ಸ್ವಾಮಿನಾರಾಯಣ ಶಿಕ್ಷಾಪತ್ರಿಯ ದ್ವಿಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

January 23rd, 02:12 pm

ಇಂದು ನಾವೆಲ್ಲರೂ ಒಂದು ವಿಶೇಷ ಸಂದರ್ಭಕ್ಕೆ ಸಾಕ್ಷಿಯಾಗುತ್ತಿದ್ದೇವೆ. 200 ವರ್ಷಗಳ ಈ ಸಂದರ್ಭದಲ್ಲಿ, ಸ್ವಾಮಿನಾರಾಯಣ ಶಿಕ್ಷಾಪತ್ರಿಯ ದ್ವಿಶತಮಾನೋತ್ಸವ ಆಚರಣೆಯು, ನಾವೆಲ್ಲರೂ ಈ ಪವಿತ್ರ ಉತ್ಸವದಲ್ಲಿ ಭಾಗವಹಿಸುತ್ತಿರುವುದು ನಮಗೆಲ್ಲರಿಗೂ ಶುಭದ ಸಂಗತಿ. ಈ ಪವಿತ್ರ ಅವಧಿಯಲ್ಲಿ, ನಿಮ್ಮೆಲ್ಲ ಸಂತರಿಗೆ ನಾನು ನಮಸ್ಕರಿಸುತ್ತೇನೆ. ದ್ವಿಶತಮಾನೋತ್ಸವ ಉತ್ಸವದಂದು ಸ್ವಾಮಿನಾರಾಯಣರ ಕೋಟ್ಯಂತರ ಅನುಯಾಯಿಗಳನ್ನು ನಾನು ಅಭಿನಂದಿಸುತ್ತೇನೆ.

ʻಶಿಕ್ಷಾಪತ್ರಿ ದ್ವಿಶತಾಬ್ದಿ ಮಹೋತ್ಸವʼ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 23rd, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ʻಶಿಕ್ಷಾಪತ್ರಿ ದ್ವಿಶತಾಬ್ದಿ ಮಹೋತ್ಸವʼದಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ ಭಾಗಿಯಾಗಿ ತಮ್ಮ ಮಾತುಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಅವರು, ಭಗವಾನ್ ಸ್ವಾಮಿನಾರಾಯಣ ಅವರ ʻಶಿಕ್ಷಾಪತ್ರಿʼಯ 200ನೇ ವರ್ಷಾಚರಣೆಯ ವಿಶೇಷ ಸಂದರ್ಭಕ್ಕೆ ಇಂದು ಎಲ್ಲರೂ ಸಾಕ್ಷಿಯಾಗುತ್ತಿದ್ದಾರೆ ಎಂದು ಒತ್ತಿ ಹೇಳಿದರು. ದ್ವಿಶತಮಾನೋತ್ಸವ ಆಚರಣೆಯು ಈ ಪವಿತ್ರ ಸಂದರ್ಭದ ಭಾಗಿಯಾಗುವುದು ನಿಜಕ್ಕೂ ಪ್ರತಿಯೊಬ್ಬರ ಸೌಭಾಗ್ಯವೇ ಸರಿ ಎಂದರು. ಈ ಪವಿತ್ರ ಸಮಯದಲ್ಲಿ ಎಲ್ಲಾ ಸಂತರಿಗೆ ನಮಸ್ಕರಿಸುವುದಾಗಿ ಹೇಳಿದ ಶ್ರೀ ಮೋದಿ ಅವರು, ದ್ವಿಶತಮಾನೋತ್ಸವದ ಸಂದರ್ಭದಲ್ಲಿ ಭಗವಾನ್ ಸ್ವಾಮಿನಾರಾಯಣರ ಕೋಟ್ಯಂತರ ಅನುಯಾಯಿಗಳಿಗೆ ಶುಭಾಶಯಗಳನ್ನು ಕೋರಿದರು.

ನವದೆಹಲಿಯಲ್ಲಿ ನಡೆದ 2025ರ ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

October 31st, 06:08 pm

ನವದೆಹಲಿಯ ರೋಹಿಣಿಯಲ್ಲಿ ಇಂದು ಅಂತರರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025ನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಮೋದಿ, ಈಗಷ್ಟೇ ಕೇಳಿದ ಮಂತ್ರಗಳ ಶಕ್ತಿಯನ್ನು ಎಲ್ಲರೂ ಅನುಭವಿಸಬಹುದು ಎಂದು ಹೇಳಿದರು. ತಾವು ಸಭೆಗೆ ಬಂದಾಗಲೆಲ್ಲಾ ತಮಗೆ ಆಗಿರುವ ಅನುಭವವು ದೈವಿಕ ಮತ್ತು ಅಸಾಮಾನ್ಯವಾದುದು ಎಂದು ಅವರು ಒತ್ತಿ ಹೇಳಿದರು. ಈ ಭಾವನೆಗೆ ಸ್ವಾಮಿ ದಯಾನಂದ ಜೀ ಅವರ ಆಶೀರ್ವಾದ ಕಾರಣವೆಂದೂ ಅವರು ಹೇಳಿದರು. ಸ್ವಾಮಿ ದಯಾನಂದ ಜೀ ಅವರ ಆದರ್ಶಗಳ ಬಗ್ಗೆ ಪ್ರಧಾನಮಂತ್ರಿ ತಮ್ಮ ಆಳವಾದ ಗೌರವವನ್ನು ವ್ಯಕ್ತಪಡಿಸಿದರು. ಹಾಜರಿದ್ದ ಎಲ್ಲಾ ಚಿಂತಕರೊಂದಿಗಿನ ತಮ್ಮ ದಶಕಗಳಷ್ಟು ಹಳೆಯದಾದ ಬಾಂಧವ್ಯವನ್ನು ಅವರು ನೆನೆಪಿಸಿಕೊಂಡರು. ಅದು ತಮಗೆ ಪದೇ ಪದೇ ಅವರ ನಡುವೆ ಇರಲು ಅವಕಾಶವನ್ನು ನೀಡಿದೆ. ಅವರನ್ನು ಭೇಟಿಯಾದಾಗಲೆಲ್ಲಾ ಮತ್ತು ಅವರ ಜೊತೆ ಸಂವಹನ ನಡೆಸಿದಾಗಲೆಲ್ಲಾ ತಾವು ವಿಶಿಷ್ಟ ಶಕ್ತಿ ಮತ್ತು ಅನನ್ಯ ಸ್ಫೂರ್ತಿಯನ್ನು ಪಡೆಯುತ್ತಿರುವುದಾಗಿಯೂ ಅವರು ಹೇಳಿದರು.

ನವದೆಹಲಿಯಲ್ಲಿ ಜ್ಞಾನ ಭಾರತಂ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 12th, 04:54 pm

ಇಂದು ವಿಜ್ಞಾನ ಭವನವು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗಿದೆ. ಕೆಲವು ದಿನಗಳ ಹಿಂದೆ, ನಾನು ಜ್ಞಾನ ಭಾರತಂ ಮಿಷನ್ ಅನ್ನು ಘೋಷಿಸಿದೆ. ಇಂದು ಇಷ್ಟು ಕಡಿಮೆ ಸಮಯದಲ್ಲಿ ನಾವು ಜ್ಞಾನ ಭಾರತಂ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ಪೋರ್ಟಲ್ ಅನ್ನು ಸಹ ಇತ್ತೀಚೆಗೆ ಪ್ರಾರಂಭಿಸಲಾಗಿದೆ. ಇದು ಸರ್ಕಾರಿ ಅಥವಾ ಶೈಕ್ಷಣಿಕ ಘಟನೆಯಲ್ಲ; ಜ್ಞಾನ ಭಾರತಂ ಆಂದೋಲನ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ. ಸಾವಿರಾರು ತಲೆಮಾರುಗಳ ಆಲೋಚನೆಗಳು ಮತ್ತು ಚಿಂತನೆಗಳು, ಭಾರತದ ಮಹಾನ್ ಸಂತರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆ, ನಮ್ಮ ಜ್ಞಾನ ಸಂಪ್ರದಾಯಗಳು, ನಮ್ಮ ವೈಜ್ಞಾನಿಕ ಪರಂಪರೆ, ನಾವು ಜ್ಞಾನ ಭಾರತಂ ಮಿಷನ್ ಮೂಲಕ ಅವುಗಳನ್ನು ಡಿಜಿಟಲೀಕರಣಗೊಳಿಸಲಿದ್ದೇವೆ. ಈ ಆಂದೋಲನಕ್ಕಾಗಿ ನಾನು ಎಲ್ಲಾ ದೇಶವಾಸಿಗಳನ್ನು ಅಭಿನಂದಿಸುತ್ತೇನೆ. ಜ್ಞಾನ ಭಾರತಂನ ಇಡೀ ತಂಡಕ್ಕೆ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ನಾನು ಶುಭ ಹಾರೈಸುತ್ತೇನೆ.

ನವದೆಹಲಿಯಲ್ಲಿ ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

September 12th, 04:45 pm

ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ವಿಜ್ಞಾನ ಭವನ ಇಂದು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಕೆಲವೇ ದಿನಗಳ ಹಿಂದೆ ತಾವು ಜ್ಞಾನ ಭಾರತಂ ಮಿಷನ್ ಘೋಷಿಸಿದ್ದನ್ನು ಮತ್ತು ಇಷ್ಟು ಕಡಿಮೆ ಅವಧಿಯಲ್ಲಿ ಜ್ಞಾನ ಭಾರತಂ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿರುವುದನ್ನು ಅವರು ಒತ್ತಿ ಹೇಳಿದರು. ಈ ಮಿಷನ್‌ಗೆ ಸಂಬಂಧಿಸಿದ ಪೋರ್ಟಲ್ ಸಹ ಪ್ರಾರಂಭಿಸಲಾಗಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ಇದು ಸರ್ಕಾರಿ ಅಥವಾ ಶೈಕ್ಷಣಿಕ ಕಾರ್ಯಕ್ರಮವಲ್ಲ ಎಂದು ಹೇಳಿದ ಪ್ರಧಾನಮಂತ್ರಿ, ಜ್ಞಾನ ಭಾರತಂ ಮಿಷನ್ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ ಎಂದೂ ಹೇಳಿದರು. ಸಾವಿರಾರು ತಲೆಮಾರುಗಳ ಚಿಂತನಶೀಲ ಪರಂಪರೆಯನ್ನು ಅವರು ಉಲ್ಲೇಖಿಸಿದರು. ಭಾರತದ ಮಹಾನ್ ಋಷಿಗಳು, ಆಚಾರ್ಯರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆಯನ್ನು ಅವರು ಗುರುತಿಸಿದರು, ಭಾರತದ ಜ್ಞಾನ, ಸಂಪ್ರದಾಯಗಳು ಮತ್ತು ವೈಜ್ಞಾನಿಕ ಪರಂಪರೆಯನ್ನು ಒತ್ತಿ ಹೇಳಿದರು. ಜ್ಞಾನ ಭಾರತಂ ಮಿಷನ್ ಮೂಲಕ ಈ ಪರಂಪರೆಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು. ಈ ಕಾರ್ಯಾಚರಣೆಗಾಗಿ ಅವರು ಎಲ್ಲಾ ನಾಗರಿಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು ಇಡೀ ಜ್ಞಾನ ಭಾರತಂ ತಂಡ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಸೆಪ್ಟೆಂಬರ್ 12 ರಂದು ನವದೆಹಲಿಯಲ್ಲಿ ನಡೆಯಲಿರುವ ಜ್ಞಾನ ಭಾರತಂ ಕುರಿತಾದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ

September 11th, 04:57 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 12 ರಂದು ಸಂಜೆ 4:30ರ ಸುಮಾರಿಗೆ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಜ್ಞಾನ ಭಾರತಂ ಕುರಿತಾದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಹಸ್ತಪ್ರತಿ ಡಿಜಿಟಲೀಕರಣ, ಸಂರಕ್ಷಣೆ ಮತ್ತು ಸಾರ್ವಜನಿಕ ಪ್ರವೇಶವನ್ನು ವೇಗಗೊಳಿಸಲು ಮೀಸಲಾದ ಡಿಜಿಟಲ್ ವೇದಿಕೆಯಾದ ಜ್ಞಾನ ಭಾರತಂ ಪೋರ್ಟಲ್ ಅನ್ನು ಸಹ ಅವರು ಉದ್ಘಾಟಿಸಲಿದ್ದು, ಈ ಸಂದರ್ಭದಲ್ಲಿ ಅಲ್ಲಿ ನೆರೆದ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ.