ಕೋಲ್ಕತ್ತಾದಲ್ಲಿ ನಡೆದ ಐ.ಎನ್.ಎಸ್. ಅಗ್ರೇ, ಐ.ಎನ್.ಎಸ್. ದುನಾಗಿರಿ ಮತ್ತು ಐ.ಎನ್.ಎಸ್. ಸಂಶೋಧಕ್ ತ್ರಿವಳಿ ನೌಕಾದಳ ಹಡಗು ಕಾರ್ಯಾರಂಭ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
June 21st, 12:51 pm
ಪಶ್ಚಿಮ ಬಂಗಾಳದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಆರ್.ಎನ್.ರವಿ ಜೀ, ಉತ್ಸಾಹಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಜೀ, ನೌಕಾಪಡೆಯ ಮುಖ್ಯಸ್ಥ ಕೃಷ್ಣ ಸ್ವಾಮಿನಾಥನ್ ಜೀ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಮಹಿಳೆಯರೇ ಮತ್ತು ಮಹನೀಯರೇ!ಪಶ್ಚಿಮ ಬಂಗಾಳದ ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಮೂರು ನೌಕಾ ಹಡಗುಗಳಾದ ಐಎನ್ಎಸ್ ದುನಗಿರಿ, ಐಎನ್ಎಸ್ ಸಂಶೋಧಕ್ ಮತ್ತು ಐಎನ್ಎಸ್ ಅಗ್ರೇ ಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾರ್ಯಾರಂಭಗೊಳಿಸಿದರು
June 21st, 12:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಶ್ಯಾಮ್ ಪ್ರಸಾದ್ ಮುಖರ್ಜಿ ಬಂದರಿನಲ್ಲಿ ದೇಶೀಯವಾಗಿ ವಿನ್ಯಾಸ ಮಾಡಿ ನಿರ್ಮಿಸಲಾದ ಮೂರು ನೌಕಾ ಹಡಗುಗಳಾದ ಐ.ಎನ್.ಎಸ್. ದುನಾಗಿರಿ, ಸುಧಾರಿತ ರಹಸ್ಯ ಯುದ್ಧ ನೌಕೆ ಅಂದರೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲಾದ ಹಾಗು ವೈರಿಯ ರಾಡಾರ್, ಸೋನಾರ್, ದೃಶ್ಯ ಮತ್ತು ಇನ್ಫ್ರಾರೆಡ್ ಚಕ್ಷುಗಳಿಗೆ ಸುಲಭದಲ್ಲಿ ಗೋಚರಿಸದ ಮಧ್ಯಮ ಗಾತ್ರದ ನೌಕಾ ಯುದ್ದನೌಕೆ ಐ.ಎನ್.ಎಸ್. ಸಂಶೋಧಕ್ ಮತ್ತು ಜಲಾಂತರ್ಗಾಮಿ ನಿರೋಧಕ ಯುದ್ಧ ನೌಕೆ ಐ.ಎನ್.ಎಸ್. ಅಗ್ರೇ ಇವುಗಳನ್ನು ಕಾರ್ಯಾರಂಭಗೊಳಿಸಿದರು. ಈ ಸೇರ್ಪಡೆಗಳು ರಾಷ್ಟ್ರದ ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಗಮನಾರ್ಹವಾಗಿ ಹೆಚ್ಚಿಸುತ್ತವೆ, ಕಡಲ ಕ್ಷೇತ್ರದ ಜಾಗೃತಿಯನ್ನು ಹೆಚ್ಚಿಸುತ್ತವೆ ಮತ್ತು ಭೌಗೋಳಿಕ ರಾಜಕೀಯ ಬೆದರಿಕೆಗಳ ವಿರುದ್ಧ ನಮ್ಮ ಕರಾವಳಿ ನೀರಿನ ಭದ್ರತೆಯನ್ನು ಬಲಪಡಿಸುತ್ತವೆ. ಎಲ್ಲಾ ಮೂರು ಹಡಗುಗಳನ್ನು ಭಾರತೀಯ ನೌಕಾಪಡೆಯ ಯುದ್ಧನೌಕೆ ವಿನ್ಯಾಸ ಬ್ಯೂರೋ ವಿನ್ಯಾಸಗೊಳಿಸಿದೆ ಮತ್ತು 200ಕ್ಕೂ ಹೆಚ್ಚು ಎಂಎಸ್ಎಂಇಗಳು ಸೇರಿದಂತೆ ಭಾರತೀಯ ಉದ್ಯಮದ ವ್ಯಾಪಕ ಭಾಗವಹಿಸುವಿಕೆಯೊಂದಿಗೆ ಗಾರ್ಡನ್ ರೀಚ್ ಶಿಪ್ ಬಿಲ್ಡರ್ಸ್ ಮತ್ತು ಎಂಜಿನಿಯರ್ಸ್ (ಜಿಆರ್ಎಸ್ಇ) ಕೋಲ್ಕತ್ತಾದಲ್ಲಿ ನಿರ್ಮಿಸಿದೆ. ಶೇಕಡಾ 75 ಕ್ಕಿಂತ ಹೆಚ್ಚು ಸ್ಥಳೀಯ ಸಾಮಗ್ರಿಗಳೊಂದಿಗೆ, ಈ ಹಡಗುಗಳು ಆತ್ಮನಿರ್ಭರತೆಗೆ ಭಾರತದ ಬದ್ಧತೆಗೆ ಸಾಕ್ಷಿಯಾಗಿವೆ.ವಿಕಸಿತ್ ಭಾರತ್ ಪ್ರಯಾಣದಲ್ಲಿ ಪತ್ರಿಕೆಗಳ ಪಾತ್ರ ನಿರ್ಣಾಯಕ: ಮುಂಬೈನಲ್ಲಿ ಐಎನ್ಎಸ್ ಟವರ್ಸ್ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ
July 13th, 09:33 pm
ಮುಂಬೈನ ಇಂಡಿಯನ್ ನ್ಯೂಸ್ ಪೇಪರ್ ಸೊಸೈಟಿ ಸೆಕ್ರೆಟರಿಯೇಟ್ ನಲ್ಲಿ ಐಎನ್ ಎಸ್ ಟವರ್ಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಬದಲಾವಣೆಯಲ್ಲಿ ಮಾಧ್ಯಮದ ನಿರ್ಣಾಯಕ ಪಾತ್ರವನ್ನು ಅವರು ಒತ್ತಿಹೇಳಿದರು, ಪ್ರವಾಸೋದ್ಯಮವನ್ನು ಉತ್ತೇಜಿಸಲು, ಜಾಗತಿಕವಾಗಿ ವಿಸ್ತರಿಸಲು ಮತ್ತು ಡಿಜಿಟಲ್ ಆವೃತ್ತಿಗಳನ್ನು ಹತೋಟಿಗೆ ತರಲು ಪತ್ರಿಕೆಗಳನ್ನು ಒತ್ತಾಯಿಸಿದರು. ರಾಷ್ಟ್ರೀಯ ಚಳುವಳಿಗಳು ಮತ್ತು ಡಿಜಿಟಲ್ ಉಪಕ್ರಮಗಳ ಮೇಲೆ ಮಾಧ್ಯಮದ ಪ್ರಭಾವವನ್ನು ಪ್ರಧಾನಮಂತ್ರಿ ಮೋದಿ ಎತ್ತಿ ತೋರಿಸಿದರು, ಭಾರತದ ಜಾಗತಿಕ ಇಮೇಜ್ ಮತ್ತು ಪ್ರಗತಿಯನ್ನು ಹೆಚ್ಚಿಸಲು ಸಾಮೂಹಿಕ ಪ್ರಯತ್ನಗಳಿಗೆ ಕರೆ ನೀಡಿದರು.ಮಹಾರಾಷ್ಟ್ರದ ಮುಂಬೈನಲ್ಲಿ ʻಭಾರತೀಯ ಪತ್ರಿಕಾ ಸಂಘʼದ ಗೋಪುರ (ಐಎನ್ಎಸ್ ) ಟವರ್ಸ್ ಉದ್ಘಾಟಿಸಿದ ಪ್ರಧಾನಮಂತ್ರಿಗಳು
July 13th, 07:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ನ ಜಿ-ಬ್ಲಾಕ್ನಲ್ಲಿರುವ ʻಭಾರತೀಯ ಪತ್ರಿಕಾ ಸಂಘʼದ (ಇಂಡಿಯನ್ ನ್ಯೂಸ್ ಪೇಪರ್ ಸೊಸೈಟಿ- ಐಎನ್ಎಸ್) ಕಾರ್ಯಾಲಯಕ್ಕೆ ಭೇಟಿದರು ಮತ್ತು ಈ ವೇಳೆ ʻಐಎನ್ಎಸ್ ಟವರ್ಸ್ʼ ಉದ್ಘಾಟನೆ ಮಾಡಿದರು. ಮುಂಬೈನಲ್ಲಿ ಅತ್ಯಾಧುನಿಕ ಮತ್ತು ಪರಿಣಾಮಕಾರಿ ಕಚೇರಿ ಸ್ಥಳಕ್ಕಾಗಿ ʻಐಎನ್ಎಸ್ʼ ಸದಸ್ಯರ ಅಗತ್ಯಗಳು ಹೆಚ್ಚಾಗುತ್ತಿದ್ದು, ಹೊಸ ಕಟ್ಟಡವು ಇದನ್ನು ಪೂರೈಸುತ್ತದೆ. ಜೊತೆಗೆ, ಮುಂಬೈನ ಪತ್ರಿಕಾ ಉದ್ಯಮಕ್ಕೆ ಕೇಂದ್ರಬಿಂದುವಾಗಿ ಕಾರ್ಯನಿರ್ವಹಿಸುತ್ತದೆ.ಪ್ರಧಾನಮಂತ್ರಿಯವರು ಜುಲೈ 13 ರಂದು ಮುಂಬೈಗೆ ಭೇಟಿ ನೀಡಲಿದ್ದಾರೆ
July 12th, 05:23 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಅವರು ಜುಲೈ 13, 2024 ರಂದು, ಮಹಾರಾಷ್ಟ್ರದ ಮುಂಬೈಗೆ ಭೇಟಿ ನೀಡಲಿದ್ದಾರೆ. ಅದೇ ದಿನ ಸಂಜೆ 5:30 ರ ಸುಮಾರಿಗೆ ಪ್ರಧಾನಮಂತ್ರಿಯವರು ಮುಂಬೈನ ಗೋರೆಗಾಂವ್ ನಲ್ಲಿ ನೆಸ್ಕೋ ಪ್ರದರ್ಶನ ಕೇಂದ್ರವನ್ನು ತಲುಪಲಿದ್ದಾರೆ, ಅಲ್ಲಿ ಅವರು ಅದನ್ನು ಉದ್ಘಾಟಿಸಿ, ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ ಮತ್ತು ರೂ.29,400 ಕೋಟಿಗೂ ಹೆಚ್ಚು ಮೌಲ್ಯದ ರಸ್ತೆ, ರೈಲ್ವೆ ಮತ್ತು ಬಂದರು ವಲಯಕ್ಕೆ ಸಂಬಂಧಿಸಿದ ನೂತನ ಬಹು ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ. ಅದರ ನಂತರ, ಸುಮಾರು ಸಂಜೆ 7 ಗಂಟೆ ಸುಮಾರಿಗೆ, ಐ.ಎನ್.ಎಸ್ ಟವರ್ ಗಳನ್ನು ಉದ್ಘಾಟಿಸಲು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನ ಜಿ-ಬ್ಲಾಕ್ ನಲ್ಲಿರುವ ಇಂಡಿಯನ್ ನ್ಯೂಸ್ ಪೇಪರ್ ಸೊಸೈಟಿ (ಐ.ಎನ್.ಎಸ್) ಸೆಕ್ರೆಟರಿಯೇಟ್ ಗೆ ಪ್ರಧಾನಮಂತ್ರಿಯವರು ಭೇಟಿ ನೀಡಲಿದ್ದಾರೆ.