ಮಣಿಪುರದ ಚುರಚಂದಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 13th, 12:45 pm

ಮಣಿಪುರವು ಧೈರ್ಯ ಮತ್ತು ದೃಢಸಂಕಲ್ಪದ ಭೂಮಿ. ಈ ಬೆಟ್ಟ ಗುಡ್ಡಗಳು ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿದೆ. ಅದೇ ಸಮಯದಲ್ಲಿ, ಈ ಬೆಟ್ಟಗಳು ನಿಮ್ಮೆಲ್ಲರ ನಿರಂತರ ಕಠಿಣ ಪರಿಶ್ರಮದ ಸಂಕೇತವೂ ಹೌದು. ಮಣಿಪುರದ ಜನರ ಚೈತನ್ಯಕ್ಕೆ ನಾನು ನಮಸ್ಕರಿಸುತ್ತೇನೆ. ಈ ಭಾರಿ ಮಳೆಯಲ್ಲೂ ನೀವು ಇಲ್ಲಿಗೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ, ನಿಮ್ಮ ಈ ಪ್ರೀತಿಗೆ ನಾನು ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಭಾರಿ ಮಳೆಯಿಂದಾಗಿ ನನ್ನ ಹೆಲಿಕಾಪ್ಟರ್ ಬರಲು ಸಾಧ್ಯವಾಗಲಿಲ್ಲ, ಆದ್ದರಿಂದ ನಾನು ರಸ್ತೆಯ ಮೂಲಕ ಪ್ರಯಾಣಿಸಲು ನಿರ್ಧರಿಸಿದೆ. ಇಂದು ನಾನು ರಸ್ತೆಯಲ್ಲಿ ನೋಡಿದ ದೃಶ್ಯಗಳು, ನನ್ನ ಹೆಲಿಕಾಪ್ಟರ್ ಇಂದು ಹಾರದಂತೆ ದೇವರು ಒಳ್ಳೆಯದನ್ನು ಮಾಡಿದನೆಂದು ನನ್ನ ಹೃದಯ ಹೇಳುತ್ತಿದೆ. ನಾನು ರಸ್ತೆಯ ಮೂಲಕ ಬರುವಾಗ ದಾರಿಯಲ್ಲಿ ತ್ರಿವರ್ಣ ಧ್ವಜ ಹಿಡಿದು ಚಿಕ್ಕವರಿಂದ ದೊಡ್ಡವರು ಸಹ ಎಲ್ಲರೂ ತೋರಿಸಿದ ಪ್ರೀತಿ ಮತ್ತು ವಾತ್ಸಲ್ಯವನ್ನು ನಾನು ನೋಡಿದೆ. ಈ ಕ್ಷಣವನ್ನು ನಾನು ನನ್ನ ಜೀವನದಲ್ಲಿ ಎಂದಿಗೂ ಮರೆಯಲು ಸಾಧ್ಯವಿಲ್ಲ. ಮಣಿಪುರದ ಜನರಿಗೆ ನಾನು ತಲೆ ಬಾಗುತ್ತೇನೆ.

ಮಣಿಪುರದ ಚುರಚಂದಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು

September 13th, 12:30 pm

ಮಣಿಪುರದ ಚುರಚಂದಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಮಣಿಪುರ ಧೈರ್ಯ ಮತ್ತು ದೃಢಸಂಕಲ್ಪದ ಭೂಮಿಯಾಗಿದೆ ಮತ್ತು ಮಣಿಪುರದ ಗುಡ್ಡಗಾಡುಗಳು ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿವೆ ಎಂದು ಒತ್ತಿ ಹೇಳಿದರು. ಈ ಗುಡ್ಡಗಾಡು ಜನರ ನಿರಂತರ ದಣಿವರಿಯದ ಪರಿಶ್ರಮದ ಸಂಕೇತವಾಗಿವೆ ಎಂದು ಅವರು ಹೇಳಿದರು. ಮಣಿಪುರದ ಜನರ ಉತ್ಸಾಹಕ್ಕೆ ನಮನ ಸಲ್ಲಿಸಿದ ಶ್ರೀ ಮೋದಿ, ಇಷ್ಟೊಂದು ಸಂಖ್ಯೆಯಲ್ಲಿ ಬಂದಿದ್ದಕ್ಕಾಗಿ ಜನರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಅವರ ಪ್ರೀತಿಗೆ ಧನ್ಯವಾದ ತಿಳಿಸಿದರು.