Cabinet approves extension and restructuring of Jal Jeevan Mission
March 10th, 04:12 pm
The Union Cabinet chaired by PM Modi has approved the Ministry of Jal Shakti’s proposal to restructure and reorient the implementation of the Jal Jeevan Mission. JJM 2.0 fosters the vision of Viksit Bharat @2047 with assured 24×7 rural drinking water supply by shifting from infrastructure-centric approach to a citizen-centric utility-based service delivery approach through Structural Reforms.ಫೆಬ್ರವರಿ 14 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ ಪ್ರಧಾನಮಂತ್ರಿ
February 13th, 11:38 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 14 ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10:30ರ ಸುಮಾರಿಗೆ, ಪ್ರಧಾನಮಂತ್ರಿ ಅವರು ದಿಬ್ರುಗಢದ ಮೋರನ್ ಬೈಪಾಸ್ನಲ್ಲಿರುವ ತುರ್ತು ಲ್ಯಾಂಡಿಂಗ್ ಸೌಲಭ್ಯ (ELF)ದಲ್ಲಿ ಇಳಿಯಲಿದ್ದಾರೆ, ಅಲ್ಲಿ ಅವರು ಯುದ್ದ ವಿಮಾನಗಳು, ಸಾರಿಗೆ ಮತ್ತು ಹೆಲಿಕಾಪ್ಟರ್ಗಳ ವೈಮಾನಿಕ ಪ್ರದರ್ಶನವನ್ನು ವೀಕ್ಷಿಸಲಿದ್ದಾರೆ. ಮಧ್ಯಾಹ್ನ 1 ಗಂಟೆ ಸುಮಾರಿಗೆ, ಪ್ರಧಾನ ಮಂತ್ರಿ ಅವರು ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ನಿರ್ಮಾಣವಾಗಿರುವ ಕುಮಾರ್ ಭಾಸ್ಕರ್ ವರ್ಮಾ ಸೇತುಗೆ ಭೇಟಿ ನೀಡಲಿದ್ದಾರೆ. ನಂತರ, ಮಧ್ಯಾಹ್ನ 1:30 ರ ಸುಮಾರಿಗೆ, ಪ್ರಧಾನ ಮಂತ್ರಿ ಅವರು ಗುವಾಹಟಿಯ ಲಚಿತ್ ಘಾಟ್ನಲ್ಲಿ 5,450 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಚಾಲನೆ ನೀಡಲಿದ್ದಾರೆ.ಓಮನ್ನಲ್ಲಿ ಭಾರತೀಯ ವಿದ್ಯಾರ್ಥಿಗಳು ಮತ್ತು ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 18th, 12:32 pm
ನಿಮ್ಮೆಲ್ಲರ ಯೌವನದ ಉತ್ಸಾಹ ಮತ್ತು ಚೈತನ್ಯವು ಇಲ್ಲಿನ ವಾತಾವರಣವನ್ನು ನಿಜವಾಗಿಯೂ ಚೈತನ್ಯಗೊಳಿಸಿದೆ. ಈ ಸಭಾಂಗಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದ ಕಾರಣಕ್ಕೆ ಹತ್ತಿರದ ಸಭಾಂಗಣದಲ್ಲಿ ಕುಳಿತು ಪರದೆಗಳಲ್ಲಿ ನೇರ ಪ್ರಸಾರದ ಕಾರ್ಯಕ್ರಮ ವೀಕ್ಷಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇಲ್ಲಿಯವರೆಗೆ ಬಂದಿದ್ದರೂ ಸಭಾಂಗಣಕ್ಕೆ ಪ್ರವೇಶಿಸಲು ಸಾಧ್ಯವಾಗದ ಅವರಿಗೆ ಹೇಗೆ ಅನಿಸುತ್ತಿರಬಹುದು ಎಂಬುದನ್ನು ನೀವೇ ಊಹಿಸಬಹುದು.ಒಮಾನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 18th, 12:31 pm
ಪ್ರಧಾನಮಂತ್ರಿ ಅವರು ಇಂದು ಮಸ್ಕತ್ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ವಿವಿಧ ಭಾರತೀಯ ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಓಮನ್ ನಲ್ಲಿ ಭಾರತೀಯ ಶಾಲೆಗಳು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷವು ಅಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ವಿಶೇಷವಾಗಿದೆ.ಅಸ್ಸಾಂನಲ್ಲಿ ಐ.ಐ.ಎಂ ಸ್ಥಾಪನೆಗೆ ಪ್ರಧಾನಮಂತ್ರಿ ಅಭಿನಂದನೆ
August 20th, 07:48 pm
ಅಸ್ಸಾಂನಲ್ಲಿ ಭಾರತೀಯ ನಿರ್ವಹಣಾ ಸಂಸ್ಥೆ (ಐ.ಐ.ಎಂ.) ಸ್ಥಾಪಿಸಿದ್ದಕ್ಕಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಸ್ಸಾಂನ ಜನರನ್ನು ಅಭಿನಂದಿಸಿದ್ದಾರೆ.ಶ್ರೀ ನಾರಾಯಣ ಗುರು ಮತ್ತು ಗಾಂಧೀಜಿ ನಡುವಿನ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 24th, 11:30 am
ಬ್ರಹ್ಮಋಷಿ ಸ್ವಾಮಿ ಸಚ್ಚಿದಾನಂದ ಜೀ, ಶ್ರೀಮಠ ಸ್ವಾಮಿ ಶುಭಾಂಗ-ನಂದಾ ಜೀ, ಸ್ವಾಮಿ ಶಾರದಾನಂದ ಜೀ, ಎಲ್ಲಾ ಪೂಜ್ಯ ಸಾಧು ಸಂತರೆ, ಸರ್ಕಾರದ ನನ್ನ ಸಹೋದ್ಯೋಗಿ ಶ್ರೀ ಜಾರ್ಜ್ ಕುರಿಯನ್ ಜೀ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಅಡೂರ್ ಪ್ರಕಾಶ್ ಜೀ, ಇಲ್ಲಿರುವ ಇತರೆ ಎಲ್ಲ ಹಿರಿಯ ಗಣ್ಯರೆ, ಮಹಿಳೆಯರು ಮತ್ತು ಮಹನೀಯರೆ.ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿ ಅವರ ನಡುವಿನ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
June 24th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಭಾರತದ ಇಬ್ಬರು ಶ್ರೇಷ್ಠ ಆಧ್ಯಾತ್ಮಿಕ ಮತ್ತು ನೈತಿಕ ನಾಯಕರಾದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಐತಿಹಾಸಿಕ ಸಂವಾದದ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಇಂದು ಈ ಸ್ಥಳವು ರಾಷ್ಟ್ರದ ಇತಿಹಾಸದಲ್ಲಿ ಅಭೂತಪೂರ್ವ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಇದು ನಮ್ಮ ಸ್ವಾತಂತ್ರ್ಯ ಚಳವಳಿಗೆ ಹೊಸ ದಿಕ್ಕನ್ನು ನೀಡಿದ, ಸ್ವಾತಂತ್ರ್ಯದ ಉದ್ದೇಶಗಳು ಮತ್ತು ಸ್ವತಂತ್ರ ಭಾರತದ ಕನಸಿಗೆ ನಿರ್ದಿಷ್ಟ ಅರ್ಥವನ್ನು ನೀಡಿದ ಐತಿಹಾಸಿಕ ಘಟನೆಯಾಗಿದೆ ಎಂದು ಅವರು ಒತ್ತಿ ಹೇಳಿದರು. 100 ವರ್ಷಗಳ ಹಿಂದೆ ನಡೆದ ಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧಿಯವರ ಭೇಟಿಯು ಇಂದಿಗೂ ಸ್ಪೂರ್ತಿದಾಯಕ ಮತ್ತು ಪ್ರಸ್ತುತವಾಗಿದೆ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಸಾಮಾಜಿಕ ಸಾಮರಸ್ಯ ಮತ್ತು ಸಾಮೂಹಿಕ ಗುರಿಗಳಿಗೆ ಶಕ್ತಿಶಾಲಿ ಮೂಲವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಪ್ರಧಾನಿ ಹೇಳಿದರು. ಈ ಐತಿಹಾಸಿಕ ಸಂದರ್ಭದಲ್ಲಿ, ಅವರು ಶ್ರೀ ನಾರಾಯಣ ಗುರುಗಳ ಪಾದಗಳಿಗೆ ನಮನ ಸಲ್ಲಿಸಿದರು ಮತ್ತು ಮಹಾತ್ಮ ಗಾಂಧಿ ಅವರಿಗೆ ಗೌರವನಮನ ಸಲ್ಲಿಸಿದರು.ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್ ಸುರಂಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 13th, 12:30 pm
ಮೊದಲನೆಯದಾಗಿ, ದೇಶದ ಮತ್ತು ಜಮ್ಮು ಮತ್ತು ಕಾಶ್ಮೀರದ ಪ್ರಗತಿಗಾಗಿ ಅತ್ಯಂತ ಕಷ್ಟಕರ ಪರಿಸ್ಥಿತಿಗಳಲ್ಲಿ ಕೆಲಸ ಮಾಡಿದ, ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಕಾರ್ಮಿಕರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ನಮ್ಮ ಏಳು ಕಾರ್ಮಿಕ ಸ್ನೇಹಿತರು ಪ್ರಾಣ ಕಳೆದುಕೊಂಡರು, ಆದರೆ ಇದು ನಮ್ಮ ಸಂಕಲ್ಪದಿಂದ ನಮ್ಮನ್ನು ವಿಮುಖಗೊಳಿಸಲಿಲ್ಲ, ನನ್ನ ಕಾರ್ಮಿಕ ಸ್ನೇಹಿತರು ಧೃತಿಗೆಡಲಿಲ್ಲ. ಯಾವ ಕಾರ್ಮಿಕರೂ ಮನೆಗೆ ಹಿಂತಿರುಗಲಿಲ್ಲ, ಈ ನನ್ನ ಕಾರ್ಮಿಕ ಸಹೋದರರು ಎಲ್ಲಾ ಸವಾಲುಗಳನ್ನು ಮೆಟ್ಟಿನಿಂತು ಈ ಕೆಲಸವನ್ನು ಪೂರ್ಣಗೊಳಿಸಿದ್ದಾರೆ. ಮತ್ತು ಇಂದು, ಮೊದಲನೆಯದಾಗಿ, ನಾವು ಕಳೆದುಕೊಂಡಿರುವ ನಮ್ಮ ಏಳು ಕಾರ್ಮಿಕರಿಗೆ ನಾನು ಶ್ರದ್ಧಾಂಜಲಿ ಅರ್ಪಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು
January 13th, 12:15 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಅಭಿವೃದ್ಧಿಗಾಗಿ ಶ್ರಮಿಸಿದ ಮತ್ತು ತಮ್ಮ ಪ್ರಾಣವನ್ನು ಪಣಕ್ಕಿಟ್ಟ ಕಾರ್ಮಿಕರಿಗೆ ಧನ್ಯವಾದ ಅರ್ಪಿಸಿದರು. ಸವಾಲುಗಳ ಹೊರತಾಗಿಯೂ, ನಮ್ಮ ಸಂಕಲ್ಪವು ಚಂಚಲವಾಗಲಿಲ್ಲ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಕಾರ್ಮಿಕರ ಸಂಕಲ್ಪ ಮತ್ತು ಬದ್ಧತೆಗಾಗಿ ಮತ್ತು ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ಅಡೆತಡೆಗಳನ್ನು ನಿವಾರಿಸಿದ್ದಕ್ಕಾಗಿ ಅವರು ಶ್ಲಾಘಿಸಿದರು. 7 ಕಾರ್ಮಿಕರ ನಿಧನಕ್ಕೆ ಅವರು ಸಂತಾಪ ಸೂಚಿಸಿದ್ದಾರೆ.ನವದೆಹಲಿಯಲ್ಲಿ ಆಯೋಜಿತವಾಗಿದ್ದ ಅಷ್ಟಲಕ್ಷ್ಮೀ ಮಹೋತ್ಸವದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
December 06th, 02:10 pm
ಅಸ್ಸಾಂ ಮುಖ್ಯಮಂತ್ರಿ, ಶ್ರೀ ಹಿಮಂತ ಬಿಸ್ವಾ ಶರ್ಮಾ ಜಿ, ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಜಿ, ತ್ರಿಪುರಾ ಮುಖ್ಯಮಂತ್ರಿ ಶ್ರೀ ಮಾಣಿಕ್ ಸಹಾ ಜಿ, ಸಿಕ್ಕಿಂ ಮುಖ್ಯಮಂತ್ರಿ, ಶ್ರೀ ಪ್ರೇಮ್ ಸಿಂಗ್ ತಮಾಂಗ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಜ್ಯೋತಿರಾದಿತ್ಯ ಸಿಂಧಿಯಾ ಜಿ ಮತ್ತು ಶ್ರೀ ಸುಕಾಂತ ಮಜುಂದಾರ್ ಜಿ, ಅರುಣಾಚಲ ಪ್ರದೇಶದ ಉಪಮುಖ್ಯಮಂತ್ರಿ, ಮಿಜೋರಾಂ ಮತ್ತು ನಾಗಾಲ್ಯಾಂಡ್ ಸರ್ಕಾರಗಳ ಸಚಿವರೆ, ಇಲ್ಲಿರುವ ಇತರೆ ಜನಪ್ರತಿನಿಧಿಗಳೆ, ಈಶಾನ್ಯ ಭಾಗದ ಸಹೋದರ, ಸಹೋದರಿಯರೆ, ಮಹಿಳೆಯರೆ ಮತ್ತು ಮಹನೀಯರೇ!ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
December 06th, 02:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ ಮಂಟಪದಲ್ಲಿಂದು ಅಷ್ಟಲಕ್ಷ್ಮಿ ಮಹೋತ್ಸವ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಎಲ್ಲ ಗಣ್ಯರನ್ನು ಸ್ವಾಗತಿಸಿದ ಶ್ರೀ ಮೋದಿ, ಇದು ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವಾಗಿದೆ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು 75 ವರ್ಷಗಳನ್ನು ಪೂರೈಸಿದ್ದು, ಎಲ್ಲಾ ನಾಗರಿಕರಿಗೂ ಸ್ಫೂರ್ತಿಯಾಗಿದೆ. ಭಾರತದ ಎಲ್ಲಾ ನಾಗರಿಕರ ಪರವಾಗಿ ಶ್ರೀ ಮೋದಿ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದರು.ಕಾಂಗ್ರೆಸ್, ಎನ್ಸಿ ಮತ್ತು ಪಿಡಿಪಿಯ ಮೂರು ಕುಟುಂಬಗಳ ಆಡಳಿತದಿಂದ ಜಮ್ಮು ಮತ್ತು ಕಾಶ್ಮೀರದ ಜನರು ಬೇಸತ್ತಿದ್ದಾರೆ: ಪ್ರಧಾನಿ ಮೋದಿ
September 28th, 12:35 pm
ಜಮ್ಮುವಿನಲ್ಲಿ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಶಹೀದ್ ಸರ್ದಾರ್ ಭಗತ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಲಕ್ಷಾಂತರ ಭಾರತೀಯ ಯುವಕರಿಗೆ ಸ್ಫೂರ್ತಿಯ ಮೂಲವಾಗಿ ಅವರನ್ನು ಗೌರವಿಸಿದರು. J&K ವಿಧಾನಸಭಾ ಚುನಾವಣೆಯ ಅಂತಿಮ ರ್ಯಾಲಿಯಲ್ಲಿ, PM ಮೋದಿ ಅವರು ಕಳೆದ ವಾರಗಳಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ತಮ್ಮ ಭೇಟಿಗಳನ್ನು ಪ್ರತಿಬಿಂಬಿಸಿದರು, ಅವರು ಹೋದಲ್ಲೆಲ್ಲಾ ಬಿಜೆಪಿಯ ಪ್ರಚಂಡ ಉತ್ಸಾಹವನ್ನು ಗಮನಿಸಿದರು.ಜಮ್ಮು ರ್ಯಾಲಿಯಲ್ಲಿ ಸಭಿಕರನ್ನು ಆಕರ್ಷಿಸಿದ ಪ್ರಧಾನಿ ಮೋದಿ
September 28th, 12:15 pm
ಜಮ್ಮುವಿನಲ್ಲಿ ಬೃಹತ್ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಶಹೀದ್ ಸರ್ದಾರ್ ಭಗತ್ ಸಿಂಗ್ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸುವ ಮೂಲಕ ತಮ್ಮ ಭಾಷಣವನ್ನು ಪ್ರಾರಂಭಿಸಿದರು, ಲಕ್ಷಾಂತರ ಭಾರತೀಯ ಯುವಕರಿಗೆ ಸ್ಫೂರ್ತಿಯ ಮೂಲವಾಗಿ ಅವರನ್ನು ಗೌರವಿಸಿದರು. J&K ವಿಧಾನಸಭಾ ಚುನಾವಣೆಯ ಅಂತಿಮ ರ್ಯಾಲಿಯಲ್ಲಿ, PM ಮೋದಿ ಅವರು ಕಳೆದ ವಾರಗಳಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ತಮ್ಮ ಭೇಟಿಗಳನ್ನು ಪ್ರತಿಬಿಂಬಿಸಿದರು, ಅವರು ಹೋದಲ್ಲೆಲ್ಲಾ ಬಿಜೆಪಿಯ ಪ್ರಚಂಡ ಉತ್ಸಾಹವನ್ನು ಗಮನಿಸಿದರು.ಅಮೆರಿಕದ ನ್ಯೂಯಾರ್ಕ್ನಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಪ್ರಧಾನ ಮಂತ್ರಿಗಳ ಭಾಷಣದ ಇಂಗ್ಲಿಷ್ ಅವತರಿಣಿಕೆ
September 22nd, 10:00 pm
ನಮಸ್ತೆ ಯು.ಎಸ್.! ಈಗ ನಮ್ಮ ನಮಸ್ತೆ” ಕೂಡ ಬಹುರಾಷ್ಟ್ರೀಯವಾಗಿ ಮಾರ್ಪಟ್ಟಿದ್ದು, ಸ್ಥಳೀಯತೆಯಿಂದ ಜಾಗತಿಕವಾಗಿ ಪರಿವರ್ತನೆಯಾಗಿದೆ ಹಾಗೂ ಇದಕ್ಕೆಲ್ಲ ನೀವೇ ಕಾರಣೀಭೂತರು. ಭಾರತವನ್ನು ತಮ್ಮ ಹೃದಯಕ್ಕೆ ಸಮೀಪವಾಗಿಟ್ಟುಕೊಂಡಿರುವ ಪ್ರತಿಯೊಬ್ಬ ಭಾರತೀಯರೂ ಇದನ್ನು ಸಾಧ್ಯವಾಗಿಸಿದ್ದಾರೆ.ನ್ಯೂಯಾರ್ಕ್ನಲ್ಲಿ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 22nd, 09:30 pm
ಪ್ರಧಾನಮಂತ್ರಿ ಅವರನ್ನು ಭಾರತೀಯ ಸಮುದಾಯವು ಅತ್ಯಂತ ಪ್ರೀತಿ, ಗೌರವ, ಆದರ, ಉತ್ಸಾಹದಿಂದ ಬರಮಾಡಿಕೊಂಡಿತು. ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಗಳು, ಜಗತ್ತಿನ ಎರಡು ಮಹಾನ್ ಪ್ರಜಾಪ್ರಭುತ್ವಗಳ ರಾಷ್ಟ್ರಗಳ ನಡುವೆ ಬಾಂಧವ್ಯವನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುವ ಭಾರತೀಯ ಅಮೆರಿಕನ್ ಸಮುದಾಯದಿಂದ ಭಾರತ-ಯುಎಸ್ ಸಂಬಂಧವು ಇನ್ನಷ್ಟು ಸದೃಢವಾಗಿರುವುದು ಕಾಣುತ್ತಿದೆ. ಹಿಂದಿನ ದಿನ ಡೆಲವೇರ್ನಲ್ಲಿರುವ ನಿವಾಸದಲ್ಲಿ ಅಮೆರಿಕ ಅಧ್ಯಕ್ಷ ಬಿಡೆನ್ ಅವರೊಂದಿಗಿನ ಭೇಟಿ ಬಗ್ಗೆಯೂ ಪ್ರಧಾನ ಮಂತ್ರಿಗಳು ಪ್ರಸ್ತಾಪಿಸಿದರು. ಈ ವಿಶೇಷ ಸಂದರ್ಭವು ಭಾರತೀಯ ಸಮುದಾಯವು ಸಂಯುಕ್ತ ರಾಷ್ಟ್ರಗಳೊಂದಿಗಿನ ನಂಬಿಕೆ- ವಿಶ್ವಾಸಾರ್ಹತೆಯನ್ನು ಪ್ರತಿಬಿಂಬಿಸುತ್ತಿದೆ ಎಂದು ಶ್ಲಾಘಿಸಿದರು.ಶ್ರೀನಗರದಲ್ಲಿ ನಡೆದ “ಯುವಜನರ ಸಬಲೀಕರಣ ಮತ್ತು ಜೆ ಅಂಡ್ ಕೆ ಪರಿವರ್ತನೆ’’ ಕಾರ್ಯಕ್ರಮನ್ನುದ್ದೇಶಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
June 20th, 07:00 pm
ಜಮ್ಮು ಮತ್ತು ಕಾಶ್ಮೀರದ ಲೆಫ್ಸಿನೆಂಟ್ ಗೌರ್ನರ್ ಶ್ರೀ ಮನೋಜ್ ಸಿನ್ಹಾಜಿ, ನನ್ನ ಸಂಪುಟದ ಸಹೋದ್ಯೋಗಿ ಶ್ರೀ ಪ್ರತಾಪ್ ರಾವ್ ಜಾದವ್ ಜಿ, ಇತರ ಗಣ್ಯರೇ ಮತ್ತು ಜಮ್ಮು ಮತ್ತು ಕಾಶ್ಮೀರದಾದ್ಯಂತ ಇರುವ ನನ್ನ ಯುವ ಸ್ನೇಹಿತರೇ ಹಾಗೂ ನನ್ನೆಲ್ಲಾ ಸಹೋದರ ಮತ್ತು ಸಹೋದರಿಯರೇ..!ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ 'ಯುವಕರ ಸಬಲೀಕರಣ, ಜಮ್ಮು ಮತ್ತು ಕಾಶ್ಮೀರವನ್ನು ಪರಿವರ್ತಿಸುವುದು' ಕುರಿತ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
June 20th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್.ಕೆ.ಐ.ಸಿ.ಸಿ.) ನಲ್ಲಿ ನಡೆದ 'ಯುವಕರ ಸಬಲೀಕರಣ, ಜಮ್ಮು ಮತ್ತು ಕಾಶ್ಮೀರವನ್ನು ಪರಿವರ್ತಿಸುವುದು' ಕುರಿತ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಿದರು. ರಸ್ತೆ, ನೀರು ಸರಬರಾಜು ಮತ್ತು ಉನ್ನತ ಶಿಕ್ಷಣದಲ್ಲಿ ಮೂಲಸೌಕರ್ಯ ಕ್ಷೇತ್ರಗಳನ್ನು ಒಳಗೊಂಡ 1,500 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 1,800 ಕೋಟಿ ರೂ.ಗಳ ಕೃಷಿ ಮತ್ತು ಸಂಬಂಧಿತ ವಲಯಗಳ ಯೋಜನೆಯಲ್ಲಿ ಸ್ಪರ್ಧಾತ್ಮಕತೆ ಸುಧಾರಣೆ ಯೋಜನೆಗೆ (ಜೆಕೆಸಿಐಪಿ) ಅವರು ಚಾಲನೆ ನೀಡಿದರು. ಶ್ರೀ ನರೇಂದ್ರ ಮೋದಿ ಅವರು 200 ಹೊಸ ಸರ್ಕಾರಿ ನೇಮಕಾತಿದಾರರಿಗೆ ಉದ್ಯೋಗ ಪತ್ರಗಳನ್ನು ಹಸ್ತಾಂತರಿಸಲು ಪ್ರಾರಂಭಿಸಿದರು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ವಸ್ತುಪ್ರದರ್ಶನವನ್ನು ವೀಕ್ಷಿಸಿದರು ಮತ್ತು ಕೇಂದ್ರಾಡಳಿತ ಪ್ರದೇಶದ ಯುವ ಸಾಧಕರೊಂದಿಗೆ ಸಂವಾದ ನಡೆಸಿದರು.ಈ ಚುನಾವಣೆಯು ಎನ್ಡಿಎ ನೇತೃತ್ವದ 'ಸಂತುಷ್ಟಿಕರಣ' ಮಾದರಿ ಮತ್ತು ಕಾಂಗ್ರೆಸ್-ಎಸ್ಪಿ ನೇತೃತ್ವದ 'ತುಷ್ಟೀಕರಣ ಮಾದರಿ' ನಡುವಿನ ಸ್ಪರ್ಧೆಯಾಗಿದೆ: ಯುಪಿಯ ಜೌನ್ಪುರದಲ್ಲಿ ಪ್ರಧಾನಿ ಮೋದಿ
May 16th, 11:15 am
2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ, ಪ್ರಧಾನಿ ನರೇಂದ್ರ ಮೋದಿ ಯುಪಿಯ ಜೌನ್ಪುರದಲ್ಲಿ ಹರ್ಷೋದ್ಗಾರ ಮತ್ತು ಭಾವೋದ್ರಿಕ್ತ ಜನಸಮೂಹದ ನಡುವೆ ಪ್ರಬಲ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಮೋದಿಗೆ ಜನರ ಬೆಂಬಲ ಮತ್ತು ಆಶೀರ್ವಾದವನ್ನು ಜಗತ್ತು ನೋಡುತ್ತಿದೆ ಎಂದು ಅವರು ಹೇಳಿದರು. ಈಗ ಜಗತ್ತು ಕೂಡ 'ಫಿರ್ ಏಕ್ ಬಾರ್ ಮೋದಿ ಸರ್ಕಾರ್' ಎಂದು ನಂಬುತ್ತಿದೆ ಎಂದು ಅವರು ಹೇಳಿದರು.CAA is a testimony to Modi's guarantee: PM Modi in Lalganj, UP
May 16th, 11:10 am
Ahead of the Lok Sabha elections 2024, Prime Minister Narendra Modi addressed a powerful election rally amid jubilant and passionate crowds in Lalganj, UP. He said, “The world is seeing people's popular support & blessings for Modi.” He added that even the world now trusts, 'Fir ek Baar Modi Sarkar.'ಲಾಲ್ಗಂಜ್, ಜೌನ್ಪುರ್, ಭದೋಹಿ ಮತ್ತು ಪ್ರತಾಪ್ಗಢ ಯುಪಿಯಲ್ಲಿ ಪ್ರಬಲ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ
May 16th, 11:00 am
2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ, ಲಾಲ್ಗಂಜ್, ಜೌನ್ಪುರ್, ಭದೋಹಿ ಮತ್ತು ಪ್ರತಾಪ್ಗಢ ಯುಪಿಯಲ್ಲಿ ಹರ್ಷ ಮತ್ತು ಭಾವೋದ್ರಿಕ್ತ ಜನಸಮೂಹದ ನಡುವೆ ಪ್ರಧಾನಿ ನರೇಂದ್ರ ಮೋದಿ ಪ್ರಬಲ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು. ಮೋದಿಗೆ ಜನರ ಬೆಂಬಲ ಮತ್ತು ಆಶೀರ್ವಾದವನ್ನು ಜಗತ್ತು ನೋಡುತ್ತಿದೆ ಎಂದು ಅವರು ಹೇಳಿದರು. ಈಗ ಜಗತ್ತು ಕೂಡ 'ಫಿರ್ ಏಕ್ ಬಾರ್ ಮೋದಿ ಸರ್ಕಾರ್' ಎಂದು ನಂಬುತ್ತಿದೆ ಎಂದು ಅವರು ಹೇಳಿದರು.