ನವಿ ಮುಂಬೈನಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ಸಮಾಗಮದ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾಡಿದ ಭಾಷಣ

March 01st, 06:28 pm

ಜೋ ಬೋಲೆ ಸೋ ನಿಹಾಲ್, ಸತ್ ಶ್ರೀ ಅಕಾಲ್! ಇಂದು, ನಾವು 'ಹಿಂದ್ ದಿ ಚಾದರ್' ಶ್ರೀ ಗುರು ತೇಜ್ ಬಹದ್ದೂರ್ ಸಾಹಿಬ್ ಅವರ 350ನೇ ಶಹೀದಿ ಸಮಾಗಮದಂದು ಭಕ್ತಿಪೂರ್ವಕವಾಗಿ ನೆನಪಿಸಿಕೊಳ್ಳುತ್ತಿದ್ದೇವೆ. ಈ ಹುತಾತ್ಮರ ವಾರ್ಷಿಕೋತ್ಸವದಲ್ಲಿ ಹಾಜರಿರುವ ಎಲ್ಲರಿಗೂ ನನ್ನ ನಮನಗಳು.

PM Modi addresses 350th Shaheedi Samagam of Sri Guru Teg Bahadur Ji; highlights initiatives for the Sikh community and social unity

March 01st, 06:00 pm

PM Modi addressed the 350th Martyrdom Year (Shaheedi Samagam) of ‘Hind di Chadar’ Sri Guru Teg Bahadur Sahib Ji. Paying his respects, the PM stated that today we all remember the great Guru on this significant anniversary and expressed that it is a matter of great fortune to be part of such a historic and sacred event.

ಪವಿತ್ರ ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋವಿಂದ ಸಿಂಗ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ

December 27th, 12:06 pm

ಇಂದು ಪವಿತ್ರ ಪ್ರಕಾಶ್ ಉತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರು ಗೋವಿಂದ ಸಿಂಗ್ ಅವರಿಗೆ ಗೌರವ ನಮನ ಸಲ್ಲಿಸಿದರು. ಗುರು ಗೋವಿಂದ ಸಿಂಗ್ ಅವರು ಧೈರ್ಯ, ಕರುಣೆ ಮತ್ತು ತ್ಯಾಗದ ಸಾಕಾರರೂಪವಾಗಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ವೀರ್ ಬಾಲ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 26th, 01:30 pm

ಇಂದು ದೇಶವು ವೀರ್ ಬಾಲ್ ದಿವಸ್ ಆಚರಿಸುತ್ತಿದೆ. ಇದೀಗ ವಂದೇ ಮಾತರಂನ ಸುಂದರವಾದ ಗಾಯನವನ್ನು ನಾವು ಆಲಿಸಿದ್ದೇವೆ, ನಿಮ್ಮ ಕಠಿಣ ಪರಿಶ್ರಮ ಇಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ನಡೆದ ವೀರ ಬಾಲ ದಿವಸ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು

December 26th, 01:00 pm

ನವದೆಹಲಿಯ ಭಾರತ ಮಂಟಪದಲ್ಲಿ ಇಂದು ನಡೆದ 'ವೀರ ಬಾಲ ದಿವಸ್' ರಾಷ್ಟ್ರೀಯ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು, ದೇಶದಾದ್ಯಂತ ಆಗಮಿಸಿದ್ದ ಅತಿಥಿಗಳನ್ನು ಸ್ವಾಗತಿಸಿದರು ಮತ್ತು ಅಲ್ಲಿ ನೆರೆದಿದ್ದ ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಾ, ಇಂದು ದೇಶವು 'ವೀರ ಬಾಲ ದಿವಸ್' ಆಚರಿಸುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಸ್ತುತಪಡಿಸಲಾದ 'ವಂದೇ ಮಾತರಂ'ನ ಸುಂದರ ಪ್ರದರ್ಶನವನ್ನು ಅವರು ಶ್ಲಾಘಿಸಿದರು ಹಾಗೂ ಪ್ರದರ್ಶನಕಾರರ ಸಮರ್ಪಣೆ ಮತ್ತು ಶ್ರಮವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಹೇಳಿದರು.

ವೀರ ಬಾಲ ದಿನದಂದು ವೀರ ಸಾಹಿಬ್‌ಜಾದೇಗಳ ತ್ಯಾಗವನ್ನು ಸ್ಮರಿಸಿದ ಪ್ರಧಾನಮಂತ್ರಿ

December 26th, 11:21 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವೀರ ಬಾಲ ದಿನದ ಸಂದರ್ಭದಲ್ಲಿ ವೀರ ಸಾಹಿಬ್ ಜಾದೇಗಳ ತ್ಯಾಗವನ್ನು ಸ್ಮರಿಸಿದ್ದಾರೆ. ಈ ದಿನವು ಧೈರ್ಯ, ದೃಢತೆ ಮತ್ತು ಸದಾಚಾರದೊಂದಿಗೆ ಸಂಬಂಧಿಸಿದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

November 25th, 04:40 pm

ಹರಿಯಾಣ ರಾಜ್ಯಪಾಲರಾದ ಆಶಿಮ್ ಘೋಷ್ ಜಿ, ಜನಪ್ರಿಯ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜಿ, ರಾವ್ ಇಂದರ್ಜಿತ್ ಸಿಂಗ್ ಜಿ, ಕೃಷನ್ ಪಾಲ್ ಜಿ, ಹರಿಯಾಣ ಎಸ್‌ಜಿಪಿಸಿ ಅಧ್ಯಕ್ಷ ಜಗದೀಶ್ ಸಿಂಗ್ ಜಿಂದಾ ಜಿ, ಇತರೆ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು

November 25th, 04:38 pm

ಹರಿಯಾಣದ ಕುರುಕ್ಷೇತ್ರದಲ್ಲಿ ಇಂದು ನಡೆದ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಇಂದು ಭಾರತದ ಪರಂಪರೆಯ ಮಹತ್ವದ ಸಂಗಮವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ತಾವು ಬೆಳಿಗ್ಗೆ ರಾಮಾಯಣ ನಗರವಾದ ಅಯೋಧ್ಯೆಯಲ್ಲಿ ಮತ್ತು ಈಗ ಗೀತಾ ನಗರವಾದ ಕುರುಕ್ಷೇತ್ರದಲ್ಲಿರುವುದಾಗಿ ಅವರು ಉಲ್ಲೇಖಿಸಿದರು. ಶ್ರೀ ಗುರು ತೇಜ್ ಬಹದ್ದೂರ್ ಅವರ 350 ನೇ ಹುತಾತ್ಮ ದಿನಾಚರಣೆಯ ಸಂದರ್ಭದಲ್ಲಿ ಎಲ್ಲರೂ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸಂತರು ಮತ್ತು ಗಣ್ಯರ ಉಪಸ್ಥಿತಿಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು ಮತ್ತು ಎಲ್ಲರಿಗೂ ಗೌರವದಿಂದ ನಮಸ್ಕರಿಸಿದರು.

ಪಾಟ್ನಾ ಸಾಹಿಬ್ ನ ತಖತ್ ಶ್ರೀ ಹರಿಮಂದಿರ ಜಿ ನಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಮಂತ್ರಿ

November 02nd, 10:10 pm

ತಖತ್ ಶ್ರೀ ಹರಿಮಂದಿರ ಜಿ ಪಾಟ್ನಾ ಸಾಹಿಬ್ ನಲ್ಲಿ ಪ್ರಾರ್ಥನೆ ಸಲ್ಲಿಸುವುದು ಅತ್ಯಂತ ದೈವಿಕ ಅನುಭವ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಸಿಖ್ ಗುರುಗಳ ಉದಾತ್ತ ಬೋಧನೆಗಳು ಇಡೀ ಮನುಕುಲಕ್ಕೆ ಪ್ರೇರಣೆ ನೀಡುತ್ತವೆ ಎಂದು ಅವರು ಹೇಳಿದರು.

ಗುರು ಚರಣ ಯಾತ್ರೆಯಲ್ಲಿ ಪಾಲ್ಗೊಂಡು ಪವಿತ್ರ ‘ಜೋರೆ ಸಾಹಿಬ್’ ದರ್ಶನ ಪಡೆಯುವಂತೆ ಪ್ರಧಾನಮಂತ್ರಿ ಮನವಿ

October 22nd, 06:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುರು ಚರಣ ಯಾತ್ರೆಯ ಅಂಗವಾಗಿ ಶುಭಾಶಯ ಕೋರಿದ್ದಾರೆ. ಶ್ರೀ ಗುರು ಗೋವಿಂದ ಸಿಂಗ್ ಮತ್ತು ಮಾತಾ ಸಾಹಿಬ್ ಕೌರ್ ಅವರ ಕಾಲಾತೀತ ಬೋಧನೆಗಳು ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಯಾತ್ರೆ ಮುನ್ನಡೆಸಲಿದೆ ಎಂದು ಮೋದಿ ಅವರು ಹೇಳಿದ್ದಾರೆ.

ಶ್ರೀ ಗುರು ಗೋಬಿಂದ್ ಸಿಂಗ್ ಮತ್ತು ಮಾತಾ ಸಾಹಿಬ್ ಕೌರ್ ಅವರ ಅತ್ಯಂತ ಪುಣ್ಯಮಯ ಮತ್ತು ಅಮೂಲ್ಯವಾದ ಪವಿತ್ರ 'ಜೋರೆ ಸಾಹಿಬ್' ನ ಸುರಕ್ಷತೆ ಮತ್ತು ಸೂಕ್ತ ಪ್ರದರ್ಶನಕ್ಕೆ ಸಂಬಂಧಿಸಿದ ಶಿಫಾರಸ್ಸು ಸಲ್ಲಿಸಿರುವ ಸಿಖ್ ನಿಯೋಗದ ಗಣ್ಯರು ಮತ್ತು ಕೌಶಲ್ಯಯುತ ಸದಸ್ಯರಿಗೆ ಪ್ರಧಾನಮಂತ್ರಿ ಸ್ವಾಗತ

September 19th, 04:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಖ್ ನಿಯೋಗದ ಗಣ್ಯರು ಮತ್ತು ಕೌಶಲ್ಯಯುತ ಸದಸ್ಯರನ್ನು ಬರಮಾಡಿಕೊಂಡರು. ಅವರು ಶ್ರೀ ಗುರು ಗೋವಿಂದ ಸಿಂಗ್ ಮತ್ತು ಮಾತಾ ಸಾಹಿಬ್ ಕೌರ್ ಅವರ ಅತ್ಯಂತ ಪುಣ್ಯ ಮತ್ತು ಅಮೂಲ್ಯವಾದ ಪವಿತ್ರ 'ಜೋರ್ ಸಾಹಿಬ್' ನ ಸುರಕ್ಷತೆ ಮತ್ತು ಸೂಕ್ತ ಪ್ರದರ್ಶನಕ್ಕೆ ಸಂಬಂಧಿಸಿದಂತೆ ತಮ್ಮ ಶಿಫಾರಸುಗಳನ್ನು ಸಲ್ಲಿಸಿದರು. ಸಿಖ್ ಇತಿಹಾಸದ ಭವ್ಯ ಭಾಗವಾಗಿರುವ 'ಜೋರ್ ಸಾಹಿಬ್' ಆಧ್ಯಾತ್ಮಿಕವಾಗಿ ಪ್ರಮುಖವಾಗಿರುವಷ್ಟೇ ನಮ್ಮ ರಾಷ್ಟ್ರದ ಸಾಂಸ್ಕೃತಿಕ ಚೈತನ್ಯದ ಅಂಗವಾಗಿರುವ ಪವಿತ್ರ ಅವಶೇಷಗಳು ಸಹ ಮಹತ್ವದ್ದಾಗಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಶ್ರೀ ಗುರು ಗೋವಿಂದ ಸಿಂಗ್ ಅವರು ತೋರಿದ ಶೌರ್ಯ, ಸದಾಚಾರ, ನ್ಯಾಯ ಮತ್ತು ಸಾಮಾಜಿಕ ಸಾಮರಸ್ಯದ ಮಾರ್ಗವನ್ನು ಅನುಸರಿಸಲು ಪವಿತ್ರ ಅವಶೇಷಗಳು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತವೆ ಎಂದು ಶ್ರೀ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಗುಜರಾತ್‌ನ ದಾಹೋದ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 26th, 11:45 am

ಗುಜರಾತ್‌ನ ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ, ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್, ಗುಜರಾತ್ ಸಚಿವ ಸಂಪುಟದ ನನ್ನ ಎಲ್ಲಾ ಸಹೋದ್ಯೋಗಿಗಳೆ, ಸಂಸತ್ ಸದಸ್ಯರೆ, ವಿಧಾನಸಭೆ ಸದಸ್ಯರೆ, ಇತರೆ ಗಣ್ಯರೆ, ದಾಹೋದ್‌ನ ನನ್ನ ಪ್ರೀತಿಯ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ನ ದಾಹೋಡ್ ನಲ್ಲಿ 24,000 ಕೋಟಿ ರೂ.ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು ಮತ್ತು ಸಮರ್ಪಿಸಿದರು

May 26th, 11:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್ ನ ದಾಹೋಡ್ ನಲ್ಲಿ 24,000 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು, ಉದ್ಘಾಟಿಸಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಮೇ 26 ವಿಶೇಷ ಮಹತ್ವವನ್ನು ಹೊಂದಿದೆ, ಏಕೆಂದರೆ ಇದು 2014 ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ದಿನವಾಗಿದೆ. ರಾಷ್ಟ್ರವನ್ನು ಮುನ್ನಡೆಸುವ ಜವಾಬ್ದಾರಿಯನ್ನು ತಮಗೆ ವಹಿಸಿದ ಗುಜರಾತ್ ಜನತೆಯ ಅಚಲ ಬೆಂಬಲ ಮತ್ತು ಆಶೀರ್ವಾದವನ್ನು ಅವರು ಒಪ್ಪಿಕೊಂಡರು. ಈ ನಂಬಿಕೆ ಮತ್ತು ಪ್ರೋತ್ಸಾಹವು ಹಗಲು ರಾತ್ರಿ ದೇಶ ಸೇವೆ ಮಾಡುವ ಅವರ ಸಮರ್ಪಣೆಗೆ ಉತ್ತೇಜನ ನೀಡಿದೆ ಎಂದು ಪ್ರಧಾನಿ ಒತ್ತಿ ಹೇಳಿದರು. ಹಲವು ವರ್ಷಗಳಿಂದ, ಭಾರತವು ಅಭೂತಪೂರ್ವ ಮತ್ತು ಊಹಿಸಲಾಗದ ನಿರ್ಧಾರಗಳನ್ನು ತೆಗೆದುಕೊಂಡಿದೆ, ದಶಕಗಳಷ್ಟು ಹಳೆಯ ನಿರ್ಬಂಧಗಳಿಂದ ಮುಕ್ತವಾಗಿದೆ ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಸಾಧಿಸಿದೆ. ಇಂದು, ರಾಷ್ಟ್ರವು ಹತಾಶೆ ಮತ್ತು ಕತ್ತಲೆಯ ಯುಗದಿಂದ ಆತ್ಮವಿಶ್ವಾಸ ಮತ್ತು ಆಶಾವಾದದ ಹೊಸ ಯುಗಕ್ಕೆ ಹೊರಹೊಮ್ಮಿದೆ, ಎಂದು ಅವರು ಹೇಳಿದರು.

ಆದಂಪುರ ವಾಯುನೆಲೆಯಲ್ಲಿ ವೀರ ವಾಯುಪಡೆ ಯೋಧರು ಮತ್ತು ಸಮರ ವೀರರೊಂದಿಗೆ ಪ್ರಧಾನಮಂತ್ರಿ ಸಂವಾದ

May 13th, 03:45 pm

ಈ ಘೋಷಣೆಯ ಶಕ್ತಿಯನ್ನು ಜಗತ್ತು ಇದೀಗವಷ್ಟೇ ನೋಡಿದೆ. ಭಾರತ್ ಮಾತಾ ಕಿ ಜೈ ಎಂಬುದು ಕೇವಲ ಘೋಷಣೆಯಲ್ಲ, ಭಾರತ ಮಾತೆಯ ಗೌರವ ಮತ್ತು ಘನತೆಗಾಗಿ ತನ್ನ ಪ್ರಾಣವನ್ನೇ ಪಣಕ್ಕಿಡುವ ದೇಶದ ಪ್ರತಿಯೊಬ್ಬ ಸೈನಿಕನ ಪ್ರಮಾಣವಚನ ಇದಾಗಿದೆ. ದೇಶಕ್ಕಾಗಿ ಬದುಕಲು ಬಯಸುವ, ಏನನ್ನಾದರೂ ಸಾಧಿಸಲು ಬಯಸುವ ದೇಶದ ಪ್ರತಿಯೊಬ್ಬ ನಾಗರಿಕನ ಧ್ವನಿ ಇದಾಗಿದೆ. ಭಾರತ್ ಮಾತಾ ಕಿ ಜೈ ಎಂಬುದು ಯುದ್ಧಭೂಮಿಯಲ್ಲಿ ಮತ್ತು ಕಾರ್ಯಾಚರಣೆಯಲ್ಲಿ ಪ್ರತಿಧ್ವನಿಸುತ್ತದೆ. ಭಾರತದ ಸೈನಿಕರು ಭಾರತ್ ಮಾತಾ ಕಿ ಜೈ ಎಂದು ಜಪಿಸಿದಾಗ, ಶತ್ರುಗಳ ಹೃದಯ ನಡುಗುತ್ತದೆ. ನಮ್ಮ ಡ್ರೋನ್‌ಗಳು ಶತ್ರುಗಳ ಕೋಟೆಯ ಗೋಡೆಗಳನ್ನು ಉರುಳಿಸಿದಾಗ, ನಮ್ಮ ಕ್ಷಿಪಣಿಗಳು ಭಾರಿ ಶಬ್ದದೊಂದಿಗೆ ಗುರಿ ತಲುಪಿದಾಗ, ಶತ್ರು ಕೇಳುತ್ತಾನೆ - ಭಾರತ್ ಮಾತಾ ಕಿ ಜೈ! ಘೋಷಣೆಯನ್ನ. ರಾತ್ರಿಯ ಕಗ್ಗತ್ತಲೆಯಲ್ಲೂ ನಾವು ಸೂರ್ಯನನ್ನು ಬೆಳಗಿದಾಗ, ಶತ್ರು ನೋಡುತ್ತಾನೆ - ಭಾರತ್ ಮಾತಾ ಕಿ ಜೈ! ನಮ್ಮ ಪಡೆಗಳು ಪರಮಾಣು ಬೆದರಿಕೆಯನ್ನು ಹುಸಿಗೊಳಿಸಿದಾಗ, ಆಕಾಶದಿಂದ ಭೂಗತ ಲೋಕಕ್ಕೆ ಒಂದೇ ಒಂದು ವಿಷಯ ಪ್ರತಿಧ್ವನಿಸುತ್ತದೆ, ಅದೇ - ಭಾರತ್ ಮಾತಾ ಕಿ ಜೈ!

ಆದಂಪುರ ವಾಯುಪಡೆ ನಿಲ್ದಾಣದಲ್ಲಿ ಧೈರ್ಯಶಾಲಿ ವಾಯುಪಡೆ ಯೋಧರು ಮತ್ತು ಸೈನಿಕರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

May 13th, 03:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆದಂಪುರದ ವಾಯುಪಡೆ ನಿಲ್ದಾಣದಲ್ಲಿಂದು ವೀರ ವಾಯುಪಡೆ ಯೋಧರು ಮತ್ತು ಸೈನಿಕರನ್ನು ಭೇಟಿ ಮಾಡಿ ಸಂವಾದ ನಡೆಸಿದರು. ಅವರ ಜತೆ ಮಾತನಾಡಿದ ಅವರು, 'ಭಾರತ್ ಮಾತಾ ಕಿ ಜೈ' ಘೋಷಣೆಯ ಶಕ್ತಿಯನ್ನು ಜಗತ್ತು ಇದೀಗಷ್ಟೇ ಕಂಡಿದೆ. ಇದು ಕೇವಲ ಮಂತ್ರವಲ್ಲ, ಭಾರತ ಮಾತೆಯ ಘನತೆ ಎತ್ತಿಹಿಡಿಯಲು ತಮ್ಮ ಪ್ರಾಣವನ್ನೇ ಪಣಕ್ಕಿಡುವ ಪ್ರತಿಯೊಬ್ಬ ಸೈನಿಕನು ತೆಗೆದುಕೊಳ್ಳುವ ಗಂಭೀರ ಪ್ರಮಾಣವಚನ ಇದಾಗಿದೆ. ಈ ಘೋಷಣೆಯು ರಾಷ್ಟ್ರಕ್ಕಾಗಿ ಬದುಕಲು ಮತ್ತು ಅರ್ಥಪೂರ್ಣ ಕೊಡುಗೆ ನೀಡಲು ಬಯಸುವ ಪ್ರತಿಯೊಬ್ಬ ನಾಗರಿಕನ ಧ್ವನಿಯಾಗಿದೆ. 'ಭಾರತ್ ಮಾತಾ ಕಿ ಜೈ' ಯುದ್ಧಭೂಮಿಯಲ್ಲಿ ಮತ್ತು ನಿರ್ಣಾಯಕ ಕಾರ್ಯಾಚರಣೆಗಳಲ್ಲಿ ಪ್ರತಿಧ್ವನಿಸುತ್ತದೆ. ಭಾರತೀಯ ಸೈನಿಕರು 'ಭಾರತ್ ಮಾತಾ ಕಿ ಜೈ' ಎಂದು ಜಪಿಸಿದಾಗ, ಅದು ಶತ್ರುಗಳ ಬೆನ್ನುಮೂಳೆಯಲ್ಲಿ ನಡುಕ ಉಂಟುಮಾಡುತ್ತದೆ. ಅವರು ಭಾರತದ ಸೇನಾ ಶಕ್ತಿಯನ್ನು ಶ್ಲಾಘಿಸಿದ ಅವರು, ಭಾರತೀಯ ಡ್ರೋನ್‌ಗಳು ಶತ್ರುಗಳ ಕೋಟೆಗಳನ್ನು ಕೆಡವಿದಾಗ ಮತ್ತು ಕ್ಷಿಪಣಿಗಳು ನಿಖರವಾಗಿ ದಾಳಿ ಮಾಡಿದಾಗ, ಶತ್ರುವು 'ಭಾರತ್ ಮಾತಾ ಕಿ ಜೈ' ಎಂಬ ಒಂದೇ ಒಂದು ಪದ ಕೇಳುತ್ತಾನೆ. ಅತ್ಯಂತ ಕತ್ತಲೆಯ ರಾತ್ರಿಗಳಲ್ಲೂ ಭಾರತವು ಆಕಾಶವನ್ನು ಬೆಳಗಿಸುವ ಸಾಮರ್ಥ್ಯ ಹೊಂದಿದೆ, ಶತ್ರುಗಳು ರಾಷ್ಟ್ರದ ಅದಮ್ಯ ಚೈತನ್ಯವನ್ನು ವೀಕ್ಷಿಸುವಂತೆ ಮಾಡಿದೆ. ಭಾರತದ ಪಡೆಗಳು ಪರಮಾಣು ಬೆದರಿಕೆಯನ್ನು ಕಳಚಿದಾಗ, 'ಭಾರತ್ ಮಾತಾ ಕಿ ಜೈ' ಎಂಬ ಸಂದೇಶವು ಆಕಾಶ ಮತ್ತು ಆಳದಲ್ಲಿ ಪ್ರತಿಧ್ವನಿಸಿದೆ ಎಂದು ಅವರು ಘೋಷಿಸಿದರು.

ಹರಿಯಾಣದ ಯಮುನಾ ನಗರದಲ್ಲಿ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ/ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ

April 14th, 12:00 pm

ಹರಿಯಾಣದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಯಾಬ್ ಸಿಂಗ್ ಸೈನಿ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜೀ, ರಾವ್ ಇಂದರ್ಜಿತ್ ಸಿಂಗ್ ಜೀ ಮತ್ತು ಕ್ರಿಶನ್ ಪಾಲ್ ಜೀ, ಹರಿಯಾಣ ಸರ್ಕಾರದ ಸಚಿವರು, ಸಂಸತ್ತು ಮತ್ತು ವಿಧಾನಸಭೆಯ ಸದಸ್ಯರು, ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ. ಹರಿಯಾಣದ ನನ್ನ ಸಹೋದರ ಸಹೋದರಿಯರಿಗೆ ಮೋದಿಯ ನಮಸ್ಕಾರಗಳು.

ಹರಿಯಾಣದ ಯಮುನಾ ನಗರದಲ್ಲಿ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟಿಸಿದರು ಹಾಗು ಶಂಕುಸ್ಥಾಪನೆ ನೆರವೇರಿಸಿದರು

April 14th, 11:54 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹರಿಯಾಣದ ಯಮುನಾ ನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹರಿಯಾಣದ ಜನತೆಗೆ ಶುಭಾಶಯಗಳನ್ನು ತಿಳಿಸಿದ ಅವರು, ಹರಿಯಾಣದ ಪವಿತ್ರ ಭೂಮಿಗೆ ಗೌರವ ನಮನ ಸಲ್ಲಿಸಿದರು, ಇದು ತಾಯಿ ಸರಸ್ವತಿಯ ಮೂಲ, ಮಂತ್ರ ದೇವಿಯ ವಾಸಸ್ಥಾನ, ಪಂಚಮುಖಿ ಹನುಮಾನ್ ಅವರ ನೆಲೆ ಮತ್ತು ಪವಿತ್ರ ಕಪಾಲ್ಮೋಚನ್ ಸಾಹಿಬ್ ಆಶೀರ್ವಾದ ಇರುವ ಭೂಮಿ ಎಂದು ಅವರು ಬಣ್ಣಿಸಿದರು. ಹರಿಯಾಣವು ಸಂಸ್ಕೃತಿ, ಭಕ್ತಿ ಮತ್ತು ಸಮರ್ಪಣೆಯ ಸಂಗಮವಾಗಿದೆ ಎಂದು ಅವರು ವಿವರಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯಂದು ಅವರು ಎಲ್ಲಾ ನಾಗರಿಕರಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು, ಬಾಬಾ ಸಾಹೇಬ್ ಅವರ ಚಿಂತನೆ ಮತ್ತು ಸ್ಫೂರ್ತಿಯನ್ನು ಎತ್ತಿ ತೋರಿಸಿದರು, ಇದು ಭಾರತದ ಅಭಿವೃದ್ಧಿಯ ಪ್ರಯಾಣಕ್ಕೆ ಮಾರ್ಗದರ್ಶನ ನೀಡುತ್ತಲೇ ಇದೆ ಎಂದರು.

ವಿವಿಧ ರೈಲ್ವೆ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

January 06th, 01:00 pm

ತೆಲಂಗಾಣ ರಾಜ್ಯಪಾಲರಾದ ಶ್ರೀ ಜಿಷ್ಣು ದೇವ್ ವರ್ಮಾ ಜೀ, ಒಡಿಶಾದ ರಾಜ್ಯಪಾಲರಾದ ಶ್ರೀ ಹರಿ ಬಾಬು ಜೀ, ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ ಜೀ, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಶ್ರೀ ಒಮರ್ ಅಬ್ದುಲ್ಲಾ ಜೀ, ತೆಲಂಗಾಣದ ಮುಖ್ಯಮಂತ್ರಿ ಶ್ರೀ ರೇವಂತ್ ರೆಡ್ಡಿ ಜೀ, ಒಡಿಶಾ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಜಿ ಜೀ, ನನ್ನ ಸಂಪುಟ ಸಹೋದ್ಯೋಗಿಗಳು-ಶ್ರೀ ಅಶ್ವಿನಿ ವೈಷ್ಣವ್ ಜೀ, ಶ್ರೀ ಜಿ ಕಿಶನ್ ರೆಡ್ಡಿ ಜೀ, ಡಾ ಜಿತೇಂದ್ರ ಸಿಂಗ್ ಜೀ, ಶ್ರೀ ವಿ ಸೋಮಯ್ಯ ಜೀ, ಶ್ರೀ ರವನೀತ್ ಸಿಂಗ್ ಬಿಟ್ಟು ಜೀ, ಶ್ರೀ ಬಂಡಿ ಸಂಜಯ್ ಕುಮಾರ್ ಜೀ, ಇತರ ಸಚಿವರು, ಸಂಸತ್ ಸದಸ್ಯರು, ವಿಧಾನಸಭೆ ಸದಸ್ಯರು, ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

January 06th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹೊಸ ಜಮ್ಮು ರೈಲ್ವೆ ವಿಭಾಗವನ್ನು ಪ್ರಧಾನಿ ಉದ್ಘಾಟಿಸಿದರು. ಅವರು ಪೂರ್ವ ಕರಾವಳಿ ರೈಲ್ವೆಯ ರಾಯಗಡ ರೈಲ್ವೆ ವಿಭಾಗ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ತೆಲಂಗಾಣದ ಚಾರ್ಲಪಲ್ಲಿ ಹೊಸ ಟರ್ಮಿನಲ್ ನಿಲ್ದಾಣವನ್ನು ಉದ್ಘಾಟಿಸಿದರು.

ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ

January 06th, 09:33 am

ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ ಮತ್ತು ಗೋಬಿಂದ್ ಸಿಂಗ್ ಅವರ ಚಿಂತನೆಗಳು ಪ್ರಗತಿಪರ, ಸಮೃದ್ಧ ಮತ್ತು ಕರುಣಾಮಯ ಸಮಾಜವನ್ನು ನಿರ್ಮಿಸಲು ಪ್ರೇರಣೆ ನೀಡುತ್ತವೆ ಎಂದು ಹೇಳಿದ್ದಾರೆ.