Congress wants to push Assam back into instability and infiltration: PM Modi in Guwahati

February 14th, 03:00 pm

PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.

PM Modi addresses a grand public rally in Guwahati, Assam

February 14th, 02:30 pm

PM Modi addressed a massive public rally in Guwahati, where he said the recent Union Budget has further strengthened the vision of the BJP-NDA for the development of Assam and the North East. Calling the North East “Ashtalakshmi,” he said the region was ignored for decades by Congress but is now being served with dedication.

Prime Minister Narendra Modi to visit Assam

February 13th, 11:38 am

PM Modi will visit Assam on 14th February 2026. He will land at the Emergency Landing Facility (ELF) on Moran Bypass in Dibrugarh and witness an aerial display of fighters, transports and helicopters. He will also inaugurate the Rs 3,030 crore Kumar Bhaskar Varma Setu, an extradosed bridge across River Brahmaputra. Thereafter, the PM will launch various projects in Guwahati, giving a significant boost to development in the North-Eastern Region.

Every small step will build Viksit Bharat @ 2047: PM Modi to Students at Pariksha Pe Charcha

February 09th, 10:30 am

In continuation of the 9th edition of Pariksha Pe Charcha (PPC) 2026, PM Modi interacted with students from multiple locations, including Coimbatore, Raipur, Devmogra and Guwahati. The discussion covered perse topics such as startups, sports, Vocal for Local, Wed in India, discipline, AI and tribal communities, making it a memorable experience. He urged students to observe situations, accept challenges and rely on their inner strength.

PM Modi interacts with students from multiple locations in the second episode of Pariksha Pe Charcha 2026

February 09th, 10:00 am

In continuation of the 9th edition of Pariksha Pe Charcha (PPC) 2026, PM Modi interacted with students from multiple locations, including Coimbatore, Raipur, Devmogra and Guwahati. The discussion covered perse topics such as startups, sports, Vocal for Local, Wed in India, discipline, AI and tribal communities, making it a memorable experience. He urged students to observe situations, accept challenges and rely on their inner strength.

ದೇವಮೋಗ್ರ, ಕೊಯಮತ್ತೂರು, ರಾಯ್‌ಪುರ, ಗುವಾಹಟಿ ಮತ್ತು ದೆಹಲಿಯ 7, ಲೋಕ ಕಲ್ಯಾಣ ಮಾರ್ಗದಲ್ಲಿ ಪರೀಕ್ಷಾ ಯೋಧರೊಂದಿಗೆ ನಡೆದ ವಿಶೇಷ “ಪರೀಕ್ಷಾ ಪೇ ಚರ್ಚಾ” ಸಂಚಿಕೆಯನ್ನು ವೀಕ್ಷಿಸಲು ಪ್ರಧಾನಮಂತ್ರಿ ಅವರು ಎಲ್ಲರಿಗೂ ಕರೆ ನೀಡಿದ್ದಾರೆ

February 03rd, 04:45 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫೆಬ್ರವರಿ 6, 2026 ರಂದು ಭಾರತದ ಯುವಕರ ಈ ಆಕರ್ಷಕ ಸಂಭಾಷಣೆಗಳು ಮತ್ತು ಸಾಮೂಹಿಕ ಮನೋಭಾವವನ್ನು ವೀಕ್ಷಿಸಲು ವಿಶೇಷ “ಪರೀಕ್ಷಾ ಪೇ ಚರ್ಚಾ” ಸಂಚಿಕೆಗೆ ನಾಗರಿಕರನ್ನು ಇಂದು ಆಹ್ವಾನಿಸಿದ್ದಾರೆ.

ಗುವಾಹತಿಯಲ್ಲಿ “ಬಾಗುರೂಂಬಾ ದೊಹೊ” ಸಾಂಪ್ರದಾಯಿಕ ಬೋಡೊ ಸಾಂಸ್ಕೃತಿಕ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 17th, 06:30 pm

ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರೇ, ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರೇ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಸರ್ಬಾನಂದ ಸೋನೋವಾಲ್ ಅವರೇ, ಪಬಿತ್ರ ಮಾರ್ಗರಿಟಾ ಅವರೇ, ಅಸ್ಸಾಂ ವಿಧಾನಸಭೆ ಸ್ಪೀಕರ್ ಶ್ರೀ ಬಿಸ್ವಾಜಿತ್ ಡೈಮರಿ ಅವರೇ, ಬೋಡೊಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಹಗ್ರಾಮ ಮೊಹಿಲರಿ ಅವರೇ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಗೌರವಾನ್ವಿತ ನಾಗರಿಕ ಸಹೋದರ ಸಹೋದರಿಯರೆ ಮತ್ತು ಅಸ್ಸಾಂನ ನನ್ನ ಸಹೋದರ ಸಹೋದರಿಯರೆ,

ಅಸ್ಸಾಂನ ಗುವಾಹಟಿಯಲ್ಲಿ ನಡೆದ "ಬಾಗುರೂಂಬಾ ದೊಹೊ," ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು

January 17th, 06:00 pm

ಗುವಾಹಟಿಯ ಸರುಸಜೈ ಕ್ರೀಡಾಂಗಣದಲ್ಲಿ ಬೋಡೋ ಸಮುದಾಯದ ಶ್ರೀಮಂತ ಪರಂಪರೆಯನ್ನು ಆಚರಿಸುವ ಐತಿಹಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾದ ಬಾಗುರೂಂಬಾ ದೊಹೊ 2026 ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಸ್ಸಾಂನ ಸಂಸ್ಕೃತಿಯನ್ನು ವೀಕ್ಷಿಸುವುದು ಮತ್ತು ಬೋಡೋ ಸಮುದಾಯದ ಸಂಪ್ರದಾಯಗಳನ್ನು ಸೂಕ್ಷ್ಮವಾಗಿ ಗಮನಿಸುವುದು ತಮ್ಮ ಸೌಭಾಗ್ಯ ಎಂದು ಹೇಳಿದರು. ಈ ಹಿಂದಿನ ಯಾವುದೇ ಪ್ರಧಾನಮಂತ್ರಿಗಳು, ಅಸ್ಸಾಂಗೆ ತಾವು ಭೇಟಿ ನೀಡಿದಷ್ಟು ಬಾರಿ ಭೇಟಿ ನೀಡಲಿಲ್ಲ ಎಂದು ಹೇಳಿದ ಶ್ರೀ ಮೋದಿ ಅವರು, ಅಸ್ಸಾಂನ ಕಲೆ ಮತ್ತು ಸಂಸ್ಕೃತಿ ದೊಡ್ಡ ವೇದಿಕೆಯನ್ನು ಪಡೆಯಬೇಕು ಮತ್ತು ಭವ್ಯ ಆಚರಣೆಗಳ ಮೂಲಕ ರಾಷ್ಟ್ರ ಮತ್ತು ಪ್ರಪಂಚದಾದ್ಯಂತ ಮನ್ನಣೆ ಪಡೆಯಬೇಕು ಎಂಬ ತಮ್ಮ ನಿರಂತರ ಆಶಯವನ್ನು ಒತ್ತಿ ಹೇಳಿದರು. ದೊಡ್ಡ ಪ್ರಮಾಣದ ಬಿಹು ಉತ್ಸವಗಳು, ಜುಮೋಯಿರ್ ಬಿನೋಂದಿನಿಯ ಅಭಿವ್ಯಕ್ತಿ, ಒಂದೂವರೆ ವರ್ಷಗಳ ಹಿಂದೆ ನವದೆಹಲಿಯಲ್ಲಿ ನಡೆದ ಭವ್ಯ ಬೋಡೋ ಮಹೋತ್ಸವ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಈ ದಿಕ್ಕಿನಲ್ಲಿ ನಿರಂತರ ಪ್ರಯತ್ನಗಳು ನಡೆದಿವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಅಸ್ಸಾಂನ ಕಲೆ ಮತ್ತು ಸಂಸ್ಕೃತಿಯ ವಿಶಿಷ್ಟತೆ , ವೈವಿಧ್ಯತೆಗಳ ಆನಂದವನ್ನು ಅನುಭವಿಸುವ ಅವಕಾಶವನ್ನು ತಾವು ಎಂದಿಗೂ ಕಳೆದುಕೊಳ್ಳುವುದಿಲ್ಲ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಮತ್ತೊಮ್ಮೆ, ಬಾಗುರುಂಬಾ ಉತ್ಸವವನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದರು, ಇದು ಅನನ್ಯ ಬೋಡೋ ಗುರುತಿನ ವೈವಿಧ್ಯಮಯ ಆಚರಣೆ ಮತ್ತು ಅಸ್ಸಾಂನ ಪರಂಪರೆಗೆ ಗೌರವ ತುಂಬುತ್ತದೆ ಎಂದು ಅವರು ಬಣ್ಣಿಸಿದರು. ಈ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ, ವಿಶೇಷವಾಗಿ ಕಲಾವಿದರಿಗೆ ಶ್ರೀ ಮೋದಿ ಅವರು ತಮ್ಮ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ವ್ಯಕ್ತಪಡಿಸಿದರು.

ಜನವರಿ 17-18 ರಂದು ಪಶ್ಚಿಮ ಬಂಗಾಳಕ್ಕೆ ಪ್ರಧಾನಮಂತ್ರಿ ಭೇಟಿ

January 16th, 01:55 pm

ಜನವರಿ 17 ರಂದು ಮಧ್ಯಾಹ್ನ 12:45 ರ ಸುಮಾರಿಗೆ, ಪ್ರಧಾನಮಂತ್ರಿ ಅವರು ಮಾಲ್ಡಾಕ್ಕೆ ಭೇಟಿ ನೀಡಿ ಮಾಲ್ಡಾ ಪಟ್ಟಣ ರೈಲು ನಿಲ್ದಾಣದಲ್ಲಿ ಹೌರಾ ಮತ್ತು ಗುವಾಹಟಿ (ಕಾಮಾಖ್ಯ) ನಡುವಿನ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ನಂತರ, ಮಧ್ಯಾಹ್ನ 1:45 ರ ಸುಮಾರಿಗೆ, ಪ್ರಧಾನ ಮಂತ್ರಿ ಅವರು ಮಾಲ್ಡಾದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ₹3,250 ಕೋಟಿಗೂ ಹೆಚ್ಚು ಮೌಲ್ಯದ ಬಹು ರೈಲು ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಅಸ್ಸಾಂನ ನಮ್ರಪ್‌ನಲ್ಲಿ ಯೂರಿಯಾ ಉತ್ಪಾದನಾ ಸ್ಥಾವರದ ಭೂಮಿಪೂಜೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 21st, 04:25 pm

ಸೌಲುಂಗ್ ಸುಕಫಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ವೀರರ ಈ ಭೂಮಿ, ಭಿಂಬರ್ ದೇವೂರಿ, ಹುತಾತ್ಮ ಕುಸಲ್ ಕುವರ್, ಮೋರನ್ ರಾಜಾ ಬೊಡೌಸಾ, ಮಾಲತಿ ಮೇಮ್, ಇಂದಿರಾ ಮಿರಿ, ಸ್ವರ್ಗದೇವ್ ಸರ್ಬಾನಂದ ಸಿಂಗ್ ಮತ್ತು ಯೋಧ ಮಹಿಳೆ ಸತಿ ಸಾಧ್ನಿ ಅವರ ಈ ತಪೋಭೂಮಿ, ಉಜಾನಿ ಅಸ್ಸಾಂನ ಈ ಪುಣ್ಯ ಭೂಮಿಗೆ ನಾನು ಭಕ್ತಿಯಿಂದ ನಮಸ್ಕರಿಸುತ್ತೇನೆ.

ಅಸ್ಸಾಂನ ನಮ್ರೂಪ್‌ನಲ್ಲಿ ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

December 21st, 12:00 pm

ಅಸ್ಸಾಂನ ದಿಬ್ರುಗಢದ ನಮ್ರೂಪ್‌ನಲ್ಲಿ ಇಂದು ಅಸ್ಸಾಂ ವ್ಯಾಲಿ ಫರ್ಟಿಲೈಜರ್ ಮತ್ತು ಕೆಮಿಕಲ್ ಕಂಪನಿ ಲಿಮಿಟೆಡ್‌ನ ಅಮೋನಿಯಾ-ಯೂರಿಯಾ ರಸಗೊಬ್ಬರ ಯೋಜನೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇದು ಚೌಲುಂಗ್ ಸುಖಪಾ ಮತ್ತು ಮಹಾವೀರ್ ಲಚಿತ್ ಬೋರ್ಫುಕನ್ ಅವರಂತಹ ಮಹಾನ್ ವೀರರ ಭೂಮಿ ಎಂದು ಹೇಳಿದರು. ಭಿಂಬರ್ ದೇವೂರಿ, ಶಹೀದ್ ಕುಶಾಲ್ ಕುನ್ವರ್, ಮೋರನ್ ರಾಜ ಬೊಡೌಸಾ, ಮಾಲತಿ ಮೇಮ್, ಇಂದಿರಾ ಮಿರಿ, ಸ್ವರ್ಗದೇವ್ ಸರ್ಬಾನಂದ ಸಿಂಗ್ ಮತ್ತು ಧೀರ ಸತಿ ಸಾಧನಿ ಅವರ ಕೊಡುಗೆಗಳನ್ನು ಅವರು ಎತ್ತಿ ತೋರಿಸಿದರು. ಶೌರ್ಯ ಮತ್ತು ತ್ಯಾಗದ ಈ ಮಹಾನ್ ಭೂಮಿಯಾದ ಉಜಾನಿ ಅಸ್ಸಾಂನ ಪವಿತ್ರ ಮಣ್ಣಿಗೆ ನಾನು ಶಿರಬಾಗಿ ನಮಸ್ಕರಿಸುತ್ತೇನೆ ಎಂದು ಪ್ರಧಾನಮಂತ್ರಿ ಹೇಳಿದರು.

ಅಸ್ಸಾಂನ ಗುವಾಹತಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

December 20th, 03:20 pm

ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಜಿ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳೆ, ನಮ್ಮ ಮಾಜಿ ಮುಖ್ಯಮಂತ್ರಿ ಸರ್ಬಾನಂದ ಸೋನೋವಾಲ್ ಜಿ, ರಾಮ್ ಮೋಹನ್ ನಾಯ್ಡು ಜಿ, ಮುರಳೀಧರ್ ಮೊಹೋಲ್ ಜಿ, ಪಬಿತ್ರ ಮಾರ್ಗರಿಟಾ ಜಿ, ಅಸ್ಸಾಂ ಸರ್ಕಾರದ ಸಚಿವರೆ, ಇತರ ಗಣ್ಯರೆ, ಸಹೋದರ ಸಹೋದರಿಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿರುವ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು

December 20th, 03:10 pm

ಅಸ್ಸಾಂನ ಸಂಪರ್ಕ, ಆರ್ಥಿಕ ವಿಸ್ತರಣೆ ಮತ್ತು ಜಾಗತಿಕ ತೊಡಗಿಸಿಕೊಳ್ಳುವಿಕೆಯಲ್ಲಿ ಪರಿವರ್ತನಾತ್ಮಕ ಹೆಜ್ಜೆ ಗುರುತನ್ನು ಮೂಡಿಸುವಂತೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುವಾಹಟಿಯಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಇಂದಿನ ದಿನ ಅಸ್ಸಾಂ ಮತ್ತು ಈಶಾನ್ಯದ ಅಭಿವೃದ್ಧಿ ಹಾಗು ಪ್ರಗತಿಯ ಹಬ್ಬವಾಗಿದೆ ಎಂದು ಹೇಳಿದರು. ಪ್ರಗತಿಯ ಬೆಳಕು ಜನರನ್ನು ತಲುಪಿದಾಗ, ಜೀವನದ ಪ್ರತಿಯೊಂದು ಹಾದಿಯೂ ಹೊಸ ಎತ್ತರವನ್ನು ಮುಟ್ಟಲು ಪ್ರಾರಂಭಿಸುತ್ತದೆ ಎಂದು ಅವರು ತಿಳಿಸಿದರು. ಅಸ್ಸಾಂ ನೆಲದೊಂದಿಗಿನ ತಮ್ಮ ಆಳವಾದ ಬಾಂಧವ್ಯ, ಅದರ ಜನರ ಪ್ರೀತಿ ಮತ್ತು ವಾತ್ಸಲ್ಯ, ಮತ್ತು ವಿಶೇಷವಾಗಿ ಅಸ್ಸಾಂ ಮತ್ತು ಈಶಾನ್ಯದ ತಾಯಂದಿರು ಮತ್ತು ಸಹೋದರಿಯರ ಹೃದಯಸ್ಪರ್ಶಿ ಭಾವನೆ ಮತ್ತು ಆತ್ಮೀಯತೆ ನಿರಂತರವಾಗಿ ತಮ್ಮನ್ನು ಪ್ರೇರೇಪಿಸುತ್ತದೆ ಮತ್ತು ಪ್ರದೇಶದ ಅಭಿವೃದ್ಧಿಗಾಗಿ ಸಾಮೂಹಿಕ ಸಂಕಲ್ಪವನ್ನು ಬಲಪಡಿಸುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಇಂದು ಮತ್ತೊಮ್ಮೆ ಅಸ್ಸಾಂನ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯವನ್ನು ಸೇರಿಸಲಾಗುತ್ತಿದೆ ಎಂದು ಅವರು ತಿಳಿಸಿದರು ದರು. ಭಾರತ ರತ್ನ ಭೂಪೇನ್ ಹಜಾರಿಕಾ ಅವರ ಸಾಲುಗಳನ್ನು ಉಲ್ಲೇಖಿಸಿದ, ಶ್ರೀ ಮೋದಿ ಅವರು ಇದರರ್ಥ ಪ್ರಬಲ ಬ್ರಹ್ಮಪುತ್ರ ನದಿಯ ದಡಗಳು ಬೆಳಗುತ್ತವೆ, ಕತ್ತಲೆಯ ಪ್ರತಿಯೊಂದು ಗೋಡೆ ಮುರಿಯುತ್ತದೆ ಮತ್ತು ಖಂಡಿತವಾಗಿಯೂ ಇದು ಸಂಭವಿಸುತ್ತದೆ ಯಾಕೆಂದರೆ ಇದು ರಾಷ್ಟ್ರದ ದೃಢ ನಿರ್ಧಾರವಾಗಿದೆ ಮತ್ತು ಕೈಗೊಂಡ ಪ್ರತಿಜ್ಞೆಯಾಗಿದೆ.

ಪ್ರಧಾನಮಂತ್ರಿ ಅವರು ಡಿಸೆಂಬರ್ 20-21ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ

December 19th, 02:29 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 20-21ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 20ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಪ್ರಧಾನಮಂತ್ರಿ ಅವರು ಗುವಾಹಟಿಯನ್ನು ತಲುಪಲಿದ್ದು, ಅಲ್ಲಿ ಲೋಕಪ್ರಿಯ ಗೋಪಿನಾಥ್ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ವೀಕ್ಷಿಸಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ

September 22nd, 11:36 am

ಅರುಣಾಚಲ ಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಕೆ.ಟಿ. ಪರ್ನಾಯಕ್ ಜಿ, ರಾಜ್ಯದ ಜನಪ್ರಿಯ ಮತ್ತು ಕ್ರಿಯಾಶೀಲ ಮುಖ್ಯಮಂತ್ರಿ ಪೇಮಾ ಖಂಡು ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಕಿರಣ್ ರಿಜಿಜು, ರಾಜ್ಯ ಸರ್ಕಾರದ ಸಚಿವರು, ನನ್ನ ಸಹ ಸಂಸದರಾದ ನಬಮ್ ರೆಬಿಯಾ ಜಿ ಮತ್ತು ಟ್ಯಾಪಿರ್ ಗಾವೊ ಜಿ, ಎಲ್ಲಾ ಶಾಸಕರು, ಇತರ ಜನಪ್ರತಿನಿಧಿಗಳೆ ಮತ್ತು ಅರುಣಾಚಲ ಪ್ರದೇಶದ ನನ್ನ ಪ್ರೀತಿಯ ಸಹೋದರ ಸಹೋದರಿಯರೆ,

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಅರುಣಾಚಲಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂ. ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ

September 22nd, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅರುಣಾಚಲ ಪ್ರದೇಶದ ಇಟಾನಗರದಲ್ಲಿ ಸುಮಾರು 5,100 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವಶಕ್ತ ಡೊನ್ಯಿ ಪೊಲೊಗೆ ಗೌರವ ಸಲ್ಲಿಸಿ, ಎಲ್ಲರಿಗೂ ಆಶೀರ್ವಾದ ಮಾಡಬೇಕೆಂದು ಪ್ರಾರ್ಥಿಸಿದರು.

ಅಸ್ಸಾಂನ ದರ್ರಾಂಗ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 14th, 11:30 am

ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ, ಭಾರತ್ ಮಾತಾ ಕಿ ಜೈ! ಅಸ್ಸಾಂನ ಜನಪ್ರಿಯ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಶ್ರೀ ಸರ್ಬಾನಂದ ಸೋನೋವಾಲ್ ಜಿ, ಅಸ್ಸಾಂ ಸರ್ಕಾರದ ಎಲ್ಲಾ ಸಚಿವರು, ಸಂಸತ್ ಸದಸ್ಯರು ಮತ್ತು ಶಾಸಕರು, ಇಲ್ಲಿರುವ ಸಾರ್ವಜನಿಕ ಪ್ರತಿನಿಧಿಗಳೆ, ನಿರಂತರ ಮಳೆಯ ನಡುವೆಯೂ ನಮ್ಮನ್ನು ಆಶೀರ್ವದಿಸಲು ಇಲ್ಲಿಗೆ ಬಂದಿರುವ ನನ್ನ ಪ್ರೀತಿಯ ಸಹೋದರ ಸಹೋದರಿಯರೆ – ನಿಮ್ಮೆಲ್ಲರಿಗೂ ಹೃತ್ಪೂರ್ವಕ ನಮಸ್ಕಾರ.

ಅಸ್ಸಾಂನ ದರ್ರಾಂಗ್‌ನಲ್ಲಿ ಸುಮಾರು 6,500 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ

September 14th, 11:00 am

ಆಪರೇಷನ್ ಸಿಂದೂರ್ ಯಶಸ್ಸಿನ ನಂತರ, ನಿನ್ನೆ ಮೊದಲ ಬಾರಿಗೆ ಅಸ್ಸಾಂಗೆ ಭೇಟಿ ನೀಡಿದ್ದಾಗಿ ಪ್ರಧಾನಮಂತ್ರಿ ಅವರು ಹೇಳಿದರು. ಕಾರ್ಯಾಚರಣೆಯ ಅದ್ಭುತ ಯಶಸ್ಸಿಗೆ ಮಾತೆ ಕಾಮಾಕ್ಯಳ ಆಶೀರ್ವಾದ ಕಾರಣ. ಆಕೆಯ ಪವಿತ್ರ ಭೂಮಿಯಲ್ಲಿ ಕಾಲಿಟ್ಟಾಗ ಆಳವಾದ ಆಧ್ಯಾತ್ಮಿಕ ತೃಪ್ತಿ ತಂದಿತು. ಅಸ್ಸಾಂನಲ್ಲಿ ಆಚರಿಸಲಾಗುತ್ತಿರುವ ಶ್ರೀಕೃಷ್ಣ ಜನ್ಮಾಷ್ಟಮಿ ಶುಭಾಶಯಗಳನ್ನು ಸಲ್ಲಿಸಿದರು. ಕೆಂಪುಕೋಟೆಯ ಮೇಲೆ ಮಾಡಿದ ಭಾಷಣವನ್ನು ಪುನರುಚ್ಚರಿಸಿದ ಶ್ರೀ ಮೋದಿ, ಭಾರತದ ಭದ್ರತಾ ಕಾರ್ಯತಂತ್ರದಲ್ಲಿ 'ಸುದರ್ಶನ-ಚಕ್ರ'ದ ಕಲ್ಪನೆಯನ್ನು ತಾವು ಪ್ರಸ್ತುತಪಡಿಸಿದೆವು. ಮಂಗಲ್ಡೋಯ್ ತಾಣವು ಸಂಸ್ಕೃತಿ, ಐತಿಹಾಸಿಕ ಹೆಮ್ಮೆ ಮತ್ತು ಭವಿಷ್ಯದ ಭರವಸೆಯ ಸಂಗಮ ಸ್ಥಳ. ಈ ಪ್ರದೇಶವು ಅಸ್ಸಾಂನ ಗುರುತಿನ ಕೇಂದ್ರದ ಸಂಕೇತವಾಗಿದೆ. ಸ್ಫೂರ್ತಿ ಮತ್ತು ಶೌರ್ಯದಿಂದ ತುಂಬಿರುವ ಈ ಭೂಮಿಯಲ್ಲಿ, ಜನರನ್ನು ಭೇಟಿ ಮಾಡಲು ಮತ್ತು ಅವರೊಂದಿಗೆ ಮಾತುಕತೆ ನಡೆಸಲು ಅವಕಾಶ ಸಿಕ್ಕಿದ್ದು ತಮ್ಮ ಅದೃಷ್ಟ ಎಂದು ಪ್ರಧಾನಮಂತ್ರಿ ಹೇಳಿದರು.

ಉದಯೋನ್ಮುಖ ಈಶಾನ್ಯ ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

May 23rd, 11:00 am

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಸುಕಾಂತ ಮಜುಂದಾರ್ ಜಿ, ಮಣಿಪುರ ರಾಜ್ಯಪಾಲರಾದ ಅಜಯ್ ಭಲ್ಲಾ ಜಿ, ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಿ, ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಜಿ, ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹಾ ಜಿ, ಮೇಘಾಲಯದ ಮುಖ್ಯಮಂತ್ರಿ ತಂಗ್ಮಾಂಗ್ ಸಿನ್ರಾಡ್ ಎಸ್. ನಾಗಾಲ್ಯಾಂಡ್‌ ಮುಖ್ಯಮಂತ್ರಿ ನೇಫಿಯು ರಿಯೊ ಜಿ, ಮಿಜೋರಾಮ್‌ನ ಮುಖ್ಯಮಂತ್ರಿ ಲಾಲ್ದುಹೋಮಾ ಜಿ, ಉದ್ಯಮ ರಂಗದ ದಿಗ್ಗಜರೆ, ಹೂಡಿಕೆದಾರರೆ, ಮಹಿಳೆಯರು ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಸಿಂಗ್ ನಾರ್ತ್ ಈಸ್ಟ್ ಇನ್ವೆಸ್ಟರ್ಸ್ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು

May 23rd, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ರೈಸಿಂಗ್ ನಾರ್ತ್ ಈಸ್ಟ್ ಹೂಡಿಕೆದಾರರ ಶೃಂಗಸಭೆ 2025 ಅನ್ನು ಉದ್ಘಾಟಿಸಿದರು. ಸಮಾರಂಭಕ್ಕೆ ಆಗಮಿಸಿದ ಎಲ್ಲಾ ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದ ಪ್ರಧಾನಮಂತ್ರಿಯವರು, ಈಶಾನ್ಯ ಪ್ರದೇಶದ ಭವಿಷ್ಯದ ಬಗ್ಗೆ ಹೆಮ್ಮೆ, ಆತ್ಮೀಯತೆ ಮತ್ತು ಅಪಾರ ವಿಶ್ವಾಸವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಭಾರತ ಮಂಟಪದಲ್ಲಿ ನಡೆದ ಅಷ್ಟಲಕ್ಷ್ಮಿ ಮಹೋತ್ಸವವನ್ನು ಸ್ಮರಿಸಿದ ಅವರು, ಇಂದಿನ ಕಾರ್ಯಕ್ರಮವು ಈಶಾನ್ಯ ವಲಯದಲ್ಲಿ ಹೂಡಿಕೆಯ ಸಂಭ್ರಮಾಚರಣೆಯಾಗಿದೆ ಎಂದು ಒತ್ತಿ ಹೇಳಿದರು. ಈ ಶೃಂಗಸಭೆಯಲ್ಲಿ ಪ್ರಮುಖ ಉದ್ಯಮ ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವುದನ್ನು ಪ್ರಧಾನಮಂತ್ರಿಯವರು ಉಲ್ಲೇಖಿಸಿ, ಈ ವಲಯದಲ್ಲಿನ ಅವಕಾಶಗಳ ಬಗೆಗಿನ ಉತ್ಸಾಹವನ್ನು ಇದು ಎತ್ತಿ ತೋರಿಸುತ್ತದೆ ಎಂದರು. ಹೂಡಿಕೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವಲ್ಲಿ ಶ್ರಮಿಸಿದ ಎಲ್ಲಾ ಸಚಿವಾಲಯಗಳು ಮತ್ತು ರಾಜ್ಯ ಸರ್ಕಾರಗಳಿಗೆ ಅವರು ಅಭಿನಂದನೆ ಸಲ್ಲಿಸಿದರು. ತಮ್ಮ ಶುಭಾಶಯಗಳನ್ನು ತಿಳಿಸುತ್ತಾ, ಪ್ರಧಾನಮಂತ್ರಿಯವರು ನಾರ್ತ್ ಈಸ್ಟ್ ರೈಸಿಂಗ್ ಶೃಂಗಸಭೆಯನ್ನು ಶ್ಲಾಘಿಸಿದರು ಮತ್ತು ಈ ವಲಯದ ನಿರಂತರ ಬೆಳವಣಿಗೆ ಹಾಗೂ ಸಮೃದ್ಧಿಗೆ ತಮ್ಮ ಬದ್ಧತೆಯನ್ನು ಪುನರುಚ್ಚರಿಸಿದರು.