ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
June 26th, 12:50 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾನ್ ವ್ಯಕ್ತಿ ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ಅವರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿ, ಅವರನ್ನು ಸ್ಮರಿಸಿದರು. ಅವರ ಬರಹಗಳು ಭಾರತೀಯರ ತಲೆಮಾರುಗಳಲ್ಲಿ ದೇಶಭಕ್ತಿ ಮತ್ತು ಸಾಂಸ್ಕೃತಿಕ ಹೆಮ್ಮೆಯ ಸೂಧಿರ್ತಿಯನ್ನು ಹುಟ್ಟುಹಾಕಿದ ಅತ್ಯುನ್ನತ ಸಾಹಿತ್ಯಕ ದಿಗ್ಗಜರಾಗಿದ್ದರು.ಹಜರತ್ ಇಮಾಮ್ ಹುಸೇನ್ ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
June 26th, 12:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹಜರತ್ ಇಮಾಮ್ ಹುಸೇನ್ (ಎ.ಎಸ್.) ಅವರಿಗೆ ಗೌರವ ನಮನ ಸಲ್ಲಿಸಿ, ಸತ್ಯ ಮತ್ತು ನ್ಯಾಯಕ್ಕಾಗಿ ಅವರ ಕಾಲಾತೀತ ತ್ಯಾಗ ಮತ್ತು ಅಚಲ ಬದ್ಧತೆಯನ್ನು ಸ್ಮರಿಸಿದರು. ಇಮಾಮ್ ಹುಸೇನ್ ಅವರ ಜೀವನ ಮತ್ತು ಹುತಾತ್ಮತೆಯು ಧೈರ್ಯ ಮತ್ತು ದೃಢನಿಶ್ಚಯದ ಶಕ್ತಿಯ ಶಾಶ್ವತ ಜ್ಞಾಪನೆಯಾಗಿದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದರು.ದೇಶದ ಏಳಿಗೆಗೆ ಸಾಮೂಹಿಕ ಉತ್ಸಾಹ ಮತ್ತು ಕ್ರಿಯೆಗಳು ಕಾರಣ ಎಂಬುದನ್ನು ಒತ್ತಿಹೇಳುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
June 24th, 03:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಮೂಹಿಕ ಸಮರ್ಪಣೆ ಮತ್ತು ಪ್ರಯತ್ನದಿಂದ ರಾಷ್ಟ್ರದ ಸಮೃದ್ಧಿಯು ಅಚಲವಾಗಿ ಉಳಿಯುತ್ತದೆ ಎಂಬುದನ್ನು ಸಾರುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ. ಇದೇ ಮನೋಭಾವವು ಸಮಾಜಕ್ಕೆ ಹೊಸ ಚೈತನ್ಯವನ್ನು ತುಂಬಿ, ಅಭಿವೃದ್ಧಿಯ ಸಂಕಲ್ಪಗಳನ್ನು ಸಾಕಾರಗೊಳಿಸುವ ಮಾರ್ಗವನ್ನು ಸುಗಮಗೊಳಿಸುತ್ತದೆ ಎಂದು ಹೇಳಿದ್ದಾರೆ.ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ “ಬಲಿದಾನ ದಿವಸ”ದ ಅಂಗವಾಗಿ ಅವರಿಗೆ ಪ್ರಧಾನಮಂತ್ರಿಯವರು ಗೌರವ ನಮನ ಸಲ್ಲಿಸಿದರು, ಹಾಗೂ, ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡರು
June 23rd, 03:39 pm
ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ “ಬಲಿದಾನ ದಿವಸ”ದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರಿಗೆ ಗೌರವ ನಮನ ಸಲ್ಲಿಸಿದರು ಮತ್ತು ರಾಷ್ಟ್ರ ನಿರ್ಮಾಣಕ್ಕೆ ಅವರ ಅಪಾರ ಕೊಡುಗೆಯನ್ನು ಸ್ಮರಿಸಿಕೊಂಡರು.ಒಡಿಶಾ ಸರ್ಕಾರ 2 ವರ್ಷ ಪೂರೈಸಿದ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
June 20th, 01:10 pm
ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಜಿ, ರಾಜ್ಯಪಾಲ ಶ್ರೀ ಹರಿಬಾಬು ಜಿ, ಇಲ್ಲಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಮೋಹನ್ ಚರಣ್ ಮಾಝಿ ಜಿ, ಉಪಮುಖ್ಯಮಂತ್ರಿ ಶ್ರೀ ಕನಕ ವರ್ಧನ್ ಸಿಂಗ್ ದೇವ್ ಜಿ, ಶ್ರೀಮತಿ. ಪರವತಿ ಪರಿದಾ ಜಿ, ಒಡಿಶಾ ಸಚಿವರಾದ ಶ್ರೀ ಗಣೇಶ್ ಸಿಂಗ್ ಖುಂಟಿಯಾ ಜಿ, ಶ್ರೀಕೃಷ್ಣ ಚಂದ್ರ ಮಹಾಪಾತ್ರ ಜಿ, ಸಂಸತ್ ಸದಸ್ಯರಾದ ಶ್ರೀ ನಬಾ ಚರಣ್ ಮಾಝಿ ಜಿ, ಶ್ರೀ ಮನಮೋಹನ್ ಸಮಲ್ ಜಿ, ಶ್ರೀ ಬೈಜಯಂತ್ ಪಾಂಡಾ ಜಿ, ಇತರೆ ಗಣ್ಯರೆ, ಸಹೋದರ ಮತ್ತು ಸಹೋದರಿಯರೆ,ಮಯೂರ್ಭಂಜ್ ಜಿಲ್ಲೆಯ ರಾಯ್ರಂಗ್ಪುರದಲ್ಲಿ ಒಡಿಶಾ ಸರ್ಕಾರದ ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಂಡ ನೆನಪಿಗಾಗಿ, ₹47,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಹಾಗೂ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ
June 20th, 01:00 pm
ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಮತ್ತು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಯೂರ್ಭಂಜ್ ಜಿಲ್ಲೆಯ ಪಹದ್ಪುರ್ ಗ್ರಾಮಕ್ಕೆ ಭೇಟಿ ನೀಡಿದರು. ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ ಅವರು ಪವಿತ್ರ ತೋಪುಗಳಾದ ಸಂತಾಲಿ ಜಾಹೇರಾ ಮತ್ತು ಹೋ ಜಾಹೇರಾ, ಕೌಶಲ್ಯ ಕೇಂದ್ರ ಹಾಗೂ ಪಹಾಡ್ಪುರ ಶಾಲೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಒಡಿಶಾ ಸರ್ಕಾರವು ಎರಡು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಮಯೂರ್ಭಂಜ್ ಜಿಲ್ಲೆಯ ರಾಯ್ರಂಗ್ಪುರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿ ಅವರು ಭಾಗವಹಿಸಿದ್ದರು. ಈ ಕಾರ್ಯಕ್ರಮದ ಥೀಮ್ ವಿಕಾಸ್ ರ ಧಾರಾ, ಒಡಿಶಾ ಸಾರಾ ಎಂಬುದಾಗಿತ್ತು. ಶ್ರೀ ಮೋದಿ ಅವರು ₹47,600 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಉದ್ಘಾಟಿಸಿದರು.ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಮಂತ್ರಿ
June 20th, 08:32 am
ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹುಟ್ಟುಹಬ್ಬದ ಆತ್ಮೀಯ ಶುಭಾಶಯಗಳನ್ನು ಕೋರಿದ್ದಾರೆ.ಪಶ್ಚಿಮ ಬಂಗಾಳ ದಿನಕ್ಕೆ ಶುಭಾಶಯ ಕೋರಿದ ಪ್ರಧಾನಮಂತ್ರಿ, ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ ಕೊಡುಗೆಯ ಸ್ಮರಣೆ
June 20th, 08:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳ ದಿನದ ಅಂಗವಾಗಿ ಪಶ್ಚಿಮ ಬಂಗಾಳದ ಜನರಿಗೆ ಆತ್ಮೀಯ ಶುಭಾಶಯಗಳನ್ನು ತಿಳಿಸಿದ್ದಾರೆ.'ಸತ್ಯ, ಸೇವೆ, ಅಧ್ಯಯನ ಮತ್ತು ಕಾರ್ಯದ ಸತ್ಪ್ರವೃತ್ತಿ' ಗುಣಗಳನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
June 18th, 09:23 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸತ್ಯದ ಹಿಂದೆ ಸಂಪತ್ತು ಬರುತ್ತದೆ, ನಿಸ್ವಾರ್ಥ ಸೇವೆಯ ಹಿಂದೆ ಕೀರ್ತಿ ಬರುತ್ತದೆ, ನಿರಂತರ ಅಭ್ಯಾಸದ ಹಿಂದೆ ಜ್ಞಾನ ಬರುತ್ತದೆ ಮತ್ತು ಕಾರ್ಯದ ಹಿಂದೆ ವಿವೇಕ ಬರುತ್ತದೆ ಎಂದು ಹೇಳಿದ್ದಾರೆ. ಈ ಮೌಲ್ಯಗಳು ವ್ಯಕ್ತಿಯ ಸ್ವಭಾವ ರೂಪಿಸುವಲ್ಲಿ ಹಾಗೂ ಸಮೂಹದ ಪ್ರಗತಿಗೆ ಕೊಡುಗೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದ್ದಾರೆ.ಗೌರವ ಮತ್ತು ಮೆಚ್ಚುಗೆಯ ಮೌಲ್ಯವನ್ನು ಬಿಂಬಿಸುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡ ಪ್ರಧಾನಮಂತ್ರಿ
June 17th, 09:05 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪ್ರೀತಿಯ ಗೌರವ ಮತ್ತು ಸ್ವೀಕಾರ ವ್ಯಕ್ತಿಗೆ ಮೌಲ್ಯಯುತ, ಹೆಮ್ಮೆ ಮತ್ತು ತೃಪ್ತಿಯ ಭಾವನೆ ಮೂಡಿಸುತ್ತದೆ ಎಂದು ಹೇಳಿದ್ದಾರೆ. ಅಂತಹ ಮಾನ್ಯತೆಯು ಆತ್ಮವಿಶ್ವಾಸವನ್ನು ಹೆಚ್ಚಿಸುವುದಲ್ಲದೆ, ವ್ಯಕ್ತಿಯಲ್ಲಿ ಹೊಸ ಶಕ್ತಿ ಮತ್ತು ಉತ್ಸಾಹವನ್ನು ತುಂಬುತ್ತದೆ ಎಂದು ಅವರು ಹೇಳಿದರು.ವಿವೇಚನೆ ಮತ್ತು ಚಿಂತನಾಶೀಲ ನಿರ್ಧಾರ ಕೈಗೊಳ್ಳುವಿಕೆಯ ಮಹತ್ವವನ್ನು ಎತ್ತಿಹಿಡಿಯುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿರುವ ಪ್ರಧಾನಮಂತ್ರಿ
June 16th, 08:53 am
ತಾಳ್ಮೆ, ಬುದ್ಧಿವಂತಿಕೆ ಮತ್ತು ದೂರದೃಷ್ಟಿಯಿಂದ ಮಾರ್ಗದರ್ಶನ ಮಾಡುವ ಕ್ರಿಯೆಗಳ ಮೂಲಕ ಸಂತೋಷ ಮತ್ತು ಸಮೃದ್ಧಿಯ ಬಾಗಿಲು ತೆರೆಯುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಸರಿಯಾದ ಚಿಂತನೆ ಮತ್ತು ಪರಿಗಣನೆಯೊಂದಿಗೆ ತೆಗೆದುಕೊಂಡ ಹೆಜ್ಜೆಗಳ ಮೇಲೆ ಯಶಸ್ಸು ನಿರ್ಮಾಣವಾಗುವುದರಿಂದ ಪ್ರತಿಯೊಂದು ನಿರ್ಧಾರಕ್ಕೂ ಎಚ್ಚರಿಕೆಯ ತಿಳುವಳಿಕೆ ಅಗತ್ಯವಿರುತ್ತದೆ ಎಂದು ಅವರು ವಿವರಿಸಿದರು.ಫ್ರಾನ್ಸ್ನಲ್ಲಿ ನಡೆದ ಭಾರತ್ ಇನ್ನೋವೇಟ್ಸ್ 2026 ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ
June 14th, 04:36 pm
ಈ ಸಂದರ್ಭದಲ್ಲಿ ಇಲ್ಲಿ ಉಪಸ್ಥಿತರಿದ್ದದ್ದಕ್ಕಾಗಿ ನನ್ನ ಸ್ನೇಹಿತ ಅಧ್ಯಕ್ಷ ಮ್ಯಾಕ್ರನ್ ಅವರಿಗೆ ನಾನು ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಧ್ಯಕ್ಷ ಮ್ಯಾಕ್ರನ್, ಈ ಶತಮಾನದ ಸವಾಲುಗಳನ್ನು ಎದುರಿಸಲು ಭಾರತ ಮತ್ತು ಫ್ರಾನ್ಸ್ ಒಟ್ಟಾಗಿ ಬರಬೇಕು ಎಂದು ನೀವು ಹೇಳಿದ್ದೀರಿ. ಇಂದು, ಈ ಉಪಕ್ರಮವು ಆ ದಿಕ್ಕಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ.2026ರ ಭಾರತ್ ಇನ್ನೋವೇಟ್ಸ್ ನಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ
June 14th, 03:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷರಾದ ಗೌರವಾನ್ವಿತ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ನೈಸ್ನ ಪಲೈಸ್ ಡೆಸ್ ಎಕ್ಸ್ಪೊಸಿಷನ್ಸ್ನಲ್ಲಿ ಭಾರತ್ ಇನ್ನೋವೇಟ್ಸ್ 2026 ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಮೂರು ದಿನಗಳ ಕಾರ್ಯಕ್ರಮವಾದ ಭಾರತ್ ಇನ್ನೋವೇಟ್ಸ್, ಜಾಗತಿಕ ನಾವೀನ್ಯತೆ ನಿಧಿಗಳು ಮತ್ತು ಹೆಜ್ಜೆಗುರುತನ್ನು ಹೊಂದಿರುವ ಭಾರತೀಯ ಡೀಪ್-ಟೆಕ್ ನವೋದ್ಯಮಗಳು (ಸ್ಟಾರ್ಟ್-ಅಪ್ಗಳು), ನಾವೀನ್ಯಕಾರರು, ಸಂಶೋಧಕರು ಮತ್ತು ಹೂಡಿಕೆದಾರರನ್ನು ಒಟ್ಟುಗೂಡಿಸುತ್ತದೆ. ಇದು ಜಾಗತಿಕ ಹಂತದಲ್ಲಿ ಭಾರತದ ಪ್ರಮುಖ ಡೀಪ್ ಟೆಕ್ ತಂತ್ರಜ್ಞಾನವನ್ನು ಪ್ರದರ್ಶಿಸುತ್ತದೆ, ಜಾಗತಿಕ ಪ್ರಾಮುಖ್ಯತೆಯ 13 ನಿರ್ಣಾಯಕ ತಂತ್ರಜ್ಞಾನ ಸ್ತಂಭಗಳಲ್ಲಿ 120 ಪಥ-ಭಂಜಕ (ಹೊಸ ಹಾದಿ ತೋರುವ) ಸ್ಟಾರ್ಟ್-ಅಪ್ಗಳು ಮತ್ತು 20ಕ್ಕೂ ಹೆಚ್ಚು ಶ್ರೇಷ್ಠತಾ ಸಂಸ್ಥೆಗಳನ್ನು ಪ್ರಸ್ತುತಪಡಿಸುತ್ತದೆ. ಪ್ರಪಂಚದಾದ್ಯಂತದ 350ಕ್ಕೂ ಹೆಚ್ಚು ಉನ್ನತ ಹೂಡಿಕೆದಾರರು ಮತ್ತು ಸಾಹಸೋದ್ಯಮ (ವೆಂಚರ್) ಬಂಡವಾಳಗಾರರು ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.Prime Minister expresses gratitude to Vice President Thiru CP Radhakrishnan Ji for his warm wishes
June 10th, 07:25 pm
Prime Minister Shri Narendra Modi today expressed gratitude to Vice President Thiru CP Radhakrishnan Ji for his warm wishes. The Prime Minister stated that the trust and blessings of the people of India inspire him to work harder in service of the nation.Prime Minister expresses gratitude to Rashtrapati Ji for her warm wishes and kind words
June 10th, 07:18 pm
Prime Minister Shri Narendra Modi today expressed gratitude to Rashtrapati Ji for her warm wishes and kind words. The Prime Minister stated that whatever has been achieved over the years is the result of the collective efforts and aspirations of the people of India.ಜಗದೊಡೆಯ ಭಗವಾನ್ ಬಿರ್ಸಾ ಮುಂಡಾ ಅವರ ಹುತಾತ್ಮ ದಿನದಂದು ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
June 09th, 01:29 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಜಗದೊಡೆಯ ಭಗವಾನ್ ಬಿರ್ಸಾ ಮುಂಡಾ ಅವರ ಹುತಾತ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ನೀರು, ಅರಣ್ಯ ಮತ್ತು ಭೂಮಿಯ ರಕ್ಷಣೆಗಾಗಿ ವಿದೇಶಿ ಆಡಳಿತದ ವಿರುದ್ಧ ಅವರು ಅದಮ್ಯ ಧೈರ್ಯದಿಂದ ಹೋರಾಡಿದ ಬಗ್ಗೆ ಪ್ರಧಾನಿಯವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.ನಂಬಿಕೆ, ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಮೀಸಲಾದ 12 ವರ್ಷಗಳ ಸರ್ಕಾರದ ಸಾಧನೆಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ
June 09th, 10:30 am
ಕಳೆದ 12 ವರ್ಷಗಳ ಸರ್ಕಾರವು ನಂಬಿಕೆ, ಅಭಿವೃದ್ಧಿ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಸಮರ್ಪಿತವಾಗಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಹೇಳಿದ್ದಾರೆ. 140 ಕೋಟಿ ದೇಶವಾಸಿಗಳ ಆಶೀರ್ವಾದ ಮತ್ತು 'ರಾಷ್ಟ್ರ ಮೊದಲು' ಎಂಬ ಮನೋಭಾವದಿಂದ, ಯುವಕರು, ಮಹಿಳೆಯರು ಮತ್ತು ರೈತ ಸಹೋದರ ಸಹೋದರಿಯರನ್ನು ಸಬಲೀಕರಣಗೊಳಿಸುವಲ್ಲಿ ಯಾವುದೇ ಅವಕಾಶವನ್ನು ಬಿಟ್ಟುಕೊಟ್ಟಿಲ್ಲ ಎಂದು ಪ್ರಧಾನಿಯವರು ಹೇಳಿದರು.ವರ್ಷದ ಯುಎನ್ ಮಿಲಿಟರಿ ಜೆಂಡರ್ ಅಡ್ವೊಕೇಟ್ ಪ್ರಶಸ್ತಿಗೆ ಭಾಜನರಾಗಿರುವ ಅಭಿಲಾಷಾ ಬರಾಕ್ ಅವರಿಗೆ ಪ್ರಧಾನಮಂತ್ರಿ ಅಭಿನಂದನೆ
June 07th, 02:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ‘ಯುಎನ್ ಮಿಲಿಟರಿ ಜೆಂಡರ್ ಅಡ್ವೊಕೇಟ್ ಆಫ್ ದ ಇಯರ್’ ಪ್ರಶಸ್ತಿಗೆ ಭಾಜನರಾಗಿರುವ ಮೇಜರ್ ಅಭಿಲಾಷಾ ಬರಾಕ್ ಅವರನ್ನು ಇಂದು ಅಭಿನಂದಿಸಿದ್ದಾರೆ. ಮೇಜರ್ ಬರಾಕ್ ಅವರು ಲೆಬನಾನ್ ನ ವಿಶ್ವಸಂಸ್ಥೆ ಮಧ್ಯಂತರ ಪಡೆ (ಯು ಎನ್ ಐ ಎಫ್ ಐ ಎಲ್) ನಲ್ಲಿ ಎಂಗೇಜ್ ಮೆಂಟ್ ಟೀಮ್ ಕಮಾಂಡರ್ ಮತ್ತು ಜೆಂಡರ್ ಫೋಕಲ್ ಪಾಯಿಂಟ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಗಮನಿಸಿದರು.ಬೇಸಿಗೆಯ ಬಿಸಿಲನ್ನು ನಿವಾರಿಸಲು ಪ್ರಧಾನಿ ಮೋದಿ ಸಲಹೆಗಳನ್ನು ಹಂಚಿಕೊಳ್ಳುತ್ತಾರೆ, ಮನ್ ಕಿ ಬಾತ್ನಲ್ಲಿ ನಾಗರಿಕರಿಗೆ ನೀರಿನಂಶ ಕಾಪಾಡಿಕೊಳ್ಳಲು ಸಲಹೆ ನೀಡುತ್ತಾರೆ
May 31st, 11:30 am
ನನ್ನ ಪ್ರಿಯ ದೇಶ ಬಾಂಧವರೆ, ನಮಸ್ಕಾರ. ‘ಮನದ ಮಾತಿನ’ ಮೂಲಕ ಮತ್ತೊಮ್ಮೆ ನಿಮ್ಮನ್ನು ಸಂಪರ್ಕಿಸುತ್ತಿರುವುದು ನನಗೆ ಬಹಳ ಸಂತೋಷವೆನಿಸಿದೆ. ದೇಶದ ವಿವಿಧ ಭಾಗಗಳಲ್ಲಿ, ನಮ್ಮ ಜನರು ರಾಷ್ಟ್ರ ಮತ್ತು ಸಮಾಜದ ಹಿತದೃಷ್ಟಿಯಿಂದ ಸಾಕಷ್ಟು ಗಮನಾರ್ಹ ಕೆಲಸಗಳನ್ನು ಮಾಡುತ್ತಿದ್ದಾರೆ ಮತ್ತು ಅವರ ಪ್ರಯತ್ನಗಳ ಬಗ್ಗೆ ಕೇಳಿದಾಗ, ನಮ್ಮಲ್ಲಿ ಹೊಸ ಸ್ಫೂರ್ತಿಯ ಸೆಲೆ ಹುಟ್ಟುತ್ತದೆ. ಇಂದು, ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಅಂತಹ ಒಂದು ರಾಷ್ಟ್ರೀಯ ಸಾಧನೆಯ ಕುರಿತು ಪ್ರಸ್ತಾಪಿಸುವ ಮೂಲಕ ನಾನು ಈ ಕಾರ್ಯಕ್ರಮವನ್ನು ಪ್ರಾರಂಭಿಸಲು ಬಯಸುತ್ತೇನೆ. ಕೆಲವೇ ದಿನಗಳ ಹಿಂದೆ, ಜಾರ್ಖಂಡ್ನ ರಾಂಚಿಯಲ್ಲಿ ರಾಷ್ಟ್ರೀಯ ಹಿರಿಯ ಅಥ್ಲೆಟಿಕ್ಸ್ ಫೆಡರೇಶನ್ ಸ್ಪರ್ಧೆ ನಡೆಯಿತು. ಈ ಸ್ಪರ್ಧೆಯಲ್ಲಿ ಸುಮಾರು 800 ಕ್ರೀಡಾಪಟುಗಳು ಭಾಗವಹಿಸಿದ್ದರು. ದೇಶದ ಮೂಲೆ ಮೂಲೆಗಳಿಂದ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ, ನಾಲ್ಕು ವಿಭಿನ್ನ ಸ್ಪರ್ಧೆಗಳಲ್ಲಿ ನಾಲ್ಕು ರಾಷ್ಟ್ರೀಯ ದಾಖಲೆಗಳನ್ನು ಮುರಿಯಲಾಯಿತು. ಗುರಿಂದರ್ವೀರ್ ಸಿಂಗ್, ವಿಶಾಲ್ ಟಿ.ಕೆ., ತೇಜಸ್ವಿನ್ ಶಂಕರ್, ದೇವ್ ಮೀನಾ ಮತ್ತು ಕುಲದೀಪ್ ಕುಮಾರ್ - ಈ ಕ್ರೀಡಾಪಟುಗಳು ತಮ್ಮ ತಮ್ಮ ವಿಭಾಗಗಳಲ್ಲಿ ಹೊಸ ದಾಖಲೆಗಳನ್ನು ಸ್ಥಾಪಿಸಿದರು. ಮೊದಲನೆಯದಾಗಿ, ಅವರೆಲ್ಲರಿಗೂ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಎನ್.ಟಿ.ಆರ್ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
May 28th, 09:56 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎನ್.ಟಿ.ಆರ್. ಗಾರು ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು.