India-Indonesia Joint Statement on the State Visit by Prime Minister of India to Indonesia

July 07th, 05:15 pm

At the invitation of Indonesian President Prabowo Subianto, PM Modi is on a State Visit to Indonesia from 6-8 July 2026. PM Modi's visit reflects the shared commitment of the two leaders to achieve a substantial upward trajectory in the India-Indonesia Comprehensive Strategic Partnership. The two leaders held discussions at Istana Merdeka in Jakarta, covering the full spectrum of bilateral relations.

ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

July 07th, 03:15 pm

ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.

ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

July 07th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಕಾರ್ತದಲ್ಲಿ ಇಂಡೋನೇಷ್ಯಾ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿದರು. ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಿದ ಭಾರತದ ಮೊದಲ ಪ್ರಧಾನಮಂತ್ರಿ ಅವರಾಗಿದ್ದಾರೆ.

ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ "ಎಲ್ಲರಿಗೂ ಸಮತೋಲಿತ, ಹಂಚಿಕೆಯ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವ" ಎಂಬ ವಿಷಯದ ಕುರಿತು ಪ್ರಧಾನಮಂತ್ರಿ ಅವರ ಭಾಷಣ

June 18th, 05:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್‌ನ ಎವಿಯನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಎಲ್ಲರಿಗೂ ಸಮತೋಲಿತ, ಹಂಚಿಕೆಯ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವ ಎಂಬ ವಿಷಯದ ಕುರಿತ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು.

ಜಿ-7 ಶೃಂಗಸಭೆ-ಜನಸಂಪರ್ಕ ಅಧಿವೇಶನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಇಂಗ್ಲಿಷ್ ಅನುವಾದ: ಎಲ್ಲರಿಗೂ ಸಮತೋಲಿತ, ಹಂಚಿಕೆಯ ಮತ್ತು ಸುಸ್ಥಿರ ಆರ್ಥಿಕ ಬೆಳವಣಿಗೆಯನ್ನು ಪುನರುಜ್ಜೀವನಗೊಳಿಸುವುದು

June 17th, 06:07 pm

ಫ್ರಾನ್ಸ್‌ನ ಜಿ-7 ಅಧ್ಯಕ್ಷತೆಯು ಎಲ್ಲರನ್ನೂ ಒಳಗೊಳ್ಳುವ ಮತ್ತು ಸುಸ್ಥಿರ ಬೆಳವಣಿಗೆಗೆ ವಿಶೇಷ ಪ್ರಾಮುಖ್ಯತೆಯನ್ನು ನೀಡಿದೆ ಎಂಬುದು ನನಗೆ ಸಂತೋಷ ತಂದಿದೆ. ಜಗತ್ತು ಅನೇಕ ಸವಾಲುಗಳು ಮತ್ತು ಅನಿಶ್ಚಿತತೆಗಳನ್ನು ಎದುರಿಸುತ್ತಿರುವ ಸಮಯದಲ್ಲಿ, ಈ ವೇದಿಕೆಯಿಂದ ಹೊರಹೊಮ್ಮುವ ಸಂದೇಶವು ಎಲ್ಲಾ ಮಾನವೀಯತೆಯ ಯೋಗಕ್ಷೇಮ ಮತ್ತು ಭವಿಷ್ಯಕ್ಕೆ ಮುಖ್ಯವಾಗಿದೆ.

ಭಾರತ-ಇಟಲಿ ಜಂಟಿ ಘೋಷಣೆ

May 20th, 10:28 pm

ಇಟಲಿಯ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಅವರ ಆಹ್ವಾನದ ಮೇರೆಗೆ, ಭಾರತದ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು 19-20 ಮೇ 2026 ರಂದು ಇಟಲಿಗೆ ಅಧಿಕೃತ ಭೇಟಿ ನೀಡಿದರು. ಜಿ7 ಶೃಂಗಸಭೆಗಾಗಿ ಜೂನ್ 2024ರಲ್ಲಿ ಪ್ರಧಾನಮಂತ್ರಿ ಮೋದಿ ಅವರು ಇಟಲಿಗೆ ನೀಡಿದ್ದ ಭೇಟಿ ಮತ್ತು 2023ರಲ್ಲಿ ಜಿ20 ಶೃಂಗಸಭೆಗಾಗಿ ಪ್ರಧಾನಮಂತ್ರಿ ಮೆಲೋನಿ ಅವರು ಭಾರತಕ್ಕೆ ನೀಡಿದ್ದ ಭೇಟಿಯ ಮುಂದುವರಿಕೆಯಾಗಿ ನಡೆದ ಈ ಭೇಟಿಯು, ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ಉತ್ತೇಜನವನ್ನು ನೀಡಿತು. ಉಭಯ ನಾಯಕರು ಭಾರತ-ಇಟಲಿ ಸಂಬಂಧಗಳನ್ನು 'ವಿಶೇಷ ಕಾರ್ಯತಂತ್ರದ ಪಾಲುದಾರಿಕೆ'ಯ ಮಟ್ಟಕ್ಕೆ ಏರಿಸಲು ನಿರ್ಧರಿಸಿದರು.

ನೆದರ್‌ಲ್ಯಾಂಡ್ಸ್ ಪ್ರಧಾನಮಂತ್ರಿ ರಾಬ್ ಜೆಟ್ಟನ್ ಅವರೊಂದಿಗೆ ನಿಯೋಗ ಮಟ್ಟದ ಮಾತುಕತೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆ

May 16th, 11:58 pm

ನನಗೆ ಮತ್ತು ನನ್ನ ನಿಯೋಗಕ್ಕೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಸುಮಾರು 1 ದಶಕದ ನಂತರ ನೆದರ್‌ಲ್ಯಾಂಡ್ಸ್ ಗೆ ಭೇಟಿ ನೀಡಿರುವುದು ನನಗೆ ಸಂತೋಷ ತಂದಿದೆ. ಕಳೆದ 10 ವರ್ಷಗಳಲ್ಲಿ ಭಾರತ- ನೆದರ್‌ಲ್ಯಾಂಡ್ಸ್ ಪಾಲುದಾರಿಕೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸಲಾಗಿದೆ.

ನವದೆಹಲಿಯಲ್ಲಿ ಆಯೋಜಿತವಾಗಿದ್ದ ನಾರಿ ಶಕ್ತಿ ವಂದನ್ ಸಮ್ಮೇಳನ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

April 13th, 11:15 am

ವೇದಿಕೆಯಲ್ಲಿ ಉಪಸ್ಥಿತರಿರುವ ದೆಹಲಿಯ ಜನಪ್ರಿಯ ಮುಖ್ಯಮಂತ್ರಿ ಶ್ರೀಮತಿ ರೇಖಾ ಗುಪ್ತಾ ಜಿ, ಕೇಂದ್ರ ಸಚಿವರಾದ ಶ್ರೀಮತಿ ಅನ್ನಪೂರ್ಣ ದೇವಿ ಜಿ, ಶ್ರೀಮತಿ ಸಾವಿತ್ರಿ ಠಾಕೂರ್ ಜಿ, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ರೀಮತಿ ವಿಜಯ ರಹತ್ಕರ್ ಜಿ. ನಿಮ್ಮಲ್ಲಿ ಅನೇಕ ಹಿರಿಯರು, ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು ಮತ್ತು ನಮ್ಮ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಜಿ ಕೂಡ ಇದ್ದಾರೆ. ನನ್ನ ಎಲ್ಲಾ ಗೌರವಾನ್ವಿತ ಸಹೋದರಿಯರು ಇಲ್ಲಿದ್ದಾರೆ, ಈ ಸಮಯದಲ್ಲಿ ದೇಶದೆಲ್ಲೆಡೆ ಬೈಸಾಖಿ ಹಬ್ಬದ ಸಂತಸ ಮನೆಮಾಡಿದೆ. ನಾಳೆ, ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷ ಆಚರಿಸಲಾಗುತ್ತದೆ. ಇಂದು ನಾನು ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಧೈರ್ಯಶಾಲಿ ಹುತಾತ್ಮರಿಗೆ ಗೌರವ ನಮನ ಸಲ್ಲಿಸುತ್ತೇನೆ.

‘ನಾರಿ ಶಕ್ತಿ ವಂದನ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

April 13th, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ವಿಜ್ಞಾನ ಭವನದಲ್ಲಿಂದು ನಡೆದ ನಾರಿ ಶಕ್ತಿ ವಂದನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬೈಸಾಖಿಯ ಶುಭ ಸಂದರ್ಭದಲ್ಲಿ ಮತ್ತು ದೇಶದ ವಿವಿಧ ಭಾಗಗಳಲ್ಲಿ ಹೊಸ ವರ್ಷಾಚರಣೆಗೆ ಮುನ್ನ ಮಾತನಾಡಿದ ಪ್ರಧಾನಮಂತ್ರಿ, ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು. “ಭಾರತವು 21ನೇ ಶತಮಾನದ ಅತಿದೊಡ್ಡ ನಿರ್ಧಾರಗಳಲ್ಲಿ ಒಂದನ್ನು ತೆಗೆದುಕೊಳ್ಳಲಿದ್ದು, ಇದು ನಾರಿ ಶಕ್ತಿಗೆ ಅರ್ಪಿಸುತ್ತಿರುವ ನಿರ್ಧಾರ’’ ಎಂದು ಶ್ರೀ ನರೇಂದ್ರ ಮೋದಿ ಪ್ರತಿಪಾದಿಸಿದರು.

ಕಾಮನ್‌ವೆಲ್ತ್ ರಾಷ್ಟ್ರಗಳ ಲೋಕಸಭೆಗಳ ಸ್ಪೀಕರ್‌ಗಳು ಮತ್ತು ಅಧ್ಯಕ್ಷಾಧಿಕಾರಿಗಳ 28ನೇ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

January 15th, 11:00 am

ಲೋಕಸಭೆಯ ಗೌರವಾನ್ವಿತ ಸ್ಪೀಕರ್ ಶ್ರೀ ಓಂ ಬಿರ್ಲಾ ಜೀ, ರಾಜ್ಯಸಭೆಯ ಉಪಸಭಾಪತಿ ಶ್ರೀ ಹರಿವಂಶ್ ಜೀ, ಅಂತರ-ಸಂಸದೀಯ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಟುಲಿಯಾ ಆಕ್ಸನ್, ಕಾಮನ್ವೆಲ್ತ್ ಸಂಸದೀಯ ಸಂಘದ ಅಧ್ಯಕ್ಷರಾದ ಶ್ರೀ ಕ್ರಿಸ್ಟೋಫರ್ ಕಲಿಲಾ, ಕಾಮನ್ವೆಲ್ತ್ ದೇಶಗಳ ಸ್ಪೀಕರ್‌ಗಳು ಮತ್ತು ಸಭಾಧ್ಯಕ್ಷರು, ಹಾಗು ಪ್ರತಿನಿಧಿಗಳೇ, ಮಹಿಳೆಯರೇ ಮತ್ತು ಮಹನೀಯರೇ!

ಸಂವಿದಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ಕಾಮನ್‌ವೆಲ್ತ್‌ನ ಸ್ಪೀಕರ್‌ಗಳು ಮತ್ತು ಪೀಠಾಸೀನಾಧಿಕಾರಿಗಳ 28ನೇ ಸಮ್ಮೇಳನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 15th, 10:32 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ನವದೆಹಲಿಯ ಸಂಸತ್ ಭವನದ ಸಂಕೀರ್ಣದಲ್ಲಿರುವ ಸಂವಿಧಾನ ಸದನದ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾಮನ್‌ವೆಲ್ತ್‌ನ ಸ್ಪೀಕರ್‌ಗಳು ಮತ್ತು ಸಭಾಧ್ಯಕ್ಷರ 28 ನೇ ಸಮ್ಮೇಳನವನ್ನು (ಸಿಎಸ್‌ಪಿಒಸಿ) ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಶ್ರೀ ನರೇಂದ್ರ ಮೋದಿ, ಸಂಸದೀಯ ಪ್ರಜಾಪ್ರಭುತ್ವದಲ್ಲಿ ಸ್ಪೀಕರ್ ಪಾತ್ರ ವಿಶಿಷ್ಟವಾಗಿದೆ ಎಂದು ಹೇಳಿದರು. ಸ್ಪೀಕರ್‌ಗೆ ಹೆಚ್ಚು ಮಾತನಾಡಲು ಅವಕಾಶವಿಲ್ಲ, ಆದರೆ ಅವರ ಜವಾಬ್ದಾರಿ ಇತರರ ಮಾತುಗಳನ್ನು ಕೇಳುವುದು ಮತ್ತು ಪ್ರತಿಯೊಬ್ಬರೂ ತಮ್ಮ ಅನಿಸಿಕೆಗಳನ್ನು ಅಭಿವ್ಯಕ್ತ ವ್ಯಕ್ತಪಡಿಸಲು ಅವಕಾಶ ದೊರಕುವಂತೆ ನೋಡಿಕೊಳ್ಳುವುದಾಗಿದೆ ಎಂದು ಅವರು ಒತ್ತಿ ಹೇಳಿದರು. ಗದ್ದಲದ ಮತ್ತು ಅತಿಯಾದ ಉತ್ಸಾಹಭರಿತ ಸದಸ್ಯರನ್ನು ಸಹ ನಗುವಿನೊಂದಿಗೆ ನಿಭಾಯಿಸುವ ಸ್ಪೀಕರ್‌ಗಳ ಸಾಮಾನ್ಯ ಲಕ್ಷಣವೆಂದರೆ ತಾಳ್ಮೆ ಎಂದು ಅವರು ಬಲವಾಗಿ ಪ್ರತಿಪಾದಿಸಿದರು.

ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 04th, 01:00 pm

ಉತ್ತರ ಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶದ ಸಚಿವರಾದ ಸಹೋದರ ರವೀಂದ್ರ ಜೈಸ್ವಾಲ್ ಜಿ, ದಯಾಶಂಕರ್ ಜಿ, ಗಿರೀಶ್ ಯಾದವ್ ಜಿ, ಬನಾರಸ್ ಮೇಯರ್ ಅಶೋಕ್ ತಿವಾರಿ ಜಿ, ಇತರೆ ಜನಪ್ರತಿನಿಧಿಗಳೆ, ವಾಲಿಬಾಲ್ ಸಂಘಟನೆಯ ಎಲ್ಲಾ ಪದಾಧಿಕಾರಿಗಳೆ, ದೇಶಾದ್ಯಂತ ಬಂದಿರುವ ಆಟಗಾರರೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆಲ್ಲರಿಗೂ ನಮಸ್ಕಾರ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ʻ72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿʼಯನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಿದರು

January 04th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ವಾರಣಾಸಿಯ ಸಂಸತ್ ಸದಸ್ಯನಾಗಿ, ಎಲ್ಲಾ ಆಟಗಾರರನ್ನು ಸ್ವಾಗತಿಸಲು ಮತ್ತು ಅಭಿನಂದಿಸಲು ಸಂತಸವಾಗುತ್ತಿದೆ ಎಂದು ಹೇಳಿದರು. ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಇಂದಿನಿಂದ ವಾರಣಾಸಿಯಲ್ಲಿ ಪ್ರಾರಂಭವಾಗುತ್ತಿದೆ. ಆಟಗಾರರು ಅಪಾರ ಕಠಿಣ ಪರಿಶ್ರಮದ ಬಳಿಕ ಈ ರಾಷ್ಟ್ರೀಯ ಪಂದ್ಯಾವಳಿಯನ್ನು ತಲುಪಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ವಾರಣಾಸಿಯ ಮೈದಾನದಲ್ಲಿ ಅವರ ಪ್ರಯತ್ನಗಳನ್ನು ಪರೀಕ್ಷಿಗೆ ಒಡ್ಡಲಾಗುವುದು ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ದೇಶದ 28 ರಾಜ್ಯಗಳ ತಂಡಗಳು ಒಟ್ಟುಗೂಡಿ ʻಏಕ ಭಾರತ, ಶ್ರೇಷ್ಠ ಭಾರತʼದ ಸುಂದರ ಚಿತ್ರಣವನ್ನು ಪ್ರಸ್ತುತಪಡಿಸಿವೆ ಎಂದು ಅವರು ಹೇಳಿದರು. ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ಆಟಗಾರರಿಗೆ ಪ್ರಧಾನಮಂತ್ರಿಯವರು ತಮ್ಮ ಶುಭಾಶಯಗಳನ್ನು ತಿಳಿಸಿದರು.

ನವದೆಹಲಿಯಲ್ಲಿ ನಡೆದ 2ನೇ ವಿಶ್ವ ಆರೋಗ್ಯ ಸಂಘಟನೆ(ಡಬ್ಲ್ಯು.ಹೆಚ್‌.ಒ)ಯ ಸಾಂಪ್ರದಾಯಿಕ ಔಷಧದ ಜಾಗತಿಕ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

December 19th, 08:11 pm

ವಿಶ್ವ ಆರೋಗ್ಯ ಸಂಘಟನೆ(ಡಬ್ಲ್ಯು.ಹೆಚ್‌.ಒ)ಯ ಮಹಾನಿರ್ದೇಶಕರಾದ ನಮ್ಮ ತುಳಸಿ ಭಾಯಿ ಡಾ. ಟೆಡ್ರೊಸ್, ಕೇಂದ್ರ ಆರೋಗ್ಯ ಸಚಿವರಾದ, ನನ್ನ ಸಹೋದ್ಯೋಗಿ ಜೆ. ಪಿ. ನಡ್ಡಾ ಜಿ, ಆಯುಷ್ ಖಾತೆ ರಾಜ್ಯ ಸಚಿವರಾದ ಪ್ರತಾಪ್‌ರಾವ್ ಜಾಧವ್ ಜಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಇತರೆ ದೇಶಗಳ ಸಚಿವರೆ, ವಿವಿಧ ರಾಷ್ಟ್ರಗಳ ರಾಯಭಾರಿಗಳೆ, ಎಲ್ಲಾ ಗಣ್ಯ ಪ್ರತಿನಿಧಿಗಳೆ, ಸಾಂಪ್ರದಾಯಿಕ ಔಷಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಗೌರವಾನ್ವಿತ ತಜ್ಞರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎರಡನೇ ಡಬ್ಲ್ಯು ಎಚ್‌ ಒ ಜಾಗತಿಕ ಸಾಂಪ್ರದಾಯಿಕ ವೈದ್ಯ ಪದ್ಧತಿ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು

December 19th, 07:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಎರಡನೇ ಡಬ್ಲ್ಯು ಎಚ್ ಒ ಜಾಗತಿಕ ಸಾಂಪ್ರದಾಯಿಕ ವೈದ್ಯ ಪದ್ಧತಿ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಕಳೆದ ಮೂರು ದಿನಗಳಲ್ಲಿ ಸಾಂಪ್ರದಾಯಿಕ ವೈದ್ಯಕೀಯ ಕ್ಷೇತ್ರದಲ್ಲಿ ವಿಶ್ವದಾದ್ಯಂತದ ತಜ್ಞರು ಗಂಭೀರ ಮತ್ತು ಅರ್ಥಪೂರ್ಣ ಚರ್ಚೆಗಳಲ್ಲಿ ತೊಡಗಿದ್ದಾರೆ ಎಂದು ಎತ್ತಿ ತೋರಿಸಿದರು. ಈ ಉದ್ದೇಶಕ್ಕಾಗಿ ಭಾರತವು ಒಂದು ಬಲಿಷ್ಠ ವೇದಿಕೆಯಾಗಿ ಸೇವೆ ಸಲ್ಲಿಸುತ್ತಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿದರು ಮತ್ತು ಈ ಪ್ರಕ್ರಿಯೆಯಲ್ಲಿ ಡಬ್ಲ್ಯು ಎಚ್ ಒ ದ ಸಕ್ರಿಯ ಪಾತ್ರವನ್ನು ಗಮನಿಸಿದರು. ಶೃಂಗಸಭೆಯ ಯಶಸ್ವಿ ಆಯೋಜನೆಗಾಗಿ ಅವರು ಡಬ್ಲ್ಯು ಎಚ್ ಒ , ಭಾರತ ಸರ್ಕಾರದ ಆಯುಷ್ ಸಚಿವಾಲಯ ಮತ್ತು ಉಪಸ್ಥಿತರಿದ್ದ ಎಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.

ಜೋಹಾನ್ಸ್‌ಬರ್ಗ್‌ ನಲ್ಲಿ ನಡೆದ ಜಿ-20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಜಪಾನ್ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ

November 23rd, 09:46 pm

ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ ನಲ್ಲಿ ನಡೆದ ಜಿ-20 ನಾಯಕರ ಶೃಂಗಸಭೆಯ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್ ಪ್ರಧಾನಮಂತ್ರಿ ಘನತೆವೆತ್ತ ಸಾನೇ ತಕೈಚಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಅಕ್ಟೋಬರ್ 29, 2025 ರಂದು ದೂರವಾಣಿ ಕರೆ ಮಾಡಿದ ನಂತರ ಪ್ರಧಾನಮಂತ್ರಿ ತಕೈಚಿ ಅವರೊಂದಿಗಿನ ಪ್ರಧಾನಮಂತ್ರಿ ಅವರ ಮೊದಲ ಮುಖಾಮುಖಿ ಸಭೆ ಇದಾಗಿದೆ.

2025ರ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಇಟಲಿಯ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ

November 23rd, 09:44 pm

ದಕ್ಷಿಣ ಆಫ್ರಿಕಾದ ಜೋಹಾನ್ಸ್‌ ಬರ್ಗ್‌ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಟಾಲಿಯನ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀಮತಿ ಜಾರ್ಜಿಯಾ ಮೆಲೋನಿ ಅವರನ್ನು ಭೇಟಿಯಾದರು. ಈ ವರ್ಷದ ಜೂನ್‌ ನಲ್ಲಿ ಕೆನಡಾದ ಕನನಾಸ್ಕಿಸ್‌ ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಈ ಇಬ್ಬರೂ ನಾಯಕರು ಸಂಕ್ಷಿಪ್ತವಾಗಿ ಪರಸ್ಪರ ಸಂವಹನ ನಡೆಸಿದ್ದರು.

ಜೋಹಾನ್ಸ್‌ಬರ್ಗ್‌ ನಲ್ಲಿ ನಡೆದ ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

November 23rd, 09:41 pm

ಭಾರತ-ಕೆನಡಾ ಪಾಲುದಾರಿಕೆಯ ಪ್ರಗತಿಯನ್ನು ಪರಿಶೀಲಿಸಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜೋಹಾನ್ಸ್‌ಬರ್ಗ್‌ ನಲ್ಲಿ ನಡೆದ ಜಿ20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಕೆನಡಾದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ಮಾರ್ಕ್‌ ಕಾರ್ನೆ ಅವರನ್ನು ಭೇಟಿ ಮಾಡಿದರು.

ಜಿ-20 ಶೃಂಗಸಭೆ ವೇಳೆ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ -3

November 23rd, 04:05 pm

ತಂತ್ರಜ್ಞಾನ ಮುಂದುವರಿದಂತೆ, ಅವಕಾಶಗಳು ಮತ್ತು ಸಂಪನ್ಮೂಲಗಳು ಎರಡೂ ಕೆಲವೇ ಜನರ ಕೈಗಳಲ್ಲಿ ಕೇಂದ್ರೀಕೃತವಾಗುತ್ತಿವೆ. ವಿಶ್ವದಾದ್ಯಂತ ನಿರ್ಣಾಯಕ ತಂತ್ರಜ್ಞಾನಗಳ ಮೇಲಿನ ಸ್ಪರ್ಧೆ ತೀವ್ರಗೊಳ್ಳುತ್ತಿದೆ. ಇದು ಮನುಕುಲಕ್ಕೆ ಕಳವಳಕಾರಿ ವಿಷಯವಾಗಿದೆ ಮತ್ತು ಇದು ನಾವೀನ್ಯತೆಗೆ ದೊಡ್ಡ ಅಡ್ಡಿಯಾಗಿದೆ. ಇದನ್ನು ಪರಿಹರಿಸಲು ನಾವು ನಮ್ಮ ಕಾರ್ಯ ವಿಧಾನದಲ್ಲಿ ಮೂಲಭೂತ ಬದಲಾವಣೆಯನ್ನು ತಂದುಕೊಳ್ಳಬೇಕಾಗಿದೆ.

ಎಲ್ಲರಿಗೂ ನ್ಯಾಯಯುತ ಮತ್ತು ನ್ಯಾಯಯುತ ಭವಿಷ್ಯ ಕುರಿತ ಜಿ-20 ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

November 23rd, 04:02 pm

ಪ್ರಧಾನಮಂತ್ರಿ ಅವರು ಇಂದು ಎಲ್ಲರಿಗೂ ನ್ಯಾಯಯುತ ಮತ್ತು ನ್ಯಾಯಯುತ ಭವಿಷ್ಯ - ನಿರ್ಣಾಯಕ ಖನಿಜಗಳು; ಯೋಗ್ಯವಾದ ಕೆಲಸ; ಕೃತಕ ಬುದ್ಧಿಮತ್ತೆ. ನಿರ್ಣಾಯಕ ತಂತ್ರಜ್ಞಾನಗಳನ್ನು ಉತ್ತೇಜಿಸುವ ವಿಧಾನದಲ್ಲಿ ಮೂಲಭೂತ ಬದಲಾವಣೆಗೆ ಪ್ರಧಾನಮಂತ್ರಿ ಅವರು ಕರೆ ನೀಡಿದರು. ಅಂತಹ ತಂತ್ರಜ್ಞಾನ ಅಪ್ಲಿಕೇಶನ್‌ಗಳು ‘ಹಣಕಾಸು-ಕೇಂದ್ರಿತ’ಕ್ಕಿಂತ ‘ಮಾನವ ಕೇಂದ್ರಿತ’ ವಾಗಿರಬೇಕು, ‘ರಾಷ್ಟ್ರೀಯ’ ಕ್ಕಿಂತ ‘ಜಾಗತಿಕ’ ಮತ್ತು ‘ವಿಶೇಷ ಮಾದರಿಗಳ’ ಬದಲು ‘ಮುಕ್ತ ಮೂಲ’ವನ್ನು ಆಧರಿಸಿರಬೇಕು ಎಂದು ಅವರು ಹೇಳಿದರು. ಈ ದೃಷ್ಟಿಕೋನವನ್ನು ಭಾರತದ ತಂತ್ರಜ್ಞಾನ ಪರಿಸರ ವ್ಯವಸ್ಥೆಯೊಂದಿಗೆ ಸಂಯೋಜಿಸಲಾಗಿದೆ ಮತ್ತು ಅದು ಬಾಹ್ಯಾಕಾಶ ಅಪ್ಲಿಕೇಶನ್‌ಗಳು, ಕೃತಕ ಬುದ್ಧಿಮತ್ತೆ ಅಥವಾ ಡಿಜಿಟಲ್‌ ಪಾವತಿಗಳಲ್ಲಿಗಮನಾರ್ಹ ಪ್ರಯೋಜನಗಳಿಗೆ ಕಾರಣವಾಗಿದೆ ಎಂದು ಅವರು ವಿವರಿಸಿದರು.