‘ವೋಕಲ್ ಫಾರ್ ಲೋಕಲ್’ – ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಸ್ವದೇಶಿ ಹೆಮ್ಮೆಯಿಂದ ಹಬ್ಬಗಳನ್ನು ಆಚರಿಸಲು ಒತ್ತಾಯಿಸಿದರು

August 31st, 11:30 am

ಈ ತಿಂಗಳ ಮನ್ ಕಿ ಬಾತ್ ಭಾಷಣದಲ್ಲಿ, ಪ್ರಧಾನಿ ಮೋದಿ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಿದ ಭದ್ರತಾ ಪಡೆಗಳು ಮತ್ತು ನಾಗರಿಕರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಜಮ್ಮು ಮತ್ತು ಕಾಶ್ಮೀರದಲ್ಲಿ ಕ್ರೀಡಾಕೂಟಗಳು, ಸೌರಶಕ್ತಿ, ‘ಆಪರೇಷನ್ ಪೋಲೊ’ ಮತ್ತು ಭಾರತೀಯ ಸಂಸ್ಕೃತಿಯ ಜಾಗತಿಕ ಹರಡುವಿಕೆಯಂತಹ ಪ್ರಮುಖ ವಿಷಯಗಳನ್ನು ಸಹ ಅವರು ಪ್ರಸ್ತಾಪಿಸಿದರು. ಹಬ್ಬದ ಋತುವಿನಲ್ಲಿ ಮೇಡ್-ಇನ್-ಇಂಡಿಯಾ ಉತ್ಪನ್ನಗಳನ್ನು ಖರೀದಿಸುವ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಮಹತ್ವದ ಬಗ್ಗೆ ಪ್ರಧಾನಿ ನಾಗರಿಕರಿಗೆ ನೆನಪಿಸಿದರು.

ಗಣೇಶ ಚತುರ್ಥಿ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದ ಪ್ರಧಾನಮಂತ್ರಿ

August 27th, 07:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಣೇಶ ಚತುರ್ಥಿಯ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ.

ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 25th, 06:42 pm

ಇಂದು, ನೀವೆಲ್ಲರೂ ನಿಜವಾಗಿಯೂ ಉತ್ತಮ ವಾತಾವರಣ ಸೃಷ್ಟಿಸಿದ್ದೀರಿ. ಈ ಲಕ್ಷಾಂತರ ಜನರ ಪ್ರೀತಿ ಮತ್ತು ಆಶೀರ್ವಾದ ಪಡೆಯಲು ನಾನು ಎಷ್ಟು ಅದೃಷ್ಟಶಾಲಿ ಎಂದು ನಾನು ಅನೇಕ ಬಾರಿ ಭಾವಿಸಿದ್ದೇನೆ. ನಾನು ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಅದು ಎಂದಿಗೂ ಮುಗಿಯುವುದಿಲ್ಲ. ನೋಡಿ, ಅಲ್ಲಿ ಸ್ವಲ್ಪ ನರೇಂದ್ರ ನಿಂತಿದ್ದಾನೆ!

ಗುಜರಾತಿನ ಅಹಮದಾಬಾದ್‌ ನಲ್ಲಿ 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ನೆರವೇರಿಸಿದರು

August 25th, 06:15 pm

ಗುಜರಾತಿನ ಅಹಮದಾಬಾದ್‌ ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ, ಲೋಕಾರ್ಪಣೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಡೀ ರಾಷ್ಟ್ರವು ಪ್ರಸ್ತುತ ಗಣೇಶೋತ್ಸವದ ಉತ್ಸಾಹದಲ್ಲಿ ಮುಳುಗಿದೆ ಎಂದು ಹೇಳಿದರು. ಗಣಪತಿ ಬಪ್ಪಾ ಆಶೀರ್ವಾದದೊಂದಿಗೆ, ಇಂದು ಗುಜರಾತಿನ ಪ್ರಗತಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಶುಭಾರಂಭ ಮಾಡಲಾಗಿದೆ. ಜನರ ಪಾದಾರವಿಂದಗಳಿಗೆ ಹಲವಾರು ಯೋಜನೆಗಳನ್ನು ಅರ್ಪಿಸುವ ಸೌಭಾಗ್ಯ ತಮಗೆ ದೊರೆತಿದೆ ಎಂದು ಅವರು ಹೇಳಿದರು ಮತ್ತು ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.

ಗುಜರಾತ್‌ನ ದಾಹೋದ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 26th, 11:45 am

ಗುಜರಾತ್‌ನ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ, ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್, ಗುಜರಾತ್ ಸಚಿವ ಸಂಪುಟದ ನನ್ನ ಎಲ್ಲಾ ಸಹೋದ್ಯೋಗಿಗಳೆ, ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ, ಇತರೆ ಗಣ್ಯರೆ, ದಾಹೋದ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ದಾಹೋಡ್ ನಲ್ಲಿ 24,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು ಮತ್ತು ಸಮರ್ಪಿಸಿದರು

May 26th, 11:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ದಾಹೋಡ್ ನಲ್ಲಿ 24,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಮೇ 26 ವಿಶೇಷ ಮಹತ್ವವನ್ನು ಹೊಂದಿದೆ, ಏಕೆಂದರೆ ಇದು 2014 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನವಾಗಿದೆ. ರಾಷ್ಟ್ರವನ್ನು ಮುನ್ನಡೆಸುವ ಜವಾಬ್ದಾರಿಯನ್ನು ತಮಗೆ ವಹಿಸಿದ ಗುಜರಾತ್ ಜನತೆಯ ಅಚಲ ಬೆಂಬಲ ಮತ್ತು ಆಶೀರ್ವಾದವನ್ನು ಅವರು ಒಪ್ಪಿಕೊಂಡರು. ಈ ನಂಬಿಕೆ ಮತ್ತು ಪ್ರೋತ್ಸಾಹವು ಹಗಲು ರಾತ್ರಿ ದೇಶ ಸೇವೆ ಮಾಡುವ ಅವರ ಸಮರ್ಪಣೆಗೆ ಉತ್ತೇಜನ ನೀಡಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಹಲವು ವರ್ಷಗಳಿಂದ, ಭಾರತವು ಅಭೂತಪೂರ್ವ ಮತ್ತು ಊಹಿಸಲಾಗದ ನಿರ್ಧಾರಗಳನ್ನು ತೆಗೆದುಕೊಂಡಿದೆ, ದಶಕಗಳಷ್ಟು ಹಳೆಯ ನಿರ್ಬಂಧಗಳಿಂದ ಮುಕ್ತವಾಗಿದೆ ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸಿದೆ. ಇಂದು, ರಾಷ್ಟ್ರವು ಹತಾಶೆ ಮತ್ತು ಕತ್ತಲೆಯ ಯುಗದಿಂದ ಆತ್ಮವಿಶ್ವಾಸ ಮತ್ತು ಆಶಾವಾದದ ಹೊಸ ಯುಗಕ್ಕೆ ಹೊರಹೊಮ್ಮಿದೆ, ಎಂದು ಅವರು ಹೇಳಿದರು.

ಮುಂಬೈನಲ್ಲಿ ನಡೆದ ಅಭಿಜತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 05th, 07:05 pm

ಮಹಾರಾಷ್ಟ್ರದ ರಾಜ್ಯಪಾಲರಾದ ಶ್ರೀ ಸಿ.ಪಿ. ರಾಧಾಕೃಷ್ಣನ್ ಜೀ, ಮುಖ್ಯಮಂತ್ರಿ ಶ್ರೀ ಏಕನಾಥ್ ಶಿಂಧೆ ಜೀ, ಉಪ ಮುಖ್ಯಮಂತ್ರಿಗಳಾದ ದೇವೇಂದ್ರ ಫಡ್ನವೀಸ್ ಜೀ ಮತ್ತು ಅಜಿತ್ ಪವಾರ್ ಜೀ, ಕೇಂದ್ರ ಸರ್ಕಾರದ ನನ್ನ ಎಲ್ಲಾ ಸಹೋದ್ಯೋಗಿಗಳು, ತಮ್ಮ ಗಾಯನದಿಂದ ಅನೇಕ ತಲೆಮಾರುಗಳ ಮೇಲೆ ಛಾಪು ಮೂಡಿಸಿರುವ ಆಶಾ ತಾಯಿ ಜೀ, ಪ್ರಸಿದ್ಧ ನಟರಾದ ಭಾಯಿ ಸಚಿನ್ ಜೀ, ನಾಮದೇವ್ ಕಾಂಬ್ಳೆ ಜೀ ಮತ್ತು ಸದಾನಂದ ಮೋರೆ ಜೀ, ಮಹಾರಾಷ್ಟ್ರ ಸರ್ಕಾರದ ಸಚಿವರಾದ ಭಾಯಿ ದೀಪಕ್ ಜೀ ಮತ್ತು ಮಂಗಲ್ ಪ್ರಭಾತ್ ಲೋಧಾ ಜೀ, ಬಿಜೆಪಿಯ ಮುಂಬೈ ಅಧ್ಯಕ್ಷ ಭಾಯ್ ಆಶಿಶ್ ಜೀ, ಇತರ ಗಣ್ಯರು, ಸಹೋದರ ಸಹೋದರಿಯರೇ!

ಮಹಾರಾಷ್ಟ್ರದ ಮುಂಬೈಯಲ್ಲಿ ನಡೆದ ಅಭಿಜಿತ್ ಮರಾಠಿ ಭಾಷಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

October 05th, 07:00 pm

ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಮರಾಠಿ ಭಾಷೆಗೆ ಕೇಂದ್ರ ಸರ್ಕಾರವು ಅಧಿಕೃತವಾಗಿ ಶಾಸ್ತ್ರೀಯ (ಅಭಿಜಾತ) ಭಾಷೆಯ ಸ್ಥಾನಮಾನವನ್ನು ನೀಡಿದೆ ಎಂದರು. ಶ್ರೀ ಮೋದಿ ಅವರು ಈ ಕ್ಷಣದ ಮಹತ್ವವನ್ನು ಒತ್ತಿ ಹೇಳಿದರು, ಇದು ಮರಾಠಿ ಭಾಷೆಯ ಇತಿಹಾಸದಲ್ಲಿ ಸುವರ್ಣ ಮೈಲಿಗಲ್ಲು ಎಂದು ಬಣ್ಣಿಸಿದರು, ಏಕೆಂದರೆ ಮರಾಠಿ ಮಾತನಾಡುವ ಜನರ ದೀರ್ಘಕಾಲದ ಆಕಾಂಕ್ಷೆಗಳನ್ನು ಅವರು ಉಲ್ಲೇಖಿಸಿದರು ಮತ್ತು ಮಹಾರಾಷ್ಟ್ರದ ಕನಸನ್ನು ಈಡೇರಿಸಲು ಕೊಡುಗೆ ನೀಡುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಪ್ರಧಾನಮಂತ್ರಿಯವರು ಮಹಾರಾಷ್ಟ್ರದ ಜನರನ್ನು ಅಭಿನಂದಿಸಿದರು ಮತ್ತು ಈ ಐತಿಹಾಸಿಕ ಸಾಧನೆಯ ಭಾಗವಾಗಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದರು. ಇದಲ್ಲದೆ, ಬಂಗಾಳಿ, ಪಾಲಿ, ಪ್ರಾಕೃತ ಮತ್ತು ಅಸ್ಸಾಮಿ ಭಾಷೆಗಳಿಗೂ ಶಾಸ್ತ್ರೀಯ ಭಾಷೆಗಳ ಸ್ಥಾನಮಾನವನ್ನು ನೀಡಲಾಗಿದೆ ಎಂದು ಪ್ರಧಾನಿ ಘೋಷಿಸಿದರು ಮತ್ತು ಈ ಭಾಷೆಗಳಿಗೆ ಸಂಬಂಧಿಸಿದ ಜನತೆಗೆ ಅಭಿನಂದನೆ ಸಲ್ಲಿಸಿದರು.

We will leave no stone unturned in fulfilling people’s aspirations: PM Modi in Bhubaneswar, Odisha

September 17th, 12:26 pm

PM Modi launched Odisha's 'SUBHADRA' scheme for over 1 crore women and initiated significant development projects including railways and highways worth ₹3800 crore. He also highlighted the completion of 100 days of the BJP government, showcasing achievements in housing, women's empowerment, and infrastructure. The PM stressed the importance of unity and cautioned against pisive forces.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಅತಿದೊಡ್ಡ ಮಹಿಳಾ ಕೇಂದ್ರಿತ ಯೋಜನೆ 'ಸುಭದ್ರಾ'ಕ್ಕೆ ಚಾಲನೆ ನೀಡಿದರು

September 17th, 12:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಒಡಿಶಾದ ಭುವನೇಶ್ವರದಲ್ಲಿ ಒಡಿಶಾ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ 'ಸುಭದ್ರಾ'ಕ್ಕೆ ಚಾಲನೆ ನೀಡಿದರು. ಇದು ಅತಿದೊಡ್ಡ, ಏಕಾಂಗಿ ಮಹಿಳಾ ಕೇಂದ್ರಿತ ಯೋಜನೆಯಾಗಿದ್ದು, 1 ಕೋಟಿಗೂ ಹೆಚ್ಚು ಮಹಿಳೆಯರನ್ನು ಒಳಗೊಳ್ಳುವ ನಿರೀಕ್ಷೆಯಿದೆ. ಪ್ರಧಾನಮಂತ್ರಿ ಅವರು 10 ಲಕ್ಷಕ್ಕೂ ಹೆಚ್ಚು ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಗೆ ಚಾಲನೆ ನೀಡಿದರು. ಶ್ರೀ ಮೋದಿ ಅವರು 2800 ಕೋಟಿ ರೂ.ಗೂ ಅಧಿಕ ಮೌಲ್ಯದ ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು 1000 ಕೋಟಿ ರೂ.ಗೂ ಅಧಿಕ ಮೌಲ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿ ಅವರು ಸುಮಾರು 14 ರಾಜ್ಯಗಳ ಪಿಎಂಎವೈ-ಜಿ ಅಡಿಯಲ್ಲಿ ಸುಮಾರು 10 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ನೆರವನ್ನು ಬಿಡುಗಡೆ ಮಾಡಿದರು, ದೇಶಾದ್ಯಂತ ಪಿಎಂಎವೈ (ಗ್ರಾಮೀಣ ಮತ್ತು ನಗರ) 26 ಲಕ್ಷ ಫಲಾನುಭವಿಗಳಿಗೆ ಗೃಹ ಪ್ರವೇಶ ಆಚರಣೆಯಲ್ಲಿ ಭಾಗವಹಿಸಿದರು ಮತ್ತು ಪಿಎಂಎವೈ (ಗ್ರಾಮೀಣ ಮತ್ತು ನಗರ) ಫಲಾನುಭವಿಗಳಿಗೆ ಮನೆಯ ಕೀಲಿಗಳನ್ನು ಹಸ್ತಾಂತರಿಸಿದರು. ಇದಲ್ಲದೆ, ಪಿಎಂಎವೈ-ಜಿಗಾಗಿ ಹೆಚ್ಚುವರಿ ಮನೆಗಳ ಸಮೀಕ್ಷೆ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ - ನಗರ (ಪಿಎಂಎವೈ-ಯು) 2.0 ರ ಕಾರ್ಯಾಚರಣೆ ಮಾರ್ಗಸೂಚಿಗಳಿಗಾಗಿ ಅವರು ಆವಾಸ್ + 2024 ಆ್ಯಪ್ ಅನ್ನು ಬಿಡುಗಡೆ ಮಾಡಿದರು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಣೇಶ ಚತುರ್ಥಿಯ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ

September 07th, 09:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಣೇಶ ಚತುರ್ಥಿ ಹಬ್ಬದ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.

ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಳಿಂದ ದೇಶದ ಯುವಕರು ಪ್ರಯೋಜನ ಪಡೆದಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

August 25th, 11:30 am

ನನ್ನ ಪ್ರಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನನ್ನ ಕುಟುಂಬದ ಎಲ್ಲಾ ಸದಸ್ಯರಿಗೆ ಸ್ವಾಗತ. ಇಂದು ಮತ್ತೊಮ್ಮೆ ನಾವು ದೇಶದ ಸಾಧನೆಗಳು ಮತ್ತು ದೇಶದ ಜನತೆಯ ಸಾಮೂಹಿಕ ಪ್ರಯತ್ನಗಳ ಬಗ್ಗೆ ಮಾತನಾಡಲಿದ್ದೇವೆ. 21 ನೇ ಶತಮಾನದ ಭಾರತದಲ್ಲಿ ವಿಕಸಿತ ಭಾರತದ ಅಡಿಪಾಯವನ್ನು ಬಲಪಡಿಸುವ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಉದಾಹರಣೆಗೆ, ಇದೇ ಆಗಸ್ಟ್ 23 ರಂದು, ನಾವೆಲ್ಲರೂ ಪ್ರಥಮ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿದೆವು. ನೀವೆಲ್ಲರೂ ಈ ದಿನವನ್ನು ಆಚರಿಸಿರಬಹುದು ಎಂದು ನಾನು ಭಾವಿಸುತ್ತೇನೆ, ಮತ್ತೊಮ್ಮೆ ಚಂದ್ರಯಾನ-3 ರ ಯಶಸ್ಸನ್ನು ಆಚರಿಸಿರಬಹುದು. ಕಳೆದ ವರ್ಷ, ಇದೇ ದಿನದಂದು, ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿರುವ ಶಿವ-ಶಕ್ತಿ ಪಾಯಿಂಟ್‌ನಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿತ್ತು. ಭಾರತ ಈ ಅಮೋಘ ಸಾಧನೆ ಮಾಡಿದ ವಿಶ್ವದ ಮೊದಲ ದೇಶವಾಯಿತು.

ವಿಡಿಯೋ ಕಾನ್ಫರೆನ್ಸ್ ಮೂಲಕ ರೋಜ್ಗಾರ್ ಮೇಳದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

September 26th, 11:04 am

ಇಂದಿನ ರೋಜ್ಗಾರ್ ಮೇಳದಲ್ಲಿ ಸರ್ಕಾರಿ ಸೇವೆಗಳಿಗೆ ನೇಮಕಾತಿ ಪತ್ರಗಳನ್ನು ಪಡೆದ ಎಲ್ಲಾ ಅಭ್ಯರ್ಥಿಗಳಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ನೀವೆಲ್ಲರೂ ಅಪಾರ ಪರಿಶ್ರಮದ ನಂತರ ಈ ಯಶಸ್ಸನ್ನು ಸಾಧಿಸಿದ್ದೀರಿ. ಲಕ್ಷಾಂತರ ಅಭ್ಯರ್ಥಿಗಳಿಂದ ನಿಮ್ಮನ್ನು ಆಯ್ಕೆ ಮಾಡಲಾಗಿದೆ; ಆದ್ದರಿಂದ, ಈ ಯಶಸ್ಸು ನಿಮ್ಮ ಜೀವನದಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ.

ರೋಜ್ ಗಾರ್ ಮೇಳ ಉದ್ದೇಶಿಸಿ ಪ್ರಧಾನಿ ಭಾಷಣ

September 26th, 10:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ರೋಜ್ ಗಾರ್ ಮೇಳ ಉದ್ದೇಶಿಸಿ ಭಾಷಣ ಮಾಡಿದರು ಮತ್ತು ಹೊಸದಾಗಿ ನೇಮಕಗೊಂಡ 51,000 ಮಂದಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಹೊಸದಾಗಿ ನೇಮಕಗೊಂಡರು ದೇಶಾದ್ಯಂತ ಅಂಚೆ ಇಲಾಖೆ, ಭಾರತೀಯ ಆಡಿಟ್ ಮತ್ತು ಅಕೌಂಟ್ಸ್ ಇಲಾಖೆ, ಅಣು ಇಂಧನ ಇಲಾಖೆ, ಕಂದಾಯ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ರಕ್ಷಣಾ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿ ಸರ್ಕಾರದ ಹಲವು ಇಲಾಖೆಗಳು/ಸಚಿವಾಲಯಗಳಿಗೆ ಸೇರ್ಪಡೆಯಾಗಲಿದ್ದಾರೆ. ಈ ರೋಜ್ ಗಾರ್ ಮೇಳ ದೇಶಾದ್ಯಂತ 46 ಸ್ಥಳಗಳಲ್ಲಿ ಏಕಕಾಲದಲ್ಲಿ ನಡೆಯಿತು.

The egoistic Congress-led Alliance intends to destroy the composite culture of Santana Dharma in both Rajasthan & India: PM Modi

September 25th, 04:03 pm

PM Modi addressed the Parivartan Sankalp Mahasabha in Jaipur, Rajasthan. While addressing the event PM Modi recalled Pt. Deendayal Upadhyaya on his birth anniversary. He said, “It is his thoughts and principles that have served as an inspiration to put an end to the Congress-led misrule in Rajasthan.

PM Modi addresses the Parivartan Sankalp Mahasabha in Jaipur, Rajasthan

September 25th, 04:02 pm

PM Modi addressed the Parivartan Sankalp Mahasabha in Jaipur, Rajasthan. While addressing the event PM Modi recalled Pt. Deendayal Upadhyaya on his birth anniversary. He said, “It is his thoughts and principles that have served as an inspiration to put an end to the Congress-led misrule in Rajasthan.

ಹೊಸ ಸಂಸತ್ ಭವನದಲ್ಲಿ ಲೋಕಸಭೆ ಉದ್ದೇಶಿಸಿ ಪ್ರಧಾನಿ ಭಾಷಣ

September 19th, 01:50 pm

ಉದ್ಘಾಟನೆಯಾದ ನೂತನ ಸಂಸತ್ ಭವನದಲ್ಲಿ ನಡೆಯುತ್ತಿರುವ ಐತಿಹಾಸಿಕ ಲೋಕಸಭೆ ಅಧಿವೇಶನ ಇದಾಗಿದೆ. ಈ ಸಂದರ್ಭದಲ್ಲಿ ನಾನು ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರಿಗೆ ಮತ್ತು ದೇಶದ ಸಮಸ್ತ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಹೊಸ ಸಂಸತ್ ಭವನದಲ್ಲಿ ಲೋಕಸಭೆಯನ್ನುದ್ದೇಶಿಸಿ ಪ್ರಧಾನಿ ಭಾಷಣ

September 19th, 01:18 pm

ಸದನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಹೊಸ ಸಂಸತ್‌ ಭವನದಲ್ಲಿ ಇಂದು ಐತಿಹಾಸಿಕ ಮೊದಲ ಅಧಿವೇಶನ ನಡೆಯುತ್ತಿದೆ, ಅದರ ಅಂಗವಾಗಿ ಎಲ್ಲರಿಗೂ ಶುಭಾಶಯಗಳನ್ನು ಕೋರುವುದಾಗಿ ಹೇಳಿದರು. ಹೊಸ ಸಂಸತ್ ಭವನದಲ್ಲಿ ಮೊದಲ ದಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಅವಕಾಶ ನೀಡಿದ್ದಕ್ಕಾಗಿ ಸ್ಪೀಕರ್ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ ಪ್ರಧಾನಿ ಅವರು, ಎಲ್ಲ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದ ಪ್ರಾಮುಖ್ಯತೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಮಂತ್ರಿ, ಅಮೃತ ಕಾಲದ ಉದಯದಲ್ಲಿ ಭಾರತವು ಹೊಸ ಸಂಸತ್ತಿನ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವ ಮೂಲಕ ಭವಿಷ್ಯದ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದೆ ಎಂದರು. ದೇಶದ ಇತ್ತೀಚಿನ ಸಾಧನೆಗಳನ್ನು ಪ್ರಸ್ತಾಪಿಸಿದ ಪ್ರಧಾನಿ, ವಿಜ್ಞಾನ ವಲಯದಲ್ಲಿ ಚಂದ್ರಯಾನ-3 ರ ಯಶಸ್ಸು ಮತ್ತು ಜಿ-20 ಸಂಘಟನೆ ಮತ್ತು ಜಾಗತಿಕ ಮಟ್ಟದಲ್ಲಿ ಅದರ ಪರಿಣಾಮವನ್ನು ಪ್ರಸ್ತಾಪಿಸಿದರು. ಭಾರತಕ್ಕೆ ಒಂದು ಅಪೂರ್ವ ಅವಕಾಶ ಒದಗಿ ಬಂದಿದ್ದು, ಈ ಬೆಳಕಿನಲ್ಲಿ ರಾಷ್ಟ್ರದ ನೂತನ ಸಂಸತ್ ಭವನ ಇಂದು ಕಾರ್ಯಾರಂಭ ಮಾಡುತ್ತಿದೆ ಎಂದು ಹೇಳಿದರು .

ಎಲ್ಲರಿಗೂ ಗಣೇಶ ಚತುರ್ಥಿಯ ಶುಭಾಶಯ ಕೋರಿದ ಪ್ರಧಾನಮಂತ್ರಿ

September 19th, 08:50 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

September 18th, 11:52 am

ನಮ್ಮ ದೇಶದ 75 ವರ್ಷಗಳ ಸಂಸದೀಯ ಪಯಣ ಮತ್ತು ಈ ಹಿನ್ನೆಲೆಯಲ್ಲಿ ಹೊಸ ಸದನವನ್ನು ಪ್ರವೇಶಿಸುವ ಮೊದಲು ಮತ್ತೊಮ್ಮೆ ಆ ಸ್ಪೂರ್ತಿದಾಯಕ ಕ್ಷಣಗಳನ್ನು ನೆನಪಿಸಿಕೊಳ್ಳಲು, ನಾವು ಒಟ್ಟಾಗಿ, ಈ ಐತಿಹಾಸಿಕ ಕಟ್ಟಡಕ್ಕೆ ವಿದಾಯ ಹೇಳುತ್ತಿದ್ದೇವೆ. ಸ್ವಾತಂತ್ರ್ಯದ ಮೊದಲು, ಈ ಸದನವನ್ನು ಇಂಪೀರಿಯಲ್ ಲೆಜಿಸ್ಲೇಟಿವ್ ಕೌನ್ಸಿಲ್ ಎಂದು ಕರೆಯಲಾಗುತ್ತಿತ್ತು. ಸ್ವಾತಂತ್ರ್ಯದ ನಂತರ ಇದನ್ನು ಸಂಸತ್ ಭವನ ಎಂದು ಕರೆಯಲಾಯಿತು. ಈ ಕಟ್ಟಡವನ್ನು ಕಟ್ಟುವ ನಿರ್ಧಾರವನ್ನು ವಿದೇಶಿ ಸಂಸದರು ಮಾಡಿರುವುದು ನಿಜ, ಆದರೆ ಈ ಕಟ್ಟಡದ ನಿರ್ಮಾಣಕ್ಕೆ ನನ್ನ ಸಹವರ್ತಿಗಳ ಬೆವರು ಸುರಿಸಲ್ಪಟ್ಟಿದೆ ಎಂದು ಹೆಮ್ಮೆಯಿಂದ ಹೇಳಲು ನಾವು ಎಂದಿಗೂ ಹಿಂಜರಿಯಲು ಸಾಧ್ಯವಿಲ್ಲ, ಇದರಲ್ಲಿ ನನ್ನ ಸಹೋದ್ಯೋಗಿಗಳ ಶ್ರಮವಿದೆ ಮತ್ತು ಹಣವನ್ನು ಕೂಡಾ ನನ್ನ ದೇಶದ ಜನರು ನೀಡಿದ್ದಾರೆ.