ಮೊಬೈಲ್ ಫೋನ್ ಉತ್ಪಾದನಾ ಯೋಜನೆಗೆ (ಎಂಪಿಎಂಎಸ್) ಕೇಂದ್ರ ಸಚಿವ ಸಂಪುಟ ಅನುಮೋದನೆ

July 15th, 04:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯು 62,500 ಕೋಟಿ ರೂ. (ಅರವತ್ತೆರಡು ಸಾವಿರದ ಐದು ನೂರು ಕೋಟಿ ರೂಪಾಯಿಗಳು ಮಾತ್ರ) ಬಜೆಟ್ ವೆಚ್ಚದೊಂದಿಗೆ 'ಮೊಬೈಲ್ ಫೋನ್ ಉತ್ಪಾದನಾ ಯೋಜನೆ'ಗೆ (ಎಂಪಿಎಂಎಸ್) ಅನುಮೋದನೆ ನೀಡಿದೆ.

ಭಾರತ-ನ್ಯೂಜಿಲೆಂಡ್ ಉದ್ಯಮ ವ್ಯವಹಾರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 11th, 08:20 am

ಆಕ್ಲೆಂಡ್‌ನಲ್ಲಿ ನಿಮ್ಮೆಲ್ಲರೊಂದಿಗೆ ಇಲ್ಲಿರುವುದು ನನಗೆ ಸಂತೋಷ ತಂದಿದೆ. ಪ್ರಧಾನ ಮಂತ್ರಿ ಲಕ್ಸನ್ ಅವರ ಸಕಾರಾತ್ಮಕ ದೃಷ್ಟಿಕೋನ ಮತ್ತು ಭಾರತದ ಬಗ್ಗೆ ಅವರು ಹೊಂದಿರುವ ಆಳವಾದ ಬದ್ಧತೆಗಾಗಿ ನಾನು ಅವರಿಗೆ ನನ್ನ ವಿಶೇಷ ಕೃತಜ್ಞತೆ ವ್ಯಕ್ತಪಡಿಸಲು ಬಯಸುತ್ತೇನೆ.

Prime Minister addresses business leaders in New Zealand

July 11th, 08:16 am

PM Modi interacted with leading CEOs and business leaders from India and New Zealand, highlighting the vast opportunities for trade, investment and innovation. He invited New Zealand businesses to partner India's growth story and help achieve the shared goal of doubling bilateral trade to NZD 7 billion by 2030.

ಕ್ರೀಡಾ ಸಹಭಾಗಿತ್ವಕ್ಕಾಗಿ ಭಾರತ-ಆಸ್ಟ್ರೇಲಿಯಾ ನೀಲನಕ್ಷೆ

July 10th, 10:07 am

ಕ್ರೀಡೆ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪ್ರಬಲ ಸೇತುವೆಯಾಗಿದ್ದು, ಸಮುದಾಯಗಳನ್ನು ಒಗ್ಗೂಡಿಸುತ್ತದೆ ಮತ್ತು ಪಾಲುದಾರಿಕೆಗೆ ಹೊಸ ಮಾರ್ಗಗಳನ್ನು ತೆರೆಯುತ್ತಿದೆ.

ಆರ್ಥಿಕ ನೀಲನಕ್ಷೆ ವ್ಯವಹಾರ ಸ್ವಾಗತ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

July 09th, 06:15 am

ಈಗ ಹೂಡಿಕೆ ಮತ್ತು ನಾವೀನ್ಯತೆಯ ವಿಮಾನವು ಈ ರನ್‌ವೇಯಿಂದ ಹಾರಲು ಸಿದ್ಧವಾಗಿದೆ. ಈ ಪಾಲುದಾರಿಕೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ.

Prime Minister addresses Australia-India CEOs Forum and Economic Roadmap Business event

July 09th, 06:00 am

PM Modi participated in the Australia-India CEOs Forum and the Economic Roadmap Business event in Melbourne. Addressing the CEOs Forum, he highlighted India's strong economic growth, policy reforms, digital transformation and expanding innovation ecosystem. Addressing the Economic Roadmap Business event, he expressed satisfaction at the growth of trade and investment ties based on ECTA and called for early conclusion of the proposed CECA.

ಗುಜರಾತ್‌ನ ಸನಂದ್‌ನಲ್ಲಿ ಸಿಜಿ ಸೆಮಿ ಒಎಸ್‌ಎಟಿ ಸೌಲಭ್ಯ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

July 04th, 05:15 pm

2024ರಲ್ಲಿ ಈ ಸ್ಥಾವರಕ್ಕೆ ಶಂಕುಸ್ಥಾಪನೆ ನೆರವೇರಿಸುವ ಅವಕಾಶ ನನಗೆ ಸಿಕ್ಕಿತ್ತು. 2025 ಆಗಸ್ಟ್ ಹೊತ್ತಿಗೆ ಚಿಪ್ ಪರೀಕ್ಷಾ ಕಾರ್ಯ ಇಲ್ಲಿ ಪ್ರಾರಂಭವಾಯಿತು, ಇಂದು ಈ ಸ್ಥಾವರವನ್ನು ಉದ್ಘಾಟಿಸಲಾಗಿದೆ. ಶಂಕುಸ್ಥಾಪನೆಯಿಂದ ಹಿಡಿದು ಉತ್ಪಾದನೆಯ ತನಕದ ಪ್ರಯಾಣವು ನಿಸ್ಸಂದೇಹವಾಗಿ ಅನೇಕ ಸಹೋದ್ಯೋಗಿಗಳ ಕಠಿಣ ಪರಿಶ್ರಮ ಮತ್ತು ಸುಬ್ಬಯ್ಯ ಜಿ ಅವರಂತಹ ನಾಯಕರ ಫಲವಾಗಿದೆ. ವೇದಿಕೆಗೆ ಬರುವ ಮೊದಲು, ಈ ಯೋಜನೆಗೆ ಸಂಬಂಧಿಸಿದ ಅನೇಕರೊಂದಿಗೆ ಸಂವಹನ ನಡೆಸುವ ಅವಕಾಶ ನನಗೆ ಸಿಕ್ಕಿತು. ಈ ಕ್ಯಾಂಪಸ್‌ನಲ್ಲಿ ಒಂದು ಮಿನಿ ಭಾರತ ವಾಸಿಸುತ್ತಿದೆ ಎಂದು ಭಾಸವಾಯಿತು - ಎಲ್ಲಾ ಭಾಷೆ, ಉಡುಪು ಮತ್ತು ಪಾಕ ಪದ್ಧತಿಯ ಜನರು ಇಲ್ಲಿದ್ದಾರೆ. ನನ್ನ ಪ್ರದರ್ಶನ ಭೇಟಿಯ ಸಮಯದಲ್ಲಿ ನಾನು ಅನೇಕ ಯುವಕ-ಯುವತಿಯರೊಂದಿಗೆ ಮಾತನಾಡಿದೆ. ನಾನು ಹೆಮ್ಮೆಯಿಂದ ಉಲ್ಲೇಖಿಸಬೇಕಾದ ಒಂದು ವಿಷಯವೆಂದರೆ, ಅವರ ಆತ್ಮವಿಶ್ವಾಸದ ಮಟ್ಟ. ಅವರು ಮಾತನಾಡಿದ ದೃಢನಿಶ್ಚಯ, ತಂತ್ರಜ್ಞಾನದ ಮೇಲಿನ ಅವರ ನಂಬಿಕೆ – ಇದರಿಂದ ನಾನು ನಿಜವಾಗಿಯೂ ಪ್ರಭಾವಿತನಾದೆ.

ಗುಜರಾತ್‌ನ ಸನಂದ್‌ನಲ್ಲಿ ಸಿಜಿ ಸೆಮಿ ಔಟ್‌ಸೋರ್ಸ್ಡ್ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟ್ (ಒಎಸ್‌ಎಟಿ) ಸೌಲಭ್ಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು

July 04th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ನ ಸನಂದ್‌ನಲ್ಲಿ CG ಸೆಮಿ ಔಟ್‌ಸೋರ್ಸ್ಡ್ ಸೆಮಿಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟ್ (OSAT) ಸೌಲಭ್ಯವನ್ನು ಉದ್ಘಾಟಿಸಿದರು. ಈ ಸಂದರ್ಭದ ಮಹತ್ವವನ್ನು ವಿವರಿಸಿದ, ಪ್ರಧಾನಮಂತ್ರಿಯವರು ಈ ಉಡಾವಣೆಯನ್ನು ರಾಷ್ಟ್ರವು ತನ್ನ ಗುರಿಗಳಿಗೆ ಹೊಂದಿರುವ ಅಚಲ ಬದ್ಧತೆಗೆ ಸಾಕ್ಷಿಯಾಗಿ ರೂಪಿಸಿದರು. ದೇಶವು ತನ್ನ ಬಲವಾದ ನಿರ್ಣಯಗಳನ್ನು ಹಿಂಜರಿಕೆಯಿಲ್ಲದೆ ನಿರಂತರವಾಗಿ ಸ್ಪಷ್ಟ ವಾಸ್ತವಗಳಾಗಿ ಪರಿವರ್ತಿಸುತ್ತದೆ ಎಂದು ಅವರು ಹೇಳಿದರು. ಭಾರತವು ಏನು ಮಾಡಲು ನಿರ್ಧರಿಸಿದರೂ ಅದು ದೃಢವಾಗಿ ಸಾಧಿಸುತ್ತದೆ ಎಂಬುದಕ್ಕೆ ಇಂದಿನ ಕಾರ್ಯಕ್ರಮ ಪುರಾವೆಯಾಗಿದೆ ಎಂದು ಶ್ರೀ ಮೋದಿ ಪ್ರತಿಪಾದಿಸಿದರು.

ಭಾರತ-ಜಪಾನ್ ಉದ್ಯಮ ವ್ಯಾಪಾರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ

July 02nd, 03:35 pm

ಭಾರತ-ಜಪಾನ್ ಸಂಬಂಧ ನಿಜಕ್ಕೂ ವಿಶೇಷವಾದದ್ದು.

ಕೋಲ್ಕತ್ತಾದಲ್ಲಿ ನಡೆದ ಐ.ಎನ್.ಎಸ್. ಅಗ್ರೇ, ಐ.ಎನ್.ಎಸ್. ದುನಾಗಿರಿ ಮತ್ತು ಐ.ಎನ್.ಎಸ್. ಸಂಶೋಧಕ್ ತ್ರಿವಳಿ ನೌಕಾದಳ ಹಡಗು ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

June 21st, 12:51 pm

ಪಶ್ಚಿಮ ಬಂಗಾಳದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರ್.ಎನ್.ರವಿ ಜೀ, ಉತ್ಸಾಹಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಜೀ, ನೌಕಾಪಡೆಯ ಮುಖ್ಯಸ್ಥ ಕೃಷ್ಣ ಸ್ವಾಮಿನಾಥನ್ ಜೀ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಮಹಿಳೆಯರೇ ಮತ್ತು ಮಹನೀಯರೇ!

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಮೂರು ನೌಕಾ ಹಡಗುಗಳಾದ ಐಎನ್ಎಸ್ ದುನಗಿರಿ, ಐಎನ್ಎಸ್ ಸಂಶೋಧಕ್ ಮತ್ತು ಐಎನ್ಎಸ್ ಅಗ್ರೇ ಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾರ್ಯಾರಂಭಗೊಳಿಸಿದರು

June 21st, 12:50 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ವಿನ್ಯಾಸ ಮಾಡಿ ನಿರ್ಮಿಸಲಾದ ಮೂರು ನೌಕಾ ಹಡಗುಗಳಾದ ಐ.ಎನ್.ಎಸ್. ದುನಾಗಿರಿ, ಸುಧಾರಿತ ರಹಸ್ಯ ಯುದ್ಧ ನೌಕೆ ಅಂದರೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲಾದ ಹಾಗು ವೈರಿಯ ರಾಡಾರ್, ಸೋನಾರ್, ದೃಶ್ಯ ಮತ್ತು ಇನ್ಫ್ರಾರೆಡ್ ಚಕ್ಷುಗಳಿಗೆ ಸುಲಭದಲ್ಲಿ ಗೋಚರಿಸದ ಮಧ್ಯಮ ಗಾತ್ರದ ನೌಕಾ ಯುದ್ದನೌಕೆ ಐ.ಎನ್.ಎಸ್. ಸಂಶೋಧಕ್ ಮತ್ತು ಜಲಾಂತರ್ಗಾಮಿ ನಿರೋಧಕ ಯುದ್ಧ ನೌಕೆ ಐ.ಎನ್.ಎಸ್. ಅಗ್ರೇ ಇವುಗಳನ್ನು ಕಾರ್ಯಾರಂಭಗೊಳಿಸಿದರು. ಈ ಸೇರ್ಪಡೆಗಳು ರಾಷ್ಟ್ರದ ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸುತ್ತವೆ, ಕಡಲ ಕ್ಷೇತ್ರದ ಜಾಗೃತಿಯನ್ನು ಹೆಚ್ಚಿಸುತ್ತವೆ ಮತ್ತು ಭೌಗೋಳಿಕ ರಾಜಕೀಯ ಬೆದರಿಕೆಗಳ ವಿರುದ್ಧ ನಮ್ಮ ಕರಾವಳಿ ನೀರಿನ ಭದ್ರತೆಯನ್ನು ಬಲಪಡಿಸುತ್ತವೆ. ಎಲ್ಲಾ ಮೂರು ಹಡಗುಗಳನ್ನು ಭಾರತೀಯ ನೌಕಾಪಡೆಯ ಯುದ್ಧನೌಕೆ ವಿನ್ಯಾಸ ಬ್ಯೂರೋ ವಿನ್ಯಾಸಗೊಳಿಸಿದೆ ಮತ್ತು 200ಕ್ಕೂ ಹೆಚ್ಚು ಎಂಎಸ್ಎಂಇಗಳು ಸೇರಿದಂತೆ ಭಾರತೀಯ ಉದ್ಯಮದ ವ್ಯಾಪಕ ಭಾಗವಹಿಸುವಿಕೆಯೊಂದಿಗೆ ಗಾರ್ಡನ್ ರೀಚ್ ಶಿಪ್ ಬಿಲ್ಡರ್ಸ್ ಮತ್ತು ಎಂಜಿನಿಯರ್ಸ್ (ಜಿಆರ್‌ಎಸ್‌ಇ) ಕೋಲ್ಕತ್ತಾದಲ್ಲಿ ನಿರ್ಮಿಸಿದೆ. ಶೇಕಡಾ 75 ಕ್ಕಿಂತ ಹೆಚ್ಚು ಸ್ಥಳೀಯ ಸಾಮಗ್ರಿಗಳೊಂದಿಗೆ, ಈ ಹಡಗುಗಳು ಆತ್ಮನಿರ್ಭರತೆಗೆ ಭಾರತದ ಬದ್ಧತೆಗೆ ಸಾಕ್ಷಿಯಾಗಿವೆ.

ನವದೆಹಲಿಯಲ್ಲಿ ಆಯೋಜಿತವಾಗಿದ್ದ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್ ಗಾರ್ ಯೋಜನೆಯ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 19th, 05:15 pm

ನನ್ನ ಸಂಪುಟ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಜಿ, ಸಹೋದರಿ ಶೋಭಾ ಜಿ, ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ಮತ್ತು ತಂತ್ರಜ್ಞಾನದೊಂದಿಗೆ ಸಂಪರ್ಕ ಹೊಂದಿದ ಎಲ್ಲಾ ಗಣ್ಯ ವ್ಯಕ್ತಿಗಳೆ, ದೂರದಿಂದಲೇ ಈ ಕಾರ್ಯಕ್ರಮದೊಂದಿಗೆ 200 ಸ್ಥಳಗಳಿಂದ ಸಂಪರ್ಕ ಹೊಂದಿರುವ ಸುಮಾರು 2 ಲಕ್ಷ ಜನರಿಗೆ ನಾನು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ, ಇಂದು ಇಲ್ಲಿ ಕೈಗಾರಿಕಾ ಕ್ಷೇತ್ರದ ಅನೇಕ ಗಣ್ಯ ವ್ಯಕ್ತಿಗಳು ಹಾಜರಿರುವುದನ್ನು ನಾನು ನೋಡುತ್ತಿದ್ದೇನೆ. ಸಹಜವಾಗಿ ಯುವ ಸಮುದಾಯ ಇಲ್ಲಿ ಉತ್ಸಾಹದಿಂದ ದೊಡ್ಡ ಸಂಖ್ಯೆಯಲ್ಲಿ ಇರುವುದು ಗೋಚರಿಸುತ್ತಿದೆ.

ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆ ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

June 19th, 05:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆ'ಯ ಫಲಾನುಭವಿಗಳು, ಉದ್ಯಮದ ಪ್ರತಿನಿಧಿಗಳು ಮತ್ತು ಪಾಲುದಾರರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ, ದೇಶದ ಯುವಕರನ್ನು ಸಬಲೀಕರಣಗೊಳಿಸಲು ಮತ್ತು ದೇಶಾದ್ಯಂತ ಉದ್ಯೋಗ ಸೃಷ್ಟಿಯನ್ನು ವೇಗಗೊಳಿಸಲು ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಭಾರತ ಸರ್ಕಾರದ ಪ್ರಮುಖ ಉದ್ಯೋಗ-ಸಂಯೋಜಿತ ಪ್ರೋತ್ಸಾಹಕ ಯೋಜನೆಯಾದ ಪ್ರಧಾನ ಮಂತ್ರಿ ವಿಕಸಿತ್‌ ಭಾರತ್‌ ರೋಜ್‌ ಗಾರ್ ಯೋಜನೆ (PM-VBRY) ಅನುಷ್ಠಾನದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಸಲುವಾಗಿ ಮತ್ತು ವಿವಿಧ ವಲಯಗಳಲ್ಲಿ ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ವಿಸ್ತರಿಸಲು, ಶ್ರೀ ಮೋದಿ ಅವರು PM-VBRY ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದರು. ಈ ಪ್ರೋತ್ಸಾಹಕ ಧನವು ದೇಶಾದ್ಯಂತ 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿಗೆ ಬೆಂಬಲ ನೀಡಿದೆ.

ಭಾರತೀಯ ಸಮುದಾಯ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ

June 18th, 11:41 pm

ಪ್ಯಾರಿಸ್ ನಗರವು ಬೆಳಕು ಮತ್ತು ಬಣ್ಣಗಳ ನಗರ. ಇದು ಕಲೆ, ಕಲ್ಪನೆಗಳು ಮತ್ತು ನಾವೀನ್ಯತೆಗೆ ಸ್ಫೂರ್ತಿಯ ಸ್ಥಳವಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದು ನೀವೆಲ್ಲರೂ ಈ ನಗರವನ್ನು ಇನ್ನಷ್ಟು ಸುಂದರಗೊಳಿಸುತ್ತೀರಿ. ನೀವು ಅದನ್ನು ಹೊಸ ಮತ್ತು ರೋಮಾಂಚಕ ಬಣ್ಣಗಳಿಂದ ತುಂಬುತ್ತೀರಿ.

ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 18th, 09:30 pm

ಜೂನ್ 18, 2026 ರಂದು ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಿದರು. ಸ್ಥಳಕ್ಕೆ ಆಗಮಿಸಿದಾಗ, ಪ್ರಧಾನಮಂತ್ರಿಗೆ ಆತ್ಮೀಯ ಮತ್ತು ವರ್ಣರಂಜಿತ ಸ್ವಾಗತ ನೀಡಲಾಯಿತು, ಇದು ಮಾತೃಭೂಮಿಯ ಬಗ್ಗೆ ವಲಸಿಗರ ಆಳವಾದ ವಾತ್ಸಲ್ಯವನ್ನು ಪ್ರತಿಬಿಂಬಿಸುತ್ತದೆ.

India and Slovakia are moving forward in close coordination on the global stage: PM Modi at the India-Slovakia Joint Press Meet

June 15th, 03:00 pm

At the joint press meet in Bratislava, PM Modi and Slovak Prime Minister Robert Fico announced the elevation of India-Slovakia ties to a Comprehensive Partnership. PM Modi highlighted growing cooperation in trade, technology, defence, space, digital innovation and mobility, saying the upgraded partnership reflects shared priorities, shared trust and a shared vision for the future.

ಫ್ರಾನ್ಸ್‌ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ 2026 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

June 14th, 04:36 pm

ಈ ಸಂದರ್ಭದಲ್ಲಿ ಇಲ್ಲಿ ಉಪಸ್ಥಿತರಿದ್ದದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್‌ ಅವರಿಗೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷ ಮ್ಯಾಕ್ರನ್‌, ಈ ಶತಮಾನದ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ಬರಬೇಕು ಎಂದು ನೀವು ಹೇಳಿದ್ದೀರಿ. ಇಂದು, ಈ ಉಪಕ್ರಮವು ಆ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.

2026ರ ಭಾರತ್ ಇನ್ನೋವೇಟ್ಸ್ ನಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

June 14th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಗೌರವಾನ್ವಿತ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ನೈಸ್‌ನ ಪಲೈಸ್ ಡೆಸ್ ಎಕ್ಸ್‌ಪೊಸಿಷನ್ಸ್‌ನಲ್ಲಿ ಭಾರತ್ ಇನ್ನೋವೇಟ್ಸ್ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಮೂರು ದಿನಗಳ ಕಾರ್ಯಕ್ರಮವಾದ ಭಾರತ್ ಇನ್ನೋವೇಟ್ಸ್, ಜಾಗತಿಕ ನಾವೀನ್ಯತೆ ನಿಧಿಗಳು ಮತ್ತು ಹೆಜ್ಜೆಗುರುತನ್ನು ಹೊಂದಿರುವ ಭಾರತೀಯ ಡೀಪ್-ಟೆಕ್ ನವೋದ್ಯಮಗಳು (ಸ್ಟಾರ್ಟ್-ಅಪ್‌ಗಳು), ನಾವೀನ್ಯಕಾರರು, ಸಂಶೋಧಕರು ಮತ್ತು ಹೂಡಿಕೆದಾರರನ್ನು ಒಟ್ಟುಗೂಡಿಸುತ್ತದೆ. ಇದು ಜಾಗತಿಕ ಹಂತದಲ್ಲಿ ಭಾರತದ ಪ್ರಮುಖ ಡೀಪ್ ಟೆಕ್ ತಂತ್ರಜ್ಞಾನವನ್ನು ಪ್ರದರ್ಶಿಸುತ್ತದೆ, ಜಾಗತಿಕ ಪ್ರಾಮುಖ್ಯತೆಯ 13 ನಿರ್ಣಾಯಕ ತಂತ್ರಜ್ಞಾನ ಸ್ತಂಭಗಳಲ್ಲಿ 120 ಪಥ-ಭಂಜಕ (ಹೊಸ ಹಾದಿ ತೋರುವ) ಸ್ಟಾರ್ಟ್-ಅಪ್‌ಗಳು ಮತ್ತು 20ಕ್ಕೂ ಹೆಚ್ಚು ಶ್ರೇಷ್ಠತಾ ಸಂಸ್ಥೆಗಳನ್ನು ಪ್ರಸ್ತುತಪಡಿಸುತ್ತದೆ. ಪ್ರಪಂಚದಾದ್ಯಂತದ 350ಕ್ಕೂ ಹೆಚ್ಚು ಉನ್ನತ ಹೂಡಿಕೆದಾರರು ಮತ್ತು ಸಾಹಸೋದ್ಯಮ (ವೆಂಚರ್) ಬಂಡವಾಳಗಾರರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

PM Modi’s high-energy rallies in Krishnanagar and Mathurapur, West Bengal

April 23rd, 12:30 pm

PM Modi addressed massive public gatherings in Krishnanagar and Mathurapur, delivering a sharp critique of TMC’s misgovernance while presenting BJP’s vision of development, security and women-led growth in West Bengal.

The teacher recruitment scam has destroyed thousands of families’ dreams: PM Modi in Birbhum, West Bengal

April 09th, 11:45 am

PM Modi launched a sharp attack on the TMC in his address at a massive public meeting in Birbhum, West Bengal. He alleged large-scale irregularities in welfare schemes and called for a decisive mandate for change in the upcoming Assembly elections. He urged people to press the lotus button at every booth and ensure a government that delivers development, dignity and security.