ದೇಶಭಕ್ತಿ ಗೀತೆಯಾಗಿ ವಂದೇ ಮಾತರಂ ಅಳವಡಿಸಿಕೊಂಡು 150 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಲೋಕಸಭೆಯಲ್ಲಿ ನಡೆದ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

December 08th, 12:30 pm

ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿದ್ದಕ್ಕಾಗಿ ನಿಮಗೆ ಮತ್ತು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತೇನೆ. ರಾಷ್ಟ್ರದ ಸ್ವಾತಂತ್ರ್ಯ ಚಳುವಳಿಗೆ ಶಕ್ತಿ, ಸ್ಫೂರ್ತಿ, ತ್ಯಾಗ ಮತ್ತು ಕಾಠಿನ್ಯದ ಮನೋಭಾವ ತುಂಬಿದ ಆ ಮಂತ್ರ, ಆ ಸ್ಪಷ್ಟ ಕರೆಯನ್ನು ಗೌರವದಿಂದ ನೆನಪಿಸಿಕೊಳ್ಳುವುದು, ಈ ಸದನದೊಳಗೆ ವಂದೇ ಮಾತರಂ(ಇದನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳು ಸಂದಿವೆ, ಕವಿ ರವೀಂದ್ರನಾಥ್ ಠ್ಯಾಗೋರ್ ಅವರ ಜನ ಗಣ ಮನ ಅಧಿನಾಯಕ ಜಯ ಹೇ – ಹಾಗೂ ಬಂಕಿಮ್ ಚಂದ್ರ ಚಟರ್ಜಿ ಅವರ ವಂದೇ ಮಾತರಂಗೆ 1950 ಜನವರಿ 24ರಂದು ರಾಷ್ಟ್ರಗೀತೆಯ ಸ್ಥಾನಮಾನ ನೀಡಲಾಗಿದೆ) ಅನ್ನು ಸ್ಮರಿಸುವುದು ನಮಗೆಲ್ಲರಿಗೂ ಸೌಭಾಗ್ಯದ ವಿಷಯವಾಗಿದೆ. ವಂದೇ ಮಾತರಂ ಅನ್ನು ದೇಶಭಕ್ತಿ ಗೀತೆಯಾಗಿ ಅಳವಡಿಸಿಕೊಂಡು 150 ವರ್ಷಗಳನ್ನು ಗುರುತಿಸುವ ಐತಿಹಾಸಿಕ ಸಂದರ್ಭಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ ಎಂಬುದು ಬಹಳ ಹೆಮ್ಮೆಯ ವಿಷಯ. ಈ ಅವಧಿಯು ಇತಿಹಾಸ ಪುಟದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ. ಈ ಚರ್ಚೆಯು ಖಂಡಿತವಾಗಿಯೂ ಈ ಸದನದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ, ಆದರೆ ನಾವು ಈ ಕ್ಷಣವನ್ನು ಸಾಮೂಹಿಕವಾಗಿ ಬಳಸಿಕೊಂಡರೆ, ಅದು ಮುಂದಿನ ಪೀಳಿಗೆಗೆ, ಪ್ರತಿ ಪೀಳಿಗೆಗೂ ಸತತ ಕಲಿಕೆಯ ಮೂಲವಾಗಿಯೂ ಕಾರ್ಯ ನಿರ್ವಹಿಸಬಹುದು.

ಲೋಕಸಭೆಯಲ್ಲಿ ನಡೆದ ರಾಷ್ಟ್ರೀಯ ಗೀತೆ ವಂದೇ ಮಾತರಂನ 150 ವರ್ಷಗಳ ವಿಶೇಷ ಚರ್ಚೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

December 08th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಲೋಕಸಭೆಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ವಿಶೇಷ ಚರ್ಚೆಯಲ್ಲಿ ಮಾತನಾಡಿದರು. ಈ ಮಹತ್ವದ ಸಂದರ್ಭದಲ್ಲಿ ಸಾಮೂಹಿಕ ಚರ್ಚೆಯ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದ್ದಕ್ಕಾಗಿ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ರಾಷ್ಟ್ರದ ಸ್ವಾತಂತ್ರ್ಯ ಚಳವಳಿಗೆ ಶಕ್ತಿ ತುಂಬಿದ ಮತ್ತು ಸ್ಫೂರ್ತಿ ನೀಡಿದ, ತ್ಯಾಗ ಮತ್ತು ತಪಸ್ಸಿನ ಮಾರ್ಗವನ್ನು ತೋರಿಸಿದ ವಂದೇ ಮಾತರಂ ಎಂಬ ಮಂತ್ರ ಮತ್ತು ಘೋಷವಾಕ್ಯವನ್ನು ನೆನಪಿಸಿಕೊಳ್ಳಲಾಗುತ್ತಿದೆ ಮತ್ತು ಇದು ಸದನದಲ್ಲಿರುವ ಎಲ್ಲರಿಗೂ ಒಂದು ದೊಡ್ಡ ಸೌಭಾಗ್ಯ ಎಂದು ಅವರು ಹೇಳಿದರು. ವಂದೇ ಮಾತರಂನ 150 ವರ್ಷಗಳ ಐತಿಹಾಸಿಕ ಸಂದರ್ಭಕ್ಕೆ ದೇಶ ಸಾಕ್ಷಿಯಾಗುತ್ತಿರುವುದು ಹೆಮ್ಮೆಯ ವಿಷಯ ಎಂದು ಶ್ರೀ ಮೋದಿ ಹೇಳಿದರು. ಈ ಅವಧಿಯು ಇತಿಹಾಸದ ಅಸಂಖ್ಯಾತ ಘಟನೆಗಳನ್ನು ನಮ್ಮ ಮುಂದೆ ತರುತ್ತದೆ ಎಂದು ಅವರು ಹೇಳಿದರು. ಈ ಚರ್ಚೆಯು ಸದನದ ಬದ್ಧತೆಯನ್ನು ಪ್ರತಿಬಿಂಬಿಸುವುದಲ್ಲದೆ, ಎಲ್ಲರೂ ಸಾಮೂಹಿಕವಾಗಿ ಇದನ್ನು ಸದುಪಯೋಗಪಡಿಸಿಕೊಂಡರೆ ಭವಿಷ್ಯದ ಪೀಳಿಗೆಗೆ ಶಿಕ್ಷಣದ ಮೂಲವೂ ಆಗುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು.

ಬಿಹಾರ ರಾಜ್ಯ ಜೀವಿಕಾ ನಿಧಿ ಸಖ್ ಸಹಕಾರಿ ಸಂಘ ನಿಯಮಿತದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ವೀಡಿಯೊ ಕಾನ್ಫರೆನ್ಸಿಂಗ್ ಭಾಷಣ

September 02nd, 01:00 pm

ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಜಿ ಮತ್ತು ವಿಜಯ್ ಕುಮಾರ್ ಸಿನ್ಹಾ ಜಿ, ಇತರೆ ಗಣ್ಯ ಅತಿಥಿಗಳೆ ಮತ್ತು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಬಿಹಾರದ ನನ್ನ ಲಕ್ಷಾಂತರ ಸಹೋದರಿಯರೆ - ನಿಮ್ಮೆಲ್ಲರಿಗೂ ನನ್ನ ಗೌರವಯುತ ಶುಭಾಶಯಗಳು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಬಿಹಾರ ರಾಜ್ಯ ಜೀವಿಕಾ ನಿಧಿ ಸಖ್ ಸಹಕಾರಿ ಸಂಘ ಲಿಮಿಟೆಡ್ ಉದ್ಘಾಟನೆ

September 02nd, 12:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಬಿಹಾರ ರಾಜ್ಯ ಜೀವಿಕ ನಿಧಿ ಸಖ್ ಸಹಕಾರಿ ಸಂಘ ಲಿಮಿಟೆಡ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಈ ಶುಭ ಮಂಗಳವಾರದಂದು, ಹೆಚ್ಚು ಭರವಸೆಯ ಉಪಕ್ರಮವನ್ನು ಆರಂಭಿಸಲಾಗುತ್ತಿದೆ ಎಂದು ಹೇಳಿದರು. ಬಿಹಾರದ ತಾಯಂದಿರು ಮತ್ತು ಸಹೋದರಿಯರಿಗೆ ಜೀವಿಕ ನಿಧಿ ಸಖ್ ಸಹಕಾರಿ ಸಂಘದ ಮೂಲಕ ಹೊಸ ಸೌಲಭ್ಯವನ್ನು ಒದಗಿಸಲಾಗುತ್ತಿದೆ ಎಂದು ಅವರು ಪ್ರಕಟಿಸಿದರು. ಈ ಉಪಕ್ರಮವು ಜೀವಿಕ ನಿಧಿಯೊಂದಿಗೆ ಸಂಬಂಧ ಹೊಂದಿರುವ ಮಹಿಳೆಯರು ಹಳ್ಳಿಗಳಾದ್ಯಂತ ಆರ್ಥಿಕ ಸಹಾಯವನ್ನು ಸುಲಭವಾಗಿ ಪಡೆಯಲು ಅನುವು ಮಾಡಿಕೊಡುತ್ತದೆ, ಮತ್ತು ಅವರ ಕೆಲಸ ಹಾಗೂ ವ್ಯವಹಾರಗಳನ್ನು ಮುನ್ನಡೆಸಲು ಸಹಾಯ ಮಾಡುತ್ತದೆ ಎಂದು ಪ್ರಧಾನಮಂತ್ರಿ ಹೇಳಿದರು. ಜೀವಿಕ ನಿಧಿ ವ್ಯವಸ್ಥೆಯು ಸಂಪೂರ್ಣವಾಗಿ ಡಿಜಿಟಲ್ ಆಗಿದ್ದು, ದೈಹಿಕ ಭೇಟಿಯ ಅಗತ್ಯತೆ ನಿವಾರಿಸುತ್ತದೆ - ಈಗ ಎಲ್ಲ ಕೆಲಸಗಳನ್ನು ಮೊಬೈಲ್ ಫೋನ್ ಮೂಲಕ ಮಾಡಬಹುದು ಎಂದು ಅವರು ಹರ್ಷ ವ್ಯಕ್ತಪಡಿಸಿದರು. ಜೀವಿಕ ನಿಧಿ ಸಖ್ ಸಹಕಾರಿ ಸಂಘದ ಆರಂಭಕ್ಕಾಗಿ ಅವರು ಬಿಹಾರದ ತಾಯಂದಿರು ಮತ್ತು ಸಹೋದರಿಯರನ್ನು ಅಭಿನಂದಿಸಿದರು ಮತ್ತು ಈ ಮಹತ್ವದ ಉಪಕ್ರಮಕ್ಕಾಗಿ ಶ್ರೀ ನಿತೀಶ್ ಕುಮಾರ್ ಮತ್ತು ಬಿಹಾರ ಸರ್ಕಾರವನ್ನು ಅವರು ಶ್ಲಾಘಿಸಿದರು.

79ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣದ ಮುಖ್ಯಾಂಶಗಳು

August 15th, 03:52 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ಕೆಂಪು ಕೋಟೆಯ ಕೊತ್ತಲಗಳಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯಂಗವಾಗಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಶ್ರೀ ಮೋದಿ ಅವರ 103 ನಿಮಿಷಗಳ ಕಾಲ ಕೆಂಪು ಕೋಟೆಯಿಂದ ಮಾಡಿದ ಭಾಷಣವು ಅತ್ಯಂತ ದೀರ್ಘ ಮತ್ತು ನಿರ್ಣಾಯಕ ಭಾಷಣವಾಗಿದ್ದು, 2047ರ ವೇಳೆಗೆ ವಿಕ್ಷಿತ ಭಾರತಕ್ಕಾಗಿ ದಿಟ್ಟ ಮಾರ್ಗಸೂಚಿಯನ್ನು ರೂಪಿಸಿದೆ. ಪ್ರಧಾನಮಂತ್ರಿ ಅವರ ಭಾಷಣವು ಸ್ವಾವಲಂಬನೆ, ನಾವೀನ್ಯತೆ ಮತ್ತು ನಾಗರಿಕ ಸಬಲೀಕರಣದ ಮೇಲೆ ಗಮನ ಕೇಂದ್ರೀಕರಿಸಿತ್ತು, ಇತರರನ್ನು ಅವಲಂಬಿಸಿದ ರಾಷ್ಟ್ರದಿಂದ ಜಾಗತಿಕವಾಗಿ ಆತ್ಮವಿಶ್ವಾಸ, ತಾಂತ್ರಿಕವಾಗಿ ಮುಂದುವರಿದ ಮತ್ತು ಆರ್ಥಿಕವಾಗಿ ಸ್ಥಿತಿಸ್ಥಾಪಕತ್ವದ ಶಕ್ತಿಯುಳ್ಳ ದೇಶದವರೆಗೆ ಭಾರತದ ಪ್ರಯಾಣವನ್ನು ಎತ್ತಿ ತೋರಿಸಿತು.

79ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೆಂಪು ಕೋಟೆಯ ಪ್ರಾಂಗಣದಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

August 15th, 07:00 am

ಈ ಸ್ವಾತಂತ್ರ್ಯೋತ್ಸವವು ನಮ್ಮ ಜನರ 140 ಕೋಟಿ ಸಂಕಲ್ಪಗಳ ಆಚರಣೆಯಾಗಿದೆ. ಈ ಸ್ವಾತಂತ್ರ್ಯೋತ್ಸವವು ಸಾಮೂಹಿಕ ಸಾಧನೆಗಳು ಮತ್ತು ಹೆಮ್ಮೆಯ ಕ್ಷಣವಾಗಿದೆ ಮತ್ತು ನಮ್ಮ ಹೃದಯಗಳು ಸಂತೋಷದಿಂದ ತುಂಬಿವೆ. ರಾಷ್ಟ್ರವು ನಿರಂತರವಾಗಿ ಏಕತೆಯ ಮನೋಭಾವವನ್ನು ಬಲಪಡಿಸುತ್ತಿದೆ. ಇಂದು, 140 ಕೋಟಿ ಭಾರತೀಯರು ತ್ರಿವರ್ಣ ಧ್ವಜದ ಬಣ್ಣಗಳಿಂದ ಕಂಗೊಳಿಸುತ್ತಿದ್ದಾರೆ. ಮರುಭೂಮಿಯಾಗಿರಲಿ, ಹಿಮಾಲಯದ ಶಿಖರಗಳಾಗಿರಲಿ, ಸಮುದ್ರ ತೀರಗಳಾಗಿರಲಿ, ಅಥವಾ ಜನನಿಬಿಡ ಪ್ರದೇಶಗಳಾಗಿರಲಿ, 'ಹರ್ ಘರ್ ತಿರಂಗಾ' ಹಾರುತ್ತಿದೆ, ಎಲ್ಲೆಡೆ ಒಂದೇ ಪ್ರತಿಧ್ವನಿ, ಒಂದೇ ಹರ್ಷೋದ್ಗಾರ: ನಮ್ಮ ಜೀವಕ್ಕಿಂತ ಪ್ರಿಯವಾದ ನಮ್ಮ ತಾಯ್ನಾಡಿಗೆ ಜೈ.

India celebrates 79th Independence Day

August 15th, 06:45 am

PM Modi, in his address to the nation on the 79th Independence day paid tribute to the Constituent Assembly, freedom fighters, and Constitution makers. He reiterated that India will always protect the interests of its farmers, livestock keepers and fishermen. He highlighted key initiatives—GST reforms, Pradhan Mantri Viksit Bharat Rozgar Yojana, National Sports Policy, and Sudharshan Chakra Mission—aimed at achieving a Viksit Bharat by 2047. Special guests like Panchayat members and “Drone Didis” graced the Red Fort celebrations.

ಹರ್ ಘರ್ ತಿರಂಗಾ ಅಭಿಯಾನದಲ್ಲಿ ಅಭೂತಪೂರ್ವ ಪಾಲ್ಗೊಳ್ಳುವಿಕೆಗೆ ಪ್ರಧಾನಮಂತ್ರಿ ಮೆಚ್ಚುಗೆ

August 09th, 07:54 pm

ಹರ್ ಘರ್ ತಿರಂಗಾ ಅಭಿಯಾನದಲ್ಲಿ ಜನರ ಅಭೂತಪೂರ್ವ ಪಾಲ್ಗೊಳ್ಳುವಿಕೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಇದು ಭಾರತದ ಜನರನ್ನು ಒಂದುಗೂಡಿಸುವ ಗಾಢ ದೇಶಭಕ್ತಿಯ ಭಾವ ಮತ್ತು ತ್ರಿವರ್ಣದ ಬಗ್ಗೆ ಅವರ ಅಚಲ ಹೆಮ್ಮೆಯ ಪ್ರತಿಬಿಂಬವಾಗಿದೆ. ನಾಗರಿಕರು harghartiranga.com ನಲ್ಲಿ ತಮ್ಮ ಚಿತ್ರಗಳು ಮತ್ತು ಸೆಲ್ಫಿಗಳನ್ನು ಹಂಚಿಕೊಳ್ಳುವುದನ್ನು ಮುಂದುವರಿಸುವಂತೆ ಅವರು ಮನವಿ ಮಾಡಿದ್ದಾರೆ.

ಪಿಂಗಲಿ ವೆಂಕಯ್ಯ ಅವರ ಜನ್ಮದಿನದಂದು ಅವರಿಗೆ ಗೌರವ ಸಮರ್ಪಿಸಿದ ಪ್ರಧಾನಮಂತ್ರಿ

August 02nd, 02:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಪಿಂಗಲಿ ವೆಂಕಯ್ಯ ಅವರ ಜನ್ಮ ದಿನದಂದು ಅವರಿಗೆ ಗೌರವ ಸಲ್ಲಿಸಿದರು, ಅವರು ನಮ್ಮ ಹೆಮ್ಮೆಯ ತ್ರಿವರ್ಣ ಧ್ವಜ ನೀಡುವಲ್ಲಿ ಅವರ ಪಾತ್ರಕ್ಕಾಗಿ ಸ್ಮರಣೀಯರು. #HarGharTiranga ಅಭಿಯಾನ ಬಲಪಡಿಸಲು ಮತ್ತು ತ್ರಿವರ್ಣ ಧ್ವಜ ಹಾರಿಸಲು ಜನರನ್ನು ಪ್ರೇರೇಪಿಸುತ್ತಾ, ಶ್ರೀ ಮೋದಿ ಅವರು ತ್ರಿವರ್ಣ ಧ್ವಜದೊಂದಿಗೆ ತಮ್ಮ ಸೆಲ್ಫಿ ಅಥವಾ ಫೋಟೋಗಳನ್ನು harghartiranga.com ನಲ್ಲಿ ಹಂಚಿಕೊಳ್ಳಲು ಮನವಿ ಮಾಡಿದರು.

The BJP-NDA government will fight the mafia-driven corruption in recruitment: PM Modi in Godda, Jharkhand

November 13th, 01:47 pm

Attending and addressing rally in Godda, Jharkhand, PM Modi expressed gratitude to the women of the state for their support. He criticized the local government for hijacking benefits meant for women, like housing and water supply. PM Modi assured that under the BJP-NDA government, every family in Jharkhand will get permanent homes, water, gas connections, and free electricity. He also promised solar panels for households, ensuring free power and compensation for any surplus electricity generated.

We ensured that government benefits directly reach beneficiaries without intermediaries: PM Modi in Sarath, Jharkhand

November 13th, 01:46 pm

PM Modi addressed a large gathering in Jharkhand's Sarath. He said, Today, the first phase of voting is happening in Jharkhand. The resolve to protect livelihood, daughters, and land is visible at every booth. There is strong support for the guarantees that the BJP has given for the future of women and youth. It is certain that the JMM-Congress will be wiped out in the Santhali region this time.

PM Modi engages lively audiences in Jharkhand’s Sarath & Godda

November 13th, 01:45 pm

PM Modi addressed a large gathering in Jharkhand's Sarath. He said, Today, the first phase of voting is happening in Jharkhand. The resolve to protect livelihood, daughters, and land is visible at every booth. There is strong support for the guarantees that the BJP has given for the future of women and youth. It is certain that the JMM-Congress will be wiped out in the Santhali region this time.

ಬಾಹ್ಯಾಕಾಶ ಕ್ಷೇತ್ರದ ಸುಧಾರಣೆಗಳಿಂದ ದೇಶದ ಯುವಕರು ಪ್ರಯೋಜನ ಪಡೆದಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ

August 25th, 11:30 am

ನನ್ನ ಪ್ರಿಯ ದೇಶವಾಸಿಗಳೆ ನಮಸ್ಕಾರ. ಮತ್ತೊಮ್ಮೆ, 'ಮನದ ಮಾತಿಗೆ' ನನ್ನ ಕುಟುಂಬದ ಎಲ್ಲಾ ಸದಸ್ಯರಿಗೆ ಸ್ವಾಗತ. ಇಂದು ಮತ್ತೊಮ್ಮೆ ನಾವು ದೇಶದ ಸಾಧನೆಗಳು ಮತ್ತು ದೇಶದ ಜನತೆಯ ಸಾಮೂಹಿಕ ಪ್ರಯತ್ನಗಳ ಬಗ್ಗೆ ಮಾತನಾಡಲಿದ್ದೇವೆ. 21 ನೇ ಶತಮಾನದ ಭಾರತದಲ್ಲಿ ವಿಕಸಿತ ಭಾರತದ ಅಡಿಪಾಯವನ್ನು ಬಲಪಡಿಸುವ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಉದಾಹರಣೆಗೆ, ಇದೇ ಆಗಸ್ಟ್ 23 ರಂದು, ನಾವೆಲ್ಲರೂ ಪ್ರಥಮ ರಾಷ್ಟ್ರೀಯ ಬಾಹ್ಯಾಕಾಶ ದಿನವನ್ನು ಆಚರಿಸಿದೆವು. ನೀವೆಲ್ಲರೂ ಈ ದಿನವನ್ನು ಆಚರಿಸಿರಬಹುದು ಎಂದು ನಾನು ಭಾವಿಸುತ್ತೇನೆ, ಮತ್ತೊಮ್ಮೆ ಚಂದ್ರಯಾನ-3 ರ ಯಶಸ್ಸನ್ನು ಆಚರಿಸಿರಬಹುದು. ಕಳೆದ ವರ್ಷ, ಇದೇ ದಿನದಂದು, ಚಂದ್ರಯಾನ-3 ಚಂದ್ರನ ದಕ್ಷಿಣ ಭಾಗದಲ್ಲಿರುವ ಶಿವ-ಶಕ್ತಿ ಪಾಯಿಂಟ್‌ನಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿತ್ತು. ಭಾರತ ಈ ಅಮೋಘ ಸಾಧನೆ ಮಾಡಿದ ವಿಶ್ವದ ಮೊದಲ ದೇಶವಾಯಿತು.

78 ನೇ ಸ್ವಾತಂತ್ರ್ಯೋತ್ಸವದಂದು ಕೆಂಪು ಕೋಟೆ ಆವರಣದಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 15th, 03:04 pm

ಭಾಷಣದ ಮುಖ್ಯಾಂಶಗಳು ಈ ಕೆಳಕಂಡಂತಿವೆ

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

August 15th, 01:09 pm

ದೇಶಕ್ಕಾಗಿ ತಮ್ಮ ಪ್ರಾಣತ್ಯಾಗ ಮಾಡಿದ ಮತ್ತು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡ ಅಸಂಖ್ಯಾತ ಪೂಜನೀಯ ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ಗೌರವ ಸಲ್ಲಿಸುವ ಶುಭ ದಿನ, ಶುಭ ಕ್ಷಣ ಇದಾಗಿದೆ. ಅವರು ತಮ್ಮ ಜೀವನದುದ್ದಕ್ಕೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು, ಭಾರತ್ ಮಾತಾ ಕಿ ಜೈ ಎಂಬ ಘೋಷಣೆಗಳೊಂದಿಗೆ ಧೈರ್ಯದಿಂದ ನೇಣುಗಂಬವನ್ನು ಅಪ್ಪಿಕೊಂಡರು. ಇದು ಅವರ ಧೈರ್ಯ, ಸಂಕಲ್ಪ ಮತ್ತು ದೇಶಭಕ್ತಿ ಸದ್ಗುಣಗಳನ್ನು ಸ್ಮರಿಸುವ ಹಬ್ಬವಾಗಿದೆ. ಈ ವೀರಕಲಿಗಳಿಂದಾಗಿಯೇ ಈ ಸ್ವಾತಂತ್ರ್ಯದ ಹಬ್ಬದಂದು ಮುಕ್ತವಾಗಿ ಉಸಿರಾಡುವ ಸೌಭಾಗ್ಯ ನಮಗೆ ದಕ್ಕದೆ. ದೇಶವು ಅವರಿಗೆ ಬಹಳ ಋಣಿಯಾಗಿದೆ. ಅಂತಹ ಪ್ರತಿಯೊಬ್ಬ ಮಹಾನ್ ವ್ಯಕ್ತಿಯ ಬಗ್ಗೆ ನಮ್ಮ ಗೌರವ ವನ್ನು ವ್ಯಕ್ತಪಡಿಸೋಣ.

ಭಾರತವು 78 ನೇ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತದೆ

August 15th, 07:30 am

78 ನೇ ಸ್ವಾತಂತ್ರ್ಯ ದಿನದಂದು, ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಭಾರತದ ಭವಿಷ್ಯದ ದೃಷ್ಟಿಕೋನವನ್ನು ವಿವರಿಸಿದರು. 2036 ರ ಒಲಂಪಿಕ್ಸ್‌ನ ಆತಿಥ್ಯದಿಂದ ಸೆಕ್ಯುಲರ್ ಸಿವಿಲ್ ಕೋಡ್ ಅನ್ನು ಚಾಂಪಿಯನ್ ಮಾಡುವವರೆಗೆ, ಪಿಎಂ ಮೋದಿ ಅವರು ಭಾರತದ ಸಾಮೂಹಿಕ ಪ್ರಗತಿ ಮತ್ತು ಪ್ರತಿಯೊಬ್ಬ ನಾಗರಿಕನ ಸಬಲೀಕರಣಕ್ಕೆ ಒತ್ತು ನೀಡಿದರು. ಭ್ರಷ್ಟಾಚಾರದ ವಿರುದ್ಧದ ಹೋರಾಟವನ್ನು ಹೊಸ ಹುರುಪಿನೊಂದಿಗೆ ಮುಂದುವರಿಸುವ ಕುರಿತು ಮಾತನಾಡಿದರು. ನಾವೀನ್ಯತೆ, ಶಿಕ್ಷಣ ಮತ್ತು ಜಾಗತಿಕ ನಾಯಕತ್ವದ ಮೇಲೆ ಕೇಂದ್ರೀಕರಿಸಿದ ಅವರು 2047 ರ ವೇಳೆಗೆ ಭಾರತವು ವಿಕಸಿತ ಭಾರತವಾಗುವುದನ್ನು ತಡೆಯಲು ಯಾವುದೂ ಸಾಧ್ಯವಿಲ್ಲ ಎಂದು ಅವರು ಪುನರುಚ್ಚರಿಸಿದರು.

ಹರ್ ಘರ್ ತಿರಂಗ ಅಭಿಯಾನವು ತ್ರಿವರ್ಣ ಧ್ವಜದ ಬಗ್ಗೆ 140 ಕೋಟಿ ಭಾರತೀಯರ ಆಳವಾದ ಗೌರವವನ್ನು ಸೂಚಿಸುತ್ತದೆ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 14th, 09:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರ್ ಘರ್ ತಿರಂಗಾ ಅಭಿಯಾನದ ಬಗ್ಗೆ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ ಮತ್ತು ಹರ್ ಘರ್ ತಿರಂಗ ಚಳುವಳಿಯು ಭಾರತದಾದ್ಯಂತ ಜನಪ್ರಿಯವಾಗಿದೆ ಎಂದು ಹೇಳಿದರು, ಇದು ತ್ರಿವರ್ಣ ಧ್ವಜದ ಬಗ್ಗೆ 140 ಕೋಟಿ ಭಾರತೀಯರ ಆಳವಾದ ಗೌರವವನ್ನು ಸೂಚಿಸುತ್ತದೆ.

ಅರುಣಾಚಲ ಪ್ರದೇಶದ ಜನರ ದೇಶಪ್ರೇಮವು ರಾಜ್ಯದ ವೈವಿದ್ಯಮಯ ಸಾಂಸ್ಕೃತಿಕ ಪರಂಪರೆಯಲ್ಲಿ ಪ್ರತಿಫಲಿಸುತ್ತದೆ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

August 13th, 05:15 pm

ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ನ ಸೆಪ್ಪಾದಲ್ಲಿ ಹರ್ ಘರ್ ತಿರಂಗಾ ( #HarGharTiranga ) ಯಾತ್ರೆಯ ಕುರಿತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು

ಸೂರತ್‌ನಲ್ಲಿ #HarGharTiranga ಅಭಿಯಾನ: ಹರ್ಷ ವ್ಯಕ್ತಪಡಿಸಿದ ಪ್ರಧಾನ ಮಂತ್ರಿ ಮೋದಿ

August 12th, 09:21 pm

ಇಂದು #HarGharTiranga (ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ) ಅಭಿಯಾನದಲ್ಲಿ ಭಾಗವಹಿಸಿದ ಸೂರತ್‌ ಜನರ ಭಾವೋದ್ರಿಕ್ತ ಮನೋಭಾವದ ಬಗ್ಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರೊಫೈಲ್ ಚಿತ್ರವನ್ನು ತ್ರಿವರ್ಣ ಧ್ವಜವನ್ನು ಹೊಂದಿರುವಂತೆ ಬದಲಾಯಿಸಲು ನಾಗರಿಕರಿಗೆ ಪ್ರಧಾನ ಮಂತ್ರಿ ಮನವಿ

August 09th, 09:01 am

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರೊಫೈಲ್ ಚಿತ್ರವನ್ನು ತ್ರಿವರ್ಣ ಧ್ವಜವನ್ನು ಹೊಂದಿರುವಂತೆ ಬದಲಾಯಿಸುಕೊಳ್ಳುವಂತೆ ನಾಗರಿಕರನ್ನು ಕೋರಿದ್ದಾರೆ. ಸ್ವಾತಂತ್ರ್ಯ ದಿನ ಆಚರಿಸಲು ಶ್ರೀ ಮೋದಿ ಅವರು ತಮ್ಮ ಪ್ರೊಫೈಲ್ ಚಿತ್ರವನ್ನು ತ್ರಿವರ್ಣ ಧ್ವಜಕ್ಕೆ ಬದಲಾಯಿಸಿದ್ದಾರೆ. ಹರ್ ಘರ್ ತಿರಂಗಾ ಆಂದೋಲನವನ್ನು ಸ್ಮರಣೀಯ ಜನಾಂದೋಲನವನ್ನಾಗಿ ಮಾಡಲು ಪ್ರತಿಯೊಬ್ಬರೂ ಅದೇ ರೀತಿ ಮಾಡಬೇಕೆಂದು ಅವರು ತಿಳಿಸಿದ್ದಾರೆ.