ಇಥಿಯೋಪಿಯಾ ಸಂಸತ್ತಿನ ಜಂಟಿ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

December 17th, 12:25 pm

ಪುರಾತನ ಜ್ಞಾನ ಮತ್ತು ಆಧುನಿಕ ಆಕಾಂಕ್ಷೆಗಳನ್ನು ಹೊಂದಿರುವ ರಾಷ್ಟ್ರದ ಹೃದಯಭಾಗದಲ್ಲಿರುವ ಈ ಪ್ರಜಾಪ್ರಭುತ್ವದ ದೇವಾಲಯದಲ್ಲಿ ಉಪಸ್ಥಿತರಿರುವುದು ನನಗೆ ಗೌರವದ ಸಂಗತಿಯಾಗಿದೆ. ನಿಮ್ಮ ಸಂಸತ್ತು, ನಿಮ್ಮ ಜನತೆ ಮತ್ತು ನಿಮ್ಮ ಪ್ರಜಾಪ್ರಭುತ್ವದ ಪಯಣದ ಬಗ್ಗೆ ಅಪಾರ ಗೌರವವನ್ನಿಟ್ಟುಕೊಂಡು ನಾನು ಇಲ್ಲಿಗೆ ಬಂದಿದ್ದೇನೆ. ಭಾರತದ 140 ಕೋಟಿ ಜನರ ಪರವಾಗಿ, ನಾನು ಸ್ನೇಹ, ಸದ್ಭಾವನೆ ಮತ್ತು ಸಹೋದರತ್ವದ ಶುಭಾಶಯಗಳನ್ನು ಹೊತ್ತು ತಂದಿದ್ದೇನೆ.

ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 17th, 12:12 pm

ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. - ರೈತರು, ಉದ್ಯಮಿಗಳು, ಹೆಮ್ಮೆಯ ಮಹಿಳೆಯರು ಮತ್ತು ಯುವಜನರು - ದೇಶದ ಭವಿಷ್ಯವನ್ನು ರೂಪಿಸುತ್ತಿದ್ದಾರೆ ಎಂದು ಅವರು ಹೇಳಿದರು. ಇಥಿಯೋಪಿಯಾದ ಗ್ರೇಟ್ ಹಾನರ್ ನಿಶಾನ್ ಎಂಬ ಅತ್ಯುನ್ನತ ಪ್ರಶಸ್ತಿಯನ್ನು ನೀಡಿದ್ದಕ್ಕಾಗಿ ಅವರು ಇಥಿಯೋಪಿಯಾದ ಜನರು ಮತ್ತು ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಿದರು. ಸಂಬಂಧದ ಮಹತ್ವವನ್ನು ಪರಿಗಣಿಸಿ, ಭೇಟಿಯ ಸಮಯದಲ್ಲಿ ಎರಡೂ ದೇಶಗಳ ನಡುವಿನ ಹಳೆಯ ಸಂಬಂಧಗಳನ್ನು ಕಾರ್ಯತಂತ್ರದ ಪಾಲುದಾರಿಕೆಯಾಗಿ ಉನ್ನತೀಕರಿಸಲಾಗಿದೆ ಎಂದು ಹೇಳಿದ ಪ್ರಧಾನಮಂತ್ರಿಯವರು ಇದಕ್ಕೆ ತಮ್ಮ ಸಂತೃಪ್ತಿಯನ್ನು ವ್ಯಕ್ತಪಡಿಸಿದರು.

ಇಥಿಯೋಪಿಯಾದ ಪ್ರಧಾಮಂತ್ರಿಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಪ್ರಧಾಮಂತ್ರಿ

December 17th, 12:02 am

ಪ್ರಧಾಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಡಿಸ್ ಅಬಾಬಾದ ರಾಷ್ಟ್ರೀಯ ಅರಮನೆಯಲ್ಲಿ ಇಥಿಯೋಪಿಯಾ ಪ್ರಜಾಸತ್ತಾತ್ಮಕ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಡಾ. ಅಬಿ ಅಹ್ಮದ್ ಅವರನ್ನು ಭೇಟಿಯಾದರು. ಅರಮನೆಗೆ ಆಗಮಿಸಿದ ಪ್ರಧಾನಮಂತ್ರಿ ಮೋದಿ ಅವರನ್ನು ಡಾ. ಅಬಿ ಅಹ್ಮದ್ ಅವರು ಆತ್ಮೀಯವಾಗಿ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು.

ಫಲಿತಾಂಶಗಳ ಪಟ್ಟಿ: ಇಥಿಯೋಪಿಯಾಕ್ಕೆ ಪ್ರಧಾನಮಂತ್ರಿ ಭೇಟಿ

December 16th, 10:41 pm

'ಕಾರ್ಯತಂತ್ರದ ಪಾಲುದಾರಿಕೆ'ಗೆ ದ್ವಿಪಕ್ಷೀಯ ಸಂಬಂಧಗಳ ಉನ್ನತೀಕರಣ

ಕೇರಳದ ತಿರುವನಂತಪುರಂನಲ್ಲಿ ವಿಳಿಂಜಂ ಅಂತಾರಾಷ್ಟ್ರೀಯ ಬಂದರು ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 02nd, 02:06 pm

ಕೇರಳದ ರಾಜ್ಯಪಾಲರಾದ ರಾಜೇಂದ್ರ ಅರ್ಲೇಕರ್ ಜೀ, ಮುಖ್ಯಮಂತ್ರಿಗಳಾದ ಶ್ರೀ ಪಿ. ವಿಜಯನ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ವೇದಿಕೆಯಲ್ಲಿ ಉಪಸ್ಥಿತರಿರುವ ಇತರೆ ಎಲ್ಲ ಗಣ್ಯರೆ ಮತ್ತು ಕೇರಳದ ನನ್ನ ಸಹೋದರ ಸಹೋದರಿಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ₹8,800 ಕೋಟಿ ರೂಪಾಯಿ ವೆಚ್ಚದ ವಿಳಿಂಜಂ ಅಂತಾರಾಷ್ಟ್ರೀಯ ಆಳಸಮುದ್ರ ಬಂದರನ್ನು ರಾಷ್ಟ್ರಕ್ಕೆ ಸಮರ್ಪಿಸಿದರು

May 02nd, 01:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೇರಳದ ತಿರುವನಂತಪುರಂನಲ್ಲಿ 8,800 ಕೋಟಿ ರೂ. ವೆಚ್ಚದ ವಿಳಿಂಜಂ ಅಂತಾರಾಷ್ಟ್ರೀಯ ಬಹುಪಯೋಗಿ ಆಳಸಮುದ್ರ ಬಂದರನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಭಗವಾನ್ ಆದಿ ಶಂಕರಾಚಾರ್ಯರ ಜಯಂತಿಯ ಶುಭ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಮೂರು ವರ್ಷಗಳ ಹಿಂದೆ ಸೆಪ್ಟೆಂಬರ್ ನಲ್ಲಿ ಆದಿ ಶಂಕರಾಚಾರ್ಯರ ಪವಿತ್ರ ಜನ್ಮಸ್ಥಳಕ್ಕೆ ಭೇಟಿ ನೀಡುವ ಸೌಭಾಗ್ಯ ತಮಗೆ ಸಿಕ್ಕಿತ್ತು ಎಂದು ಹೇಳಿದರು. ತಮ್ಮ ಸಂಸದೀಯ ಕ್ಷೇತ್ರವಾದ ಕಾಶಿಯಲ್ಲಿರುವ ವಿಶ್ವನಾಥ ಧಾಮ ಸಂಕೀರ್ಣದಲ್ಲಿ ಆದಿ ಶಂಕರಾಚಾರ್ಯರ ಭವ್ಯವಾದ ಪ್ರತಿಮೆಯನ್ನು ಸ್ಥಾಪಿಸಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು. ಈ ಪ್ರತಿಮೆ ಆದಿ ಶಂಕರಾಚಾರ್ಯರ ಅಪಾರ ಆಧ್ಯಾತ್ಮಿಕ ಜ್ಞಾನ ಮತ್ತು ಬೋಧನೆಗಳಿಗೆ ಸಲ್ಲಿಸಿದ ಗೌರವವಾಗಿದೆ ಎಂದು ಅವರು ಒತ್ತಿ ಹೇಳಿದರು. ಉತ್ತರಾಖಂಡದ ಪವಿತ್ರ ಕೇದಾರನಾಥ ಧಾಮದಲ್ಲಿ ಆದಿ ಶಂಕರಾಚಾರ್ಯರ ದೈವಿಕ ಪ್ರತಿಮೆಯನ್ನು ಅನಾವರಣಗೊಳಿಸುವ ಗೌರವ ತಮಗೆ ಸಿಕ್ಕಿತು ಎಂದು ಅವರು ಹೇಳಿದರು. ಕೇದಾರನಾಥ ದೇವಾಲಯದ ಬಾಗಿಲುಗಳು ಭಕ್ತರಿಗಾಗಿ ತೆರೆದಿರುವುದು ಇಂದು ಮತ್ತೊಂದು ವಿಶೇಷ ಸಂದರ್ಭವಾಗಿದೆ ಎಂದು ಪ್ರಧಾನಿ ಹೇಳಿದರು. ಕೇರಳದಿಂದ ಬಂದ ಆದಿ ಶಂಕರಾಚಾರ್ಯರು ದೇಶದ ವಿವಿಧ ಮೂಲೆಗಳಲ್ಲಿ ಮಠಗಳನ್ನು ಸ್ಥಾಪಿಸಿ ರಾಷ್ಟ್ರದ ಪ್ರಜ್ಞೆಯನ್ನು ಜಾಗೃತಗೊಳಿಸಿದರು ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. ಅವರ ಪ್ರಯತ್ನಗಳು ಏಕೀಕೃತ ಮತ್ತು ಆಧ್ಯಾತ್ಮಿಕವಾಗಿ ಪ್ರಬುದ್ಧವಾದ ಭಾರತಕ್ಕೆ ಅಡಿಪಾಯ ಹಾಕಿದವು ಎಂದು ಅವರು ಒತ್ತಿ ಹೇಳಿದರು.

ಪ್ಯಾರೀಸ್ ನಲ್ಲಿ ನಡೆದ ಎಐ ಕ್ರಿಯಾ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪ್ರಸ್ತಾವಿಕ ಭಾಷಣ

February 11th, 03:15 pm

ನೀವು ನಿಮ್ಮ ವೈದ್ಯಕೀಯ ವರದಿಯನ್ನು ಎಐ ಆಪ್‌ ನಲ್ಲಿ ಅಪ್ ಲೋಡ್ ಮಾಡಿದರೆ, ಅದು ಯಾವುದೇ ಗೊಂದಲಗಳಿಲ್ಲದೆ ಅದು ಸರಳ ಭಾಷೆಯಲ್ಲಿ ನಿಮ್ಮ ಆರೋಗ್ಯದ ಬಗ್ಗೆ ವಿವರಿಸುತ್ತದೆ. ಆದರೆ, ನೀವು ಅದೇ ಅಪ್ಲಿಕೇಶನ್ ಅನ್ನು ಎಡಗೈಯಿಂದ ಬರೆಯುವವರ ಚಿತ್ರವನ್ನು ಬರೆಯಲು ಕೇಳಿದರೆ, ಅಪ್ಲಿಕೇಶನ್ ಹೆಚ್ಚಾಗಿ ಬಲಗೈಯಿಂದ ಬರೆಯುವವರನ್ನು ಸೆಳೆಯುತ್ತದೆ. ಏಕೆಂದರೆ ತರಬೇತಿ ಡೇಟಾವು ಅದನ್ನೇ ಮೇಲುಗೈ ಆಗುವಂತೆ ಮಾಡುತ್ತದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ಯಾರಿಸ್‌ ನಲ್ಲಿ ಕೃತಕ ಬುದ್ಧಿಮತ್ತೆ ಕ್ರಿಯಾ ಶೃಂಗಸಭೆಯ (ಎಐ ಆಕ್ಷನ್‌ ಸಮ್ಮಿಟ್)‌ ಸಹ-ಅಧ್ಯಕ್ಷತೆ ವಹಿಸಿದರು

February 11th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ಯಾರಿಸ್‌ ನಲ್ಲಿ ಫ್ರಾನ್ಸ್ ಅಧ್ಯಕ್ಷ ಘನತೆವೆತ್ತ ಶ್ರೀ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಕೃತಕ ಬುದ್ಧಿಮತ್ತೆ ಕ್ರಿಯಾ ಶೃಂಗಸಭೆಯ (ಎಐ ಆಕ್ಷನ್‌ ಸಮ್ಮಿಟ್)‌ ಸಹ-ಅಧ್ಯಕ್ಷತೆ ವಹಿಸಿದರು. ಒಂದು ವಾರ ಕಾಲದ ಶೃಂಗಸಭೆಯು ಫೆಬ್ರವರಿ 6-7 ರಂದು ವಿಜ್ಞಾನ ದಿನಗಳಾಗಿ ಪ್ರಾರಂಭವಾಯಿತು, ನಂತರ ಫೆಬ್ರವರಿ 8-9 ರಂದು ಸಾಂಸ್ಕೃತಿಕ ವಾರಾಂತ್ಯ ನಡೆಯಿತು, ಜಾಗತಿಕ ನಾಯಕರು, ನೀತಿ ನಿರೂಪಕರು ಮತ್ತು ಉದ್ಯಮ ತಜ್ಞರು ಭಾಗವಹಿಸಿದ ಉನ್ನತ ಮಟ್ಟದ ಅಧಿವೇಶನದೊಂದಿಗೆ ಶೃಂಗಸಭೆ ಮುಕ್ತಾಯವಾಯಿತು.

ಭಾರತ ಇಂಧನ ಸಪ್ತಾಹದಲ್ಲಿ ಪ್ರಧಾನಮಂತ್ರಿಯವರ ಭಾಷಣ

February 11th, 11:37 am

ಮಾನ್ಯ ಕೇಂದ್ರ ಸಚಿವ ಸಂಪುಟದ ಸದಸ್ಯರೇ, ಮಾನ್ಯ ರಾಯಭಾರಿಗಳೇ, ಗಣ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೇ, ಗೌರವಾನ್ವಿತ ಅತಿಥಿಗಳೇ, ಇತರ ಗಣ್ಯ ವ್ಯಕ್ತಿಗಳೇ, ಮಹಿಳೆಯರೇ ಮತ್ತು ಮಹನೀಯರೇ,

ಭಾರತ ಇಂಧನ ಸಪ್ತಾಹ 2025ರಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ

February 11th, 09:55 am

21ನೇ ಶತಮಾನವು ಭಾರತದ್ದೆಂದು ವಿಶ್ವದಾದ್ಯಂತ ತಜ್ಞರು ಪ್ರತಿಪಾದಿಸುತ್ತಿರುವುದನ್ನು ಪ್ರಮುಖವಾಗಿ ಉಲ್ಲೇಖಿಸಿದ ಶ್ರೀ ನರೇಂದ್ರ ಮೋದಿ “ಭಾರತವು ತನ್ನ ಬೆಳವಣಿಗೆಯನ್ನು ಮಾತ್ರವಲ್ಲದೆ ವಿಶ್ವದ ಬೆಳವಣಿಗೆಯನ್ನೂ ಸಹ ಮುನ್ನಡೆಸುತ್ತಿದೆ, ಅದರಲ್ಲಿ ಇಂಧನ ವಲಯವು ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಹೇಳಿದರು. ಭಾರತದ ಇಂಧನ ಮಹತ್ವಾಕಾಂಕ್ಷೆಗಳು ಐದು ಸ್ತಂಭಗಳ ಮೇಲೆ ನಿಂತಿದೆ, ಅವುಗಳೆಂದರೆ ಸಂಪನ್ಮೂಲಗಳ ಸಮರ್ಪಕ ಬಳಕೆ, ಪ್ರತಿಭಾನ್ವಿತ ಮನಸ್ಸುಗಳಲ್ಲಿ ನಾವೀನ್ಯತೆ ಪ್ರೋತ್ಸಾಹಿಸುವುದು, ಆರ್ಥಿಕ ಶಕ್ತಿ ಮತ್ತು ರಾಜಕೀಯ ಸ್ಥಿರತೆ, ಇಂಧನ ವ್ಯಾಪಾರವನ್ನು ಆಕರ್ಷಕ ಮತ್ತು ಸುಲಭಗೊಳಿಸುವ ಕಾರ್ಯತಂತ್ರದ ಭೌಗೋಳಿಕತೆ ಮತ್ತು ಜಾಗತಿಕ ಸುಸ್ಥಿರತೆಗೆ ಬದ್ಧತೆ. ಈ ಅಂಶಗಳು ಭಾರತದ ಇಂಧನ ವಲಯದಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿಸುತ್ತಿವೆ ಎಂದು ಪ್ರಧಾನಿ ಉಲ್ಲೇಖಿಸಿದರು.

ಭುವನೇಶ್ವರದಲ್ಲಿ ನಡೆದ 'ಉತ್ಕರ್ಷ್ ಒಡಿಶಾ' - ಮೇಕ್ ಇನ್ ಒಡಿಶಾ ಸಮಾವೇಶದಲ್ಲಿ ಪ್ರಧಾನಮಂತ್ರಿಯವರ ಭಾಷಣ

January 28th, 11:30 am

ಒಡಿಶಾದ ರಾಜ್ಯಪಾಲರಾದ ಶ್ರೀ ಹರಿ ಬಾಬು ಅವರು, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ ಮಾಝಿ ಜೀ ಅವರು, ನನ್ನ ಕೇಂದ್ರ ಸಚಿವ ಸಂಪುಟದ ಸಹೋದ್ಯೋಗಿಗಳು, ಒಡಿಶಾ ಸರ್ಕಾರದ ಸಚಿವರು, ಸಂಸದರು, ಶಾಸಕರು, ಕೈಗಾರಿಕಾ ಮತ್ತು ವಾಣಿಜ್ಯ ಜಗತ್ತಿನ ಪ್ರಮುಖ ಉದ್ಯಮಿಗಳು, ದೇಶ ಮತ್ತು ವಿದೇಶಗಳಿಂದ ಆಗಮಿಸಿರುವ ಹೂಡಿಕೆದಾರರು ಮತ್ತು ನನ್ನ ಪ್ರೀತಿಯ ಒಡಿಶಾದ ಸಹೋದರ ಮತ್ತು ಸಹೋದರಿಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದೀರಿ!

ಭುವನೇಶ್ವರದಲ್ಲಿ 'ಉತ್ಕರ್ಷ್ ಒಡಿಶಾ- ಮೇಕ್ ಇನ್ ಒಡಿಶಾ ಸಮಾವೇಶ- 2025' ಅನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ

January 28th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಭುವನೇಶ್ವರದಲ್ಲಿ ಉತ್ಕರ್ಷ್ ಒಡಿಶಾ - ಮೇಕ್ ಇನ್ ಒಡಿಶಾ ಸಮಾವೇಶ- 2025 ಹಾಗೂ ಮೇಕ್ ಇನ್ ಒಡಿಶಾ ಪ್ರದರ್ಶನ ಮೇಳವನ್ನು ಉದ್ಘಾಟಿಸಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿಗಳು, 2025ರ ಜನವರಿ ತಿಂಗಳಲ್ಲೇ ಒಡಿಶಾಗೆ ಇದು ತಮ್ಮ ಎರಡನೇ ಭೇಟಿಯಾಗಿದೆʼʼ ಎಂದು ಹೇಳುವ ಮೂಲಕ ʼಪ್ರವಾಸಿ ಭಾರತೀಯ ದಿವಸ್ 2025ʼ ಕಾರ್ಯಕ್ರಮವನ್ನು ಉದ್ಘಾಟಿಸಲು ತಾವು ಇದೇ ತಿಂಗಳು ಭೇಟಿ ನೀಡಿದ್ದನ್ನು ನೆನಪಿಸಿಕೊಂಡರು. ಇದು ಒಡಿಶಾದಲ್ಲಿ ಈವರೆಗಿನ ಅತಿದೊಡ್ಡ ವ್ಯಾಪಾರ ಶೃಂಗಸಭೆಯಾಗಿದೆ ಎಂದು ಬಣ್ಣಿಸಿದ ಶ್ರೀ ಮೋದಿ ಅವರು, ಮೇಕ್ ಇನ್ ಒಡಿಶಾ ಸಮಾವೇಶ- 2025ರಲ್ಲಿ ಸುಮಾರು 5-6 ಪಟ್ಟು ಹೆಚ್ಚು ಹೂಡಿಕೆದಾರರು ಭಾಗವಹಿಸಿದ್ದಾರೆ ಎಂದು ಹೇಳಿದರು. ಹಾಗೆಯೇ ಈ ಭವ್ಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ಒಡಿಶಾ ಜನತೆ ಹಾಗೂ ಸರ್ಕಾರವನ್ನು ಅಭಿನಂದಿಸಿದರು.

ಜಂಟಿ ಹೇಳಿಕೆ: 7ನೇ ಭಾರತ ಮತ್ತು ಜರ್ಮನಿ ನಡುವಿನ ಅಂತರ್-ಸರ್ಕಾರಿ ಸಮಾಲೋಚನೆಗಳು(ಐಜಿಸಿ)

October 25th, 08:28 pm

ನವದೆಹಲಿಯಲ್ಲಿ 2024 ಅಕ್ಟೋಬರ್ 25ರಂದು ಆಯೋಜಿತವಾಗಿದ್ದ 7ನೇ ಸುತ್ತಿನ ಭಾರತ-ಜರ್ಮನಿ ಅಂತರ್-ಸರ್ಕಾರಿ ಸಮಾಲೋಚನಾ(7ನೇ ಐಜಿಸಿ) ಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಜರ್ಮನಿ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರು ಮಾತುಕತೆ ನಡೆಸಿದರು. ಭಾರತದ ನಿಯೋಗದಲ್ಲಿ ರಕ್ಷಣಾ ಸಚಿವಾಲಯ, ವಿದೇಶಾಂಗ ವ್ಯವಹಾರಗಳು, ವಾಣಿಜ್ಯ ಮತ್ತು ಕೈಗಾರಿಕೆಗಳು, ಕಾರ್ಮಿಕ ಮತ್ತು ಉದ್ಯೋಗ, ವಿಜ್ಞಾನ ಮತ್ತು ತಂತ್ರಜ್ಞಾನ(ಎಂಒಎಸ್) ಮತ್ತು ಕೌಶಲ್ಯ ಅಭಿವೃದ್ಧಿ(ಎಂಒಎಸ್) ಸಚಿವಾಲಯಗಳು ಭಾಗವಹಿಸಿದ್ದವು. ಜರ್ಮನಿಯ ನಿಯೋಗದಲ್ಲಿ ಆರ್ಥಿಕ ವ್ಯವಹಾರಗಳು ಮತ್ತು ಹವಾಮಾನ ಕ್ರಮ, ವಿದೇಶಾಂಗ ವ್ಯವಹಾರಗಳು, ಕಾರ್ಮಿಕ ಮತ್ತು ಸಾಮಾಜಿಕ ವ್ಯವಹಾರಗಳು ಮತ್ತು ಶಿಕ್ಷಣ ಮತ್ತು ಸಂಶೋಧನೆ ಸಚಿವಾಲಯಗಳು ಭಾಗವಹಿಸಿದ್ದವು. ಅಲ್ಲದೆ, ಜರ್ಮನಿಯ ಹಣಕಾಸು, ಪರಿಸರ, ಪ್ರಕೃತಿ ಸಂರಕ್ಷಣೆ, ಪರಮಾಣು ಸುರಕ್ಷತೆ ಮತ್ತು ಗ್ರಾಹಕರ ರಕ್ಷಣೆ, ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಇಲಾಖೆಗಳ ಸಂಸದೀಯ ಕಾರ್ಯದರ್ಶಿಗಳು ಹಾಗೂ ಎರಡೂ ಕಡೆಯ ಹಿರಿಯ ಅಧಿಕಾರಿಗಳು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದ್ದರು.

ಎನ್ ಡಿ ಟಿ ವಿ ವಿಶ್ವ ಶೃಂಗಸಭೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

October 21st, 10:25 am

ನಾವು ಹಿಂದಿನ 4-5 ವರ್ಷಗಳ ಚರ್ಚೆಗಳನ್ನು ನೋಡಿದರೆ ಬಹುತೇಕ ಚರ್ಚೆಗಳಲ್ಲಿ ಒಂದು ಸಾಮಾನ್ಯ ವಿಷಯವಿದೆ ಎಂಬುದನ್ನು ಗಮನಿಸಬಹುದು. ಅದುವೇ ಭವಿಷ್ಯದ ಬಗ್ಗೆ ಕಾಳಜಿ/ಕಳವಳ. ಕೊರೊನಾ ಸಾಂಕ್ರಾಮಿಕದ ಅವಧಿಯಲ್ಲಿ ಜಾಗತಿಕ ಸಾಂಕ್ರಾಮಿಕ ರೋಗವನ್ನು ಹೇಗೆ ನಿಭಾಯಿಸುವುದು ಎಂಬ ಚಿಂತೆ ಇತ್ತು. ಕೋವಿಡ್ ಹರಡುತ್ತಿದ್ದಂತೆ, ಜಾಗತಿಕ ಆರ್ಥಿಕತೆಯ ಬಗ್ಗೆ ಕಳವಳಗಳು ಹೆಚ್ಚಾದವು. ಸಾಂಕ್ರಾಮಿಕ ರೋಗವು ಹಣದುಬ್ಬರ, ನಿರುದ್ಯೋಗ ಮತ್ತು ಹವಾಮಾನ ಬದಲಾವಣೆಯ ಬಗ್ಗೆ ಚಿಂತೆಗಳನ್ನು ಹೆಚ್ಚಿಸಿತು. ನಂತರ, ಭುಗಿಲೆದ್ದ ಯುದ್ಧಗಳು ಈ ಕುರಿತಾದ ಚರ್ಚೆಗಳು ಮತ್ತು ಆತಂಕಗಳನ್ನು ತೀವ್ರಗೊಳಿಸಿತು. ಜಾಗತಿಕ ಪೂರೈಕೆ ಸರಪಳಿಗೆ ಅಡೆತಡೆಗಳು ಮತ್ತು ಅನೇಕ ಅಮಾಯಕ ಜೀವಿಗಳು ಪ್ರಾಣ ಕಳೆದುಕೊಳ್ಳಬೇಕಾದ ಬಗ್ಗೆ ಆತಂಕ ಉಂಟಾಗಿತ್ತು. ಜಾಗತಿಕ ಶೃಂಗಸಭೆಗಳು ಮತ್ತು ಉಪನ್ಯಾಸಗಳಲ್ಲಿ ಉದ್ವಿಗ್ನತೆಗಳು, ಸಂಘರ್ಷಗಳು ಮತ್ತು ಒತ್ತಡಗಳು ಚರ್ಚಾ ವಿಷಯಗಳಾದವು. ಜಾಗತಿಕವಾಗಿ ಪ್ರಸ್ತುತದ ಚರ್ಚೆಗಳು ಈ ಕಳವಳದ ಬಗ್ಗೆ ಕೇಂದ್ರೀಕೃತವಾಗಿರುವಾಗ, ಭಾರತದಲ್ಲಿ ಯಾವ ರೀತಿಯ ಚಿಂತನೆ ನಡೆಯುತ್ತಿದೆ? ಇದು ಜಾಗತಿಕ ಚಿಂತೆಗೆ ವ್ಯತಿರಿಕ್ತವಾಗಿದೆ. ಭಾರತದಲ್ಲಿ ನಾವು ಈ ಜಾಗತಿಕ ಪ್ರಕ್ಷುಬ್ಧತೆಯ ನಡುವೆಯೂ “ಭಾರತೀಯ ಶತಮಾನ”ದ ಬಗ್ಗೆ ಮಾತನಾಡುತ್ತಿದ್ದೇವೆ. ಭಾರತ ಆಶಾಕಿರಣವಾಗಿದೆ. ಜಗತ್ತು ಚಿಂತೆಯಲ್ಲಿ ಮುಳುಗಿರುವಾಗ, ಭಾರತವು ಭರವಸೆಯನ್ನು ಹರಡುತ್ತಿದೆ. ಹಾಗೆಂದ ಮಾತ್ರಕ್ಕೆ ಜಾಗತಿಕ ಸನ್ನಿವೇಶಗಳು ನಮ್ಮ ಮೇಲೆ ಪರಿಣಾಮ ಬೀರುವುದಿಲ್ಲ ಎಂದಲ್ಲ – ಅದು ಪ್ರಭಾವವನ್ನು ಖಂಡಿತವಾಗಿಯೂ ಬೀರಲಿದೆ. ಭಾರತವು ಸವಾಲುಗಳನ್ನು ಎದುರಿಸುತ್ತಿದೆ, ಆದರೆ ಇಲ್ಲಿ ಸಕಾರಾತ್ಮಕತೆಯ ಭಾವವಿದೆ, ನಾವೆಲ್ಲರೂ ಅದರ ಅನುಭೂತಿ ಪಡೆಯಬಹುದು. ಹೀಗಾಗಿ 'ದಿ ಇಂಡಿಯನ್ ಸೆಂಚುರಿ – (ಭಾರತದ ಶತಮಾನದ)' ದ ಬಗ್ಗೆ ಮಾತು ಕೇಳಿಬರುತ್ತಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಎನ್‌ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು

October 21st, 10:16 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಎನ್‌ ಡಿ ಟಿ ವಿ ವಿಶ್ವ ಶೃಂಗಸಭೆ 2024 ಅನ್ನು ಉದ್ದೇಶಿಸಿ ಮಾತನಾಡಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು ಎಲ್ಲಾ ಗಣ್ಯರನ್ನು ಸ್ವಾಗತಿಸಿದರು ಮತ್ತು ಶೃಂಗಸಭೆಯಲ್ಲಿ ಹಲವು ವಿಷಯಗಳನ್ನು ಕುರಿತು ಚರ್ಚೆಗಳು ನಡೆಯಲಿವೆ ಎಂದು ಹೇಳಿದರು. ತಮ್ಮ ಅಭಿಪ್ರಾಯಗಳನ್ನು ಮಂಡಿಸುವ ವಿವಿಧ ವಲಯಗಳ ಜಾಗತಿಕ ನಾಯಕರ ಉಪಸ್ಥಿತಿಯನ್ನು ಅವರು ಶ್ಲಾಘಿಸಿದರು.

ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ 2024 ರಲ್ಲಿ ಉದ್ಯಮ ದಿಗ್ಗಜರಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದ ಶ್ಲಾಘನೆ

October 15th, 02:23 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪಂನಲ್ಲಿ ನಡೆದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟ – ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಸಭೆ (ITU-WTSA) 2024 ರ ಸಂದರ್ಭದಲ್ಲಿ ಇಂಡಿಯಾ ಮೊಬೈಲ್ ಕಾಂಗ್ರೆಸ್ನ 8 ನೇ ಆವೃತ್ತಿಯನ್ನು ಉದ್ಘಾಟಿಸಿದರು. ಡಬ್ಲ್ಯು ಟಿ ಎಸ್ ಎ ಎಂಬುದು ಡಿಜಿಟಲ್ ತಂತ್ರಜ್ಞಾನಗಳಿಗಾಗಿನ ವಿಶ್ವ ಸಂಸ್ಥೆಯ ಏಜೆನ್ಸಿಯಾದ ಅಂತಾರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಪ್ರಮಾಣೀಕರಣ ಕಾರ್ಯಕ್ಕಾಗಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಆಯೋಜಿಸಲಾಗುವ ಆಡಳಿತ ಸಮ್ಮೇಳನವಾಗಿದೆ. ಇದೇ ಮೊದಲ ಬಾರಿಗೆ ಐಟಿಯು – ಡಬ್ಲ್ಯುಟಿಎಸ್ಎ ಅನ್ನು ಭಾರತ ಮತ್ತು ಏಷ್ಯಾ-ಪೆಸಿಫಿಕ್ನಲ್ಲಿ ಆಯೋಜಿಸಲಾಗಿದೆ. ಇದು ದೂರಸಂಪರ್ಕ, ಡಿಜಿಟಲ್ ಮತ್ತು ಐಸಿಟಿ ವಲಯಗಳನ್ನು ಪ್ರತಿನಿಧಿಸುತ್ತಿರುವ 190 ಕ್ಕೂ ಹೆಚ್ಚು ದೇಶಗಳ 3,000 ಕ್ಕೂ ಹೆಚ್ಚು ಉದ್ಯಮ ನಾಯಕರು, ನೀತಿ-ನಿರೂಪಕರು ಮತ್ತು ತಂತ್ರಜ್ಞಾನ ತಜ್ಞರನ್ನು ಒಟ್ಟುಗೂಡಿಸಿರುವ ಪ್ರಮುಖ ಜಾಗತಿಕ ಕಾರ್ಯಕ್ರಮವಾಗಿದೆ.

ಐಟಿಯು- ವಿಶ್ವ ದೂರಸಂಪರ್ಕ ಪ್ರಮಾಣೀಕರಣ ಅಸೆಂಬ್ಲಿ 2024 ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

October 15th, 10:05 am

ನನ್ನ ಸಂಪುಟ (ಕ್ಯಾಬಿನೆಟ್) ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜೀ, ಚಂದ್ರಶೇಖರ್ ಜೀ, ಐಟಿಯು ಪ್ರಧಾನ ಕಾರ್ಯದರ್ಶಿ, ವಿವಿಧ ದೇಶಗಳ ಸಚಿವರು, ಭಾರತದ ವಿವಿಧ ರಾಜ್ಯಗಳ ಸಚಿವರು, ಉದ್ಯಮದ ಮುಖಂಡರು, ಟೆಲಿಕಾಂ ತಜ್ಞರು, ನವೋದ್ಯಮ ಜಗತ್ತಿನ ಯುವ ಉದ್ಯಮಿಗಳು, ಭಾರತ ಮತ್ತು ವಿದೇಶಗಳ ಗೌರವಾನ್ವಿತ ಅತಿಥಿಗಳೇ, ಮಹಿಳೆಯರೇ ಮತ್ತು ಮಹನೀಯರೇ,

ನವದೆಹಲಿಯಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ -2024 ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

October 15th, 10:00 am

ನವದೆಹಲಿಯ ಭಾರತ್ ಮಂಟಪಂನಲ್ಲಿ ಐಟಿಯು ವರ್ಲ್ಡ್ ಟೆಲಿಕಮ್ಯುನಿಕೇಷನ್ ಸ್ಟ್ಯಾಂಡರ್ಡೈಸೇಷನ್ ಅಸೆಂಬ್ಲಿ [ಡಬ್ಲ್ಯುಟಿಎಸ್ಎ] -2024 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 8ನೇ ಆವೃತ್ತಿಗೂ ಪ್ರಧಾನಮಂತ್ರಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ವಸ್ತುಪ್ರದರ್ಶನವನ್ನು ನಡೆದಾಡುತ್ತಾ ವೀಕ್ಷಿಸಿದರು.

ಜಂಟಿ ವಸ್ತುಸ್ಥಿತಿ ಪತ್ರ: ಸಮಗ್ರ ಮತ್ತು ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆ ವಿಸ್ತರಿಸುವುದನ್ನು ಅಮೆರಿಕ ಮತ್ತು ಭಾರತ ಮುಂದುವರಿಸುತ್ತವೆ

September 22nd, 12:00 pm

21 ನೇ ಶತಮಾನದ ನಿರ್ಣಾಯಕ ಪಾಲುದಾರಿಕೆಯನ್ನು ವ್ಯಾಖ್ಯಾನಿಸುವ ಯುಎಸ್-ಭಾರತ ಸಮಗ್ರ ಜಾಗತಿಕ ಮತ್ತು ಕಾರ್ಯತಂತ್ರದ ಸಹಭಾಗಿತ್ವವು ಜಾಗತಿಕ ಒಳಿತಿಗಾಗಿ ಸೇವೆ ಸಲ್ಲಿಸುವ ಮಹತ್ವಾಕಾಂಕ್ಷೆಯ ಕಾರ್ಯಸೂಚಿಯನ್ನು ನಿರ್ಣಾಯಕವಾಗಿ ತಲುಪಿಸುತ್ತಿದೆ ಎಂದು ಯುಎಸ್ ಅಧ್ಯಕ್ಷ ಜೋಸೆಫ್ ಆರ್ ಬೈಡನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ದೃಢಪಡಿಸಿದರು. ಅಮೆರಿಕ ಮತ್ತು ಭಾರತ ನಡುವೆ ಅಭೂತಪೂರ್ವ ಮಟ್ಟದ ವಿಶ್ವಾಸ ಮತ್ತು ಸಹಯೋಗ ಬೆಳೆದ ಐತಿಹಾಸಿಕ ಅವಧಿಯ ಬಗ್ಗೆ ನಾಯಕರು ಉಲ್ಲೇಖಿಸಿದರು. ನಮ್ಮ ದೇಶಗಳು ಹೆಚ್ಚು ಪರಿಪೂರ್ಣ ಒಕ್ಕೂಟಗಳಾಗಲು ಮತ್ತು ನಮ್ಮ ಹಂಚಿಕೆಯ ಭವಿಷ್ಯವನ್ನು ತಲುಪಲು ಪ್ರಯತ್ನಿಸುತ್ತಿರುವುದರಿಂದ ಪ್ರಜಾಪ್ರಭುತ್ವ, ಸ್ವಾತಂತ್ರ್ಯ, ಕಾನೂನಿನ ನಿಯಮ, ಮಾನವ ಹಕ್ಕುಗಳು, ಬಹುತ್ವ ಮತ್ತು ಎಲ್ಲರಿಗೂ ಸಮಾನ ಅವಕಾಶಗಳನ್ನು ಎತ್ತಿಹಿಡಿಯುವಲ್ಲಿ ಯುಎಸ್-ಭಾರತ ಪಾಲುದಾರಿಕೆಯು ಆಧಾರವಾಗಿರಬೇಕು ಎಂದು ನಾಯಕರು ದೃಢಪಡಿಸಿದರು. ಯುಎಸ್-ಭಾರತ ಪ್ರಮುಖ ರಕ್ಷಣಾ ಪಾಲುದಾರಿಕೆಯನ್ನು ಜಾಗತಿಕ ಭದ್ರತೆ ಮತ್ತು ಶಾಂತಿಯ ಆಧಾರಸ್ತಂಭವನ್ನಾಗಿ ಮಾಡಿದ ಪ್ರಗತಿಯನ್ನು ನಾಯಕರು ಶ್ಲಾಘಿಸಿದರು, ಕಾರ್ಯಾಚರಣೆಯಲ್ಲಿ ಸಮನ್ವಯದ ಹೆಚ್ಚಳ, ಮಾಹಿತಿ ಹಂಚಿಕೆ ಮತ್ತು ರಕ್ಷಣಾ ಕೈಗಾರಿಕಾ ನಾವೀನ್ಯತೆಯ ಪ್ರಯೋಜನಗಳನ್ನು ಎತ್ತಿ ತೋರಿಸಿದರು. ಅಧ್ಯಕ್ಷ ಬೈಡೆನ್ ಮತ್ತು ಪ್ರಧಾನಿ ಮೋದಿ ಅವರು ನಮ್ಮ ಜನರು, ನಮ್ಮ ನಾಗರಿಕ ಮತ್ತು ಖಾಸಗಿ ವಲಯಗಳು ಮತ್ತು ಆಳವಾದ ಬಂಧಗಳನ್ನು ರೂಪಿಸಲು ತಮ್ಮ ಸರ್ಕಾರಗಳ ದಣಿವರಿಯದ ಪ್ರಯತ್ನಗಳು ಮುಂಬರುವ ದಶಕಗಳಲ್ಲಿ ಯುಎಸ್-ಭಾರತ ಪಾಲುದಾರಿಕೆಯನ್ನು ಇನ್ನೂ ಹೆಚ್ಚಿನ ಎತ್ತರಕ್ಕೆ ಕೊಂಡೊಯ್ಯಲಿವೆ ಎಂಬ ಬಗ್ಗೆ ನಿರಂತರ ಆಶಾವಾದ ಮತ್ತು ಅತ್ಯಂತ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಗುಜರಾತ್‌ನ ಗಾಂಧಿನಗರದಲ್ಲಿ ರಿ-ಇನ್ವೆಸ್ಟ್ 2024 ಸಮ್ಮೇಳನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 16th, 11:30 am

ಗುಜರಾತ್ ರಾಜ್ಯಪಾಲರಾದ ಶ್ರೀ ಆಚಾರ್ಯ ದೇವವ್ರತ್ ಜಿ, ಗುಜರಾತ್ ಮುಖ್ಯಮಂತ್ರಿ, ಶ್ರೀ ಭೂಪೇಂದ್ರಭಾಯಿ ಪಟೇಲ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಶ್ರೀ ಚಂದ್ರಬಾಬು ನಾಯ್ಡು ಜಿ, ರಾಜಸ್ಥಾನ ಮುಖ್ಯಮಂತ್ರಿ ಶ್ರೀ ಭಜನ್ ಲಾಲ್ ಶರ್ಮಾ ಜಿ, ಮಧ್ಯಪ್ರದೇಶ ಮುಖ್ಯಮಂತ್ರಿ ಶ್ರೀ ಮೋಹನ್ ಯಾದವ್ ಜಿ, ಛತ್ತೀಸ್‌ಗಢ ಮುಖ್ಯಮಂತ್ರಿ ಮತ್ತು ಗೋವಾ ಮುಖ್ಯಮಂತ್ರಿಗಳೆ, ಸಂಪು ಸಹೋದ್ಯೋಗಿಗಳಾದ ಪ್ರಲ್ಹಾದ್ ಜೋಶಿ ಮತ್ತು ಶ್ರೀಪಾದ್ ನಾಯ್ಕ್ ಜಿ, ಜರ್ಮನಿಯ ಆರ್ಥಿಕ ಸಹಕಾರ ಸಚಿವರು ಮತ್ತು ಡೆನ್ಮಾರ್ಕ್‌ನ ಕೈಗಾರಿಕಾ ವ್ಯವಹಾರ ಸಚಿವರು ಸೇರಿದಂತೆ ವಿದೇಶಿ ಗಣ್ಯ ಅತಿಥಿಗಳೆ, ವಿವಿಧ ರಾಜ್ಯಗಳ ಇಂಧನ ಸಚಿವರೆ, ಹಲವಾರು ದೇಶಗಳ ಪ್ರತಿನಿಧಿಗಳೆ, ಇಲ್ಲಿ ನೆರೆದಿರುವ ಮಹಿಳೆಯರೆ ಮತ್ತು ಮಹನೀಯರೆ!