪ್ರದೇಶದ ಕೈಗಾರಿಕಾ ಸಚಿವರಾದ ಶ್ರೀ ಟಿ. ಜಿ. ಭರತ್ ಜೀ; ಇನ್ ಸ್ಪೇಸ್ ಅಧ್ಯಕ್ಷರಾದ ಶ್ರೀ ಪವನ್ ಗೋಯೆಂಕಾ ಜೀ; ಸ್ಕೈರೂಟ್ ತಂಡ; ಇತರ ಗಣ್ಯರು; ಮಹಿಳೆಯರೇ ಮತ್ತು ಮಹನೀಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೈದರಾಬಾದ್‌ನ ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನೆ

November 27th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತೆಲಂಗಾಣದ ಹೈದರಾಬಾದ್‌ನಲ್ಲಿರುವ ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಂದು ದೇಶವು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಭೂತಪೂರ್ವ ಅವಕಾಶವನ್ನು ಕಾಣುತ್ತಿದೆ ಎಂದು ಹೇಳಿದರು. ಮತ್ತು ಖಾಸಗಿ ವಲಯವು ಎತ್ತರಕ್ಕೆ ಹಾರಾಡುತ್ತಿರುವುದರಿಂದ ಭಾರತದ ಬಾಹ್ಯಾಕಾಶ ಪೂರಕ ವ್ಯವಸ್ಥೆಯು ಭಾರಿ ಏರಿಕೆಯನ್ನು ಕಂಡಿದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿದರು. ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಭಾರತದ ಹೊಸ ಚಿಂತನೆ, ನಾವೀನ್ಯತೆ ಮತ್ತು ಯುವ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಮತ್ತು ದೇಶದ ಯುವಕರ ನಾವೀನ್ಯತೆ, ಅಪಾಯ ಎದುರಿಸುವ ಸಾಮರ್ಥ್ಯ ಮತ್ತು ಉದ್ಯಮಶೀಲತೆ ಹೊಸ ಎತ್ತರವನ್ನು ತಲುಪುತ್ತಿದೆ ಎಂದು ಅವರು ಒತ್ತಿ ಹೇಳಿದರು.

ಭಾರತದಲ್ಲಿ ಬುಲೆಟ್ ರೈಲು ನಿರ್ಮಿಸುತ್ತಿರುವ ತಂಡದೊಂದಿಗೆ ಗುಜರಾತ್‌ನ ಸೂರತ್‌ನಲ್ಲಿ ಪ್ರಧಾನಮಂತ್ರಿ ಸಂವಾದ

November 16th, 03:50 pm

ನಿಮಗೆ ಏನು ಅನಿಸುತ್ತಿದೆ? ವೇಗ ಸರಿಯಾಗಿದೆಯೇ? ನೀವು ನಿಗದಿಪಡಿಸಿದ ವೇಳಾಪಟ್ಟಿಯ ಪ್ರಕಾರ ಕೆಲಸ ಮಾಡುತ್ತಿದ್ದೀರಾ ಅಥವಾ ನಿಮಗೆ ಏನಾದರೂ ತೊಂದರೆಗಳು ಎದುರಾಗಿವೆಯೇ?

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಯವರು ಗುಜರಾತಿನ ಸೂರತ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿದರು; ಮುಂಬೈ-ಅಹಮದಾಬಾದ್ ಹೈಸ್ಪೀಡ್ ರೈಲು ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು

November 16th, 03:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ಗುಜರಾತಿನ ಸೂರತ್ ನಲ್ಲಿ ನಿರ್ಮಾಣ ಹಂತದಲ್ಲಿರುವ ಬುಲೆಟ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಮುಂಬೈ-ಅಹಮದಾಬಾದ್ ಹೈ-ಸ್ಪೀಡ್ ರೈಲು ಕಾರಿಡಾರ್ ನ ಪ್ರಗತಿಯನ್ನು ಪರಿಶೀಲಿಸಿದರು. ಅವರು ಭಾರತದ ಮೊದಲ ಬುಲೆಟ್ ರೈಲು ಯೋಜನೆಯ ತಂಡದೊಂದಿಗೆ ಮಾತುಕತೆ ನಡೆಸಿದರು ಹಾಗು ವೇಗ ಮತ್ತು ವೇಳಾಪಟ್ಟಿ ಗುರಿಗಳನ್ನು ಪಾಲಿಸುವುದು ಸೇರಿದಂತೆ ಯೋಜನೆಯ ಪ್ರಗತಿಯ ಬಗ್ಗೆ ವಿಚಾರಿಸಿದರು. ಯೋಜನೆಯು ಯಾವುದೇ ತೊಂದರೆಗಳಿಲ್ಲದೆ ಸರಾಗವಾಗಿ ಮುಂದುವರಿಯುತ್ತಿದೆ ಎಂದು ಸಿಬ್ಬಂದಿಯು ಅವರಿಗೆ ಭರವಸೆ ನೀಡಿದರು.

ಡೆಹ್ರಾಡೂನ್‌ ನಲ್ಲಿ ನಡೆದ ಉತ್ತರಾಖಂಡ ರಾಜ್ಯ ರಚನೆಯ ಬೆಳ್ಳಿ ಮಹೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 09th, 01:00 pm

ಉತ್ತರಾಖಂಡದ ರಾಜ್ಯಪಾಲರಾದ ಶ್ರೀ ಗುರ್ಮೀತ್ ಸಿಂಗ್ ಜಿ; ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಜಿ; ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಜಯ್ ಟಂಟಾ ಜಿ; ವಿಧಾನಸಭೆಯ ಸ್ಪೀಕರ್ ಸೋದರಿ ಶ್ರೀಮತಿ ರಿತು ಜಿ; ಉತ್ತರಾಖಂಡ ಸರ್ಕಾರದ ಸಚಿವರು; ವೇದಿಕೆಯಲ್ಲಿ ಉಪಸ್ಥಿತರಿರುವ ಮಾಜಿ ಮುಖ್ಯಮಂತ್ರಿ ಮತ್ತು ಸಂಸತ್ ಸದಸ್ಯರು; ನಮ್ಮನ್ನು ಆಶೀರ್ವದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಪೂಜ್ಯ ಸಂತರು; ಮತ್ತು ಇತರ ಎಲ್ಲಾ ಗಣ್ಯ ಅತಿಥಿಗಳು, ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೆ!

ಡೆಹ್ರಾಡೂನ್‌ ನಲ್ಲಿ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

November 09th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಡೆಹ್ರಾಡೂನ್‌ನಲ್ಲಿ 'ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ' ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ₹8140 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ದೇವಭೂಮಿ ಉತ್ತರಾಖಂಡದ ಜನತೆಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಎಲ್ಲರಿಗೂ ತಮ್ಮ ಹೃತ್ಪೂರ್ವಕ ನಮನ, ಗೌರವ ಹಾಗೂ ಸೇವೆಯನ್ನು ಸಮರ್ಪಿಸಿದರು.

ಮಹಾರಾಷ್ಟ್ರದ ಮುಂಬೈನಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 08th, 03:44 pm

ಮಹಾರಾಷ್ಟ್ರ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ ಜಿ, ಜನಪ್ರಿಯ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮದಾಸ್ ಅಠಾವಳೆ ಜಿ, ಕೆ.ಆರ್. ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಜಿ ಮತ್ತು ಅಜಿತ್ ಪವಾರ್ ಜಿ, ಇಲ್ಲಿರುವ ಸಚಿವರೆ, ಭಾರತದ ಜಪಾನ್‌ ರಾಯಭಾರಿ ಕೆಯಿಚಿ ಓನೋ ಜಿ, ಇತರೆ ಗಣ್ಯ ಅತಿಥಿಗಳೆ ಮತ್ತು ಸಹೋದರ ಸಹೋದರಿಯರೆ!

ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ; ಮುಂಬೈನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ

October 08th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿಂದು ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದರು. ಜತೆಗೆ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಮತ್ತು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಗಣ್ಯರನ್ನು ಸ್ವಾಗತಿಸಿದ ಮೋದಿ ಅವರು, ಉಪಸ್ಥಿತರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು. ಇತ್ತೀಚೆಗೆ ನಡೆದ ವಿಜಯದಶಮಿ ಮತ್ತು ಕೊಜಗರಿ ಪೂರ್ಣಿಮೆಯ ಆಚರಣೆ, ಮುಂಬರುವ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು.

ಒಡಿಶಾದ ಜಾರ್ಸುಗುಡದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 27th, 11:45 am

ಇಲ್ಲಿ ಕೆಲವು ಯುವ ಸ್ನೇಹಿತರು ಅನೇಕ ಕಲಾಕೃತಿಗಳನ್ನು ತಂದಿದ್ದಾರೆ. ಒಡಿಶಾದ ಕಲೆಯ ಮೇಲಿನ ಪ್ರೀತಿ ವಿಶ್ವಪ್ರಸಿದ್ಧವಾಗಿದೆ. ನಾನು ನಿಮ್ಮೆಲ್ಲರಿಂದ ಈ ಉಡುಗೊರೆಗಳನ್ನು ಸ್ವೀಕರಿಸುತ್ತೇನೆ, ನನ್ನ ಎಸ್‌ಪಿಜಿ ಸಹೋದ್ಯೋಗಿಗಳನ್ನು ಈ ಎಲ್ಲಾ ವಸ್ತುಗಳನ್ನು ನಿಮ್ಮಿಂದ ಸಂಗ್ರಹಿಸಲು ವಿನಂತಿಸುತ್ತೇನೆ. ನೀವು ನಿಮ್ಮ ಹೆಸರು ಮತ್ತು ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ಖಂಡಿತವಾಗಿಯೂ ನನ್ನಿಂದ ನಿಮಗೆ ಪತ್ರ ಬರುತ್ತದೆ. ಅಲ್ಲಿ ಹಿಂಭಾಗದಲ್ಲಿ, ಆ ಮಗು ಬಹಳ ಹೊತ್ತಿನಿಂದ ಏನನ್ನೋ ಕೈಯಲ್ಲಿ ಹಿಡಿದಿರುವುದನ್ನು ನಾನು ನೋಡುತ್ತಿದ್ದೇನೆ. ಅವನ ಕೈಗಳು ನೋಯುತ್ತಿರಬೇಕು. ದಯವಿಟ್ಟು ಅವನಿಗೆ ಸಹಾಯ ಮಾಡಿ ಮತ್ತು ಅದನ್ನೂ ಪಡೆಯಿರಿ. ನೀವು ನಿಮ್ಮ ಹೆಸರನ್ನು ಹಿಂಭಾಗದಲ್ಲಿ ಬರೆದಿದ್ದರೆ, ನಾನು ಖಂಡಿತವಾಗಿಯೂ ನಿಮಗೆ ಪತ್ರ ಬರೆಯುತ್ತೇನೆ. ಈ ಕಲಾಕೃತಿಗಳನ್ನು ಸಿದ್ಧಪಡಿಸಿದ್ದಕ್ಕಾಗಿ ನಿಮ್ಮ ಈ ಪ್ರೀತಿಗಾಗಿ ಎಲ್ಲಾ ಯುವಕರು, ಯುವತಿಯರು ಮತ್ತು ಪುಟ್ಟ ಮಕ್ಕಳಿಗೆ ನಾನು ಪ್ರಾಮಾಣಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

September 27th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಜಾರ್ಸುಗುಡದಲ್ಲಿ 60,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಕಾರ್ಯಕ್ರಮದಲ್ಲಿ ಹಾಜರಿದ್ದ ಎಲ್ಲಾ ಗಣ್ಯರಿಗೆ ಗೌರವಯುತ ಶುಭಾಶಯಗಳನ್ನು ಸಲ್ಲಿಸಿದರು. ಪ್ರಸ್ತುತ ನವರಾತ್ರಿ ಹಬ್ಬವನ್ನು ಆಚರಿಸಲಾಗುತ್ತಿರುವುದನ್ನು ಎತ್ತಿ ತೋರಿಸಿದ ಶ್ರೀ ಮೋದಿ, ಈ ಶುಭ ದಿನಗಳಲ್ಲಿ ಮಾ ಸಮಲೈ ಮತ್ತು ಮಾ ರಾಮಚಂಡಿಯ ಪವಿತ್ರ ಭೂಮಿಗೆ ಭೇಟಿ ನೀಡಿ ಅಲ್ಲಿ ನೆರೆದಿದ್ದ ಜನರನ್ನು ಭೇಟಿ ಮಾಡುವ ಅದೃಷ್ಟ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯ ತಾಯಂದಿರು ಮತ್ತು ಸಹೋದರಿಯರು ಇರುವುದನ್ನು ಗಮನಿಸಿದ ಪ್ರಧಾನಮಂತ್ರಿ, ಅವರ ಆಶೀರ್ವಾದವೇ ನಿಜವಾದ ಶಕ್ತಿಯ ಮೂಲ ಎಂದು ಹೇಳಿದರು, ಜನರಿಗೆ ನಮನಗಳನ್ನು ಅರ್ಪಿಸಿದರು.

ಬಿಹಾರದ ಪುರ್ನಿಯಾದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 15th, 04:30 pm

ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರಿಫ್ ಮೊಹಮ್ಮದ್ ಖಾನ್ ಜಿ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ವೇದಿಕೆಯಲ್ಲಿ ಉಪಸ್ಥಿತರಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಬಿಹಾರದ ಪೂರ್ಣಿಯಾದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸುಮಾರು ₹40,000 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆ

September 15th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ಪೂರ್ಣಿಯಾದಲ್ಲಿ ಸುಮಾರು ₹40,000 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ, ಹಲವು ಯೋಜನೆಗಳನ್ನು ಉದ್ಘಾಟಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲರಿಗೂ ಗೌರವಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಪೂರ್ಣಿಯಾವು ಮಾ ಪುರನ್ ದೇವಿ, ಭಕ್ತ ಪ್ರಹ್ಲಾದ, ಮತ್ತು ಮಹರ್ಷಿ ಮೇಹಿ ಬಾಬಾ ಅವರ ಪುಣ್ಯಭೂಮಿಯಾಗಿದೆ ಎಂದು ಅವರು ಬಣ್ಣಿಸಿದರು. ಈ ಮಣ್ಣು ಫಣೀಶ್ವರ್‌ ನಾಥ್ ರೇಣು ಮತ್ತು ಸತೀನಾಥ್ ಭಾದುರಿ ಅವರಂತಹ ಸಾಹಿತ್ಯ ದಿಗ್ಗಜರಿಗೆ ಜನ್ಮ ನೀಡಿದೆ ಎಂದು ಶ್ರೀ ಮೋದಿಯವರು ಸ್ಮರಿಸಿದರು. ಇದಲ್ಲದೆ, ಈ ಪ್ರದೇಶವು ವಿನೋಬಾ ಭಾವೆ ಅವರಂತಹ ನಿಷ್ಠಾವಂತ ಕರ್ಮಯೋಗಿಗಳ ಕರ್ಮಭೂಮಿಯಾಗಿದೆ ಎಂದು ಹೇಳಿದ ಅವರು, ಈ ಪವಿತ್ರ ಭೂಮಿಯ ಬಗ್ಗೆ ತನಗೆ ಅಗಾಧವಾದ ಗೌರವವಿದೆ ಎಂದು ಹೇಳಿದರು.

ಇಂಜಿನಿಯರ್ ಗಳ ದಿನದಂದು ಸರ್ ಎಂ. ವಿಶ್ವೇಶ್ವರಯ್ಯ ಅವರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ

September 15th, 08:44 am

ಇಂಜಿನಯರ್ ಗಳ ದಿನದ ನಿಮಿತ್ತ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ಆಧುನಿಕ ಇಂಜಿನಿಯರಿಂಗ್ ಕ್ಷೇತ್ರದ ಅಡಿಪಾಯಕ್ಕೆ ಆರಂಭಿಕ ಕೊಡುಗೆ ನೀಡಿದ ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರಿಗೆ ಹೃದಯಪೂರ್ವಕ ಗೌರವ ಸಲ್ಲಿಸಿದರು.

ಮಿಜೋರಾಂನಲ್ಲಿ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

September 13th, 10:30 am

ಮಿಜೋರಾಂ ರಾಜ್ಯಪಾಲ ಶ್ರೀ ವಿ ಕೆ ಸಿಂಗ್ ಜಿ, ಮುಖ್ಯಮಂತ್ರಿ ಶ್ರೀ ಲಾಲ್ದುಹೋಮ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜಿ, ಮಿಜೋರಾಂ ಸರ್ಕಾರದ ಸಚಿವರು, ಸಂಸದರು ಮತ್ತು ಇತರ ಚುನಾಯಿತ ಪ್ರತಿನಿಧಿಗಳು, ಮಿಜೋರಾಂನ ಆತ್ಮೀಯ ಜನತೆಗೆ ನನ್ನ ನಮಸ್ಕಾರಗಳು.

ಮಿಜೋರಾಂನ ಐಜ್ವಾಲ್‌ನಲ್ಲಿ 9,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ

September 13th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಜೋರಾಂನ ಐಜ್ವಾಲ್‌ನಲ್ಲಿಂದು 9,000 ಕೋಟಿ ರೂ.ಗಿಂತ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ನೆರವೇರಿಸಿದರು. ಈ ಯೋಜನೆಗಳು ರೈಲ್ವೆ, ರಸ್ತೆ ಮಾರ್ಗಗಳು, ಇಂಧನ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿವೆ. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ನೀಲಿ ಪರ್ವತಗಳ ಸುಂದರ ಭೂಮಿಯನ್ನು ರಕ್ಷಿಸುತ್ತಿರುವ ಪರಮಾತ್ಮ ಪಥಿಯಾನ್‌ಗೆ ತಲೆಬಾಗಿ ನಮಸ್ಕರಿಸುವೆ. ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದ ಪ್ರತೀಕೂಲ ಹವಾಮಾನದಿಂದಾಗಿ ಐಜ್ವಾಲ್‌ನಲ್ಲಿ ಜನರೊಂದಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯ ಹೊರತಾಗಿಯೂ, ಈ ಮಾಧ್ಯಮದ ಮೂಲಕವೂ ಜನರ ಪ್ರೀತಿ ಮತ್ತು ವಾತ್ಸಲ್ಯವನ್ನು ಅನುಭವಿಸುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಹೇಳಿದರು.

ನವದೆಹಲಿಯಲ್ಲಿ ಸಂಸತ್‌ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾದ ಫ್ಲ್ಯಾಟ್‌ಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

August 11th, 11:00 am

ಶ್ರೀ ಓಂ ಬಿರ್ಲಾ ಜೀ, ಮನೋಹರ್‌ ಲಾಲ್‌ ಜೀ, ಕಿರಣ್‌ ರಿಜಿಜು ಜೀ, ಮಹೇಶ್‌ ಶರ್ಮಾ ಜೀ, ಎಲ್ಲಗೌರವಾನ್ವಿತ ಸಂಸತ್‌ ಸದಸ್ಯರು, ಲೋಕಸಭೆಯ ಪ್ರಧಾನ ಕಾರ್ಯದರ್ಶಿ, ಮಹಿಳೆಯರೇ ಮತ್ತು ಮಹನೀಯರೇ!

ನವದೆಹಲಿಯಲ್ಲಿ ಸಂಸದರಿಗಾಗಿ ಹೊಸದಾಗಿ ನಿರ್ಮಿಸಲಾದ ವಸತಿ ಸಮುಚ್ಚಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು

August 11th, 10:30 am

ನವದೆಹಲಿಯ ಬಾಬಾ ಖರಕ್ ಸಿಂಗ್ ಮಾರ್ಗದಲ್ಲಿ ಸಂಸತ್ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾದ 184 ಟೈಪ್-VII ಬಹುಮಹಡಿ ವಸತಿ ಸಮುಚ್ಚಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಕರ್ತವ್ಯ ಪಥದಲ್ಲಿರುವ ಕರ್ತವ್ಯ ಭವನ ಎಂದು ಕರೆಯಲಾಗುವ ಸಾಮಾನ್ಯ ಕೇಂದ್ರ ಸಚಿವಾಲಯವನ್ನು ಇತ್ತೀಚೆಗೆ ಉದ್ಘಾಟಿಸಿದೆ ಮತ್ತು ಇಂದು ಸಂಸದರಿಗಾಗಿ ಹೊಸದಾಗಿ ನಿರ್ಮಿಸಲಾದ ವಸತಿ ಸಮುಚ್ಚಯವನ್ನು ಉದ್ಘಾಟಿಸುವ ಅವಕಾಶ ದೊರೆತಿದೆ ಎಂದು ಹೇಳಿದರು. ಭಾರತದ ನಾಲ್ಕು ಮಹಾ ನದಿಗಳಾದ ಕೃಷ್ಣಾ, ಗೋದಾವರಿ, ಕೋಸಿ ಮತ್ತು ಹೂಗ್ಲಿ ಹೆಸರುಗಳನ್ನು ಸಮುಚ್ಚಯದ ನಾಲ್ಕು ಗೋಪುರಗಳಿಗೆ ಇಡಲಾಗಿದೆ. ಲಕ್ಷಾಂತರ ಜನರಿಗೆ ಬದುಕು ನೀಡುವ ಈ ನದಿಗಳು ಈಗ ಸಾರ್ವಜನಿಕ ಪ್ರತಿನಿಧಿಗಳ ಜೀವನದಲ್ಲಿ ಹೊಸ ಸಂತೋಷದ ಅಲೆಯನ್ನು ತರುತ್ತವೆ ಎಂದು ಅವರು ಹೇಳಿದರು. ನದಿಗಳಿಗೆ ಹೆಸರಿಡುವ ಸಂಪ್ರದಾಯವು ದೇಶವನ್ನು ಏಕತೆಯ ಎಳೆಯಲ್ಲಿ ಬಂಧಿಸುತ್ತದೆ ಎಂದು ಅವರು ಹೇಳಿದರು. ಈ ಹೊಸ ಸಮುಚ್ಚಯವು ದೆಹಲಿಯಲ್ಲಿ ಸಂಸದರ ಜೀವನವನ್ನು ಇನ್ನಷ್ಟು ಸುಲಭಗೊಳಿಸುತ್ತದೆ. ದೆಹಲಿಯಲ್ಲಿ ಸಂಸದರಿಗೆ ಸರ್ಕಾರಿ ವಸತಿ ಸೌಕರ್ಯಗಳು ಈಗ ಹೆಚ್ಚಾಗಲಿವೆ ಎಂದು ಅವರು ಹೇಳಿದರು. ಪ್ರಧಾನಮಂತ್ರಿಯವರು ಎಲ್ಲಾ ಸಂಸದರನ್ನು ಅಭಿನಂದಿಸಿದರು ಮತ್ತು ವಸತಿ ಸಮುಚ್ಚಯ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್ ಗಳು ಮತ್ತು ಕಾರ್ಮಿಕರನ್ನು ಶ್ಲಾಘಿಸಿದರು. ಯೋಜನೆಯನ್ನು ಪೂರ್ಣಗೊಳಿಸುವಲ್ಲಿ ಅವರ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಅವರು ಶ್ಲಾಘಿಸಿದರು.

ಘಾನಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

July 03rd, 12:32 am

ಮೂರು ದಶಕಗಳ ಸುದೀರ್ಘ ಅಂತರದ ನಂತರ, ಭಾರತದ ಪ್ರಧಾನಮಂತ್ರಿಯೊಬ್ಬರು ಘಾನಾಗೆ ಭೇಟಿ ನೀಡುತ್ತಿದ್ದಾರೆ.

ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವಿಶ್ವ ವಾಯು ಸಾರಿಗೆ ಶೃಂಗಸಭೆಯ ಸರ್ವಸದಸ್ಯರ(ಸಮಗ್ರ) ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 02nd, 05:34 pm

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮ್ ಮೋಹನ್ ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಐಎಟಿಎ ಆಡಳಿತ ಮಂಡಳಿಯ ಅಧ್ಯಕ್ಷ ಪೀಟರ್ ಎಲ್ಬರ್ಸ್ ಜಿ, ಐಎಟಿಎ ಮಹಾನಿರ್ದೇಶಕ ವಿಲ್ಲಿ ವಾಲ್ಷ್ ಜಿ, ಇಂಡಿಗೊ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಭಾಟಿಯಾ ಜಿ, ಇತರೆ ಎಲ್ಲ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐಎಟಿಎಯ 81ನೇ ವಾರ್ಷಿಕ ಸಾಮಾನ್ಯ ಸಭೆ ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ ಪೂರ್ಣ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು

June 02nd, 05:00 pm

ವಿಶ್ವದರ್ಜೆಯ ವಾಯು ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ (ಐಎಟಿಎ) 81ನೇ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ (ವ್ಯಾಟ್ಸ್) ಪೂರ್ಣ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಅತಿಥಿಗಳನ್ನು ಸ್ವಾಗತಿಸಿದರು, ನಾಲ್ಕು ದಶಕಗಳ ನಂತರ ಭಾರತಕ್ಕೆ ಮರಳುತ್ತಿರುವ ಈ ಕಾರ್ಯಕ್ರಮದ ಮಹತ್ವವನ್ನು ಒತ್ತಿ ಹೇಳಿದರು. ಈ ಅವಧಿಯಲ್ಲಿ ಭಾರತವು ಅನುಭವಿಸಿದ ಪರಿವರ್ತನಾತ್ಮಕ ಬದಲಾವಣೆಗಳನ್ನು ಒತ್ತಿ ಹೇಳಿದ ಅವರು, ಇಂದಿನ ಭಾರತವು ಹಿಂದೆಂದಿಗಿಂತಲೂ ಹೆಚ್ಚು ವಿಶ್ವಾಸ ಹೊಂದಿದೆ ಎಂದರು. ಜಾಗತಿಕ ವಾಯುಯಾನ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪಾತ್ರವನ್ನು ಅವರು ಪ್ರತಿಪಾದಿಸಿದರು. ಜತೆಗೆ ಇದು ವಿಶಾಲ ಮಾರುಕಟ್ಟೆಯಾಗಿ ಮಾತ್ರವಲ್ಲದೆ ನೀತಿ ನಾಯಕತ್ವ, ನಾವೀನ್ಯತೆ ಮತ್ತು ಅಂತರ್ಗತ ಅಭಿವೃದ್ಧಿಯ ಸಂಕೇತವಾಗಿದೆ ಎಂದರು. ಇಂದು, ಭಾರತವು ಬಾಹ್ಯಾಕಾಶ-ವಾಯುಯಾನ ಸಂಯೋಜನೆಯಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿ, ನಾಗರಿಕ ವಿಮಾನಯಾನ ಕ್ಷೇತ್ರವು ಕಳೆದ ದಶಕದಲ್ಲಿ ಐತಿಹಾಸಿಕ ಪ್ರಗತಿಗೆ ಸಾಕ್ಷಿಯಾಗಿದೆ, ಅವು ಚೆನ್ನಾಗಿ ಗುರುತಿಸಲ್ಪಟ್ಟಿವೆ ಎಂದರು.