ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:14 pm
ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
December 06th, 08:13 pm
ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ
October 21st, 10:25 am
ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು
October 21st, 10:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.ಡೆಹ್ರಾಡೂನ್ನಿಂದ ದೆಹಲಿಗೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ ಸಂದರ್ಭದಲ್ಲಿ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಭಾಷಣ
May 25th, 11:30 am
ಉತ್ತರಾಖಂಡದ ಗವರ್ನರ್ ಶ್ರೀ ಗುರ್ಮೀತ್ ಸಿಂಗ್ ಜಿ, ಉತ್ತರಾಖಂಡದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಉತ್ತರಾಖಂಡ ಸರ್ಕಾರದ ಸಚಿವರು, ವಿವಿಧ ಸಂಸದರು, ಶಾಸಕರು, ಮೇಯರ್ಗಳು, ಜಿಲ್ಲಾ ಪರಿಷತ್ ಸದಸ್ಯರು, ಇತರ ಗಣ್ಯರು ಮತ್ತು ಉತ್ತರಾಖಂಡದ ನನ್ನ ಪ್ರೀತಿಯ ಸಹೋದರ ಸಹೋದರಿಯರೇ ! ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸಂಚಾರಕ್ಕಾಗಿ ಉತ್ತರಾಖಂಡದ ಎಲ್ಲ ಜನರಿಗೆ ಅಭಿನಂದನೆಗಳು.ಡೆಹ್ರಾಡೂನ್- ದೆಹಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ
May 25th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಡೆಹ್ರಾಡೂನ್ನಿಂದ ದೆಹಲಿಗೆ ಸಂಚರಿಸಿದ ವಂದೇ ಭಾರತ್ ಎಕ್ಸ್ಪ್ರೆಸ್ನ ರೈಲಿಗೆ ಹಸಿರು ನಿಶಾನೆ ತೋರಿದರು. ಹೊಸದಾಗಿ ವಿದ್ಯುದ್ದೀಕರಿಸಿದ ರೈಲು ವಿಭಾಗಗಳನ್ನು ಅವರು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ಉತ್ತರಾಖಂಡವನ್ನು ಶೇ.100 ರಷ್ಟು ವಿದ್ಯುದ್ದೀಕರಿಸಿದ ರಾಜ್ಯವೆಂದು ಘೋಷಿಸಿದರು.ಜಿ-7 ಶೃಂಗಸಭೆಯ 9 ನೇ ಕಾರ್ಯಕಾರಿ ಅಧಿವೇಶನದಲ್ಲಿ ಪ್ರಧಾನ ಮಂತ್ರಿಯವರ ಹೇಳಿಕೆಯ ಕನ್ನಡ ಅನುವಾದ
May 21st, 10:20 am
ನಾವು ಇಂದು ಅಧ್ಯಕ್ಷ ಝೆಲೆನ್ಸ್ಕಿ ಅವರ ಮಾತುಗಳನ್ನು ಕೇಳಿದ್ದೇವೆ. ನಾನು ನಿನ್ನೆ ಕೂಡ ಅವರನ್ನು ಭೇಟಿಯಾಗಿದ್ದೆ. ನಾನು ಸದ್ಯದ ಪರಿಸ್ಥಿತಿಯನ್ನು ರಾಜಕೀಯ ಅಥವಾ ಆರ್ಥಿಕತೆಯ ಸಮಸ್ಯೆ ಎಂದು ಪರಿಗಣಿಸುವುದಿಲ್ಲ. ಇದು ಮಾನವೀಯತೆಯ ವಿಷಯ, ಮಾನವೀಯ ಮೌಲ್ಯಗಳ ವಿಷಯ ಎಂದು ನಾನು ನಂಬುತ್ತೇನೆ. ಮೊದಲಿನಿಂದಲೂ ನಾವು ಮಾತುಕತೆ ಮತ್ತು ರಾಜತಾಂತ್ರಿಕತೆಯೊಂದೇ ದಾರಿ ಎಂದು ಹೇಳಿಕೊಂಡು ಬಂದಿದ್ದೇವೆ. ಈ ಪರಿಸ್ಥಿತಿಯನ್ನು ಪರಿಹರಿಸಲು ಭಾರತವು ಯಾವುದೇ ರೀತಿಯಲ್ಲಿ ಕೊಡುಗೆ ನೀಡಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತದೆ.ವಿಯೆಟ್ನಾಂ ಪ್ರಧಾನಿಯೊಂದಿಗೆ ಪ್ರಧಾನ ಮಂತ್ರಿಯವರ ಸಭೆ
May 20th, 12:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 20 ಮೇ 2023 ರಂದು ಹಿರೋಷಿಮಾದಲ್ಲಿ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ವಿಯೆಟ್ನಾಂನ ಗೌರವಾನ್ವಿತ ಪ್ರಧಾನ ಮಂತ್ರಿ ಶ್ರೀ ಫಾಮ್ ಮಿನ್ ಚಿನ್ಹ್ ಅವರನ್ನು ಭೇಟಿಯಾದರು.ಜಪಾನಿನ ಪ್ರಮುಖ ವ್ಯಕ್ತಿಗಳೊಂದಿಗೆ ಪ್ರಧಾನ ಮಂತ್ರಿಯವರ ಸಂವಾದ
May 20th, 12:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಿ-7 ಶೃಂಗಸಭೆಗಾಗಿ ಹಿರೋಷಿಮಾಗೆ ಭೇಟಿ ನೀಡಿರುವ ಸಂದರ್ಭದಲ್ಲಿ ತಮ್ಮ ವೃತ್ತಿಯಲ್ಲಿ ಉನ್ನತ ಸಾಧನೆ ಮಾಡಿರುವ ಜಪಾನ್ನ ಪ್ರಮುಖ ವ್ಯಕ್ತಿಗಳಾದ ಡಾ. ಟೊಮಿಯೊ ಮಿಜೋಕಾಮಿ ಮತ್ತು ಶ್ರೀಮತಿ ಹಿರೋಕೊ ಟಕಯಾಮಾ ಅವರನ್ನು ಭೇಟಿಯಾದರು.ಕೊರಿಯಾ ಗಣರಾಜ್ಯದ ಅಧ್ಯಕ್ಷರೊಂದಿಗೆ ಪ್ರಧಾನ ಮಂತ್ರಿಯವರ ಸಭೆ
May 20th, 12:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊರಿಯಾ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಶ್ರೀ ಯೂನ್ ಸುಕ್ ಯೆಲ್ ಅವರನ್ನು 20 ಮೇ 2023 ರಂದು ಹಿರೋಷಿಮಾದಲ್ಲಿ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಭೇಟಿಯಾದರು.ಜಿ-7ಶೃಂಗಸಭೆಯ ನೇಪಥ್ಯದಲ್ಲಿ ಐರೋಪ್ಯ ಒಕ್ಕೂಟದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಿ.
June 28th, 08:07 am
ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಅವರು ಜರ್ಮನಿಯ ಸ್ಕ್ಲೋಸ್ ಎಲ್ಮಾವ್ ನಲ್ಲಿ ನಡೆದ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ 2022ರ ಜೂನ್ 27ರಂದು ಐರೋಪ್ಯ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಉರ್ಸಾಲಾ ವೋನ್ ಡೆರ್ ಲೈನ್ ಅವರನ್ನು ಭೇಟಿ ಮಾಡಿದ್ದರು.ಜಿ-7 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾ ಪ್ರಧಾನಿ ಭೇಟಿ ಮಾಡಿದ ಪ್ರಧಾನಮಂತ್ರಿ.
June 28th, 07:59 am
ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಅವರು ಜರ್ಮನಿಯ ಸ್ಕ್ಲೋಸ್ ಎಲ್ಮಾವ್ ನಲ್ಲಿ ನಡೆದ ಜಿ-7 ಶೃಂಗಸಭೆಯ ನೇಪಥ್ಯದಲ್ಲಿ 2022ರ ಜೂನ್ 27ರಂದು ಕೆನಡಾದ ಪ್ರಧಾನಮಂತ್ರಿ ಗೌರವಾನ್ವಿತ ಜಸ್ಟಿನ್ ಟ್ರಡೋ ಅವರನ್ನು ಭೇಟಿ ಮಾಡಿದ್ದರು.ಜರ್ಮನಿಯ ಮ್ಯೂನಿಚ್ಗೆ ಆಗಮಿಸಿದ ಪ್ರಧಾನಿ ಮೋದಿ
June 26th, 09:00 am
ಪ್ರಧಾನಿ ನರೇಂದ್ರ ಮೋದಿ ಅವರು ಸ್ವಲ್ಪ ಸಮಯದ ಹಿಂದೆ ಮ್ಯೂನಿಚ್ಗೆ ಆಗಮಿಸಿದರು. ಅವರು ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಇಂದು ಸಂಜೆ, ಅವರು ಮ್ಯೂನಿಚ್ನಲ್ಲಿ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.ಜರ್ಮನಿ ಮತ್ತು ಯುಎಇಗೆ ಭೇಟಿ ನೀಡುವ ಮುನ್ನ ಪ್ರಧಾನ ಮಂತ್ರಿಗಳ ಪ್ರವಾಸ ಪೂರ್ವ ಹೇಳಿಕೆ (ಜೂನ್ 26-28, 2022).
June 25th, 03:51 pm
ನಾನು ಜರ್ಮನಿಯ ಚಾನ್ಸೆಲರ್ ಗೌರವಾನ್ವಿತ ಶ್ರೀ ಓಲಾಫ್ ಸ್ಕೋಲ್ಜ್, ಅವರ ಆಹ್ವಾನದ ಮೇರೆಗೆ ಜರ್ಮನಿಯ ಶ್ಚೋಲೋಸ್ ಎಲ್ಮೋಗೆ ಭೇಟಿ ನೀಡಲಿದ್ದೇನೆ. ಜರ್ಮನ್ ಅಧ್ಯಕ್ಷತೆಯಲ್ಲಿ ನಡೆಯುವ ಜಿ 7 ಶೃಂಗಸಭೆಗಾಗಿ ಅಲ್ಲಿಗೆ ತೆರಳುತ್ತಿದ್ದೇನೆ. ಕಳೆದ ತಿಂಗಳು ಭಾರತ-ಜರ್ಮನಿ ಅಂತರ-ಸರ್ಕಾರಿ ಸಮಾಲೋಚನೆಗಳ (ಐ.ಜಿ.ಸಿ.) ಯಶಸ್ಸಿನ ನಂತರ ಮತ್ತೊಮ್ಮೆ ಚಾನ್ಸೆಲರ್ ಸ್ಕೋಲ್ಜ್ ಅವರನ್ನು ಭೇಟಿಯಾಗಲು ನನಗೆ ಬಹಳ ಸಂತೋಷವಿದೆ.ಜಿ7 ಶೃಂಗಸಭೆಯ ಮೊದಲ ವಿಸ್ತೃತ (ಔಟ್ರೀಚ್) ಅಧಿವೇಶನ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
June 12th, 11:01 pm
‘ಬಲಿಷ್ಠ ಆರೋಗ್ಯ ಮರುನಿರ್ಮಾಣ’ ಹೆಸರಿನಲ್ಲಿ ಆರಂಭವಾಗಿರುವ ಈ ಅಧಿವೇಶನದಲ್ಲಿ ಕೊರೊನಾ ಸಾಂಕ್ರಾಮಿಕ ಸೋಂಕಿನಿಂದ ಮನುಕುಲವನ್ನು ಸಂರಕ್ಷಿಸಲು ಮತ್ತು ಭವಿಷ್ಯದ ಸಾಂಕ್ರಾಮಿಕ ರೋಗಗಳ ವಿರುದ್ಧ ಜಾಗತಿಕ ಸಾಮರ್ಥ್ಯವನ್ನು ಬಲಗೊಳಿಸುವ ಕುರಿತು ಅರ್ಥಪೂರ್ಣ ಚರ್ಚೆ ನಡೆಸಲು ವಿಶೇಷ ಒತ್ತು ನೀಡಲಾಗಿದೆ.47 ನೇ ಜಿ 7 ಶೃಂಗದಲ್ಲಿ ಪ್ರಧಾನ ಮಂತ್ರಿ ಪಾಲ್ಗೊಳ್ಳಲಿದ್ದಾರೆ
June 10th, 06:42 pm
ಇಂಗ್ಲಂಡ್ ನ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಅವರ ಆಹ್ವಾನದ ಮೇರೆಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 12 ಮತ್ತು 13 ರಂದು ವರ್ಚುವಲ್ ಮಾದರಿಯಲ್ಲಿ ನಡೆಯಲಿರುವ ಜಿ.7 ಶೃಂಗದ ಬಾಹ್ಯ (ಔಟ್ ರೀಚ್) ಅಧಿವೇಶನಗಳಲ್ಲಿ ಭಾಗವಹಿಸಲಿದ್ದಾರೆ. ಪ್ರಸ್ತುತ ಇಂಗ್ಲಂಡ್ ಯು ಜಿ.7 ರ ಅಧ್ಯಕ್ಷತೆಯನ್ನು ವಹಿಸಿಕೊಂಡಿದೆ ಮತ್ತು ಅದು ಭಾರತ, ಆಸ್ಟ್ರೇಲಿಯಾ, ಕೊರಿಯಾ ಗಣತಂತ್ರ ಮತ್ತು ದಕ್ಷಿಣ ಆಫ್ರಿಕಾಗಳನ್ನು ಜಿ.7 ಶೃಂಗಕ್ಕೆ ಅತಿಥಿ ರಾಷ್ಟ್ರಗಳನ್ನಾಗಿ ಆಹ್ವಾನಿಸಿದೆ. ಹೈಬ್ರಿಡ್ ಮಾದರಿಯಲ್ಲಿ ಸಭೆ ನಡೆಯಲಿದೆ.ಭಾರತ-ಬ್ರಿಟನ್ ವರ್ಚುವಲ್ ಶೃಂಗಸಭೆ
May 04th, 06:34 pm
ಭಾರತ ಮತ್ತು ಬ್ರಿಟನ್ ದೀರ್ಘಕಾಲದ ಸ್ನೇಹ ಸಂಬಂಧಗಳನ್ನು ಹೊಂದಿವೆ. ಪ್ರಜಾಪ್ರಭುತ್ವ, ಮೂಲಭೂತ ಸ್ವಾತಂತ್ರ್ಯ ಮತ್ತು ಕಾನೂನುಬದ್ಧತೆ, ಪರಸ್ಪರ ಪೂರಕ ಮತ್ತು ಬದ್ಧತೆಯ ಸಮನ್ವಯ ವೃದ್ಧಿಯ ಕಾರ್ಯತಂತ್ರದ ಸಹಭಾಗಿತ್ವವನ್ನು ಹೊಂದಿವೆ.UK Foreign Secretary Mr Dominic Raab calls on PM
December 16th, 11:57 am
UK Foreign Secretary Mr Dominic Raab called on the Prime Minister Shri Narendra Modi. The discussions covered various facets of the strategic partnership between the two countries.Telephone conversation between PM and President of USA
June 02nd, 09:29 pm
PM Narendra Modi had a telephone conversation with the US President Donald Trump. Their discussion revolved around G-7, COVID-19 situation in the two countries, the situation on the India-China border and the need for reforms in the World Health Organisation.H.E. Mr. Emmanuel Bonne, Foreign Policy Adviser to the President of France calls PM Modi
August 29th, 09:13 pm
H.E. Mr. Emmanuel Bonne, Foreign Policy Adviser to the President of France called on Prime Minister Shri Narendra Modi today.