Cabinet approves a New Era of Plug-and-Play Industrial Development through Bharat Audyogik Vikas Yojna (BHAVYA)

March 18th, 04:05 pm

In a landmark step towards accelerating industrial growth, the Union Cabinet chaired by PM Narendra Modi has approved the Bharat Audyogik Vikas Yojna (BHAVYA), with an allocation of Rs.33,660 crore for developing 100 plug-and-play industrial parks across the country. The scheme aims to develop world-class industrial infrastructure, unlocking manufacturing potential and driving India’s growth story.

Cabinet approves revised cost estimate for the construction of Greenfield Connectivity in Uttar Pradesh and Haryana

March 10th, 04:30 pm

The Cabinet Committee on Economic Affairs, chaired PM Modi, has approved the revised total capital cost of Rs.3630.77 crore for the construction of Greenfield Connectivity in Uttar Pradesh and Haryana. The 31.42 km long project corridor will provide direct and high-speed connectivity from South Delhi, Faridabad and Gurugram to Jewar International Airport, thereby promoting economic growth and logistics efficiency across NCR.

Prime Minister Narendra Modi to address Post Budget Webinar on the theme “Sabka Saath Sabka Vikas-Fulfilling Aspirations of People”

March 08th, 04:35 pm

To translate the policy vision outlined in the Budget into actionable strategies, PM Modi will address the Post Budget Webinar on the theme “Sabka Saath Sabka Vikas-Fulfilling Aspirations of People” on 9th March 2026. Under this theme, multiple breakout sessions will be organised across sectors including education and skilling, health and AYUSH, tourism and hospitality among others.

India – Finland Joint Statement on the State Visit of President of the Republic of Finland

March 05th, 08:03 pm

At the invitation of PM Modi, Finland President Alexander Stubb is on a State Visit to India from 4-7 March 2026. They held wide-ranging discussions during a bilateral meeting. The two leaders affirmed the deep and enduring friendship between India and Finland, built on a foundation of mutual respect and the values of democracy and rule of law, as well as commitment to global peace, security and international law.

ಭಾರತ-ಕೆನಡಾ ನಾಯಕರ ಜಂಟಿ ಹೇಳಿಕೆ

March 02nd, 05:05 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಮಂತ್ರಣದ ಮೇರೆಗೆ, ಕೆನಡಾದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು 2026 ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು ಕೆನಡಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಮತ್ತು 2018 ರ ನಂತರ ಕೆನಡಾದ ಪ್ರಧಾನ ಮಂತ್ರಿಯೊಬ್ಬರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಪ್ರಧಾನಮಂತ್ರಿ ಕಾರ್ನೆ ಅವರೊಂದಿಗೆ ಹಿರಿಯ ಸಚಿವರು, ಪ್ರಾಂತೀಯ ನಾಯಕರು ಮತ್ತು ಪ್ರಮುಖ ಸಿಇಒಗಳನ್ನು ಒಳಗೊಂಡ ಕೆನಡಾದ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.

ನ್ಯೂಸ್ 18 ರೈಸಿಂಗ್ ಭಾರತ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

February 27th, 08:30 pm

ನೀವೆಲ್ಲರೂ ರೈಸಿಂಗ್ ಭಾರತದ ಬಗ್ಗೆ ಚರ್ಚಿಸುತ್ತಿದ್ದೀರಿ. ಮತ್ತು ಇದರಲ್ಲಿ, ನಿಮ್ಮ ಒತ್ತು ಒಳಗಿನ ಶಕ್ತಿಯ ಮೇಲೆ - ಸರಳವಾಗಿ ಹೇಳುವುದಾದರೆ, ನಿಮ್ಮ ಗಮನ ದೇಶದ ಸ್ವಂತ ಶಕ್ತಿಯ ಮೇಲೆ. ಮತ್ತು ನಮ್ಮ ಧರ್ಮಗ್ರಂಥಗಳಲ್ಲಿ, ಇದನ್ನು ಹೇಳಲಾಗಿದೆ - ತತ್ ತ್ವಮ್ ಅಸಿ! ಅಂದರೆ, ನಾವು ಹುಡುಕುತ್ತಿರುವ ಬ್ರಹ್ಮ ನಾವೇ; ಅದು ನಮ್ಮೊಳಗಿದೆ. ನಮ್ಮೊಳಗಿನ ಶಕ್ತಿಯನ್ನು ನಾವು ಗುರುತಿಸಬೇಕು. ಕಳೆದ 11 ವರ್ಷಗಳಲ್ಲಿ, ಭಾರತವು ಈ ಶಕ್ತಿಯನ್ನು ಗುರುತಿಸಿದೆ, ಮತ್ತು ಇಂದು ದೇಶವು ಈ ಶಕ್ತಿಯನ್ನು ಬಲಪಡಿಸಲು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ.

ನೆಟ್ ವರ್ಕ್ 18 ರೈಸಿಂಗ್ ಭಾರತ್ ಶೃಂಗಸಭೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 27th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉದಯೋನ್ಮುಖ ಭಾರತ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಕಳೆದ 11 ವರ್ಷಗಳ ಭಾರತದ ಪ್ರಯಾಣವನ್ನು ಎತ್ತಿ ಹಿಡಿದ ಪ್ರಧಾನಮಂತ್ರಿ ಅವರು, ರಾಷ್ಟ್ರೀಯ ಸಾಮರ್ಥ್ಯ, ಆರ್ಥಿಕ ಸ್ವಾವಲಂಬನೆ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಮಾರ್ಗಸೂಚಿಯನ್ನು ಪುನಃ ಪಡೆಯುವ ಬಗ್ಗೆ ವ್ಯಾಪಕವಾಗಿ ಮಾತನಾಡಿದರು.

ಸಿಇಒ ದುಂಡುಮೇಜಿನ ಸಭೆ, ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಜವಾಬ್ದಾರಿಯುತ ಕೃತಕ ಬುದ್ಧಿಮತ್ತೆಗೆ ಜಾಗತಿಕ ಬದ್ಧತೆಯನ್ನು ಬಿಂಬಿಸಿದ ಪ್ರಧಾನಮಂತ್ರಿ

February 19th, 10:05 pm

ಕೃತಕ ಬುದ್ಧಿಮತ್ತೆ, ತಂತ್ರಜ್ಞಾನ ಮತ್ತು ನಾವೀನ್ಯತೆಯ ಪ್ರಪಂಚದ ಪ್ರಮುಖ ಮಧ್ಯಸ್ಥಗಾರರನ್ನು ಒಟ್ಟುಗೂಡಿಸಿದ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಸಿಇಒ ದುಂಡುಮೇಜಿನ ಸಭೆಯ ಫಲಿತಾಂಶಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸ್ವಾಗತಿಸಿದರು.

Visit of H.E. Mr. Dick Schoof, Prime Minister of the Netherlands, to India

February 19th, 08:47 pm

PM Modi held a bilateral meeting with H.E. Mr. Dick Schoof, Prime Minister of the Netherlands. Prime Minister Schoof underscored the importance of the Summit and expressed confidence that the Summit Declaration will steer future policy discussions. Reviewing the bilateral relationship, both leaders welcomed the steady progress in the India-Netherlands partnership.

ಭಾರತ ಎಐ ಇಂಪ್ಯಾಕ್ಟ್ ಶೃಂಗಸಭೆಯ ಉದ್ಯಮ ನಾಯಕರ ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 19th, 01:00 pm

ಭಾರತದಲ್ಲಿ ನಡೆಯುತ್ತಿರುವ ಎಐ ಇಂಪ್ಯಾಕ್ಟ್(ಪ್ರಭಾವ) ಶೃಂಗಸಭೆಗೆ ನಿಮ್ಮೆಲ್ಲರನ್ನೂ ಮತ್ತೊಮ್ಮೆ ಸ್ವಾಗತಿಸಲು ನನಗೆ ಸಂತೋಷವಾಗುತ್ತಿದೆ. ಈ ಶೃಂಗಸಭೆಯು ಮಾನವ ಕೇಂದ್ರಿತ, ಸೂಕ್ಷ್ಮ ಜಾಗತಿಕ ಎಐ ಪರಿಸರ ವ್ಯವಸ್ಥೆ ನಿರ್ಮಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂಬ ವಿಶ್ವಾಸ ನನಗಿದೆ.

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026 ರ ನಾಯಕರ ಸರ್ವಸದಸ್ಯರ ಅಧಿವೇಶನದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆಗಳು

February 19th, 12:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026ರ ನಾಯಕರ ಸರ್ವಸದಸ್ಯರ ಅಧಿವೇಶನದಲ್ಲಿ ತಮ್ಮ ಹೇಳಿಕೆಗಳನ್ನು ಹಂಚಿಕೊಂಡರು. ಭಾರತದಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಮತ್ತೊಮ್ಮೆ ಭಾಗವಹಿಸಿದವರನ್ನು ಸ್ವಾಗತಿಸಿದ ಪ್ರಧಾನಮಂತ್ರಿಯವರು, ಮಾನವ ಕೇಂದ್ರಿತ ಮತ್ತು ಸೂಕ್ಷ್ಮ ಜಾಗತಿಕ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವಲ್ಲಿ ಶೃಂಗಸಭೆಯು ನಿರ್ಣಾಯಕ ಪಾತ್ರ ವಹಿಸುತ್ತದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಮಾನವೀಯತೆಯು ಯಾವಾಗಲೂ ಅಡೆತಡೆಗಳನ್ನು ಅವಕಾಶಗಳಾಗಿ ಪರಿವರ್ತಿಸಿದೆ ಎಂಬುದನ್ನು ಇತಿಹಾಸವು ತೋರಿಸುತ್ತದೆ ಮತ್ತು ಇಂದು ಅಡೆತಡೆಗಳನ್ನು ಮಾನವೀಯತೆಯ ಶ್ರೇಷ್ಠ ಅವಕಾಶವಾಗಿ ಪರಿವರ್ತಿಸಲು ಮತ್ತೊಂದು ಕ್ಷಣವನ್ನು ಪ್ರಸ್ತುತಪಡಿಸುತ್ತದೆ ಎಂದು ಅವರು ಹೇಳಿದರು.

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026 ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 19th, 10:00 am

ಗೌರವಾನ್ವಿತ ಗಣ್ಯರೆ, ಸಚಿವರೆ, ಉದ್ಯಮ ನಾಯಕರೆ, ನಾವೀನ್ಯಕಾರರೆ, ಉದ್ಯಮಿಗಳೆ, ಸಂಶೋಧಕರೆ, ಪ್ರತಿನಿಧಿಗಳೆ, ಗಣ್ಯ ಅತಿಥಿಗಳೆ, ಮಹಿಳೆಯರು ಮತ್ತು ಮಹನೀಯರೆ - ನಮಸ್ತೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026' ಉದ್ಘಾಟನೆ

February 19th, 09:40 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ ಮಂಟಪದಲ್ಲಿ 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026' ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ಮಾನವಕುಲದ ಆರನೇ ಒಂದು ಭಾಗವನ್ನು ಪ್ರತಿನಿಧಿಸುವ ಭಾರತದಲ್ಲಿ ವಿಶ್ವದ ಅತಿದೊಡ್ಡ ಮತ್ತು ಐತಿಹಾಸಿಕ 'ಎಐ ಇಂಪ್ಯಾಕ್ಟ್ ಶೃಂಗಸಭೆ' ನಡೆಯುತ್ತಿದೆ ಎಂದು ಹೇಳಿದರು. ಭಾರತವು ವಿಶ್ವದ ಅತಿದೊಡ್ಡ ಯುವ ಜನಸಂಖ್ಯೆ, ಅತಿದೊಡ್ಡ ತಾಂತ್ರಿಕ ಪ್ರತಿಭಾನ್ವಿತರ ಬಳಗ ಮತ್ತು ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನ ಆಧಾರಿತ ಪರಿಸರ ವ್ಯವಸ್ಥೆಗೆ ನೆಲೆಯಾಗಿದೆ ಎಂದು ಅವರು ಒತ್ತಿಹೇಳಿದರು. ಭಾರತವು ಕೇವಲ ಹೊಸ ತಂತ್ರಜ್ಞಾನಗಳನ್ನು ಸೃಷ್ಟಿಸುವುದು ಮಾತ್ರವಲ್ಲದೆ, ಅವುಗಳನ್ನು ಅಭೂತಪೂರ್ವ ವೇಗದಲ್ಲಿ ಅಳವಡಿಸಿಕೊಳ್ಳುತ್ತದೆ ಎಂದು ಅವರು ಪ್ರತಿಪಾದಿಸಿದರು. 140 ಕೋಟಿ ಭಾರತೀಯರು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ಉತ್ಸುಕರಾಗಿದ್ದಾರೆ ಎಂದು ಹೇಳಿದ ಪ್ರಧಾನಮಂತ್ರಿಯವರು, ಶೃಂಗಸಭೆಯಲ್ಲಿ ಭಾಗವಹಿಸುತ್ತಿರುವ ವಿವಿಧ ರಾಷ್ಟ್ರಗಳ ಮುಖ್ಯಸ್ಥರಿಗೆ, ಜಾಗತಿಕ ಎಐ ವ್ಯವಸ್ಥೆಯ ನಾಯಕರಿಗೆ ಮತ್ತು ನಾವೀನ್ಯಕಾರರಿಗೆ ಭಾರತೀಯರ ಪರವಾಗಿ ಆತ್ಮೀಯ ಸ್ವಾಗತ ಕೋರಿದರು. ಅವರ ಉಪಸ್ಥಿತಿಗಾಗಿ ಕೃತಜ್ಞತೆ ಸಲ್ಲಿಸಿದ ಅವರು, ಈ ಶೃಂಗಸಭೆಯನ್ನು ಭಾರತದಲ್ಲಿ ಆಯೋಜಿಸಿರುವುದು ಕೇವಲ ದೇಶಕ್ಕೆ ಮಾತ್ರವಲ್ಲದೆ ಇಡೀ ಜಾಗತಿಕ ದಕ್ಷಿಣದ ರಾಷ್ಟ್ರಗಳಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

Cabinet approves Startup India Fund of Funds 2.0 to Mobilize Venture Capital for India’s Startup Ecosystem

February 14th, 01:11 pm

The Union Cabinet chaired by PM Modi, has approved the establishment of the Startup India Fund of Funds 2.0 with a total corpus of Rs. 10,000 crore. Aligned with the national vision of Viksit Bharat @ 2047, the Fund represents the Government’s continued commitment to empowering entrepreneurs, fostering innovation and unlocking the full potential of India’s startup ecosystem.

ಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣ

February 13th, 08:30 pm

ಈ ಜಾಗತಿಕ ವ್ಯಾಪಾರ ಶೃಂಗಸಭೆಗೆ ನಿಮ್ಮೆಲ್ಲರನ್ನೂ ಸ್ವಾಗತಿಸುತ್ತೇನೆ; ಪ್ರತಿಯೊಬ್ಬರಿಗೂ ನನ್ನ ಶುಭಾಶಯಗಳು. ಅಡೆತಡೆಯ ಒಂದು ದಶಕ, ಬದಲಾವಣೆಯ ಒಂದು ಶತಮಾನ ಎನ್ನುವ ವಿಷಯವನ್ನು ಚರ್ಚಿಸಲು ನಾವು ಇಲ್ಲಿದ್ದೇವೆ. ವಿನೀತ್ ಅವರ ಭಾಷಣವನ್ನು ಕೇಳಿದ ನಂತರ, ನನ್ನ ಕೆಲಸವು ಬಹಳ ಸುಲಭವಾಗಿದೆ ಎಂದು ನನಗೆ ಅನಿಸುತ್ತದೆ. ಆದರೆ ನಾನು ಒಂದು ಸಣ್ಣ ವಿನಂತಿ - ನಿಮಗೆ ಬಹಳಷ್ಟು ತಿಳಿದಿರುವುದರಿಂದ, ಅದು ಕೆಲವೊಮ್ಮೆ ಇ ಟಿ ಯಲ್ಲಿಯೂ ಕಾಣಿಸಿಕೊಳ್ಳಬೇಕು.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇ ಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2026 ಅನ್ನು ಉದ್ದೇಶಿಸಿ ಮಾತನಾಡಿದರು

February 13th, 08:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ನಡೆದ ʻಇಟಿ ನೌ ಜಾಗತಿಕ ವ್ಯಾಪಾರ ಶೃಂಗಸಭೆ 2026ʼ ಅನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಜಾಗತಿಕ ವ್ಯಾಪಾರ ಶೃಂಗಸಭೆಯಲ್ಲಿ ಹಾಜರಿದ್ದ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು ಮತ್ತು ʻಅಡೆತಡೆಯ ಒಂದು ದಶಕ, ಬದಲಾವಣೆಯ ಒಂದು ಶತಮಾನʼ ಎನ್ನುವ ವಿಷಯದ ಕುರಿತು ಮಾತನಾಡಿದರು. 21 ನೇ ಶತಮಾನದ ಕಳೆದ ದಶಕವು ಜಾಗತಿಕ ಸಾಂಕ್ರಾಮಿಕ ರೋಗ, ಉದ್ವಿಗ್ನತೆ ಹಾಗು ವಿವಿಧ ಪ್ರದೇಶಗಳಲ್ಲಿನ ಯುದ್ಧಗಳು ಮತ್ತು ಜಾಗತಿಕ ಸಮತೋಲನವನ್ನು ಅಲುಗಾಡಿಸಿದ ಪೂರೈಕೆ ಸರಪಳಿ ಸ್ಥಗಿತಗಳು ಸೇರಿದಂತೆ ಹಿಂದೆಂದೂ ಕಾಣದಂತ ಅಡೆತಡೆಗಳನ್ನು ಕಂಡಿದೆ ಎಂದು ಅವರು ಉಲ್ಲೇಖಿಸಿದರು. ಬಿಕ್ಕಟ್ಟುಗಳು ರಾಷ್ಟ್ರದ ನಿಜವಾದ ಶಕ್ತಿಯನ್ನು ತೋರಿಸುತ್ತವೆ ಎಂದು ಅವರು ಒತ್ತಿ ಹೇಳಿದರು ಮತ್ತು ಈ ಅಡೆತಡೆಗಳ ಹೊರತಾಗಿಯೂ, ಭಾರತದ ದಶಕವು ಗಮನಾರ್ಹ ಅಭಿವೃದ್ಧಿ, ಅತ್ಯುತ್ತಮ ವಿತರಣೆ ಮತ್ತು ಪ್ರಜಾಪ್ರಭುತ್ವದ ಬಲವರ್ಧನೆಯಿಂದ ಗುರುತಿಸಲ್ಪಟ್ಟಿದೆ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು. ಕಳೆದ ದಶಕ ಪ್ರಾರಂಭವಾದಾಗ, ಭಾರತವು ಹನ್ನೊಂದನೇ ಅತಿದೊಡ್ಡ ಆರ್ಥಿಕತೆಯಾಗಿತ್ತು ಮತ್ತು ಪ್ರಕ್ಷುಬ್ಧತೆಯ ನಡುವೆ ಕುಸಿತದ ಭಯವಿತ್ತು, ಆದರೆ ಇಂದು ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲು ವೇಗವಾಗಿ ಮುನ್ನಡೆಯುತ್ತಿದೆ ಎಂದು ಶ್ರೀ ಮೋದಿ ನೆನಪಿಸಿಕೊಂಡರು. ಬದಲಾವಣೆಯ ಶತಮಾನಕ್ಕೆ ಭಾರತವು ಪ್ರಮುಖ ಅಡಿಪಾಯವಾಗಲಿದೆ ಎಂದು ಒತ್ತಿ ಹೇಳಿದ ಶ್ರೀ ಮೋದಿಯವರು, ಭಾರತವು ಪ್ರಸ್ತುತ ಜಾಗತಿಕ ಬೆಳವಣಿಗೆಗೆ ಶೇ. ಹದಿನಾರು ಕ್ಕಿಂತ ಹೆಚ್ಚು ಕೊಡುಗೆ ನೀಡುತ್ತದೆ ಎಂದು ಹೇಳಿದರು ಮತ್ತು ಈ ಕೊಡುಗೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಲೇ ಇರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಭಾರತವು ಜಾಗತಿಕ ಬೆಳವಣಿಗೆಗೆ ಚಾಲನೆ ನೀಡುತ್ತದೆ ಮತ್ತು ವಿಶ್ವ ಆರ್ಥಿಕತೆಯ ಹೊಸ ಎಂಜಿನ್ ಆಗಿ ಹೊರಹೊಮ್ಮುತ್ತದೆ ಎಂದು ಅವರು ದೃಢಪಡಿಸಿದರು.

ಬಾಂಗ್ಲಾದೇಶದ ಸಂಸದೀಯ ಚುನಾವಣೆಗಳಲ್ಲಿ ಬಿಎನ್‌ಪಿಯ ಗೆಲುವಿಗಾಗಿ ಶ್ರೀ ತಾರಿಕ್ ರೆಹಮಾನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

February 13th, 12:13 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಬಾಂಗ್ಲಾದೇಶದ ಸಂಸದೀಯ ಚುನಾವಣೆಯಲ್ಲಿ ಬಿಎನ್‌ಪಿಯನ್ನು ನಿರ್ಣಾಯಕ ಗೆಲುವಿನತ್ತ ಕೊಂಡೊಯ್ದಿದ್ದಕ್ಕಾಗಿ ಶ್ರೀ ತಾರಿಕ್ ರೆಹಮಾನ್ ಅವರನ್ನು ಅಭಿನಂದಿಸಿದ್ದಾರೆ. ಪ್ರಜಾಪ್ರಭುತ್ವ, ಪ್ರಗತಿಪರ ಮತ್ತು ಎಲ್ಲರನ್ನೂ ಒಳಗೊಂಡ ಬಾಂಗ್ಲಾದೇಶಕ್ಕೆ ಭಾರತವು ಬೆಂಬಲ ನೀಡುವುದನ್ನು ಮುಂದುವರಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. “ನಮ್ಮ ಬಹುಮುಖಿ ಸಂಬಂಧಗಳನ್ನು ಬಲಪಡಿಸಲು ಮತ್ತು ನಮ್ಮ ಸಾಮಾನ್ಯ ಅಭಿವೃದ್ಧಿ ಗುರಿಗಳನ್ನು ಮುನ್ನಡೆಸಲು ನಾನು ನಿಮ್ಮೊಂದಿಗೆ ಕಾರ್ಯನಿರ್ವಹಿಸಲು ಎದುರು ನೋಡುತ್ತಿದ್ದೇನೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಇಂಧನ ವಲಯದ ವಿವಿಧ ಸಂಸ್ಥೆಗಳ ಸಿಇಒಗಳೊಂದಿಗೆ ಪ್ರಧಾನಮಂತ್ರಿ ಅವರು ಸಂವಹನ ನಡೆಸಿದರು

January 28th, 09:09 pm

ಭಾರತ ಇಂಧನ ಸಪ್ತಾಹ (ಐ.ಇ.ಡಬ್ಲ್ಯೂ) 2026ರ ಭಾಗವಾಗಿ ಪ್ರಧಾನಮಂತ್ರಿ ಅವರು ಇಂದು ಲೋಕ ಕಲ್ಯಾಣ್ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಜಾಗತಿಕ ಇಂಧನ ವಲಯದ ವಿವಿಧ ಸಂಸ್ಥೆಗಳ ಸಿಇಒಗಳೊಂದಿಗೆ ಸಂವಾದ ನಡೆಸಿದರು.

2030 ರ ಕಡೆಗೆ: ಜಂಟಿ ಭಾರತ-ಇಯು ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿ

January 27th, 06:48 pm

ಜಂಟಿ ಭಾರತ-ಇಯು ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿಯು, ಜನವರಿ 27, 2026 ರಂದು ನವದೆಹಲಿಯಲ್ಲಿ ನಡೆದ 16 ನೇ ಭಾರತ-ಇಯು ಶೃಂಗಸಭೆಯಲ್ಲಿ ಅನುಮೋದಿಸಲ್ಪಟ್ಟಿದೆ, ಎರಡೂ ಪಾಲುದಾರರಿಗೆ ಮತ್ತು ವಿಶಾಲ ಪ್ರಪಂಚಕ್ಕೆ ಪರಸ್ಪರ ಪ್ರಯೋಜನಕಾರಿ, ಕಾಂಕ್ರೀಟ್ ಮತ್ತು ಪರಿವರ್ತಕ ಫಲಿತಾಂಶಗಳನ್ನು ನೀಡಲು ಇಯು -ಭಾರತ ಸಹಕಾರವನ್ನು ವಿಸ್ತರಿಸುವ, ಆಳಗೊಳಿಸುವ ಮತ್ತು ಉತ್ತಮವಾಗಿ ಸಂಯೋಜಿಸುವ ಮೂಲಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಹೊಂದಿದೆ.

ಭಾರತ - ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷರು ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷರು ಭಾರತಕ್ಕೆ ನೀಡಿದ ಅಧಿಕೃತ ಭೇಟಿ ಮತ್ತು 16 ನೇ ಭಾರತ-ಇಯು ಶೃಂಗಸಭೆಯ ಕುರಿತು ಇಯು ಜಂಟಿ ಹೇಳಿಕೆ

January 27th, 06:15 pm

ಪ್ರಧಾನಿ ಮೋದಿ ಅವರ ಆಹ್ವಾನದ ಮೇರೆಗೆ, ಯುರೋಪಿಯನ್ ಕೌನ್ಸಿಲ್ ಅಧ್ಯಕ್ಷ ಆಂಟೋನಿಯೊ ಕೋಸ್ಟಾ ಮತ್ತು ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಅವರು ಭಾರತದ 77 ನೇ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಗಳಾಗಿ ಭಾರತಕ್ಕೆ ರಾಜ್ಯ ಭೇಟಿ ನೀಡಿದರು. ಭೇಟಿಯ ಸಮಯದಲ್ಲಿ, ನಾಯಕರು ಹೆಗ್ಗುರುತಾದ ಭಾರತ-ಇಯು ಎಫ್‌ಟಿಎ ಕುರಿತು ಮಾತುಕತೆಗಳ ಯಶಸ್ವಿ ಮುಕ್ತಾಯವನ್ನು ಶ್ಲಾಘಿಸಿದರು ಮತ್ತು 2030 ರ ಕಡೆಗೆ: ಭಾರತ-ಇಯು ಜಂಟಿ ಸಮಗ್ರ ಕಾರ್ಯತಂತ್ರದ ಕಾರ್ಯಸೂಚಿಯನ್ನು ಅಳವಡಿಸಿಕೊಂಡರು.