Significant moment in the India-United Kingdom partnership: PM Modi as India-UK CETA comes into force

July 15th, 12:58 pm

Quoting a post by Union Minister, Shri Piyush Goyal on the India-United Kingdom Comprehensive Economic and Trade Agreement (CETA) and the agreement on Social Security, Prime Minister Narendra Modi described it as a significant milestone in the India-UK partnership. Shri Modi said that the two agreements would further deepen the economic linkages between India and the United Kingdom and translate the shared ambition of both countries into tangible opportunities for their people.

ಇಂಡೋನೇಷ್ಯಾದಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

July 07th, 11:47 pm

ಇಂಡೋನೇಷ್ಯಾದಲ್ಲಿ ನಡೆದ ಈ ಮೂರು ಕಾರ್ಯಕ್ರಮಗಳಲ್ಲೂ 'ಪಂದ್ಯ ಶ್ರೇಷ್ಠ' ಪ್ರಶಸ್ತಿ ಒಂದೇ ಆಗಿತ್ತು - ನೀವೆಲ್ಲರೂ ಇಂಡೋನೇಷ್ಯಾದಲ್ಲಿ ವಾಸಿಸುತ್ತಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಜವಾದ 'ಪಂದ್ಯ ಶ್ರೇಷ್ಠರು'!

ಜಕಾರ್ತದಲ್ಲಿ ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ

July 07th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಕಾರ್ತದಲ್ಲಿಂದು ನಡೆದ ಅನಿವಾಸಿ ಭಾರತೀಯ ಸಮುದಾಯದ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಅವರಿಗೆ, ಅನಿವಾಸಿ ಭಾರತೀಯರು ಮತ್ತು ಭಾರತದ ಇಂಡೋನೇಷ್ಯಾದ ಸ್ನೇಹಿತರು ದೊಡ್ಡ ಸಂಖ್ಯೆಯಲ್ಲಿ ಸೇರಿ ಆತ್ಮೀಯ ಮತ್ತು ಉತ್ಸಾಹಭರಿತ ಸ್ವಾಗತ ನೀಡಿದರು. ವಿಶೇಷ ಗೌರವದ ಸಂಕೇತವಾಗಿ ಇಂಡೋನೇಷ್ಯಾ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪ್ರಬೋವೊ ಸುಬಿಯಾಂಟೊ ಅವರು ಕೂಡ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರೊಂದಿಗೆ ಪಾಲ್ಗೊಂಡರು.

ದಮನ್‌ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ/ರಾಷ್ಟ್ರಕ್ಕೆ ಸಮರ್ಪಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

June 05th, 07:20 pm

ನೀವು ಇಲ್ಲಿ ನೆರೆದಿರುವಂತೆಯೇ, ಲಕ್ಷದ್ವೀಪದಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜನರು ವೀಡಿಯೊ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ, ಏಕೆಂದರೆ ಇಂದು ಲಕ್ಷದ್ವೀಪದಲ್ಲಿ ಅಭಿವೃದ್ಧಿಯ ಹೊಸ ಆರಂಭ, ಲಕ್ಷದ್ವೀಪದ ಜನರ ಜೀವನದಲ್ಲಿ ಕ್ರಾಂತಿಕಾರಿ ಬದಲಾವಣೆಯನ್ನು ತರುವ ಹೊಸ ಯೋಜನೆ, ಉದ್ಘಾಟನೆಗೊಂಡಿದೆ ಮತ್ತು ಕೆಲವು ಯೋಜನೆಗಳಿಗೆ ಅಡಿಪಾಯ ಹಾಕಲಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಅರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು

June 05th, 07:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದಾಮನ್‌ನಲ್ಲಿ ಸುಮಾರು ₹2,970 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಿ ಮತ್ತು ಶಿಲಾನ್ಯಾಸ ನೆರವೇರಿಸಿದರು. ಸ್ಥಳೀಯ ನಾಯಕರು ಮತ್ತು ನಾಗರಿಕರ ಸಭೆಯಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಗಾಧವಾದ ಸಾರ್ವಜನಿಕ ಭಾಗವಹಿಸುವಿಕೆಗೆ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ತಮ್ಮ ಹಿಂದಿನ ಭೇಟಿಯನ್ನು ನೆನಪಿಸಿಕೊಳ್ಳುತ್ತಾ, ತಮ್ಮ ಹಿಂದಿನ ಅವಲೋಕನವು ಹೇಗೆ ವಾಸ್ತವಕ್ಕೆ ಪರಿವರ್ತನೆಯಾಯಿತು ಎಂಬುದರತ್ತ ಗಮನ ಸೆಳೆದರು, ಈ ಪ್ರದೇಶವು ಈಗ ಹೆಮ್ಮೆಯಿಂದ ರಾಷ್ಟ್ರದ ವೈವಿಧ್ಯಮಯ ಮತ್ತು ಚೈತನ್ಯಶೀಲ ಸಾರವನ್ನು ಪ್ರತಿನಿಧಿಸುತ್ತಿದೆ ಎಂದರು. ದಾಮನ್ ಮಿನಿ ಭಾರತದ ಜೀವಂತ ಉದಾಹರಣೆಯಾಗಿದೆ, ಇಲ್ಲಿ ವಿವಿಧ ಪ್ರದೇಶಗಳ ಜನರ ವಾಸ್ತವ್ಯವು ಇಡೀ ದೇಶದ ಸುಂದರ ನೋಟವನ್ನು ಒದಗಿಸುತ್ತದೆ ಎಂದೂ ಶ್ರೀ ಮೋದಿ ಹೇಳಿದರು.

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 19th, 10:00 am

ಗೌರವಾನ್ವಿತ ಗಣ್ಯರೆ, ಸಚಿವರೆ, ಉದ್ಯಮ ನಾಯಕರೆ, ನಾವೀನ್ಯಕಾರರೆ, ಉದ್ಯಮಿಗಳೆ, ಸಂಶೋಧಕರೆ, ಪ್ರತಿನಿಧಿಗಳೆ, ಗಣ್ಯ ಅತಿಥಿಗಳೆ, ಮಹಿಳೆಯರು ಮತ್ತು ಮಹನೀಯರೆ - ನಮಸ್ತೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026' ಉದ್ಘಾಟನೆ

February 19th, 09:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026' ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ಮಾನವಕುಲದ ಆರನೇ ಒಂದು ಭಾಗವನ್ನು ಪ್ರತಿನಿಧಿಸುವ ಭಾರತದಲ್ಲಿ ವಿಶ್ವದ ಅತಿದೊಡ್ಡ ಮತ್ತು ಐತಿಹಾಸಿಕ 'ಎಐ ಇಂಪ್ಯಾಕ್ಟ್ ಶೃಂಗಸಭೆ' ನಡೆಯುತ್ತಿದೆ ಎಂದು ಹೇಳಿದರು. ಭಾರತವು ವಿಶ್ವದ ಅತಿದೊಡ್ಡ ಯುವ ಜನಸಂಖ್ಯೆ, ಅತಿದೊಡ್ಡ ತಾಂತ್ರಿಕ ಪ್ರತಿಭಾನ್ವಿತರ ಬಳಗ ಮತ್ತು ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನ ಆಧಾರಿತ ಪರಿಸರ ವ್ಯವಸ್ಥೆಗೆ ನೆಲೆಯಾಗಿದೆ ಎಂದು ಅವರು ಒತ್ತಿಹೇಳಿದರು. ಭಾರತವು ಕೇವಲ ಹೊಸ ತಂತ್ರಜ್ಞಾನಗಳನ್ನು ಸೃಷ್ಟಿಸುವುದು ಮಾತ್ರವಲ್ಲದೆ, ಅವುಗಳನ್ನು ಅಭೂತಪೂರ್ವ ವೇಗದಲ್ಲಿ ಅಳವಡಿಸಿಕೊಳ್ಳುತ್ತದೆ ಎಂದು ಅವರು ಪ್ರತಿಪಾದಿಸಿದರು. 140 ಕೋಟಿ ಭಾರತೀಯರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಉತ್ಸುಕರಾಗಿದ್ದಾರೆ ಎಂದು ಹೇಳಿದ ಪ್ರಧಾನಮಂತ್ರಿಯವರು, ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ವಿವಿಧ ರಾಷ್ಟ್ರಗಳ ಮುಖ್ಯಸ್ಥರಿಗೆ, ಜಾಗತಿಕ ಎಐ ವ್ಯವಸ್ಥೆಯ ನಾಯಕರಿಗೆ ಮತ್ತು ನಾವೀನ್ಯಕಾರರಿಗೆ ಭಾರತೀಯರ ಪರವಾಗಿ ಆತ್ಮೀಯ ಸ್ವಾಗತ ಕೋರಿದರು. ಅವರ ಉಪಸ್ಥಿತಿಗಾಗಿ ಕೃತಜ್ಞತೆ ಸಲ್ಲಿಸಿದ ಅವರು, ಈ ಶೃಂಗಸಭೆಯನ್ನು ಭಾರತದಲ್ಲಿ ಆಯೋಜಿಸಿರುವುದು ಕೇವಲ ದೇಶಕ್ಕೆ ಮಾತ್ರವಲ್ಲದೆ ಇಡೀ ಜಾಗತಿಕ ದಕ್ಷಿಣದ ರಾಷ್ಟ್ರಗಳಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಉದ್ಯಮಶೀಲರಿಗೆ ಅಥವಾ ಶ್ರಮಜೀವಿಗಳಿಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ಹೇಳುವ ಸಂಸ್ಕೃತ ಸುಭಾಷಿತ ಹಂಚಿಕೊಂಡಿರುವ ಪ್ರಧಾನಮಂತ್ರಿ

December 29th, 11:24 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯಮಿಗಳಿಗೆ ಅಥವಾ ಶ್ರಮಶೀಲ ಜನರಿಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ಹೇಳುವ ಸಂಸ್ಕೃತ ಸುಭಾಷಿತವನ್ನು ಇಂದು ಹಂಚಿಕೊಂಡಿದ್ದಾರೆ.

ಇಥಿಯೋಪಿಯಾ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

December 17th, 12:25 pm

ಪುರಾತನ ಜ್ಞಾನ ಮತ್ತು ಆಧುನಿಕ ಆಕಾಂಕ್ಷೆಗಳನ್ನು ಹೊಂದಿರುವ ರಾಷ್ಟ್ರದ ಹೃದಯಭಾಗದಲ್ಲಿರುವ ಈ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಉಪಸ್ಥಿತರಿರುವುದು ನನಗೆ ಗೌರವದ ಸಂಗತಿಯಾಗಿದೆ. ನಿಮ್ಮ ಸಂಸತ್ತು, ನಿಮ್ಮ ಜನತೆ ಮತ್ತು ನಿಮ್ಮ ಪ್ರಜಾಪ್ರಭುತ್ವದ ಪಯಣದ ಬಗ್ಗೆ ಅಪಾರ ಗೌರವವನ್ನಿಟ್ಟುಕೊಂಡು ನಾನು ಇಲ್ಲಿಗೆ ಬಂದಿದ್ದೇನೆ. ಭಾರತದ 140 ಕೋಟಿ ಜನರ ಪರವಾಗಿ, ನಾನು ಸ್ನೇಹ, ಸದ್ಭಾವನೆ ಮತ್ತು ಸಹೋದರತ್ವದ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ.

ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 17th, 12:12 pm

ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. - ರೈತರು, ಉದ್ಯಮಿಗಳು, ಹೆಮ್ಮೆಯ ಮಹಿಳೆಯರು ಮತ್ತು ಯುವಜನರು - ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಥಿಯೋಪಿಯಾದ ಗ್ರೇಟ್ ಹಾನರ್ ನಿಶಾನ್ ಎಂಬ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಅವರು ಇಥಿಯೋಪಿಯಾದ ಜನರು ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಸಂಬಂಧದ ಮಹತ್ವವನ್ನು ಪರಿಗಣಿಸಿ, ಭೇಟಿಯ ಸಮಯದಲ್ಲಿ ಎರಡೂ ದೇಶಗಳ ನಡುವಿನ ಹಳೆಯ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಉನ್ನತೀಕರಿಸಲಾಗಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು ಇದಕ್ಕೆ ತಮ್ಮ ಸಂತೃಪ್ತಿಯನ್ನು ವ್ಯಕ್ತಪಡಿಸಿದರು.

ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ವಿಸಿ ಮೂಲಕ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

November 27th, 11:01 am

ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜಿ. ಕಿಶನ್ ರೆಡ್ಡಿ ಜೀ; ಆಂಧ್ರಪ್ರದೇಶದ ಕೈಗಾರಿಕಾ ಸಚಿವರಾದ ಶ್ರೀ ಟಿ. ಜಿ. ಭರತ್ ಜೀ; ಇನ್ ಸ್ಪೇಸ್ ಅಧ್ಯಕ್ಷರಾದ ಶ್ರೀ ಪವನ್ ಗೋಯೆಂಕಾ ಜೀ; ಸ್ಕೈರೂಟ್ ತಂಡ; ಇತರ ಗಣ್ಯರು; ಮಹಿಳೆಯರೇ ಮತ್ತು ಮಹನೀಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೈದರಾಬಾದ್‌ನ ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನೆ

November 27th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತೆಲಂಗಾಣದ ಹೈದರಾಬಾದ್‌ನಲ್ಲಿರುವ ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಂದು ದೇಶವು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಭೂತಪೂರ್ವ ಅವಕಾಶವನ್ನು ಕಾಣುತ್ತಿದೆ ಎಂದು ಹೇಳಿದರು. ಮತ್ತು ಖಾಸಗಿ ವಲಯವು ಎತ್ತರಕ್ಕೆ ಹಾರಾಡುತ್ತಿರುವುದರಿಂದ ಭಾರತದ ಬಾಹ್ಯಾಕಾಶ ಪೂರಕ ವ್ಯವಸ್ಥೆಯು ಭಾರಿ ಏರಿಕೆಯನ್ನು ಕಂಡಿದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿದರು. ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಭಾರತದ ಹೊಸ ಚಿಂತನೆ, ನಾವೀನ್ಯತೆ ಮತ್ತು ಯುವ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಮತ್ತು ದೇಶದ ಯುವಕರ ನಾವೀನ್ಯತೆ, ಅಪಾಯ ಎದುರಿಸುವ ಸಾಮರ್ಥ್ಯ ಮತ್ತು ಉದ್ಯಮಶೀಲತೆ ಹೊಸ ಎತ್ತರವನ್ನು ತಲುಪುತ್ತಿದೆ ಎಂದು ಅವರು ಒತ್ತಿ ಹೇಳಿದರು.

ಮೇಕ್ ಇನ್ ಇಂಡಿಯಾ ಉಪಕ್ರಮದ 11ನೇ ವರ್ಷಾಚರಣೆ ಆಚರಿಸಿದ ಪ್ರಧಾನಮಂತ್ರಿ

September 25th, 01:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮೇಕ್ ಇನ್ ಇಂಡಿಯಾ ಉಪಕ್ರಮದ 11ನೇ ವಾರ್ಷಿಕೋತ್ಸವವನ್ನು ಆಚರಿಸಿದರು. ಈ ಉಪಕ್ರಮವು ಭಾರತದ ಆರ್ಥಿಕತೆ ಮತ್ತು ಉದ್ಯಮಶೀಲ ಪರಿಸರ ವ್ಯವಸ್ಥೆಯ ಮೇಲೆ ತನ್ನ ಪರಿವರ್ತನಾತ್ಮಕ ಪರಿಣಾಮವನ್ನು ಬೀರಿದೆ. ಮೇಕ್ ಇನ್ ಇಂಡಿಯಾ ಭಾರತದ ಉದ್ಯಮಿಗಳಿಗೆ ನೀಡಿದ ಪ್ರೋತ್ಸಾಹವನ್ನು ಮತ್ತು ಇದರಿಂದಾಗಿ ಉಂಟಾದ ಜಾಗತಿಕ ಪರಿಣಾಮವನ್ನು ಶ್ರೀ ಮೋದಿಯವರು ಶ್ಲಾಘಿಸಿದರು.

ಗ್ರೇಟರ್ ನೋಯ್ಡಾದಲ್ಲಿ “ಉತ್ತರ ಪ್ರದೇಶದ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ”ದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 25th, 10:22 am

ಉತ್ತರ ಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜಿ, ಉತ್ತರ ಪ್ರದೇಶದ ಸರ್ಕಾರದ ಸಚಿವರುಗಳೆ, ಉತ್ತರ ಪ್ರದೇಶದ ಬಿಜೆಪಿ ಅಧ್ಯಕ್ಷರಾದ ಭೂಪೇಂದ್ರ ಚೌಧರಿ ಜಿ, ಉದ್ಯಮದ ಎಲ್ಲಾ ಸ್ನೇಹಿತರೆ, ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡಿದರು

September 25th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಆಯೋಜಿಸಲಾದ 'ಉತ್ತರ ಪ್ರದೇಶ ಅಂತಾರಾಷ್ಟ್ರೀಯ ವ್ಯಾಪಾರ ಪ್ರದರ್ಶನ 2025'ಕ್ಕೆ ಚಾಲನೆ ನೀಡಿ, ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಈ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವ ಸಮಸ್ತ ವ್ಯಾಪಾರಿಗಳು, ಹೂಡಿಕೆದಾರರು, ಉದ್ಯಮಿಗಳು ಹಾಗೂ ಯುವ ಪ್ರತಿನಿಧಿಗಳನ್ನು ಪ್ರಧಾನಮಂತ್ರಿಯವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಪ್ರದರ್ಶನದಲ್ಲಿ 2,200ಕ್ಕೂ ಅಧಿಕ ಪ್ರದರ್ಶಕರು ತಮ್ಮ ಉತ್ಪನ್ನಗಳು ಮತ್ತು ಸೇವೆಗಳನ್ನು ಅನಾವರಣಗೊಳಿಸುತ್ತಿರುವುದು ಅತ್ಯಂತ ಸಂತಸದ ವಿಷಯ ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಈ ಬಾರಿಯ ವ್ಯಾಪಾರ ಪ್ರದರ್ಶನಕ್ಕೆ 'ರಷ್ಯಾ' ಪಾಲುದಾರ ರಾಷ್ಟ್ರವಾಗಿರುವುದು, ಉಭಯ ದೇಶಗಳ ನಡುವಿನ ಕಾಲಪರೀಕ್ಷಿತ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವುದರ ದ್ಯೋತಕವಾಗಿದೆ ಎಂದು ಶ್ರೀ ಮೋದಿಯವರು ವಿಶೇಷವಾಗಿ ಪ್ರಸ್ತಾಪಿಸಿದರು. ಈ ಬೃಹತ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅವರ ಸರ್ಕಾರದ ಸಹೋದ್ಯೋಗಿಗಳು ಮತ್ತು ಇತರ ಎಲ್ಲ ಪಾಲುದಾರರಿಗೆ ಅಭಿನಂದನೆ ಸಲ್ಲಿಸಿದರು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳಿಗೆಯಾದ 'ಅಂತ್ಯೋದಯ'ದ ಪಥವನ್ನು ದೇಶಕ್ಕೆ ತೋರಿದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜಯಂತಿಯಂದೇ ಈ ಶುಭ ಸಂದರ್ಭ ಒದಗಿ ಬಂದಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿದರು. ಅಂತ್ಯೋದಯದ ನಿಜವಾದ ಅರ್ಥವೇ, ಅಭಿವೃದ್ಧಿಯ ಫಲಗಳು ಸಮಾಜದ ಅತ್ಯಂತ ಬಡವರನ್ನೂ ತಲುಪುವಂತೆ ಮಾಡುವುದು ಮತ್ತು ಎಲ್ಲ ಬಗೆಯ ತಾರತಮ್ಯವನ್ನು ನಿರ್ಮೂಲನೆ ಮಾಡುವುದಾಗಿದೆ ಎಂದು ಅವರು ಪ್ರತಿಪಾದಿಸಿದರು. ಭಾರತವು ಇದೀಗ ಇದೇ ಸಮಗ್ರ ಅಭಿವೃದ್ಧಿ ಮಾದರಿಯನ್ನು ಇಡೀ ವಿಶ್ವಕ್ಕೆ ಅರ್ಪಿಸುತ್ತಿದೆ ಎಂದು ಅವರು ಹೆಮ್ಮೆಯಿಂದ ನುಡಿದರು.

ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 25th, 06:42 pm

ಇಂದು, ನೀವೆಲ್ಲರೂ ನಿಜವಾಗಿಯೂ ಉತ್ತಮ ವಾತಾವರಣ ಸೃಷ್ಟಿಸಿದ್ದೀರಿ. ಈ ಲಕ್ಷಾಂತರ ಜನರ ಪ್ರೀತಿ ಮತ್ತು ಆಶೀರ್ವಾದ ಪಡೆಯಲು ನಾನು ಎಷ್ಟು ಅದೃಷ್ಟಶಾಲಿ ಎಂದು ನಾನು ಅನೇಕ ಬಾರಿ ಭಾವಿಸಿದ್ದೇನೆ. ನಾನು ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಅದು ಎಂದಿಗೂ ಮುಗಿಯುವುದಿಲ್ಲ. ನೋಡಿ, ಅಲ್ಲಿ ಸ್ವಲ್ಪ ನರೇಂದ್ರ ನಿಂತಿದ್ದಾನೆ!

ಗುಜರಾತಿನ ಅಹಮದಾಬಾದ್‌ ನಲ್ಲಿ 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ನೆರವೇರಿಸಿದರು

August 25th, 06:15 pm

ಗುಜರಾತಿನ ಅಹಮದಾಬಾದ್‌ ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ, ಲೋಕಾರ್ಪಣೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಡೀ ರಾಷ್ಟ್ರವು ಪ್ರಸ್ತುತ ಗಣೇಶೋತ್ಸವದ ಉತ್ಸಾಹದಲ್ಲಿ ಮುಳುಗಿದೆ ಎಂದು ಹೇಳಿದರು. ಗಣಪತಿ ಬಪ್ಪಾ ಆಶೀರ್ವಾದದೊಂದಿಗೆ, ಇಂದು ಗುಜರಾತಿನ ಪ್ರಗತಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಶುಭಾರಂಭ ಮಾಡಲಾಗಿದೆ. ಜನರ ಪಾದಾರವಿಂದಗಳಿಗೆ ಹಲವಾರು ಯೋಜನೆಗಳನ್ನು ಅರ್ಪಿಸುವ ಸೌಭಾಗ್ಯ ತಮಗೆ ದೊರೆತಿದೆ ಎಂದು ಅವರು ಹೇಳಿದರು ಮತ್ತು ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.

ಉತ್ತರ ಪ್ರದೇಶದಲ್ಲಿ ಸೆಮಿಕಂಡಕ್ಟರ್ ಘಟಕಕ್ಕೆ ಸಂಪುಟ ಅನುಮೋದನೆ

May 14th, 03:06 pm

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಭಾರತ ಸೆಮಿಕಂಡಕ್ಟರ್ ಮಿಷನ್ ಅಡಿಯಲ್ಲಿ ಆರನೇ ಸೆಮಿಕಂಡಕ್ಟರ್ ಘಟಕವನ್ನು ಸ್ಥಾಪಿಸಲು ಅನುಮೋದನೆ ನೀಡಿದೆ. ಎಚ್‌ಸಿಎಲ್ ಮತ್ತು ಫಾಕ್ಸ್‌ಕಾನ್ ನಡುವಿನ ಜಂಟಿ ಉದ್ಯಮವಾದ ಜೆವರ್ ವಿಮಾನ ನಿಲ್ದಾಣದ ಬಳಿಯಿರುವ ಈ ಸ್ಥಾವರವು ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಹೆಚ್ಚಿನವುಗಳಿಗೆ ಡಿಸ್ಪ್ಲೇ ಡ್ರೈವರ್ ಚಿಪ್‌ಗಳನ್ನು ತಯಾರಿಸುತ್ತದೆ.

17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿಯವರ ಭಾಷಣ

April 21st, 11:30 am

ನನ್ನ ಸಂಪುಟ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜಿ, ಶ್ರೀ ಶಕ್ತಿಕಾಂತ ದಾಸ್ ಜಿ, ಡಾ. ಸೋಮನಾಥನ್ ಜಿ, ಇತರ ಹಿರಿಯ ಅಧಿಕಾರಿಗಳು, ದೇಶಾದ್ಯಂತ ನಾಗರಿಕ ಸೇವೆಗಳ ಎಲ್ಲಾ ಸಹೋದ್ಯೋಗಿಗಳು, ಮಹಿಳೆಯರೇ ಮತ್ತು ಮಹನೀಯರೇ!

17ನೇ ನಾಗರಿಕ ಸೇವಾ ದಿನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

April 21st, 11:00 am

ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ 17ನೇ ನಾಗರಿಕ ಸೇವಾ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಗರಿಕ ಸೇವೆಗಳ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಸಾರ್ವಜನಿಕ ಆಡಳಿತದಲ್ಲಿ ಶ್ರೇಷ್ಠತೆಗಾಗಿ ಪ್ರಧಾನಮಂತ್ರಿಯವರ ಪ್ರಶಸ್ತಿಗಳನ್ನು ಸಹ ಅವರು ಪ್ರದಾನ ಮಾಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ನಾಗರಿಕ ಸೇವಾ ದಿನದ ಸಂದರ್ಭದಲ್ಲಿ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು ಮತ್ತು ಸಂವಿಧಾನದ 75ನೇ ವರ್ಷ ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜಯಂತಿಯಾದ ಈ ವರ್ಷದ ಆಚರಣೆಯ ಮಹತ್ವವನ್ನು ಎತ್ತಿ ತೋರಿಸಿದರು. ಏಪ್ರಿಲ್ 21, 1947 ರಂದು ಸರ್ದಾರ್ ಪಟೇಲ್ ಅವರು 'ಭಾರತದ ಉಕ್ಕಿನ ಚೌಕಟ್ಟು' ಎಂದು ನಾಗರಿಕ ಸೇವಕರನ್ನು ಬಣ್ಣಿಸಿದ ಐತಿಹಾಸಿಕ ಹೇಳಿಕೆಯನ್ನು ಸ್ಮರಿಸಿದ ಶ್ರೀ ಮೋದಿ, ಶಿಸ್ತು, ಪ್ರಾಮಾಣಿಕತೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಎತ್ತಿಹಿಡಿಯುವ, ಅತ್ಯಂತ ಸಮರ್ಪಣಾಬಾವದಿಂದ ರಾಷ್ಟ್ರಕ್ಕೆ ಸೇವೆ ಸಲ್ಲಿಸುವ ಅಧಿಕಾರಶಾಹಿಯನ್ನು ಕುರಿತ ಪಟೇಲ್‌ ಅವರ ದೃಷ್ಟಿಕೋನವನ್ನು ಒತ್ತಿ ಹೇಳಿದರು. ಭಾರತವು ವಿಕಸಿತ ಭಾರತವಾಗುವ ಸಂಕಲ್ಪದ ಸಂದರ್ಭದಲ್ಲಿ ಸರ್ದಾರ್ ಪಟೇಲ್ ಅವರ ಆದರ್ಶಗಳ ಪ್ರಸ್ತುತತೆಯನ್ನು ಅವರು ಒತ್ತಿ ಹೇಳಿದರು ಮತ್ತು ಸರ್ದಾರ್ ಪಟೇಲ್ ಅವರ ದೃಷ್ಟಿಕೋನ ಮತ್ತು ಪರಂಪರೆಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.