ಭಾರತದ 80ನೇ ಸ್ವಾತಂತ್ರ್ಯೋತ್ಸವಕ್ಕೆ ಆತ್ಮೀಯವಾಗಿ ಶುಭ ಕೋರಿದ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಕೃತಜ್ಞತೆ
August 15th, 05:48 pm
ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಶುಭಾಶಯ ಕೋರಿದ ವಿಶ್ವ ನಾಯಕರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ವಿಶ್ವೆದೆಲ್ಲೆಡೆಗಳಿಂದ ಸ್ವೀಕೃತವಾದ ಸಂದೇಶಗಳಿಗೆ ಅವರು ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಪ್ರಧಾನ ಮಂತ್ರಿ ವಿಕಸಿತ ಭಾರತ ರೋಜ್ ಗಾರ್ ಯೋಜನೆಯ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 19th, 05:15 pm
ನನ್ನ ಸಂಪುಟ ಸಹೋದ್ಯೋಗಿ ಶ್ರೀ ಮನ್ಸುಖ್ ಮಾಂಡವೀಯ ಜಿ, ಸಹೋದರಿ ಶೋಭಾ ಜಿ, ದೇಶಾದ್ಯಂತ ವಿವಿಧ ಕಾರ್ಯಕ್ರಮಗಳು ಮತ್ತು ತಂತ್ರಜ್ಞಾನದೊಂದಿಗೆ ಸಂಪರ್ಕ ಹೊಂದಿದ ಎಲ್ಲಾ ಗಣ್ಯ ವ್ಯಕ್ತಿಗಳೆ, ದೂರದಿಂದಲೇ ಈ ಕಾರ್ಯಕ್ರಮದೊಂದಿಗೆ 200 ಸ್ಥಳಗಳಿಂದ ಸಂಪರ್ಕ ಹೊಂದಿರುವ ಸುಮಾರು 2 ಲಕ್ಷ ಜನರಿಗೆ ನಾನು ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ, ಇಂದು ಇಲ್ಲಿ ಕೈಗಾರಿಕಾ ಕ್ಷೇತ್ರದ ಅನೇಕ ಗಣ್ಯ ವ್ಯಕ್ತಿಗಳು ಹಾಜರಿರುವುದನ್ನು ನಾನು ನೋಡುತ್ತಿದ್ದೇನೆ. ಸಹಜವಾಗಿ ಯುವ ಸಮುದಾಯ ಇಲ್ಲಿ ಉತ್ಸಾಹದಿಂದ ದೊಡ್ಡ ಸಂಖ್ಯೆಯಲ್ಲಿ ಇರುವುದು ಗೋಚರಿಸುತ್ತಿದೆ.ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 19th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ'ಯ ಫಲಾನುಭವಿಗಳು, ಉದ್ಯಮದ ಪ್ರತಿನಿಧಿಗಳು ಮತ್ತು ಪಾಲುದಾರರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ, ದೇಶದ ಯುವಕರನ್ನು ಸಬಲೀಕರಣಗೊಳಿಸಲು ಮತ್ತು ದೇಶಾದ್ಯಂತ ಉದ್ಯೋಗ ಸೃಷ್ಟಿಯನ್ನು ವೇಗಗೊಳಿಸಲು ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಭಾರತ ಸರ್ಕಾರದ ಪ್ರಮುಖ ಉದ್ಯೋಗ-ಸಂಯೋಜಿತ ಪ್ರೋತ್ಸಾಹಕ ಯೋಜನೆಯಾದ ಪ್ರಧಾನ ಮಂತ್ರಿ ವಿಕಸಿತ್ ಭಾರತ್ ರೋಜ್ ಗಾರ್ ಯೋಜನೆ (PM-VBRY) ಅನುಷ್ಠಾನದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುವ ಸಲುವಾಗಿ ಮತ್ತು ವಿವಿಧ ವಲಯಗಳಲ್ಲಿ ಸಾಮಾಜಿಕ ಭದ್ರತೆಯ ವ್ಯಾಪ್ತಿಯನ್ನು ವಿಸ್ತರಿಸಲು, ಶ್ರೀ ಮೋದಿ ಅವರು PM-VBRY ಅಡಿಯಲ್ಲಿ ಸುಮಾರು ₹2,400 ಕೋಟಿ ಮೌಲ್ಯದ ಪ್ರೋತ್ಸಾಹಕ ಧನವನ್ನು ವಿತರಿಸಿದರು. ಈ ಪ್ರೋತ್ಸಾಹಕ ಧನವು ದೇಶಾದ್ಯಂತ 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿಗೆ ಬೆಂಬಲ ನೀಡಿದೆ.ಭಾರತೀಯ ಸಮುದಾಯ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
June 18th, 11:41 pm
ಪ್ಯಾರಿಸ್ ನಗರವು ಬೆಳಕು ಮತ್ತು ಬಣ್ಣಗಳ ನಗರ. ಇದು ಕಲೆ, ಕಲ್ಪನೆಗಳು ಮತ್ತು ನಾವೀನ್ಯತೆಗೆ ಸ್ಫೂರ್ತಿಯ ಸ್ಥಳವಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದು ನೀವೆಲ್ಲರೂ ಈ ನಗರವನ್ನು ಇನ್ನಷ್ಟು ಸುಂದರಗೊಳಿಸುತ್ತೀರಿ. ನೀವು ಅದನ್ನು ಹೊಸ ಮತ್ತು ರೋಮಾಂಚಕ ಬಣ್ಣಗಳಿಂದ ತುಂಬುತ್ತೀರಿ.ಪ್ಯಾರಿಸ್ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 18th, 09:30 pm
ಜೂನ್ 18, 2026 ರಂದು ಪ್ಯಾರಿಸ್ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಿದರು. ಸ್ಥಳಕ್ಕೆ ಆಗಮಿಸಿದಾಗ, ಪ್ರಧಾನಮಂತ್ರಿಗೆ ಆತ್ಮೀಯ ಮತ್ತು ವರ್ಣರಂಜಿತ ಸ್ವಾಗತ ನೀಡಲಾಯಿತು, ಇದು ಮಾತೃಭೂಮಿಯ ಬಗ್ಗೆ ವಲಸಿಗರ ಆಳವಾದ ವಾತ್ಸಲ್ಯವನ್ನು ಪ್ರತಿಬಿಂಬಿಸುತ್ತದೆ.ವಿಶ್ವಾಸಾರ್ಹ ಕೃತಕ ಬುದ್ಧಿಮತ್ತೆ, ನಾವೀನ್ಯತೆ ಮತ್ತು ಅಂತಾರಾಷ್ಟ್ರೀಯ ಸಹಕಾರದ ಕುರಿತು ಮಿಸ್ಟ್ರಲ್ ಎಐ ಸಿಇಒ ಆರ್ಥರ್ ಮೆಂಚ್ ಅವರೊಂದಿಗೆ ಪ್ರಧಾನಮಂತ್ರಿ ಅಭಿಪ್ರಾಯ ವಿನಿಮಯ
June 18th, 06:44 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಸ್ಟ್ರಲ್ ಎಐ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಆರ್ಥರ್ ಮೆಂಚ್ ಅವರೊಂದಿಗೆ ವಿಕಸನಗೊಳ್ಳುತ್ತಿರುವ ಜಾಗತಿಕ ಕೃತಕ ಬುದ್ಧಿಮತ್ತೆ (ಎಐ) ಭೂದೃಶ್ಯದ ಬಗ್ಗೆ ಒಳನೋಟವುಳ್ಳ ಚರ್ಚೆ ನಡೆಸಿದರು.ಆಲ್ ಸ್ಟಮ್ ಸಿಇಒ ಶ್ರೀ ಮಾರ್ಟಿನ್ ಶ್ಯಾನ್ ಅವರೊಂದಿಗೆ ಪ್ರಧಾನಮಂತ್ರಿ ಸಂವಾದ; ಭಾರತದ ಯುವಸಮೂಹದೊಂದಿಗೆ ಜಾಗತಿಕ ಸಹಯೋಗಕ್ಕಾಗಿ ಅವಕಾಶಗಳ ವಿವರಣೆ
June 18th, 06:42 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಲ್ ಸ್ಟಮ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಶ್ರೀ ಮಾರ್ಟಿನ್ ಶ್ಯಾನ್ ಅವರೊಂದಿಗೆ ಸಂವಾದ ನಡೆಸಿದರು.ಭಾರತದಲ್ಲಿ ಸಾನ್-ಗೋಬೈನ್ನ ಹೆಜ್ಜೆಗುರುತನ್ನು ವಿಸ್ತರಿಸುವ ಬಗ್ಗೆ ಸಿ.ಇ.ಒ ಬೆನ್ವಾ ಬ್ಯಾಸಿನ್ ಅವರೊಂದಿಗೆ ಚರ್ಚೆ ನಡೆಸಿದ ಪ್ರಧಾನಮಂತ್ರಿ
June 18th, 06:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾನ್-ಗೋಬೈನ್ನ (Saint-Gobain) ಶ್ರೀ ಬೆನ್ವಾ ಬ್ಯಾಸಿನ್ ಅವರೊಂದಿಗೆ ಸಂವಾದ ನಡೆಸಿರುವುದು ಸಂತಸದಾಯಕ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.ಸಿ.ಎಂ.ಎ ಸಿ.ಜಿ.ಎಂ ಅಧ್ಯಕ್ಷರು ಮತ್ತು ಸಿ.ಇ.ಒ ರೊಡಾಲ್ಫ್ ಸಾದೇ ಅವರೊಂದಿಗೆ ಕಡಲ ಸಂಪರ್ಕ ಮತ್ತು ಸಹಯೋಗದ ಅವಕಾಶಗಳ ಕುರಿತು ಚರ್ಚೆ ನಡೆಸಿದ ಪ್ರಧಾನಮಂತ್ರಿ
June 18th, 06:37 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಿ.ಎಂ.ಎ ಸಿ.ಜಿ.ಎಂ (CMA CGM) ನ ಅಧ್ಯಕ್ಷರಾದ ಶ್ರೀ ರೊಡಾಲ್ಫ್ ಸಾದೇ ಅವರೊಂದಿಗೆ ಕಡಲ ಸಂಪರ್ಕ, ಜಾಗತಿಕ ಹಡಗು ಪ್ರವೃತ್ತಿಗಳು ಮತ್ತು ಭಾರತದ ವೇಗವಾಗಿ ಬೆಳೆಯುತ್ತಿರುವ ಕಡಲ ವಲಯದಲ್ಲಿ ಉದಯೋನ್ಮುಖ ಅವಕಾಶಗಳ ಕುರಿತು ಫಲಪ್ರದ ಚರ್ಚೆ ನಡೆಸಿದರು.ಪ್ಯಾರಿಸ್ನಲ್ಲಿ ನಡೆದ ವಿವಾಟೆಕ್ 2026ರ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಅನುವಾದ
June 18th, 06:15 pm
ಈ ವರ್ಷ ಭಾರತ-ಫ್ರಾನ್ಸ್ ನಾವೀನ್ಯತೆ ವರ್ಷವನ್ನು ಪ್ರಾರಂಭಿಸುವುದರೊಂದಿಗೆ, ಫ್ರಾನ್ಸ್, ಭಾರತ ಮತ್ತು ಯುರೋಪಿನ ತಾಂತ್ರಿಕ ಪರಿಸರ ವ್ಯವಸ್ಥೆಗಳನ್ನು ಹತ್ತಿರ ತರುವ ಪ್ರಮುಖ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ಕೆಲವು ದಿನಗಳ ಹಿಂದೆ ನೈಸ್ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ನಿಂದ ಇಂದು ಪ್ಯಾರಿಸ್ನ ವಿವಾ ಟೆಕ್ವರೆಗೆ, ನಿಮ್ಮ ನವೋದ್ಯಮಗಳು ಅನೇಕ ಹೊಸ ಪಾಲುದಾರಿಕೆಗಳನ್ನು ರೂಪಿಸುತ್ತಿವೆ.ವಿವಾಟೆಕ್ 2026ರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 18th, 06:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಇಂದು ಪ್ಯಾರಿಸ್ ನಲ್ಲಿ ನಡೆದ ಯುರೋಪಿನ ಅತಿದೊಡ್ಡ ತಂತ್ರಜ್ಞಾನ ಮತ್ತು ಸ್ಟಾರ್ಟ್-ಅಪ್ ಕಾರ್ಯಕ್ರಮವಾದ ವಿವಾಟೆಕ್ 2026 ರಲ್ಲಿ ಭಾಗವಹಿಸಿದರು.ಎವಿಯನ್ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
June 18th, 05:04 am
ಜೂನ್ 17, 2026 ರಂದು ಫ್ರಾನ್ಸ್ನ ಎವಿಯನ್ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷರಾದ ಶ್ರೀ ಡೊನಾಲ್ಡ್ ಜೆ. ಟ್ರಂಪ್ ಅವರನ್ನು ಭೇಟಿಯಾದರು.ಫ್ರಾನ್ಸ್ನ ಎವಿಯನ್ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ "ಕೃತಕ ಬುದ್ಧಿಮತ್ತೆಯ ಸುರಕ್ಷಿತ, ತ್ವರಿತ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವ" ಕುರಿತ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 18th, 05:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್ನ ಎವಿಯನ್ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಕೃತಕ ಬುದ್ಧಿಮತ್ತೆಯ ಸುರಕ್ಷಿತ, ತ್ವರಿತ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವ ವಿಷಯದ ಕುರಿತಾದ ಔಟ್ರೀಚ್ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು.ಫ್ರಾನ್ಸ್ನ ಎವಿಯನ್ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ "ಎಲ್ಲರಿಗೂ ಸಮತೋಲಿತ, ಹಂಚಿಕೆಯ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವ" ಎಂಬ ವಿಷಯದ ಕುರಿತು ಪ್ರಧಾನಮಂತ್ರಿ ಅವರ ಭಾಷಣ
June 18th, 05:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್ನ ಎವಿಯನ್ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಎಲ್ಲರಿಗೂ ಸಮತೋಲಿತ, ಹಂಚಿಕೆಯ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವ ಎಂಬ ವಿಷಯದ ಕುರಿತ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು.ಭಾರತ-ಯುಕೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದವು ದ್ವಿಪಕ್ಷೀಯ ಬಾಂಧವ್ಯಗಳಿಗೆ ಒಂದು ಐತಿಹಾಸಿಕ ಮೈಲಿಗಲ್ಲು : ಪ್ರಧಾನಮಂತ್ರಿ ಶ್ಲಾಘನೆ
June 17th, 10:03 pm
ಭಾರತ-ಯುಕೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದವು 2026ರ ಜುಲೈ 15 ರಿಂದ ಜಾರಿಗೆ ಬರಲಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.ಜಿ 7 ಶೃಂಗಸಭೆ-ಅಧಿವೇಶನದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಯ ಕನ್ನಡ ಅನುವಾದ: ಎ.ಐ.ಯ (ಕೃತಕ ಬುದ್ಧಿಮತ್ತೆಯ) ಸುರಕ್ಷಿತ, ತ್ವರಿತ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸುವಿಕೆ
June 17th, 09:20 pm
ನಮ್ಮ ಚರ್ಚೆಗಳಲ್ಲಿ ಈ ಪ್ರಮುಖ ವಿಷಯವನ್ನು ಸೇರಿಸಿದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರನ್ನು ನಾನು ಅಭಿನಂದಿಸುತ್ತೇನೆ. ಕೃತಕ ಬುದ್ಧಿಮತ್ತೆಯು ಮಾನವಕುಲವು ಇದುವರೆಗೆ ಸೃಷ್ಟಿಸಿದ ಅತ್ಯಂತ ಪರಿವರ್ತಕ ತಂತ್ರಜ್ಞಾನಗಳಲ್ಲಿ ಒಂದಾಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ.ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರು ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಸಭೆ
June 17th, 06:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎವಿಯಾನ್ನಲ್ಲಿ ನಡೆದ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಇಂದು ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರಾದ ಮಾನ್ಯ ಶ್ರೀ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಆಯೋಗದ ಅಧ್ಯಕ್ಷರಾದ ಮಾನ್ಯ ಶ್ರೀಮತಿ ಉರ್ಸುಲಾ ವಾನ್ ಡೆರ್ ಲೇಯೆನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು.ಜಿ-7 ಶೃಂಗಸಭೆ-ಜನಸಂಪರ್ಕ ಅಧಿವೇಶನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಇಂಗ್ಲಿಷ್ ಅನುವಾದ: ಎಲ್ಲರಿಗೂ ಸಮತೋಲಿತ, ಹಂಚಿಕೆಯ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವುದು
June 17th, 06:07 pm
ಫ್ರಾನ್ಸ್ನ ಜಿ-7 ಅಧ್ಯಕ್ಷತೆಯು ಎಲ್ಲರನ್ನೂ ಒಳಗೊಳ್ಳುವ ಮತ್ತು ಸುಸ್ಥಿರ ಬೆಳವಣಿಗೆಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡಿದೆ ಎಂಬುದು ನನಗೆ ಸಂತೋಷ ತಂದಿದೆ. ಜಗತ್ತು ಅನೇಕ ಸವಾಲುಗಳು ಮತ್ತು ಅನಿಶ್ಚಿತತೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ, ಈ ವೇದಿಕೆಯಿಂದ ಹೊರಹೊಮ್ಮುವ ಸಂದೇಶವು ಎಲ್ಲಾ ಮಾನವೀಯತೆಯ ಯೋಗಕ್ಷೇಮ ಮತ್ತು ಭವಿಷ್ಯಕ್ಕೆ ಮುಖ್ಯವಾಗಿದೆ.ಎವಿಯಾನ್ ನಲ್ಲಿ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಜರ್ಮನಿಯ ಫೆಡರಲ್ ರಿಪಬ್ಲಿಕ್ ನ ಚಾನ್ಸೆಲರ್ ಅವರೊಂದಿಗೆ ಪ್ರಧಾನಮಂತ್ರಿ ಸಭೆ
June 17th, 05:34 pm
ಫ್ರಾನ್ಸ್ ನ ಎವಿಯಾನ್ ನಲ್ಲಿ ನಡೆದಿರುವ ಜಿ 7 ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜರ್ಮನಿಯ ಫೆಡರಲ್ ರಿಪಬ್ಲಿಕ್ ನ ಚಾನ್ಸೆಲರ್ ಮಾನ್ಯ ಶ್ರೀ ಫ್ರೆಡ್ರಿಕ್ ಮೆರ್ಜ್ ಅವರನ್ನು ಭೇಟಿ ಮಾಡಿದರು. ಈ ವರ್ಷದಲ್ಲಿ ಉಭಯ ನಾಯಕರ ನಡುವಿನ ಎರಡನೇ ಭೇಟಿ ಇದಾಗಿದೆ.ಜಿ 7 ಶೃಂಗಸಭೆಯ ಜನಸಂಪರ್ಕ (ಔಟ್ ರೀಚ್) ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ: ಹೊಸ ಪಾಲುದಾರಿಕೆಗಳನ್ನು ರೂಪಿಸುವುದು ಮತ್ತು ಅಂತಾರಾಷ್ಟ್ರೀಯ ಒಗ್ಗಟ್ಟಿನ ಪುನರ್ನಿರ್ಮಾಣ
June 16th, 10:12 pm
ಇಂದಿನ ಜಗತ್ತು ಹಿಂದೆಂದಿಗಿಂತಲೂ ಹೆಚ್ಚಿನ ಸಂಪರ್ಕ ಹೊಂದಿದೆ ಮತ್ತು ಪರಸ್ಪರ ಅವಲಂಬಿತವಾಗಿದೆ. ಒಂದು ದೇಶದ ಇಂಧನ ಭದ್ರತೆ, ಆಹಾರ ಭದ್ರತೆ, ಆರೋಗ್ಯ ಭದ್ರತೆ, ಸೈಬರ್ ಭದ್ರತೆ ಮತ್ತು ಆರ್ಥಿಕ ಭದ್ರತೆಯು ಇನ್ನು ಮುಂದೆ ಅದರ ಗಡಿಯೊಳಗೆ ಏನು ನಡೆಯುತ್ತದೆ ಎಂಬುದರ ಮೇಲೆ ಮಾತ್ರ ಅವಲಂಬಿತವಾಗಿಲ್ಲ. ಚಲನಶೀಲತೆ, ದತ್ತಾಂಶ, ಹಣ ಮತ್ತು ತಂತ್ರಜ್ಞಾನ ಎಲ್ಲವೂ ನಮ್ಮನ್ನು ಒಟ್ಟಿಗೆ ಸಂಪರ್ಕಿಸುತ್ತವೆ.