ಫ್ರಾನ್ಸ್ ಮತ್ತು ಸ್ಲೋವಾಕಿಯಾಕ್ಕೆ ಭೇಟಿ ನೀಡುವ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ
June 13th, 10:03 am
ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಇಮ್ಯಾನುಯೆಲ್ ಮ್ಯಾಕ್ರನ್ ಮತ್ತು ಸ್ಲೋವಾಕ್ ಗಣರಾಜ್ಯದ ಪ್ರಧಾನಮಂತ್ರಿ ಶ್ರೀ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ, ನಾನು 2026ರ ಜೂನ್ 13 ರಿಂದ 18 ರವರೆಗೆ ಫ್ರಾನ್ಸ್ ಮತ್ತು ಸ್ಲೋವಾಕ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ಕೈಗೊಳ್ಳುತ್ತಿದ್ದೇನೆ.ವಿಶ್ವದ ಎಲ್ಲಾ ನಾಯಕರು ಮತ್ತು ನಾಗರಿಕರ ಆತ್ಮೀಯ ಹಾಗೂ ಹೃತ್ಪೂರ್ವಕವಾದ ಶುಭಾಶಯಗಳಿಗೆ ಪ್ರಧಾನಮಂತ್ರಿಯವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ
June 10th, 11:50 pm
ಪ್ರಧಾನಮಂತ್ರಿಯವರು ವಿಶ್ವದ ಎಲ್ಲಾ ನಾಯಕರು ಮತ್ತು ಎಲ್ಲಾ ವರ್ಗದ ಜನರಿಗೆ ಅವರ ಆತ್ಮೀಯ ಶುಭಾಶಯಗಳು ಮತ್ತು ಅಭಿನಂದನಾ ಸಂದೇಶಗಳಿಗಾಗಿ ತಮ್ಮ ಹೃತ್ಪೂರ್ವಕವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಶುಭಾಶಯಗಳಿಂದ ತೀವ್ರವಾಗಿ ಪ್ರಭಾವಿತರಾದ ಅವರು, ಭಾರತಕ್ಕೆ ಸೇವೆ ಸಲ್ಲಿಸುವುದು ಮತ್ತು ರಾಷ್ಟ್ರದ ಅಭಿವೃದ್ಧಿಯ ಹಾದಿಯಲ್ಲಿ ಕೊಡುಗೆ ನೀಡುವುದು ತಮ್ಮ ಒಂದು ಸೌಭಾಗ್ಯ ಎಂದು ಹೇಳಿದರು. ಜನರ ನಂಬಿಕೆಯೇ ತಮ್ಮ ಶಕ್ತಿಯ ದೊಡ್ಡ ಮೂಲ ಎಂದು ಒತ್ತಿ ಹೇಳಿದ ಪ್ರಧಾನಿಯವರು, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸಲು, 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ಭಾರತದ ಜಾಗತಿಕ ಪಾಲುದಾರಿಕೆಗಳನ್ನು ಮತ್ತಷ್ಟು ಬಲಪಡಿಸಲು ಇನ್ನೂ ಹೆಚ್ಚಿನ ಸಮರ್ಪಣೆಯೊಂದಿಗೆ ಕೆಲಸ ಮಾಡುವ ತಮ್ಮ ಸಂಪೂರ್ಣ ಬದ್ಧತೆಯನ್ನು ಪುನರುಚ್ಚರಿಸಿದರು.ಭಾರತದ ಪ್ರಜಾಪ್ರಭುತ್ವದಡಿ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸುತ್ತಿರುವ ಚುನಾಯಿತ ಪ್ರಧಾನಮಂತ್ರಿಯೆಂಬ ಹೆಗ್ಗಳಿಕೆ ಗಳಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಜಾಗತಿಕ ನಾಯಕರ ಅಭಿನಂದನೆ
June 09th, 07:32 pm
ಭಾರತದ ಪ್ರಜಾಪ್ರಭುತ್ವದಡಿ ಅತ್ಯಂತ ದೀರ್ಘಾವಧಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಚುನಾಯಿತ ಪ್ರಧಾನಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಜಾಗತಿಕ ನಾಯಕರು ಆತ್ಮೀಯ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿಯವರ ಪರಿವರ್ತನಾತ್ಮಕ ಆಡಳಿತ, ಜಾಗತಿಕ ದಕ್ಷಿಣಕ್ಕಾಗಿ ಅವರ ಪ್ರತಿಪಾದನೆ ಮತ್ತು ಸಮಗ್ರ ಮತ್ತು ಆರ್ಥಿಕವಾಗಿ ಸಕ್ರಿಯ ಭಾರತದ ಅವರ ದೂರದೃಷ್ಟಿಗೆ ಜಗತ್ತಿನಾದ್ಯಂತದ ವಿಶ್ವ ನಾಯಕರು ಗೌರವ ಸಲ್ಲಿಸಿದ್ದಾರೆ.Visit of Prime Minister to France and Slovakia (June 13-18, 2026)
June 09th, 07:20 pm
PM Modi will visit France from 13-14 June 2026 and again from 16-19 June 2026. During his initial visit to France, he will hold discussions with President Emmanuel Macron and jointly inaugurate the 'Bharat Innovates' event. He will then visit Slovakia from 14-16 June 2026 to hold discussions with PM Robert Fico and meet President Peter Pellegrini. The PM will once again visit France to participate in the G7 Summit and the VivaTech Summit.ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಿಂದ ಪ್ರಧಾನಮಂತ್ರಿ ಅವರ ಭೇಟಿ
June 04th, 09:50 pm
ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾದ ಡೆಲ್ಸಿ ರೊಡ್ರಿಗಸ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.ನಾರ್ವೆ ಪ್ರಧಾನಮಂತ್ರಿ ಜತೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಪತ್ರಿಕಾ ಅವರ ಹೇಳಿಕೆ
May 18th, 04:44 pm
ಕಳೆದ ವರ್ಷ ನಾನು ನಾರ್ವೆಗೆ ಭೇಟಿ ನೀಡಬೇಕಿತ್ತು, ಆದರೆ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಪ್ರವಾಸ ಮುಂದೂಡಬೇಕಾಯಿತು. ಆ ಕಷ್ಟದ ಸಮಯದಲ್ಲಿ, ಭಯೋತ್ಪಾದನೆಯ ವಿರುದ್ಧ ನಾರ್ವೆ ಭಾರತದೊಂದಿಗೆ ಸದೃಢವಾಗಿ ನಿಂತಿತು. ಇದು ನಮ್ಮ ಸ್ನೇಹದ ಬಲವನ್ನು ಪ್ರತಿಬಿಂಬಿಸುತ್ತದೆ. ಇಂದು ನಾನು ನಾರ್ವೆಗೆ ಭೇಟಿ ನೀಡಿರುವಾಗ ಆ ಬೆಂಬಲ ಮತ್ತು ಒಗ್ಗಟ್ಟಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.ಟಿವಿ9 ಶೃಂಗಸಭೆ 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 23rd, 08:30 pm
ಇತ್ತೀಚಿನ ದಿನಗಳಲ್ಲಿ ಟಿವಿ9 ಭಾರತ ವರ್ಷವನ್ನು ಒಮ್ಮೆ ಅಥವಾ 2 ಬಾರಿ ನೋಡುವ ಅವಕಾಶ ನನಗೆ ಸಿಕ್ಕಿದೆ. ಸಾಮಾನ್ಯವಾಗಿ, ನಿಮ್ಮ ಗಮನವು ಯುದ್ಧಗಳು ಮತ್ತು ಕ್ಷಿಪಣಿಗಳ ಮೇಲೆ ಹೆಚ್ಚು ಇದೆ, ಇತ್ತೀಚಿನ ದಿನಗಳಲ್ಲಿ ನಿಮಗೆ ಈ ವಿಷಯಗಳೇ ಅತಿಯಾಗಿ ತುಂಬಿ ಹೋಗುತ್ತಿವೆ. ದೊಡ್ಡ ದೇಶಗಳು ಟಿವಿ9ಗೆ ಹಲವು ಸುದ್ದಿ ಸಾಮಗ್ರಿಗಳನ್ನು ಒದಗಿಸಲು ದೃಢನಿಶ್ಚಯ ಮಾಡುವಂತೆ ತೋರುತ್ತಿದೆ. ಆದರೆ ಗಂಭೀರವಾಗಿ ಹೇಳುವುದಾದರೆ, ಇಂದು ಜಗತ್ತು ಎದುರಿಸುತ್ತಿರುವ ಪ್ರತಿಕೂಲ ಪರಿಸ್ಥಿತಿಗಳು ಹಿಂದೆಂದೂ ಕಾಣದ ಅತ್ಯಂತ ಗಂಭೀರ ಸ್ವರೂಪದ್ದಾಗಿವೆ. ಈ ಪರಿಸ್ಥಿತಿಗಳ ನಡುವೆ, ಟಿವಿ9 ನೆಟ್ವರ್ಕ್ ವಿಚಾರಗಳಿಗೆ ಬಹಳ ಮುಖ್ಯವಾದ ವೇದಿಕೆ ಸೃಷ್ಟಿಸಿದೆ. ಈ ಶೃಂಗಸಭೆಯಲ್ಲಿ, ನೀವೆಲ್ಲರೂ ಭಾರತ ಮತ್ತು ವಿಶ್ವ ಎಂಬ ವಿಷಯವನ್ನು ಚರ್ಚಿಸುತ್ತಿದ್ದೀರಿ. ನಾನು ನಿಮ್ಮನ್ನು ಅಭಿನಂದಿಸುತ್ತೇನೆ, ಈ ಶೃಂಗಸಭೆಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ ಮತ್ತು ಎಲ್ಲಾ ಅತಿಥಿಗಳನ್ನು ಸ್ವಾಗತಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಟಿವಿ9 ನೆಟ್ವರ್ಕ್ ಶೃಂಗಸಭೆ ಉದ್ದೇಶಿಸಿ ಭಾಷಣ
March 23rd, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 'ಭಾರತ ಮತ್ತು ವಿಶ್ವ' (India and the World) ಎಂಬ ವಿಷಯದ ಮೇಲೆ ನಡೆದ ಟಿವಿ9 ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಅಭೂತಪೂರ್ವ ಮತ್ತು ಗಂಭೀರವಾದ ಜಾಗತಿಕ ಸಂದರ್ಭಗಳನ್ನು ಒಪ್ಪಿಕೊಂಡ ಪ್ರಧಾನಮಂತ್ರಿಯವರು, ಈ ನಿರ್ಣಾಯಕ ಸಮಯದಲ್ಲಿ ವಿಚಾರ ವಿನಿಮಯಕ್ಕಾಗಿ ಪ್ರಮುಖ ವೇದಿಕೆಯನ್ನು ಸೃಷ್ಟಿಸಿದ್ದಕ್ಕಾಗಿ ಟಿವಿ9 ನೆಟ್ ವರ್ಕ್ ಅನ್ನು ಶ್ಲಾಘಿಸಿದರು. ಇಂದು ವಿಶ್ವವು ಸಾಗುತ್ತಿರುವ ಗಂಭೀರ ಪರಿಸ್ಥಿತಿಗಳು ಅಭೂತಪೂರ್ವ ಮತ್ತು ಅತ್ಯಂತ ಗಂಭೀರವಾಗಿವೆ ಮತ್ತು ಇವುಗಳ ನಡುವೆ, ಟಿವಿ9 ನೆಟ್ವರ್ಕ್ ವಿಚಾರಗಳಿಗಾಗಿ ಅತ್ಯಂತ ಪ್ರಮುಖವಾದ ವೇದಿಕೆಯನ್ನು ಸೃಷ್ಟಿಸಿದೆ, ಎಂದು ಶ್ರೀ ಮೋದಿ ತಿಳಿಸಿದರು.ಎನ್ಎಕ್ಸ್ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
March 12th, 10:47 pm
ಇಂದು, ಮಾರ್ಚ್ 12, ಬಹಳ ಐತಿಹಾಸಿಕ ದಿನ. 1930 ಮಾರ್ಚ್ 12ರಂದು, ಮಹಾತ್ಮ ಗಾಂಧಿ ಅವರು ಸಬರಮತಿ ಆಶ್ರಮದಿಂದ ದಂಡಿಯಾತ್ರೆ ಪ್ರಾರಂಭಿಸಿದರು. ಇದು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಒಂದು ಮಹತ್ವದ ತಿರುವು, ಏಕೆಂದರೆ ಈ ಪ್ರಯಾಣವು ದೇಶದ ಪ್ರತಿಯೊಂದು ಮೂಲೆಯನ್ನು ಒಂದೇ ಗುರಿಯೊಂದಿಗೆ ಸಂಪರ್ಕಿಸಿತು. ಅದೇ ಭಾರತದ ಸ್ವಾತಂತ್ರ್ಯ. ಇಂದು ಈ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಂದು ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಈ ಪ್ರಯಾಣವು ಅಭಿವೃದ್ಧಿ ಹೊಂದಿದ ಭಾರತದ ಪ್ರಯಾಣ(ವಿಕಸಿತ ಭಾರತ). ನಮ್ಮ ಗುರಿ ಒಂದೇ, ನಮ್ಮ ಗಮ್ಯಸ್ಥಾನ ಒಂದೇ – ಅದೇ ಅಭಿವೃದ್ಧಿ ಹೊಂದಿದ ಭಾರತ. ಈ ಗುರಿ ಸಾಧಿಸುವಲ್ಲಿ ಇಂತಹ ಶೃಂಗಗಳಲ್ಲಿ ನಡೆಯುವ ಚಿಂತನ ಮಂಥನ ಮತ್ತು ಅವುಗಳಿಂದ ಪಡೆದ ಅಮೃತವು ದೊಡ್ಡ ಪಾತ್ರ ವಹಿಸುತ್ತದೆ. ಮುಂದಿನ ಶೃಂಗಸಭೆಗೆ ನನ್ನನ್ನು ಆಹ್ವಾನಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞನಾಗಿದ್ದೇನೆ. ದೇಶ ಮತ್ತು ವಿಶ್ವದ ಅನೇಕ ಸಹೋದ್ಯೋಗಿಗಳು ಇಲ್ಲಿಗೆ ಬಂದಿದ್ದಾರೆ, ಕೆಲವರು ಹಳೆಯ ಪರಿಚಯಸ್ಥರು ಇದ್ದಾರೆ. ನಿಮ್ಮೆಲ್ಲರನ್ನು ನಾನು ಸ್ವಾಗತಿಸುತ್ತೇನೆ.ಎನ್ಎಕ್ಸ್ಟಿ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
March 12th, 08:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಐಟಿವಿ ನೆಟ್ವರ್ಕ್ನ ಎನ್ಎಕ್ಸ್ಟಿ ಶೃಂಗಸಭೆ ಉದ್ದೇಶಿಸಿ ಮಾತನಾಡಿದರು. ದಂಡಿಯಾತ್ರೆಯ ಐತಿಹಾಸಿಕ ವಾರ್ಷಿಕೋತ್ಸವ ಗುರುತಿಸಿದ ಅವರು, ಭಾರತದ ಅಂದಿನ ಸ್ವಾತಂತ್ರ್ಯ ಹೋರಾಟ ಮತ್ತು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಇಂದಿನ ಅನ್ವೇಷಣೆಯ ನಡುವಿನ ಸಮಾನಾಂತರ ಚಿಂತನೆಯನ್ನು ಪ್ರಸ್ತಾಪಿಸಿದರು. 1930ರ ದಂಡಿಯಾತ್ರೆಯು ದೇಶವನ್ನು ಸ್ವಾತಂತ್ರ್ಯದತ್ತ ಒಗ್ಗೂಡಿಸಿದಂತೆ, ಪ್ರಸ್ತುತ ವಿಕಸಿತ ಭಾರತ ಮಿಷನ್ 140 ಕೋಟಿ ಭಾರತೀಯರ ಸಾಮೂಹಿಕ ಗುರಿಯಾಗಿದೆ ಎಂದು ಮೋದಿ ಹೇಳಿದರು. ಇಂದು ಆ ಐತಿಹಾಸಿಕ ಪ್ರಯಾಣದ ಸುಮಾರು 100 ವರ್ಷಗಳ ನಂತರ, ನಾವು ಭಾರತೀಯರು ಮತ್ತೊಮ್ಮೆ 'ವಿಕಸಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ)ಕ್ಕಾಗಿ ಹೊಸ ಪ್ರಯಾಣ ಆರಂಭಿಸಿದ್ದೇವೆ ಎಂದು ಪ್ರಧಾನಿ ಹೇಳಿದರು.ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:30 pm
ನೀವೆಲ್ಲರೂ ರೈಸಿಂಗ್ ಭಾರತದ ಬಗ್ಗೆ ಚರ್ಚಿಸುತ್ತಿದ್ದೀರಿ. ಮತ್ತು ಇದರಲ್ಲಿ, ನಿಮ್ಮ ಒತ್ತು ಒಳಗಿನ ಶಕ್ತಿಯ ಮೇಲೆ - ಸರಳವಾಗಿ ಹೇಳುವುದಾದರೆ, ನಿಮ್ಮ ಗಮನ ದೇಶದ ಸ್ವಂತ ಶಕ್ತಿಯ ಮೇಲೆ. ಮತ್ತು ನಮ್ಮ ಧರ್ಮಗ್ರಂಥಗಳಲ್ಲಿ, ಇದನ್ನು ಹೇಳಲಾಗಿದೆ - ತತ್ ತ್ವಮ್ ಅಸಿ! ಅಂದರೆ, ನಾವು ಹುಡುಕುತ್ತಿರುವ ಬ್ರಹ್ಮ ನಾವೇ; ಅದು ನಮ್ಮೊಳಗಿದೆ. ನಮ್ಮೊಳಗಿನ ಶಕ್ತಿಯನ್ನು ನಾವು ಗುರುತಿಸಬೇಕು. ಕಳೆದ 11 ವರ್ಷಗಳಲ್ಲಿ, ಭಾರತವು ಈ ಶಕ್ತಿಯನ್ನು ಗುರುತಿಸಿದೆ, ಮತ್ತು ಇಂದು ದೇಶವು ಈ ಶಕ್ತಿಯನ್ನು ಬಲಪಡಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ.ನೆಟ್ ವರ್ಕ್ 18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 27th, 08:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉದಯೋನ್ಮುಖ ಭಾರತ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಕಳೆದ 11 ವರ್ಷಗಳ ಭಾರತದ ಪ್ರಯಾಣವನ್ನು ಎತ್ತಿ ಹಿಡಿದ ಪ್ರಧಾನಮಂತ್ರಿ ಅವರು, ರಾಷ್ಟ್ರೀಯ ಸಾಮರ್ಥ್ಯ, ಆರ್ಥಿಕ ಸ್ವಾವಲಂಬನೆ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾರ್ಗಸೂಚಿಯನ್ನು ಪುನಃ ಪಡೆಯುವ ಬಗ್ಗೆ ವ್ಯಾಪಕವಾಗಿ ಮಾತನಾಡಿದರು.ಇಸ್ರೇಲ್ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
February 26th, 03:30 pm
ನನಗೆ ಮತ್ತು ಭಾರತೀಯ ನಿಯೋಗಕ್ಕೆ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ಮತ್ತೊಮ್ಮೆ ಪ್ರಧಾನಮಂತ್ರಿ ನೆತನ್ಯಾಹು ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ತಿಳಿಸುತ್ತೇನೆ.ಭಾರತ AI ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಮಾರಿಷಸ್ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಸಭೆ
February 20th, 10:13 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ಭಾರತ AI ಇಂಪ್ಯಾಕ್ಟ್ ಶೃಂಗಸಭೆಯ ಸಂದರ್ಭದಲ್ಲಿ ಮಾರಿಷಸ್ ಪ್ರಧಾನಮಂತ್ರಿ ಡಾ. ನವೀನ್ಚಂದ್ರ ರಾಮ್ಗೂಲಂ ಅವರನ್ನು ಭೇಟಿ ಮಾಡಿದರು. ಸೆಪ್ಟೆಂಬರ್ 2025 ರಲ್ಲಿ ಅವರ ರಾಜ್ಯ ಭೇಟಿಯ ನಂತರ, ಪ್ರಧಾನಮಂತ್ರಿ ರಾಮ್ಗೂಲಂ ಅವರ ಪ್ರಸ್ತುತ ಅವಧಿಯಲ್ಲಿ ಭಾರತಕ್ಕೆ ಇದು ಎರಡನೇ ಭೇಟಿಯಾಗಿದೆ. ಫೆಬ್ರವರಿ 09, 2026 ರಂದು ನಡೆದ ಅವರ ಇತ್ತೀಚಿನ ದೂರವಾಣಿ ಸಂಭಾಷಣೆಯ ನಂತರ ಇದು ಮೊದಲ ಭೇಟಿಯಾಗಿದೆ.ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆಯ ಉದ್ಯಮ ನಾಯಕರ ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 19th, 01:00 pm
ಭಾರತದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್(ಪ್ರಭಾವ) ಶೃಂಗಸಭೆಗೆ ನಿಮ್ಮೆಲ್ಲರನ್ನೂ ಮತ್ತೊಮ್ಮೆ ಸ್ವಾಗತಿಸಲು ನನಗೆ ಸಂತೋಷವಾಗುತ್ತಿದೆ. ಈ ಶೃಂಗಸಭೆಯು ಮಾನವ ಕೇಂದ್ರಿತ, ಸೂಕ್ಷ್ಮ ಜಾಗತಿಕ ಎಐ ಪರಿಸರ ವ್ಯವಸ್ಥೆ ನಿರ್ಮಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂಬ ವಿಶ್ವಾಸ ನನಗಿದೆ.ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026 ರ ನಾಯಕರ ಸರ್ವಸದಸ್ಯರ ಅಧಿವೇಶನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆಗಳು
February 19th, 12:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026ರ ನಾಯಕರ ಸರ್ವಸದಸ್ಯರ ಅಧಿವೇಶನದಲ್ಲಿ ತಮ್ಮ ಹೇಳಿಕೆಗಳನ್ನು ಹಂಚಿಕೊಂಡರು. ಭಾರತದಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಮತ್ತೊಮ್ಮೆ ಭಾಗವಹಿಸಿದವರನ್ನು ಸ್ವಾಗತಿಸಿದ ಪ್ರಧಾನಮಂತ್ರಿಯವರು, ಮಾನವ ಕೇಂದ್ರಿತ ಮತ್ತು ಸೂಕ್ಷ್ಮ ಜಾಗತಿಕ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವಲ್ಲಿ ಶೃಂಗಸಭೆಯು ನಿರ್ಣಾಯಕ ಪಾತ್ರ ವಹಿಸುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಮಾನವೀಯತೆಯು ಯಾವಾಗಲೂ ಅಡೆತಡೆಗಳನ್ನು ಅವಕಾಶಗಳಾಗಿ ಪರಿವರ್ತಿಸಿದೆ ಎಂಬುದನ್ನು ಇತಿಹಾಸವು ತೋರಿಸುತ್ತದೆ ಮತ್ತು ಇಂದು ಅಡೆತಡೆಗಳನ್ನು ಮಾನವೀಯತೆಯ ಶ್ರೇಷ್ಠ ಅವಕಾಶವಾಗಿ ಪರಿವರ್ತಿಸಲು ಮತ್ತೊಂದು ಕ್ಷಣವನ್ನು ಪ್ರಸ್ತುತಪಡಿಸುತ್ತದೆ ಎಂದು ಅವರು ಹೇಳಿದರು.ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
February 19th, 10:00 am
ಗೌರವಾನ್ವಿತ ಗಣ್ಯರೆ, ಸಚಿವರೆ, ಉದ್ಯಮ ನಾಯಕರೆ, ನಾವೀನ್ಯಕಾರರೆ, ಉದ್ಯಮಿಗಳೆ, ಸಂಶೋಧಕರೆ, ಪ್ರತಿನಿಧಿಗಳೆ, ಗಣ್ಯ ಅತಿಥಿಗಳೆ, ಮಹಿಳೆಯರು ಮತ್ತು ಮಹನೀಯರೆ - ನಮಸ್ತೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026' ಉದ್ಘಾಟನೆ
February 19th, 09:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026' ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ಮಾನವಕುಲದ ಆರನೇ ಒಂದು ಭಾಗವನ್ನು ಪ್ರತಿನಿಧಿಸುವ ಭಾರತದಲ್ಲಿ ವಿಶ್ವದ ಅತಿದೊಡ್ಡ ಮತ್ತು ಐತಿಹಾಸಿಕ 'ಎಐ ಇಂಪ್ಯಾಕ್ಟ್ ಶೃಂಗಸಭೆ' ನಡೆಯುತ್ತಿದೆ ಎಂದು ಹೇಳಿದರು. ಭಾರತವು ವಿಶ್ವದ ಅತಿದೊಡ್ಡ ಯುವ ಜನಸಂಖ್ಯೆ, ಅತಿದೊಡ್ಡ ತಾಂತ್ರಿಕ ಪ್ರತಿಭಾನ್ವಿತರ ಬಳಗ ಮತ್ತು ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನ ಆಧಾರಿತ ಪರಿಸರ ವ್ಯವಸ್ಥೆಗೆ ನೆಲೆಯಾಗಿದೆ ಎಂದು ಅವರು ಒತ್ತಿಹೇಳಿದರು. ಭಾರತವು ಕೇವಲ ಹೊಸ ತಂತ್ರಜ್ಞಾನಗಳನ್ನು ಸೃಷ್ಟಿಸುವುದು ಮಾತ್ರವಲ್ಲದೆ, ಅವುಗಳನ್ನು ಅಭೂತಪೂರ್ವ ವೇಗದಲ್ಲಿ ಅಳವಡಿಸಿಕೊಳ್ಳುತ್ತದೆ ಎಂದು ಅವರು ಪ್ರತಿಪಾದಿಸಿದರು. 140 ಕೋಟಿ ಭಾರತೀಯರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಉತ್ಸುಕರಾಗಿದ್ದಾರೆ ಎಂದು ಹೇಳಿದ ಪ್ರಧಾನಮಂತ್ರಿಯವರು, ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ವಿವಿಧ ರಾಷ್ಟ್ರಗಳ ಮುಖ್ಯಸ್ಥರಿಗೆ, ಜಾಗತಿಕ ಎಐ ವ್ಯವಸ್ಥೆಯ ನಾಯಕರಿಗೆ ಮತ್ತು ನಾವೀನ್ಯಕಾರರಿಗೆ ಭಾರತೀಯರ ಪರವಾಗಿ ಆತ್ಮೀಯ ಸ್ವಾಗತ ಕೋರಿದರು. ಅವರ ಉಪಸ್ಥಿತಿಗಾಗಿ ಕೃತಜ್ಞತೆ ಸಲ್ಲಿಸಿದ ಅವರು, ಈ ಶೃಂಗಸಭೆಯನ್ನು ಭಾರತದಲ್ಲಿ ಆಯೋಜಿಸಿರುವುದು ಕೇವಲ ದೇಶಕ್ಕೆ ಮಾತ್ರವಲ್ಲದೆ ಇಡೀ ಜಾಗತಿಕ ದಕ್ಷಿಣದ ರಾಷ್ಟ್ರಗಳಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಸಮಾಲೋಚನೆ ನಡೆಸಿದ ಮಾರಿಷಸ್ ಪ್ರಧಾನಮಂತ್ರಿ
February 09th, 09:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾರಿಷಸ್ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಡಾ. ನವೀನ್ ಚಂದ್ರ ರಾಮಗೂಲಂ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು.ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಅವರ ಉತ್ತರ
February 05th, 05:35 pm
ವಂದನಾ ನಿರ್ಣಯಕ್ಕೆ ಬೆಂಬಲವಾಗಿ ಈ ಸದನದ ಮುಂದೆ ನನ್ನ ಭಾವನೆಗಳನ್ನು ಮಂಡಿಸುವುದು ನನ್ನ ಸೌಭಾಗ್ಯವೇ ಸರಿ.