Prime Minister meets with the Prime Minister of Mauritius
June 28th, 08:45 pm
On the sidelines of Seychelles' Golden Jubilee National Day celebrations, PM Modi met Mauritius Prime Minister Dr. Navinchandra Ramgoolam to review bilateral cooperation and the progress of the Special Economic Package. The two leaders reaffirmed their commitment to the India-Mauritius Enhanced Strategic Partnership, guided by Vision MAHASAGAR and Neighbourhood First policy.Our vision is to make the Indian Ocean an Ocean of Opportunity: PM Modi at the India-Seychelles Joint Press Meet
June 28th, 02:02 pm
Addressing the India-Seychelles Joint Press Meet, PM Modi dedicated the Guardian of the Blue Horizon honour to all nations fighting climate change. Reaffirming the MAHASAGAR Vision, he said India envisions an Indian Ocean where prosperity grows with maritime security and partnerships are rooted in mutual respect and trust. He also highlighted the Blue Economy as a natural and strategic pillar of the India-Seychelles partnership.ಪ್ರಧಾನಮಂತ್ರಿ ಅವರನ್ನು ಭೇಟಿಯಾದ ನೆದರ್ಲ್ಯಾಂಡ್ ಮಹಾರಾಣಿ ಮ್ಯಾಕ್ಸಿಮಾ
June 25th, 10:40 pm
ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿಗಳ ಆರ್ಥಿಕ ಆರೋಗ್ಯದ ವಿಶೇಷ ವಕೀಲರೂ ಆಗಿರುವ ನೆದರ್ಲ್ಯಾಂಡ್ ಮಹಾರಾಣಿ ಮ್ಯಾಕ್ಸಿಮಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು. ಭಾರತದ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ನೇತೃತ್ವದ ಕ್ರಾಂತಿಯು ಹಣಕಾಸು ಸೇವೆಗಳನ್ನು ಹೆಚ್ಚು ಸುಲಭವಾಗಿ ಮತ್ತು ಕೈಗೆಟುಕುವಂತೆ ಮಾಡುವ ಕುರಿತು ನಾವು ಚರ್ಚಿಸಿದ್ದೇವೆ ಎಂದು ಶ್ರೀ ಮೋದಿ ಹೇಳಿದರು. ಪ್ರಪಂಚದಾದ್ಯಂತದ ಪಾಲುದಾರ ರಾಷ್ಟ್ರಗಳೊಂದಿಗೆ ತನ್ನ ಅನುಭವವನ್ನು ಹಂಚಿಕೊಳ್ಳುವ ಭಾರತದ ಬದ್ಧತೆಯನ್ನು ಶ್ರೀ ಮೋದಿ ಪುನರುಚ್ಚರಿಸಿದರು.ಯೋಗದ ಪರಿವರ್ತನಾತ್ಮಕ ಪರಿಣಾಮವನ್ನು ಪ್ರಮುಖವಾಗಿ ಬಿಂಬಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡ ಪ್ರಧಾನಮಂತ್ರಿ
June 22nd, 08:13 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಂತಾರಾಷ್ಟ್ರೀಯ ಯೋಗ ದಿನದ ಗಮನಾರ್ಹ ಯಶಸ್ಸು ಯೋಗವು ವಿಶ್ವದಾದ್ಯಂತ ಲಕ್ಷಾಂತರ ಜನರಿಗೆ ದೈಹಿಕ ಯೋಗಕ್ಷೇಮವನ್ನು ಸಾಧಿಸಲು ಸಹಾಯ ಮಾಡುವುದಲ್ಲದೆ, ಆತ್ಮವಿಶ್ವಾಸದಿಂದ ಸಕಾರಾತ್ಮಕ ಜೀವನ ನಡೆಸಲು ಪ್ರೇರೇಪಿಸುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸೇವಾ ತೀರ್ಥದಲ್ಲಿ ನಡೆದ ಯೋಗ ಸಭೆ
June 21st, 03:51 pm
ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಇಂದು ಹೊಸ ದೆಹಲಿಯ ಸೇವಾ ತೀರ್ಥದಲ್ಲಿ ಯೋಗ ಸಭೆಯನ್ನು ಆಯೋಜಿಸಲಾಗಿತ್ತು.ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
June 21st, 06:45 am
ಗೌರವಾನ್ವಿತ ರಾಜ್ಯಪಾಲ ಶ್ರೀ ಆರ್.ಎನ್. ರವಿ ಜಿ, ಉತ್ಸಾಹಭರಿತ ಮುಖ್ಯಮಂತ್ರಿ ಶ್ರೀ ಸುವೇಂದು ಅಧಿಕಾರಿ ಜಿ, ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಪ್ರತಾಪರಾವ್ ಜಾಧವ್ ಜಿ, ವೇದಿಕೆಯಲ್ಲಿದ್ದ ಎಲ್ಲಾ ಇತರ ಗಣ್ಯರು, ಕೋಲ್ಕತ್ತಾದಲ್ಲಿ ನೆರೆದಿದ್ದ ಎಲ್ಲ ಜನರೇ, ಭಾರತ ಮತ್ತು ವಿಶ್ವದಾದ್ಯಂತದ ಈ ಯೋಗ ಆಚರಣೆಯಲ್ಲಿ ಭಾಗವಹಿಸುತ್ತಿರುವ ಪ್ರತಿಯೊಬ್ಬರೂ ಮತ್ತು ನನ್ನ ಪ್ರೀತಿಯ ದೇಶವಾಸಿಗಳೇ, ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು.ಪಶ್ಚಿಮಬಂಗಾಳದ ಕೋಲ್ಕತ್ತಾದ ರೆಡ್ ರೋಡ್ನಲ್ಲಿ ನಡೆದ 12ನೇ ಅಂತಾರಾಷ್ಟ್ರೀಯ ಯೋಗ ದಿನದ ರಾಷ್ಟ್ರೀಯ ಆಚರಣೆಗೆ ನೇತೃತ್ವ ವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 21st, 06:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋಲ್ಕತ್ತಾದ ರೆಡ್ ರೋಡ್ನಲ್ಲಿ ನಡೆದೆ 12ನೇ ಅಂತಾರಾಷ್ಟ್ರೀಯ ಯೋಗ ದಿನದ ರಾಷ್ಟ್ರೀಯ ಆಚರಣೆಯ ನೇತೃತ್ವ ವಹಿಸಿದ್ದರು. ಶ್ರೀ ನರೇಂದ್ರ ಮೋದಿ ಸಾವಿರಾರು ಯೋಗ ಸಾಧಕರೊಂದಿಗೆ ಸಾಮಾನ್ಯ ಯೋಗ ಶಿಷ್ಟಾಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅಂತಾರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ವಿಶ್ವದಾದ್ಯಂತದ ಜನರಿಗೆ ಶುಭಾಶಯಗಳನ್ನು ತಿಳಿಸಿದ ಶ್ರೀ ನರೇಂದ್ರ ಮೋದಿ, ಜೂನ್ 21 ಅನ್ನು ವಿಶ್ವದ ಹಲವು ಭಾಗಗಳಲ್ಲಿ ವರ್ಷದ ಅತಿ ಉದ್ದದ ದಿನವೆಂದು ಗುರುತಿಸಲಾಗಿದೆ ಮತ್ತು ಯೋಗ ಮಾನವೀಯತೆಯ ಅತಿದೊಡ್ಡ ಸಾಮೂಹಿಕ ಆಚರಣೆಗಳಲ್ಲಿ ಒಂದಾಗಿದೆ ಎಂದು ಉಲ್ಲೇಖಿಸಿದರು.ಪಶ್ಚಿಮ ಬಂಗಾಳದ ತಾರಕೇಶ್ವರದಲ್ಲಿ ನಡೆದ ಪಶ್ಚಿಮಬಂಗಾ ದಿವಸ್ ಆಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಮಾಡಿದ ಭಾಷಣದ ಕನ್ನಡ ಅನುವಾದ
June 20th, 05:13 pm
ಈ ವೇದಿಕೆಯಲ್ಲಿ, ರಾಜ್ಯಪಾಲ ಆರ್.ಎನ್. ರವಿ ಜೀ, ಜನಪ್ರಿಯ ಮತ್ತು ಶಕ್ತಿಯುತ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಜೀ, ಇತರ ಗಣ್ಯರು ಮತ್ತು ಬಂಗಾಳದ ನನ್ನ ಸಹೋದರ ಸಹೋದರಿಯರು - ಬಾಬಾ ತಾರಕನಾಥ್ ಅವರ ಈ ಪವಿತ್ರ ಭೂಮಿ, ಐತಿಹಾಸಿಕ ಪಶ್ಚಿಮ ಬಂಗಾಳ ದಿನಾಚರಣೆಯಂದು ಮತ್ತು ಇಷ್ಟು ದೊಡ್ಡ ಸಭೆಯ ಸಮ್ಮುಖದಲ್ಲಿ, ಚುನಾವಣೆಗಳು ಮತ್ತು ಪ್ರಮಾಣ ವಚನ ಸ್ವೀಕಾರದ ನಂತರ ಮೊದಲ ಬಾರಿಗೆ ನಿಮ್ಮೊಂದಿಗೆ ಇರುವುದಕ್ಕೆ ನನಗೆ ಹೆಮ್ಮೆ ಎನಿಸಿದೆ. ಬಂಗಾಳದ ಗಾಳಿಯು ಈಗ ಹೊಸ ತಾಜಾತನವನ್ನು ಹೊಂದಿದೆ, ಪ್ರತಿಯೊಂದು ಕಣವೂ ಹೊಸ ಪರಿಮಳವನ್ನು ಹೊರಸೂಸುತ್ತಿದೆ. ಬಂಗಾಳವು ಸಂಕೋಲೆಗಳಿಂದ ಮುಕ್ತವಾಗಿದೆ ಎಂದು ಭಾಸವಾಗುತ್ತದೆ, ಬಂಗಾಳದ ಹೆಮ್ಮೆ ಮರಳಲು ಪ್ರಾರಂಭಿಸಿದೆ. ಇಂದಿನ ಕಾರ್ಯಕ್ರಮ, ಈ ಯೋಜನೆಗಳ ಉದ್ಘಾಟನೆಯು ಹೊಸ ಭವಿಷ್ಯವನ್ನು ನಿರ್ಮಿಸುವ ಬಂಗಾಳದ ಬದ್ಧತೆಗೆ ಸಾಕ್ಷಿಯಾಗಿದೆ. ಜನರ ಮುಖಗಳಲ್ಲಿನ ಹೊಳಪು, ಪ್ರತಿ ಹಳ್ಳಿಯಲ್ಲಿನ ಸಂತೋಷ ಮತ್ತು ನಂಬಿಕೆ - ನಿಮ್ಮ ಸಂತೋಷದಲ್ಲಿ ಹಂಚಿಕೊಳ್ಳಲು ನಾನು ಇಲ್ಲಿಗೆ ಬಂದಿದ್ದೇನೆ. ಒಂದು ಮತ, ಒಂದು ಚುನಾವಣೆ, ಅದು ಎಷ್ಟು ಪರಿವರ್ತನೆ ತರಬಹುದು - ಇದು ಬಂಗಾಳದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ನಡೆದ 'ಪಶ್ಚಿಮ ಬಂಗಾ ದಿವಸ' ಆಚರಣೆಯಲ್ಲಿ ಭಾಗವಹಿಸಿದರು
June 20th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳ ದಿವಸ (ಪಶ್ಚಿಮ ಬಂಗಾಳ ದಿನ) ಸಂಭ್ರಮಾಚರಣೆಯಲ್ಲಿ ಭಾಗವಹಿಸಿದರು. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರೊಂದಿಗೆ ನಂಟು ಹೊಂದಿರುವ ಐತಿಹಾಸಿಕ ಮಹತ್ವದ ಸ್ಥಳವಾದ ಹೂಗ್ಲಿಯ ತಾರಕೇಶ್ವರದಲ್ಲಿ ರಾಜ್ಯ ಮಟ್ಟದ ಆಚರಣೆಗಳನ್ನು ಆಯೋಜಿಸಲಾಗಿದೆ. ಈ ವರ್ಷದ ಪಶ್ಚಿಮ ಬಂಗಾಳ ದಿನಾಚರಣೆಯ ವಿಷಯವಾದ ಪಶ್ಚಿಮ ಬಂಗಾಳ: ಪರಂಪರೆ, ಸಾಮರಸ್ಯ ಮತ್ತು ಅಭಿವೃದ್ಧಿ ಎಂಬುದು ರಾಜ್ಯದ ಸಾಂಸ್ಕೃತಿಕ ಶ್ರೀಮಂತಿಕೆ, ಸಾಮಾಜಿಕ ಸಾಮರಸ್ಯ ಮತ್ತು ಅಭಿವೃದ್ಧಿಯ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ.ಒಡಿಶಾ ಸರ್ಕಾರ 2 ವರ್ಷ ಪೂರೈಸಿದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 20th, 01:10 pm
ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಜಿ, ರಾಜ್ಯಪಾಲ ಶ್ರೀ ಹರಿಬಾಬು ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಜಿ, ಉಪಮುಖ್ಯಮಂತ್ರಿ ಶ್ರೀ ಕನಕ ವರ್ಧನ್ ಸಿಂಗ್ ದೇವ್ ಜಿ, ಶ್ರೀಮತಿ. ಪರವತಿ ಪರಿದಾ ಜಿ, ಒಡಿಶಾ ಸಚಿವರಾದ ಶ್ರೀ ಗಣೇಶ್ ಸಿಂಗ್ ಖುಂಟಿಯಾ ಜಿ, ಶ್ರೀಕೃಷ್ಣ ಚಂದ್ರ ಮಹಾಪಾತ್ರ ಜಿ, ಸಂಸತ್ ಸದಸ್ಯರಾದ ಶ್ರೀ ನಬಾ ಚರಣ್ ಮಾಝಿ ಜಿ, ಶ್ರೀ ಮನಮೋಹನ್ ಸಮಲ್ ಜಿ, ಶ್ರೀ ಬೈಜಯಂತ್ ಪಾಂಡಾ ಜಿ, ಇತರೆ ಗಣ್ಯರೆ, ಸಹೋದರ ಮತ್ತು ಸಹೋದರಿಯರೆ,ಮಯೂರ್ಭಂಜ್ ಜಿಲ್ಲೆಯ ರಾಯ್ರಂಗ್ಪುರದಲ್ಲಿ ಒಡಿಶಾ ಸರ್ಕಾರದ ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡ ನೆನಪಿಗಾಗಿ, ₹47,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
June 20th, 01:00 pm
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಯೂರ್ಭಂಜ್ ಜಿಲ್ಲೆಯ ಪಹದ್ಪುರ್ ಗ್ರಾಮಕ್ಕೆ ಭೇಟಿ ನೀಡಿದರು. ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ಅವರು ಪವಿತ್ರ ತೋಪುಗಳಾದ ಸಂತಾಲಿ ಜಾಹೇರಾ ಮತ್ತು ಹೋ ಜಾಹೇರಾ, ಕೌಶಲ್ಯ ಕೇಂದ್ರ ಹಾಗೂ ಪಹಾಡ್ಪುರ ಶಾಲೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಒಡಿಶಾ ಸರ್ಕಾರವು ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮಯೂರ್ಭಂಜ್ ಜಿಲ್ಲೆಯ ರಾಯ್ರಂಗ್ಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿ ಅವರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಥೀಮ್ ವಿಕಾಸ್ ರ ಧಾರಾ, ಒಡಿಶಾ ಸಾರಾ ಎಂಬುದಾಗಿತ್ತು. ಶ್ರೀ ಮೋದಿ ಅವರು ₹47,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು.ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಮಂತ್ರಿ
June 20th, 08:32 am
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹುಟ್ಟುಹಬ್ಬದ ಆತ್ಮೀಯ ಶುಭಾಶಯಗಳನ್ನು ಕೋರಿದ್ದಾರೆ.ಜೂನ್ 20 ರಂದು ಒಡಿಶಾಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
June 19th, 11:53 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜೂನ್ 20 ರಂದು ಒಡಿಶಾಗೆ ಭೇಟಿ ನೀಡಲಿದ್ದಾರೆ. ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಈ ಭೇಟಿಯ ಸಮಯದಲ್ಲಿ ಪ್ರಧಾನಮಂತ್ರಿ ಅವರೊಂದಿಗೆ ಸೇರ್ಪಡೆಯಾಗಲಿದ್ದಾರೆ, ಇದು ರಾಜ್ಯದ ಅಪರೂಪದ ಮತ್ತು ಮಹತ್ವದ ಸಂದರ್ಭವಾಗಿದೆ.ಭಾರತೀಯ ಸಮುದಾಯ ಕಾರ್ಯಕ್ರಮದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
June 18th, 11:41 pm
ಪ್ಯಾರಿಸ್ ನಗರವು ಬೆಳಕು ಮತ್ತು ಬಣ್ಣಗಳ ನಗರ. ಇದು ಕಲೆ, ಕಲ್ಪನೆಗಳು ಮತ್ತು ನಾವೀನ್ಯತೆಗೆ ಸ್ಫೂರ್ತಿಯ ಸ್ಥಳವಾಗಿದೆ. ಭಾರತದ ವಿವಿಧ ರಾಜ್ಯಗಳಿಂದ ಇಲ್ಲಿಗೆ ಬಂದು ನೀವೆಲ್ಲರೂ ಈ ನಗರವನ್ನು ಇನ್ನಷ್ಟು ಸುಂದರಗೊಳಿಸುತ್ತೀರಿ. ನೀವು ಅದನ್ನು ಹೊಸ ಮತ್ತು ರೋಮಾಂಚಕ ಬಣ್ಣಗಳಿಂದ ತುಂಬುತ್ತೀರಿ.ಪ್ಯಾರಿಸ್ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 18th, 09:30 pm
ಜೂನ್ 18, 2026 ರಂದು ಪ್ಯಾರಿಸ್ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಿದರು. ಸ್ಥಳಕ್ಕೆ ಆಗಮಿಸಿದಾಗ, ಪ್ರಧಾನಮಂತ್ರಿಗೆ ಆತ್ಮೀಯ ಮತ್ತು ವರ್ಣರಂಜಿತ ಸ್ವಾಗತ ನೀಡಲಾಯಿತು, ಇದು ಮಾತೃಭೂಮಿಯ ಬಗ್ಗೆ ವಲಸಿಗರ ಆಳವಾದ ವಾತ್ಸಲ್ಯವನ್ನು ಪ್ರತಿಬಿಂಬಿಸುತ್ತದೆ.ಫ್ರಾನ್ಸ್ನ ಎವಿಯನ್ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ "ಕೃತಕ ಬುದ್ಧಿಮತ್ತೆಯ ಸುರಕ್ಷಿತ, ತ್ವರಿತ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವ" ಕುರಿತ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 18th, 05:01 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಫ್ರಾನ್ಸ್ನ ಎವಿಯನ್ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ ಕೃತಕ ಬುದ್ಧಿಮತ್ತೆಯ ಸುರಕ್ಷಿತ, ತ್ವರಿತ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳುವ ವಿಷಯದ ಕುರಿತಾದ ಔಟ್ರೀಚ್ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು.ಜಿ 7 ಶೃಂಗಸಭೆ-ಅಧಿವೇಶನದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಹೇಳಿಕೆಯ ಕನ್ನಡ ಅನುವಾದ: ಎ.ಐ.ಯ (ಕೃತಕ ಬುದ್ಧಿಮತ್ತೆಯ) ಸುರಕ್ಷಿತ, ತ್ವರಿತ ಮತ್ತು ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸುವಿಕೆ
June 17th, 09:20 pm
ನಮ್ಮ ಚರ್ಚೆಗಳಲ್ಲಿ ಈ ಪ್ರಮುಖ ವಿಷಯವನ್ನು ಸೇರಿಸಿದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರನ್ನು ನಾನು ಅಭಿನಂದಿಸುತ್ತೇನೆ. ಕೃತಕ ಬುದ್ಧಿಮತ್ತೆಯು ಮಾನವಕುಲವು ಇದುವರೆಗೆ ಸೃಷ್ಟಿಸಿದ ಅತ್ಯಂತ ಪರಿವರ್ತಕ ತಂತ್ರಜ್ಞಾನಗಳಲ್ಲಿ ಒಂದಾಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ.Today, the world does not suffer from a shortage of resources; it suffers from a shortage of trust: PM Modi at G7 Summit in Evian, France
June 16th, 10:12 pm
Addressing the Outreach Session on “Forging New Partnerships and Rebuilding International Solidarity” at the G7 Summit in France, PM Modi emphasized that building trust, transparency and stronger international partnerships is essential in an interconnected world. He highlighted India’s “Humanity First” approach, called for greater global solidarity, and stressed the importance of dialogue, diplomacy and respect for international law in ensuring peace and stability.ಫ್ರಾನ್ಸ್ನಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ “ಹೊಸ ಪಾಲುದಾರಿಕೆಗಳನ್ನು ರೂಪಿಸುವುದು ಮತ್ತು ಅಂತಾರಾಷ್ಟ್ರೀಯ ಒಗ್ಗಟ್ಟಿನ ಪುನರ್ ನಿರ್ಮಾಣ’’ ಕುರಿತ ಗೋಷ್ಠಿಯನ್ನುದ್ದೇಶಿ ಭಾಷಣ ಮಾಡಿದ ಪ್ರಧಾನಮಂತ್ರಿ
June 16th, 10:07 pm
ಪ್ರಧಾನಮಂತ್ರಿ ತಮ್ಮ ಭಾಷಣದಲ್ಲಿ ಇಂಧನ, ಆಹಾರ, ಆರೋಗ್ಯ, ಸೈಬರ್ ಮತ್ತು ಆರ್ಥಿಕ ಭದ್ರತೆ ಬೆಸೆದುಕೊಂಡಿರುವ ಅಂತರ ಸಂಪರ್ಕಿತ ಜಗತ್ತಿನಲ್ಲಿ ಅಂತಾರಾಷ್ಟ್ರೀಯ ಪಾಲುದಾರಿಕೆಗಳನ್ನು ನಿರ್ಮಿಸುವುದು ಮಾನವೀಯತೆಯ ಪ್ರಗತಿ ಮತ್ತು ಸಮೃದ್ಧಿಗೆ ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು. ಅನಿಶ್ಚಿತತೆಯ ಜಗತ್ತಿನಲ್ಲಿ ವ್ಯಾಪಾರ ಮತ್ತು ತಂತ್ರಜ್ಞಾನವನ್ನು ಸಂಕುಚಿತ ಹಿತಾಸಕ್ತಿಗಳಿಗಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ, ಇದು ಅಂತಾರಾಷ್ಟ್ರೀಯ ರಂಗದಲ್ಲಿ ನಂಬಿಕೆಯ ಕೊರತೆಗೆ ಕಾರಣವಾಗುತ್ತದೆ ಎಂದು ಅವರು ಹೇಳಿದರು. ಕೋವಿಡ್ ಸಾಂಕ್ರಾಮಿಕ ರೋಗದಿಂದ ಕಲಿತ ಪಾಠಗಳನ್ನು ಉಲ್ಲೇಖಿಸಿದ ಅವರು, ಜಾಗತಿಕ ಪಾಲುದಾರಿಕೆಗಳಲ್ಲಿ ನಂಬಿಕೆ ಮತ್ತು ಪಾರದರ್ಶಕತೆಯನ್ನು ನಿರ್ಮಿಸುವತ್ತ ಗಮನಹರಿಸಲು ರಾಷ್ಟ್ರಗಳಿಗೆ ಕರೆ ನೀಡಿದರು.ಸ್ಲೋವಾಕ್ ದೇಶದ ವ್ಯವಹಾರ ಕ್ಷೇತ್ರದ ದಿಗ್ಗಜರೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
June 15th, 09:14 pm
ಸ್ಲೋವಾಕಿಯಾದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ರಾಬರ್ಟ್ ಫಿಕೊ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರೈಲ್ವೆ, ರಕ್ಷಣೆ, ವಾಹನಗಳು, ಇಂಧನ, ಐಟಿ, ಆರೋಗ್ಯ ರಕ್ಷಣೆ ಸೇರಿದಂತೆ ಸ್ಲೋವಾಕಿಯಾದ ಪ್ರಮುಖ ವ್ಯವಹಾರ ಕ್ಷೇತ್ರದ ಮತ್ತು ಕೈಗಾರಿಕಾ ನಾಯಕರೊಂದಿಗೆ ಜಂಟಿಯಾಗಿ ಸಂವಾದ ನಡೆಸಿದರು.