ರೋಜ್‌ಗಾರ್ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸ್ ಭಾಷಣ

October 24th, 11:20 am

ಈ ಬಾರಿ ಬೆಳಕಿನ ಹಬ್ಬ ದೀಪಾವಳಿ ನಿಮ್ಮೆಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಯ ನಡುವೆ, ಅಂದರೆ ಆಚರಣೆಯ 2 ಪಟ್ಟು ಸಂತೋಷ ಮತ್ತು ಯಶಸ್ಸಿನ ನಡುವೆ, ಕಾಯಂ ಉದ್ಯೋಗದ ನೇಮಕಾತಿ ಪತ್ರ ಪಡೆದಿರುವ ಈ ಸಂತೋಷವನ್ನು ಇಂದು ದೇಶದ 51 ಸಾವಿರಕ್ಕೂ ಹೆಚ್ಚು ಯುವಕರು ಸ್ವೀಕರಿಸಿದ್ದಾರೆ. ನಿಮ್ಮ ಎಲ್ಲಾ ಕುಟುಂಬಗಳಲ್ಲಿ ಎಷ್ಟು ಸಂತೋಷ ತುಂಬಿದೆ ಎಂಬುದು ನನಗೆ ತಿಳಿದಿದೆ. ನಿಮಗೆ ಮತ್ತು ನಿಮ್ಮ ಕುಟುಂಬ ಸದಸ್ಯರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಜೀವನದಲ್ಲಿ ಈ ಹೊಸ ಆರಂಭಕ್ಕೆ ನನ್ನ ಶುಭಾಶಯಗಳನ್ನು ಕೋರುತ್ತೇನೆ.

ರೋಜ್‌ಗಾರ್ ಮೇಳ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ

October 24th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೊ ಕಾನ್ಫರೆನ್ಸ್ ಮೂಲಕ ರೋಜ್‌ಗಾರ್ ಮೇಳ ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು, ಈ ವರ್ಷದ ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಜೀವನದಲ್ಲಿ ಹೊಸ ಬೆಳಕು ತಂದಿದೆ. ಹಬ್ಬದ ಆಚರಣೆಗಳ ನಡುವೆ, ಕಾಯಂ ಉದ್ಯೋಗಗಳ ನೇಮಕಾತಿ ಪತ್ರಗಳನ್ನು ಸ್ವೀಕರಿಸುವುದು ಹಬ್ಬದ ಮೆರಗು ಮತ್ತು ಉದ್ಯೋಗದ ಯಶಸ್ಸು ಎರಡರಲ್ಲೂ ದುಪ್ಪಟ್ಟು ಸಂತೋಷ ನೀಡುತ್ತದೆ. ಈ ಸಂತೋಷವು ಇಂದು ದೇಶಾದ್ಯಂತ 51,000ಕ್ಕೂ ಹೆಚ್ಚು ಯುವಕರನ್ನು ತಲುಪಿದೆ. ಇದು ಅವರ ಕುಟುಂಬಗಳಿಗೆ ಅಪಾರ ಸಂತೋಷ ತಂದಿದೆ. ಉದ್ಯೋಗ ನೇಮಕಾತಿ ಪತ್ರ ಪಡೆದ ಎಲ್ಲಾ ಯುವಕರು ಮತ್ತು ಅವರ ಕುಟುಂಬ ಸದಸ್ಯರಿಗೆ ಪ್ರಧಾನ ಮಂತ್ರಿ ಅಭಿನಂದನೆಗಳನ್ನು ಸಲ್ಲಿಸಿದರು. ಅವರ ಜೀವನದ ಈ ಹೊಸ ಆರಂಭಕ್ಕಾಗಿ ಅವರು ಶುಭಾಶಯಗಳನ್ನು ತಿಳಿಸಿದರು.

ಜರ್ಮನಿಯ ವಿದೇಶಾಂಗ ಸಚಿವರನ್ನು ಪ್ರಧಾನಮಂತ್ರಿ ಭೇಟಿಯಾದರು

September 03rd, 08:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜರ್ಮನಿಯ ವಿದೇಶಾಂಗ ಸಚಿವರಾದ ಜೋಹಾನ್ ವಾಡೆಫುಲ್ ಅವರನ್ನು ಭೇಟಿಯಾದರು. ಭಾರತ ಮತ್ತು ಜರ್ಮನಿ 25 ವರ್ಷಗಳ ಕಾರ್ಯತಂತ್ರದ ಸಹಭಾಗಿತ್ವವನ್ನು ಆಚರಿಸುತ್ತಿವೆ. ರೋಮಾಂಚಕ ಪ್ರಜಾಪ್ರಭುತ್ವಗಳು ಮತ್ತು ಪ್ರಮುಖ ಆರ್ಥಿಕತೆಗಳಾಗಿ, ವ್ಯಾಪಾರ, ತಂತ್ರಜ್ಞಾನ, ನಾವೀನ್ಯತೆ, ಸುಸ್ಥಿರತೆ, ಉತ್ಪಾದನೆ ಮತ್ತು ಚಲನಶೀಲತೆಯಲ್ಲಿ ಪರಸ್ಪರ ಲಾಭದಾಯಕ ಸಹಕಾರವನ್ನು ಹೆಚ್ಚಿಸಲು ನಾವು ಅಪಾರ ಸಾಮರ್ಥ್ಯವನ್ನು ಕಾಣುತ್ತೇವೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ವಾಸ್ತವಾಂಶ ಪತ್ರ (ಫ್ಯಾಕ್ಟ್ ಶೀಟ್) : ಭಾರತ-ಜಪಾನ್ ಆರ್ಥಿಕ ಭದ್ರತಾ ಸಹಕಾರ

August 29th, 08:12 pm

ಎರಡು ಚೈತನ್ಯಶೀಲ ಅಥವಾ ರೋಮಾಂಚನಾಕಾರಿ ಪ್ರಜಾಪ್ರಭುತ್ವಗಳಾಗಿ ಮತ್ತು ಮುಕ್ತ ಮಾರುಕಟ್ಟೆ ಆರ್ಥಿಕತೆಗಳಾಗಿ, ಭಾರತ ಮತ್ತು ಜಪಾನ್ ನಮ್ಮ ರಾಜಕೀಯ ನಂಬಿಕೆ, ಆರ್ಥಿಕ ಚೈತನ್ಯ ಮತ್ತು ನೈಸರ್ಗಿಕ ಪೂರಕತೆಯ ಆಧಾರದ ಮೇಲೆ ನಿರ್ಣಾಯಕ ಮತ್ತು ಉದಯೋನ್ಮುಖ ವಲಯಗಳಲ್ಲಿ ತಮ್ಮ ಪಾಲುದಾರಿಕೆಯನ್ನು ವೇಗಗೊಳಿಸಲು ಬದ್ಧವಾಗಿವೆ.

ಪ್ರಧಾನಮಂತ್ರಿ ಅವರನ್ನು ಭೇಟಿಯಾದ 2024ನೇ ಬ್ಯಾಚ್‌ನ ಐ.ಎಫ್‌.ಎಸ್ ಅಧಿಕಾರಿ ತರಬೇತಿದಾರರು

August 19th, 08:34 pm

ಭಾರತೀಯ ವಿದೇಶಾಂಗ ಸೇವೆ (ಐ.ಎಫ್‌.ಎಸ್)ಯ 2024ರ ಬ್ಯಾಚ್‌ ನ ಅಧಿಕಾರಿ ತರಬೇತಿದಾರರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಅವರ 7, ಲೋಕ ಕಲ್ಯಾಣ ಮಾರ್ಗದ ನಿವಾಸದಲ್ಲಿ ಭೇಟಿಯಾದರು. 2024ರ ಈ ಬ್ಯಾಚ್‌ನಲ್ಲಿ ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಬಂದಿರುವ 33 ಐ.ಎಫ್‌.ಎಸ್ ಅಧಿಕಾರಿ ತರಬೇತಿದಾರರಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಚೀನಾ ವಿದೇಶಾಂಗ ಸಚಿವರಾದ ವಾಂಗ್ ಯಿ

August 19th, 07:34 pm

ಇಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಚೀನಾದ ಕಮ್ಯುನಿಸ್ಟ್ ಪಕ್ಷದ ಪಾಲಿಟ್‌ ಬ್ಯೂರೊ ಸದಸ್ಯ ಹಾಗೂ ವಿದೇಶಾಂಗ ಸಚಿವರಾದ ಶ್ರೀ ವಾಂಗ್ ಯಿ ಅವರನ್ನು ಬರಮಾಡಿಕೊಂಡರು.

Today, India is not just a Nation of Dreams but also a Nation That Delivers: PM Modi in TV9 Summit

March 28th, 08:00 pm

PM Modi participated in the TV9 Summit 2025. He remarked that India now follows the Equi-Closeness policy of being equally close to all. He emphasized that the world is eager to understand What India Thinks Today. PM remarked that India's approach has always prioritized humanity over monopoly. “India is no longer just a ‘Nation of Dreams’ but a ‘Nation That Delivers’”, he added.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಟಿವಿ9 ಶೃಂಗಸಭೆ 2025 ಉದ್ದೇಶಿಸಿ ಮಾತನಾಡಿದರು

March 28th, 06:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಟಿವಿ9 ಶೃಂಗಸಭೆ 2025 ರಲ್ಲಿ ಭಾಗವಹಿಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಇಡೀ ಟಿವಿ9 ತಂಡಕ್ಕೆ ಮತ್ತು ಅದರ ವೀಕ್ಷಕರಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದರು. ಟಿವಿ9 ವಿಶಾಲವಾದ ಪ್ರಾದೇಶಿಕ ಪ್ರೇಕ್ಷಕರನ್ನು ಹೊಂದಿದ್ದು, ಈಗ ಜಾಗತಿಕ ಪ್ರೇಕ್ಷಕರೂ ಸೃಷ್ಟಿಯಾಗುತ್ತಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಟೆಲಿಕಾನ್ಫರೆನ್ಸ್‌ ಮೂಲಕ ಭಾಗವಹಿಸಿದ ಭಾರತೀಯ ವಲಸೆಗಾರರನ್ನು ಅವರು ಸ್ವಾಗತಿಸಿದರು ಮತ್ತು ಶುಭಾಶಯ ತಿಳಿಸಿದರು.

ಪಾಡ್‌ಕ್ಯಾಸ್ಟ್‌ ನಲ್ಲಿ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪ್ರಧಾನಮಂತ್ರಿಯವರ ಮಾತುಕತೆಯ ಕನ್ನಡ ಅನುವಾದ

March 16th, 11:47 pm

ಪ್ರಧಾನಮಂತ್ರಿ ನರೇಂದ್ರ ಮೋದಿ: ನನ್ನ ಶಕ್ತಿ ಇರುವುದು ಮೋದಿಯಾಗಿರುವುದರಲ್ಲಿ ಅಲ್ಲ; ಅದು 140 ಕೋಟಿ ಭಾರತೀಯರಿಂದ ಬಂದಿದೆ, ಸಾವಿರಾರು ವರ್ಷಗಳ ನಮ್ಮ ದೇಶದ ಶ್ರೀಮಂತ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯಿಂದ ಬಂದಿದೆ. ಅದೇ ನನ್ನ ನಿಜವಾದ ಶಕ್ತಿ. ನಾನು ಎಲ್ಲಿಗೆ ಹೋದರೂ, ಮೋದಿಯಾಗಿ ಹೋಗುವುದಿಲ್ಲ - ವೇದಗಳಿಂದ ವಿವೇಕಾನಂದರವರೆಗೆ ನಮ್ಮ ನಾಗರಿಕತೆಯ ಸಾವಿರಾರು ವರ್ಷಗಳ ಹಳೆಯ ಶ್ರೇಷ್ಠ ಸಂಪ್ರದಾಯಗಳನ್ನು ನನ್ನೊಂದಿಗೆ ಕೊಂಡೊಯ್ಯತೇನೆ. ನಾನು 140 ಕೋಟಿ ಜನರನ್ನು, ಅವರ ಕನಸುಗಳನ್ನು ಮತ್ತು ಅವರ ಆಕಾಂಕ್ಷೆಗಳನ್ನು ಪ್ರತಿನಿಧಿಸುತ್ತೇನೆ. ಅದಕ್ಕಾಗಿಯೇ, ನಾನು ಯಾವುದೇ ವಿಶ್ವ ನಾಯಕರೊಂದಿಗೆ ಕೈಕುಲುಕಿದಾಗ, ಅದು ಕೇವಲ ಮೋದಿಯವರ ಕೈ ಆಗಿರುವುದಿಲ್ಲ - ಅದು 140 ಕೋಟಿ ಭಾರತೀಯರ ಸಾಮೂಹಿಕ ಕೈ ಆಗಿರುತ್ತದೆ. ನನ್ನ ಶಕ್ತಿ ಮೋದಿಯದ್ದಲ್ಲ; ಅದು ಭಾರತದ ಶಕ್ತಿ. ನಾವು ಶಾಂತಿಯ ಬಗ್ಗೆ ಮಾತನಾಡುವಾಗಲೆಲ್ಲಾ, ಜಗತ್ತು ಕೇಳುತ್ತದೆ, ಏಕೆಂದರೆ ಇದು ಬುದ್ಧನ ನಾಡು, ಮಹಾತ್ಮ ಗಾಂಧಿಯವರ ನಾಡು. ನಾವು ಸಂಘರ್ಷದ ಪ್ರತಿಪಾದಕರಲ್ಲ; ನಾವು ಸಾಮರಸ್ಯವನ್ನು ಪ್ರತಿಪಾದಿಸುತ್ತೇವೆ. ನಾವು ಪ್ರಕೃತಿಯೊಂದಿಗೆ ಸಂಘರ್ಷ ಅಥವಾ ರಾಷ್ಟ್ರಗಳ ನಡುವಿನ ಕಲಹವನ್ನು ಬಯಸುವುದಿಲ್ಲ - ನಾವು ಸಹಕಾರದಲ್ಲಿ ನಂಬಿಕೆ ಇಡುವ ಜನರು ಮತ್ತು ನಾವು ಶಾಂತಿಯನ್ನು ಉತ್ತೇಜಿಸಲು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಾದರೆ, ನಾವು ಯಾವಾಗಲೂ ಅದನ್ನು ಮಾಡಲು ಪ್ರಯತ್ನಿಸುತ್ತೇವೆ. ನನ್ನ ಜೀವನವು ಅತ್ಯಂತ ಬಡತನದಿಂದ ಬಂದಿದೆ, ಆದರೂ ನಾವು ಅದರ ಹೊರೆಯನ್ನು ಎಂದಿಗೂ ಅನುಭವಿಸಲಿಲ್ಲ. ಜೀವನದುದ್ದಕ್ಕೂ ಬೂಟುಗಳನ್ನು ಧರಿಸಿದ ವ್ಯಕ್ತಿಗೆ ಇದ್ದಕ್ಕಿದ್ದಂತೆ ಅವುಗಳಿಲ್ಲದೆ ಹೋದರೆ ಅವನು ಕಷ್ಟಪಡಬೇಕಾಗಬಹುದು. ಆದರೆ ಎಂದಿಗೂ ಬೂಟುಗಳನ್ನು ಧರಿಸದವರಿಗೆ, ಅಭಾವದ ಭಾವನೆಯೇ ಇರುವುದಿಲ್ಲ - ನಾವು ನಮ್ಮ ಜೀವನವನ್ನು ಅದು ಇದ್ದಂತೆಯೇ ಸರಳವಾಗಿ ಬದುಕಿದ್ದೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ʻಪಾಡ್‌ಕಾಸ್ಟ್‌ʼನಲ್ಲಿ ಸಂವಾದ ನಡೆಸಿದರು

March 16th, 05:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೆಕ್ಸ್ ಫ್ರಿಡ್ಮನ್ ಅವರೊಂದಿಗೆ ಇಂದು ವಿವಿಧ ವಿಷಯಗಳ ಬಗ್ಗೆ ʻಪಾಡ್‌ಕಾಸ್ಟ್ʼನಲ್ಲಿ ಸಂವಾದ ನಡೆಸಿದರು. ಪ್ರಾಮಾಣಿಕವಾದ, ಮನದಾಳದ ಮಾತುಕತೆಯ ವೇಳೆ ಪ್ರಧಾನಿ ಅವರನ್ನು ನೀವು ಏಕೆ ಉಪವಾಸ ಮಾಡುತ್ತೀರಿ ಮತ್ತು ಹೇಗೆ ನಿರ್ವಹಿಸುತ್ತೀರಿ ಎಂದು ಕೇಳಿದಾಗ, ಪ್ರಧಾನಿಯವರು ತಮ್ಮ ಮೇಲಿನ ಗೌರವದ ಸಂಕೇತವಾಗಿ ಉಪವಾಸ ಮಾಡಿದ ಪಾಡ್‌ಕಾಸ್ಟರ್‌ ಲೆಕ್ಸ್ ಫ್ರಿಡ್ಮನ್ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಭಾರತದಲ್ಲಿ, ಧಾರ್ಮಿಕ ಸಂಪ್ರದಾಯಗಳು ದೈನಂದಿನ ಜೀವನದೊಂದಿಗೆ ಆಳವಾಗಿ ಹೆಣೆದುಕೊಂಡಿವೆ ಎಂದು ಶ್ರೀ ಮೋದಿ ಹೇಳಿದರು. ಹಿಂದೂ ಧರ್ಮವು ಕೇವಲ ಆಚರಣೆಗಳ ಕುರಿತಾದದ್ದಲ್ಲ. ಅದು ಜೀವನಕ್ಕೆ ಮಾರ್ಗದರ್ಶನ ನೀಡುವ ತತ್ವಶಾಸ್ತ್ರವಾಗಿದೆ ಎಂದು ಹೇಳಿದ ಶ್ರೀ ಮೋದಿ ಅವರು ಈ ಕುರಿತು ಭಾರತದ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ವ್ಯಾಖ್ಯಾನವನ್ನು ಉಲ್ಲೇಖಿಸಿದರು. ಉಪವಾಸವು ಶಿಸ್ತನ್ನು ಬೆಳೆಸಲು ಹಾಗೂ ಮನಸ್ಸು ಹಾಗೂ ದೇಹವನ್ನು ಸಮತೋಲನಗೊಳಿಸಲು ಒಂದು ಸಾಧನವಾಗಿದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವು ಇಂದ್ರಿಯಗಳ ಪ್ರಜ್ಞೆಯನ್ನು ಹೆಚ್ಚಿಸುತ್ತದೆ, ಅವುಗಳನ್ನು ಹೆಚ್ಚು ಸೂಕ್ಷ್ಮ ಮತ್ತು ಜಾಗೃತಗೊಳಿಸುತ್ತದೆ ಎಂದು ಪ್ರಧಾನಿ ಹೇಳಿದರು. ಉಪವಾಸದ ಸಮಯದಲ್ಲಿ, ಅತ್ಯಂತ ಸೂಕ್ಷ್ಮವಾದ ಸುವಾಸನೆ ಮತ್ತು ವಿವರಗಳನ್ನು ಸಹ ಹೆಚ್ಚು ಸ್ಪಷ್ಟವಾಗಿ ಗ್ರಹಿಸಬಹುದು ಎಂದು ಅವರು ಹೇಳಿದರು. ಉಪವಾಸವು ಆಲೋಚನಾ ಪ್ರಕ್ರಿಯೆಯನ್ನು ವೇಗಗೊಳಿಸುತ್ತದೆ, ಹೊಸ ದೃಷ್ಟಿಕೋನಗಳನ್ನು ಒದಗಿಸುತ್ತದೆ ಮತ್ತು ರೂಢಿಗತವಲ್ಲದ ರೀತಿಯಲ್ಲಿ (ಔಟ್‌ ಆಫ್‌ ದಿ ಬಾಕ್ಸ್‌) ಆಲೋಚನೆಯನ್ನು ಉತ್ತೇಜಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸವೆಂದರೆ ಕೇವಲ ಆಹಾರವನ್ನು ತ್ಯಜಿಸುವುದಷ್ಟೇ ಅಲ್ಲ ಎಂದು ಶ್ರೀ ಮೋದಿ ಸ್ಪಷ್ಟಪಡಿಸಿದರು. ಇದು ಪೂರ್ವ ಸಿದ್ಧತೆ ಮತ್ತು ನಿರ್ವಿಷೀಕರಣದ (ಡಿಟಾಕ್ಸಿಕೇಷನ್‌) ವೈಜ್ಞಾನಿಕ ಪ್ರಕ್ರಿಯೆಯನ್ನು ಒಳಗೊಂಡಿದೆ. ಹಲವಾರು ದಿನಗಳ ಮುಂಚಿತವಾಗಿ ಆಯುರ್ವೇದ ಮತ್ತು ಯೋಗ ಅಭ್ಯಾಸಗಳನ್ನು ಅನುಸರಿಸುವ ಮೂಲಕ ತಮ್ಮ ದೇಹವನ್ನು ಉಪವಾಸಕ್ಕಾಗಿ ಸಜ್ಜುಗೊಳಿಸುವುದಾಗಿ ಅವರು ಒತ್ತಿ ಹೇಳಿದರು ಮತ್ತು ಈ ಅವಧಿಯಲ್ಲಿ ದೇಹದಲ್ಲಿ ನೀರಿನ ಅಂಶವನ್ನು ಕಾಯ್ದುಕೊಳ್ಳುವುದರ ಮಹತ್ವವನ್ನು ಒತ್ತಿ ಹೇಳಿದರು. ಉಪವಾಸ ಪ್ರಾರಂಭವಾದ ನಂತರ, ಅವರು ಅದನ್ನು ಭಕ್ತಿ ಮತ್ತು ಸ್ವಯಂ ಶಿಸ್ತಿನ ಕ್ರಿಯೆಯಾಗಿ ನೋಡುವುದಾಗಿ, ಮತ್ತು ಇದು ಆಳವಾದ ಆತ್ಮಾವಲೋಕನ ಮತ್ತು ಏಕಾಗ್ರತೆಗೆ ಅನುವು ಮಾಡಿಕೊಡುತ್ತದೆ ಎಂದು ಹೇಳಿದರು. ತಮ್ಮ ಶಾಲಾ ದಿನಗಳಲ್ಲಿ ಉಪವಾಸದ ಅಭ್ಯಾಸವು ವೈಯಕ್ತಿಕ ಅನುಭವದಿಂದ ಪ್ರಾರಂಭವಾಯಿತು. ಮಹಾತ್ಮಾ ಗಾಂಧಿಯವರಿಂದ ಸ್ಫೂರ್ತಿಪಡೆದ ಆಂದೋಲನದಿಂದ ಅದು ಶುರುವಾಯಿತು ಎಂದು ಪ್ರಧಾನಿ ಹಂಚಿಕೊಂಡರು. ಅವರು ತಮ್ಮ ಮೊದಲ ಉಪವಾಸದ ಸಮಯದಲ್ಲಿ ಶಕ್ತಿ ಮತ್ತು ಜಾಗೃತಿಯಲ್ಲಿ ಉಂಟಾದ ತೀವ್ರತೆಯ ಅನುಭವನ್ನು ವಿವರಿಸಿದರು. ಅದು ಉಪವಾಸದ ಪರಿವರ್ತಕ ಶಕ್ತಿಯನ್ನು ತಮಗೆ ಮನವರಿಕೆ ಮಾಡಿಕೊಟ್ಟಿತು ಎಂದರು. ಉಪವಾಸವು ತಮ್ಮನ್ನು ತಾಮಸ ಅಥವಾ ನಿಧಾನಗೊಳಿಸುವುದಿಲ್ಲ. ಬದಲಾಗಿ, ಇದು ಆಗಾಗ್ಗೆ ತಮ್ಮ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಉಪವಾಸದ ಸಮಯದಲ್ಲಿ, ಅವರ ಆಲೋಚನೆಗಳು ಹೆಚ್ಚು ಮುಕ್ತವಾಗಿ ಮತ್ತು ಸೃಜನಶೀಲವಾಗಿ ಹರಿಯುತ್ತವೆ, ಇದು ತಮ್ಮನ್ನು ವ್ಯಕ್ತಪಡಿಸಲು ಅದ್ಭುತ ಅನುಭವವನ್ನು ನೀಡುತ್ತದೆ ಎಂದು ಅವರು ವಿವರಿಸಿದರು.

ಭಾರತ - ಕತಾರ್ ಜಂಟಿ ಹೇಳಿಕೆ

February 18th, 08:17 pm

ಭಾರತದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಕತಾರ್ ದೇಶದ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರು 2025 ಫೆಬ್ರವರಿ 17-18ರಂದು ಭಾರತಕ್ಕೆ ಭೇಟಿ ನೀಡಿದ್ದರು. ಗೌರವಾನ್ವಿತ ಅಮೀರ್ ಅವರೊಂದಿಗೆ ಸಚಿವರು, ಅಧಿಕಾರಿಗಳು ಮತ್ತು ಉದ್ಯಮ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗ ಆಗಮಿಸಿತ್ತು. ಇದು ಗೌರವಾನ್ವಿತ ಅಮೀರ್ ಅವರು ಭಾರತಕ್ಕೆ ನೀಡುತ್ತಿರುವ 2ನೇ ಭೇಟಿಯಾಗಿತ್ತು.

ಒಡಿಶಾದ ಭುವನೇಶ್ವರದಲ್ಲಿ 18ನೇ ಪ್ರವಾಸಿ ಭಾರತೀಯ ದಿವಸ್ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 09th, 10:15 am

ಒಡಿಶಾದ ಗವರ್ನರ್ ಹರಿ ಬಾಬು ಜೀ, ನಮ್ಮ ಜನಪ್ರಿಯ ಮುಖ್ಯಮಂತ್ರಿ ಮೋಹನ್ ಚರಣ್ ಮಾಂಝಿ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹ ಸದಸ್ಯ ಎಸ್. ಜೈಶಂಕರ್ ಜೀ, ಜುವಾಲ್ ಒರಾಮ್ ಜೀ, ಧರ್ಮೇಂದ್ರ ಪ್ರಧಾನ ಜೀ, ಅಶ್ವಿನಿ ವೈಷ್ಣವ್ ಜೀ, ಶೋಭಾ ಕರಂದ್ಲಾಜೆ ಜೀ, ಕೀರ್ತಿ ವರ್ಧನ್ ಸಿಂಗ್ ಜೀ, ಪಬಿತ್ರ ಮಾರ್ಗರೇಟಾ ಜೀ, ಒಡಿಶಾದ ಉಪ ಮುಖ್ಯಮಂತ್ರಿ ಕನಕ್ ವರ್ಧನ್ ಸಿಂಗ್ ದೇವ್ ಜೀ, ಪ್ರವತಿ ಪರಿದಾ ಜೀ, ಇತರ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಜಗತ್ತಿನ ಮೂಲೆ ಮೂಲೆಯಿಂದ ಇಲ್ಲಿಗೆ ಬಂದಿರುವ ಭಾರತ ಮಾತೆಯ ಎಲ್ಲಾ ಪುತ್ರರೇ ಮತ್ತು ಪುತ್ರಿಯರೇ!

ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 09th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ ಕಲಾವಿದ ರಿಕಿ ಕೇಜ್ ಮತ್ತು ಅವರ ತಂಡವನ್ನು ಶ್ಲಾಘಿಸಿದರು.

ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಸಂದರ್ಭದಲ್ಲಿ ಭಾರತ-ಸ್ಪೇನ್ ಜಂಟಿ ಹೇಳಿಕೆ (ಅಕ್ಟೋಬರ್ 28-29, 2024)

October 28th, 06:32 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸ್ಪೇನ್ ಸರ್ಕಾರದ ಅಧ್ಯಕ್ಷರಾದ ಶ್ರೀ ಪೆಡ್ರೊ ಸ್ಯಾಂಚೆಜ್ ಅವರು 28-29 ಅಕ್ಟೋಬರ್ 2024 ರಂದು ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಇದು ಅಧ್ಯಕ್ಷ ಸ್ಯಾಂಚೆಜ್ ಅವರ ಭಾರತಕ್ಕೆ ಮೊದಲ ಭೇಟಿ ಮತ್ತು ಮೊದಲನೆಯದು ಮತ್ತು 18 ವರ್ಷಗಳ ನಂತರ ಭಾರತಕ್ಕೆ ಸ್ಪೇನ್ ಸರ್ಕಾರದ ಅಧ್ಯಕ್ಷರ ಭೇಟಿ ಇದಾಗಿದೆ. ಸ್ಪೇನ್ ಸರ್ಕಾರದ ಸಾರಿಗೆ ಮತ್ತು ಸುಸ್ಥಿರ ಚಲನಶೀಲತೆ ಸಚಿವರು, ಕೈಗಾರಿಕೆ ಮತ್ತು ಪ್ರವಾಸೋದ್ಯಮ ಸಚಿವರು ಮತ್ತು ಉನ್ನತ ಮಟ್ಟದ ಅಧಿಕಾರಿ ಮತ್ತು ಉದ್ಯಮ ರಂಗದ ನಿಯೋಗದೊಂದಿಗೆ ಅವರು ಭಾರತಕ್ಕೆ ಭೇಟಿ ನೀಡಿದ್ದಾರೆ.

ಭಾರತ ಮತ್ತು ಮಾಲ್ಡೀವ್ಸ್: ಸಮಗ್ರ ಆರ್ಥಿಕ ಮತ್ತು ಕಡಲ ತೀರದ ಸುರಕ್ಷತೆಯಲ್ಲಿ ಪಾಲುದಾರಿಕೆಗಾಗಿ ಒಂದು ದೂರದರ್ಶಿತ್ವ

October 07th, 02:39 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ಡೀವ್ಸ್ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮದ್ ಮುಯಿಝು ಅವರು 7ನೇ ಅಕ್ಟೋಬರ್ 2024ರಂದು ಭೇಟಿಯಾಗಿದ್ದರು. ದ್ವಿಪಕ್ಷೀಯ ಸಂಬಂಧಗಳ ವಿಚಾರವಾಗಿ ವಿಸ್ತೃತವಾಗಿ ಸಮಗ್ರವಾಗಿ ಪರಿಶೀಲಿಸಿದ ಉಭಯ ನಾಯಕರು ಎರಡೂ ದೇಶಗಳ ಜನರ ಒಳಿತಿಗಾಗಿ ಐತಿಹಾಸಿಕವೆನಿಸುವ ಇನ್ನಷ್ಟು ನಿಕಟ ಮತ್ತು ವಿಶೇಷ ಸಂಬಂಧವನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಈವರೆಗೆ ಸಾಧಿಸಿದ ಪ್ರಗತಿಯ ಪರಿಶೀಲನೆ ನಡೆಸಿದರು.

ಮಾಲ್ಡೀವ್ಸ್ ಅಧ್ಯಕ್ಷರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪತ್ರಿಕಾ ಹೇಳಿಕೆಯ ಇಂಗ್ಲಿಷ್ ಅವತರಣಿಕೆ (ಅಕ್ಟೋಬರ್ 7, 2024)

October 07th, 12:25 pm

ಮೊದಲನೆಯದಾಗಿ, ನಾನು ಅಧ್ಯಕ್ಷ ಮುಯಿಝು ಮತ್ತು ಅವರ ನಿಯೋಗಕ್ಕೆ ಆತ್ಮೀಯ ಸ್ವಾಗತವನ್ನು ನೀಡಲು ಬಯಸುತ್ತೇನೆ

2023 ಶ್ರೇಣಿಯ ಐ.ಎಫ್‌.ಎಸ್. ಅಧಿಕಾರಿ ಪ್ರಶಿಕ್ಷಣಾರ್ಥಿಗಳು ಪ್ರಧಾನ ಮಂತ್ರಿ ಅವರನ್ನು ಭೇಟಿ ಮಾಡಿದರು

August 29th, 06:35 pm

ಭಾರತೀಯ ವಿದೇಶಾಂಗ ಸೇವೆಯ (ಐ.ಎಫ್‌.ಎಸ್) 2023 ಶ್ರೇಣಿಯ ಅಧಿಕಾರಿ ಪ್ರಶಿಕ್ಷಣಾರ್ಥಿಗಳು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಇಂದು ಮುಂಜಾನೆ 7, ಲೋಕ ಕಲ್ಯಾಣ್ ಮಾರ್ಗ್‌ ನಲ್ಲಿರುವ ಪ್ರಧಾನಮಂತ್ರಿಯವರ ನಿವಾಸದಲ್ಲಿ ಭೇಟಿ ಮಾಡಿದರು. ಇವರು 15 ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆ ಆಗಿರುವ 2023 ರ ಶ್ರೇಣಿಯ 36 ಐ.ಎಫ್‌.ಎಸ್ ಅಧಿಕಾರಿ ಪ್ರಶಿಕ್ಷಣಾರ್ಥಿಗಳಾಗಿದ್ದಾರೆ.

ಪೋಲೆಂಡ್ ಗಣರಾಜ್ಯ ಮತ್ತು ಉಕ್ರೇನ್ ಭೇಟಿಗೆ ಮುನ್ನ ಪ್ರಧಾನ ಮಂತ್ರಿ ಅವರ ನಿರ್ಗಮನ ಹೇಳಿಕೆ

August 21st, 09:07 am

ನಮ್ಮ ರಾಜತಾಂತ್ರಿಕ ಸಂಬಂಧಗಳ 70 ವರ್ಷಗಳನ್ನು ನಾವು ಆಚರಿಸುತ್ತಿರುವ ಸಂದರ್ಭದಲ್ಲಿ ನನ್ನ ಪೋಲೆಂಡ್ ಭೇಟಿ ಬಂದಿದೆ. ಪೋಲೆಂಡ್ ಮಧ್ಯ ಯುರೋಪಿನ ಪ್ರಮುಖ ಆರ್ಥಿಕ ಪಾಲುದಾರ. ಪ್ರಜಾಪ್ರಭುತ್ವ ಮತ್ತು ಬಹುತ್ವಕ್ಕೆ ನಮ್ಮ ಪರಸ್ಪರ ಬದ್ಧತೆ ನಮ್ಮ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತದೆ. ನಮ್ಮ ಪಾಲುದಾರಿಕೆಯನ್ನು ಮತ್ತಷ್ಟು ಮುಂದುವರಿಸಲು ನನ್ನ ಸ್ನೇಹಿತ ಪ್ರಧಾನಿ ಡೊನಾಲ್ಡ್ ಟಸ್ಕ್ ಮತ್ತು ಅಧ್ಯಕ್ಷ ಆಂಡ್ರೆಜ್ ಡುಡಾ ಅವರನ್ನು ಭೇಟಿ ಮಾಡಲು ನಾನು ಎದುರು ನೋಡುತ್ತಿದ್ದೇನೆ. ನಾನು ಪೋಲೆಂಡ್ ನ ರೋಮಾಂಚಕ ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಲಿದ್ದೇನೆ.

ಶ್ರೀ ನಟವರ್ ಸಿಂಗ್ ನಿಧನ: ಪ್ರಧಾನಮಂತ್ರಿ ಸಂತಾಪ

August 11th, 08:17 am

ತಮ್ಮ ಬುದ್ಧಿಶಕ್ತಿ ಮತ್ತು ಸಮೃದ್ಧ ಬರವಣಿಗೆಗೆ ಹೆಸರಾಗಿದ್ದ ರಾಜತಾಂತ್ರಿಕತೆ ಮತ್ತು ವಿದೇಶಾಂಗ ನೀತಿ ವಿಷಯಗಳಲ್ಲಿ ನಟವರ್ ಸಿಂಗ್ ಅವರು ನೀಡಿದ ಶ್ರೀಮಂತ ಕೊಡುಗೆಗಳನ್ನು ಪ್ರಧಾನಮಂತ್ರಿ ಸ್ಮರಿಸಿಕೊಂಡಿದ್ದಾರೆ.

ಎಸ್.ಸಿ.ಒ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣ

July 04th, 01:29 pm

ಭಾರತ 2017 ರಲ್ಲಿ ಕಝಖ್ ಎಸ್.ಸಿ.ಒ ಸದಸ್ಯ ದೇಶವಾಗಿ ಭಾಗವಹಿಸಿದ್ದನ್ನು ಭಾರತ ಸ್ಮರಿಸಿಕೊಳ್ಳುತ್ತಿದೆ. ಅಲ್ಲಿಂದ ಈ ವರೆಗೆ ನಾವು ಎಸ್.ಸಿ.ಒ ಅಧ್ಯಕ್ಷತೆಯ ಒಂದು ಸಂಪೂರ್ಣ ವೃತ್ತವನ್ನು ಪೂರೈಸಿದ್ದೇವೆ. ಭಾರತ 2020 ರಲ್ಲಿ ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ ಸಭೆ ಮತ್ತು ಕೌನ್ಸಿಲ್ ಆಫ್ ಹೆಡ್ಸ್ ಆಫ್ ಸ್ಟೇಟ್ ಸಭೆಯಲ್ಲಿ 2023 ರಲ್ಲಿ ಆಯೋಜಿಸಿತ್ತು. ಎಸ್.ಸಿ.ಒ ನಮ್ಮ ವಿದೇಶಾಂಗ ನೀತಿಯಲ್ಲಿ ಪ್ರಮುಖ ಸ್ಥಾನ ಪಡೆದುಕೊಂಡಿದೆ.