ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

June 21st, 06:45 am

ಗೌರವಾನ್ವಿತ ರಾಜ್ಯಪಾಲ ಶ್ರೀ ಆರ್.ಎನ್. ರವಿ ಜಿ, ಉತ್ಸಾಹಭರಿತ ಮುಖ್ಯಮಂತ್ರಿ ಶ್ರೀ ಸುವೇಂದು ಅಧಿಕಾರಿ ಜಿ, ಕೇಂದ್ರ ಸರ್ಕಾರದಲ್ಲಿ ನನ್ನ ಸಹೋದ್ಯೋಗಿ ಶ್ರೀ ಪ್ರತಾಪರಾವ್ ಜಾಧವ್ ಜಿ, ವೇದಿಕೆಯಲ್ಲಿದ್ದ ಎಲ್ಲಾ ಇತರ ಗಣ್ಯರು, ಕೋಲ್ಕತ್ತಾದಲ್ಲಿ ನೆರೆದಿದ್ದ ಎಲ್ಲ ಜನರೇ, ಭಾರತ ಮತ್ತು ವಿಶ್ವದಾದ್ಯಂತದ ಈ ಯೋಗ ಆಚರಣೆಯಲ್ಲಿ ಭಾಗವಹಿಸುತ್ತಿರುವ ಪ್ರತಿಯೊಬ್ಬರೂ ಮತ್ತು ನನ್ನ ಪ್ರೀತಿಯ ದೇಶವಾಸಿಗಳೇ, ನಿಮ್ಮೆಲ್ಲರಿಗೂ ನನ್ನ ಶುಭಾಶಯಗಳು.

ಪಶ್ಚಿಮಬಂಗಾಳದ ಕೋಲ್ಕತ್ತಾದ ರೆಡ್ ರೋಡ್‌ನಲ್ಲಿ ನಡೆದ 12ನೇ ಅಂತಾರಾಷ್ಟ್ರೀಯ ಯೋಗ ದಿನದ ರಾಷ್ಟ್ರೀಯ ಆಚರಣೆಗೆ ನೇತೃತ್ವ ವಹಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

June 21st, 06:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋಲ್ಕತ್ತಾದ ರೆಡ್ ರೋಡ್‌ನಲ್ಲಿ ನಡೆದೆ 12ನೇ ಅಂತಾರಾಷ್ಟ್ರೀಯ ಯೋಗ ದಿನದ ರಾಷ್ಟ್ರೀಯ ಆಚರಣೆಯ ನೇತೃತ್ವ ವಹಿಸಿದ್ದರು. ಶ್ರೀ ನರೇಂದ್ರ ಮೋದಿ ಸಾವಿರಾರು ಯೋಗ ಸಾಧಕರೊಂದಿಗೆ ಸಾಮಾನ್ಯ ಯೋಗ ಶಿಷ್ಟಾಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಅಂತಾರಾಷ್ಟ್ರೀಯ ಯೋಗ ದಿನದ ಸಂದರ್ಭದಲ್ಲಿ ವಿಶ್ವದಾದ್ಯಂತದ ಜನರಿಗೆ ಶುಭಾಶಯಗಳನ್ನು ತಿಳಿಸಿದ ಶ್ರೀ ನರೇಂದ್ರ ಮೋದಿ, ಜೂನ್ 21 ಅನ್ನು ವಿಶ್ವದ ಹಲವು ಭಾಗಗಳಲ್ಲಿ ವರ್ಷದ ಅತಿ ಉದ್ದದ ದಿನವೆಂದು ಗುರುತಿಸಲಾಗಿದೆ ಮತ್ತು ಯೋಗ ಮಾನವೀಯತೆಯ ಅತಿದೊಡ್ಡ ಸಾಮೂಹಿಕ ಆಚರಣೆಗಳಲ್ಲಿ ಒಂದಾಗಿದೆ ಎಂದು ಉಲ್ಲೇಖಿಸಿದರು.

ಮನ್ ಕಿ ಬಾತ್ ನಲ್ಲಿ 2027 ರ ಡಿಜಿಟಲ್ ಜನಗಣತಿಯನ್ನು ಯಶಸ್ವಿಗೊಳಿಸುವಂತೆ ಪ್ರಧಾನಿ ಮೋದಿ ದೇಶವಾಸಿಗಳನ್ನು ಕೋರಿದ್ದಾರೆ

April 26th, 11:30 am

ಈ ತಿಂಗಳ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ ಪರಮಾಣು ಮತ್ತು ಪವನ ಇಂಧನ ಕ್ಷೇತ್ರಗಳಲ್ಲಿ ಭಾರತದ ಪ್ರಗತಿಯನ್ನು ಎತ್ತಿ ತೋರಿಸಿದರು. ಭಗವಾನ್ ಬುದ್ಧನ ಬೋಧನೆಗಳು, ಬೀಟಿಂಗ್ ರಿಟ್ರೀಟ್ ಸಮಾರಂಭ, ಪ್ರಕೃತಿ ಸಂರಕ್ಷಣೆ, ಬಿದಿರು ವಲಯ, ಪ್ರಾಚೀನ ಗ್ರಂಥಗಳು ಮತ್ತು ಗಣಿತ ಒಲಿಂಪಿಯಾಡ್ ಕಾರ್ಯಕ್ರಮ ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಅವರು ಸ್ಪರ್ಶಿಸಿದರು. ನಡೆಯುತ್ತಿರುವ ಡಿಜಿಟಲ್ ಜನಗಣತಿ ಅಭಿಯಾನದ ಬಗ್ಗೆಯೂ ಪ್ರಧಾನಿ ಮಾತನಾಡಿದರು ಮತ್ತು ಪ್ರತಿಯೊಬ್ಬರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಒತ್ತಾಯಿಸಿದರು.

ಆಸ್ಟ್ರಿಯಾದ ಚಾನ್ಸಲರ್‌ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

April 16th, 11:55 am

40 ವರ್ಷಗಳ ನಂತರ ಆಸ್ಟ್ರಿಯಾದ ಚಾನ್ಸಲರ್‌ ಭಾರತಕ್ಕೆ ಭೇಟಿ ನೀಡಿರುವುದು ಬಹಳ ಮುಖ್ಯ. 2026ರಲ್ಲಿ ಭಾರತ-ಯುರೋಪಿಯನ್‌ ಯೂನಿಯನ್‌ ಮುಕ್ತ ವ್ಯಾಪಾರ ಒಪ್ಪಂದದ ನಂತರ, ಭಾರತ-ಐರೋಪ್ಯ ಒಕ್ಕೂಟ ಸಂಬಂಧಗಳಲ್ಲಿ ಹೊಸ ಹಂತ ಪ್ರಾರಂಭವಾಗಿದೆ. ಚಾನ್ಸಲರ್‌ ಸ್ಟಾಕರ್‌ ಅವರ ಭೇಟಿಯ ಮೂಲಕ ನಾವು ಭಾರತ-ಆಸ್ಟ್ರಿಯಾ ಬಾಂಧವ್ಯವನ್ನು ಹೊಸ ಯುಗಕ್ಕೆ ಕೊಂಡೊಯ್ಯುತ್ತಿದ್ದೇವೆ.

ರಾಷ್ಟ್ರ ಮತ್ತು ಮಾನವೀಯತೆಯ ಸೇವೆಯಲ್ಲಿ ಸಂಪೂರ್ಣ ಭಕ್ತಿಯನ್ನು ವಿವರಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

February 11th, 10:31 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರ ಮತ್ತು ಮಾನವೀಯತೆಯ ಸೇವೆಯಲ್ಲಿ ಸಂಪೂರ್ಣ ಭಕ್ತಿಯನ್ನು ವಿವರಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡರು.