ಜಪಾನ್ ರಕ್ಷಣಾ ಸಚಿವರಿಂದ ಪ್ರಧಾನಮಂತ್ರಿ ಮೋದಿ ಭೇಟಿ

August 20th, 09:04 pm

ಪ್ರಸ್ತುತ ಭಾರತಕ್ಕೆ ಅಧಿಕೃತ ಭೇಟಿಯಲ್ಲಿರುವ ಜಪಾನ್ ರಕ್ಷಣಾ ಸಚಿವರಾದ ಶ್ರೀ ಶಿಂಜಿರೊ ಕೊಯಿಜುಮಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಪ್ರಧಾನಮಂತ್ರಿ ಅವರ ನ್ಯೂಜಿಲೆಂಡ್ ಅಧಿಕೃತ ಭೇಟಿಯ ಫಲಿತಾಂಶದ ಪಟ್ಟಿ

July 11th, 08:03 am

ಸಂವಾದ, ಸಮನ್ವಯ, ಮಾಹಿತಿ ವಿನಿಮಯ ಮತ್ತು ಜಂಟಿ ಚಟುವಟಿಕೆಗಳ ಮೂಲಕ ಇಂಡೋ-ಪೆಸಿಫಿಕ್‌ನಲ್ಲಿ ವರ್ಧಿತ ಕಡಲ ಸಹಕಾರಕ್ಕಾಗಿ ಒಂದು ಚೌಕಟ್ಟನ್ನು ಸ್ಥಾಪಿಸುತ್ತದೆ.

ಭಾರತ-ನ್ಯೂಜಿಲೆಂಡ್ ಜಂಟಿ ಹೇಳಿಕೆ

July 11th, 07:59 am

ನ್ಯೂಜಿಲೆಂಡ್ ಪ್ರಧಾನಮಂತ್ರಿ ಗೌರವಾನ್ವಿತ ಕ್ರಿಸ್ಟೋಫರ್ ಲಕ್ಸನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಜುಲೈ 10 ಮತ್ತು 11 ರಂದು ನ್ಯೂಜಿಲೆಂಡ್‌ನ ಆಕ್ಲೆಂಡ್‌ಗೆ ಅಧಿಕೃತ ಭೇಟಿ ನೀಡಿದ್ದರು. 40 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ನೀಡುತ್ತಿರುವ ಮೊದಲ ಭೇಟಿ ಇದಾಗಿದ್ದು, ಇದು ಐತಿಹಾಸಿಕ ಮೈಲಿಗಲ್ಲೆಂದು ಗುರುತಿಸಲಾಗಿದೆ ಮತ್ತು ಎರಡೂ ರಾಷ್ಟ್ರಗಳ ನಡುವಿನ ಕಾಯಂ ಸ್ನೇಹ ಮತ್ತು ಪಾಲುದಾರಿಕೆಯಲ್ಲಿ ಹೊಸ ಹಾದಿಯನ್ನು ರೂಪಿಸುತ್ತದೆ.

ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

July 09th, 11:15 am

ಈ ಹಂಚಿಕೆಯ ಗುಣಲಕ್ಷಣಗಳು ಮತ್ತು ನಮ್ಮ ಸಾಮಾನ್ಯ ವಿಶ್ವ ದೂರದೃಷ್ಟಿಯು ಆಳವಾದ ಪರಸ್ಪರ ನಂಬಿಕೆಯೊಂದಿಗೆ ಮುಂದುವರಿಯಲು ನಮಗೆ ಸ್ಫೂರ್ತಿ ನೀಡುತ್ತದೆ. ಕಳೆದ ಕೆಲವು ವರ್ಷಗಳಿಂದ ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಅಭೂತಪೂರ್ವ ಪ್ರಗತಿಯನ್ನು ಕಂಡಿದೆ ಮತ್ತು ಇಂದು ಮೂರನೇ ವಾರ್ಷಿಕ ಶೃಂಗಸಭೆಯು ನಮ್ಮ ಸಹಕಾರಕ್ಕೆ ಹಲವು ಹೊಸ ಆಯಾಮಗಳನ್ನು ಸೇರ್ಪಡೆ ಮಾಡಿದೆ.

ರಕ್ಷಣೆ ಮತ್ತು ಭದ್ರತಾ ಸಹಕಾರ ಕುರಿತು ಭಾರತ-ಆಸ್ಟ್ರೇಲಿಯಾ ಜಂಟಿ ಘೋಷಣೆ

July 09th, 10:55 am

ನಾವು, ಭಾರತ ಮತ್ತು ಆಸ್ಟ್ರೇಲಿಯಾದ ಪ್ರಧಾನ ಮಂತ್ರಿಗಳಾದ ನಾವು, ನಮ್ಮ ನಿರಂತರವಾಗಿ ಬೆಳೆಯುತ್ತಿರುವ ದ್ವಿಪಕ್ಷೀಯ ಬಾಂಧವ್ಯದಿಂದ ಒಗ್ಗೂಡಿದ್ದೇವೆ. ನಮ್ಮ ರಾಷ್ಟ್ರಗಳ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ದೃಢಸಂಕಲ್ಪ ಮಾಡಿದ್ದೇವೆ. ಮುಕ್ತ, ಶಾಂತಿಯುತ, ಸ್ಥಿರ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್‌ಗಾಗಿರುವ ಸಾಮಾನ್ಯ ಮಹತ್ವಾಕಾಂಕ್ಷೆಯಿಂದ ಪ್ರೇರಿತರಾಗಿ, ಈ ಮೂಲಕ ರಕ್ಷಣೆ ಮತ್ತು ಭದ್ರತಾ ಸಹಕಾರದ ಜಂಟಿ ಘೋಷಣೆಗೆ ಬದ್ಧರಾಗಿದ್ದೇವೆ.

ಇಂಡೋನೇಷ್ಯಾದ ಸಂಸತ್ ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

July 07th, 03:15 pm

ಇಂಡೋನೇಷ್ಯಾದ ಜನರು - ಅದರ ಮಕ್ಕಳು, ಯುವಕರು ಮತ್ತು ಮಹಿಳೆಯರು - ಇಂದಿನ ದಿನವನ್ನು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನಗಳಲ್ಲಿ ಒಂದನ್ನಾಗಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಇಂಡೋನೇಷ್ಯಾದ ಜನರಿಂದ ನನಗೆ ದೊರೆತ ಆತ್ಮೀಯ, ಪ್ರೀತಿಯ ಮತ್ತು ಅದ್ದೂರಿ ಸ್ವಾಗತವನ್ನು ನಾನು ಎಂದಿಗೂ ಸ್ಮರಿಸುತ್ತೇನೆ. ಇಂದು ಮುಂಜಾನೆ, ಅಧ್ಯಕ್ಷ ಪ್ರಬೋವೊ ಹಕ್ಕುಸ್ವಾಮ್ಯದ ಬಗ್ಗೆ ಮಾತನಾಡಿದರು. ಪ್ರೀತಿ, ವಾತ್ಸಲ್ಯ, ಸ್ನೇಹ ಅಥವಾ ಪರಸ್ಪರ ಗೌರವದ ಮೇಲೆ ಯಾರೂ ಹಕ್ಕುಸ್ವಾಮ್ಯವನ್ನು ಪಡೆಯಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ. ಅಧ್ಯಕ್ಷ ಪ್ರಬೋವೊ ಅವರೊಂದಿಗಿನ ನನ್ನ ಸ್ನೇಹವು ಹಕ್ಕುಸ್ವಾಮ್ಯದ ಎಲ್ಲಾ ಗಡಿಗಳನ್ನು ಮೀರಿದೆ.

ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

July 07th, 03:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಕಾರ್ತದಲ್ಲಿ ಇಂಡೋನೇಷ್ಯಾ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಿದರು. ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಿದ ಭಾರತದ ಮೊದಲ ಪ್ರಧಾನಮಂತ್ರಿ ಅವರಾಗಿದ್ದಾರೆ.

ಇಂಡೋನೇಷ್ಯಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗೆ ಮೂರು ರಾಷ್ಟ್ರಗಳ ಅಧಿಕೃತ ಭೇಟಿಗೆ ತೆರಳುವ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ

July 06th, 09:00 am

ಇಂಡೋನೇಷ್ಯಾ ಗಣತಂತ್ರದ ಅಧ್ಯಕ್ಷ ಘನತೆವೆತ್ತ ಶ್ರೀ ಪ್ರಬೊವೊ ಸುಬಿಯಾಂಟೊ ಅವರ ಆಹ್ವಾನದ ಮೇರೆಗೆ ನಾನು ಜುಲೈ 6-8ರವರೆಗೆ ಇಂಡೋನೇಷ್ಯಾಕ್ಕೆ ಭೇಟಿ ನೀಡುತ್ತಿದ್ದೇನೆ. 2018ರಲ್ಲಿ ನಾನು ಇಂಡೋನೇಷ್ಯಾಕ್ಕೆ ನೀಡಿದ ಮೊದಲ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಇಂಡೋನೇಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಸಮಗ್ರ ಕಾರ್ಯತಂತ್ರದ ಸಹಭಾಗಿತ್ವದ ಮಟ್ಟಕ್ಕೆ ಏರಿಸಲಾಗಿತ್ತು. ನಮ್ಮ ದ್ವಿಪಕ್ಷೀಯ ಸಂಬಂಧಗಳ ಉನ್ನತಿಯ ನಂತರ ಇದು ನನ್ನ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. 2025ರ ಜನವರಿ 26ರಂದು ನಮ್ಮ ಗಣರಾಜ್ಯೋತ್ಸವ ಆಚರಣೆಯಲ್ಲಿ ಮುಖ್ಯ ಅತಿಥಿಯಾಗಿದ್ದ ಅಧ್ಯಕ್ಷ ಪ್ರಬೋವೊ ಅವರ ಅಧಿಕೃತ ಭಾರತ ಭೇಟಿಯ ನಂತರ ಇದು ನನ್ನ ಮೊದಲ ದ್ವಿಪಕ್ಷೀಯ ಭೇಟಿಯಾಗಿದೆ. ಭಾರತ ಮತ್ತು ಇಂಡೋನೇಷ್ಯಾ ಬಲವಾದ ನಾಗರಿಕ ಮತ್ತು ಜನ ಸಂಬಂಧಗಳನ್ನು ಹಂಚಿಕೊಂಡಿವೆ. ನನ್ನ ಭೇಟಿಯು ನಮ್ಮ ಬಹುಮುಖಿ ಪಾಲುದಾರಿಕೆಯ ಎಲ್ಲಾ ಅಂಶಗಳನ್ನು ಮತ್ತಷ್ಟು ಗಾಢಗೊಳಿಸುತ್ತದೆ. ಈ ಭೇಟಿಯ ಸಮಯದಲ್ಲಿ, ನಾನು ಇಂಡೋನೇಷ್ಯಾದಲ್ಲಿರುವ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸುತ್ತೇನೆ ಮತ್ತು ಅಧ್ಯಕ್ಷ ಪ್ರಬೋವೊ ಅವರೊಂದಿಗೆ ಯೋಗ್ಯಕರ್ತಾದಲ್ಲಿರುವ ಪ್ರಂಬನನ್ ದೇವಾಲಯ ಸಂಕೀರ್ಣಕ್ಕೆ ಭೇಟಿ ನೀಡಲಿದ್ದೇನೆ. ಈ ದೇವಾಲಯವು ನಮ್ಮ ನಿಕಟ ಸಾಂಸ್ಕೃತಿಕ ಸಂಬಂಧಗಳಿಗೆ ಮತ್ತೊಂದು ಗಮನಾರ್ಹ ಸಾಕ್ಷಿಯಾಗಿದೆ.

ಜಪಾನ್‌ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

July 02nd, 01:30 pm

ಕಳೆದ ಹಲವು ದಶಕಗಳಿಂದೀಚೆಗೆ ಜಪಾನ್‌ ಭಾರತದ ಪ್ರಗತಿಗಾಥೆಯಲ್ಲಿ ಪ್ರಮುಖ ಪಾಲುದಾರನಾಗಿ ಮಾರ್ಪಟ್ಟಿದೆ. ಆಟೋಮೊಬೈಲ್ಸ್‌ನಿಂದ ಹಿಡಿದು ಎಲೆಕ್ಟ್ರಾನಿಕ್ಸ್‌ ವರೆಗೆ, ಸ್ನೇಹ ಮತ್ತು ವಿಶ್ವಾಸದ ಅಮೂಲ್ಯವಾಗಿದೆ.

ಭಾರತ-ಸ್ಲೋವಾಕಿಯಾ ಜಂಟಿ ಹೇಳಿಕೆ

June 15th, 05:32 pm

ಸ್ಲೋವಾಕ್ ಗಣರಾಜ್ಯದ ಪ್ರಧಾನ ಮಂತ್ರಿಗಳಾದ ಘನತೆವೆತ್ತ ರಾಬರ್ಟ್ ಫಿಕೊ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಪ್ರಧಾನಮಂತ್ರಿ ಘನತೆವೆತ್ತ ಶ್ರೀ ನರೇಂದ್ರ ಮೋದಿ ಅವರು ಜೂನ್ 15, 2026 ರಂದು ಸ್ಲೋವಾಕ್ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು.

ಮ್ಯಾನ್ಮಾರ್ ಅಧ್ಯಕ್ಷರಾದ ಯು ಮಿನ್ ಆಂಗ್ ಲೇಂಗ್ ಅವರೊಂದಿಗೆ ಪ್ರಧಾನಮಂತ್ರಿ ಅವರ ಮಾತುಕತೆ

June 01st, 08:09 pm

ಅಧ್ಯಕ್ಷರಾದ ಯು ಮಿನ್ ಆಂಗ್ ಹ್ಲೇಂಗ್ ಅವರು ಅಧ್ಯಕ್ಷರಾದ ನಂತರ ತಮ್ಮ ಮೊದಲ ವಿದೇಶ ಭೇಟಿಗಾಗಿ ಭಾರತವನ್ನು ಆಯ್ಕೆ ಮಾಡಿಕೊಂಡಿರುವುದು ಭಾರತಕ್ಕೆ ಸಂದ ಗೌರವ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಅಧ್ಯಕ್ಷರು ಭಾರತದಲ್ಲಿನ ತಮ್ಮ ಕಾರ್ಯಕ್ರಮವನ್ನು ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ ಬೋಧಗಯಾದಿಂದ ಪ್ರಾರಂಭಿಸಿದ್ದಕ್ಕಾಗಿ ಅವರು ಸಂತೋಷ ವ್ಯಕ್ತಪಡಿಸಿದರು.

ಸೈಪ್ರಸ್ ಅಧ್ಯಕ್ಷರ ಅಧಿಕೃತ ಭಾರತ ಭೇಟಿ ಕುರಿತು ಜಂಟಿ ಹೇಳಿಕೆ

May 22nd, 09:31 pm

ಸೈಪ್ರಸ್ ಗಣರಾಜ್ಯದ ಅಧ್ಯಕ್ಷರಾದ ಶ್ರೀ ನಿಕೋಸ್ ಕ್ರಿಸ್ಟೋಡೌಲೈಡ್ಸ್ ಅವರು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ 2026 ಮೇ 20-23ರ ವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಐರೋಪ್ಯ ಒಕ್ಕೂಟ ಮಂಡಳಿ ಸಭೆಯು ಸೈಪ್ರಸ್ ಅಧ್ಯಕ್ಷತೆಯ ಅವಧಿಯಲ್ಲಿ ನಡೆಯುವುದರಿಂದ ಈ ಭೇಟಿ ನಿರ್ದಿಷ್ಟ ಮತ್ತು ವಿಶೇಷ ಮಹತ್ವ ಹೊಂದಿದೆ.

ನಾರ್ವೆ ಪ್ರಧಾನಮಂತ್ರಿಯೊಂದಿಗೆ ಪ್ರಧಾನಮಂತ್ರಿ ಅವರು ದ್ವಿಪಕ್ಷೀಯ ಮಾತುಕತೆ ನಡೆಸಿದರು

May 18th, 08:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಓಸ್ಲೋದಲ್ಲಿ ನಾರ್ವೆ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಜೋನಸ್ ಗಹರ್ ಸ್ಟೋರೆ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಭಾರತ ಮತ್ತು ನಾರ್ವೆ ನಡುವಿನ ನಿಕಟ ಸಂಬಂಧಗಳ ಸಂಕೇತವಾಗಿ, ಇಂದು ಬೆಳಿಗ್ಗೆ ಓಸ್ಲೋ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ನಾರ್ವೆ ಪ್ರಧಾನಮಂತ್ರಿ ಶ್ರೀ ಸ್ಟೋರೆ ಅವರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.

ನಾರ್ವೆ ಪ್ರಧಾನಮಂತ್ರಿ ಜತೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಪತ್ರಿಕಾ ಅವರ ಹೇಳಿಕೆ

May 18th, 04:44 pm

ಕಳೆದ ವರ್ಷ ನಾನು ನಾರ್ವೆಗೆ ಭೇಟಿ ನೀಡಬೇಕಿತ್ತು, ಆದರೆ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಪ್ರವಾಸ ಮುಂದೂಡಬೇಕಾಯಿತು. ಆ ಕಷ್ಟದ ಸಮಯದಲ್ಲಿ, ಭಯೋತ್ಪಾದನೆಯ ವಿರುದ್ಧ ನಾರ್ವೆ ಭಾರತದೊಂದಿಗೆ ಸದೃಢವಾಗಿ ನಿಂತಿತು. ಇದು ನಮ್ಮ ಸ್ನೇಹದ ಬಲವನ್ನು ಪ್ರತಿಬಿಂಬಿಸುತ್ತದೆ. ಇಂದು ನಾನು ನಾರ್ವೆಗೆ ಭೇಟಿ ನೀಡಿರುವಾಗ ಆ ಬೆಂಬಲ ಮತ್ತು ಒಗ್ಗಟ್ಟಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.

ಭಾರತ ಗಣರಾಜ್ಯ ಮತ್ತು ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ನಡುವಿನ ವರ್ಧಿತ ಸಮಗ್ರ ವ್ಯೂಹಾತ್ಮಕ ಪಾಲುದಾರಿಕೆಯ ಕುರಿತಾದ ಜಂಟಿ ಹೇಳಿಕೆ

May 06th, 05:24 pm

ಭಾರತದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರು 2026ರ ಮೇ 05 ರಿಂದ ಮೇ 07 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಟೋ ಲಾಮ್ ಅವರೊಂದಿಗೆ ಉನ್ನತ ಮಟ್ಟದ ನಿಯೋಗ ಮತ್ತು ಪ್ರಬಲ ಉದ್ಯಮಿಗಳ ನಿಯೋಗವು ಆಗಮಿಸಿತ್ತು.

ಫಲಿತಾಂಶಗಳ ಪಟ್ಟಿ: ವಿಯೆಟ್ನಾಂ ಸಮಾಜವಾದಿ ಗಣರಾಜ್ಯದ ಅಧ್ಯಕ್ಷರ ಭಾರತ ಭೇಟಿ

May 06th, 03:44 pm

ಐ.ಆರ್.ಇ.ಎಲ್. (ಇಂಡಿಯಾ) ಲಿಮಿಟೆಡ್ ಮತ್ತು ವಿಯಟ್ನಾಂನ ಇನ್ ಸ್ಟಿಟ್ಯೂಟ್ ಫಾರ್ ಟೆಕ್ನಾಲಜಿ ಆಫ್ ರೇಡಿಯೋಆಕ್ಟಿವ್ ಅಂಡ್ ರೇರ್ ಎಲಿಮೆಂಟ್ಸ್ (ಐ.ಟಿ.ಆರ್.ಆರ್.ಇ.) ನಡುವೆ ಪರಸ್ಪರ ಸಹಕಾರಕ್ಕಾಗಿ ತಿಳಿವಳಿಕೆ ಒಪ್ಪಂದ

ವಿಯೆಟ್ನಾಂ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ವಿಯೆಟ್ನಾಂ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

May 06th, 01:00 pm

ಭಾರತಕ್ಕೆ ಭೇಟಿ ನೀಡಿದ ಅಧ್ಯಕ್ಷ ತೋ ಲ್ಯಾಮ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ವಿಯೆಟ್ನಾಂ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಒಂದು ತಿಂಗಳೊಳಗೆ ಉನ್ನತ ಮಟ್ಟದ ನಿಯೋಗ ಮತ್ತು ಹಲವು ವಾಣಿಜ್ಯ ನಾಯಕರೊಂದಿಗೆ ಅವರು ಭಾರತಕ್ಕೆ ನೀಡಿದ ಭೇಟಿಯು ಭಾರತ-ವಿಯೆಟ್ನಾಂ ಸಂಬಂಧಗಳಿಗೆ ಅವರು ನೀಡುವ ಆದ್ಯತೆಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ.

ಭಾರತ-ಕೊರಿಯಾ ಗಣರಾಜ್ಯ ಇಂಧನ ಸಂಪನ್ಮೂಲ ಭದ್ರತೆ ಕುರಿತು ಜಂಟಿ ಹೇಳಿಕೆ

April 20th, 10:56 pm

1. ಭಾರತ ಮತ್ತು ಕೊರಿಯಾ ಗಣರಾಜ್ಯಗಳು ಮುಕ್ತ, ಎಲ್ಲರನ್ನೂ ಒಳಗೊಂಡ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್ ಪ್ರದೇಶದ ಸಾಮಾನ್ಯ ಸಮಾನ ದೃಷ್ಟಿಕೋನವನ್ನು ಹೊಂದಿರುವ ವಿಶೇಷ ಕಾರ್ಯತಂತ್ರದ ಪಾಲುದಾರರು.

ಸುಸ್ಥಿರತೆ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ - ಕೊರಿಯಾ ಜಂಟಿ ಹೇಳಿಕೆ

April 20th, 10:55 pm

ಇನ್ನು ಮುಂದೆ ಎರಡೂ ಕಡೆಯವರು ಎಂದು ಕರೆಯಲ್ಪಡುವ ಭಾರತ ಮತ್ತು ಕೊರಿಯಾ ದೇಶಗಳು ಹವಾಮಾನ ಬದಲಾವಣೆ, ಸಮುದ್ರ ಮತ್ತು ಉತ್ತರ ಧ್ರುವ ಸುತ್ತಲಿನ ದೊಡ್ಡ ಮತ್ತು ಅತ್ಯಂತ ಶೀತ ಪ್ರದೇಶ(ಆರ್ಕ್ಟಿಕ್)ದ ಸುಧಾರಣೆ ವಿಷಯಗಳಲ್ಲಿ ಪ್ರಾಯೋಗಿಕ ಸಹಭಾಗಿತ್ವ ಹೊಂದುವ ಮೂಲಕ ಜಾಗತಿಕ ಸುಸ್ಥಿರತೆಯ ಸವಾಲುಗಳನ್ನು ಎದುರಿಸಲು ದ್ವಿಪಕ್ಷೀಯ ಸಹಕಾರ ಬಲಪಡಿಸಲು ಒಪ್ಪಿಕೊಂಡಿವೆ.

ಭಾರತ-ಕೊರಿಯಾ ಗಣರಾಜ್ಯ (ಆರ್‌ಒಕೆ-ದಕ್ಷಿಣ ಕೊರಿಯಾ) ವಿಶೇಷ ಕಾರ್ಯತಂತ್ರ ಪಾಲುದಾರಿಕೆಗಾಗಿ ಜಂಟಿ ಕಾರ್ಯತಂತ್ರ ದೃಷ್ಟಿಕೋನ

April 20th, 10:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಕೊರಿಯಾ ಗಣರಾಜ್ಯದ(ದಕ್ಷಿಣ ಕೊರಿಯಾ-ಆರ್‌ಒಕೆ) ಅಧ್ಯಕ್ಷ ಗೌರವಾನ್ವಿತ ಲೀ ಜೇ ಮ್ಯುಂಗ್ ಅವರು 2026 ಏಪ್ರಿಲ್ 19ರಿಂದ 21ರ ವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಇದು ಕೊರಿಯಾದ ಅಧ್ಯಕ್ಷರೊಬ್ಬರು ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಚೊಚ್ಚಲ ಭೇಟಿಯಾಗಿದೆ. ಅಧ್ಯಕ್ಷ ಲೀ ಜೇ ಮ್ಯುಂಗ್ ಅವರೊಂದಿಗೆ ಸಚಿವರು, ಹಿರಿಯ ಅಧಿಕಾರಿಗಳು ಮತ್ತು ಕೊರಿಯಾ ಉದ್ಯಮ ರಂಗದ ಪ್ರಮುಖ ಸಿಇಒಗಳು ಸೇರಿದಂತೆ ಉನ್ನತ ಮಟ್ಟದ ನಿಯೋಗ ಆಗಮಿಸಿತ್ತು.