ಹೈದರಾಬಾದ್‌ನಲ್ಲಿ ಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾದ ಸೌಲಭ್ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ

November 26th, 10:10 am

ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಜಿ, ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಜಿ, ಸಫ್ರಾನ್ ಗ್ರೂಪ್‌ನೊಂದಿಗೆ ಸಂಬಂಧ ಹೊಂದಿರುವ ಎಲ್ಲಾ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೈದರಾಬಾದ್‌ನಲ್ಲಿ ‘ಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು

November 26th, 10:00 am

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ʻಜಿಎಂಆರ್ ಏರೋಸ್ಪೇಸ್ ಮತ್ತು ಇಂಡಸ್ಟ್ರಿಯಲ್ ಪಾರ್ಕ್ʼ – ವಿಶೇಷ ಆರ್ಥಿಕ ವಲಯದಲ್ಲಿರುವ ʻಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದಿನಿಂದ ಭಾರತದ ವಿಮಾನಯಾನ ಕ್ಷೇತ್ರವು ಹೊಸ ಎತ್ತರಕ್ಕೆ ತಲುಪುತ್ತಿದೆ. ʻಸಫ್ರಾನ್ʼ ಸಂಸ್ಥೆಯ ಹೊಸ ಘಟಕವು ಭಾರತವನ್ನು ಜಾಗತಿಕ ʻನಿರ್ವಹಣೆ, ದುರಸ್ತಿ ಮತ್ತು ಕೂಲಂಕಷ ಪರೀಕ್ಷೆʼ(ಎಂಆರ್‌ಒ) ಕೇಂದ್ರವಾಗಿ ನೆಲೆಗೊಳಿಸಲು ಸಹಾಯ ಮಾಡುತ್ತದೆ,ʼʼ ಎಂದು ಹೇಳಿದರು. ಈ ʻಎಂಆರ್‌ಒʼ ಘಟಕವು ಅತ್ಯಾಧುನಿಕ ವಿಮಾನಯಾನ ಕ್ಷೇತ್ರದಲ್ಲಿ ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ನವೆಂಬರ್ 24 ರಂದು ʻಸಫ್ರಾನ್ʼ ಆಡಳಿತ ಮಂಡಳಿಯ ಜೊತೆಗಿನ ತಮ್ಮ ಭೇಟಿಯನ್ನು ಪ್ರಧಾನಮಂತ್ರಿ ಸ್ಮರಿಸಿದರು. ಈ ಹಿಂದೆಯೂ ಆಡಳಿತ ಮಂಡಳಿ ಜೊತೆಗಿನ ಪ್ರತಿಯೊಂದು ಚರ್ಚೆಯಲ್ಲೂ ಭಾರತದ ಬಗ್ಗೆ ಸಂಸ್ಥೆಯ ವಿಶ್ವಾಸ ಮತ್ತು ಭರವಸೆಯನ್ನು ತಾವು ನೋಡಿರುವುದಾಗಿ ಮೋದಿ ಹೇಳಿದರು. ಭಾರತದಲ್ಲಿ ʻಸಫ್ರಾನ್ʼನ ಹೂಡಿಕೆಯು ಅದೇ ವೇಗದಲ್ಲಿ ಮುಂದುವರಿಯುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಈ ಹೊಸ ಘಟಕದ ಉದ್ಘಾಟನೆಗಾಗಿ ʻಸಫ್ರಾನ್ʼ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ಮೋದಿ ಅವರು ತಮ್ಮ ಶುಭಾಶಯ ಕೋರಿದರು.

ಮುಂಬೈನಲ್ಲಿ ನಡೆದ 'ಕಡಲಯಾನ ನಾಯಕರ ಸಮಾವೇಶ'ದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 29th, 04:09 pm

ಮಹಾರಾಷ್ಟ್ರದ ರಾಜ್ಯಪಾಲರಾದ ಆಚಾರ್ಯ ದೇವವ್ರತ್ ಅವರೇ, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಸರ್ಬಾನಂದ ಸೋನೊವಾಲ್ ಅವರೇ, ಶಂತನು ಠಾಕೂರ್ ಅವರೇ ಮತ್ತು ಕೀರ್ತಿವರ್ಧನ್ ಸಿಂಗ್ ಅವರೇ, ಮಹಾರಾಷ್ಟ್ರದ ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಅವರೇ ಮತ್ತು ಅಜಿತ್ ಪವಾರ್ ಅವರೇ, ಸಮುದ್ರಯಾನ ಮತ್ತು ಇತರ ಉದ್ಯಮಗಳ ಪ್ರಮುಖರೇ, ಇತರ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು

October 29th, 04:08 pm

ಇಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದ ಇಂಡಿಯಾ ಮ್ಯಾರಿಟೈಮ್ ವೀಕ್ 2025ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಡಲ ನಾಯಕರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು ಮತ್ತು ಜಾಗತಿಕ ಕಡಲ ಸಿಇಒ ವೇದಿಕೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ಕಡಲ ನಾಯಕರ ಸಮಾವೇಶಕ್ಕೆ ಆಗಮಿಸಿದ ಎಲ್ಲರನ್ನೂ ಸ್ವಾಗತಿಸಿದರು. ಈ ಕಾರ್ಯಕ್ರಮವು 2016ರಲ್ಲಿ ಮುಂಬೈನಲ್ಲಿ ಪ್ರಾರಂಭವಾಯಿತು ಮತ್ತು ಇದೀಗ ಇದು ಜಾಗತಿಕ ಶೃಂಗಸಭೆಯಾಗಿ ವಿಕಸನಗೊಂಡಿರುವುದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. 85ಕ್ಕೂ ಹೆಚ್ಚು ದೇಶಗಳ ಭಾಗವಹಿಸುವಿಕೆಯು ಬಲವಾದ ಸಂದೇಶವನ್ನು ಕಳುಹಿಸುತ್ತದೆ ಎಂದು ಶ್ರೀ ಮೋದಿ ಬಣ್ಣಿಸಿದರು. ನೌಕಾ ಸಾರಿಗೆ ದಿಗ್ಗಜರ ಸಿಇಒಗಳು, ಸ್ಟಾರ್ಟ್‌ ಅಪ್‌ ಗಳು, ನೀತಿ ನಿರೂಪಕರು ಮತ್ತು ನಾವೀನ್ಯಕಾರರು ಎಲ್ಲರೂ ಈ ಕಾರ್ಯಕ್ರಮದಲ್ಲಿ ಒಗ್ಗೂಡಿರುವುದನ್ನು ಅವರು ಗಮನಿಸಿದರು. ಇದಲ್ಲದೆ, ಸಣ್ಣ ದ್ವೀಪ ರಾಷ್ಟ್ರಗಳ ಪ್ರತಿನಿಧಿಗಳ ಹಾಜರಾತಿಯನ್ನು ಅವರು ಶ್ಲಾಘಿಸಿದರು ಮತ್ತು ಅವರ ಸಾಮೂಹಿಕ ದೃಷ್ಟಿಕೋನವು ಶೃಂಗಸಭೆಯ ಪರಸ್ಪರ ಸಹಕಾರ ಮತ್ತು ಶಕ್ತಿಯನ್ನು ಗಮನಾರ್ಹವಾಗಿ ಹೆಚ್ಚಿಸಿದೆ ಎಂದು ಹೇಳಿದರು.

ನವದೆಹಲಿಯ ಭಾರತ್ ಮಂಟಪದಲ್ಲಿ ವಿಶ್ವ ಆಹಾರ ಭಾರತ - 2025 ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 25th, 06:16 pm

ರಷ್ಯಾದ ಉಪ ಪ್ರಧಾನಮಂತ್ರಿ ಶ್ರೀ ಡಿಮಿಟ್ರಿ ಪತ್ರುಶೇವ್ ಅವರೆ, ನನ್ನ ಸಂಪುಟ ಸಹೋದ್ಯೋಗಿಗಳಾದ ಚಿರಾಗ್ ಪಾಸ್ವಾನ್ ಮತ್ತು ಶ್ರೀ ರವನೀತ್, ಶ್ರೀ ಪ್ರತಾಪರಾವ್ ಜಾಧವ್, ವಿವಿಧ ದೇಶಗಳಿಂದ ಇಲ್ಲಿಗೆ ಬಂದಿರುವ ಸಚಿವರೆ ಮತ್ತು ಪ್ರತಿನಿಧಿಗಳೆ, ಗೌರವಾನ್ವಿತ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ವಿಶ್ವ ಆಹಾರ ಭಾರತ 2025 ನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

September 25th, 06:15 pm

ನವದೆಹಲಿಯ ಭಾರತ್ ಮಂಟಪದಲ್ಲಿ ಇಂದು ನಡೆದ ವರ್ಲ್ಡ್ ಫುಡ್ ಇಂಡಿಯಾ 2025 ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ರೈತರು, ಉದ್ಯಮಿಗಳು, ಹೂಡಿಕೆದಾರರು, ನಾವೀನ್ಯಕಾರರು ಮತ್ತು ಗ್ರಾಹಕರು ಎಲ್ಲರೂ ಒಟ್ಟಾಗಿ ಈ ಕಾರ್ಯಕ್ರಮದಲ್ಲಿ ಹಾಜರಿರುವುದನ್ನು ಗುರುತಿಸಿದರು, ಇದು ವರ್ಲ್ಡ್ ಫುಡ್ ಇಂಡಿಯಾವನ್ನು ಹೊಸ ಪರಿಚಯಗಳು, ಹೊಸ ಸಂಪರ್ಕ ಮತ್ತು ಸೃಜನಶೀಲತೆಯ ವೇದಿಕೆಯನ್ನಾಗಿ ಮಾಡಿವೆ ಎಂದು ಹೇಳಿದರು. ತಾವು ಈಗಷ್ಟೇ ಪ್ರದರ್ಶನಗಳಿಗೆ ಭೇಟಿ ನೀಡಿದ್ದನ್ನು ಹಂಚಿಕೊಂಡ ಅವರು, ಪ್ರಾಥಮಿಕ ಗಮನವು ಪೌಷ್ಟಿಕಾಂಶ, ತೈಲ ಬಳಕೆ ಕಡಿಮೆ ಮಾಡುವುದು ಮತ್ತು ಪ್ಯಾಕೇಜ್ ಮಾಡಿದ ಉತ್ಪನ್ನಗಳಲ್ಲಿ ಆರೋಗ್ಯಕರ ಅಂಶಗಳನ್ನು ಹೆಚ್ಚಿಸುವುದರ ಬಗ್ಗೆ ಇರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಪ್ರಧಾನಮಂತ್ರಿಯವರು ಅಭಿನಂದನೆಗಳು ಮತ್ತು ಶುಭಾಶಯಗಳನ್ನು ವ್ಯಕ್ತಪಡಿಸಿದರು.

ಭಾರತ-ಜಪಾನ್ ಆರ್ಥಿಕ ವೇದಿಕೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

August 29th, 11:20 am

ನಿಮ್ಮಲ್ಲಿ ಅನೇಕರನ್ನು ನಾನು ವೈಯಕ್ತಿಕವಾಗಿ ಬಲ್ಲೆ. ನಾನು ಗುಜರಾತ್ನಲ್ಲಿದ್ದಾಗ ಆಗಿರಬಹುದು, ಅಥವಾ ದೆಹಲಿಗೆ ಬಂದ ನಂತರವೇ ಆಗಿರಬಹುದು, ನಿಮ್ಮಲ್ಲಿ ಅನೇಕರೊಂದಿಗೆ ನನಗೆ ನಿಕಟವಾದ ಸಂಪರ್ಕವಿದೆ. ಇಂದು ನಿಮ್ಮೆಲ್ಲರನ್ನೂ ಭೇಟಿಯಾಗುವ ಈ ಅವಕಾಶ ಸಿಕ್ಕಿದ್ದಕ್ಕೆ ನನಗೆ ನಿಜಕ್ಕೂ ಬಹಳ ಸಂತೋಷವಾಗಿದೆ.

ʻಭಾರತ-ಜಪಾನ್ ಆರ್ಥಿಕ ವೇದಿಕೆʼಯಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

August 29th, 11:02 am

ಈ ವೇಳೆ ಪ್ರಧಾನಮಂತ್ರಿಯವರು ತಮ್ಮ ಭಾಷಣದಲ್ಲಿ, ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಬಗ್ಗೆ, ಅದರಲ್ಲೂ ವಿಶೇಷವಾಗಿ ಹೂಡಿಕೆ, ಉತ್ಪಾದನೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಯೋಗದ ಯಶಸ್ಸನ್ನು ಒತ್ತಿ ಹೇಳಿದರು. ಭಾರತದಲ್ಲಿ ತಮ್ಮ ಹೆಜ್ಜೆಗುರುತನ್ನು ಮತ್ತಷ್ಟು ಹೆಚ್ಚಿಸಲು ಜಪಾನಿನ ಕಂಪನಿಗಳನ್ನು ಆಹ್ವಾನಿಸಿದ ಅವರು, ಭಾರತದ ಬೆಳವಣಿಗೆಯ ಯಶೋಗಾಥೆಯು ಆ ಕಂಪನಿಗಳಿಗೆ ಅತ್ಯಾಕರ್ಷಕ ಅವಕಾಶಗಳನ್ನು ಒದಗಿಸುತ್ತದೆ ಎಂದರು. ಪ್ರಸ್ತುತ ಪ್ರಕ್ಷುಬ್ಧ ಜಾಗತಿಕ ಆರ್ಥಿಕ ಸನ್ನಿವೇಶದ ಹಿನ್ನೆಲೆಯಲ್ಲಿ ವಿಶ್ವಾಸಾರ್ಹ ಸ್ನೇಹಿತರ ನಡುವಿನ ಆಳವಾದ ಆರ್ಥಿಕ ಸಹಭಾಗಿತ್ವವು ಅತ್ಯಂತ ಪ್ರಸ್ತುತವಾಗಿದೆ ಎಂದು ಅವರು ಹೇಳಿದರು. ರಾಜಕೀಯ ಸ್ಥಿರತೆ, ನೀತಿ ಮುಂಗಾಣಿಕೆ, ಸುಧಾರಣೆಗಳಿಗೆ ಬದ್ಧತೆ ಮತ್ತು ಸುಗಮ ವ್ಯಾಪಾರ ಪ್ರಯತ್ನಗಳು ಭಾರತೀಯ ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಹೊಸ ವಿಶ್ವಾಸವನ್ನು ನೀಡಿವೆ ಎಂದು ಪ್ರಧಾನಿ ಒತ್ತಿ ಹೇಳಿದರು. ಜಾಗತಿಕ ಸಂಸ್ಥೆಗಳು ಇತ್ತೀಚೆಗೆ ಭಾರತದ ಕ್ರೆಡಿಟ್ ರೇಟಿಂಗ್ ಅನ್ನು ಮೇಲ್ದರ್ಜೆಗೆ ಏರಿಸಿರುವುದು ಈ ವಿಶ್ವಾಸವನ್ನು ಸೂಚಿಸುತ್ತದೆ ಎಂದು ಅವರು ಹೇಳಿದರು.

ಎಕನಾಮಿಕ್ ಟೈಮ್ಸ್ ಜಾಗತಿಕ ನಾಯಕರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 23rd, 10:10 pm

ಜಾಗತಿಕ(ವಿಶ್ವ) ನಾಯಕರ ವೇದಿಕೆಗೆ ಆಗಮಿಸಿರುವ ಎಲ್ಲ ಗೌರವಾನ್ವಿತ ಅತಿಥಿಗಳನ್ನು ನಾನು ಸ್ವಾಗತಿಸುತ್ತೇನೆ. ಈ ವೇದಿಕೆಯ ಸಮಯವು ತುಂಬಾ ಪರಿಪೂರ್ಣವಾಗಿದೆ, ಆದ್ದರಿಂದ ನಾನು ಅದನ್ನು ಪ್ರಶಂಸಿಸುತ್ತೇನೆ. ಕಳೆದ ವಾರವಷ್ಟೇ ನಾನು ಕೆಂಪು ಕೋಟೆಯಿಂದ ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಮಾತನಾಡಿದ್ದೆ, ಈಗ ಈ ವೇದಿಕೆ ಆ ಉತ್ಸಾಹದಲ್ಲಿ ಶಕ್ತಿ ಗುಣಕವಾಗಿ ಕಾರ್ಯ ನಿರ್ವಹಿಸುತ್ತಿದೆ.

ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

August 23rd, 05:43 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ಎಕನಾಮಿಕ್ ಟೈಮ್ಸ್ ವರ್ಲ್ಡ್ ಲೀಡರ್ಸ್ ಫೋರಂ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ, ಪ್ರಧಾನಮಂತ್ರಿ ಅವರು ವರ್ಲ್ಡ್ ಲೀಡರ್ ಫೋರಂನಲ್ಲಿ ಭಾಗವಹಿಸಿದ್ದ ಎಲ್ಲಾ ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಈ ವೇದಿಕೆಯ ಸಮಯ ಅತ್ಯಂತ ಸೂಕ್ತವಾಗಿದೆ ಎಂದು ಅಭಿಪ್ರಾಯಪಟ್ಟ ಶ್ರೀ ಮೋದಿ ಅವರು, ಈ ಸಕಾಲಿಕ ಉಪಕ್ರಮಕ್ಕಾಗಿ ಆಯೋಜಕರನ್ನು ಶ್ಲಾಘಿಸಿದರು.ಕಳೆದ ವಾರವಷ್ಟೇ, ಮುಂದಿನ ಪೀಳಿಗೆಯ ಸುಧಾರಣೆಗಳ ಬಗ್ಗೆ ಕೆಂಪು ಕೋಟೆಯಿಂದ ಮಾತನಾಡಿದ ಅವರು, ಈ ವೇದಿಕೆ ಈಗ ಆ ಚೈತನ್ಯಕ್ಕೆ ಶಕ್ತಿ ವರ್ಧಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ರೋಜ್‌ಗಾರ್ ಮೇಳದ ಅಡಿಯಲ್ಲಿ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳ ವಿತರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಅವತರಣಿಕೆ

July 12th, 11:30 am

ಕೇಂದ್ರ ಸರ್ಕಾರದಲ್ಲಿ ಯುವಜನರಿಗೆ ಶಾಶ್ವತ ಉದ್ಯೋಗಗಳನ್ನು ಒದಗಿಸುವ ನಮ್ಮ ಅಭಿಯಾನವು ಸ್ಥಿರವಾಗಿ ಮುಂದುವರಿಯುತ್ತಿದೆ. ಮತ್ತು ನಾವು ಇದಕ್ಕೆ ಹೆಸರುವಾಸಿಯಾಗಿದ್ದೇವೆ - ಯಾವುದೇ ಶಿಫಾರಸು ಇಲ್ಲ, ಭ್ರಷ್ಟಾಚಾರವಿಲ್ಲ. ಇಂದು, 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ನೀಡಲಾಗಿದೆ. ಲಕ್ಷಾಂತರ ಯುವಜನರು ಈಗಾಗಲೇ ಇಂತಹ ರೋಜ್‌ಗಾರ್ ಮೇಳಗಳ (ಉದ್ಯೋಗ ಮೇಳಗಳು) ಮೂಲಕ ಭಾರತ ಸರ್ಕಾರದಲ್ಲಿ ಶಾಶ್ವತ ಉದ್ಯೋಗಗಳನ್ನು ಪಡೆದುಕೊಂಡಿದ್ದಾರೆ. ಈ ಯುವ ಜನರು ಈಗ ರಾಷ್ಟ್ರ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಇಂದು, ನಿಮ್ಮಲ್ಲಿ ಅನೇಕರು ಭಾರತೀಯ ರೈಲ್ವೆಯಲ್ಲಿ ನಿಮ್ಮ ಜವಾಬ್ದಾರಿಗಳನ್ನು ಪ್ರಾರಂಭಿಸಿದ್ದೀರಿ. ಕೆಲವರು ಈಗ ರಾಷ್ಟ್ರದ ಭದ್ರತೆಯ ರಕ್ಷಕರಾಗುತ್ತಾರೆ, ಅಂಚೆ ಇಲಾಖೆಯಲ್ಲಿ ನೇಮಕಗೊಂಡ ಇತರರು ಪ್ರತಿ ಹಳ್ಳಿಗೆ ಸರ್ಕಾರಿ ಸೇವೆಗಳನ್ನು ತಲುಪಿಸಲು ಸಹಾಯ ಮಾಡುತ್ತಾರೆ, ಕೆಲವರು ಎಲ್ಲರಿಗೂ ಆರೋಗ್ಯ ಮಿಷನ್‌ನ ಕಾಲಾಳುಗಳಾಗುತ್ತಾರೆ, ಅನೇಕ ಯುವ ವೃತ್ತಿಪರರು ಆರ್ಥಿಕ ಸೇರ್ಪಡೆಯನ್ನು ವೇಗಗೊಳಿಸಲು ಸಹಾಯ ಮಾಡುತ್ತಾರೆ ಮತ್ತು ಇತರರು ಭಾರತದ ಕೈಗಾರಿಕಾ ಅಭಿವೃದ್ಧಿಯನ್ನು ಮುಂದಕ್ಕೆ ಕೊಂಡೊಯ್ಯುತ್ತಾರೆ. ನಿಮ್ಮ ಇಲಾಖೆಗಳು ವಿಭಿನ್ನವಾಗಿರಬಹುದು, ಆದರೆ ಗುರಿ ಒಂದೇ ಆಗಿರುತ್ತದೆ. ಮತ್ತು ಆ ಗುರಿ ಏನು? ನಾವು ಇದನ್ನು ಮತ್ತೆ ಮತ್ತೆ ನೆನಪಿನಲ್ಲಿಟ್ಟುಕೊಳ್ಳಬೇಕು: ಇಲಾಖೆ, ಕಾರ್ಯ, ಸ್ಥಾನ ಅಥವಾ ಪ್ರದೇಶ ಏನೇ ಇರಲಿ - ಒಂದೇ ಮತ್ತು ಏಕೈಕ ಗುರಿ ರಾಷ್ಟ್ರಕ್ಕೆ ಸೇವೆ. ಮಾರ್ಗದರ್ಶಿ ತತ್ವ ಯಾವುದೆಂದರೆ : ನಾಗರಿಕ ಮೊದಲು. ದೇಶದ ಜನರಿಗೆ ಸೇವೆ ಸಲ್ಲಿಸಲು ನಿಮಗೆ ಉತ್ತಮ ವೇದಿಕೆ ನೀಡಲಾಗಿದೆ. ಜೀವನದ ಇಂತಹ ಮಹತ್ವದ ಹಂತದಲ್ಲಿ ಈ ದೊಡ್ಡ ಯಶಸ್ಸನ್ನು ಸಾಧಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ. ನಿಮ್ಮ ವೃತ್ತಿಜೀವನದ ಈ ಹೊಸ ಪ್ರಯಾಣಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು

July 12th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭದ ದಿನವಾಗಿದೆ ಎಂದು ಹೇಳಿದರು. ವಿವಿಧ ಇಲಾಖೆಗಳಲ್ಲಿ ತಮ್ಮ ಸೇವೆಗಳನ್ನು ಪ್ರಾರಂಭಿಸಿದ ಯುವಜನರನ್ನು ಅವರು ಅಭಿನಂದಿಸಿದರು ಮತ್ತು ವಿಭಿನ್ನ ಪಾತ್ರಗಳ ಹೊರತಾಗಿಯೂ, ಅವರ ಸಾಮಾನ್ಯ ಗುರಿ ನಾಗರಿಕ ಮೊದಲು ಎಂಬ ತತ್ವದಿಂದ ಮಾರ್ಗದರ್ಶಿಸಲ್ಪಟ್ಟ ರಾಷ್ಟ್ರ ಸೇವೆಯಾಗಿದೆ ಎಂದು ಹೇಳಿದರು.

ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವಿಶ್ವ ವಾಯು ಸಾರಿಗೆ ಶೃಂಗಸಭೆಯ ಸರ್ವಸದಸ್ಯರ(ಸಮಗ್ರ) ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 02nd, 05:34 pm

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮ್ ಮೋಹನ್ ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಐಎಟಿಎ ಆಡಳಿತ ಮಂಡಳಿಯ ಅಧ್ಯಕ್ಷ ಪೀಟರ್ ಎಲ್ಬರ್ಸ್ ಜಿ, ಐಎಟಿಎ ಮಹಾನಿರ್ದೇಶಕ ವಿಲ್ಲಿ ವಾಲ್ಷ್ ಜಿ, ಇಂಡಿಗೊ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಭಾಟಿಯಾ ಜಿ, ಇತರೆ ಎಲ್ಲ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐಎಟಿಎಯ 81ನೇ ವಾರ್ಷಿಕ ಸಾಮಾನ್ಯ ಸಭೆ ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ ಪೂರ್ಣ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು

June 02nd, 05:00 pm

ವಿಶ್ವದರ್ಜೆಯ ವಾಯು ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ (ಐಎಟಿಎ) 81ನೇ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ (ವ್ಯಾಟ್ಸ್) ಪೂರ್ಣ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಅತಿಥಿಗಳನ್ನು ಸ್ವಾಗತಿಸಿದರು, ನಾಲ್ಕು ದಶಕಗಳ ನಂತರ ಭಾರತಕ್ಕೆ ಮರಳುತ್ತಿರುವ ಈ ಕಾರ್ಯಕ್ರಮದ ಮಹತ್ವವನ್ನು ಒತ್ತಿ ಹೇಳಿದರು. ಈ ಅವಧಿಯಲ್ಲಿ ಭಾರತವು ಅನುಭವಿಸಿದ ಪರಿವರ್ತನಾತ್ಮಕ ಬದಲಾವಣೆಗಳನ್ನು ಒತ್ತಿ ಹೇಳಿದ ಅವರು, ಇಂದಿನ ಭಾರತವು ಹಿಂದೆಂದಿಗಿಂತಲೂ ಹೆಚ್ಚು ವಿಶ್ವಾಸ ಹೊಂದಿದೆ ಎಂದರು. ಜಾಗತಿಕ ವಾಯುಯಾನ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪಾತ್ರವನ್ನು ಅವರು ಪ್ರತಿಪಾದಿಸಿದರು. ಜತೆಗೆ ಇದು ವಿಶಾಲ ಮಾರುಕಟ್ಟೆಯಾಗಿ ಮಾತ್ರವಲ್ಲದೆ ನೀತಿ ನಾಯಕತ್ವ, ನಾವೀನ್ಯತೆ ಮತ್ತು ಅಂತರ್ಗತ ಅಭಿವೃದ್ಧಿಯ ಸಂಕೇತವಾಗಿದೆ ಎಂದರು. ಇಂದು, ಭಾರತವು ಬಾಹ್ಯಾಕಾಶ-ವಾಯುಯಾನ ಸಂಯೋಜನೆಯಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿ, ನಾಗರಿಕ ವಿಮಾನಯಾನ ಕ್ಷೇತ್ರವು ಕಳೆದ ದಶಕದಲ್ಲಿ ಐತಿಹಾಸಿಕ ಪ್ರಗತಿಗೆ ಸಾಕ್ಷಿಯಾಗಿದೆ, ಅವು ಚೆನ್ನಾಗಿ ಗುರುತಿಸಲ್ಪಟ್ಟಿವೆ ಎಂದರು.

ಎಬಿಪಿ ನೆಟ್‌ವರ್ಕ್ ಇಂಡಿಯಾ@2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 06th, 08:04 pm

ಭಾರತ ಮಂಟಪವು ಇಂದು ಬೆಳಿಗ್ಗೆಯಿಂದ ರೋಮಾಂಚನಕಾರಿ ವೇದಿಕೆಯಾಗಿದೆ. ಕೆಲವೇ ನಿಮಿಷಗಳ ಹಿಂದೆ, ನಿಮ್ಮ ತಂಡವನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿತು. ಈ ಶೃಂಗಸಭೆಯು ವೈವಿಧ್ಯತೆಯಿಂದ ಕೂಡಿದೆ. ಅನೇಕ ಗಣ್ಯರು ಈ ಶೃಂಗಸಭೆಗೆ ಮೆರುಗು ತುಂಬಿದ್ದಾರೆ. ನಿಮ್ಮೆಲ್ಲರ ಅನುಭವ ಶ್ರೀಮಂತವಾಗಿದೆ ಎಂದು ನಾನು ನಂಬಿದ್ದೇನೆ. ಈ ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ದೊಡ್ಡ ಉಪಸ್ಥಿತಿಯು ಒಂದು ರೀತಿಯಲ್ಲಿ ವಿಶಿಷ್ಟ ಲಕ್ಷಣವಾಗಿದೆ. ವಿಶೇಷವಾಗಿ, ನಮ್ಮ ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಅನುಭವಗಳು - ನಾನು ಈಗ ಈ ಎಲ್ಲರನ್ನೂ ಭೇಟಿಯಾದಾಗ, ಅವರು ತಮ್ಮ ಕಥೆಗಳನ್ನು ಹಂಚಿಕೊಳ್ಳುತ್ತಿದ್ದ ಉತ್ಸಾಹವನ್ನು ನಾನು ನೋಡಿದೆ. ಅವರ ಪ್ರತಿಯೊಂದು ಸಂಭಾಷಣೆಯೂ ನೆನಪಾಗುತ್ತಿದೆ. ಇದು ನಿಜಕ್ಕೂ ಸ್ಫೂರ್ತಿದಾಯಕವಾಗಿದೆ.

ಎಬಿಪಿ ನೆಟ್‌ವರ್ಕ್ ಇಂಡಿಯಾ @ 2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

May 06th, 08:00 pm

ನವದೆಹಲಿಯ ಭಾರತ ಮಂಟಪದಲ್ಲಿಂದು ನಡೆದ ಎಬಿಪಿ ನೆಟ್‌ವರ್ಕ್ ಇಂಡಿಯಾ@2047 ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ ಮಾಡಿದರು. ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ಇಂದು ಬೆಳಗ್ಗೆಯಿಂದಲೂ ಗದ್ದಲದಿಂದ ಕೂಡಿದೆ. ಸಂಘಟನಾ ತಂಡದೊಂದಿಗಿನ ತಮ್ಮ ಸಂವಾದವನ್ನು ಪ್ರಸ್ತಾಪಿಸಿದ ಅವರು, ಶೃಂಗಸಭೆಯ ಶ್ರೀಮಂತ ವೈವಿಧ್ಯತೆಯನ್ನು ಶ್ಲಾಘಿಸಿದರು. ಕಾರ್ಯಕ್ರಮದ ಚೈತನ್ಯಕ್ಕೆ ಕೊಡುಗೆ ನೀಡಿದ ಹಲವಾರು ಗಣ್ಯ ವ್ಯಕ್ತಿಗಳ ಭಾಗವಹಿಸಿದ್ದಾರೆ. ಇಲ್ಲಿ ನೆರೆದಿರುವ ಎಲ್ಲಾ ಪ್ರತಿನಿಧಿಗಳು ಸಕಾರಾತ್ಮಕ ಅನುಭವ ಹೊಂದಿದ್ದಾರೆ. ಶೃಂಗಸಭೆಯಲ್ಲಿ ಯುವಕರು ಮತ್ತು ಮಹಿಳೆಯರ ಗಮನಾರ್ಹ ಉಪಸ್ಥಿತಿ ಇದೆ, ಡ್ರೋನ್ ದೀದಿಗಳು ಮತ್ತು ಲಖ್ಪತಿ ದೀದಿಗಳು ಹಂಚಿಕೊಂಡ ಸ್ಪೂರ್ತಿದಾಯಕ ಅನುಭವಗಳನ್ನು ಶ್ಲಾಘಿಸಿದರು. ಅವರ ಕಥೆಗಳು ಪ್ರೇರಣೆಯ ಮೂಲವಾಗಿ ಕಾರ್ಯ ನಿರ್ವಹಿಸುತ್ತವೆ ಎಂದರು.

ಜಂಟಿ ಹೇಳಿಕೆ: ಭಾರತ-ಯುರೋಪಿಯನ್ ಒಕ್ಕೂಟದ ವ್ಯಾಪಾರ ಮತ್ತು ತಂತ್ರಜ್ಞಾನ ಮಂಡಳಿಯ ಎರಡನೇ ಸಭೆ, ನವದೆಹಲಿ (ಫೆಬ್ರವರಿ 28, 2025)‌

February 28th, 06:25 pm

ಭಾರತ-ಯುರೋಪಿಯನ್ ಒಕ್ಕೂಟದ ವ್ಯಾಪಾರ ಮತ್ತು ತಂತ್ರಜ್ಞಾನ ಮಂಡಳಿಯ (ಟಿಟಿಸಿ) ಎರಡನೇ ಸಭೆಯು ಫೆಬ್ರವರಿ 28, 2025 ರಂದು ನವದೆಹಲಿಯಲ್ಲಿ ನಡೆಯಿತು. ಭಾರತದ ಪರವಾಗಿ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್; ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಸಹ-ಅಧ್ಯಕ್ಷತೆ ವಹಿಸಿದ್ದರು. ಯುರೋಪಿಯನ್ ಒಕ್ಕೂಟದ ಪರವಾಗಿ ತಂತ್ರಜ್ಞಾನ ಸಾರ್ವಭೌಮತ್ವ, ಭದ್ರತೆ ಮತ್ತು ಪ್ರಜಾಪ್ರಭುತ್ವದ ಕಾರ್ಯನಿರ್ವಾಹಕ ಉಪಾಧ್ಯಕ್ಷೆ ಶ್ರೀಮತಿ ಹೆನ್ನಾ ವಿರ್ಕ್ಕುನೆನ್, ವ್ಯಾಪಾರ ಮತ್ತು ಆರ್ಥಿಕ ಭದ್ರತೆ, ಅಂತರ-ಸಾಂಸ್ಥಿಕ ಸಂಬಂಧಗಳು ಮತ್ತು ಪಾರದರ್ಶಕತೆಯ ಆಯುಕ್ತೆ ಶ್ರೀ ಮರೋಸ್ ಸೆಫ್ಕೋವಿಕ್ ಮತ್ತು ಸ್ಟಾರ್ಟ್‌ಅಪ್‌, ಸಂಶೋಧನೆ ಮತ್ತು ನಾವೀನ್ಯತೆ ಆಯುಕ್ತೆ ಶ್ರೀಮತಿ ಎಕಟೆರಿನಾ ಜಹರೈವಾ ಅವರು ಸಹ-ಅಧ್ಯಕ್ಷತೆ ವಹಿಸಿದ್ದರು.

ಭಾರತ್ ಟೆಕ್ಸ್ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣದ ಕನ್ನಡ ಅನುವಾದ

February 16th, 04:15 pm

ಭಾರತ್‌ ಮಂಟಪ್‌ ಇಂದು 2ನೇ ಆವೃತ್ತಿಯ ಭಾರತ್‌ ಟೆಕ್ಸ್‌ ಗೆ ಆತಿಥ್ಯವಹಿಸುತ್ತಿದೆ. ಈ ಕಾರ್ಯಕ್ರಮವು ನಮ್ಮ ಪರಂಪರೆಯ ಸಂಭ್ರಮಾಚರಣೆ ಮಾತ್ರವಲ್ಲ, ವಿಕಸಿತ ಭಾರತ(ಅಭಿವೃದ್ಧಿ ಹೊಂದಿದ ಭಾರತ)ದ ವಿಪುಲ ಸಾದ್ಯತೆಗಳನ್ನು ಪ್ರತಿಬಿಂಬಿಸುತ್ತದೆ. ನಾವು ನೆಟ್ಟ ಬೀಜವು ಈಗ ವೇಗವಾಗಿ ಬೃಹತ್ ಆಲದ ಮರವಾಗಿ ಬೆಳೆಯುತ್ತಿರುವುದು ರಾಷ್ಟ್ರಕ್ಕೆ ಅಪಾರ ಸಂತೋಷದ ವಿಷಯ. ಭಾರತ್ ಟೆಕ್ಸ್ ಪ್ರಮುಖ ಜಾಗತಿಕ ಜವಳಿ ಕಾರ್ಯಕ್ರಮವಾಗಿ ವಿಕಸನಗೊಳ್ಳುತ್ತಿದೆ. ಈ ಬಾರಿ, ಮೌಲ್ಯ ಚಿತ್ರಪಟಲವನ್ನು ಸಂಪೂರ್ಣವಾಗಿ ಪ್ರತಿನಿಧಿಸಲಾಗುತ್ತದೆ, ಇದರಲ್ಲಿ 12 ಸಂಬಂಧಿತ ಗುಂಪುಗಳು ಒಟ್ಟಾಗಿ ಭಾಗವಹಿಸುತ್ತವೆ. ಹೆಚ್ಚುವರಿಯಾಗಿ, ಪರಿಕರಗಳು, ಉಡುಪುಗಳು, ಯಂತ್ರೋಪಕರಣಗಳು, ರಾಸಾಯನಿಕಗಳು ಮತ್ತು ಬಣ್ಣಗಳನ್ನು ಪ್ರದರ್ಶನದಲ್ಲಿ ಇರಿಸಲಾಗಿದೆ. ಪ್ರಪಂಚದಾದ್ಯಂತದ ನೀತಿ ನಿರೂಪಕರು, ಸಿಇಒಗಳು ಮತ್ತು ಉದ್ಯಮ ನಾಯಕರ ನಡುವಿನ ಒಳಗೊಳ್ಳುವಿಕೆ, ಸಹಯೋಗ ಮತ್ತು ಪಾಲುದಾರಿಕೆಗೆ ಭಾರತ್ ಟೆಕ್ಸ್ ಒಂದು ಪ್ರಬಲ ವೇದಿಕೆಯಾಗಿ ಹೊರಹೊಮ್ಮುತ್ತಿದೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಎಲ್ಲಾ ಪಾಲುದಾರರ ಬದ್ಧತೆಯ ಪ್ರಯತ್ನಗಳು ನಿಜಕ್ಕೂ ಶ್ಲಾಘನೀಯ ಮತ್ತು ಇದರಲ್ಲಿ ಭಾಗಿಯಾಗಿರುವ ಎಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ

ಭಾರತ್‌ ಟೆಕ್ಸ್ 2025 ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

February 16th, 04:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿಂದು ಭಾರತ್ ಮಂಟಪದಲ್ಲಿ ಭಾರತ್ ಟೆಕ್ಸ್‌ 2025 ಉದ್ದೇಶಿಸಿ ಮಾತನಾಡಿದರು. ಇದೇ ವೇಳೆ ಅವರು ವಸ್ತುಪ್ರದರ್ಶನಕ್ಕೆ ಭೇಟಿ ನೀಡಿ ಮಳಿಗೆಗಳನ್ನು ವೀಕ್ಷಿಸಿದರು. ನಂತರ ನೆರದಿದ್ದವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲರನ್ನೂ ಭಾರತ್‌ ಟೆಕ್ಸ್‌ 2025ಗೆ ಸ್ವಾಗತಿಸಿದರು ಮತ್ತು ಭಾರತ್‌ ಮಂಟಪ್‌ 2ನೇ ಆವೃತ್ತಿಯ ಭಾರತ್‌ ಟೆಕ್ಸ್‌ ಗೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಈ ಕಾರ್ಯಕ್ರಮವು ನಮ್ಮ ಪರಂಪರೆಯ ಬಗ್ಗೆ ಮತ್ತು ಭಾರತಕ್ಕೆ ಹೆಮ್ಮೆಯ ವಿಷಯವಾಗಿದ್ದ ವಿಕಸಿತ ಭಾರತದ ಭವಿಷ್ಯದ ಬಗ್ಗೆ ಒಂದು ಒಳನೋಟವನ್ನು ನೀಡಿತು ಎಂದು ಅವರು ಹೇಳಿದರು. ಭಾರತ್ ಟೆಕ್ಸ್ ಈಗ ಬೃಹತ್ ಜಾಗತಿಕ ಜವಳಿ ಕಾರ್ಯಕ್ರಮವಾಗುತ್ತಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಮೌಲ್ಯ ಸರಣಿಯ ಚಿತ್ರಪಟಲಕ್ಕೆ ಸಂಬಂಧಿಸಿದ ಎಲ್ಲಾ ಹನ್ನೆರಡು ಸಮುದಾಯಗಳು ಈ ಬಾರಿ ಕಾರ್ಯಕ್ರಮದ ಭಾಗವಾಗಿವೆ ಎಂದು ಅವರು ಹೇಳಿದರು. ಪರಿಕರಗಳು, ಉಡುಪುಗಳು, ಯಂತ್ರೋಪಕರಣಗಳು, ರಾಸಾಯನಿಕಗಳು ಮತ್ತು ಬಣ್ಣಗಳ ಪ್ರದರ್ಶನಗಳು ಸಹ ಇದ್ದವು ಎಂದು ಅವರು ಹೇಳಿದರು. ನೀತಿ ನಿರೂಪಕರು, ಸಿಇಒಗಳು ಮತ್ತು ಉದ್ಯಮದ ನಾಯಕರಿಗೆ ಭಾರತ್ ಟೆಕ್ಸ್ ತೊಡಗಿಸಿಕೊಳ್ಳುವಿಕೆ, ಸಹಯೋಗ ಮತ್ತು ಪಾಲುದಾರಿಕೆಗೆ ಬಲವಾದ ವೇದಿಕೆಯಾಗುತ್ತಿದೆ ಎಂದು ಪ್ರಧಾನಿ ಬಲವಾಗಿ ಪ್ರತಿಪಾದಿಸಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ವಂದನಾ ನಿರ್ಣಯದ ಕುರಿತು ಪ್ರಧಾನಮಂತ್ರಿಯವರ ಉತ್ತರ

February 04th, 07:00 pm

ಗೌರವಾನ್ವಿತ ರಾಷ್ಟ್ರಪತಿಯವರ ಭಾಷಣಕ್ಕೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸಲು ನಾನು ಇಲ್ಲಿ ಹಾಜರಿದ್ದೇನೆ. ನಿನ್ನೆ ಮತ್ತು ಇಂದು ತಡರಾತ್ರಿಯವರೆಗೆ, ಎಲ್ಲಾ ಗೌರವಾನ್ವಿತ ಸಂಸದರು ಈ ಕೃತಜ್ಞತಾ ನಿರ್ಣಯವನ್ನು ತಮ್ಮ ಅಭಿಪ್ರಾಯಗಳಿಂದ ಶ್ರೀಮಂತಗೊಳಿಸಿದರು. ಅನೇಕ ಗೌರವಾನ್ವಿತ ಅನುಭವಿ ಸಂಸದರು ಸಹ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ಸಂಪ್ರದಾಯದಂತೆ, ಅಗತ್ಯವಿದ್ದಲ್ಲಿ ಪ್ರಶಂಸೆ ವ್ಯಕ್ತವಾಯಿತು, ಸಮಸ್ಯೆಗಳಿದ್ದಲ್ಲಿ ಕೆಲವು ಟೀಕೆಗಳೂ ಕೇಳಿಬಂದವು. ಇದು ಸಹಜ. ಸಭಾಧ್ಯಕ್ಷರೇ, ದೇಶದ ಜನತೆ ನನಗೆ ಹದಿನಾಲ್ಕು ಬಾರಿ ಈ ಸ್ಥಾನದಲ್ಲಿ ಕುಳಿತು ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುವ ಅವಕಾಶವನ್ನು ಕರುಣಿಸಿರುವುದು ನನ್ನ ಸೌಭಾಗ್ಯ. ಆದ್ದರಿಂದ, ಇಂದು ನಾನು ಜನತೆಗೆ ಅತ್ಯಂತ ಗೌರವದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೆಯೇ, ಈ ಚರ್ಚೆಯಲ್ಲಿ ಪಾಲ್ಗೊಂಡು ಅದನ್ನು ಶ್ರೀಮಂತಗೊಳಿಸಿದ ಎಲ್ಲರಿಗೂ ನನ್ನ ಕೃತಜ್ಞತೆಗಳು.