ಗಾಂಧಿ ಸ್ಮೃತಿಯಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು

January 30th, 07:32 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಗಾಂಧಿ ಸ್ಮೃತಿಯಲ್ಲಿ ನಡೆದ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದರು. ಬಾಪೂ ಅವರ ಪ್ರಯತ್ನಗಳು ನಮ್ಮ ಸ್ವಾತಂತ್ರ್ಯ ಹೋರಾಟದ ದಿಕ್ಕನ್ನು ಮರುರೂಪಗೊಳಿಸಿವೆ ಮತ್ತು ಭಾರತದ ಪ್ರಯಾಣದ ಮೇಲೆ ಗಾಢವಾದ ಗುರುತು ಬಿಟ್ಟಿವೆ, ಅದು ತಲೆಮಾರಿನಿಂದ ತಲೆಮಾರಿಗೆ ಇನ್ನೂ ಅನುಭವಿಸಲಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಆಯೋಜಿಸಿದ್ದ ಪರಾಕ್ರಮ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 23rd, 05:15 pm

ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ ಅಡ್ಮಿರಲ್ ಡಿ.ಕೆ. ಜೋಶಿ ಜಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಐಎನ್ಎ ಟ್ರಸ್ಟ್ ಅಧ್ಯಕ್ಷರಾದ ಬ್ರಿಗೇಡಿಯರ್ ಆರ್.ಎಸ್. ಛಿಕಾರಾ ಜಿ, ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಪಾಲ್ಗೊಂಡ ಹೋರಾಟಗಾರರು ಮತ್ತು ಐಎನ್ಎಯ ಚಿರಂತನ ಪುರುಷ, ಲೆಫ್ಟಿನೆಂಟ್ ಆರ್. ಮಾಧವನ್ ಜಿ,

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿಯ ಪರಾಕ್ರಮ್ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 23rd, 05:00 pm

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ನಡೆದ ಪರಾಕ್ರಮ್ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಮೋದಿ, ಜನವರಿ 23 ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ವಾರ್ಷಿಕೋತ್ಸವದ ಮಹಿಮಾನ್ವಿತ ದಿನಾಂಕವಾಗಿದೆ ಎಂದು ಹೇಳಿದರು. ನೇತಾಜಿ ಅವರ ಶೌರ್ಯ ಮತ್ತು ಧೈರ್ಯ ನಮಗೆ ಸ್ಫೂರ್ತಿ ನೀಡುತ್ತದೆ ಮತ್ತು ಅವರ ಬಗ್ಗೆ ನಮಗೆ ಭಕ್ತಿ ತುಂಬುತ್ತದೆ ಎಂದು ಅವರು ಹೇಳಿದರು. ಇತ್ತೀಚಿನ ವರ್ಷಗಳಲ್ಲಿ, ಪರಾಕ್ರಮ್ ದಿವಸ್ ರಾಷ್ಟ್ರದ ಚೈತನ್ಯದ ಅವಿಭಾಜ್ಯ ಉತ್ಸವವಾಗಿದೆ ಎಂಬುದನ್ನು ಅವರು ಎತ್ತಿ ತೋರಿಸಿದರು. ಜನವರಿ 23 ಪರಾಕ್ರಮ್ ದಿವಸ್, ಜನವರಿ 25 ರಾಷ್ಟ್ರೀಯ ಮತದಾರರ ದಿನ, ಜನವರಿ 26 ಗಣರಾಜ್ಯೋತ್ಸವ, ಜನವರಿ 29 ಬೀಟಿಂಗ್ ರಿಟ್ರೀಟ್ ಮತ್ತು ಜನವರಿ 30 ಪೂಜ್ಯ ಬಾಪು ಅವರ ಪುಣ್ಯತಿಥಿಯಾಗಿರುವುದು ಸಂತೋಷದ ಕಾಕತಾಳೀಯ ಸಂಗತಿ ಎಂದು ಶ್ರೀ ಮೋದಿ ಹೇಳಿದರು. ಇದು ಗಣರಾಜ್ಯದ ಭವ್ಯ ಉತ್ಸವವನ್ನು ಆಚರಿಸುವ ಹೊಸ ಸಂಪ್ರದಾಯವನ್ನು ಸೃಷ್ಟಿಸಿದೆ ಎಂದ ಅವರು ಪರಾಕ್ರಮ್ ದಿವಸ್‌ನಂದು ಎಲ್ಲಾ ನಾಗರಿಕರಿಗೆ ಶುಭಾಶಯಗಳನ್ನು ಕೋರಿದರು.

'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ

December 28th, 11:30 am

ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.

ಗೋವಾ ವಿಮೋಚನಾ ದಿನದಂದು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗವನ್ನು ಸ್ಮರಿಸಿದ ಪ್ರಧಾನಮಂತ್ರಿ

December 19th, 10:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಗೋವಾ ವಿಮೋಚನಾ ದಿನವು ಭಾರತದ ರಾಷ್ಟ್ರೀಯ ಪಯದಲ್ಲಿ ಒಂದು ನಿರ್ಣಾಯಕ ಅಧ್ಯಾಯವನ್ನು ನೆನಪಿಸುತ್ತದೆ ಎಂದು ಹೇಳಿದ್ದಾರೆ. ಅನ್ಯಾಯವನ್ನು ಸ್ವೀಕರಿಸಲು ನಿರಾಕರಿಸಿದ ಮತ್ತು ಧೈರ್ಯ ಮತ್ತು ದೃಢಸಂಕಲ್ಪದಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಅದಮ್ಯ ಚೈತನ್ಯವನ್ನು ಅವರು ಸ್ಮರಿಸಿದ್ದಾರೆ. ಗೋವಾದ ಸರ್ವತೋಮುಖ ಪ್ರಗತಿಗೆ ಶ್ರಮಿಸುತ್ತಿರುವಾಗ ಅವರ ತ್ಯಾಗಗಳು ರಾಷ್ಟ್ರಕ್ಕೆ ಸದಾ ಪ್ರೇರಣಾದಾಯಕವಾಗಿದೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದ್ದಾರೆ.

ಶ್ರೀ ಸಿ. ರಾಜಗೋಪಾಲಾಚಾರಿ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

December 10th, 09:37 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಸಿ. ರಾಜಗೋಪಾಲಾಚಾರಿ ಅವರ ಜನ್ಮ ವಾರ್ಷಿಕೋತ್ಸವದ ದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರು, ಚಿಂತಕರು, ಬುದ್ಧಿಜೀವಿ ಮತ್ತು ರಾಜಕಾರಣಿಯಾಗಿ ಅವರನ್ನು ಸ್ಮರಿಸಿರುವ ಪ್ರಧಾನಮಂತ್ರಿ, ಮೌಲ್ಯಗಳನ್ನು ಸೃಷ್ಟಿಸುವಲ್ಲಿ ಮತ್ತು ಮನುಕುಲದ ಘನತೆಯನ್ನು ಉಲೇಖಿಸುವಲ್ಲಿ ನಂಬಿಕೆ ಇಟ್ಟಿದ್ದ ರಾಜಾಜಿ ಅವರು 20ನೇ ಶತಮಾನದ ಅತ್ಯಂತ ತೀಕ್ಷ್ಣ ಮನಸ್ಸಿನವರಲ್ಲಿ ಒಬ್ಬರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಗುಜರಾತ್‌ನ ದೇಡಿಯಾಪದದಲ್ಲಿ ನಡೆದ ಜನಜಾತೀಯ ಗೌರವ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

November 15th, 03:15 pm

ಜೈ ಜೋಹರ್! ಗುಜರಾತ್ ರಾಜ್ಯಪಾಲರಾದ ಆಚಾರ್ಯ ದೇವವ್ರತ ಜೀ, ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಗುಜರಾತ್ ಬಿ.ಜೆ.ಪಿ ಅಧ್ಯಕ್ಷ ಜಗದೀಶ್ ವಿಶ್ವಕರ್ಮ ಜೀ, ಗುಜರಾತ್ ಸರ್ಕಾರದ ಸಚಿವರಾದ ನರೇಶ್‌ಭಾಯಿ ಪಟೇಲ್ ಮತ್ತು ಜಯರಾಮ್‌ಭಾಯಿ ಗಮಿತ್ ಜೀ, ಸಂಸತ್ತಿನಲ್ಲಿ ನನ್ನ ಹಳೆಯ ಸಹೋದ್ಯೋಗಿ ಮನ್ಸುಖ್‌ಭಾಯಿ ವಾಸವ ಜೀ, ವೇದಿಕೆಯಲ್ಲಿ ಉಪಸ್ಥಿತರಿರುವ ಭಗವಾನ್ ಬಿರ್ಸಾ ಮುಂಡಾ ಅವರ ಕುಟುಂಬದ ಎಲ್ಲಾ ಸದಸ್ಯರೇ, ಈ ಕಾರ್ಯಕ್ರಮದ ಭಾಗವಾಗಿರುವ ದೇಶದ ಮೂಲೆ ಮೂಲೆಗಳಿಂದ ಬಂದ ನನ್ನ ಬುಡಕಟ್ಟು ಸಹೋದರ, ಸಹೋದರಿಯರೇ, ಇತರ ಎಲ್ಲಾ ಗಣ್ಯರು ಮತ್ತು ಈ ಸಮಯದಲ್ಲಿ ಹಲವಾರು ರಾಷ್ಟ್ರೀಯ ಕಾರ್ಯಕ್ರಮಗಳು ನಡೆಯುತ್ತಿರುವುದರಿಂದ ತಂತ್ರಜ್ಞಾನದ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ ಅನೇಕ ಜನರು. ಜನಜಾತೀಯ ಗೌರವ್ ದಿವಸ್ ಸಂದರ್ಭದಲ್ಲಿ ರಾಜ್ಯಪಾಲರು, ಮುಖ್ಯಮಂತ್ರಿ ಅವರು, ಸಚಿವರು ಮತ್ತು ನಿಮ್ಮೆಲ್ಲರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತಿನ ದೇಡಿಯಾಪಾಡಾದಲ್ಲಿ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅಂಗವಾಗಿ ಜನಜಾತೀಯಯ ಗೌರವ ದಿವಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು

November 15th, 03:00 pm

ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಸ್ಮರಣಾರ್ಥ ಗುಜರಾತಿನ ದೇಡಿಯಾಪಾಡಾದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿವಸ್‌ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಅವರು ₹9,700 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಮೂಲಸೌಕರ್ಯ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನರ್ಮದಾ ಮಾತೆಯ ಪವಿತ್ರ ಭೂಮಿ ಇಂದು ಮತ್ತೊಂದು ಐತಿಹಾಸಿಕ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದ ಶ್ರೀ ಮೋದಿ, ಭಾರತದ ಏಕತೆ ಮತ್ತು ವೈವಿಧ್ಯತೆಯನ್ನು ಸಂಭ್ರಮಿಸಲು ಅಕ್ಟೋಬರ್ 31 ರಂದು ಸರ್ದಾರ್ ಪಟೇಲ್ ಅವರ 150ನೇ ಜಯಂತಿಯನ್ನು ಇದೇ ಸ್ಥಳದಲ್ಲಿ ಆಚರಿಸಲಾಯಿತು ಎಂದು ನೆನಪಿಸಿಕೊಂಡರು, ಅಂದು ಭಾರತ ಪರ್ವಕ್ಕೆ ಚಾಲನೆ ನೀಡಲಾಯಿತು. ಇಂದು ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜಯಂತಿಯ ಅದ್ಧೂರಿ ಆಚರಣೆಯೊಂದಿಗೆ, ನಾವು ಭಾರತ ಪರ್ವದ ಪರಾಕಾಷ್ಠೆಗೆ ಸಾಕ್ಷಿಯಾಗುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಹೇಳಿದರು. ಈ ಶುಭ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಗವಾನ್ ಬಿರ್ಸಾ ಮುಂಡಾ ಅವರಿಗೆ ಗೌರವ ಸಲ್ಲಿಸಿದರು. ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಇಡೀ ಬುಡಕಟ್ಟು ಪ್ರದೇಶದಲ್ಲಿ ಸ್ವಾತಂತ್ರ್ಯದ ಮನೋಭಾವವನ್ನು ಜಾಗೃತಗೊಳಿಸಿದ ಗೋವಿಂದ ಗುರುಗಳ ಆಶೀರ್ವಾದ ಸಹ ಈ ಕಾರ್ಯಕ್ರಮಕ್ಕೆ ಇದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ಅವರು ವೇದಿಕೆಯಿಂದ ಗೋವಿಂದ ಗುರುಗಳಿಗೆ ಗೌರವ ನಮನ ಸಲ್ಲಿಸಿದರು. ಸ್ವಲ್ಪ ಸಮಯದ ಹಿಂದೆ ದೇವಮೋಗ್ರ ಮಾತೆಯ ದೇಗುಲಕ್ಕೆ ಭೇಟಿ ನೀಡುವ ಸೌಭಾಗ್ಯ ಸಿಕ್ಕಿತು ಮತ್ತು ಮತ್ತೊಮ್ಮೆ ಅವರ ಪಾದಗಳಿಗೆ ನಮಸ್ಕರಿಸಿದೆ ಎಂದು ಅವರು ಹೇಳಿದರು.

ರಾಷ್ಟ್ರಗೀತೆ "ವಂದೇ ಮಾತರಂ"ನ 150ನೇ ವಾರ್ಷಿಕೋತ್ಸವದ ವರ್ಷಪೂರ್ತಿ ಆಚರಣೆ(ಸ್ಮರಣಾರ್ಥ)ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

November 07th, 10:00 am

ವಂದೇ ಮಾತರಂ, ಈ ಪದಗಳೇ ಒಂದು ಮಂತ್ರ, ಒಂದು ಶಕ್ತಿ, ಒಂದು ಕನಸು, ಒಂದು ಸಂಕಲ್ಪವಾಗಿದೆ. ವಂದೇ ಮಾತರಂ, ಈ ಒಂದು ಪದವು ಭಾರತ ಮಾತೆಯ ಆರಾಧನೆ, ಭಾರತ ಮಾತೆಯ ನಿಜವಾದ ಆರಾಧನೆಯಾಗಿದೆ. ವಂದೇ ಮಾತರಂ, ಈ ಒಂದು ಪದವು ನಮ್ಮನ್ನು ಇತಿಹಾಸಕ್ಕೆ ಕರೆದೊಯ್ಯುತ್ತದೆ. ಇದು ನಮ್ಮ ಆತ್ಮವಿಶ್ವಾಸವನ್ನು, ನಮ್ಮ ವರ್ತಮಾನವನ್ನು ಆತ್ಮವಿಶ್ವಾಸದಿಂದ ತುಂಬುತ್ತದೆ, ನಮ್ಮ ಭವಿಷ್ಯಕ್ಕೆ ಹೊಸ ಧೈರ್ಯವನ್ನು ನೀಡುತ್ತದೆ, ಅಂತಹ ಯಾವುದೇ ಬೇರೆ ಸಂಕಲ್ಪವಿಲ್ಲ, ಸಾಧಿಸಲಾಗದ ಇನ್ನಾವುದೇ ಸಂಕಲ್ಪವಿಲ್ಲ. ನಾವು ಭಾರತೀಯರು ಸಾಧಿಸಲು ಸಾಧ್ಯವಾಗದ ಬೇರೆ ಇನ್ನಾವುದೇ ಗುರಿಯಿಲ್ಲ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ವರ್ಷವಿಡೀ ನಡೆಯಲಿರುವ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು

November 07th, 09:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಇಂದು ರಾಷ್ಟ್ರೀಯ ಗೀತೆ ʻವಂದೇ ಮಾತರಂʼನ 150ನೇ ವರ್ಷಾಚರಣೆಯ ಸ್ಮರಣಾರ್ಥ ವರ್ಷವಿಡೀ ನಡೆಯಲಿರುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ʻವಂದೇ ಮಾತರಂʼ ಕೇವಲ ಒಂದು ಪದವಲ್ಲ, ಅದೊಂದು ಮಂತ್ರ, ಅದೊಂದು ಶಕ್ತಿ, ಅದೊಂದು ಕನಸು ಮತ್ತು ಒಕ್ಕೊರಲ ಸಂಕಲ್ಪ ಎಂದು ಹೇಳಿದರು. ʻವಂದೇ ಮಾತರಂʼ ಭಾರತ ಮಾತೆಯ ಮೇಲಿನ ಭಕ್ತಿ ಮತ್ತು ಆಧ್ಯಾತ್ಮಿಕ ಸಮರ್ಪಣೆ ಸಾಕಾರರೂಪ ಎಂದು ಅವರು ಒತ್ತಿ ಹೇಳಿದರು. ʻವಂದೇ ಮಾತರಂʼ ಎಂಬ ಒಂದೇ ಒಂದು ಪದವು ನಮ್ಮನ್ನು ನಮ್ಮ ಇತಿಹಾಸದೊಂದಿಗೆ ಬೆಸೆಯುತ್ತದೆ, ನಮ್ಮ ವರ್ತಮಾನಕ್ಕೆ ಆತ್ಮವಿಶ್ವಾಸವನ್ನು ತುಂಬುತ್ತದೆ. ಜೊತೆಗೆ, ಈಡೇರಸಿಕೊಳ್ಳಲಾಗದಂತಹ ಯಾವುದೇ ಸಂಕಲ್ಪವಿಲ್ಲ ಮತ್ತು ಸಾಧಿಸಲಾಗದಂತಹ ಗುರಿ ಯಾವುದೂ ಇಲ್ಲ ಎಂದು ನಂಬುವ ಧೈಯವನ್ನು ನಮ್ಮಲ್ಲಿ ನೆಲೆಗೊಳಿಸುವ ಮೂಲಕ ನಮ್ಮ ಭವಿಷ್ಯಕ್ಕೆ ಸ್ಫೂರ್ತಿ ನೀಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು.

ನವದೆಹಲಿಯಲ್ಲಿ ನಡೆದ 2025ರ ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

October 31st, 06:08 pm

ನವದೆಹಲಿಯ ರೋಹಿಣಿಯಲ್ಲಿ ಇಂದು ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ, ಈಗಷ್ಟೇ ಕೇಳಿದ ಮಂತ್ರಗಳ ಶಕ್ತಿಯನ್ನು ಎಲ್ಲರೂ ಅನುಭವಿಸಬಹುದು ಎಂದು ಹೇಳಿದರು. ತಾವು ಸಭೆಗೆ ಬಂದಾಗಲೆಲ್ಲಾ ತಮಗೆ ಆಗಿರುವ ಅನುಭವವು ದೈವಿಕ ಮತ್ತು ಅಸಾಮಾನ್ಯವಾದುದು ಎಂದು ಅವರು ಒತ್ತಿ ಹೇಳಿದರು. ಈ ಭಾವನೆಗೆ ಸ್ವಾಮಿ ದಯಾನಂದ ಜೀ ಅವರ ಆಶೀರ್ವಾದ ಕಾರಣವೆಂದೂ ಅವರು ಹೇಳಿದರು. ಸ್ವಾಮಿ ದಯಾನಂದ ಜೀ ಅವರ ಆದರ್ಶಗಳ ಬಗ್ಗೆ ಪ್ರಧಾನಮಂತ್ರಿ ತಮ್ಮ ಆಳವಾದ ಗೌರವವನ್ನು ವ್ಯಕ್ತಪಡಿಸಿದರು. ಹಾಜರಿದ್ದ ಎಲ್ಲಾ ಚಿಂತಕರೊಂದಿಗಿನ ತಮ್ಮ ದಶಕಗಳಷ್ಟು ಹಳೆಯದಾದ ಬಾಂಧವ್ಯವನ್ನು ಅವರು ನೆನೆಪಿಸಿಕೊಂಡರು. ಅದು ತಮಗೆ ಪದೇ ಪದೇ ಅವರ ನಡುವೆ ಇರಲು ಅವಕಾಶವನ್ನು ನೀಡಿದೆ. ಅವರನ್ನು ಭೇಟಿಯಾದಾಗಲೆಲ್ಲಾ ಮತ್ತು ಅವರ ಜೊತೆ ಸಂವಹನ ನಡೆಸಿದಾಗಲೆಲ್ಲಾ ತಾವು ವಿಶಿಷ್ಟ ಶಕ್ತಿ ಮತ್ತು ಅನನ್ಯ ಸ್ಫೂರ್ತಿಯನ್ನು ಪಡೆಯುತ್ತಿರುವುದಾಗಿಯೂ ಅವರು ಹೇಳಿದರು.

ಪ್ರಧಾನಮಂತ್ರಿ ಅವರಿಂದ ಶ್ಯಾಮ್ ಜಿ ಕೃಷ್ಣ ವರ್ಮಾ ಅವರ ಪರಂಪರೆಯ ನೆರವೇರಿಕೆಯ ಬಗ್ಗೆ ನೆನಪಿಸಿ, ಯುವಜನರು ಸ್ಫೂರ್ತಿ ಪಡೆಯುವಂತೆ ಮನವಿ

October 04th, 11:11 am

ಸ್ವಾತಂತ್ರ್ಯ ಹೋರಾಟಗಾರ ಶ್ಯಾಮ್ಜಿ ಕೃಷ್ಣ ವರ್ಮಾ ಅವರ ದೀರ್ಘಕಾಲದ ಆಶಯವನ್ನು ಈಡೇರಿಸಿದ್ದ ಸುಮಾರು ಎರಡು ದಶಕಗಳ ಹಿಂದೆ ಕೈಗೊಂಡ ದೇಶದ ಅತ್ಯಂತ ತೃಪ್ತಿಕರ ಪ್ರಯತ್ನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಉಲ್ಲೇಖಿಸಿದರು.

ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

October 04th, 09:16 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಜನ್ಮದಿನವಾದ ಇಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಭಾರತದ ಸ್ವಾತಂತ್ರ್ಯ ಹೋರಾಟಕ್ಕೆ ಶ್ಯಾಮ್ ಜೀ ಕೃಷ್ಣ ವರ್ಮಾ ಅವರ ಅಚಲ ಸಮರ್ಪಣೆಯನ್ನು ಗುರುತಿಸಿದರು

ವಿಭಜನೆ ಭಯಾನಕತೆ ಸ್ಮರಣಾರ್ಥ ದಿನದ ಅಂಗವಾಗಿ ದೇಶ ವಿಭಜನೆಯಿಂದ ಬಾಧಿತರಾದವರ ಧೈರ್ಯ ಮತ್ತು ಚೇತರಿಕೆಯ ಸ್ಥೈರ್ಯಕ್ಕೆ ಪ್ರಧಾನಮಂತ್ರಿ ಗೌರವ ನಮನ

August 14th, 08:52 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಭಾರತ ಇತಿಹಾಸದ ಅತ್ಯಂತ ದುರಂತ ಅಧ್ಯಾಯಗಳಲ್ಲಿ ಒಂದಾದ ವಿಭಜನೆ ಭಯಾನಕತೆಯ ನೆನಪಿನ ದಿನದ ಅಂಗವಾಗಿ ದೇಶ ವಿಭಜನೆಯ ಸಮಯದಲ್ಲಿ ಅಸಂಖ್ಯಾತ ಜನರು ಅನುಭವಿಸಿದ ಅಪಾರ ವಿಪ್ಲವ ಮತ್ತು ನೋವನ್ನು ಸ್ಮರಿಸಿದ್ದಾರೆ.

ದೇಶಭಕ್ತ ಭಾರತೀಯರ ಶೌರ್ಯಕ್ಕೆ ಕಾಕೋರಿಯ ಶತಮಾನೋತ್ಸವದಂದು ಪ್ರಧಾನಮಂತ್ರಿ ಗೌರವ ನಮನ

August 09th, 02:59 pm

ಕಾಕೋರಿ ಘಟನೆಯ 100ನೇ ವರ್ಷಾಚರಣೆಯ ಅಂಗವಾಗಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಭಾರತೀಯರ ಶೌರ್ಯ ಮತ್ತು ದೇಶಭಕ್ತಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗೌರವ ಸಲ್ಲಿಸಿದ್ದಾರೆ.

ಪ್ರಧಾನಮಂತ್ರಿ ಅವರು ಶಹೀದ್ ಉಧಮ್ ಸಿಂಗ್ ಅವರ ಬಲಿದಾನ ದಿನದಂದು ಗೌರವ ಸಮರ್ಪಿಸಿದರು

July 31st, 10:55 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಭಾರತ ಮಾತೆಯ ಅಮರ ಪುತ್ರ ಶಹೀದ್ ಉಧಮ್ ಸಿಂಗ್ ಅವರ ಬಲಿದಾನ ದಿನದಂದು ಅವರಿಗೆ ಗೌರವ ಸಮರ್ಪಿಸಿದರು.

2047 ರಲ್ಲಿ ಅಭಿವೃದ್ಧಿ ಹೊಂದಿದ ಭಾರತದ ಹಾದಿ ಸ್ವಾವಲಂಬನೆಯ ಮೂಲಕ ಸಾಗುತ್ತದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

July 27th, 11:30 am

‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ ಅಲೆ ಹರಿದಾಡಿತು. ಇಡೀ ದೇಶ ಹೆಮ್ಮೆಯಿಂದ ಬೀಗಿತು. ಆಗಸ್ಟ್ 2023 ರಲ್ಲಿ ಚಂದ್ರಯಾನ-3 ರ ಯಶಸ್ವಿ ಲ್ಯಾಂಡಿಂಗ್ ಆದಾಗ, ದೇಶದಲ್ಲಿ ಹೊಸ ವಾತಾವರಣವೇ ಸೃಷ್ಟಿಯಾಗಿದ್ದು ನನಗೆ ನೆನಪಿದೆ. ವಿಜ್ಞಾನ ಮತ್ತು ಬಾಹ್ಯಾಕಾಶದ ಬಗ್ಗೆ ಮಕ್ಕಳಲ್ಲಿ ಹೊಸ ಕುತೂಹಲವೂ ಅರಳಿತು. ಈಗ ಚಿಕ್ಕ ಚಿಕ್ಕ ಮಕ್ಕಳು ಕೂಡ ನಾವು ಬಾಹ್ಯಾಕಾಶಕ್ಕೆ ಹೋಗುತ್ತೇವೆ, ಚಂದ್ರನ ಮೇಲೆ ಇಳಿಯುತ್ತೇವೆ - ನಾವು ಬಾಹ್ಯಾಕಾಶ ವಿಜ್ಞಾನಿಗಳಾಗುತ್ತೇವೆ ಎಂದು ಹೇಳುತ್ತಾರೆ.

ಪ್ರಧಾನಮಂತ್ರಿ ಅವರು ಚಂದ್ರಶೇಖರ್ ಆಜಾದ್ ಅವರ ಜನ್ಮದಿನದ ನಿಮಿತ್ತ ಅವರಿಗೆ ಗೌರವ ಸಮರ್ಪಿಸಿದರು

July 23rd, 09:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಚಂದ್ರಶೇಖರ್ ಆಜಾದ್ ಅವರ ಜನ್ಮದಿನದ ನಿಮಿತ್ತ ಅವರಿಗೆ ಗೌರವ ಸಮರ್ಪಿಸಿದರು. “ಭಾರತದ ಸ್ವಾತಂತ್ರ್ಯ ಪಯಣದಲ್ಲಿ ಅವರ ಪಾತ್ರ ಬಹಳ ಮೌಲ್ಯಯುತವಾಗಿದೆ ಹಾಗೂ ನ್ಯಾಯದ ಪರ ಧೈರ್ಯ ಮತ್ತು ದೃಢ ನಂಬಿಕೆಯಿಂದ ನಿಲ್ಲಲು ಯುವಜನರಿಗೆ ಪ್ರೇರೇಪಿಸುತ್ತದೆ” ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಅವರು ಲೋಕಮಾನ್ಯ ತಿಲಕ್ ಜಯಂತಿಯಂದು ಗೌರವ ನಮನ ಸಲ್ಲಿಸಿದರು

July 23rd, 09:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಕಮಾನ್ಯ ತಿಲಕ್ ಅವರ ಜಯಂತಿಯಂದು ಗೌರವ ನಮನ ಸಲ್ಲಿಸಿದರು. ಅವರು ಅಚಲ ಸಂಕಲ್ಪದಿಂದ ಭಾರತದ ಸ್ವಾತಂತ್ರ್ಯ ಚಳುವಳಿಯ ಕಿಚ್ಚನ್ನು ಹೊತ್ತಿಸಿದ ಪ್ರವರ್ತಕ ನಾಯಕರಾಗಿದ್ದರು ಎಂದು ಶ್ರೀ ಮೋದಿ ಹೇಳಿದ್ದಾರೆ.

ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಮಂಗಲ್ ಪಾಂಡೆ ಅವರ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಮಂತ್ರಿ ಗೌರವ ನಮನ

July 19th, 09:13 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಶ್ರೀ ಮಂಗಲ್ ಪಾಂಡೆ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಬ್ರಿಟಿಷ್ ಆಡಳಿತವನ್ನು ಪ್ರಶ್ನಿಸಿದ ದೇಶದ ಪ್ರಮುಖ ಯೋಧ ಎಂದು ಶ್ರೀ ಪಾಂಡೆಯವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ಮರಿಸಿ ಶ್ಲಾಘಿಸಿದರು.