ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವಾರ್ಷಿಕೋತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 03:35 pm

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 24ನೇ ಮಹಾಂತರಾದ ಶ್ರೀಮದ್ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಅಶೋಕ್ ಗಜಪತಿ ರಾಜು ಜಿ, ಜನಪ್ರಿಯ ಮುಖ್ಯಮಂತ್ರಿ ಮತ್ತು ಸಹೋದರ ಪ್ರಮೋದ್ ಸಾವಂತ್ ಜಿ, ಮಠ ಸಮಿತಿಯ ಅಧ್ಯಕ್ಷ ಶ್ರೀ ಶ್ರೀನಿವಾಸ ಡೆಂಪೊ ಜಿ, ಉಪಾಧ್ಯಕ್ಷರಾದ ಶ್ರೀ ಆರ್.ಆರ್. ಕಾಮತ್ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಶ್ರೀಪಾದ ನಾಯಕ್ ಜಿ ಮತ್ತು ದಿಗಂಬರ್ ಕಾಮತ್ ಜಿ ಮತ್ತು ಇಲ್ಲಿರುವ ಇತರೆ ಎಲ್ಲಾ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ,

ಗೋವಾದಲ್ಲಿ ನಡೆದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

November 28th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೋವಾದಲ್ಲಿ ನಡೆದ 'ಶ್ರೀ ಸಂಸ್ಥಾನ ಗೋಕರ್ಣ ಪರ್ತಗಳಿ ಜೀವೋತ್ತಮ ಮಠ'ದ 550ನೇ ವರ್ಷದ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ಈ ಪವಿತ್ರ ಸಂದರ್ಭದಲ್ಲಿ ತಮ್ಮ ಮನಸ್ಸು ಅತೀವ ಶಾಂತಿಯಿಂದ ತುಂಬಿದೆ ಎಂದು ಪ್ರಧಾನಮಂತ್ರಿ ಅವರು ಬಣ್ಣಿಸಿದರು. ಸಂತರ ಸಾನ್ನಿಧ್ಯದಲ್ಲಿ ಇರುವುದೇ ಒಂದು ಆಧ್ಯಾತ್ಮಿಕ ಅನುಭವ ಎಂದು ಅವರು ಅಭಿಪ್ರಾಯಪಟ್ಟರು. ಇಲ್ಲಿ ನೆರೆದಿರುವ ಅಪಾರ ಸಂಖ್ಯೆಯ ಭಕ್ತರು, ಈ ಮಠದ ಶತಮಾನಗಳಷ್ಟು ಹಳೆಯದಾದ ಚೈತನ್ಯವನ್ನು ಇನ್ನಷ್ಟು ಹೆಚ್ಚಿಸುತ್ತಿದ್ದಾರೆ ಎಂದು ಹೇಳಿದ ಶ್ರೀ ಮೋದಿ, ಇಂದು ಈ ಸಮಾರಂಭದಲ್ಲಿ ಜನರ ನಡುವೆ ಉಪಸ್ಥಿತರಿರುವುದಕ್ಕೆ ತಾವು ಅತ್ಯಂತ ಭಾಗ್ಯಶಾಲಿ ಎಂದು ಭಾವಿಸುವುದಾಗಿ ತಿಳಿಸಿದರು. ಇಲ್ಲಿಗೆ ಬರುವ ಮುನ್ನ ರಾಮ ಮಂದಿರ ಮತ್ತು ವೀರ ವಿಠಲ ಮಂದಿರಕ್ಕೆ ಭೇಟಿ ನೀಡುವ ಸೌಭಾಗ್ಯ ತಮಗೆ ದೊರೆಯಿತು ಎಂದು ಅವರು ಸ್ಮರಿಸಿದರು. ಅಲ್ಲಿನ ಶಾಂತಿಯುತ ವಾತಾವರಣವು ಈ ಸಮಾರಂಭದ ಆಧ್ಯಾತ್ಮಿಕತೆಯನ್ನು ಇನ್ನಷ್ಟು ಗಾಢವಾಗಿಸಿದೆ ಎಂದು ಅವರು ಹೇಳಿದರು.

ಕರ್ನಾಟಕದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 28th, 11:45 am

ನಾನು ಮಾತು ಆರಂಭಿಸುವ ಮೊದಲು, ಕೆಲವು ಮಕ್ಕಳು ತಮ್ಮ ಚಿತ್ರಕಲೆಗಳನ್ನು ಇಲ್ಲಿಗೆ ತಂದಿದ್ದಾರೆ. ದಯವಿಟ್ಟು ಎಸ್‌ಪಿಜಿ ಮತ್ತು ಸ್ಥಳೀಯ ಪೊಲೀಸರು ಅವುಗಳನ್ನು ಸಂಗ್ರಹಿಸಿ. ನೀವು ನಿಮ್ಮ ವಿಳಾಸವನ್ನು ಹಿಂಭಾಗದಲ್ಲಿ ಬರೆದರೆ, ನಾನು ಖಂಡಿತವಾಗಿಯೂ ನಿಮಗೆ ಧನ್ಯವಾದ ಪತ್ರವನ್ನು ಕಳುಹಿಸುತ್ತೇನೆ. ಯಾರಾದರೂ ಏನನ್ನಾದರೂ ನನಗೆ ತಂದಿದ್ದರೆ, ದಯವಿಟ್ಟು ಭದ್ರತಾ ಸಿಬ್ಬಂದಿಗೆ ನೀಡಿ, ಅವರು ಅದನ್ನು ಸಂಗ್ರಹಿಸುತ್ತಾರೆ, ನೀವು ಆರಾಮವಾಗಿ ಕುಳಿತು ವಿಶ್ರಾಂತಿ ಪಡೆಯಿರಿ. ಈ ಮಕ್ಕಳು ತುಂಬಾ ಕಷ್ಟಪಟ್ಟು ಕೆಲಸ ಮಾಡಿರುತ್ತಾರೆ, ಹಾಗಾಗಿ, ಅವರಿಗೆ ಅನ್ಯಾಯವಾಗಬಾರದು. ಹಾಗೆ ಮಾಡಿದರೆ, ಅದು ನನಗೆ ನೋವುಂಟು ಮಾಡುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ನಾಟಕದ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 28th, 11:30 am

ಕರ್ನಾಟಕದ ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠದಲ್ಲಿ ಇಂದು ನಡೆದ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಭಗವಾನ್ ಶ್ರೀ ಕೃಷ್ಣನ ದಿವ್ಯ ದರ್ಶನದ ತೃಪ್ತಿ, ಶ್ರೀಮದ್ ಭಗವದ್ಗೀತೆಯ ಮಂತ್ರಗಳ ಆಧ್ಯಾತ್ಮಿಕ ಅನುಭವ ಮತ್ತು ಹಲವಾರು ಪೂಜ್ಯ ಸಂತರು ಮತ್ತು ಗುರುಗಳ ಉಪಸ್ಥಿತಿಯು ತಮಗೆ ದೊರೆತ ಪರಮ ಭಾಗ್ಯ. ಇದು ಅಸಂಖ್ಯಾತ ಆಶೀರ್ವಾದಗಳನ್ನು ಪಡೆದಂತೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿ ಅವರು ಗೋವಾದಲ್ಲಿನ ಐರನ್ ಮ್ಯಾನ್ 70.3 ರೀತಿಯ ಕಾರ್ಯಕ್ರಮದಲ್ಲಿ ಯುವಜನರ ಪಾಲ್ಗೊಳ್ಳುವಿಕೆ ಹೆಚ್ಚಾಗಿರುವುದನ್ನು ಸ್ವಾಗತಿಸಿದ್ದಾರೆ

November 09th, 10:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದಲ್ಲಿ ನಡೆದ ಐರನ್ ಮ್ಯಾನ್ 70.3 ರೀತಿಯ ಕಾರ್ಯಕ್ರಮದಲ್ಲಿ ಯುವಜನರು ಹೆಚ್ಚಾಗಿ ಪಾಲ್ಗೊಳ್ಳುತ್ತಿರುವುದನ್ನು ಸ್ವಾಗತಿಸಿದ್ದಾರೆ. ಈ ರೀತಿಯ ಕಾರ್ಯಕ್ರಮಗಳು ಫಿಟ್ ಇಂಡಿಯಾ ಅಭಿಯಾನಕ್ಕೆ ಕೊಡುಗೆ ನೀಡಲಿದೆ ಎಂದು ಶ್ರೀ ಮೋದಿ ಅವರು ಉಲ್ಲೇಖಿಸಿದ್ದಾರೆ. “ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು. ಐರನ್ ಮ್ಯಾನ್ ಟ್ರಯಥ್ಲಾನ್ ಯಶಸ್ವಿಯಾಗಿ ಪೂರ್ಣಗೊಳಿಸಿದವರಲ್ಲಿ ನಮ್ಮ ಪಕ್ಷದ ಇಬ್ಬರು ಯುವ ಸಹೋದ್ಯೋಗಿಗಳಾದ ಅಣ್ಣಾಮಲೈ ಮತ್ತು ತೇಜಸ್ವಿ ಸೂರ್ಯ ಸೇರಿರುವ ವಿಷಯ ತಿಳಿದು ಸಂತೋಷವಾಯಿತು” ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.

ಐಸಿಸಿ ಮಹಿಳಾ ವಿಶ್ವಕಪ್ ಚಾಂಪಿಯನ್‌ಗಳೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ

November 06th, 10:15 am

ಗೌರವಾನ್ವಿತ ಪ್ರಧಾನಮಂತ್ರಿಗಳೇ, ತುಂಬು ಧನ್ಯವಾದಗಳು. ನಾವು ಇಲ್ಲಿರುವುದಕ್ಕೆ ನಮಗೆ ಅಪಾರ ಗೌರವ ಮತ್ತು ಸೌಭಾಗ್ಯ ತಂದಿದೆ ಎಂದು ನಾನು ಭಾವಿಸುತ್ತೇನೆ. ನಾನು ನಿಮಗೆ ಒಂದು ಅಭಿಯಾನದ ಬಗ್ಗೆ ಹೇಳಲು ಬಯಸುತ್ತೇನೆ. ಈ ಹೆಣ್ಣು ಮಕ್ಕಳು ಅದ್ಭುತಗಳನ್ನೇ ಮಾಡಿದ್ದಾರೆ, ನಿಜವಾಗಿಯೂ ಅದ್ಭುತ. ಕಳೆದ 2 ವರ್ಷಗಳಿಂದ, ಅವರು ತುಂಬಾ ಶ್ರಮ ಹಾಕಿದ್ದಾರೆ. ಅಪಾರ ಪ್ರಯತ್ನವನ್ನು ತೋರಿಸಿದ್ದಾರೆ. ಪ್ರತಿ ಅಭ್ಯಾಸ ಅವಧಿಯಲ್ಲೂ, ಅವರು ಪೂರ್ಣ ಗಮನ ಮತ್ತು ಶಕ್ತಿ ಹಾಕಿ ಆಡಿದರು. ಅವರ ಕಠಿಣ ಪರಿಶ್ರಮ ನಿಜವಾಗಿಯೂ ಫಲ ನೀಡಿದೆ ಎಂದು ನಾನು ಹೇಳುತ್ತೇನೆ.

ಐಸಿಸಿ ಮಹಿಳಾ ವಿಶ್ವಕಪ್ 2025 ಚಾಂಪಿಯನ್‌ಗಳೊಂದಿಗೆ ಪ್ರಧಾನಮಂತ್ರಿ ಸಂವಾದ

November 06th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ ಮಾರ್ಗದ ನಂಬರ್‌ 7ರಲ್ಲಿ ಐಸಿಸಿ ಮಹಿಳಾ ವಿಶ್ವಕಪ್‌ 2025 ಚಾಂಪಿಯನ್ ಗಳೊಂದಿಗೆ ಸಂವಾದ ನಡೆಸಿದರು. 2025ರ ನವೆಂಬರ್ 2ರಂದು ರಾತ್ರಿ ನಡೆದ ಫೈನಲ್ಸ್‌ ನಲ್ಲಿ ಭಾರತ ತಂಡ ದಕ್ಷಿಣಾ ಆಫ್ರಿಕಾ ವಿರುದ್ಧ ಗೆಲುವು ಸಾಧಿಸಿತು. ದೇವ ದೀಪಾವಳಿ ಮತ್ತು ಗುರುಪುರಬ್ ಎರಡನ್ನೂ ಗುರುತಿಸುವ ಈ ದಿನವು ಬಹಳ ಮಹತ್ವದ ದಿನವಾಗಿದೆ ಎಂದು ಪ್ರಧಾನಮಂತ್ರಿಹೇಳಿದರು ಮತ್ತು ಹಾಜರಿದ್ದ ಎಲ್ಲಾ ಆಟಗಾರ್ತಿಯರಿಗೂ ಶುಭ ಕೋರಿದರು.

ನವ ರಾಯ್‌ಪುರದ “ಸತ್ಯಸಾಯಿ ಸಂಜೀವಿನಿ ಮಕ್ಕಳ ಹೃದ್ರೋಗ ಆಸ್ಪತ್ರೆ”ಯಲ್ಲಿ ಯಶಸ್ವೀ ಹೃದ್ರೋಗ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಮಕ್ಕಳೊಂದಿಗೆ ಪ್ರಧಾನಮಂತ್ರಿ ಸಂವಾದ

November 01st, 05:30 pm

ನಾನು ಹಾಕಿ ಚಾಂಪಿಯನ್. ನಾನು ಹಾಕಿಯಲ್ಲಿ 5 ಪದಕಗಳನ್ನು ಗೆದ್ದಿದ್ದೇನೆ. ನನ್ನ ಶಾಲೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿದಾಗ, ನನ್ನ ಹೃದಯದಲ್ಲಿ ರಂಧ್ರವಿದೆ ಎಂದು ವೈದ್ಯರು ಪತ್ತೆ ಹಚ್ಚಿದರು. ನಾನು ಚಿಕಿತ್ಸೆಗಾಗಿ ಇಲ್ಲಿಗೆ ಬಂದೆ, ಶಸ್ತ್ರಚಿಕಿತ್ಸೆಗೆ ಒಳಗಾದೆ, ನಾನೀಗ ಗುಣಮುಖವಾಗಿದ್ದು, ನಾನು ಮತ್ತೆ ಹಾಕಿ ಆಡಬಹುದು.

ಜನ್ಮಜಾತ ಹೃದಯ ಕಾಯಿಲೆಗಳನ್ನು ಉತ್ತಮ ಚಿಕಿತ್ಸೆ ಮೂಲಕ ನಿವಾರಿಸಿಕೊಂಡ ಮಕ್ಕಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ

November 01st, 05:15 pm

'ಹೃದಯದ ಮಾತು (ದಿಲ್ ಕಿ ಬಾತ್)' ಕಾರ್ಯಕ್ರಮದ ಭಾಗವಾಗಿ, ಛತ್ತೀಸ್‌ ಗಢದ ನವ ರಾಯ್‌ ಪುರದ ಶ್ರೀ ಸತ್ಯ ಸಾಯಿ ಸಂಜೀವನಿ ಆಸ್ಪತ್ರೆಯಲ್ಲಿ ನಡೆದ 'ಜೀವನದ ಉಡುಗೊರೆ' ಸಮಾರಂಭದಲ್ಲಿ ಜನ್ಮಜಾತ ಹೃದಯ ಕಾಯಿಲೆಗಳಿಂದ ಯಶಸ್ವಿಯಾಗಿ ಚಿಕಿತ್ಸೆ ಪಡೆದ 2500 ಮಕ್ಕಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂವಾದ ನಡೆಸಿದರು.

ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರೊಂದಿಗಿನ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ

September 04th, 05:35 pm

ನಮ್ಮ ಸಂಪ್ರದಾಯದಲ್ಲಿ ಶಿಕ್ಷಕರ ಬಗ್ಗೆ ವಿಶೇಷ ಗೌರವವಿದೆ, ಮತ್ತು ಅವರು ಸಮಾಜದ ದೊಡ್ಡ ಶಕ್ತಿಯೂ ಹೌದು. ಶಿಕ್ಷಕರು ಆಶೀರ್ವಾದಕ್ಕಾಗಿ ಎದ್ದು ನಿಲ್ಲುವಂತೆ ಮಾಡುವುದು ತಪ್ಪು. ನಾನು ಅಂತಹ ಪಾಪವನ್ನು ಮಾಡಲು ಬಯಸುವುದಿಲ್ಲ. ಆದರೆ ನಾನು ಖಂಡಿತವಾಗಿಯೂ ನಿಮ್ಮೊಂದಿಗೆ ಸಂವಾದ ನಡೆಸಲು ಬಯಸುತ್ತೇನೆ. ನನಗೆ, ನಿಮ್ಮೆಲ್ಲರನ್ನು ಭೇಟಿಯಾಗುವ ಅವಕಾಶ ಸಿಕ್ಕಿರುವುದು ಅದ್ಭುತ ಅನುಭವವಾಗಿದೆ. ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮದೇ ಆದ ಕಥೆಯನ್ನು ಹೊಂದಿರಬೇಕು, ಏಕೆಂದರೆ ಅದು ಇಲ್ಲದೇ, ನೀವು ಈ ಹಂತವನ್ನು ತಲುಪುತ್ತಿರಲಿಲ್ಲ. ಆ ಎಲ್ಲಾ ಕಥೆಗಳನ್ನು ತಿಳಿದುಕೊಳ್ಳಲು ಸಾಕಷ್ಟು ಸಮಯವನ್ನು ಒದಗಿಸುವುದು ಕಷ್ಟ, ಆದರೆ ನಾನು ನಿಮ್ಮಿಂದ ಕಲಿಯಬಹುದಾದ ಸ್ವಲ್ಪವಾದರೂ ನಿಜವಾಗಿಯೂ ಸ್ಪೂರ್ತಿದಾಯಕವಾಗಿತ್ತು ಮತ್ತು ಅದಕ್ಕಾಗಿ, ನಾನು ನಿಮ್ಮೆಲ್ಲರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಈ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಕೊನೆಯಲ್ಲ. ಈಗ, ಈ ಪ್ರಶಸ್ತಿಯ ನಂತರ ಎಲ್ಲರ ಗಮನವು ನಿಮ್ಮ ಮೇಲಿದೆ. ಇದರರ್ಥ ನಿಮ್ಮ ವ್ಯಾಪ್ತಿಯು ಗಮನಾರ್ಹವಾಗಿ ವಿಸ್ತರಿಸಿದೆ. ಹಿಂದೆ, ನಿಮ್ಮ ಪ್ರಭಾವ ಅಥವಾ ಆದೇಶದ ವ್ಯಾಪ್ತಿಯು ಸೀಮಿತವಾಗಿತ್ತು, ಆದರೆ ಈಗ ಈ ಮನ್ನಣೆಯ ನಂತರ, ಅದು ಹೆಚ್ಚು ವಿಸ್ತಾರವಾಗಿ ಬೆಳೆಯಬಹುದು. ಇದು ಆರಂಭ ಎಂದು ನಾನು ನಂಬುತ್ತೇನೆ ಮತ್ತು ಈ ಅವಕಾಶವನ್ನು ಬಳಸಿಕೊಳ್ಳಬೇಕು. ನಿಮ್ಮೊಳಗೆ ಏನೇ ಇರಲಿ, ಅದನ್ನು ನೀವು ಸಾಧ್ಯವಾದಷ್ಟು ಹಂಚಿಕೊಳ್ಳಬೇಕು. ನೀವು ಹಾಗೆ ಮಾಡಿದಾಗ, ನಿಮ್ಮ ತೃಪ್ತಿಯ ಭಾವನೆ ಬೆಳೆಯುತ್ತದೆ ಮತ್ತು ನೀವು ಆ ದಿಕ್ಕಿನಲ್ಲಿ ಶ್ರಮಿಸುವುದನ್ನು ಮುಂದುವರಿಸಬೇಕು. ಈ ಪ್ರಶಸ್ತಿಗೆ ನಿಮ್ಮ ಆಯ್ಕೆಯು ನಿಮ್ಮ ಕಠಿಣ ಪರಿಶ್ರಮ ಮತ್ತು ನಿರಂತರ ಸಮರ್ಪಣೆಗೆ ಸಾಕ್ಷಿಯಾಗಿದೆ. ಅದಕ್ಕಾಗಿಯೇ ಇದು ಸಾಧ್ಯವಾಗಿದೆ. ಒಬ್ಬ ಶಿಕ್ಷಕ ಕೇವಲ ವರ್ತಮಾನದ ಬಗ್ಗೆ ಅಲ್ಲ, ರಾಷ್ಟ್ರದ ಭವಿಷ್ಯದ ಪೀಳಿಗೆಯನ್ನು ರೂಪಿಸುತ್ತಾನೆ, ಭವಿಷ್ಯವನ್ನು ಮೆರುಗುಗೊಳಿಸುತ್ತಾನೆ ಮತ್ತು ಇದು ಇತರರಿಗಿಂತ ಕಡಿಮೆಯಿಲ್ಲದ ರಾಷ್ಟ್ರ ಸೇವೆಯಾಗಿದೆ ಎಂದು ನಾನು ನಂಬುತ್ತೇನೆ. ಇಂದು, ನಿಮ್ಮಂತಹ ಕೋಟ್ಯಂತರ ಶಿಕ್ಷಕರು ಅದೇ ಭಕ್ತಿ, ಪ್ರಾಮಾಣಿಕತೆ ಮತ್ತು ಸಮರ್ಪಣೆಯೊಂದಿಗೆ ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಎಲ್ಲರಿಗೂ ಇಲ್ಲಿಗೆ ಬರುವ ಅವಕಾಶ ಸಿಗುವುದಿಲ್ಲ. ಬಹುಶಃ ಅನೇಕರು ಪ್ರಯತ್ನಿಸಿಲ್ಲ, ಅಥವಾ ಕೆಲವರು ಗಮನಿಸಿಲ್ಲ. ಅಂತಹ ಸಾಮರ್ಥ್ಯಗಳನ್ನು ಹೊಂದಿರುವ ಅಸಂಖ್ಯಾತ ಜನರಿದ್ದಾರೆ. ಅವರೆಲ್ಲರ ಸಾಮೂಹಿಕ ಪ್ರಯತ್ನಗಳಿಂದ ರಾಷ್ಟ್ರವು ಮುಂದುವರಿಯುವುದು, ಹೊಸ ಪೀಳಿಗೆಗಳನ್ನು ಪೋಷಿಸುವುದನ್ನು, ರಾಷ್ಟ್ರಕ್ಕಾಗಿ ಬದುಕುವುದನ್ನು ಖಚಿತಪಡಿಸುತ್ತವೆ ಮತ್ತು ಅದರಲ್ಲಿ ಪ್ರತಿಯೊಬ್ಬರ ಕೊಡುಗೆಯೂ ಇದೆ.

ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ

September 04th, 05:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನುದ್ದೇಶಿಸಿ ಭಾಷಣ ಮಾಡಿದರು. ಭಾರತೀಯ ಸಮಾಜವು ಶಿಕ್ಷಕರ ಬಗ್ಗೆ ಹೊಂದಿರುವ ಸ್ವಾಭಾವಿಕ ಗೌರವವನ್ನು ಶ್ಲಾಘಿಸಿದ ಶ್ರೀ ನರೇಂದ್ರ ಮೋದಿ, ಅವರು ರಾಷ್ಟ್ರ ನಿರ್ಮಾಣದಲ್ಲಿ ಪ್ರಬಲ ಶಕ್ತಿ ಎಂದು ಬಣ್ಣಿಸಿದರು. ಶಿಕ್ಷಕರನ್ನು ಗೌರವಿಸುವುದು ಕೇವಲ ಆಚರಣೆಯಲ್ಲ, ಆದರೆ ಅವರ ಜೀವಮಾನದ ಸಮರ್ಪಣೆ ಮತ್ತು ಪ್ರಭಾವದ ಮನ್ನಣೆಯಾಗಿದೆ ಎಂದು ಅವರು ಒತ್ತಿ ಹೇಳಿದರು.

2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಹಾದಿ ಸ್ವಾವಲಂಬನೆಯ ಮೂಲಕ ಸಾಗುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

July 27th, 11:30 am

‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ ಅಲೆ ಹರಿದಾಡಿತು. ಇಡೀ ದೇಶ ಹೆಮ್ಮೆಯಿಂದ ಬೀಗಿತು. ಆಗಸ್ಟ್ 2023 ರಲ್ಲಿ ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಆದಾಗ, ದೇಶದಲ್ಲಿ ಹೊಸ ವಾತಾವರಣವೇ ಸೃಷ್ಟಿಯಾಗಿದ್ದು ನನಗೆ ನೆನಪಿದೆ. ವಿಜ್ಞಾನ ಮತ್ತು ಬಾಹ್ಯಾಕಾಶದ ಬಗ್ಗೆ ಮಕ್ಕಳಲ್ಲಿ ಹೊಸ ಕುತೂಹಲವೂ ಅರಳಿತು. ಈಗ ಚಿಕ್ಕ ಚಿಕ್ಕ ಮಕ್ಕಳು ಕೂಡ ನಾವು ಬಾಹ್ಯಾಕಾಶಕ್ಕೆ ಹೋಗುತ್ತೇವೆ, ಚಂದ್ರನ ಮೇಲೆ ಇಳಿಯುತ್ತೇವೆ - ನಾವು ಬಾಹ್ಯಾಕಾಶ ವಿಜ್ಞಾನಿಗಳಾಗುತ್ತೇವೆ ಎಂದು ಹೇಳುತ್ತಾರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ

June 29th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ ಭವ್ಯವಾಗುತ್ತಲೇ ಸಾಗುತ್ತಿದೆ. ಹೆಚ್ಚು ಜನರು ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂಬುದರ ಸಂಕೇತವೂ ಇದಾಗಿದೆ. ಈ ಬಾರಿ ‘ಯೋಗ ದಿನ’ದ ಸಾಕಷ್ಟು ಆಕರ್ಷಕ ಚಿತ್ರಗಳನ್ನು ನಾವು ನೋಡಿದ್ದೇವೆ. ವಿಶಾಖಪಟ್ಟಣದ ಕಡಲತೀರದಲ್ಲಿ ಮೂರು ಲಕ್ಷ ಜನರು ಒಗ್ಗೂಡಿ ಯೋಗ ಮಾಡಿದರು. ವಿಶಾಖಪಟ್ಟಣದಿಂದಲೇ ಮತ್ತೊಂದು ಅದ್ಭುತ ಕಾರ್ಯಕ್ರಮ ನಡೆದಿರುವುದು ತಿಳಿದು ಬಂದಿದೆ. ಎರಡು ಸಾವಿರಕ್ಕೂ ಹೆಚ್ಚು ಬುಡಕಟ್ಟು ವಿದ್ಯಾರ್ಥಿಗಳು 108 ನಿಮಿಷಗಳ ಕಾಲ 108 ಸೂರ್ಯ ನಮಸ್ಕಾರಗಳನ್ನು ಇಲ್ಲಿ ಮಾಡಿದ್ದಾರೆ. ಅದೆಷ್ಟು ಶಿಸ್ತು, ಅದೆಷ್ಟು ಸಮರ್ಪಣೆ ಇದ್ದಿರಬೇಕು ಎಂದು ಕಲ್ಪಿಸಿಕೊಳ್ಳಿ. ನಮ್ಮ ನೌಕಾಪಡೆಯ ಹಡಗುಗಳಲ್ಲಿಯೂ ಸಹ ಯೋಗದ ಭವ್ಯ ಪ್ರದರ್ಶನ ನಡೆಯಿತು. ತೆಲಂಗಾಣದಲ್ಲಿ, ಮೂರು ಸಾವಿರ ದಿವ್ಯಾಂಗರು ಒಟ್ಟಾಗಿ ಯೋಗ ಶಿಬಿರದಲ್ಲಿ ಭಾಗವಹಿಸಿದರು. ಯೋಗವು ಯಾವ ರೀತಿ ಸಬಲೀಕರಣದ ಮಾಧ್ಯಮವಾಗಿದೆ ಎಂಬುದನ್ನು ಅವರು ತೋರಿಸಿದರು. ದೆಹಲಿಯ ಜನರು ಶುದ್ಧ ಯಮುನೆಯ ಸಂಕಲ್ಪದೊಂದಿಗೆ ಯಮುನಾ ನದಿ ತೀರದಲ್ಲಿ ಯೋಗ ಪ್ರದರ್ಶನ ಮಾಡಿದರು ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಚೆನಾಬ್ ಸೇತುವೆಯಲ್ಲಿಯೂ ಜನರು ಯೋಗ ಮಾಡಿದರು. ಹಿಮಾಲಯದ ಹಿಮಭರಿತ ಶಿಖರಗಳು ಮತ್ತು ಐಟಿಬಿಪಿ ಸೈನಿಕರು ಕೂಡಾ ಯೋಗ ಪ್ರದರ್ಶನದಲ್ಲಿ ಪಾಲ್ಗೊಂಡರು. ಶೌರ್ಯ ಮತ್ತು ಸಾಧನೆ ಜೊತೆಗೆ ಹೆಜ್ಜೆ ಹಾಕಿದವು. ಗುಜರಾತ್‌ನ ಜನರು ಕೂಡ ಹೊಸ ಇತಿಹಾಸವನ್ನು ಸೃಷ್ಟಿಸಿದರು. ವಡ್ನಗರದಲ್ಲಿ, 2121 (ಎರಡು ಸಾವಿರದ ನೂರ ಇಪ್ಪತ್ತೊಂದು) ಜನರು ಒಟ್ಟಿಗೆ ಭುಜಂಗಾಸನವನ್ನು ಮಾಡಿದರು ಮತ್ತು ಹೊಸ ದಾಖಲೆಯನ್ನು ಸೃಷ್ಟಿಸಿದರು. ನ್ಯೂಯಾರ್ಕ್, ಲಂಡನ್, ಟೋಕಿಯೊ, ಪ್ಯಾರಿಸ್, ಪ್ರಪಂಚದ ಪ್ರತಿಯೊಂದು ಮಹಾ ನಗರಗಳಿಂದಲೂ ಯೋಗಾಭ್ಯಾಸದ ಚಿತ್ರಗಳು ತಲುಪಿದವು ಮತ್ತು ಪ್ರತಿ ಚಿತ್ರದಲ್ಲೂ ಶಾಂತಿ, ಸ್ಥಿರತೆ ಮತ್ತು ಸಮತೋಲನ ಎಂಬ ವಿಷಯಗಳು ವಿಶೇಷವಾಗಿದ್ದವು. ಈ ಬಾರಿಯ ತತ್ವವು ಬಹಳ ವಿಶೇಷವಾಗಿತ್ತು, ‘Yoga for One Earth, One Health, ಅಂದರೆ 'ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ'. ಇದು ಕೇವಲ ಒಂದು ಘೋಷಣೆಯಲ್ಲ, 'ವಸುಧೈವ ಕುಟುಂಬಕಂ' ಎಂಬುದರ ಅನುಭೂತಿ ನಮಗೆ ಮೂಡುವಂತೆ ಮಾಡುವ ನಿರ್ದೇಶನವಾಗಿದೆ. ಈ ವರ್ಷದ ಯೋಗ ದಿನದ ಭವ್ಯತೆ ಖಂಡಿತವಾಗಿಯೂ ಹೆಚ್ಚು ಹೆಚ್ಚು ಜನರನ್ನು ಯೋಗಾಭ್ಯಾಸದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸುತ್ತದೆ ಎಂದು ನನಗೆ ವಿಶ್ವಾಸವಿದೆ.

ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 21st, 07:06 am

ಆಂಧ್ರ ಪ್ರದೇಶ ರಾಜ್ಯಪಾಲರಾದ ಸೈಯದ್ ಅಬ್ದುಲ್ ನಜೀರ್ ಜಿ, ಈ ರಾಜ್ಯದ ಜನಪ್ರಿಯ ಮುಖ್ಯಮಂತ್ರಿ, ನನ್ನ ಆತ್ಮೀಯ ಗೆಳೆಯ ಚಂದ್ರಬಾಬು ನಾಯ್ಡು ಗಾರು, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಕೆ. ರಾಮಮೋಹನ್ ನಾಯ್ಡು ಜಿ, ಪ್ರತಾಪರಾವ್ ಜಾಧವ್ ಜಿ, ಚಂದ್ರಶೇಖರ್ ಜಿ, ಭೂಪತಿ ರಾಜು ಶ್ರೀನಿವಾಸ್ ವರ್ಮಾ ಗಾರು, ರಾಜ್ಯದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಗಾರು, ಇಲ್ಲಿರುವ ಇತರೆ ಗಣ್ಯರೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ! ನಿಮ್ಮೆಲ್ಲರಿಗೂ ನಮಸ್ಕಾರ!

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

June 21st, 06:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನೇತೃತ್ವ ವಹಿಸಿ ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25.05.2025 ರಂದು ಮಾಡಿದ ‘ಮನ್ ಕಿ ಬಾತ್’ – 122ನೇ ಸಂಚಿಕೆಯ ಕನ್ನಡ ಅವತರಣಿಕೆ

May 25th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಇಂದು ಸಂಪೂರ್ಣ ದೇಶ ಭಯೋತ್ಪಾದನೆಯ ವಿರುದ್ಧ ಒಗ್ಗೂಡಿ ನಿಂತಿದೆ. ಆಕ್ರೋಶದಿಂದ ಕೂಡಿದೆ ಮತ್ತು ದೃಢನಿಶ್ಚಯ ಹೊಂದಿದೆ. ಭಯೋತ್ಪಾದನೆಯನ್ನು ಕೊನೆಗೊಳಿಸಲೇಬೇಕು ಎಂಬುದು ಇಂದು ಪ್ರತಿಯೊಬ್ಬ ಭಾರತೀಯನ ಸಂಕಲ್ಪವಾಗಿದೆ. ಸ್ನೇಹಿತರೇ, 'ಆಪರೇಷನ್ ಸಿಂಧೂರ್' ಸಮಯದಲ್ಲಿ ನಮ್ಮ ಸೇನಾ ಪಡೆಗಳು ಪ್ರದರ್ಶಿಸಿದ ಶೌರ್ಯ ಪ್ರತಿಯೊಬ್ಬ ಹಿಂದೂಸ್ತಾನಿಯನ್ನೂ ಹೆಮ್ಮೆಪಡುವಂತೆ ಮಾಡಿದೆ. ಗಡಿಯಾಚೆಗಿನ ಭಯೋತ್ಪಾದಕ ಅಡಗುತಾಣಗಳನ್ನು ನಮ್ಮ ಪಡೆಗಳು ನಿಖರತೆಯಿಂದ ಕರಾರುವಾಕ್ಕಾಗಿ ನಾಶಪಡಿಸಿರುವುದು ಅದ್ಭುತವಾಗಿದೆ. 'ಆಪರೇಷನ್ ಸಿಂಧೂರ್' ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ಭರವಸೆ ನೀಡಿದೆ ಮತ್ತು ಉತ್ಸಾಹ ತುಂಬಿದೆ.

ವಿಶ್ವ ಯಕೃತ್ತಿನ ದಿನದಂದು ಜಾಗರೂಕತೆಯಿಂದ ತಿನ್ನುವ ಅಭ್ಯಾಸ ಬೆಳೆಸಿಕೊಳ್ಳುವುದನ್ನು ಮತ್ತು ಸ್ಥೂಲಕಾಯತೆಯ ವಿರುದ್ಧ ಹೋರಾಡಲು ನಾಗರಿಕರನ್ನು ಒತ್ತಾಯಿಸಿದ ಪ್ರಧಾನಮಂತ್ರಿ

April 19th, 01:13 pm

ವಿಶ್ವ ಯಕೃತ್ತಿನ ದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲಾ ನಾಗರಿಕರು ಜಾಗರೂಕ ಆಹಾರ ಪದ್ಧತಿಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಮತ್ತು ಆರೋಗ್ಯಕರ ಜೀವನಕ್ಕೆ ಆದ್ಯತೆ ನೀಡುವಂತೆ ಒತ್ತಾಯಿಸಿದರು. ಸಣ್ಣ ಮತ್ತು ಪರಿಣಾಮಕಾರಿ ಬದಲಾವಣೆಗಳ ಪ್ರಾಮುಖ್ಯತೆಯನ್ನು ತಿಳಿಸುತ್ತಾ, ತೈಲ ಸೇವನೆಯನ್ನು ಕಡಿಮೆ ಮಾಡುವಂತಹ ಕ್ರಮಗಳು ಒಟ್ಟಾರೆ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಗಣನೀಯವಾಗಿ ಕೊಡುಗೆ ನೀಡುತ್ತವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 30.03.2025 ರಂದು ಮಾಡಿದ ‘ಮನ್ ಕಿ ಬಾತ್’ – 120ನೇ ಸಂಚಿಕೆಯ ಕನ್ನಡ ಅವತರಣಿಕೆ

March 30th, 11:30 am

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ಈ ಶುಭ ದಿನದಂದು, ನಿಮ್ಮೊಂದಿಗೆ 'ಮನದ ಮಾತು' ಹಂಚಿಕೊಳ್ಳುವ ಅವಕಾಶ ನನಗೆ ಲಭಿಸಿದೆ. ಇಂದು ಚೈತ್ರ ಮಾಸದ ಶುಕ್ಲ ಪಕ್ಷದ ಪಾಡ್ಯಮಿ. ಇಂದಿನಿಂದ ಚೈತ್ರ ನವರಾತ್ರಿ ಪ್ರಾರಂಭವಾಗಲಿದೆ. ಇಂದಿನಿಂದ ಭಾರತೀಯ ನವ ವರ್ಷವೂ ಆರಂಭವಾಗುತ್ತದೆ. ಈ ಬಾರಿ ವಿಕ್ರಮ ಸಂವತ್ಸರ ಅಂದರೆ ೨೦೮೨ (ಎರಡು ಸಾವಿರದ ಎಂಬತ್ತೆರಡು) ಶುರುವಾಗಲಿದೆ. ನನ್ನ ಮುಂದೆ ನೀವು ಬರೆದ ಬಹಳಷ್ಟು ಪತ್ರಗಳಿವೆ. ಬಿಹಾರದವರು, ಬಂಗಾಳದವರು, ಕೆಲವರು ತಮಿಳುನಾಡಿನವರು, ಕೆಲವರು ಗುಜರಾತ್‌ನವರು ಪತ್ರ ಬರೆದಿದ್ದಾರೆ. ಬಹಳ ಆಸಕ್ತಿಕರವಾಗಿ ಜನರು ತಮ್ಮ ಮನದ ಮಾತುಗಳನ್ನು ವ್ಯಕ್ತಪಡಿಸಿದ್ದಾರೆ. ಅನೇಕ ಪತ್ರಗಳು ಶುಭ ಹಾರೈಕೆಗಳು ಮತ್ತು ಅಭಿನಂದನಾ ಸಂದೇಶಗಳನ್ನು ಹೊತ್ತು ತಂದಿವೆ. ಆದರೆ ಇಂದು ನಿಮ್ಮೊಂದಿಗೆ ಕೆಲವು ಸಂದೇಶಗಳನ್ನು ಹಂಚಿಕೊಳ್ಳಬಯಸುತ್ತೇನೆ -

ಪಾಡ್‌ಕ್ಯಾಸ್ಟ್‌ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ

March 16th, 11:47 pm

ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್‌ʼನಲ್ಲಿ ಸಂವಾದ ನಡೆಸಿದರು

March 16th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್‌ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್‌ ಆಫ್‌ ದಿ ಬಾಕ್ಸ್‌) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್‌) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.