Cabinet approves Regional Connectivity Scheme – Modified UDAN with a total outlay of Rs.28,840 crore

March 25th, 04:16 pm

The Union Cabinet, chaired by PM Modi, has approved the launch and implementation of the Regional Connectivity Scheme – Modified UDAN for a period of ten years from FY 2026-27 to FY 2035-36, with a total outlay of Rs. 28,840 crore. In line with the Viksit Bharat 2047 vision, this initiative will enhance regional air connectivity, boost economic growth, trade and tourism and promote the indigenous aerospace sector.

ನವದೆಹಲಿಯ ಕಾರಿಯಪ್ಪ ಮೈದಾನದಲ್ಲಿ ನಡೆದ ಎನ್ ಸಿಸಿ ರ‍್ಯಾಲಿ (Rally) ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 28th, 04:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ, ರಕ್ಷಣಾ ಸಚಿವರಾದ ಶ್ರೀ ರಾಜನಾಥ್ ಸಿಂಗ್ ಜಿ, ವೇದಿಕೆಯಲ್ಲಿರುವ ಇತರೆ ಎಲ್ಲ ಗಣ್ಯರೆ, ದೇಶಾದ್ಯಂತ ಬಂದಿರುವ ಎನ್ ಸಿ ಸಿ ಮತ್ತು ಎನ್‌ ಎಸ್‌ ಎಸ್ ಕೆಡೆಟ್ ‌ಗಳೆ, ಟ್ಯಾಬ್ಲೊ ಕಲಾವಿದರೆ, ರಾಷ್ಟ್ರೀಯ ರಂಗಶಾಲೆಯ ಸಹೋದ್ಯೋಗಿಗಳೆ ಮತ್ತು ನನ್ನ ಪ್ರೀತಿಯ ಯುವ ಸ್ನೇಹಿತರೆ. ನಿಮ್ಮೆಲ್ಲರ ಕಠಿಣ ಪರಿಶ್ರಮ ಇಲ್ಲಿ ಗೋಚರಿಸುತ್ತಿದೆ. ನೀವು ಉತ್ತಮ ಸಮನ್ವಯದಿಂದ ನಿಮ್ಮ ಪ್ರದರ್ಶನವನ್ನು ತೋರಿದ್ದೀರಿ.

ದೆಹಲಿಯಲ್ಲಿ ನಡೆದ ವಾರ್ಷಿಕ ಎನ್‌ಸಿಸಿ ಪ್ರಧಾನಮಂತ್ರಿ ಪರೇಡ್ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

January 28th, 03:30 pm

ದೆಹಲಿಯಲ್ಲಿ ಕಾರಿಯಪ್ಪ ಪರೇಡ್ ಮೈದಾನದಲ್ಲಿ ಇಂದು ನಡೆದ ವಾರ್ಷಿಕ ಎನ್‌ಸಿಸಿ ಪ್ರಧಾನಮಂತ್ರಿ ಪರೇಡನ್ನು (ರ‍್ಯಾಲಿಯನ್ನು) ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಎನ್‌ಸಿಸಿ ದಿನದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎನ್‌ಸಿಸಿ, ಎನ್‌ಎಸ್‌ಎಸ್ ಕೆಡೆಟ್‌ಗಳು, ಟ್ಯಾಬ್ಲೋ ಕಲಾವಿದರು, ರಾಷ್ಟ್ರೀಯ ರಂಗಶಾಲೆಯ ಸಹಚರರು ಮತ್ತು ದೇಶಾದ್ಯಂತದ ಯುವ ಪಾಲ್ಗೊಳ್ಳುವಿಕೆಯ ಪ್ರಯತ್ನಗಳು ಅವರ ಸಂಘಟಿತ ಪ್ರದರ್ಶನಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತವೆ ಎಂದು ಹೇಳಿದರು. ಇಂದು ಬೆಳಿಗ್ಗೆ ಮಹಾರಾಷ್ಟ್ರದಲ್ಲಿ ಸಂಭವಿಸಿದ ವಿಮಾನ ಅಪಘಾತದಿಂದಾಗಿ ಈ ದಿನವು ತೀವ್ರ ದುಃಖವನ್ನುಂಟುಮಾಡಿದೆ ಎಂದು ಶ್ರೀ ಮೋದಿ ದುಃಖದಿಂದ ನುಡಿದರು, ಇದರಲ್ಲಿ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ಮತ್ತು ಕೆಲವು ಸಹೋದ್ಯೋಗಿಗಳು ಸಾವನ್ನಪ್ಪಿದ್ದಾರೆ. ಅಜಿತ್ ದಾದಾ ಅವರು ಮಹಾರಾಷ್ಟ್ರ ಮತ್ತು ರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಗ್ರಾಮೀಣ ಜೀವನವನ್ನು ಸುಧಾರಿಸಲು ಕೆಲಸ ಮಾಡುವ ಮೂಲಕ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಅವರು ಎತ್ತಿ ತೋರಿಸಿದರು ಮತ್ತು ಶ್ರೀ ಅಜಿತ್ ಪವಾರ್ ಜೀ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದರು. ಈ ನೋವಿನ ಕ್ಷಣದಲ್ಲಿ, ಅಪಘಾತದಲ್ಲಿ ಮಡಿದವರ ಕುಟುಂಬಗಳೊಂದಿಗೆ ರಾಷ್ಟ್ರವು ನಿಂತಿದೆ ಎಂದು ಅವರು ಹೇಳಿದರು. ದುಃಖ ಮತ್ತು ಸಂತಾಪದ ಈ ಕ್ಷಣಗಳ ನಡುವೆ ಪ್ರಧಾನಿ, ಸ್ನೇಹಪರ ರಾಷ್ಟ್ರಗಳವರು ಸೇರಿದಂತೆ ಹಾಜರಿದ್ದ ಎಲ್ಲಾ ಕೆಡೆಟ್‌ಗಳಿಗೆ ಶುಭಾಶಯಗಳನ್ನು ತಿಳಿಸಿದರು ಮತ್ತು ಈ ವರ್ಷ ಬಾಲಕಿಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಗುರುತಿಸಿದರು.

ಗುಜರಾತ್‌ನ ಭಾವನಗರದಲ್ಲಿ 'ಸಮುದ್ರ ಸೇ ಸಮೃದ್ಧಿ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

September 20th, 11:00 am

ಗುಜರಾತ್‌ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಸಿ.ಆರ್. ಪಾಟೀಲ್, ಮನ್ಸುಖ್‌ಭಾಯಿ ಮಾಂಡವಿಯಾ, ಶಾಂತನು ಠಾಕೂರ್, ನಿಮುಬೆನ್ ಬಂಭಾನಿಯಾ, ದೇಶಾದ್ಯಂತ 40ಕ್ಕೂ ಹೆಚ್ಚು ಸ್ಥಳಗಳಿಂದ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ಗಣ್ಯರೆ, ಎಲ್ಲಾ ಪ್ರಮುಖ ಬಂದರುಗಳೊಂದಿಗೆ ಸಂಪರ್ಕ ಹೊಂದಿರುವ ವಿವಿಧ ರಾಜ್ಯಗಳ ಸಚಿವರೆ, ಹಿರಿಯ ಅಧಿಕಾರಿಗಳೆ, ಇತರೆ ಗಣ್ಯ ಅತಿಥಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಾನು ನಿಮ್ಮೆಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್‌ನ ಭಾವನಗರದಲ್ಲಿ 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು

September 20th, 10:30 am

ಗುಜರಾತ್‌ನ ಭಾವನಗರದಲ್ಲಿ ಇಂದು 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲಾ ಗಣ್ಯರು ಮತ್ತು ಜನರನ್ನು ಸ್ವಾಗತಿಸಿದರು. ಸೆಪ್ಟೆಂಬರ್ 17 ರಂದು ತಮಗೆ ಕಳುಹಿಸಲಾದ ಹುಟ್ಟುಹಬ್ಬದ ಶುಭಾಶಯಗಳನ್ನು ಸ್ವೀಕರಿಸಿದ ಪ್ರಧಾನಮಂತ್ರಿ, ಜನರಿಂದ ಪಡೆದ ಪ್ರೀತಿಯು ಶಕ್ತಿಯ ದೊಡ್ಡ ಮೂಲವಾಗಿದೆ ಎಂದು ಹೇಳಿದರು, ರಾಷ್ಟ್ರವು ವಿಶ್ವಕರ್ಮ ಜಯಂತಿಯಿಂದ ಗಾಂಧಿ ಜಯಂತಿಯವರೆಗೆ, ಅಂದರೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸೇವಾ ಪಖ್ವಾಡವನ್ನು ಆಚರಿಸುತ್ತಿದೆ ಎಂದು ಅವರು ಎತ್ತಿ ತೋರಿಸಿದರು. ಕಳೆದ 2-3 ದಿನಗಳಲ್ಲಿ ಗುಜರಾತ್‌ನಲ್ಲಿ ಹಲವಾರು ಸೇವಾ-ಆಧಾರಿತ ಚಟುವಟಿಕೆಗಳು ನಡೆದಿವೆ ಎಂದು ಅವರು ಹೇಳಿದರು. ನೂರಾರು ಸ್ಥಳಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ, ಇಲ್ಲಿಯವರೆಗೆ ಒಂದು ಲಕ್ಷ ವ್ಯಕ್ತಿಗಳು ರಕ್ತದಾನ ಮಾಡಿದ್ದಾರೆ ಎಂಬುದರತ್ತ ಪ್ರಧಾನಮಂತ್ರಿ ಗಮನ ಸೆಳೆದರು. ಹಲವಾರು ನಗರಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ನಡೆಸಲಾಗಿದ್ದು, ಲಕ್ಷಾಂತರ ನಾಗರಿಕರು ಸಕ್ರಿಯವಾಗಿ ಭಾಗವಹಿಸಿದ್ದಾರೆ ಎಂದು ಅವರು ಹೇಳಿದರು. ರಾಜ್ಯಾದ್ಯಂತ 30,000 ಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರಿಗೆ ಮತ್ತು ವಿಶೇಷವಾಗಿ ಮಹಿಳೆಯರಿಗೆ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ದೇಶಾದ್ಯಂತ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರಿಗೂ ಅವರು ತಮ್ಮ ಮೆಚ್ಚುಗೆ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸಿದರು.

ತಮಿಳುನಾಡಿನ ತೂತುಕುಡಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 26th, 08:16 pm

ತಮಿಳುನಾಡು ರಾಜ್ಯಪಾಲರಾದ ಗೌರವಾನ್ವಿತ ಆರ್.ಎನ್. ರವಿ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಕಿಂಜರಾಪು ರಾಮಮೋಹನ್ ನಾಯ್ಡು ಜಿ, ಡಾ. ಎಲ್. ಮುರುಗನ್ ಜಿ, ತಮಿಳುನಾಡು ಸಚಿವರಾದ ತಂಗಂ ತೆನ್ನರಸು ಜಿ, ಡಾ. ಟಿ.ಆರ್.ಬಿ. ರಾಜಾ ಜಿ, ಪಿ. ಗೀತಾ ಜೀವನ್ ಜಿ, ಅನಿತಾ ಆರ್. ರಾಧಾಕೃಷ್ಣನ್ ಜಿ, ಸಂಸದೆ ಕನಿಮೊಳಿ ಜಿ, ತಮಿಳುನಾಡು ಬಿಜೆಪಿ ಅಧ್ಯಕ್ಷರು ಮತ್ತು ನಮ್ಮ ಶಾಸಕರಾದ ನಾಯನಾರ್ ನಾಗೇಂದ್ರನ್ ಜಿ, ಮತ್ತು ತಮಿಳುನಾಡಿನ ನನ್ನ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು

July 26th, 07:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ದೇಶದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು. ಪ್ರಾದೇಶಿಕ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುವ, ಸಾರಿಗೆ ಸೌಲಭ್ಯದ ದಕ್ಷತೆಯನ್ನು ಹೆಚ್ಚಿಸುವ, ಶುದ್ಧ ಇಂಧನ ಮೂಲಸೌಕರ್ಯವನ್ನು ಬಲಪಡಿಸುವ ಹಾಗು ತಮಿಳುನಾಡಿನಾದ್ಯಂತ ನಾಗರಿಕರ ಜೀವನ ಮಟ್ಟವನ್ನು ಸುಧಾರಿಸುವ ಬಹು ವಲಯಗಳಲ್ಲಿ ಪ್ರಮುಖವಾದ ಯೋಜನೆಗಳ ಸರಣಿ ಇದಾಗಿದೆ. ಕಾರ್ಗಿಲ್ ವಿಜಯ ದಿವಸದ ಸಂದರ್ಭದಲ್ಲಿ, ಶ್ರೀ ಮೋದಿ ಕಾರ್ಗಿಲ್ ನ ವೀರ ಸೇನಾನಿಗಳಿಗೆ ಗೌರವ ಸಲ್ಲಿಸಿದರು ಮತ್ತು ವೀರ ಯೋಧರಿಗೆ ನಮನ ಸಲ್ಲಿಸಿದರು ಮತ್ತು ರಾಷ್ಟ್ರಕ್ಕಾಗಿ ಬೆಲೆಕಟ್ಟಲಾಗದ ತ್ಯಾಗ ಮಾಡಿದ ಹುತಾತ್ಮರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.

ವೈದ್ಯರ ದಿನವಾದ ಇಂದು ಪ್ರಧಾನಮಂತ್ರಿಯವರು ವೈದ್ಯರಿಗೆ ಶುಭ ಹಾರೈಸಿದ್ದಾರೆ

July 01st, 09:37 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ವೈದ್ಯರ ದಿನವಾದ ಇಂದು ಎಲ್ಲಾ ವೈದ್ಯರಿಗೆ ಶುಭಾಶಯ ಕೋರಿದ್ದಾರೆ. ನಮ್ಮ ವೈದ್ಯರು ತಮ್ಮ ಕೌಶಲ್ಯ ಮತ್ತು ಶ್ರದ್ಧೆಯಿಂದ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಅವರ ಕರುಣಾ ಮನೋಭಾವವೂ ಅಷ್ಟೇ ಗಮನಾರ್ಹವಾಗಿದೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ.