Prime Minister congratulates people of Chhattisgarh for special celebration of ‘Bastar Pandum’ festival

February 10th, 10:42 am

The Prime Minister, Shri Narendra Modi has congratulated the people of Chhattisgarh for special celebration of ‘Bastar Pandum’ festival, between February 7 and 9 in Chhattisgarh. During the festival, the rich culture, traditions, and tribal heritage of Bastar were showcased in a magnificent way. Shri Modi stated that such events play a vital role in preserving our cultural heritage and empowering local communities.

PM Modi shares a Sanskrit Subhashitam Invoking Blessings for Health, Longevity and Service to the Nation

February 06th, 11:53 am

PM Modi today drew upon India’s timeless civilizational wisdom, invoking a prayer that reflects the nation’s collective aspiration. Quoting an ancient Sanskrit verse, the Prime Minister emphasized that the invocation embodies the spirit of India’s cultural heritage—where reverence for the Earth, commitment to well-being and dedication to service form the foundation of national progress.

'ಬೀಟಿಂಗ್ ರಿಟ್ರೀಟ್' ಸಮಾರಂಭವು ಭಾರತದ ಶ್ರೀಮಂತ ಮಿಲಿಟರಿ ಪರಂಪರೆಯ ಶಕ್ತಿಯನ್ನು ಪ್ರದರ್ಶಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.

January 29th, 09:51 am

'ಬೀಟಿಂಗ್ ರಿಟ್ರೀಟ್' ಸಮಾರಂಭವು ಗಣರಾಜ್ಯೋತ್ಸವ ಕಾರ್ಯಕ್ರಮದ ಮುಕ್ತಾಯವನ್ನು ಸಂಕೇತಿಸುತ್ತದೆ ಮತ್ತು ಭಾರತದ ಶ್ರೀಮಂತ ಮಿಲಿಟರಿ ಪರಂಪರೆಯ ಶಕ್ತಿಯನ್ನು ಪ್ರದರ್ಶಿಸುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ದೇಶದ ರಕ್ಷಣೆಗೆ ಸಮರ್ಪಿತವಾಗಿರುವ ನಮ್ಮ ಸಶಸ್ತ್ರ ಪಡೆಗಳ ಬಗ್ಗೆ ನಮಗೆ ತುಂಬಾ ಹೆಮ್ಮೆ ಅನಿಸುತ್ತದೆ ಎಂದು ಶ್ರೀ ಮೋದಿ ಬಣ್ಣಿಸಿದ್ದಾರೆ.

ಉತ್ತರ ಪ್ರದೇಶ ರಾಜ್ಯೋತ್ಸವದ ಸಂದರ್ಭದಲ್ಲಿ ರಾಜ್ಯದ ಜನತೆಗೆ ಶುಭಾಶಯ ಕೋರಿದ ಪ್ರಧಾನಮಂತ್ರಿ

January 24th, 08:50 am

ಉತ್ತರ ಪ್ರದೇಶ ರಾಜ್ಯ ಸ್ಥಾಪನಾ ದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಎಲ್ಲಾ ಜನತೆಗೆ ಹೃದಯಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಭಾರತದ ಸಂಸ್ಕೃತಿ ಮತ್ತು ಪರಂಪರೆಯ ಶ್ರೀಮಂತಿಕೆಗೆ ಉತ್ತರ ಪ್ರದೇಶ ನೀಡಿರುವ ಅಮೂಲ್ಯ ಕೊಡುಗೆಯನ್ನು ಅವರು ಶ್ಲಾಘಿಸಿದರು.

Ending TMC’s Maha Jungle Raj and bringing BJP’s good governance is essential: PM Modi in Singur, West Bengal

January 18th, 03:35 pm

PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”

PM Modi addresses a massive public rally in Singur, Hooghly, West Bengal

January 18th, 03:32 pm

PM Modi addressed a massive public rally in Singur, Hooghly, where he said the overwhelming public enthusiasm reflected Bengal’s resolve for real poriborton and an end to 15 years of what he termed as Maha Jungle Raj. Calling upon the people to take a pledge for change, he led the crowd in the slogan, “Paltaano Dorkar… Chai BJP Shorkar.”

ಗುವಾಹತಿಯಲ್ಲಿ “ಬಾಗುರೂಂಬಾ ದೊಹೊ” ಸಾಂಪ್ರದಾಯಿಕ ಬೋಡೊ ಸಾಂಸ್ಕೃತಿಕ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 17th, 06:30 pm

ಅಸ್ಸಾಂ ರಾಜ್ಯಪಾಲರಾದ ಶ್ರೀ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರೇ, ಮುಖ್ಯಮಂತ್ರಿ ಶ್ರೀ ಹಿಮಂತ ಬಿಸ್ವಾ ಶರ್ಮಾ ಅವರೇ, ಕೇಂದ್ರ ಸರ್ಕಾರದ ನನ್ನ ಸಹೋದ್ಯೋಗಿಗಳಾದ ಶ್ರೀ ಸರ್ಬಾನಂದ ಸೋನೋವಾಲ್ ಅವರೇ, ಪಬಿತ್ರ ಮಾರ್ಗರಿಟಾ ಅವರೇ, ಅಸ್ಸಾಂ ವಿಧಾನಸಭೆ ಸ್ಪೀಕರ್ ಶ್ರೀ ಬಿಸ್ವಾಜಿತ್ ಡೈಮರಿ ಅವರೇ, ಬೋಡೊಲ್ಯಾಂಡ್ ಪ್ರಾದೇಶಿಕ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಸದಸ್ಯ ಹಗ್ರಾಮ ಮೊಹಿಲರಿ ಅವರೇ, ರಾಜ್ಯ ಸರ್ಕಾರದ ಸಚಿವರೆ, ಎಲ್ಲಾ ಗೌರವಾನ್ವಿತ ನಾಗರಿಕ ಸಹೋದರ ಸಹೋದರಿಯರೆ ಮತ್ತು ಅಸ್ಸಾಂನ ನನ್ನ ಸಹೋದರ ಸಹೋದರಿಯರೆ,

ಅಸ್ಸಾಂನ ಗುವಾಹಟಿಯಲ್ಲಿ ನಡೆದ "ಬಾಗುರೂಂಬಾ ದೊಹೊ," ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು

January 17th, 06:00 pm

ಗುವಾಹಟಿಯ ಸರುಸಜೈ ಕ್ರೀಡಾಂಗಣದಲ್ಲಿ ಬೋಡೋ ಸಮುದಾಯದ ಶ್ರೀಮಂತ ಪರಂಪರೆಯನ್ನು ಆಚರಿಸುವ ಐತಿಹಾಸಿಕ ಸಾಂಸ್ಕೃತಿಕ ಕಾರ್ಯಕ್ರಮವಾದ ಬಾಗುರೂಂಬಾ ದೊಹೊ 2026 ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಅಸ್ಸಾಂನ ಸಂಸ್ಕೃತಿಯನ್ನು ವೀಕ್ಷಿಸುವುದು ಮತ್ತು ಬೋಡೋ ಸಮುದಾಯದ ಸಂಪ್ರದಾಯಗಳನ್ನು ಸೂಕ್ಷ್ಮವಾಗಿ ಗಮನಿಸುವುದು ತಮ್ಮ ಸೌಭಾಗ್ಯ ಎಂದು ಹೇಳಿದರು. ಈ ಹಿಂದಿನ ಯಾವುದೇ ಪ್ರಧಾನಮಂತ್ರಿಗಳು, ಅಸ್ಸಾಂಗೆ ತಾವು ಭೇಟಿ ನೀಡಿದಷ್ಟು ಬಾರಿ ಭೇಟಿ ನೀಡಲಿಲ್ಲ ಎಂದು ಹೇಳಿದ ಶ್ರೀ ಮೋದಿ ಅವರು, ಅಸ್ಸಾಂನ ಕಲೆ ಮತ್ತು ಸಂಸ್ಕೃತಿ ದೊಡ್ಡ ವೇದಿಕೆಯನ್ನು ಪಡೆಯಬೇಕು ಮತ್ತು ಭವ್ಯ ಆಚರಣೆಗಳ ಮೂಲಕ ರಾಷ್ಟ್ರ ಮತ್ತು ಪ್ರಪಂಚದಾದ್ಯಂತ ಮನ್ನಣೆ ಪಡೆಯಬೇಕು ಎಂಬ ತಮ್ಮ ನಿರಂತರ ಆಶಯವನ್ನು ಒತ್ತಿ ಹೇಳಿದರು. ದೊಡ್ಡ ಪ್ರಮಾಣದ ಬಿಹು ಉತ್ಸವಗಳು, ಜುಮೋಯಿರ್ ಬಿನೋಂದಿನಿಯ ಅಭಿವ್ಯಕ್ತಿ, ಒಂದೂವರೆ ವರ್ಷಗಳ ಹಿಂದೆ ನವದೆಹಲಿಯಲ್ಲಿ ನಡೆದ ಭವ್ಯ ಬೋಡೋ ಮಹೋತ್ಸವ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉಲ್ಲೇಖಿಸಿ ಈ ದಿಕ್ಕಿನಲ್ಲಿ ನಿರಂತರ ಪ್ರಯತ್ನಗಳು ನಡೆದಿವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಅಸ್ಸಾಂನ ಕಲೆ ಮತ್ತು ಸಂಸ್ಕೃತಿಯ ವಿಶಿಷ್ಟತೆ , ವೈವಿಧ್ಯತೆಗಳ ಆನಂದವನ್ನು ಅನುಭವಿಸುವ ಅವಕಾಶವನ್ನು ತಾವು ಎಂದಿಗೂ ಕಳೆದುಕೊಳ್ಳುವುದಿಲ್ಲ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಮತ್ತೊಮ್ಮೆ, ಬಾಗುರುಂಬಾ ಉತ್ಸವವನ್ನು ಆಯೋಜಿಸಲಾಗುತ್ತಿದೆ ಎಂದು ಅವರು ಹೇಳಿದರು, ಇದು ಅನನ್ಯ ಬೋಡೋ ಗುರುತಿನ ವೈವಿಧ್ಯಮಯ ಆಚರಣೆ ಮತ್ತು ಅಸ್ಸಾಂನ ಪರಂಪರೆಗೆ ಗೌರವ ತುಂಬುತ್ತದೆ ಎಂದು ಅವರು ಬಣ್ಣಿಸಿದರು. ಈ ಕಾರ್ಯಕ್ರಮದೊಂದಿಗೆ ಸಂಬಂಧ ಹೊಂದಿರುವ ಎಲ್ಲರಿಗೂ, ವಿಶೇಷವಾಗಿ ಕಲಾವಿದರಿಗೆ ಶ್ರೀ ಮೋದಿ ಅವರು ತಮ್ಮ ಶುಭಾಶಯಗಳು ಮತ್ತು ಅಭಿನಂದನೆಗಳನ್ನು ವ್ಯಕ್ತಪಡಿಸಿದರು.

ಜನವರಿ 17-18 ರಂದು ಅಸ್ಸಾಂಗೆ ಪ್ರಧಾನಮಂತ್ರಿ ಭೇಟಿ

January 16th, 02:51 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜನವರಿ 17-18, ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ.

ಕಚ್ ಮತ್ತು ಸೌರಾಷ್ಟ್ರ ಪ್ರಾಂತ್ಯದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

January 11th, 02:45 pm

2026ರ ಆರಂಭದ ನಂತರ ಗುಜರಾತ್ ಗೆ ಇದು ನನ್ನ ಮೊದಲ ಭೇಟಿಯಾಗಿದೆ. ಈ ವರ್ಷದ ನನ್ನ ಪ್ರಯಾಣವು ಸೋಮನಾಥ ದಾದಾ ಅವರ ಪಾದಗಳಿಗೆ ತಲೆಬಾಗುವ ಮೂಲಕ ಪ್ರಾರಂಭವಾಗಿರುವುದು ಅತ್ಯಂತ ಮಂಗಳಕರ ಸಂಗತಿಯಾಗಿದೆ. ಈಗ ನಾನು ಈ ಭವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೋಟ್ ನಲ್ಲಿದ್ದೇನೆ. 'ಅಭಿವೃದ್ಧಿ ಮತ್ತು ಪರಂಪರೆ' ಎಂಬ ಮಂತ್ರವು ಇಂದು ಎಲ್ಲೆಡೆ ಪ್ರತಿಧ್ವನಿಸುತ್ತಿದೆ. ದೇಶದ ಮೂಲೆ ಮೂಲೆಗಳಿಂದ ಮತ್ತು ವಿಶ್ವದಾದ್ಯಂತ ಈ 'ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆ'ಗೆ ಆಗಮಿಸಿರುವ ನಿಮ್ಮೆಲ್ಲರಿಗೂ ನಾನು ಹೃತ್ಪೂರ್ವಕ ಸ್ವಾಗತ ಮತ್ತು ಶುಭಾಶಯಗಳನ್ನು ಕೋರುತ್ತೇನೆ.

ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು

January 11th, 02:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಕಚ್ ಮತ್ತು ಸೌರಾಷ್ಟ್ರ ಪ್ರದೇಶಕ್ಕಾಗಿ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಸಮ್ಮೇಳನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, 2026ರಲ್ಲಿ ಇದು ಗುಜರಾತ್‌ಗೆ ಅವರ ಮೊದಲ ಭೇಟಿ ಎಂದು ಹೇಳಿದರು. ಬೆಳಿಗ್ಗೆ ತಾವು ಭಗವಾನ್ ಸೋಮನಾಥನ ದಿವ್ಯ ದರ್ಶನ ಪಡೆದು, ಈಗ ರಾಜ್‌ಕೋಟ್‌ನಲ್ಲಿ ನಡೆದ ಭವ್ಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆ ಎನಿಸಿದೆ ಎಂದು ಹೇಳಿದರು. ವಿಕಾಸ್ ಭಿ, ವಿರಾಸತ್ ಭಿ ಎಂಬ ಮಂತ್ರ ಎಲ್ಲೆಡೆ ಪ್ರತಿಧ್ವನಿಸುತ್ತಿದೆ ಎಂದರು. ದೇಶಾದ್ಯಂತ ಮತ್ತು ಪ್ರಪಂಚದಾದ್ಯಂತದಿಂದ ವೈಬ್ರಂಟ್ ಗುಜರಾತ್ ಪ್ರಾದೇಶಿಕ ಶೃಂಗಸಭೆಯಲ್ಲಿ ಭಾಗವಹಿಸಲು ಬಂದಿದ್ದ ಎಲ್ಲಾ ಸಹೋದ್ಯೋಗಿಗಳನ್ನು ಪ್ರಧಾನಮಂತ್ರಿ ಸ್ವಾಗತಿಸಿದರು ಮತ್ತು ಶುಭಾಶಯಗಳನ್ನು ತಿಳಿಸಿದರು.

ಶ್ರೀಮದ್ ವಿಜಯರತ್ನ ಸುಂದರ್ ಸುರೀಶ್ವರ್‌ಜಿ ಮಹಾರಾಜ್ ಅವರ 500ನೇ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಸಂದೇಶ

January 11th, 01:00 pm

ಈ ಪವಿತ್ರ ಸಮಾರಂಭದಲ್ಲಿ ನಮ್ಮ ಸ್ಫೂರ್ತಿಯ ಸೆಲೆಯಾದ ಪೂಜ್ಯ ಭುವನಭಾನು ಸುರೀಶ್ವರ್ ಜಿ ಮಹಾರಾಜ್ ಅವರ ಪಾದಗಳಿಗೆ ನಾನು ಮೊದಲು ನಮಸ್ಕರಿಸುತ್ತೇನೆ. ಈ ಸಮಾರಂಭದಲ್ಲಿ ಉಪಸ್ಥಿತರಿರುವ ಪ್ರಶಾಂತಮೂರ್ತಿ ಸುವಿಶಾಲ ಗಚ್ಛಾಧಿಪತಿ ಪೂಜ್ಯ ಶ್ರೀಮದ್ ವಿಜಯ್ ರಾಜೇಂದ್ರ ಸುರೀಶ್ವರ ಜೀ ಮಹಾರಾಜ್, ಪೂಜ್ಯ ಗಚ್ಛಾಧಿಪತಿ ಶ್ರೀ ಕಲ್ಪತರು ಸುರೀಶ್ವರ್ ಜಿ ಮಹಾರಾಜ್, ಸರಸ್ವತಿ ಕೃಪಾಪಾತ್ರ ಪರಮ ಪೂಜ್ಯ ಆಚಾರ್ಯ ಭಗವಂತ ಶ್ರೀಮದ್ ವಿಜಯರತ್ನ ಸುಂದರ ಸುರೀಶ್ವರ ಜೀ ಮಹಾರಾಜರು ಮತ್ತು ಇಲ್ಲಿ ನೆರೆದಿರುವ ಎಲ್ಲಾ ಸಾಧು ಸಂತರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.

ಶ್ರೀಮದ್ ವಿಜಯರತ್ನ ಸುಂದರ್ ಸುಂದರ್ ಸುರೀಶ್ವರ್ಜಿ ಮಹಾರಾಜ್ ಅವರ 500ನೇ ಪುಸ್ತಕ ಬಿಡುಗಡೆ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ

January 11th, 12:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೊ ಸಂದೇಶದ ಮೂಲಕ ಶ್ರೀಮದ್ ವಿಜಯರತ್ನ ಸುಂದರ್ ಸುಂದರ್ ಸುರೀಶ್ವರ್ಜಿ ಮಹಾರಾಜ್ ಅವರ 500ನೇ ಪುಸ್ತಕದ ಬಿಡುಗಡೆ ಸಮಾರಂಭದಲ್ಲಿ ತಮ್ಮ ಭಾಷಣ ಮಾಡಿದರು. ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ನರೇಂದ್ರ ಮೋದಿ ಅವರು, ಈ ಪವಿತ್ರ ಸಂದರ್ಭದಲ್ಲಿ ತಾವು ಮೊದಲು ಪೂಜ್ಯ ಭುವನ್ ಭಾನುಸುರೀಶ್ವರ್ ಜೀ ಮಹಾರಾಜ್ ಅವರ ಪಾದಗಳಿಗೆ ನಮಸ್ಕರಿಸುತ್ತೇನೆ ಮತ್ತು ಪ್ರಶಾಂತಮೂರ್ತಿ ಸುವಿಶಾಲ್ ಗಚ್ಚಾಧಿಪತಿ ಪೂಜ್ಯ ಶ್ರೀಮದ್ ವಿಜಯ ರಾಜೇಂದ್ರಸುರೀಶ್ವರ್ ಜಿ ಮಹಾರಾಜ್, ಪೂಜ್ಯ ಗಚ್ಚಾಧಿಪತಿ ಶ್ರೀ ಕಲ್ಪತರುಸುರೀಶ್ವರ್ ಜೀ ಮಹಾರಾಜ್, ಸರಸ್ವತಿ ಕೃಪಾಪಾತ್ರ ಪರಂ ಪೂಜ್ಯ ಆಚಾರ್ಯ ಭಗವಂತ ಶ್ರೀಮದ್ ವಿಜಯರತ್ನಸುಂದರಸುರೀಶ್ವರ್ ಜೀ ಮಹಾರಾಜ್ ಮತ್ತು ಸಮಾರಂಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಸಂತರು ಮತ್ತು ಸಾಧ್ವಿಗಳಿಗೆ ಗೌರವ ಸಲ್ಲಿಸುತ್ತೇನೆ ಎಂದು ಹೇಳಿದರು. ಊರ್ಜಾ ಮಹೋತ್ಸವ ಸಮಿತಿಯ ಎಲ್ಲಾ ಸದಸ್ಯರನ್ನು ಅವರು ಶ್ಲಾಘಿಸಿದರು ಮತ್ತು ಅಭಿನಂದಿಸಿದರು.

ಗುಜರಾತ್‌ನಲ್ಲಿ ಆಯೋಜಿಸಿದ್ದ ಸೋಮನಾಥ್ ಸ್ವಾಭಿಮಾನ್ ಪರ್ವ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ​​​​​​​ ಭಾಷಣ

January 11th, 12:00 pm

ಗುಜರಾತ್‌ನ ಗೌರವಾನ್ವಿತ ಮತ್ತು ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಶಕ್ತಿಶಾಲಿ ಉಪಮುಖ್ಯಮಂತ್ರಿ ಹರ್ಷ ಸಂಘವಿ ಜಿ, ಗುಜರಾತ್ ಸರ್ಕಾರದ ಸಚಿವರಾದ ಜಿತುಭಾಯಿ ವಾಘಾನಿ, ಅರ್ಜುನ್‌ಭಾಯಿ ಮೋಧ್ವಾಡಿಯಾ, ಡಾ. ಪ್ರದ್ಯುಮ್ನ ವಾಜ, ಕೌಶಿಕ್‌ಭಾಯಿ ವೆಕಾರಿಯಾ, ಸಂಸತ್ ಸದಸ್ಯ ರಾಜೇಶ್‌ಭಾಯಿ, ಇಲ್ಲಿರುವ ಇತರೆ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ. ಇಂದು ದೇಶದ ವಿವಿಧೆಡೆಯಿಂದ ಲಕ್ಷಾಂತರ ಜನರು ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ಅವರಿಗೂ ಸಹ ನಾನು ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ - ಸೋಮನಾಥನಿಗೆ ವಿಜಯವಾಗಲಿ.

ಗುಜರಾತ್‌ ನ ಸೋಮನಾಥದಲ್ಲಿ ನಡೆದ 'ಸೋಮನಾಥ ಸ್ವಾಭಿಮಾನ ಪರ್ವ' ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ

January 11th, 11:41 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತ್‌ ನ ಸೋಮನಾಥದಲ್ಲಿ ನಡೆದ 'ಸೋಮನಾಥ ಸ್ವಾಭಿಮಾನ ಪರ್ವ' ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಈ ಸಮಯ ಅಸಾಧಾರಣವಾದುದು, ಈ ವಾತಾವರಣ ಅಸಾಧಾರಣವಾದುದು ಮತ್ತು ಈ ಆಚರಣೆಯೂ ಅಸಾಧಾರಣವಾದುದು ಎಂದು ಅವರು ಬಣ್ಣಿಸಿದರು. ಒಂದು ಕಡೆ ಸಾಕ್ಷಾತ್ ಮಹಾದೇವನಿದ್ದರೆ, ಮತ್ತೊಂದೆಡೆ ಸಮುದ್ರದ ಬೃಹತ್ ಅಲೆಗಳು, ಸೂರ್ಯನ ಕಿರಣಗಳು, ಮಂತ್ರಘೋಷಗಳ ಅನುರಣನ ಮತ್ತು ಭಕ್ತಿಯ ಉಲ್ಬಣವಿದೆ ಎಂದು ಅವರು ವಿವರಿಸಿದರು. ಈ ದೈವಿಕ ಪರಿಸರದಲ್ಲಿ ಸೋಮನಾಥನ ಭಕ್ತರ ಉಪಸ್ಥಿತಿಯು ಈ ಸಂದರ್ಭವನ್ನು ಮತ್ತಷ್ಟು ಭವ್ಯ ಹಾಗೂ ಪವಿತ್ರವಾಗಿಸಿದೆ ಎಂದು ಅವರು ತಿಳಿಸಿದರು. ಸೋಮನಾಥ ದೇವಾಲಯ ಟ್ರಸ್ಟ್‌ನ ಅಧ್ಯಕ್ಷರಾಗಿ, ಸೋಮನಾಥ ಸ್ವಾಭಿಮಾನ ಪರ್ವದಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿರುವುದು ತಮ್ಮ ಮಹಾನ್ ಸೌಭಾಗ್ಯ ಎಂದು ಶ್ರೀ ಮೋದಿ ಹಂಚಿಕೊಂಡರು. ಕಳೆದ 72 ಗಂಟೆಗಳಿಂದ ನಿರಂತರವಾಗಿ ನಡೆಯುತ್ತಿರುವ ಓಂಕಾರ ಜಪ ಮತ್ತು ಮಂತ್ರಘೋಷಗಳ ಪಠಣವನ್ನು ಅವರು ಈ ಸಂದರ್ಭದಲ್ಲಿ ಸ್ಮರಿಸಿದರು. ನಿನ್ನೆ ಸಂಜೆ ನಡೆದ ಕಾರ್ಯಕ್ರಮದಲ್ಲಿ ಸಾವಿರ ಡ್ರೋನ್‌ ಗಳು ಮತ್ತು ವೇದ ಪಾಠಶಾಲೆಗಳ ಸಾವಿರಾರು ವಿದ್ಯಾರ್ಥಿಗಳು ಸೋಮನಾಥದ ಸಾವಿರ ವರ್ಷಗಳ ಭವ್ಯ ಇತಿಹಾಸವನ್ನು ಪ್ರಸ್ತುತಪಡಿಸಿದ್ದನ್ನು ಅವರು ಉಲ್ಲೇಖಿಸಿದರು. ಅಲ್ಲದೆ, ಇಂದು 108 ಕುದುರೆಗಳನ್ನೊಳಗೊಂಡ 'ಶೌರ್ಯ ಯಾತ್ರೆ' ದೇವಾಲಯವನ್ನು ತಲುಪಿದೆ ಎಂದು ತಿಳಿಸಿದರು. ಮಂತ್ರಗಳು ಮತ್ತು ಭಜನೆಗಳ ಈ ಮನಮೋಹಕ ಪ್ರಸ್ತುತಿಯು ಪದಗಳಿಗೆ ನಿಲುಕದ್ದು, ಈ ಅನುಭವವನ್ನು ಕಾಲ ಮಾತ್ರವೇ ಸೆರೆಹಿಡಿಯಲು ಸಾಧ್ಯ ಎಂದು ಪ್ರಧಾನಿ ಒತ್ತಿ ಹೇಳಿದರು. ಈ ಸಂಭ್ರಮವು ಕೇವಲ ಒಂದು ಉತ್ಸವವಲ್ಲ; ಇದು ಸ್ವಾಭಿಮಾನ, ಗೌರವ, ಘನತೆ, ಜ್ಞಾನ, ಭವ್ಯತೆ, ಪರಂಪರೆ, ಆಧ್ಯಾತ್ಮಿಕತೆ, ಸಾಕ್ಷಾತ್ಕಾರ, ಆನಂದ ಮತ್ತು ಆತ್ಮೀಯತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಎಲ್ಲಕ್ಕಿಂತ ಮಿಗಿಲಾಗಿ, ಈ ಕಾರ್ಯಕ್ರಮವು ಭಗವಾನ್ ಮಹಾದೇವನ ಆಶೀರ್ವಾದವನ್ನು ಹೊಂದಿದೆ ಎಂದು ಅವರು ಒತ್ತಿ ಹೇಳಿದರು.

ಸಾಮೂಹಿಕ ಒಗ್ಗಟ್ಟಿನಲ್ಲಿ ನೈಜ ಶಕ್ತಿ ಅಡಗಿರುವ ಬಗ್ಗೆ ವಿವರಿಸುವ ಸುಭಾಷಿತ ಹಂಚಿಕೊಂಡಿರುವ ಪ್ರಧಾನಮಂತ್ರಿ

January 05th, 09:17 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಕಾಲಾತೀತ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಪರಂಪರೆಗೆ ಗೌರವ ಸಮರ್ಪಿಸುತ್ತಾ ಶತಮಾನಗಳಿಂದ ಎದುರಾದ ಅಸಂಖ್ಯ ದಾಳಿಗಳ ನಡುವೆಯೂ ಅದು ಪುಟಿದೆದ್ದ ಬಗ್ಗೆ ವಿವರಿಸಿದರು.

ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 03rd, 12:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು

January 03rd, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.

ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಎರಡನೇ ವಾರ್ಷಿಕೋತ್ಸವದ ನಿಮಿತ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶುಭ ಹಾರೈಕೆ

December 31st, 01:51 pm

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಎರಡನೇ ವಾರ್ಷಿಕೋತ್ಸವದ ಶುಭ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರ ಮತ್ತು ಪ್ರಪಂಚದಾದ್ಯಂತದ ಭಕ್ತರಿಗೆ ಹೃತ್ಪೂರ್ವಕ ಶುಭಾಶಯ ಕೋರಿದ್ದಾರೆ.

'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ

December 28th, 11:30 am

ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.