ಹಿಂದೂಸ್ತಾನ್ ಟೈಮ್ಸ್ ಲೀಡರ್‌ ಶಿಪ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

December 06th, 08:14 pm

ಹಿಂದೂಸ್ತಾನ್ ಟೈಮ್ಸ್ ಶೃಂಗಸಭೆಯಲ್ಲಿ ದೇಶ ಮತ್ತು ವಿದೇಶಗಳ ಅನೇಕ ಗಣ್ಯ ಅತಿಥಿಗಳು ಇಲ್ಲಿ ಉಪಸ್ಥಿತರಿದ್ದಾರೆ. ಆಯೋಜಕರಿಗೆ ಹಾಗೂ ಇಲ್ಲಿ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಶೋಭನಾ ಜೀ ಅವರು ಈಗಷ್ಟೇ ಎರಡು ವಿಷಯಗಳನ್ನು ಪ್ರಸ್ತಾಪಿಸಿದರು, ಅದನ್ನು ನಾನು ಸೂಕ್ಷ್ಮವಾಗಿ ಗಮನಿಸಿದೆ.ಮೊದಲನೆಯದಾಗಿ, ಮೋದಿ ಜೀ ಕಳೆದ ಬಾರಿ ಭೇಟಿ ನೀಡಿದ್ದಾಗ ಅವರು ಈ ಸಲಹೆಯನ್ನು ನೀಡಿದ್ದರು ಎಂದು ಅವರು ಹೇಳಿದರು. ಸಾಮಾನ್ಯವಾಗಿ ಈ ದೇಶದಲ್ಲಿ ಮಾಧ್ಯಮ ಸಂಸ್ಥೆಗಳಿಗೆ ನೀವು ಹೀಗೆ ಕೆಲಸ ಮಾಡಿ ಎಂದು ಹೇಳುವ ಧೈರ್ಯವನ್ನು ಯಾರೂ ಮಾಡುವುದಿಲ್ಲ. ಆದರೆ ನಾನು ಆ ಕೆಲಸ ಮಾಡಿದ್ದೆ. ಶೋಭನಾ ಜೀ ಮತ್ತು ಅವರ ತಂಡ ಆ ಸಲಹೆಯನ್ನು ಅತ್ಯಂತ ಉತ್ಸಾಹದಿಂದ ಜಾರಿಗೆ ತಂದಿರುವುದಕ್ಕೆ ನನಗೆ ಬಹಳ ಸಂತೋಷವಾಗಿದೆ. ಮತ್ತು ದೇಶದ ವಿಷಯಕ್ಕೆ ಬರುವುದಾದರೆ, ನಾನು ಈಗಷ್ಟೇ ಆ ವಸ್ತುಪ್ರದರ್ಶನವನ್ನು ವೀಕ್ಷಿಸಿ ಬಂದಿದ್ದೇನೆ. ನೀವೆಲ್ಲರೂ ಖಂಡಿತವಾಗಿಯೂ ಅದನ್ನು ಒಮ್ಮೆ ವೀಕ್ಷಿಸಬೇಕೆಂದು ನಾನು ಮನವಿ ಮಾಡುತ್ತೇನೆ. ಆ ಛಾಯಾಗ್ರಾಹಕ ಮಿತ್ರರು ಆ ಕ್ಷಣಗಳನ್ನು ಎಷ್ಟೊಂದು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿವೆ. ಇನ್ನು ಅವರು ಹೇಳಿದ ಎರಡನೇ ವಿಷಯದ ಬಗ್ಗೆ ಹೇಳುವುದಾದರೆ, ನಾನಿಲ್ಲಿ ಅವರ ಪದಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ. ಅವರು ನೀವು ರಾಷ್ಟ್ರ ಸೇವೆಯನ್ನು ಹೀಗೆಯೇ ಮುಂದುವರಿಸಿ ಎಂದು ವೈಯಕ್ತಿಕವಾಗಿ ಹೇಳಬಹುದಿತ್ತು. ಆದರೆ ಅದರ ಬದಲಿಗೆ, ನೀವು ಸೇವೆಯನ್ನು ಮುಂದುವರಿಸಬೇಕು ಎಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ನಾನಿದನ್ನು ಭಾವಿಸುತ್ತೇನೆ. ಇದಕ್ಕಾಗಿ ನಾನು ವಿಶೇಷ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್‌ ಶಿಪ್ ಶೃಂಗಸಭೆ 2025' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

December 06th, 08:13 pm

ನವದೆಹಲಿಯಲ್ಲಿ ಇಂದು ಜರುಗಿದ ‘ಹಿಂದೂಸ್ತಾನ್ ಟೈಮ್ಸ್ ಲೀಡರ್‌ಶಿಪ್ ಸಮಿತ್ 2025’ನ್ನು ಉದ್ದೇಶಿಸಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ, ಸಮಾವೇಶದಲ್ಲಿ ಉಪಸ್ಥಿತರಿದ್ದ ದೇಶ-ವಿದೇಶಗಳ ಗಣ್ಯರನ್ನು ಸ್ವಾಗತಿಸಿದ ಅವರು, ಆಯೋಜಕರಿಗೆ ಹಾಗೂ ತಮ್ಮ ವಿಚಾರಗಳನ್ನು ಹಂಚಿಕೊಂಡ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಶೋಭನಾ ಜೀ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಎರಡು ಪ್ರಮುಖ ಅಂಶಗಳನ್ನು ತಾವು ಸೂಕ್ಷ್ಮವಾಗಿ ಗಮನಿಸಿರುವುದಾಗಿ ಶ್ರೀ ಮೋದಿ ತಿಳಿಸಿದರು. ಮೊದಲನೆಯದಾಗಿ, ತಾವು ಹಿಂದೊಮ್ಮೆ ಭೇಟಿ ನೀಡಿದ್ದಾಗ ನೀಡಿದ್ದ ಸಲಹೆಯನ್ನು ಶೋಭನಾ ಜೀ ಪ್ರಸ್ತಾಪಿಸಿದರು. ಸಾಮಾನ್ಯವಾಗಿ ಮಾಧ್ಯಮ ಸಂಸ್ಥೆಗಳಿಗೆ ಸಲಹೆ ನೀಡುವುದು ಅಪರೂಪವಾದರೂ, ತಾವು ಆ ಸಲಹೆ ನೀಡಿದ್ದೆ ಎಂದ ಯವರು, ಆ ಸಲಹೆಯನ್ನು ಶೋಭನಾ ಜೀ ಮತ್ತು ಅವರ ತಂಡ ಅತ್ಯಂತ ಉತ್ಸಾಹದಿಂದ ಅನುಷ್ಠಾನಕ್ಕೆ ತಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ತಾವು ಛಾಯಾಚಿತ್ರ ಪ್ರದರ್ಶನಕ್ಕೆ ಭೇಟಿ ನೀಡಿದಾಗ, ಛಾಯಾಗ್ರಾಹಕರು ಆ ಕ್ಷಣಗಳನ್ನು ಎಷ್ಟು ಅದ್ಭುತವಾಗಿ ಸೆರೆಹಿಡಿದಿದ್ದಾರೆ ಎಂದರೆ, ಅವೆಲ್ಲವೂ ಅಜರಾಮರವಾಗಿ ಉಳಿಯುವಂತಿದೆ ಎಂದು ಬಣ್ಣಿಸಿದ ಅವರು, ಪ್ರತಿಯೊಬ್ಬರೂ ಈ ಪ್ರದರ್ಶನವನ್ನು ವೀಕ್ಷಿಸಬೇಕೆಂದು ಕರೆ ನೀಡಿದರು. ಇನ್ನು ಶೋಭನಾ ಜೀ ಅವರ ಎರಡನೇ ಅಂಶದ ಕುರಿತು ಪ್ರತಿಕ್ರಿಯಿಸಿದ ಶ್ರೀ ಮೋದಿ ಅವರು, ನಾನು ರಾಷ್ಟ್ರ ಸೇವೆಯನ್ನು ಮುಂದುವರಿಸಬೇಕು ಎಂಬುದು ಕೇವಲ ಅವರ ಆಶಯವಷ್ಟೇ ಅಲ್ಲ, ಬದಲಿಗೆ ನಾನು ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರಿಸಬೇಕೆಂದು ಸ್ವತಃ 'ಹಿಂದೂಸ್ತಾನ್ ಟೈಮ್ಸ್' ಸಂಸ್ಥೆಯೇ ಹೇಳುತ್ತಿದೆ ಎಂದು ಅರ್ಥೈಸಿಕೊಳ್ಳುವುದಾಗಿ ಹೇಳಿದರು. ಇದಕ್ಕಾಗಿ ಅವರು ವಿಶೇಷ ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ನವದೆಹಲಿಯ ಭಾರತ ಮಂಟಪದಲ್ಲಿ ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ನಡೆದ ಭಾರತ-ರಷ್ಯಾ ಬಿಸಿನೆಸ್ ಫೋರಂನಲ್ಲಿ ಪ್ರಧಾನಮಂತ್ರಿ ಅವರ ಭಾಷಣ

December 05th, 03:45 pm

ಇಂದು ಇಷ್ಟು ದೊಡ್ಡ ನಿಯೋಗದೊಂದಿಗೆ ಈ ಕಾರ್ಯಕ್ರಮದ ಭಾಗವಾಗಿರುವುದು ಅಧ್ಯಕ್ಷರಾದ ಪುಟಿನ್ ಅವರ ಅತ್ಯಂತ ಪ್ರಮುಖ ನಿರ್ಧಾರ ಹಾಗೂ ಹೆಜ್ಜೆ ಎಂದು ನಾನು ಭಾವಿಸುತ್ತೇನೆ. 'ಇಂಡಿಯಾ ರಷ್ಯಾ ಬಿಸಿನೆಸ್ ಫೋರಂ'ನಲ್ಲಿ ಭಾಗವಹಿಸಿರುವ ನಿಮ್ಮೆಲ್ಲರನ್ನೂ ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ನಿಮ್ಮೆಲ್ಲರ ನಡುವೆ ಇರುವುದು ನನಗೆ ಅತ್ಯಂತ ಸಂತಸದ ವಿಷಯವಾಗಿದೆ. ಈ ವೇದಿಕೆಗೆ ಆಗಮಿಸಿ ತಮ್ಮ ಅಮೂಲ್ಯವಾದ ಅನಿಸಿಕೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನನ್ನ ಸ್ನೇಹಿತರಾದ ಅಧ್ಯಕ್ಷ ಪುಟಿನ್ ಅವರಿಗೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ವ್ಯಾಪಾರ-ವಹಿವಾಟಿಗೆ ಸರಳ ಮತ್ತು ಸುಗಮವಾದ ವ್ಯವಸ್ಥೆಗಳನ್ನು ರೂಪಿಸಲಾಗುತ್ತಿದೆ. ಭಾರತ ಮತ್ತು ಯುರೇಷಿಯನ್ ಎಕನಾಮಿಕ್ ಯೂನಿಯನ್ ನಡುವಿನ ಮುಕ್ತ ವ್ಯಾಪಾರ ಒಪ್ಪಂದದ (FTA) ಕುರಿತು ಚರ್ಚೆಗಳು ಪ್ರಾರಂಭವಾಗಿವೆ.

ರಷ್ಯಾ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಭಾರತ – ರಷ್ಯಾ ವಾಣಿಜ್ಯ ವೇದಿಕೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 05th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿ ರಷ್ಯಾ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾದಿಮಿರ್ ಪುಟಿನ್ ಅವರೊಂದಿಗೆ ಭಾರತ-ರಷ್ಯಾ ವ್ಯಾಪಾರ ವೇದಿಕೆಯನ್ನುದ್ದೇಶಿಸಿ ಇಂದು ಮಾತನಾಡಿದರು. ತಮ್ಮ ಭಾಷಣದ ಆರಂಭದಲ್ಲಿ ಪ್ರಧಾನಮಂತ್ರಿ ಅವರು, ಘನತೆವೆತ್ತ ಅಧ್ಯಕ್ಷ ಪುಟಿನ್, ಭಾರತ ಮತ್ತು ವಿದೇಶಗಳ ನಾಯಕರು ಮತ್ತು ಎಲ್ಲಾ ಗೌರವಾನ್ವಿತ ಅತಿಥಿಗಳಿಗೆ ಶುಭಾಶಯ ಕೋರಿದರು. ಭಾರತ ರಷ್ಯಾ ವ್ಯಾಪಾರ ವೇದಿಕೆಯು ಅಧ್ಯಕ್ಷ ಪುಟಿನ್ ಅವರ ಮಹತ್ವದ ಉಪಕ್ರಮವನ್ನು ಪ್ರತಿಬಿಂಬಿಸುತ್ತದೆ, ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ದೊಡ್ಡ ನಿಯೋಗವನ್ನು ಕರೆತಂದಿದ್ದಾರೆ ಎಂದು ಹೇಳಿದರು. ಸಭೆಯಲ್ಲಿ ಭಾಗವಹಿಸಿದ ಎಲ್ಲರಿಗೂ ತಮ್ಮ ಹೃತ್ಪೂರ್ವಕ ಸ್ವಾಗತವನ್ನು ಕೋರಿದ ಪ್ರಧಾನಮಂತ್ರಿ ಮೋದಿ, ಇಂದು ಗಣ್ಯರ ಜೊತೆ ಇರುವುದು ಬಹಳ ಸಂತೋಷ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು. ವೇದಿಕೆಯಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತು ತಮ್ಮ ಅಮೂಲ್ಯವಾದ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ಶ್ರೀ ಮೋದಿ ಅವರು ತಮ್ಮ ಸ್ನೇಹಿತ ಅಧ್ಯಕ್ಷ ಪುಟಿನ್ ಅವರಿಗೆ ತುಂಬು ಹೃದಯದ ಕೃತಜ್ಞತೆ ಸಲ್ಲಿಸಿದರು. ವ್ಯಾಪಾರಕ್ಕಾಗಿ ಸರಳೀಕರಣಕೃತ ಮತ್ತು ಪೂರ್ವ ಅಂದಾಜಿನ ಕಾರ್ಯವಿಧಾನಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದ ಅವರು, ಭಾರತ ಮತ್ತು ಯುರೇಷಿಯನ್ ಆರ್ಥಿಕ ಒಕ್ಕೂಟದ ನಡುವೆ ಮುಕ್ತ ವ್ಯಾಪಾರ ಒಪ್ಪಂದದ ಬಗ್ಗೆ ಚರ್ಚೆಗಳು ಪ್ರಾರಂಭವಾಗಿವೆ ಎಂದು ಮಾಹಿತಿ ನೀಡಿದರು.

ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಮಾಧ್ಯಮಗಳಿಗೆ ಪ್ರಧಾನಮಂತ್ರಿ ನೀಡಿದ ಹೇಳಿಕೆಯ ಕನ್ನಡ ಅವತರಣಿಕೆ

December 01st, 10:15 am

(ಸಂಸತ್ತಿನ) ಈ ಚಳಿಗಾಲದ ಅಧಿವೇಶನವು ಕೇವಲ ಒಂದು ಸಂಪ್ರದಾಯ ಆಚರಣೆಯಲ್ಲ. ಈ ಚಳಿಗಾಲದ ಅಧಿವೇಶನವು ರಾಷ್ಟ್ರವನ್ನು ಪ್ರಗತಿಯತ್ತ ವೇಗವಾಗಿ ಕೊಂಡೊಯ್ಯಲು ನಡೆಯುತ್ತಿರುವ ಪ್ರಯತ್ನಗಳಿಗೆ ಶಕ್ತಿ ತುಂಬುತ್ತದೆ ಎಂದು ನಾನು ದೃಢವಾಗಿ ನಂಬುತ್ತೇನೆ. ಭಾರತವು ನಿಜವಾಗಿಯೂ ಪ್ರಜಾಪ್ರಭುತ್ವವನ್ನು ಜೀವಂತಗೊಳಿಸಿದೆ. ಪ್ರಜಾಪ್ರಭುತ್ವದ ಮೇಲಿನ ಜನರ ನಂಬಿಕೆ ಬಲಗೊಳ್ಳುವ ರೀತಿಯಲ್ಲಿ ಪ್ರಜಾಪ್ರಭುತ್ವದ ಉತ್ಸಾಹ ಮತ್ತು ಚೈತನ್ಯ ಪದೇ ಪದೇ ವ್ಯಕ್ತಗೊಳ್ಳುತ್ತಿದೆ. ಇತ್ತೀಚೆಗೆ, ಬಿಹಾರದಲ್ಲಿ ನಡೆದ ಚುನಾವಣೆಗಳು ಮತ್ತು ಅಲ್ಲಿ ದಾಖಲೆಯ ಮತದಾನವು ಪ್ರಜಾಪ್ರಭುತ್ವದ ದೊಡ್ಡ ಶಕ್ತಿಯಾಗಿದೆ. ತಾಯಂದಿರು ಮತ್ತು ಸಹೋದರಿಯರ ಹೆಚ್ಚುತ್ತಿರುವ ಭಾಗವಹಿಸುವಿಕೆಯು ಸ್ವತಃ ಹೊಸ ಭರವಸೆ ಮತ್ತು ವಿಶ್ವಾಸವನ್ನು ಸೃಷ್ಟಿಸುತ್ತದೆ. ಒಂದೆಡೆ, ಪ್ರಜಾಪ್ರಭುತ್ವವು ಬಲಗೊಳ್ಳುತ್ತಿದೆ, ಮತ್ತು ಮತ್ತೊಂದೆಡೆ, ಈ ಪ್ರಜಾಪ್ರಭುತ್ವ ಚೌಕಟ್ಟಿನೊಳಗೆ, ನಮ್ಮ ಆರ್ಥಿಕತೆಯ ಬಲವರ್ಧನೆಯು ಜಗತ್ತು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿರುವ ವಿಷಯವಾಗಿದೆ. ಪ್ರಜಾಪ್ರಭುತ್ವವು ತಲುಪಿಸಬಲ್ಲದು ಎಂಬುದನ್ನು ಭಾರತ ಸಾಬೀತುಪಡಿಸಿದೆ. ಭಾರತದ ಆರ್ಥಿಕ ಸ್ಥಿತಿ ಇಂದು ಹೊಸ ಎತ್ತರವನ್ನು ತಲುಪುತ್ತಿರುವ ವೇಗವು ನಮ್ಮಲ್ಲಿ ಹೊಸ ವಿಶ್ವಾಸವನ್ನು ತುಂಬುತ್ತದೆ ಮತ್ತು 'ವಿಕ್ಷಿತ ಭಾರತ' (ಅಭಿವೃದ್ಧಿ ಹೊಂದಿದ ಭಾರತ) ಗುರಿಯತ್ತ ಸಾಗಲು ನಮಗೆ ಹೊಸ ಶಕ್ತಿಯನ್ನು ನೀಡುತ್ತದೆ.

2025ರ ಸಂಸತ್‌ ಚಳಿಗಾಲದ ಅಧಿವೇಶನ ಆರಂಭದ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ

December 01st, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನ ಆವರಣದಲ್ಲಿ 2025ರ ಚಳಿಗಾಲದ ಸಂಸತ್‌ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಅಧಿವೇಶನವು ಕೇವಲ ಒಂದು ಆಚರಣೆಯಲ್ಲ, ಬದಲಿಗೆ, ತ್ವರಿತ ಪ್ರಗತಿಯತ್ತ ರಾಷ್ಟ್ರದ ಪಯಣಕ್ಕೆ ಹೊಸ ಶಕ್ತಿಯ ಮೂಲವಾಗಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು. ರಾಷ್ಟ್ರದ ಪ್ರಗತಿಯನ್ನು ವೇಗಗೊಳಿಸಲು ಪ್ರಸ್ತುತ ನಡೆಯುತ್ತಿರುವ ಪ್ರಯತ್ನಗಳಿಗೆ ಈ ಅಧಿವೇಶನವು ಹೊಸ ಶಕ್ತಿಯನ್ನು ತುಂಬಲಿದೆ ಎಂಬುದು ನನ್ನ ದೃಢವಾದ ನಂಬಿಕೆ, ಎಂದು ಶ್ರೀ ಮೋದಿ ಹೇಳಿದರು.

MSME ಬೆಳವಣಿಗೆ ಮತ್ತು ಉತ್ಪಾದನಾ ವಿಸ್ತರಣೆಗೆ ವೇಗವರ್ಧಕವಾಗಿ GST ಸುಧಾರಣೆಗಳನ್ನು ಪ್ರಧಾನಮಂತ್ರಿ ಅವರು ಪುನರುಚ್ಚರಿಸಿದ್ದಾರೆ

September 04th, 08:51 pm

ಉದ್ಯೋಗ ಸೃಷ್ಟಿ, ನಾವೀನ್ಯತೆ ಮತ್ತು ಆರ್ಥಿಕ ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಭಾರತದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು (MSMEs) ಸಬಲೀಕರಣಗೊಳಿಸುವ ಸರ್ಕಾರದ ದೃಢ ಬದ್ಧತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಪುನರುಚ್ಚರಿಸಿದ್ದಾರೆ. ಹಲವಾರು ವರ್ಷಗಳಲ್ಲಿ, MSME ಗಳಿಗೆ ಸಾಲ ಪಡೆಯುವ ಪ್ರಕ್ರಿಯೆಯನ್ನು ಸರಾಗಗೊಳಿಸಲು, ಮಾರುಕಟ್ಟೆ ಸಂಪರ್ಕಗಳನ್ನು ವಿಸ್ತರಿಸಲು ಮತ್ತು ಕಾರ್ಯಾಚರಣೆಯ ಹೊರೆಗಳನ್ನು ಕಡಿಮೆ ಮಾಡಲು ಸರ್ಕಾರವು ಹಲವಾರು ಸುಧಾರಣೆಗಳನ್ನು ಪರಿಚಯಿಸಿದೆ ಎಂದು ಅವರು ಹೇಳಿದರು. #NextGenGST ಉಪಕ್ರಮದ ಅಡಿಯಲ್ಲಿ ಇತ್ತೀಚಿನ GST ಸುಧಾರಣೆಗಳು ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿವೆ.

The dreams of crores of women, poor and youth are Modi's resolve: PM Modi

February 18th, 01:00 pm

Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.

PM Modi addresses BJP Karyakartas during BJP National Convention 2024

February 18th, 12:30 pm

Addressing the BJP National Convention 2024 at Bharat Mandapam, Prime Minister Narendra Modi said, “Today is February 18th, and the youth who have reached the age of 18 in this era will vote in the country's 18th Lok Sabha election. In the next 100 days, you need to connect with every new voter, reach every beneficiary, every section, every community, and every person who believes in every religion. We need to gain the trust of everyone.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿಯವರ ಉತ್ತರದ ಕನ್ನಡ ಪಠ್ಯಾಂತರ

February 07th, 02:01 pm

ಈ 75ನೇ ಗಣರಾಜ್ಯೋತ್ಸವವು ಸ್ವತಃ ಒಂದು ಮಹತ್ವದ ಮೈಲುಗಲ್ಲಾಗಿದೆ. ಸಂವಿಧಾನದ ಪ್ರಯಾಣದ ಈ ನಿರ್ಣಾಯಕ ಹಂತದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳ ಭಾಷಣವು ಐತಿಹಾಸಿಕ ಮಹತ್ವವನ್ನು ಪಡೆದಿದೆ. ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಭಾರತದ ಆತ್ಮವಿಶ್ವಾಸದ ಬಗ್ಗೆ ಮಾತನಾಡಿದ್ದಾರೆ, ಭಾರತದ ಉಜ್ವಲ ಭವಿಷ್ಯದ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಮತ್ತು ಲಕ್ಷಾಂತರ ಭಾರತೀಯರ ಸಾಮರ್ಥ್ಯವನ್ನು ಸಂಸತ್ತಿನ ಮುಖಾಂತರ ಬಹಳ ಸಂಕ್ಷಿಪ್ತವಾಗಿ, ಆದರೆ ಭವ್ಯವಾದ ರೀತಿಯಲ್ಲಿ ರಾಷ್ಟ್ರದ ಮುಂದೆ ಪ್ರಸ್ತುತಪಡಿಸಿದ್ದಾರೆ. ಗೌರವಾನ್ವಿತ ರಾಷ್ಟ್ರಪತಿಗಳಿಗೆ ಈ ಸ್ಪೂರ್ತಿದಾಯಕ ಭಾಷಣಕ್ಕಾಗಿ, ರಾಷ್ಟ್ರಕ್ಕೆ ಮಾರ್ಗದರ್ಶನ ನೀಡಿದ್ದಕ್ಕಾಗಿ ಹಾಗೂ ʻವಿಕಸಿತ ಭಾರತ'ದ ಕಡೆಗೆ ಭಾರತದ ಸಂಕಲ್ಪವನ್ನು ಸಶಕ್ತಗೊಳಿಸಿದ್ದಕ್ಕಾಗಿ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ಉತ್ತರ

February 07th, 02:00 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿಂದು ಸಂಸತ್ತಿನಲ್ಲಿ ರಾಷ್ಟ್ರಪತಿಗಳು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರ ನೀಡಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ಅವರ ಉತ್ತರದ ಕನ್ನಡ ಅನುವಾದ

February 05th, 05:44 pm

ರಾಷ್ಟ್ರಪತಿ ಅವರ ಭಾಷಣದ ಮೇಲಿನ ವಂದನಾ ನಿರ್ಣಯವನ್ನು ಬೆಂಬಲಿಸಲು ನಾನು ಇಲ್ಲಿ ನಿಂತಿದ್ದೇನೆ. ಗೌರವಾನ್ವಿತ ರಾಷ್ಟ್ರಪತಿ ಅವರು, ನಮ್ಮೆಲ್ಲರನ್ನುದ್ದೇಶಿಸಿ ಸಂಸತ್ತಿನ ಹೊಸ ಕಟ್ಟಡದಲ್ಲಿ ಮಾತನಾಡಿದರು ಮತ್ತು ಆಗ ಸೆಂಗೋಲ್ ಘನತೆ ಮತ್ತು ಗೌರವದಿಂದ ಇಡೀ ಮೆರವಣಿಗೆಯಲ್ಲಿ ಮುಂಚೂಣಿಯಲ್ಲಿತ್ತು. ನಾವೆಲ್ಲರೂ ಅದರ ಹಿಂದೆ ಸಾಗುತ್ತಿದ್ದೆವು. ಹೊಸ ಸದನದಲ್ಲಿ ಹೊಸ ಪರಂಪರೆ ಭಾರತದ ಸ್ವಾತಂತ್ರ್ಯದ ಸಂಭ್ರಮದ ಪವಿತ್ರ ಕ್ಷಣವನ್ನು ಪ್ರತಿಬಿಂಬಿಸುತ್ತಿತ್ತು. ಇದರಿಂದ ಪ್ರಜಾಪ್ರಭುತ್ವದ ಘನತೆ ಹಲವು ಪಟ್ಟು ಹೆಚ್ಚಾಯಿತು. 75ನೇ ಗಣರಾಜ್ಯೋತ್ಸವದ ನಂತರ ಹೊಸ ಸಂಸತ್ತಿನ ಕಟ್ಟಡ ಮತ್ತು ಸೆಂಗೋಲ್ ಮುನ್ನಡೆಸಿದ್ದು, ಈ ಕ್ಷಣಗಳೆಲ್ಲ ಅತ್ಯಂತ ಆಕರ್ಷಣೀಯವಾಗಿದ್ದವು. ನಾನು ಇಡೀ ಕಾರ್ಯಕ್ರಮದಲ್ಲಿ ಭಾಗವಹಿಸಿದಾಗ ಅಂತಹ ಹಿರಿಮೆಯನ್ನು ನಾನೆಲ್ಲೂ ನೋಡಲಿಲ್ಲ. ಆದರೆ ಅಲ್ಲಿಂದ ನಾನು ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಅವರ ಘನ ಉಪಸ್ಥಿತಿಯನ್ನು ಹೊಸ ಸಂಸತ್ ನ ಕಟ್ಟಡದಲ್ಲಿ ಗಮನಿಸಿದಾಗ ಆ ಕ್ಷಣವನ್ನು ನಾನು ಸದಾ ಸ್ಮರಿಸುತ್ತೇನೆ. ರಾಷ್ಟ್ರಪತಿ ಅವರ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತಂತೆ 60ಕ್ಕೂ ಅಧಿಕ ಗೌರವಾನ್ವಿತ ಸದಸ್ಯರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿರುವುದಕ್ಕೆ ಅವರಿಗೆ ನಾನು ಕೃತಜ್ಞತೆಗಳನ್ನು ಸಲ್ಲಿಸಲು ಬಯಸುತ್ತೇನೆ.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿಗಳ ಉತ್ತರ

February 05th, 05:43 pm

ಮಾನ್ಯ ರಾಷ್ಟ್ರಪತಿಗಳು ಸಂಸತ್ತಿನಲ್ಲಿ ಭಾಷಣ ಮಾಡಲು ಹೆಮ್ಮೆ ಮತ್ತು ಗೌರವದ ಸೆಂಗೋಲ್ ನೊಂದಿಗೆ ಮೆರವಣಿಗೆಯಲ್ಲಿ ಆಗಮಿಸಿದ್ದು, ಇತರ ಸಂಸತ್ ಸದಸ್ಯರು ಅವರ ನೇತೃತ್ವ ಅನುಸರಿಸಿದ ಸಂದರ್ಭವನ್ನು ಉಲ್ಲೇಖಿಸಿ ಪ್ರಧಾನಮಂತ್ರಿಗಳು ತಮ್ಮ ಮಾತು ಆರಂಭಿಸಿದರು. ಈ ಪರಂಪರೆಯು ಸದನದ ಘನತೆಯನ್ನು ಹೆಚ್ಚಿಸುತ್ತದೆ ಎಂದು ಒತ್ತಿ ಹೇಳಿದ ಪ್ರಧಾನಿ ಮೋದಿ, 75 ನೇ ಗಣರಾಜ್ಯೋತ್ಸವ, ಹೊಸ ಸಂಸತ್ ಭವನ ಮತ್ತು ಸೆಂಗೋಲ್ ಪ್ರತಿಷ್ಠಾಪನೆಯು ಅತ್ಯಂತ ಪ್ರಮುಖ ಘಟನೆಗಳಾಗಿವೆ ಎಂದು ಹೇಳಿದರು. ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ತಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ನೀಡಿದ ಸದನದ ಸದಸ್ಯರಿಗೆ ಅವರು ಕೃತಜ್ಞತೆ ಸಲ್ಲಿಸಿದರು.

The next 25 years are crucial to transform India into a 'Viksit Bharat': PM Modi

January 25th, 12:00 pm

PM Modi addressed the people of India at Nav Matdata Sammelan. He said, “The age between 18 to 25 shapes the life of a youth as they witness dynamic changes in their lives”. He added that along with these changes they also become a part of various responsibilities and during this Amrit Kaal, strengthening the democratic process of India is also the responsibility of India’s youth. He said, “The next 25 years are crucial for both India and its youth. It is the responsibility of the youth to transform India into a Viksit Bharat by 2047.”

PM Modi’s address at the Nav Matdata Sammelan

January 25th, 11:23 am

PM Modi addressed the people of India at Nav Matdata Sammelan. He said, “The age between 18 to 25 shapes the life of a youth as they witness dynamic changes in their lives”. He added that along with these changes they also become a part of various responsibilities and during this Amrit Kaal, strengthening the democratic process of India is also the responsibility of India’s youth. He said, “The next 25 years are crucial for both India and its youth. It is the responsibility of the youth to transform India into a Viksit Bharat by 2047.”

ಗುಜರಾತ್‌ನ ಗಾಂಧಿನಗರದಲ್ಲಿ ಸ್ಪಂದನಾಶೀಲ(ವೈಬ್ರೆಂಟ್) ಗುಜರಾತ್ ಶೃಂಗಸಭೆ 2024 ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

January 10th, 10:30 am

2024ರ ಹೊಸ ವರ್ಷಕ್ಕೆ ನಾನು ನಿಮಗೆಲ್ಲರಿಗೂ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಭಾರತವು ಇತ್ತೀಚೆಗೆ ತನ್ನ 75ನೇ ಸ್ವಾತಂತ್ರ್ಯ ಅಮೃತ ವರ್ಷವನ್ನು ಆಚರಿಸಿದೆ. ನಮ್ಮ ರಾಷ್ಟ್ರದ ಸ್ವಾತಂತ್ರ್ಯದ ಶತಮಾನೋತ್ಸವದ ಸಂಭ್ರಮಾಚರಣೆಯ ಮೂಲಕ ಅಭಿವೃದ್ಧಿ ಹೊಂದಿದ ಸ್ಥಾನಮಾನ ಸಾಧಿಸುವ ಗುರಿಯೊಂದಿಗೆ ಮುಂದಿನ 25 ವರ್ಷಗಳ ಗುರಿಗಳತ್ತ ಶ್ರದ್ಧೆಯಿಂದ ಕೆಲಸ ಮಾಡುತ್ತಿದೆ. ಈ 25 ವರ್ಷಗಳ ಅಧಿಕಾರಾವಧಿಯು ಭಾರತಕ್ಕೆ 'ಅಮೃತ ಕಾಲ'ದ ಅವಧಿಯಾಗಿದೆ. ಇದು ತಾಜಾ ಆಕಾಂಕ್ಷೆಗಳು, ಹೊಸ ನಿರ್ಣಯಗಳು ಮತ್ತು ನಿರಂತರ ಸಾಧನೆಗಳ ಅವಧಿಯನ್ನು ಸೂಚಿಸುತ್ತದೆ. ಈ ಮೊದಲ ರೋಮಾಂಚಕ ಅಥವಾ ಸ್ಪಂದನಾಶೀಲ ಗುಜರಾತ್ ಜಾಗತಿಕ ಶೃಂಗಸಭೆಯು 'ಅಮೃತ ಕಾಲ'ದ ಸಮಯದಲ್ಲಿ ನಡೆದಿರುವುದು ಅಪಾರ ಮಹತ್ವ ಹೊಂದಿದೆ. ಈ ಶೃಂಗಸಭೆಯಲ್ಲಿ ನಮ್ಮೊಂದಿಗೆ ಸೇರಿಕೊಂಡಿರುವ 100ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾರತದ ಅಭಿವೃದ್ಧಿ ಪಯಣದಲ್ಲಿ ಅಮೂಲ್ಯ ಮಿತ್ರರಾಗಿದ್ದಾರೆ. ನಾನು ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ ಮತ್ತು ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

​​​​​​​ 10ನೇ ಆವೃತ್ತಿಯ ವೈಬ್ರೆಂಟ್ ಗ್ಲೋಬಲ್ ಶೃಂಗಸಭೆಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿ

January 10th, 09:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಾಂಧಿನಗರದ ಮಹಾತ್ಮಮಂದಿರದಲ್ಲಿಂದು 10ನೇ ಆವೃತ್ತಿಯ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆಯನ್ನು ಉದ್ಘಾಟಿಸಿದರು. ಶೃಂಗಸಭೆಯ ಈ ವರ್ಷದ ಘೋಷವಾಕ್ಯ “ಭವಿಷ್ಯಕ್ಕೆ ಹೆಬ್ಬಾಗಿಲು’’ ಎಂದಾಗಿದೆ ಮತ್ತು ಇದರಲ್ಲಿ 34 ಪಾಲುದಾರ ದೇಶಗಳು ಹಾಗೂ 16 ಪಾಲುದಾರ ಸಂಸ್ಥೆಗಳು ಭಾಗವಹಿಸಿವೆ. ಈಶಾನ್ಯ ರಾಜ್ಯಗಳಲ್ಲಿರುವ ಹೂಡಿಕೆ ಅವಕಾಶಗಳನ್ನು ಬಿಂಬಿಸಲು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವಾಲಯ ಈ ಶೃಂಗಸಭೆಯನ್ನು ವೇದಿಕೆಯನ್ನಾಗಿ ಬಳಸಿಕೊಳ್ಳುತ್ತಿದೆ.

Today's victory is historic and unprecedented. The idea of 'Sabka Saath, Sabka Vikas' has won today: PM Modi

December 03rd, 06:15 pm

PM Modi led his party's celebrations at the BJP headquarters today after a successful run in the Assembly elections of 2023. Amidst the happiness of winning in Madhya Pradesh, Rajasthan, and Chhattisgarh assembly elections, PM Modi expressed, “Today's triumph is historic and unprecedented. This day signifies the success of the vision for a developed India. It signifies the triumph of state development for the overall progress of India. Today stands as a victory for honesty, transparency, and good governance.

PM Modi attends victory celebrations at BJP HQ after triumph in three states

December 03rd, 06:01 pm

PM Modi led his party's celebrations at the BJP headquarters today after a successful run in the Assembly elections of 2023. Amidst the happiness of winning in Madhya Pradesh, Rajasthan, and Chhattisgarh assembly elections, PM Modi expressed, “Today's triumph is historic and unprecedented. This day signifies the success of the vision for a developed India. It signifies the triumph of state development for the overall progress of India. Today stands as a victory for honesty, transparency, and good governance.

ನವದೆಹಲಿಯಲ್ಲಿ ನಡೆದ 21 ನೇ ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗಸಭೆ 2023 ರಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅನುವಾದ

November 04th, 07:30 pm

ಮೊದಲನೆಯದಾಗಿ, ನಾನು ನಿಮ್ಮೆಲ್ಲರಲ್ಲಿ ಕ್ಷಮೆಯಾಚಿಸುತ್ತೇನೆ ಏಕೆಂದರೆ ನಾನು ಚುನಾವಣಾ ಸಭೆಯಲ್ಲಿದ್ದೆ, ಆದ್ದರಿಂದ ಇಲ್ಲಿಗೆ ಬರಲು ನನಗೆ ಸ್ವಲ್ಪ ಸಮಯ ಹಿಡಿಯಿತು. ಆದರೆ ನಾನು ನಿಮ್ಮ ನಡುವೆ ಇರಲು ವಿಮಾನ ನಿಲ್ದಾಣದಿಂದ ನೇರವಾಗಿ ಬಂದಿದ್ದೇನೆ. ಶೋಭನಾ ಅವರು ತುಂಬಾ ಚೆನ್ನಾಗಿ ಮಾತನಾಡುತ್ತಿದ್ದರು. ಅವರು ಎತ್ತಿದ ವಿಷಯಗಳು ಉತ್ತಮವಾಗಿದ್ದವು. ನಾನು ತಡವಾಗಿ ಬಂದಿದ್ದರಿಂದ ಅದನ್ನು ಓದಲು ನನಗೆ ಖಂಡಿತವಾಗಿಯೂ ಅವಕಾಶ ಸಿಗುತ್ತದೆ.