ಮಧ್ಯಪ್ರದೇಶದ ಧಾರ್ ನಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

September 17th, 11:20 am

ಮಧ್ಯಪ್ರದೇಶದ ರಾಜ್ಯಪಾಲರಾದ ಶ್ರೀ ಮಂಗುಭಾಯಿ ಪಟೇಲ್ ಜೀ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಮೋಹನ್ ಯಾದವ್ ಜೀ, ಕೇಂದ್ರದಲ್ಲಿ ನನ್ನ ಸಹೋದ್ಯೋಗಿಗಳಾದ ಸಹೋದರಿ ಸಾವಿತ್ರಿ ಠಾಕೂರ್ ಜೀ, ದೇಶದ ಮೂಲೆ ಮೂಲೆಗಳಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕೇಂದ್ರ ಸಚಿವರೇ, ರಾಜ್ಯಗಳ ರಾಜ್ಯಪಾಲರೇ, ರಾಜ್ಯಗಳ ಮುಖ್ಯಮಂತ್ರಿಗಳೇ, ವೇದಿಕೆಯ ಮೇಲೆ ಉಪಸ್ಥಿತರಿರುವ ಇತರ ಎಲ್ಲ ಗಣ್ಯರೇ ಮತ್ತು ದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ!

ಮಧ್ಯಪ್ರದೇಶದ ಧಾರ್‌ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶಿಲಾನ್ಯಾಸ ಮತ್ತುಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

September 17th, 11:19 am

ಮಧ್ಯಪ್ರದೇಶದ ಧಾರ್‌ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಿಲಾನ್ಯಾಸ ನೆರವೇರಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಧಾರ್ ಭೋಜಶಾಲಾದ ಪೂಜ್ಯ ಮಾತೆ ಜ್ಞಾನ ದೇವತೆ ವಾಗ್ದೇವಿಯ ಪಾದಗಳಿಗೆ ನಮಸ್ಕರಿಸಿದರು. ಇಂದು ದೈವಿಕ ವಾಸ್ತುಶಿಲ್ಪಿ ಮತ್ತು ಕೌಶಲ್ಯ ಹಾಗು ಸೃಷ್ಟಿಯ ದೇವತೆಯಾದ ಭಗವಾನ್ ವಿಶ್ವಕರ್ಮರ ಜನ್ಮ ದಿನವಾಗಿದೆ ಎಂದು ಹೇಳಿದ ಶ್ರೀ ಮೋದಿ, ಭಗವಾನ್ ವಿಶ್ವಕರ್ಮರಿಗೆ ನಮನ ಸಲ್ಲಿಸಿದರು. ತಮ್ಮ ಕರಕುಶಲತೆ ಮತ್ತು ಸಮರ್ಪಣೆಯ ಮೂಲಕ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿರುವ ಕೋಟ್ಯಂತರ ಸಹೋದರ ಸಹೋದರಿಯರಿಗೆ ಅವರು ಗೌರವ ಸಲ್ಲಿಸಿದರು.

ಭಾರತ್ ಟೆಕ್ಸ್ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣದ ಕನ್ನಡ ಅನುವಾದ

February 16th, 04:15 pm

ಭಾರತ್‌ ಮಂಟಪ್‌ ಇಂದು 2ನೇ ಆವೃತ್ತಿಯ ಭಾರತ್‌ ಟೆಕ್ಸ್‌ ಗೆ ಆತಿಥ್ಯವಹಿಸುತ್ತಿದೆ. ಈ ಕಾರ್ಯಕ್ರಮವು ನಮ್ಮ ಪರಂಪರೆಯ ಸಂಭ್ರಮಾಚರಣೆ ಮಾತ್ರವಲ್ಲ, ವಿಕಸಿತ ಭಾರತ(ಅಭಿವೃದ್ಧಿ ಹೊಂದಿದ ಭಾರತ)ದ ವಿಪುಲ ಸಾದ್ಯತೆಗಳನ್ನು ಪ್ರತಿಬಿಂಬಿಸುತ್ತದೆ. ನಾವು ನೆಟ್ಟ ಬೀಜವು ಈಗ ವೇಗವಾಗಿ ಬೃಹತ್ ಆಲದ ಮರವಾಗಿ ಬೆಳೆಯುತ್ತಿರುವುದು ರಾಷ್ಟ್ರಕ್ಕೆ ಅಪಾರ ಸಂತೋಷದ ವಿಷಯ. ಭಾರತ್ ಟೆಕ್ಸ್ ಪ್ರಮುಖ ಜಾಗತಿಕ ಜವಳಿ ಕಾರ್ಯಕ್ರಮವಾಗಿ ವಿಕಸನಗೊಳ್ಳುತ್ತಿದೆ. ಈ ಬಾರಿ, ಮೌಲ್ಯ ಚಿತ್ರಪಟಲವನ್ನು ಸಂಪೂರ್ಣವಾಗಿ ಪ್ರತಿನಿಧಿಸಲಾಗುತ್ತದೆ, ಇದರಲ್ಲಿ 12 ಸಂಬಂಧಿತ ಗುಂಪುಗಳು ಒಟ್ಟಾಗಿ ಭಾಗವಹಿಸುತ್ತವೆ. ಹೆಚ್ಚುವರಿಯಾಗಿ, ಪರಿಕರಗಳು, ಉಡುಪುಗಳು, ಯಂತ್ರೋಪಕರಣಗಳು, ರಾಸಾಯನಿಕಗಳು ಮತ್ತು ಬಣ್ಣಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿದೆ. ಪ್ರಪಂಚದಾದ್ಯಂತದ ನೀತಿ ನಿರೂಪಕರು, ಸಿಇಒಗಳು ಮತ್ತು ಉದ್ಯಮ ನಾಯಕರ ನಡುವಿನ ಒಳಗೊಳ್ಳುವಿಕೆ, ಸಹಯೋಗ ಮತ್ತು ಪಾಲುದಾರಿಕೆಗೆ ಭಾರತ್ ಟೆಕ್ಸ್ ಒಂದು ಪ್ರಬಲ ವೇದಿಕೆಯಾಗಿ ಹೊರಹೊಮ್ಮುತ್ತಿದೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಎಲ್ಲಾ ಪಾಲುದಾರರ ಬದ್ಧತೆಯ ಪ್ರಯತ್ನಗಳು ನಿಜಕ್ಕೂ ಶ್ಲಾಘನೀಯ ಮತ್ತು ಇದರಲ್ಲಿ ಭಾಗಿಯಾಗಿರುವ ಎಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ

ಭಾರತ್‌ ಟೆಕ್ಸ್ 2025 ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

February 16th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಭಾರತ್ ಮಂಟಪದಲ್ಲಿ ಭಾರತ್ ಟೆಕ್ಸ್‌ 2025 ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಅವರು ವಸ್ತುಪ್ರದರ್ಶನಕ್ಕೆ ಭೇಟಿ ನೀಡಿ ಮಳಿಗೆಗಳನ್ನು ವೀಕ್ಷಿಸಿದರು. ನಂತರ ನೆರದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲರನ್ನೂ ಭಾರತ್‌ ಟೆಕ್ಸ್‌ 2025ಗೆ ಸ್ವಾಗತಿಸಿದರು ಮತ್ತು ಭಾರತ್‌ ಮಂಟಪ್‌ 2ನೇ ಆವೃತ್ತಿಯ ಭಾರತ್‌ ಟೆಕ್ಸ್‌ ಗೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಈ ಕಾರ್ಯಕ್ರಮವು ನಮ್ಮ ಪರಂಪರೆಯ ಬಗ್ಗೆ ಮತ್ತು ಭಾರತಕ್ಕೆ ಹೆಮ್ಮೆಯ ವಿಷಯವಾಗಿದ್ದ ವಿಕಸಿತ ಭಾರತದ ಭವಿಷ್ಯದ ಬಗ್ಗೆ ಒಂದು ಒಳನೋಟವನ್ನು ನೀಡಿತು ಎಂದು ಅವರು ಹೇಳಿದರು. ಭಾರತ್ ಟೆಕ್ಸ್ ಈಗ ಬೃಹತ್ ಜಾಗತಿಕ ಜವಳಿ ಕಾರ್ಯಕ್ರಮವಾಗುತ್ತಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಮೌಲ್ಯ ಸರಣಿಯ ಚಿತ್ರಪಟಲಕ್ಕೆ ಸಂಬಂಧಿಸಿದ ಎಲ್ಲಾ ಹನ್ನೆರಡು ಸಮುದಾಯಗಳು ಈ ಬಾರಿ ಕಾರ್ಯಕ್ರಮದ ಭಾಗವಾಗಿವೆ ಎಂದು ಅವರು ಹೇಳಿದರು. ಪರಿಕರಗಳು, ಉಡುಪುಗಳು, ಯಂತ್ರೋಪಕರಣಗಳು, ರಾಸಾಯನಿಕಗಳು ಮತ್ತು ಬಣ್ಣಗಳ ಪ್ರದರ್ಶನಗಳು ಸಹ ಇದ್ದವು ಎಂದು ಅವರು ಹೇಳಿದರು. ನೀತಿ ನಿರೂಪಕರು, ಸಿಇಒಗಳು ಮತ್ತು ಉದ್ಯಮದ ನಾಯಕರಿಗೆ ಭಾರತ್ ಟೆಕ್ಸ್ ತೊಡಗಿಸಿಕೊಳ್ಳುವಿಕೆ, ಸಹಯೋಗ ಮತ್ತು ಪಾಲುದಾರಿಕೆಗೆ ಬಲವಾದ ವೇದಿಕೆಯಾಗುತ್ತಿದೆ ಎಂದು ಪ್ರಧಾನಿ ಬಲವಾಗಿ ಪ್ರತಿಪಾದಿಸಿದರು.

ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ 'ಪಿಎಂ ವಿಶ್ವಕರ್ಮ' ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 20th, 11:45 am

2 ದಿನಗಳ ಹಿಂದೆಯಷ್ಟೇ ವಿಶ್ವಕರ್ಮ ಜಯಂತಿ ಆಚರಿಸಿದ್ದೆವು. ಇಂದು ನಾವು ವಾರ್ಧಾದ ಪವಿತ್ರ ಭೂಮಿಯಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಯಶಸ್ಸನ್ನು ಆಚರಿಸುತ್ತಿದ್ದೇವೆ. 1932ರ ಇದೇ ದಿನದಂದು ಮಹಾತ್ಮ ಗಾಂಧೀಜಿ ಅವರು ಅಸ್ಪೃಶ್ಯತೆಯ ವಿರುದ್ಧ ತಮ್ಮ ಅಭಿಯಾನ ಆರಂಭಿಸಿದ್ದರು ಎಂಬುದು ಇಂದಿನ ವಿಶೇಷ. ಈ ಹಿನ್ನೆಲೆಯಲ್ಲಿ ವಿನೋಬಾ ಭಾವೆ ಅವರ ಪುಣ್ಯಭೂಮಿ, ಮಹಾತ್ಮ ಗಾಂಧಿ ಅವರ ‘ಕರ್ಮಭೂಮಿ’ ಮತ್ತು ವಾರ್ಧಾ ಭೂಮಿಯಲ್ಲಿ ವಿಶ್ವಕರ್ಮ ಯೋಜನೆಯ 1 ವರ್ಷದ ಸಂಭ್ರಮಾಚರಣೆಯು ನಮ್ಮ ‘ವಿಕಸಿತ ಭಾರತ’(ಅಭಿವೃದ್ಧಿ ಹೊಂದಿದ ಭಾರತ)ದ ಸಂಕಲ್ಪಕ್ಕೆ ಹೊಸ ಚೈತನ್ಯ ನೀಡುವ ಸಾಧನೆ ಮತ್ತು ಸ್ಫೂರ್ತಿಯ ಸಂಗಮವಾಗಿದೆ. ವಿಶ್ವಕರ್ಮ ಯೋಜನೆ ಮೂಲಕ ನಾವು ಶ್ರಮದ ಮೂಲಕ ಸಮೃದ್ಧಿ ಮತ್ತು ಕೌಶಲ್ಯದ ಮೂಲಕ ಉತ್ತಮ ಭವಿಷ್ಯದ ಬದ್ಧತೆ ಹೊಂದಿದ್ದೇವೆ. ವಾರ್ಧಾದಲ್ಲಿ ಬಾಪು ಅವರ ಸ್ಫೂರ್ತಿಗಳು ಈ ಬದ್ಧತೆಗಳನ್ನು ಪೂರೈಸಲು ನಮಗೆ ಸಹಾಯ ಮಾಡುತ್ತದೆ. ಈ ಉಪಕ್ರಮಕ್ಕೆ ಸಂಬಂಧಿಸಿದ ಎಲ್ಲರಿಗೂ ಮತ್ತು ದೇಶಾದ್ಯಂತದ ಎಲ್ಲಾ ಫಲಾನುಭವಿಗಳಿಗೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

September 20th, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾರ್ಧಾದಲ್ಲಿ ರಾಷ್ಟ್ರೀಯ ಪ್ರಧಾನಮಂತ್ರಿ ವಿಶ್ವಕರ್ಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ‘ಆಚಾರ್ಯ ಚಾಣಕ್ಯ ಕೌಶಲ್ಯ ಅಭಿವೃದ್ಧಿ’ಯೋಜನೆ ಮತ್ತು ‘ಪುಣ್ಯಶ್ಲೋಕ ಅಹಲ್ಯಾದೇವಿ ಹೋಳ್ಕರ್ ಮಹಿಳಾ ಸ್ಟಾರ್ಟಪ್ ಯೋಜನೆʼಗೆ ಚಾಲನೆ ನೀಡಿದರು. ಪ್ರಧಾನಮಂತ್ರಿ ವಿಶ್ವಕರ್ಮ ಫಲಾನುಭವಿಗಳಿಗೆ ಪ್ರಮಾಣಪತ್ರಗಳು ಮತ್ತು ಸಾಲಗಳನ್ನು ಬಿಡುಗಡೆ ಮಾಡಿದರು ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಒಂದು ವರ್ಷದ ಪ್ರಗತಿಯನ್ನು ಗುರುತಿಸುವ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಿದರು. ಮಹಾರಾಷ್ಟ್ರದ ಅಮರಾವತಿಯಲ್ಲಿ ಪ್ರಧಾನಮಂತ್ರಿ ಮೆಗಾ ಇಂಟಿಗ್ರೇಟೆಡ್ ಟೆಕ್ಸ್‌ಟೈಲ್ ರೀಜನ್‌ ಅಂಡ್‌ ಅಪಾರಲ್ (ಪಿಎಂ ಮಿತ್ರಾ) ಪಾರ್ಕ್‌ ಗೆ ಶ್ರೀ ಮೋದಿಯವರು ಶಂಕುಸ್ಥಾಪನೆ ಮಾಡಿದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನವನ್ನು ಪ್ರಧಾನಿಯವರು ವೀಕ್ಷಿಸಿದರು.