ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

July 07th, 03:15 pm

ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.

ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

July 07th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಕಾರ್ತದಲ್ಲಿ ಇಂಡೋನೇಷ್ಯಾ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿದರು. ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಿದ ಭಾರತದ ಮೊದಲ ಪ್ರಧಾನಮಂತ್ರಿ ಅವರಾಗಿದ್ದಾರೆ.

ಸೆಶೆಲ್ಸ್‌ನ ನ್ಯಾಷನಲ್ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿಯವರ ಭಾಷಣ

June 28th, 05:00 pm

ಘನತೆವೆತ್ತ ಗೌರವಾನ್ವಿತ ರಾಷ್ಟ್ರೀಯ ಅಸೆಂಬ್ಲಿಯ ಸ್ಪೀಕರ್ ಮಿಸೆಸ್ ಅಜಾರೆಲ್ ಅರ್ನೆಸ್ಟಾ,

ಭಾರತ-ಕೆನಡಾ ನಾಯಕರ ಜಂಟಿ ಹೇಳಿಕೆ

March 02nd, 05:05 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಮಂತ್ರಣದ ಮೇರೆಗೆ, ಕೆನಡಾದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು 2026 ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು ಕೆನಡಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಮತ್ತು 2018 ರ ನಂತರ ಕೆನಡಾದ ಪ್ರಧಾನ ಮಂತ್ರಿಯೊಬ್ಬರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಪ್ರಧಾನಮಂತ್ರಿ ಕಾರ್ನೆ ಅವರೊಂದಿಗೆ ಹಿರಿಯ ಸಚಿವರು, ಪ್ರಾಂತೀಯ ನಾಯಕರು ಮತ್ತು ಪ್ರಮುಖ ಸಿಇಒಗಳನ್ನು ಒಳಗೊಂಡ ಕೆನಡಾದ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.

ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರ

March 02nd, 05:04 pm

ಕೆನಡಾ ಪ್ರಧಾನಮಂತ್ರಿ ಅವರ ಭಾರತ ಭೇಟಿಯ ಫಲಿತಾಂಶಗಳ ವಿವರ

ನೆಸ್ಸೆಟ್ ಅನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

February 25th, 08:20 pm

ಈ ಗೌರವಾನ್ವಿತ ಸದನದ ಮುಂದೆ ನಿಂತಿರುವುದು ನನಗೆ ಸಂದ ಗೌರವ ಮತ್ತು ಸೌಭಾಗ್ಯವಾಗಿದೆ. ನಾನು ಭಾರತದ ಪ್ರಧಾನಮಂತ್ರಿಯಾಗಿ ಮಾತ್ರವಲ್ಲದೆ, ಒಂದು ಪ್ರಾಚೀನ ನಾಗರಿಕತೆಯ ಪ್ರತಿನಿಧಿಯಾಗಿ ಮತ್ತೊಂದು ಪ್ರಾಚೀನ ನಾಗರಿಕತೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದೇನೆ. ನಾನು ನಿಮ್ಮ ಬಳಿಗೆ 140 ಕೋಟಿ ಭಾರತೀಯರ ಶುಭಾಶಯಗಳು ಹಾಗೂ ಸ್ನೇಹ, ಗೌರವ ಮತ್ತು ಸಹಭಾಗಿತ್ವದ ಸಂದೇಶವನ್ನು ಹೊತ್ತು ತಂದಿದ್ದೇನೆ.

ಇಸ್ರೇಲ್ ಸಂಸತ್ತನ್ನು (ನೆಸ್ಸೆಟ್)‌ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

February 25th, 08:00 pm

ಕನೆಸೆಟ್‌ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನೆಸ್ಸೆಟ್ ನ ಸ್ಪೀಕರ್ ಘನತೆವೆತ್ತ ಅಮೀರ್ ಓಹಾನಾ ಸ್ವಾಗತಿಸಿದರು ಮತ್ತು ವಿಧ್ಯುಕ್ತ ಸ್ವಾಗತ ನೀಡಿದರು. ಇಸ್ರೇಲ್ ಪ್ರಧಾನಮಂತ್ರಿ, ಘನತೆವೆತ್ತ ಶ್ರೀ ಬೆಂಜಮಿನ್ ನೆತನ್ಯಾಹು; ವಿರೋಧ ಪಕ್ಷದ ನಾಯಕರಾದ ಘನತೆವೆತ್ತ ಶ್ರೀ ಯಾಯಿರ್ ಲಾಪಿಡ್; ಮತ್ತು ಸ್ಪೀಕರ್ ಒಹಾನಾ ಅವರು ಪ್ರಧಾನಮಂತ್ರಿಯವರ ಭಾಷಣಕ್ಕೂ ಮುನ್ನ ಅಧಿವೇಶನದಲ್ಲಿ ಮಾತನಾಡಿ, ಭಾರತ-ಇಸ್ರೇಲ್ ಸಂಬಂಧಗಳಿಗೆ ಬಲವಾದ ದ್ವಿಪಕ್ಷೀಯ ಬೆಂಬಲವನ್ನು ವ್ಯಕ್ತಪಡಿಸಿದರು.

ರಾಷ್ಟ್ರ ಮತ್ತು ಮಾನವೀಯತೆಯ ಸೇವೆಯಲ್ಲಿ ಸಂಪೂರ್ಣ ಭಕ್ತಿಯನ್ನು ವಿವರಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ

February 11th, 10:31 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರ ಮತ್ತು ಮಾನವೀಯತೆಯ ಸೇವೆಯಲ್ಲಿ ಸಂಪೂರ್ಣ ಭಕ್ತಿಯನ್ನು ವಿವರಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡರು.

ಸಂಪರ್ಕಗಳ ವೃದ್ಧಿ ಮೂಲಕ ಸುಸ್ಥಿರತೆ, ಆರ್ಥಿಕ ಬೆಳವಣಿಗೆ ಮತ್ತು ಸುರಕ್ಷತೆ ಹೆಚ್ಚಳಕ್ಕೆ ಭಾರತ–ಸೆಶೆಲ್ಸ್ ಜಂಟಿ ದೃಷ್ಟಿಕೋನ

February 09th, 03:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸೆಶೆಲ್ಸ್ ಗಣರಾಜ್ಯದ ಅಧ್ಯಕ್ಷರಾದ ಡಾ.ಪ್ಯಾಟ್ರಿಕ್ ಹರ್ಮಿನಿ ಅವರು 2026ರ ಫೆಬ್ರವರಿ 5 ರಿಂದ 10ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದಾರೆ.

ಸೆಶೆಲ್ಸ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

February 09th, 01:00 pm

ಸೆಶೆಲ್ಸ್ ಅಧ್ಯಕ್ಷರಾಗಿ ಅವರು ಆಯ್ಕೆಯಾದ ಮೇಲೆ, ಭಾರತದ 1.4 ಶತಕೋಟಿ ಜನರ ಪರವಾಗಿ ನಾನು ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ಸಲ್ಲಿಸುತ್ತೇನೆ.

ಐ.ಎನ್.ಎಸ್ ವಿಕ್ರಾಂತ್ ನಲ್ಲಿ ಸಶಸ್ತ್ರ ಪಡೆಗಳೊಂದಿಗೆ ದೀಪಾವಳಿ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಭಾಷಣ

October 20th, 10:30 am

ಇಂದು ಅದ್ಭುತ ದಿನ, ಈ ಕ್ಷಣವನ್ನು ಮರೆಯಲಾಗದು, ಇವತ್ತಿನ ಈ ದೃಶ್ಯ ಅಸಾಧಾರಣವಾಗಿದೆ. ನನ್ನ ಒಂದು ಬದಿಯಲ್ಲಿ ವಿಶಾಲವಾದ ಅಮಿತ ಸಾಗರವಿದೆ, ಇನ್ನೊಂದು ಬದಿಯಲ್ಲಿ ಭಾರತ ಮಾತೆಯ ಧೈರ್ಯಶಾಲಿ ಸೈನಿಕರ ಅಪಾರ ಶಕ್ತಿಯೇ ಇದೆ. ನನ್ನ ಒಂದು ಬದಿಯಲ್ಲಿ ಅನಂತ ದಿಗಂತ ಮತ್ತು ಅಂತ್ಯ ಕಾಣದ ಆಗಸವಿದೆ, ಇನ್ನೊಂದು ಬದಿಯಲ್ಲಿ ತನ್ನೊಳಗೆ ಅನಂತ ಶಕ್ತಿಯನ್ನು ಸಾಕಾರಗೊಳಿಸುವ ಪ್ರಬಲ ಮತ್ತು ಭವ್ಯವಾದ ಐಎನ್ಎಸ್ ವಿಕ್ರಾಂತ್ ನೆಲೆ ನಿಂತಿದೆ. ಸಾಗರ ನೀರಿನ ಮೇಲೆ ಸೂರ್ಯನ ಬೆಳಕಿನ ಹೊಳಪು, ಒಂದು ರೀತಿಯಲ್ಲಿ, ನಮ್ಮ ಧೈರ್ಯಶಾಲಿ ಸೈನಿಕರು ಬೆಳಗಿದ ದೀಪಾವಳಿ ದೀಪಗಳಂತೆ ಕಾಣುತ್ತಿದ್ದಾರೆ. ಇವು ನಮ್ಮ ದೈವಿಕ ಬೆಳಕಿನ ಹಾರಗಳಾಗಿವೆ. ಈ ಬಾರಿ ನಾನು ನಮ್ಮ ನೌಕಾಪಡೆಯ ಅಪ್ರತಿಮ ಯೋಧರ ನಡುವೆ ದೀಪಾವಳಿಯ ಪವಿತ್ರ ಹಬ್ಬ ಆಚರಿಸುತ್ತಿರುವುದು ನನ್ನ ಪಾಲಿನ ದೊಡ್ಡ ಅದೃಷ್ಟವೇ ಆಗಿದೆ.

PM Modi celebrates Diwali on board the INS Vikrant

October 20th, 10:00 am

In his address to the armed forces personnel on board INS Vikrant, PM Modi extended heartfelt Diwali greetings to the countrymen. He highlighted that, inspired by Chhatrapati Shivaji Maharaj, the Indian Navy has adopted a new flag. Recalling various operations, the PM emphasized that India stands ready to provide humanitarian assistance anywhere in the world. He also noted that over 100 districts have now fully emerged from Maoist terror.

ಸೆಶೆಲ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಡಾ. ಪ್ಯಾಟ್ರಿಕ್ ಹರ್ಮಿನಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

October 12th, 09:13 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಸೆಶೆಲ್ಸ್ ನ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಡಾ. ಪ್ಯಾಟ್ರಿಕ್ ಹರ್ಮಿನಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ನವದೆಹಲಿಯಲ್ಲಿ ಜ್ಞಾನ ಭಾರತಂ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 12th, 04:54 pm

ಇಂದು ವಿಜ್ಞಾನ ಭವನವು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗಿದೆ. ಕೆಲವು ದಿನಗಳ ಹಿಂದೆ, ನಾನು ಜ್ಞಾನ ಭಾರತಂ ಮಿಷನ್ ಅನ್ನು ಘೋಷಿಸಿದೆ. ಇಂದು ಇಷ್ಟು ಕಡಿಮೆ ಸಮಯದಲ್ಲಿ ನಾವು ಜ್ಞಾನ ಭಾರತಂ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ಪೋರ್ಟಲ್ ಅನ್ನು ಸಹ ಇತ್ತೀಚೆಗೆ ಪ್ರಾರಂಭಿಸಲಾಗಿದೆ. ಇದು ಸರ್ಕಾರಿ ಅಥವಾ ಶೈಕ್ಷಣಿಕ ಘಟನೆಯಲ್ಲ; ಜ್ಞಾನ ಭಾರತಂ ಆಂದೋಲನ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ. ಸಾವಿರಾರು ತಲೆಮಾರುಗಳ ಆಲೋಚನೆಗಳು ಮತ್ತು ಚಿಂತನೆಗಳು, ಭಾರತದ ಮಹಾನ್ ಸಂತರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆ, ನಮ್ಮ ಜ್ಞಾನ ಸಂಪ್ರದಾಯಗಳು, ನಮ್ಮ ವೈಜ್ಞಾನಿಕ ಪರಂಪರೆ, ನಾವು ಜ್ಞಾನ ಭಾರತಂ ಮಿಷನ್ ಮೂಲಕ ಅವುಗಳನ್ನು ಡಿಜಿಟಲೀಕರಣಗೊಳಿಸಲಿದ್ದೇವೆ. ಈ ಆಂದೋಲನಕ್ಕಾಗಿ ನಾನು ಎಲ್ಲಾ ದೇಶವಾಸಿಗಳನ್ನು ಅಭಿನಂದಿಸುತ್ತೇನೆ. ಜ್ಞಾನ ಭಾರತಂನ ಇಡೀ ತಂಡಕ್ಕೆ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ನಾನು ಶುಭ ಹಾರೈಸುತ್ತೇನೆ.

ನವದೆಹಲಿಯಲ್ಲಿ ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

September 12th, 04:45 pm

ನವದೆಹಲಿಯ ವಿಜ್ಞಾನ ಭವನದಲ್ಲಿ ಇಂದು ನಡೆದ ಜ್ಞಾನ ಭಾರತಂ ಕುರಿತ ಅಂತರರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ವಿಜ್ಞಾನ ಭವನ ಇಂದು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ಕೆಲವೇ ದಿನಗಳ ಹಿಂದೆ ತಾವು ಜ್ಞಾನ ಭಾರತಂ ಮಿಷನ್ ಘೋಷಿಸಿದ್ದನ್ನು ಮತ್ತು ಇಷ್ಟು ಕಡಿಮೆ ಅವಧಿಯಲ್ಲಿ ಜ್ಞಾನ ಭಾರತಂ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿರುವುದನ್ನು ಅವರು ಒತ್ತಿ ಹೇಳಿದರು. ಈ ಮಿಷನ್‌ಗೆ ಸಂಬಂಧಿಸಿದ ಪೋರ್ಟಲ್ ಸಹ ಪ್ರಾರಂಭಿಸಲಾಗಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ಇದು ಸರ್ಕಾರಿ ಅಥವಾ ಶೈಕ್ಷಣಿಕ ಕಾರ್ಯಕ್ರಮವಲ್ಲ ಎಂದು ಹೇಳಿದ ಪ್ರಧಾನಮಂತ್ರಿ, ಜ್ಞಾನ ಭಾರತಂ ಮಿಷನ್ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ ಎಂದೂ ಹೇಳಿದರು. ಸಾವಿರಾರು ತಲೆಮಾರುಗಳ ಚಿಂತನಶೀಲ ಪರಂಪರೆಯನ್ನು ಅವರು ಉಲ್ಲೇಖಿಸಿದರು. ಭಾರತದ ಮಹಾನ್ ಋಷಿಗಳು, ಆಚಾರ್ಯರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆಯನ್ನು ಅವರು ಗುರುತಿಸಿದರು, ಭಾರತದ ಜ್ಞಾನ, ಸಂಪ್ರದಾಯಗಳು ಮತ್ತು ವೈಜ್ಞಾನಿಕ ಪರಂಪರೆಯನ್ನು ಒತ್ತಿ ಹೇಳಿದರು. ಜ್ಞಾನ ಭಾರತಂ ಮಿಷನ್ ಮೂಲಕ ಈ ಪರಂಪರೆಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದು ಶ್ರೀ ಮೋದಿ ಹೇಳಿದರು. ಈ ಕಾರ್ಯಾಚರಣೆಗಾಗಿ ಅವರು ಎಲ್ಲಾ ನಾಗರಿಕರಿಗೆ ಅಭಿನಂದನೆಗಳನ್ನು ಸಲ್ಲಿಸಿದರು ಮತ್ತು ಇಡೀ ಜ್ಞಾನ ಭಾರತಂ ತಂಡ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ತಮ್ಮ ಶುಭಾಶಯಗಳನ್ನು ತಿಳಿಸಿದರು.

ಮಾರಿಷಸ್ ಪ್ರಧಾನಮಂತ್ರಿ ಅವರ ಭಾರತ ಭೇಟಿ: ಫಲಪ್ರದತೆಯ ವಿವರ

September 11th, 02:10 pm

ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿನ ಸಹಕಾರಕ್ಕಾಗಿ ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಮಾರಿಷಸ್ ಗಣರಾಜ್ಯದ ತೃತೀಯ ಶಿಕ್ಷಣ, ವಿಜ್ಞಾನ ಮತ್ತು ಸಂಶೋಧನಾ ಸಚಿವಾಲಯದ ನಡುವೆ ಒಪ್ಪಂದ

ಮಾರಿಷಸ್ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

September 11th, 12:30 pm

ನನ್ನ ಸಂಸದೀಯ ಕ್ಷೇತ್ರಕ್ಕೆ ನಿಮ್ಮನ್ನು ಸ್ವಾಗತಿಸುವುದು ನನಗೆ ಹೆಮ್ಮೆಯ ವಿಷಯವಾಗಿದೆ. ಕಾಶಿಯು ಸದಾ ಭಾರತದ ನಾಗರಿಕತೆ ಮತ್ತು ಸಾಂಸ್ಕೃತಿಕ ಪರಂಪರೆಯ ಸಂಕೇತವಾಗಿದೆ.

ಫಿಜಿ ಪ್ರಧಾನಮಂತ್ರಿ ಅವರ ಜತೆಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

August 25th, 12:30 pm

ಆ ಸಮಯದಲ್ಲಿ, ನಾವು ಭಾರತ-ಪೆಸಿಫಿಕ್‌ ದ್ವೀಪಗಳ ಸಹಕಾರ ವೇದಿಕೆಯನ್ನು (ಎಫ್‌ಐಪಿಐಸಿ) ಪ್ರಾರಂಭಿಸಿದ್ದೇವೆ. ಈ ಉಪಕ್ರಮವು ಭಾರತ-ಫಿಜಿ ಸಂಬಂಧಗಳನ್ನು ಬಲಪಡಿಸುವುದಲ್ಲದೆ, ಇಡೀ ಪೆಸಿಫಿಕ್‌ ಪ್ರದೇಶದೊಂದಿಗಿನ ನಮ್ಮ ಸಂಬಂಧಗಳನ್ನು ಬಲಪಡಿಸಿದೆ. ಇಂದು, ಪ್ರಧಾನಮಂತ್ರಿ ರಬೂಕಾ ಅವರ ಭೇಟಿಯೊಂದಿಗೆ, ನಾವು ನಮ್ಮ ಪಾಲುದಾರಿಕೆಯಲ್ಲಿ ಹೊಸ ಅಧ್ಯಾಯವನ್ನು ಬರೆಯುತ್ತಿದ್ದೇವೆ.

ಫಿಲಿಪ್ಪೀನ್ಸ್ ಅಧ್ಯಕ್ಷರೊಂದಿಗೆ ಜಂಟಿ ಮಾಧ್ಯಮ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಮಾಧ್ಯಮ ಹೇಳಿಕೆಯ ಕನ್ನಡ ಅನುವಾದ

August 05th, 11:06 am

ಮೊದಲನೆಯದಾಗಿ, ನಾನು ಅಧ್ಯಕ್ಷರನ್ನು ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹಾರ್ದಿಕವಾಗಿ ಸ್ವಾಗತಿಸುತ್ತೇನೆ. ಈ ವರ್ಷ, ಭಾರತ ಮತ್ತು ಫಿಲಿಪ್ಪೀನ್ಸ್ ರಾಜತಾಂತ್ರಿಕ ಸಂಬಂಧಗಳ 75ನೇ ವರ್ಷವನ್ನು ಆಚರಿಸುತ್ತಿವೆ. ಮತ್ತು ಈ ಸಂದರ್ಭದಲ್ಲಿ, ಈ ಭೇಟಿಯು ವಿಶೇಷ ಮಹತ್ವವನ್ನು ಪಡೆದಿದೆ. ನಮ್ಮ ರಾಜತಾಂತ್ರಿಕ ಸಂಬಂಧಗಳು ಇತ್ತೀಚಿನವಾದರೂ, ನಮ್ಮ ನಾಗರಿಕ ಸಂಪರ್ಕವು ಪ್ರಾಚೀನ ಕಾಲದಿಂದಲೂ ಇದೆ. ರಾಮಾಯಣದ ಫಿಲಿಪ್ಪೀನ್ಸ್ ಆವೃತ್ತಿ - ಮಹಾರಾಡಿಯಾ ಲಾವಾನಾ ನಮ್ಮ ಆಳವಾಗಿ ಬೇರೂರಿರುವ ಸಾಂಸ್ಕೃತಿಕ ಬಂಧಕ್ಕೆ ಜೀವಂತ ಪುರಾವೆಯಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಅಂಚೆ ಚೀಟಿಗಳು, ಎರಡೂ ದೇಶಗಳ ರಾಷ್ಟ್ರೀಯ ಹೂವುಗಳನ್ನು ಒಳಗೊಂಡಿದ್ದು, ನಮ್ಮ ಸ್ನೇಹದ ಪರಿಮಳವನ್ನು ಸುಂದರವಾಗಿ ಸಂಕೇತಿಸುತ್ತವೆ.

ಭಾರತ-ಮಾಲ್ಡೀವ್ಸ್ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 60 ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ

July 25th, 09:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಾಲ್ಡೀವ್ಸ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಡಾ. ಮೊಹಮ್ಮದ್ ಮುಯಿಝು ಅವರು, ಭಾರತ-ಮಾಲ್ಡೀವ್ಸ್ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 60ನೇ ವಾರ್ಷಿಕೋತ್ಸವದ ಅಂಗವಾಗಿ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದರು.