ಹೈದರಾಬಾದ್‌ನಲ್ಲಿ ಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾದ ಸೌಲಭ್ಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ವೀಡಿಯೊ ಕಾನ್ಫರೆನ್ಸ್ ಭಾಷಣ

November 26th, 10:10 am

ನಾಗರಿಕ ವಿಮಾನಯಾನ ಸಚಿವ ಕೆ. ರಾಮ್ ಮೋಹನ್ ನಾಯ್ಡು ಜಿ, ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಜಿ, ಸಫ್ರಾನ್ ಗ್ರೂಪ್‌ನೊಂದಿಗೆ ಸಂಬಂಧ ಹೊಂದಿರುವ ಎಲ್ಲಾ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೈದರಾಬಾದ್‌ನಲ್ಲಿ ‘ಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು

November 26th, 10:00 am

ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ʻಜಿಎಂಆರ್ ಏರೋಸ್ಪೇಸ್ ಮತ್ತು ಇಂಡಸ್ಟ್ರಿಯಲ್ ಪಾರ್ಕ್ʼ – ವಿಶೇಷ ಆರ್ಥಿಕ ವಲಯದಲ್ಲಿರುವ ʻಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದಿನಿಂದ ಭಾರತದ ವಿಮಾನಯಾನ ಕ್ಷೇತ್ರವು ಹೊಸ ಎತ್ತರಕ್ಕೆ ತಲುಪುತ್ತಿದೆ. ʻಸಫ್ರಾನ್ʼ ಸಂಸ್ಥೆಯ ಹೊಸ ಘಟಕವು ಭಾರತವನ್ನು ಜಾಗತಿಕ ʻನಿರ್ವಹಣೆ, ದುರಸ್ತಿ ಮತ್ತು ಕೂಲಂಕಷ ಪರೀಕ್ಷೆʼ(ಎಂಆರ್‌ಒ) ಕೇಂದ್ರವಾಗಿ ನೆಲೆಗೊಳಿಸಲು ಸಹಾಯ ಮಾಡುತ್ತದೆ,ʼʼ ಎಂದು ಹೇಳಿದರು. ಈ ʻಎಂಆರ್‌ಒʼ ಘಟಕವು ಅತ್ಯಾಧುನಿಕ ವಿಮಾನಯಾನ ಕ್ಷೇತ್ರದಲ್ಲಿ ಯುವಕರಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ನವೆಂಬರ್ 24 ರಂದು ʻಸಫ್ರಾನ್ʼ ಆಡಳಿತ ಮಂಡಳಿಯ ಜೊತೆಗಿನ ತಮ್ಮ ಭೇಟಿಯನ್ನು ಪ್ರಧಾನಮಂತ್ರಿ ಸ್ಮರಿಸಿದರು. ಈ ಹಿಂದೆಯೂ ಆಡಳಿತ ಮಂಡಳಿ ಜೊತೆಗಿನ ಪ್ರತಿಯೊಂದು ಚರ್ಚೆಯಲ್ಲೂ ಭಾರತದ ಬಗ್ಗೆ ಸಂಸ್ಥೆಯ ವಿಶ್ವಾಸ ಮತ್ತು ಭರವಸೆಯನ್ನು ತಾವು ನೋಡಿರುವುದಾಗಿ ಮೋದಿ ಹೇಳಿದರು. ಭಾರತದಲ್ಲಿ ʻಸಫ್ರಾನ್ʼನ ಹೂಡಿಕೆಯು ಅದೇ ವೇಗದಲ್ಲಿ ಮುಂದುವರಿಯುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಈ ಹೊಸ ಘಟಕದ ಉದ್ಘಾಟನೆಗಾಗಿ ʻಸಫ್ರಾನ್ʼ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ಮೋದಿ ಅವರು ತಮ್ಮ ಶುಭಾಶಯ ಕೋರಿದರು.

ನವೆಂಬರ್ 27 ರಂದು ʻಸ್ಕೈರೂಟ್ʼನ ʻಇನ್ಫಿನಿಟಿ ಕ್ಯಾಂಪಸ್ʼ ಉದ್ಘಾಟಿಸಲಿರುವ ಪ್ರಧಾನಮಂತ್ರಿ

November 25th, 04:18 pm

ಭಾರತೀಯ ಬಾಹ್ಯಾಕಾಶ ನವೋದ್ಯಮವಾದ ʼಸ್ಕೈರೂಟ್‌ʼ ನಿರ್ಮಿಸಿರುವ ʼಇನ್ಫಿನಿಟಿ ಕ್ಯಾಂಪಸ್ʼ ಅನ್ನು ಪ್ರಧಾನಮಂತ್ರಿ ಅವರು ನವೆಂಬರ್ 27 ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ. ಉಪಗ್ರಹಗಳನ್ನು ಕಕ್ಷೆಗೆ ಉಡಾವಣೆ ಮಾಡುವ ಸಾಮರ್ಥ್ಯ ಹೊಂದಿರುವ ʻಸ್ಕೈರೂಟ್ʼನ ಮೊದಲ ಕಕ್ಷೆಯ ರಾಕೆಟ್ ʻವಿಕ್ರಮ್ -1ʼ ಅನ್ನು ಅವರು ಅನಾವರಣಗೊಳಿಸಲಿದ್ದಾರೆ.

ನವೆಂಬರ್ 26ರಂದು ʻಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ ಘಟಕವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

November 25th, 04:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 26ರಂದು ಬೆಳಗ್ಗೆ 10ಗಂಟೆಗೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ʻಜಿಎಂಆರ್ ಏರೋಸ್ಪೇಸ್ ಮತ್ತು ಕೈಗಾರಿಕಾ ಪಾರ್ಕ್ʼ - ವಿಶೇಷ ಆರ್ಥಿಕ ವಲಯದಲ್ಲಿರುವ ʻಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ವಿಡಿಯೊ ಕಾನ್ಫರೆನ್ಸಿಂಗ್‌ ಮೂಲಕ ಉದ್ಘಾಟಿಸಲಿದ್ದಾರೆ.

ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

November 18th, 11:38 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ 2025 ರ ನವೆಂಬರ್ 11-12 ರವರೆಗೆ ಭೂತಾನ್‌ಗೆ ರಾಜ್ಯ ಭೇಟಿ ನೀಡಲಿದ್ದಾರೆ

November 09th, 09:59 am

ಉಭಯ ದೇಶಗಳ ನಡುವಿನ ಸಂಬಂಧಗಳನ್ನು ಬಲಪಡಿಸಲು ಪ್ರಧಾನಿ ಮೋದಿ 2025 ರ ನವೆಂಬರ್ 11-12 ರವರೆಗೆ ಭೂತಾನ್‌ಗೆ ರಾಜ್ಯ ಭೇಟಿ ನೀಡಲಿದ್ದಾರೆ. ಭೇಟಿಯ ಸಮಯದಲ್ಲಿ, ಪ್ರಧಾನಿಯವರು ಭೂತಾನ್ ರಾಜ ಹಿಸ್ ಮೆಜೆಸ್ಟಿ ಜಿಗ್ಮೆ ಖೇಸರ್ ನಮ್ಗ್ಯೆಲ್ ವಾಂಗ್‌ಚುಕ್ ಮತ್ತು ಭೂತಾನ್ ಪ್ರಧಾನಿ ತ್ಶೆರಿಂಗ್ ಟೋಬ್‌ಗೇ ಅವರನ್ನು ಭೇಟಿ ಮಾಡಲಿದ್ದಾರೆ. ಭೂತಾನ್‌ನ ನಾಲ್ಕನೇ ದೊರೆ ಹಿಸ್ ಮೆಜೆಸ್ಟಿ ಜಿಗ್ಮೆ ಸಿಂಗ್ಯೆ ವಾಂಗ್‌ಚುಕ್ ಅವರ 70 ನೇ ಜನ್ಮ ದಿನಾಚರಣೆ ಮತ್ತು ಜಾಗತಿಕ ಶಾಂತಿ ಪ್ರಾರ್ಥನಾ ಉತ್ಸವದಲ್ಲಿಯೂ ಪ್ರಧಾನಿ ಭಾಗವಹಿಸಲಿದ್ದಾರೆ.

ತಮ್ಮ ಆಂಧ್ರಪ್ರದೇಶ ಭೇಟಿಯ ಇಣುಕುನೋಟಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ

October 16th, 09:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮ್ಮ ಆಂಧ್ರಪ್ರದೇಶ ಭೇಟಿಯ ಇಣುಕುನೋಟಗಳನ್ನು ಹಂಚಿಕೊಂಡಿದ್ದಾರೆ. ಶ್ರೀಶೈಲಂನಲ್ಲಿ, ಶ್ರೀ ಬ್ರಹ್ಮರಾಂಬ ಮಲ್ಲಿಕಾರ್ಜುನ ಸ್ವಾಮಿ ವರ್ಲಾ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಶ್ರೀ ನರೇಂದ್ರ ಮೋದಿ ಅವರು ಶ್ರೀ ಶಿವಾಜಿ ಧ್ಯಾನ ಮಂದಿರ ಮತ್ತು ಶ್ರೀ ಶಿವಾಜಿ ದರ್ಬಾರ್ ಸಭಾಂಗಣಕ್ಕೆ ಭೇಟಿ ನೀಡಿದರು. ನಂತರ ಅವರು ಕರ್ನೂಲ್ ನಲ್ಲಿ ಸುಮಾರು 13,430 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ಉದ್ಘಾಟಿಸಿದರು.

ಅಕ್ಟೋಬರ್‌ 16ರಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

October 14th, 05:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್‌ 16ರಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.15ರ ಸುಮಾರಿಗೆ ನಂದ್ಯಾಳ ಜಿಲ್ಲೆಯ ಶ್ರೀಶೈಲಂನ ಶ್ರೀ ಬ್ರಹ್ಮರಾಂಬ ಮಲ್ಲಿಕಾರ್ಜುನ ಸ್ವಾಮಿ ವರ್ಲಾ ದೇವಸ್ಥಾನದಲ್ಲಿ ಪೂಜೆ ಮತ್ತು ದರ್ಶನ ನೆರವೇರಿಸಲಿದ್ದಾರೆ. ನಂತರ, ಮಧ್ಯಾಹ್ನ 12:15 ರ ಸುಮಾರಿಗೆ ಅವರು ಶ್ರೀಶೈಲಂನ ಶ್ರೀ ಶಿವಾಜಿ ಸ್ಪೂರ್ಣಿ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.

ಸೆಪ್ಟೆಂಬರ್ 17ರಂದು ಮಧ್ಯಪ್ರದೇಶಕ್ಕೆ ಪ್ರಧಾನಮಂತ್ರಿ ಭೇಟಿ

September 16th, 02:49 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಧಾರ್ ನಲ್ಲಿ 'ಸ್ವಸ್ಥ ನಾರಿ ಸಶಕ್ತ ಪರಿವಾರ್' ಮತ್ತು '8ನೇ ರಾಷ್ಟ್ರೀಯ ಪೋಷಣ್ ಮಾಹ್' ಅಭಿಯಾನಗಳಿಗೆ ಅವರು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಹಲವಾರು ಇತರ ಉಪಕ್ರಮಗಳಿಗೆ ಶಂಕುಸ್ಥಾಪನೆ ಮತ್ತು ಚಾಲನೆ ನೀಡಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

Manipur is the crown jewel adorning the crest of Mother India: PM Modi in Imphal

September 13th, 02:45 pm

At the inauguration of projects worth over ₹1,200 crore in Imphal, PM Modi said a new phase of infrastructure growth has begun in Manipur. He noted that women empowerment is a key pillar of India’s development and Atmanirbhar Bharat, a spirit visible in the state. The PM affirmed his government’s commitment to peace and stability, stressing that return to a normal life is the top priority. He urged Manipur to stay firmly on the path of peace and progress.

PM Modi inaugurates multiple development projects worth over Rs 1,200 crore at Imphal, Manipur

September 13th, 02:30 pm

At the inauguration of projects worth over ₹1,200 crore in Imphal, PM Modi said a new phase of infrastructure growth has begun in Manipur. He noted that women empowerment is a key pillar of India’s development and Atmanirbhar Bharat, a spirit visible in the state. The PM affirmed his government’s commitment to peace and stability, stressing that return to a normal life is the top priority. He urged Manipur to stay firmly on the path of peace and progress.

ಮಣಿಪುರದ ಚುರಚಂದಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 13th, 12:45 pm

ಮಣಿಪುರವು ಧೈರ್ಯ ಮತ್ತು ದೃಢಸಂಕಲ್ಪದ ಭೂಮಿ. ಈ ಬೆಟ್ಟ ಗುಡ್ಡಗಳು ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿದೆ. ಅದೇ ಸಮಯದಲ್ಲಿ, ಈ ಬೆಟ್ಟಗಳು ನಿಮ್ಮೆಲ್ಲರ ನಿರಂತರ ಕಠಿಣ ಪರಿಶ್ರಮದ ಸಂಕೇತವೂ ಹೌದು. ಮಣಿಪುರದ ಜನರ ಚೈತನ್ಯಕ್ಕೆ ನಾನು ನಮಸ್ಕರಿಸುತ್ತೇನೆ. ಈ ಭಾರಿ ಮಳೆಯಲ್ಲೂ ನೀವು ಇಲ್ಲಿಗೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದೀರಿ, ನಿಮ್ಮ ಈ ಪ್ರೀತಿಗೆ ನಾನು ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಭಾರಿ ಮಳೆಯಿಂದಾಗಿ ನನ್ನ ಹೆಲಿಕಾಪ್ಟರ್ ಬರಲು ಸಾಧ್ಯವಾಗಲಿಲ್ಲ, ಆದ್ದರಿಂದ ನಾನು ರಸ್ತೆಯ ಮೂಲಕ ಪ್ರಯಾಣಿಸಲು ನಿರ್ಧರಿಸಿದೆ. ಇಂದು ನಾನು ರಸ್ತೆಯಲ್ಲಿ ನೋಡಿದ ದೃಶ್ಯಗಳು, ನನ್ನ ಹೆಲಿಕಾಪ್ಟರ್ ಇಂದು ಹಾರದಂತೆ ದೇವರು ಒಳ್ಳೆಯದನ್ನು ಮಾಡಿದನೆಂದು ನನ್ನ ಹೃದಯ ಹೇಳುತ್ತಿದೆ. ನಾನು ರಸ್ತೆಯ ಮೂಲಕ ಬರುವಾಗ ದಾರಿಯಲ್ಲಿ ತ್ರಿವರ್ಣ ಧ್ವಜ ಹಿಡಿದು ಚಿಕ್ಕವರಿಂದ ದೊಡ್ಡವರು ಸಹ ಎಲ್ಲರೂ ತೋರಿಸಿದ ಪ್ರೀತಿ ಮತ್ತು ವಾತ್ಸಲ್ಯವನ್ನು ನಾನು ನೋಡಿದೆ. ಈ ಕ್ಷಣವನ್ನು ನಾನು ನನ್ನ ಜೀವನದಲ್ಲಿ ಎಂದಿಗೂ ಮರೆಯಲು ಸಾಧ್ಯವಿಲ್ಲ. ಮಣಿಪುರದ ಜನರಿಗೆ ನಾನು ತಲೆ ಬಾಗುತ್ತೇನೆ.

ಮಣಿಪುರದ ಚುರಚಂದಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು

September 13th, 12:30 pm

ಮಣಿಪುರದ ಚುರಚಂದಪುರದಲ್ಲಿ 7,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಮಣಿಪುರ ಧೈರ್ಯ ಮತ್ತು ದೃಢಸಂಕಲ್ಪದ ಭೂಮಿಯಾಗಿದೆ ಮತ್ತು ಮಣಿಪುರದ ಗುಡ್ಡಗಾಡುಗಳು ಪ್ರಕೃತಿಯ ಅಮೂಲ್ಯ ಕೊಡುಗೆಯಾಗಿವೆ ಎಂದು ಒತ್ತಿ ಹೇಳಿದರು. ಈ ಗುಡ್ಡಗಾಡು ಜನರ ನಿರಂತರ ದಣಿವರಿಯದ ಪರಿಶ್ರಮದ ಸಂಕೇತವಾಗಿವೆ ಎಂದು ಅವರು ಹೇಳಿದರು. ಮಣಿಪುರದ ಜನರ ಉತ್ಸಾಹಕ್ಕೆ ನಮನ ಸಲ್ಲಿಸಿದ ಶ್ರೀ ಮೋದಿ, ಇಷ್ಟೊಂದು ಸಂಖ್ಯೆಯಲ್ಲಿ ಬಂದಿದ್ದಕ್ಕಾಗಿ ಜನರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು ಅವರ ಪ್ರೀತಿಗೆ ಧನ್ಯವಾದ ತಿಳಿಸಿದರು.

ಮಿಜೋರಾಂನಲ್ಲಿ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ ಮತ್ತು ಉದ್ಘಾಟನೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

September 13th, 10:30 am

ಮಿಜೋರಾಂ ರಾಜ್ಯಪಾಲ ಶ್ರೀ ವಿ ಕೆ ಸಿಂಗ್ ಜಿ, ಮುಖ್ಯಮಂತ್ರಿ ಶ್ರೀ ಲಾಲ್ದುಹೋಮ ಜಿ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಶ್ರೀ ಅಶ್ವಿನಿ ವೈಷ್ಣವ್ ಜಿ, ಮಿಜೋರಾಂ ಸರ್ಕಾರದ ಸಚಿವರು, ಸಂಸದರು ಮತ್ತು ಇತರ ಚುನಾಯಿತ ಪ್ರತಿನಿಧಿಗಳು, ಮಿಜೋರಾಂನ ಆತ್ಮೀಯ ಜನತೆಗೆ ನನ್ನ ನಮಸ್ಕಾರಗಳು.

ಮಿಜೋರಾಂನ ಐಜ್ವಾಲ್‌ನಲ್ಲಿ 9,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶಂಕುಸ್ಥಾಪನೆ, ಉದ್ಘಾಟನೆ

September 13th, 10:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಿಜೋರಾಂನ ಐಜ್ವಾಲ್‌ನಲ್ಲಿಂದು 9,000 ಕೋಟಿ ರೂ.ಗಿಂತ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟನೆ ನೆರವೇರಿಸಿದರು. ಈ ಯೋಜನೆಗಳು ರೈಲ್ವೆ, ರಸ್ತೆ ಮಾರ್ಗಗಳು, ಇಂಧನ, ಕ್ರೀಡೆ ಸೇರಿದಂತೆ ಹಲವು ಕ್ಷೇತ್ರಗಳನ್ನು ಒಳಗೊಂಡಿವೆ. ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ನೀಲಿ ಪರ್ವತಗಳ ಸುಂದರ ಭೂಮಿಯನ್ನು ರಕ್ಷಿಸುತ್ತಿರುವ ಪರಮಾತ್ಮ ಪಥಿಯಾನ್‌ಗೆ ತಲೆಬಾಗಿ ನಮಸ್ಕರಿಸುವೆ. ಮಿಜೋರಾಂನ ಲೆಂಗ್‌ಪುಯಿ ವಿಮಾನ ನಿಲ್ದಾಣದ ಪ್ರತೀಕೂಲ ಹವಾಮಾನದಿಂದಾಗಿ ಐಜ್ವಾಲ್‌ನಲ್ಲಿ ಜನರೊಂದಿಗೆ ಸೇರಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿಯ ಹೊರತಾಗಿಯೂ, ಈ ಮಾಧ್ಯಮದ ಮೂಲಕವೂ ಜನರ ಪ್ರೀತಿ ಮತ್ತು ವಾತ್ಸಲ್ಯವನ್ನು ಅನುಭವಿಸುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಹೇಳಿದರು.

ಆಗಸ್ಟ್ 22ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

August 20th, 03:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 22 ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಿಹಾರದ ಗಯಾದಲ್ಲಿ ಸುಮಾರು 13,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಅವರು ಎರಡು ರೈಲುಗಳಿಗೆ ಹಸಿರು ನಿಶಾನೆ ತೋರಿ, ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಅವರು ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಔಟಾ-ಸಿಮರಿಯಾ ಸೇತುವೆ ಯೋಜನೆಗೆ ಭೇಟಿ ನೀಡಿ, ಅದನ್ನು ಉದ್ಘಾಟಿಸಲಿದ್ದಾರೆ.

ಆಗಸ್ಟ್ 17ರಂದು ದೆಹಲಿಯಲ್ಲಿ 11,000 ಕೋಟಿ ರೂ.ಗಳ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

August 16th, 11:15 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಆಗಸ್ಟ್ 17ರಂದು ಮಧ್ಯಾಹ್ನ 12:30ರ ಸುಮಾರಿಗೆ ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಸಂಯೋಜಿತ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಪ್ರಧಾನಮಂತ್ರಿ ಅವರಿಂದ ನವದೆಹಲಿಯಲ್ಲಿ ಆಗಸ್ಟ್ 7ರಂದು ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

August 06th, 12:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 7 ರಂದು ಬೆಳಿಗ್ಗೆ 9 ಗಂಟೆಗೆ ನವದೆಹಲಿಯ ಐಸಿಎಆರ್ ಪುಸಾದಲ್ಲಿ ಎಂ.ಎಸ್. ಸ್ವಾಮಿನಾಥನ್ ಶತಮಾನೋತ್ಸವ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಮಂತ್ರಿ ಅವರಿಂದ ಕರ್ತವ್ಯ ಭವನ ರಾಷ್ಟ್ರಕ್ಕೆ ಸಮರ್ಪಣೆ

August 06th, 12:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ತವ್ಯ ಭವನವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಇದು ಸಾರ್ವಜನಿಕ ಸೇವೆಗೆ ಇರುವ ಅಚಲ ಬದ್ಧತೆ ಮತ್ತು ನಿರಂತರ ಪ್ರಯತ್ನದ ಸಂಕೇತ ಎಂದು ಬಣ್ಣಿಸಿದರು.

ಆಗಸ್ಟ್ 6 ರಂದು ಕರ್ತವ್ಯ ಭವನ ಉದ್ಘಾಟಿಸಲಿರುವ ಪ್ರಧಾನಮಂತ್ರಿ

August 04th, 05:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 6 ರಂದು ಮಧ್ಯಾಹ್ನ 12:15ರ ಸುಮಾರಿಗೆ ದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನಕ್ಕೆ ಭೇಟಿ ನೀಡಿ ಅದನ್ನು ಉದ್ಘಾಟಿಸಲಿದ್ದಾರೆ. ನಂತರ, ಪ್ರಧಾನ ಮಂತ್ರಿಗಳು ಸಂಜೆ 6:30ರ ಸುಮಾರಿಗೆ ಕರ್ತವ್ಯ ಪಥದ ಕುರಿತು ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.