Cabinet approves enhanced delegation of power to NTPC Ltd

Cabinet approves enhanced delegation of power to NTPC Ltd

July 16th, 02:46 pm

The Cabinet Committee on Economic Affairs chaired by PM Modi has granted enhanced delegation of power to NTPC Limited. This will generate employment opportunities to the local people. NTPC aims to add 60 GW of Renewable Energy Capacity by 2032 which will help the country in achieving the 500 GW of non-fossil energy capacity by 2030 and move towards larger aim of ‘Net Zero’ emissions by 2070.

ಬ್ರೆಜಿಲ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

ಬ್ರೆಜಿಲ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

July 09th, 06:02 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದ್ದಾರೆ. ಅವರು ಇಂದು ಬ್ರೆಜಿಲ್ ನ ಅಧ್ಯಕ್ಷ ಘನತೆವೆತ್ತ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರನ್ನು ಬ್ರೆಜಿಲ್ ನ ಅಲ್ವೊರಾಡಾ ಅರಮನೆಯಲ್ಲಿ ಭೇಟಿಯಾದರು. ಪ್ರಧಾನಿಯವರನ್ನು ಅಧ್ಯಕ್ಷ ಲುಲಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಭವ್ಯ ಮತ್ತು ವರ್ಣರಂಜಿತ ವಿಧ್ಯುಕ್ತ ಸ್ವಾಗತವನ್ನು ನೀಡಿದರು.

ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಬೊಲಿವಿಯಾ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಬೊಲಿವಿಯಾ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

July 07th, 09:19 pm

ಬ್ರೆಜಿಲ್ ನ ರಿಯೊ ಡಿ ಜನೈರೊದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೊಲಿವಿಯಾ ಬಹುರಾಷ್ಟ್ರೀಯ ರಾಜ್ಯದ ಅಧ್ಯಕ್ಷ ಘನತೆವೆತ್ತ ಲೂಯಿಸ್ ಆರ್ಸ್ ಕ್ಯಾಟಕೋರಾ ಅವರನ್ನು ಭೇಟಿ ಮಾಡಿದರು.

Cabinet approves construction of 4-Lane Paramakudi - Ramanathapuram Section (NH-87) in Tamilnadu worth Rs.1853 crore

July 01st, 03:13 pm

The Union Cabinet has approved the construction of 4-Lane Paramakudi - Ramanathapuram Section (46.7 km) in Tamilnadu. The project worth Rs.1,853 crore will decongest the existing corridor, improve safety, and cater to the mobility needs of the surrounding towns. It will play a pivotal role in regional economic growth, strengthening connectivity and boosting tourism.

48ನೇ ಪ್ರಗತಿ ಸಭೆಯ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ

June 25th, 09:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೌತ್‌ ಬ್ಲಾಕ್‌ನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರಯತ್ನಗಳನ್ನು ತಡೆರಹಿತವಾಗಿ ಸಂಯೋಜಿಸುವ ಮೂಲಕ ಸಕ್ರಿಯ ಆಡಳಿತ ಮತ್ತು ಸಮಯೋಚಿತ ಅನುಷ್ಠಾನ ಉತ್ತೇಜಿಸುವ ಗುರಿ ಹೊಂದಿರುವ ಐಸಿಟಿ ಶಕ್ತ, ಬಹು ಮಾದರಿ ವೇದಿಕೆಯಾದ ಪ್ರಗತಿಯ 48ನೇ ಸಭೆಯ ಅಧ್ಯಕ್ಷತೆ ವಹಿಸಿದ್ದರು.

Cabinet approves Pune Metro Rail Project Phase-2

June 25th, 03:08 pm

The Union Cabinet chaired by PM Modi has approved the Pune Metro Rail Project Phase-2 project worth Rs.3626.24 crore. This project will serve key IT hubs, commercial areas, educational institutions, and residential pockets, increasing the share of public transport and ridership across the network. It is poised to unlock Pune’s economic potential.

ಜೂನ್‌ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ

June 19th, 05:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್‌ 20 ಮತ್ತು 21ರಂದು ಬಿಹಾರ, ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅವರು ಜೂನ್‌ 20ರಂದು ಬಿಹಾರದ ಸಿವಾನ್‌ಗೆ ಭೇಟಿ ನೀಡಲಿದ್ದು, ಮಧ್ಯಾಹ್ನ 12 ಗಂಟೆಗೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿಅವರು ಸಭಿಕರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಕ್ರೊಯೇಷಿಯಾ ಗಣರಾಜ್ಯದ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ

June 18th, 11:40 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಾಗ್ರೆಬ್‌ನಲ್ಲಿ ಕ್ರೊಯೇಷಿಯಾ ಗಣರಾಜ್ಯದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಆಂಡ್ರೆಜ್ ಪ್ಲೆಂಕೋವಿಕ್ ಅವರನ್ನು ಭೇಟಿ ಮಾಡಿದರು. ಇದು ಕ್ರೊಯೇಷಿಯಾಕ್ಕೆ ಭಾರತೀಯ ಪ್ರಧಾನ ಮಂತ್ರಿಯೊಬ್ಬರು ನೀಡಿದ ಮೊದಲ ಭೇಟಿಯಾಗಿದ್ದು, ಭಾರತ-ಕ್ರೊಯೇಷಿಯಾ ಸಂಬಂಧಗಳಲ್ಲಿ ಇದು ಒಂದು ಐತಿಹಾಸಿಕ ಮೈಲಿಗಲ್ಲಾಗಿದೆ. ಐತಿಹಾಸಿಕ ಬನ್ಸ್ಕಿ ಡ್ವೋರಿ ಅರಮನೆಗೆ ಆಗಮಿಸಿದ ಪ್ರಧಾನ ಮಂತ್ರಿ ಅವರನ್ನು ಕ್ರೊಯೇಷಿಯಾ ಪ್ರಧಾನಿ ಪ್ಲೆಂಕೋವಿಕ್ ಬರಮಾಡಿಕೊಂಡು, ಔಪಚಾರಿಕ ಸ್ವಾಗತ ನೀಡಿದರು. ದಿನದ ಆರಂಭದಲ್ಲಿ, ಪ್ರಧಾನ ಮಂತ್ರಿಯವರು ಜಾಗ್ರೆಬ್‌ನ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ವಿಶೇಷ ಮತ್ತು ಆತ್ಮೀಯ ಗೌರವ ಸೂಚಕವಾಗಿ, ಅವರನ್ನು ಪ್ರಧಾನಿ ಪ್ಲೆಂಕೋವಿಕ್ ಸ್ವಾಗತಿಸಿದರು.

ಇಂಧನ ಸುರಕ್ಷತೆಯ ಕುರಿತಾದ ಜಿ 7 ಔಟ್ರೀಚ್ ಅಧಿವೇಶನದಲ್ಲಿ (ಜೂನ್ 17, 2025) ಪ್ರಧಾನಮಂತ್ರಿ ಅವರ ಭಾಷಣ

June 18th, 11:15 am

ನಮ್ಮನ್ನು G-7 ಶೃಂಗಸಭೆಗೆ ಆಹ್ವಾನಿಸಿದ್ದಕ್ಕಾಗಿ ಮತ್ತು ನಮಗೆ ನೀಡಿದ ಅದ್ಭುತ ಸ್ವಾಗತಕ್ಕಾಗಿ ನಾನು ಪ್ರಧಾನಮಂತ್ರಿ ಕಾರ್ನಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. G-7 ಗುಂಪು 50 ವರ್ಷಗಳನ್ನು ಪೂರ್ಣಗೊಳಿಸಿದ ಈ ಐತಿಹಾಸಿಕ ಸಂದರ್ಭದಲ್ಲಿ ನಾನು ನಮ್ಮೆಲ್ಲಾ ಸ್ನೇಹಿತರನ್ನು ಅಭಿನಂದಿಸುತ್ತೇನೆ.

G7 ಔಟ್ರೀಚ್ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

June 18th, 11:13 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಾನನಾಸ್ಕಿಸ್ ನಲ್ಲಿ ನಡೆದ G7 ಶೃಂಗಸಭೆಯ ಹೊರನೋಟದ ಅಧಿವೇಶನದಲ್ಲಿ (Outreach Session) ಭಾಗವಹಿಸಿದರು. 'ಇಂಧನ ಭದ್ರತೆ: ಬದಲಾಗುತ್ತಿರುವ ಜಗತ್ತಿನಲ್ಲಿ ಲಭ್ಯತೆ ಮತ್ತು ಕೈಗೆಟಕುವಿಕೆಯನ್ನು ಖಚಿತಪಡಿಸಿಕೊಳ್ಳಲು ವೈವಿಧ್ಯೀಕರಣ, ತಂತ್ರಜ್ಞಾನ ಮತ್ತು ಮೂಲಸೌಕರ್ಯ' ಕುರಿತ ಅಧಿವೇಶನವನ್ನು ಅವರು ಉದ್ದೇಶಿಸಿ ಮಾತನಾಡಿದರು. ಅವರು ಕೆನಡಾದ ಪ್ರಧಾನಿ, ಘನತೆವೆತ್ತ ಶ್ರೀ ಮಾರ್ಕ್ ಕಾರ್ನಿ ಅವರ ಆಹ್ವಾನಕ್ಕಾಗಿ ಧನ್ಯವಾದ ಅರ್ಪಿಸಿದರು ಮತ್ತು G7 ತನ್ನ 50 ವರ್ಷಗಳ ಪಯಣವನ್ನು ಪೂರ್ಣಗೊಳಿಸಿದ್ದಕ್ಕಾಗಿ ಅಭಿನಂದಿಸಿದರು.

Cabinet approves two multitracking projects across Indian Railways covering various states

June 11th, 03:05 pm

The Cabinet Committee on Economic Affairs, chaired by PM Modi, has approved Koderma – Barkakana Doubling and Ballari – Chikjajur Doubling projects of Ministry of Railways with total cost of Rs. 6,405 crore. These initiatives will improve travel convenience, reduce logistic cost, decrease oil imports and contribute to lower CO2 emissions, supporting sustainable and efficient rail operations and generate employment.

ಭಾರತದಲ್ಲಿ ಮೂಲಸೌಕರ್ಯ ಕ್ರಾಂತಿಯ 11 ವರ್ಷಗಳ ಮಹತ್ವವನ್ನು ಬಿಂಬಿಸಿದ ಪ್ರಧಾನಮಂತ್ರಿ

June 11th, 10:17 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಮೂಲಸೌಕರ್ಯ ಕ್ರಾಂತಿಯ 11ನೇ ವರ್ಷಾಚರಣೆಯನ್ನು ಆಚರಿಸುವ ಮೂಲಕ ಭಾರತದ ಬೆಳವಣಿಗೆಯ ಪಯಣದಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸಿದ್ದಾರೆ. ರೈಲ್ವೆ, ಹೆದ್ದಾರಿಗಳು, ಬಂದರುಗಳು ಮತ್ತು ವಿಮಾನ ನಿಲ್ದಾಣಗಳನ್ನು ವ್ಯಾಪಿಸಿರುವ ಮೂಲಸೌಕರ್ಯದಲ್ಲಿ ಭಾರತದ ಅತ್ಯುತ್ತಮ ದಾಪುಗಾಲುಗಳು ಹೆಚ್ಚಿನ ಸಂಪರ್ಕ, ಆರ್ಥಿಕ ವಿಸ್ತರಣೆ ಮತ್ತು ಸುಧಾರಿತ ಸುಗಮ ಜೀವನ ಮತ್ತು ನಾಗರಿಕರ ಸಮೃದ್ಧಿಗೆ ಕಾರಣವಾಗಿವೆ ಎಂದು ಶ್ರೀ ನರೇಂದ್ರ ಮೋದಿ ಅವರು ಒತ್ತಿ ಹೇಳಿದರು.

ಚೆನಾಬ್ ರೈಲು ಸೇತುವೆ ನಿರ್ಮಾಣದಲ್ಲಿ ಭಾಗಿಯಾಗಿರುವ ಜನರೊಂದಿಗೆ ಪ್ರಧಾನಮಂತ್ರಿ ಸಂವಾದ

June 06th, 03:01 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಚೆನಾಬ್ ರೈಲು ಸೇತುವೆ ನಿರ್ಮಾಣದಲ್ಲಿ ಭಾಗಿಯಾಗಿರುವ ಕೆಲವು ಜನರೊಂದಿಗೆ ಸಂವಾದ ನಡೆಸಿದರು. ರಾಷ್ಟ್ರಕ್ಕಾಗಿ ಆಧುನಿಕ ಮೂಲಸೌಕರ್ಯಗಳನ್ನು ನಿರ್ಮಿಸುವ ಅವರ ಅಚಲ ಬದ್ಧತೆಯನ್ನು ಶ್ರೀ ನರೇಂದ್ರ ಮೋದಿ ಶ್ಲಾಘಿಸಿದರು.

ಬಡವರ ಕಲ್ಯಾಣಕ್ಕೆ ಸಮರ್ಪಿತವಾದ ಸಹಾನುಭೂತಿಯುಳ್ಳ ಸರ್ಕಾರ: ಪ್ರಧಾನಮಂತ್ರಿ

June 05th, 09:45 am

ದೇಶವು ಪರಿವರ್ತನಶೀಲ ಮತ್ತು ಎಲ್ಲರನ್ನೂ ಒಳಗೊಂಡ ಆಡಳಿತದ 11ನೇ ವರ್ಷವನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಬಡವರ ಕಲ್ಯಾಣಕ್ಕೆ ಎನ್‌ಡಿಎ ಸರ್ಕಾರದ ಅಚಲ ಬದ್ಧತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪುನರುಚ್ಚರಿಸಿದ್ದಾರೆ. ಸಬಲೀಕರಣ, ಮೂಲಸೌಕರ್ಯ ಮತ್ತು ಒಳಗೊಳ್ಳುವಿಕೆಯ ಮೇಲೆ ಗಮನ ಕೇಂದ್ರೀಕರಿಸಿದ ಸಹಾನುಭೂತಿಯುಳ್ಳ ಸರ್ಕಾರವು 25 ಕೋಟಿಗೂ ಹೆಚ್ಚು ಜನರನ್ನು ಬಡತನದಿಂದ ಮೇಲೆತ್ತುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಅವರು ಹೇಳಿದ್ದಾರೆ.

ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಮಂತ್ರಿ ಭೇಟಿ

June 04th, 12:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ಪ್ರದೇಶದಲ್ಲಿ ರೈಲು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನ ಮಂತ್ರಿಗಳು ಬೆಳಿಗ್ಗೆ 11 ಗಂಟೆಗೆ ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ ಮತ್ತು ಸೇತುವೆಯ ಡೆಕ್‌ಗೆ ಭೇಟಿ ನೀಡಲಿದ್ದಾರೆ. ನಂತರ, ಅವರು ಅಂಜಿ ಸೇತುವೆಗೆ ಭೇಟಿ ನೀಡಿ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅವರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬಳಿಕ, ಅವರು ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

ನವದೆಹಲಿಯ ಭಾರತ್ ಮಂಟಪದಲ್ಲಿ ನಡೆದ ವಿಶ್ವ ವಾಯು ಸಾರಿಗೆ ಶೃಂಗಸಭೆಯ ಸರ್ವಸದಸ್ಯರ(ಸಮಗ್ರ) ಅಧಿವೇಶನ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

June 02nd, 05:34 pm

ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ರಾಮ್ ಮೋಹನ್ ನಾಯ್ಡು ಜಿ ಮತ್ತು ಮುರಳೀಧರ್ ಮೊಹೋಲ್ ಜಿ, ಐಎಟಿಎ ಆಡಳಿತ ಮಂಡಳಿಯ ಅಧ್ಯಕ್ಷ ಪೀಟರ್ ಎಲ್ಬರ್ಸ್ ಜಿ, ಐಎಟಿಎ ಮಹಾನಿರ್ದೇಶಕ ವಿಲ್ಲಿ ವಾಲ್ಷ್ ಜಿ, ಇಂಡಿಗೊ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಭಾಟಿಯಾ ಜಿ, ಇತರೆ ಎಲ್ಲ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐಎಟಿಎಯ 81ನೇ ವಾರ್ಷಿಕ ಸಾಮಾನ್ಯ ಸಭೆ ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ ಪೂರ್ಣ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದರು

June 02nd, 05:00 pm

ವಿಶ್ವದರ್ಜೆಯ ವಾಯು ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವ ಮತ್ತು ಸಂಪರ್ಕವನ್ನು ಹೆಚ್ಚಿಸುವ ಬದ್ಧತೆಗೆ ಅನುಗುಣವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದ (ಐಎಟಿಎ) 81ನೇ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ) ಮತ್ತು ವಿಶ್ವ ವಾಯು ಸಾರಿಗೆ ಶೃಂಗಸಭೆಯ (ವ್ಯಾಟ್ಸ್) ಪೂರ್ಣ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿ ಅವರು, ಅತಿಥಿಗಳನ್ನು ಸ್ವಾಗತಿಸಿದರು, ನಾಲ್ಕು ದಶಕಗಳ ನಂತರ ಭಾರತಕ್ಕೆ ಮರಳುತ್ತಿರುವ ಈ ಕಾರ್ಯಕ್ರಮದ ಮಹತ್ವವನ್ನು ಒತ್ತಿ ಹೇಳಿದರು. ಈ ಅವಧಿಯಲ್ಲಿ ಭಾರತವು ಅನುಭವಿಸಿದ ಪರಿವರ್ತನಾತ್ಮಕ ಬದಲಾವಣೆಗಳನ್ನು ಒತ್ತಿ ಹೇಳಿದ ಅವರು, ಇಂದಿನ ಭಾರತವು ಹಿಂದೆಂದಿಗಿಂತಲೂ ಹೆಚ್ಚು ವಿಶ್ವಾಸ ಹೊಂದಿದೆ ಎಂದರು. ಜಾಗತಿಕ ವಾಯುಯಾನ ಪರಿಸರ ವ್ಯವಸ್ಥೆಯಲ್ಲಿ ಭಾರತದ ಪಾತ್ರವನ್ನು ಅವರು ಪ್ರತಿಪಾದಿಸಿದರು. ಜತೆಗೆ ಇದು ವಿಶಾಲ ಮಾರುಕಟ್ಟೆಯಾಗಿ ಮಾತ್ರವಲ್ಲದೆ ನೀತಿ ನಾಯಕತ್ವ, ನಾವೀನ್ಯತೆ ಮತ್ತು ಅಂತರ್ಗತ ಅಭಿವೃದ್ಧಿಯ ಸಂಕೇತವಾಗಿದೆ ಎಂದರು. ಇಂದು, ಭಾರತವು ಬಾಹ್ಯಾಕಾಶ-ವಾಯುಯಾನ ಸಂಯೋಜನೆಯಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದ ಪ್ರಧಾನಮಂತ್ರಿ, ನಾಗರಿಕ ವಿಮಾನಯಾನ ಕ್ಷೇತ್ರವು ಕಳೆದ ದಶಕದಲ್ಲಿ ಐತಿಹಾಸಿಕ ಪ್ರಗತಿಗೆ ಸಾಕ್ಷಿಯಾಗಿದೆ, ಅವು ಚೆನ್ನಾಗಿ ಗುರುತಿಸಲ್ಪಟ್ಟಿವೆ ಎಂದರು.

ಪಶ್ಚಿಮ ಬಂಗಾಳದ ಅಲಿಪುರ್ದಾರ್ ನಲ್ಲಿ ನಗರ ಅನಿಲ ವಿತರಣಾ ಯೋಜನೆಯ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

May 29th, 01:30 pm

ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಸುಕಾಂತ ಮಜುಂದಾರ್ ಜೀ, ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಜೀ, ಅಲಿಪುರ್ದಾರ್ ನ ಜನಪ್ರಿಯ ಸಂಸದ ಸಹೋದರ ಮನೋಜ್ ಟಿಗ್ಗಾ ಜೀ, ಇತರ ಸಂಸದರು, ಶಾಸಕರು ಮತ್ತು ಬಂಗಾಳದ ನನ್ನೆಲ್ಲಾ ಸಹೋದರ ಸಹೋದರಿಯರೇ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಅಲಿಪುರ್ದುವಾರ್ ನಲ್ಲಿ 1010 ಕೋಟಿ ರೂಪಾಯಿ ಮೌಲ್ಯದ ನಗರ ಅನಿಲ ವಿತರಣಾ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು

May 29th, 01:20 pm

ಭಾರತದಲ್ಲಿ ನಗರ ಅನಿಲ ವಿತರಣಾ (ಸಿಜಿಡಿ) ಜಾಲವನ್ನು ವಿಸ್ತರಿಸುವ ಮಹತ್ವದ ಹೆಜ್ಜೆಯಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಅಲಿಪುರ್ದುವಾರ್ ನಲ್ಲಿ ಸಿಜಿಡಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ, ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಐತಿಹಾಸಿಕ ಭೂಮಿ ಅಲಿಪುರ್ದುವಾರ್ ನಿಂದ ಪಶ್ಚಿಮ ಬಂಗಾಳದ ಜನತೆಗೆ ಶುಭ ಕೋರಿದರು. ಅವರು ಈ ಪ್ರದೇಶದ ಶ್ರೀಮಂತ ಸಾಂಸ್ಕೃತಿಕ ಮಹತ್ವವನ್ನು ಬಿಂಬಿಸಿದರು, ಇದು ಅದರ ಗಡಿಗಳಿಂದ ಮಾತ್ರವಲ್ಲದೆ ಅದರ ಆಳವಾಗಿ ಬೇರೂರಿರುವ ಸಂಪ್ರದಾಯಗಳು ಮತ್ತು ಸಂಪರ್ಕಗಳಿಂದ ವ್ಯಾಖ್ಯಾನಿಸಲ್ಪಟ್ಟಿದೆ ಎಂದು ಒತ್ತಿ ಹೇಳಿದರು. ಅಲಿಪುರ್ದುವಾರ್ ಭೂತಾನ್ ನೊಂದಿಗೆ ತನ್ನ ಗಡಿಯನ್ನು ಹಂಚಿಕೊಂಡಿದೆ. ಮತ್ತೊಂದೆಡೆ ಅಸ್ಸಾಂ ಅದನ್ನು ಸ್ವಾಗತಿಸುತ್ತದೆ, ಜಲ್ಪೈಗುರಿಯ ನೈಸರ್ಗಿಕ ಸೌಂದರ್ಯ ಮತ್ತು ಕೂಚ್ ಬೆಹಾರ್ ನ ಹೆಮ್ಮೆ ಈ ಪ್ರದೇಶದ ಅವಿಭಾಜ್ಯ ಅಂಗಗಳಾಗಿವೆ ಎಂದು ಪ್ರಧಾನಿ ಹೇಳಿದರು. ಬಂಗಾಳದ ಪರಂಪರೆ ಮತ್ತು ಏಕತೆಯಲ್ಲಿ ಅದರ ಪಾತ್ರವನ್ನು ಒತ್ತಿಹೇಳುತ್ತಾ, ಈ ಸಮೃದ್ಧ ಭೂಮಿಗೆ ಭೇಟಿ ನೀಡುವ ಸುಯೋಗವನ್ನು ಅವರು ವ್ಯಕ್ತಪಡಿಸಿದರು.

ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ʻಪ್ರಗತಿʼ ಸಭೆ

May 28th, 09:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೊದಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಐಸಿಟಿ ಆಧಾರಿತ ಬಹು-ಮಾದರಿ ವೇದಿಕೆಯಾದ ʻಪ್ರಗತಿʼ (ಪಿ.ಆರ್.ಎ.ಜಿ.ಎ.ಟಿ.ಐ.) ಸಭೆಯ ಅಧ್ಯಕ್ಷತೆ ವಹಿಸಿದ್ದರು.