Prime Minister holds bilateral talks with the Prime Minister of Ethiopia
December 17th, 12:02 am
During his visit to Ethiopia, PM Modi held discussions with Ethiopian PM Dr. Abiy Ahmed Ali in Addis Ababa. Both leaders reviewed the entire spectrum of the bilateral relationship and agreed to elevate the ties to the level of a Strategic Partnership. PM Modi thanked Ethiopia for its solidarity in the wake of the Pahalgam terror attack. Following the talks, the two leaders witnessed the exchange of MoUs.ಜೋಹಾನ್ಸ್ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷರನ್ನು ಪ್ರಧಾನಮಂತ್ರಿ ಅವರು ಭೇಟಿ ಮಾಡಿದರು
November 23rd, 02:18 pm
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋಹಾನ್ಸ್ಬರ್ಗ್ ನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ಗಣರಾಜ್ಯದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಸಿರಿಲ್ ರಾಮಫೋಸಾ ಅವರನ್ನು ಇಂದು ಭೇಟಿ ಮಾಡಿದರು. ಶೃಂಗಸಭೆಯ ಆತ್ಮೀಯ ಆತಿಥ್ಯ ಮತ್ತು ಯಶಸ್ವಿ ನಡವಳಿಕೆಗಳಿಗಾಗಿ ಅಧ್ಯಕ್ಷ ಶ್ರೀ ರಾಮಫೋಸಾ ಅವರಿಗೆ ಪ್ರಧಾನಮಂತ್ರಿ ಅವರು ಧನ್ಯವಾದ ಅರ್ಪಿಸಿದರು. ನವದೆಹಲಿಯಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ಮುಂದಕ್ಕೆ ತೆಗೆದುಕೊಂಡು ಹೋಗಲು ಮತ್ತು ನೂತನ ಹಂತ ನಿರ್ಮಿಸಲು ದಕ್ಷಿಣ ಆಫ್ರಿಕಾದ ಜಿ20 ಮಾಡಿರುವ ಪ್ರಯತ್ನಗಳನ್ನು ಪ್ರಧಾನಮಂತ್ರಿ ಅವರು ಶ್ಲಾಘಿಸಿದರು.ನಮೀಬಿಯಾದ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
July 09th, 08:14 pm
ಪ್ರಜಾಪ್ರಭುತ್ವದ ತಾಯಿ ಎನಿಸಿದ ದೇಶದ ಪ್ರತಿನಿಧಿಯಾಗಿ ನಾನು ನಿಮ್ಮ ಮುಂದೆ ನಿಂತಿದ್ದೇನೆ. ನಾನು ನನ್ನೊಂದಿಗೆ 140 ಕೋಟಿ ಭಾರತೀಯರ ಆತ್ಮೀಯ ಶುಭಾಶಯಗಳನ್ನು ತಂದಿದ್ದೇನೆ.Prime Minister addresses the Namibian Parliament
July 09th, 08:00 pm
PM Modi addressed the Parliament of Namibia and expressed gratitude to the people of Namibia for conferring upon him their highest national honour. Recalling the historic ties and shared struggle for freedom between the two nations, he paid tribute to Dr. Sam Nujoma, the founding father of Namibia. He also called for enhanced people-to-people exchanges between the two countries.17ನೇ ಬ್ರಿಕ್ಸ್ ಶೃಂಗಸಭೆ - ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯ ಕುರಿತ ಅಧಿವೇಶನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
July 07th, 11:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯ ಕುರಿತಾದ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ಅಧಿವೇಶನದಲ್ಲಿ ಬ್ರಿಕ್ಸ್ ಸದಸ್ಯರು, ಪಾಲುದಾರ ರಾಷ್ಟ್ರಗಳು ಮತ್ತು ಆಹ್ವಾನಿತ ರಾಷ್ಟ್ರಗಳು ಭಾಗವಹಿಸಿದ್ದವು. ವಿಶ್ವದ ಭವಿಷ್ಯಕ್ಕಾಗಿ ಇಂತಹ ಮಹತ್ವದ ವಿಷಯ ಕುರಿತು ಅಧಿವೇಶನವನ್ನು ಆಯೋಜಿಸಿದ್ದಕ್ಕಾಗಿ ಅವರು ಬ್ರೆಜಿಲ್ ಗೆ ಧನ್ಯವಾದ ಸಲ್ಲಿಸಿದರು. ಭಾರತಕ್ಕೆ ಹವಾಮಾನ ಬದಲಾವಣೆಯು ಕೇವಲ ಇಂಧನ ಸಮಸ್ಯೆಗಳನ್ನು ನಿಭಾಯಿಸುವುದಲ್ಲ, ಬದಲಾಗಿ ಅದು ಜೀವನ ಮತ್ತು ನಿಸರ್ಗದ ನಡುವಿನ ಸಮತೋಲನದ ಮೇಲೆ ಪರಿಣಾಮ ಬೀರುವುದಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಭಾರತವು ಹವಾಮಾನ ನ್ಯಾಯವನ್ನು ಈಡೇರಿಸಬೇಕಾದ ನೈತಿಕ ಜವಾಬ್ದಾರಿಯಾಗಿ ನೋಡುತ್ತದೆ ಎಂದು ಅವರು ಒತ್ತಿ ಹೇಳಿದರು. ಪರಿಸರ ಕ್ರಮಕ್ಕೆ ಭಾರತದ ಆಳವಾದ ಬದ್ಧತೆಯನ್ನು ಪುನರುಚ್ಚರಿಸಿದ ಅವರು, ಜನರು ಮತ್ತು ಗ್ರಹದ ಅಭಿವೃದ್ಧಿಯನ್ನು ಉತ್ತೇಜಿಸಲು ಅದು ಕೈಗೊಂಡ ಉಪಕ್ರಮಗಳಾದ ಅಂತಾರಾಷ್ಟ್ರೀಯ ಸೌರ ಒಕ್ಕೂಟ, ವಿಪತ್ತು ಸ್ಥಿತಿಸ್ಥಾಪಕ ಮೂಲಸೌಕರ್ಯಕ್ಕಾಗಿ ಒಕ್ಕೂಟ, ಜಾಗತಿಕ ಜೈವಿಕ ಇಂಧನ ಒಕ್ಕೂಟ, ಅಂತರರಾಷ್ಟ್ರೀಯ ಬಿಗ್ ಕ್ಯಾಟ್ ಒಕ್ಕೂಟ, ಮಿಷನ್ ಲೈಫ್, ತಾಯಿಯ ಹೆಸರಿನಲ್ಲಿ ಒಂದು ಗಿಡ ಇತ್ಯಾದಿಗಳ ಬಗ್ಗೆ ವಿವರಿಸಿದರು.ಪರಿಸರ, ಸಿಒಪಿ-30 ಮತ್ತು ಜಾಗತಿಕ ಆರೋಗ್ಯದ ಕುರಿತಾದ ಬ್ರಿಕ್ಸ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
July 07th, 11:13 pm
ಬ್ರೆಜಿಲ್ ಅಧ್ಯಕ್ಷತೆಯಲ್ಲಿ ಬ್ರಿಕ್ಸ್, ಪರಿಸರ ಮತ್ತು ಆರೋಗ್ಯ ಸುರಕ್ಷತೆಯಂತಹ ಪ್ರಮುಖ ವಿಷಯಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದು ನನಗೆ ಸಂತೋಷ ತಂದಿದೆ. ಈ ವಿಷಯಗಳು ಪರಸ್ಪರ ಸಂಬಂಧ ಹೊಂದಿರುವುದು ಮಾತ್ರವಲ್ಲ ಮಾನವೀಯತೆಯ ಉಜ್ವಲ ಭವಿಷ್ಯಕ್ಕೂ ಸಹ ಬಹಳ ಮುಖ್ಯವಾಗಿವೆ.ಘಾನಾ ಗಣರಾಜ್ಯದ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ
July 03rd, 03:45 pm
ಪ್ರಜಾಪ್ರಭುತ್ವ, ಘನತೆ ಮತ್ತು ದೃಢತೆಯ ಚೈತನ್ಯವನ್ನು ಹೊರಸೂಸುವ ಘಾನಾದಲ್ಲಿ ಇರುವುದು ಒಂದು ಸೌಭಾಗ್ಯ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಿ, ನಾನು 140 ಕೋಟಿ ಭಾರತೀಯರ ಸದ್ಭಾವನೆ ಮತ್ತು ಶುಭಾಶಯಗಳನ್ನು ನನ್ನೊಂದಿಗೆ ತಂದಿದ್ದೇನೆ.ಘಾನಾ ಸಂಸತ್ತನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
July 03rd, 03:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘಾನಾ ಸಂಸತ್ತಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ, ಈ ಸಾಧನೆ ಮಾಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಸಂಸತ್ತಿನ ಸ್ಪೀಕರ್ ಗೌರವಾನ್ವಿತ ಆಲ್ಬನ್ ಕಿಂಗ್ಸ್ಫೋರ್ಡ್ ಸುಮನಾ ಬಾಗ್ಬಿನ್ ಅವರು ಕರೆದಿದ್ದ ಈ ಅಧಿವೇಶನದಲ್ಲಿ ಸಂಸತ್ ಸದಸ್ಯರು, ಸರ್ಕಾರಿ ಅಧಿಕಾರಿಗಳು ಮತ್ತು ಎರಡೂ ರಾಷ್ಟ್ರಗಳ ಗಣ್ಯ ಅತಿಥಿಗಳು ಭಾಗವಹಿಸಿದ್ದರು. ಈ ಭಾಷಣವು ಭಾರತ-ಘಾನಾ ಸಂಬಂಧಗಳಲ್ಲಿ ಮಹತ್ವದ ಕ್ಷಣವನ್ನು ದಾಖಲಿಸಿತು, ಇದು ಎರಡೂ ದೇಶಗಳನ್ನು ಒಂದುಗೂಡಿಸುವ ಪರಸ್ಪರ ಗೌರವ ಮತ್ತು ಹಂಚಿಕೆಯ ಪ್ರಜಾಪ್ರಭುತ್ವ ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ.ಅಂಗೋಲಾ ರಾಷ್ಟ್ರಪತಿ ಅವರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿಯವರು ನೀಡಿದ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ (ಮೇ 03, 2025)
May 03rd, 01:00 pm
ನಾನು ರಾಷ್ಟ್ರಪತಿ ಲೊರೆನ್ಸು ಮತ್ತು ಅವರ ನಿಯೋಗವನ್ನು ಭಾರತಕ್ಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದೊಂದು ಐತಿಹಾಸಿಕ ಕ್ಷಣವಾಗಿದೆ. 38 ವರ್ಷಗಳ ನಂತರ, ಅಂಗೋಲಾ ರಾಷ್ಟ್ರಪತಿ ಅವರು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರ ಇ ಭೇಟಿ ಭಾರತ-ಅಂಗೋಲಾ ಸಂಬಂಧಗಳಿಗೆ ಹೊಸ ದಿಕ್ಕನ್ನು ಮತ್ತು ಆವೇಗವನ್ನು ನೀಡುತ್ತಿದೆ ಅಲ್ಲದೆ, ಭಾರತ-ಆಫ್ರಿಕಾ ಪಾಲುದಾರಿಕೆಗೂ ಶಕ್ತಿ ತುಂಬುತ್ತಿದೆ.ನೈಜೀರಿಯಾ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅಧಿಕೃತ ಮಾತುಕತೆ
November 17th, 06:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 17-18 ನವೆಂಬರ್ 2024 ರಿಂದ ನೈಜೀರಿಯಾಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ. ಅವರು ನೈಜೀರಿಯಾದ ಅಧ್ಯಕ್ಷ ಶ್ರೀ ಬೋಲಾ ಅಹ್ಮದ್ ಟಿನುಬು ಅವರೊಂದಿಗೆ ಅವರೊಂದಿಗೆ ಅಧಿಕೃತ ಮಾತುಕತೆ ನಡೆಸಿದರು. ಇಂದು ಅಬುಜಾದಲ್ಲಿ ರಾಜ್ಯ ಭವನಕ್ಕೆ ಆಗಮಿಸಿದ ಪ್ರಧಾನಿಯವರಿಗೆ 21 ಗನ್ ಸೆಲ್ಯೂಟ್ನೊಂದಿಗೆ ವಿಧ್ಯುಕ್ತ ಸ್ವಾಗತ ನೀಡಲಾಯಿತು.ವಿಶ್ವ ಸಿಂಹ ದಿನದ ಸಂದರ್ಭದಲ್ಲಿ ಶುಭ ಕೋರಿದ ಪ್ರಧಾನಮಂತ್ರಿ
August 10th, 09:03 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ವಿಶ್ವ ಸಿಂಹ ದಿನದ ಶುಭ ಸಂದರ್ಭದಲ್ಲಿ, ಸಿಂಹ ಸಂರಕ್ಷಣೆ ಮತ್ತು ಸಂರಕ್ಷಣಾ ಕಾರ್ಯದಲ್ಲಿ ತೊಡಗಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ. 2024ರ ಫೆಬ್ರವರಿಯಲ್ಲಿ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲೈಯನ್ಸ್ ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆಯನ್ನು ಶ್ರೀ ಮೋದಿಯವರು ಪ್ರಸ್ತಾಪಿಸಿದ್ದು, ದೊಡ್ಡ ಬೆಕ್ಕುಗಳನ್ನು ರಕ್ಷಿಸುವ ಸರ್ಕಾರದ ಬದ್ಧತೆಯನ್ನು ಇದು ಪುನರುಚ್ಚರಿಸುತ್ತದೆ. ಇದಕ್ಕಾಗಿ ವಿಶ್ವದಾದ್ಯಂತ ದೊರೆತ ಪ್ರೋತ್ಸಾಹದಾಯಕ ಪ್ರತಿಕ್ರಿಯೆಯ ಬಗ್ಗೆ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.ಕೇಂದ್ರ ಸಚಿವ ಸಂಪುಟದಿಂದ ಇಂಟರ್ ನ್ಯಾಶನಲ್ ಬಿಗ್ ಕ್ಯಾಟ್ ಅಲೈಯನ್ಸ್ (ಐಬಿಸಿಎ) ಸ್ಥಾಪನೆಗೆ ಅನುಮೋದನೆ
February 29th, 04:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿಯವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು 2023-24 ರಿಂದ 2027-28 ರವರೆಗಿನ ಐದು ವರ್ಷಗಳ ಅವಧಿಗೆ ರೂ.150 ಕೋಟಿಗಳ ಒಂದು ಬಾರಿಯ ಬಜೆಟ್ ಬೆಂಬಲದೊಂದಿಗೆ ಇಂಟರ್ ನ್ಯಾಶನಲ್ ಬಿಗ್ ಕ್ಯಾಟ್ ಅಲೈಯನ್ಸ್ (ಐಬಿಸಿಎ) ಸ್ಥಾಪನೆಗೆ ಅನುಮೋದನೆ ನೀಡಿದೆ. ಇದರ ಪ್ರಧಾನ ಕಛೇರಿ ಭಾರತದಲ್ಲಿರುತ್ತದೆ.There is continuous progress in bilateral trade, investment between India and Kenya: PM Modi
December 05th, 01:33 pm
Addressing the event during the visit of the President of Kenya to India, PM Modi said, Africa has always been given high priority in India's foreign policy. Over the past decade, we have strengthened our collaboration with Africa in mission mode. I am confident that President Ruto's visit will not only enhance our bilateral relations but also provide new impetus to our engagement with the entire African continent.ತಾಂಜಾನಿಯಾ ಅಧ್ಯಕ್ಷರು ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಪತ್ರಿಕಾ ಹೇಳಿಕೆಯ ಅನುವಾದ
October 09th, 12:00 pm
ಮೊದಲನೆಯದಾಗಿ, ನಾನು ಅಧ್ಯಕ್ಷರಿಗೆ ಮತ್ತು ಅವರ ನಿಯೋಗಕ್ಕೆ ಆತ್ಮೀಯ ಸ್ವಾಗತವನ್ನು ಕೋರುತ್ತೇನೆ. ಇದು ತಾಂಜಾನಿಯಾದ ಅಧ್ಯಕ್ಷರಾಗಿ ಭಾರತಕ್ಕೆ ನೀಡಿದ ಮೊದಲ ಭೇಟಿಯಾಗಿದೆ. ಆದರೆ ಅವರು ಭಾರತ ಮತ್ತು ಅದರ ಜನರೊಂದಿಗೆ ದೀರ್ಘಕಾಲ ಸಂಬಂಧ ಹೊಂದಿದ್ದಾರೆ.15 ನೇ ಬ್ರಿಕ್ಸ್ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
August 23rd, 03:30 pm
15ನೇ ಬ್ರಿಕ್ಸ್ ಶೃಂಗಸಭೆಯ ಅದ್ಧೂರಿ ಆಯೋಜನೆ ಮತ್ತು ನಮಗೆ ನೀಡಿದ ಆತ್ಮೀಯ ಆತಿಥ್ಯಕ್ಕಾಗಿ ನಾನು ಮತ್ತೊಮ್ಮೆ ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ರಾಮಾಫೋಸಾ ಅವರನ್ನು ಅಭಿನಂದಿಸುತ್ತೇನೆ ಮತ್ತು ಧನ್ಯವಾದ ಹೇಳುತ್ತೇನೆ.ಹವಾಮಾನ ಬಿಕ್ಕಟ್ಟಿನೊಂದಿಗೆ ಜಗತ್ತು ಹೋರಾಡುತ್ತಿರುವಾಗ ಪರಿಸರಕ್ಕಾಗಿ ಜೀವನ ಶೈಲಿಯನ್ನು ಪ್ರಾರಂಭಿಸಿದ್ದೇವೆ ಮತ್ತು ದಾರಿ ತೋರಿಸಿದ್ದೇವೆ - ಜೀವನ [ಲೈಫ್ ಮಿಷನ್ ಇನಿಷಿಯೇಟೀವ್] ಅಭಿಯಾನ ಉಪಕ್ರಮ
August 15th, 05:08 pm
ನಾವು ಜಿ20 ಶೃಂಗಸಭೆಗಾಗಿ “ಒಂದು ಪ್ರಪಂಚ, ಒಂದು ಕುಟುಂಬ, ಒಂದು ಭವಿಷ್ಯ” ಎಂಬ ಪರಿಕಲ್ಪನೆಯನ್ನು ಮುಂದಿಟ್ಟಿದ್ದೇವೆ ಮತ್ತು ಅ ದಿಕ್ಕಿನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು.ವಿಶ್ವ ಪರಿಸರ ದಿನ 2023ರ ಪ್ರಯುಕ್ತ ಪ್ರಧಾನ ಮಂತ್ರಿಗಳ ವಿಡಿಯೋ ಸಂದೇಶದ ಇಂಗ್ಲಿಷ್ ಭಾಷಣದ ವಿವರ
June 05th, 03:00 pm
ವಿಶ್ವ ಪರಿಸರ ದಿನಾಚರಣೆಯಂದು ನಿಮ್ಮೆಲ್ಲರಿಗೂ, ದೇಶ ಹಾಗೂ ಜಗತ್ತಿನಾದ್ಯಂತ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ. ಏಕ ಬಳಕೆ ಪ್ಲಾಸ್ಟಿಕ್ ಬಳಕೆ ತೊಡೆದು ಹಾಕುವುದು ಈ ವರ್ಷದ ಪರಿಸರ ದಿನದ ಧ್ಯೇಯವಾಗಿದೆ. ಈ ಜಾಗತಿಕ ಉಪಕ್ರಮಕ್ಕೂ ಮೊದಲೇ ಭಾರತದವು ಕಳೆದ 4-5 ವರ್ಷಗಳಿಂದ ಈ ವಿಚಾರದಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಲು ನನಗೆ ಸಂತೋಷವಾಗುತ್ತದೆ. ಹಿಂದೆ ಅಂದರೆ 2018ರ ಆರಂಭದಲ್ಲೇ ಭಾರತವು ಏಕ-ಬಳಕೆಯ ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಎರಡು ಹಂತದ ಪ್ರಯತ್ನ ಆರಂಭಿಸಿತು. ಒಂದೆಡೆ ಏಕ ಬಳಕೆ ಪ್ಲಾಸ್ಟಿಕ್ ಮೇಲೆ ನಿಷೇಧ ಹೇರಿದ್ದರೆ ಮತ್ತೊಂದೆಡೆ ಪ್ಲಾಸ್ಟಿಕ್ ತ್ಯಾಜ್ಯದ ವೈಜ್ಞಾನಿಕ ಸಂಸ್ಕರಣೆಯನ್ನು ಕಡ್ಡಾಯಗೊಳಿಸಲಾಗಿತು. ಇದರ ಪರಿಣಾಮವಾಗಿ ದೇಶದಲ್ಲಿ ಸುಮಾರು 30 ಲಕ್ಷ ಟನ್ನಷ್ಟು ಪ್ಲಾಸ್ಟಿಕ್ ಪ್ಯಾಕೇಜಿಂಗ್ ಉತ್ಪನ್ನಗಳನ್ನು ಕಡ್ಡಾಯವಾಗಿ ಮರುಬಳಕೆ ಮಾಡಲಾಗುತ್ತಿದೆ. ಇದು ದೇಶದಲ್ಲಿ ವಾರ್ಷಿಕವಾಗಿ ಉತ್ಪತ್ತಿಯಾಗುವ ಶೇ. 75ರಷ್ಟು ಪ್ಲಾಸ್ಟಿಕ್ ತ್ಯಾಜ್ಯದಷ್ಟಾಗಿದೆ. ಈ ಪ್ಲಾಸ್ಟಿಕ್ ತ್ಯಾಜ್ಯ ಮರುಬಳಕೆ ಪ್ರಕ್ರಿಯೆಯಲ್ಲಿ 10000ಕ್ಕೂ ಹೆಚ್ಚು ಉತ್ಪಾದಕರು, ಆಮದುದಾರರು, ಪ್ರತಿಷ್ಠಿತ ಬ್ರ್ಯಾಂಡ್ನ ಮಾಲೀಕರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.ವಿಶ್ವ ಪರಿಸರ ದಿನವನ್ನು ಉದ್ದೇಶಿಸಿ ವಿಡಿಯೋ ಸಂದೇಶದ ಮೂಲಕ ಪ್ರಧಾನಿ ಭಾಷಣ
June 05th, 02:29 pm
ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ವಿಶ್ವ ಪರಿಸರ ದಿನದಂದು ವಿಶ್ವದ ಪ್ರತಿಯೊಂದು ದೇಶಕ್ಕೂ ತಮ್ಮ ಶುಭಾಶಯಗಳನ್ನು ತಿಳಿಸಿದರು. ಈ ವರ್ಷದ ಪರಿಸರ ದಿನದ ಘೋಷ ವಾಕ್ಯ ಏಕ-ಬಳಕೆಯ ಪ್ಲಾಸ್ಟಿಕ್ ತೊಡೆದುಹಾಕಲು ಅಭಿಯಾನದ ಕುರಿತು ಒತ್ತಿ ಹೇಳಿದ ಅವರು, ಭಾರತವು ಕಳೆದ 4-5 ವರ್ಷಗಳಿಂದ ಈ ನಿಟ್ಟಿನಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ಭಾರತವು 2018ರಲ್ಲಿ ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿರ್ಮೂಲನೆ ಮಾಡಲು ಎರಡು ಹಂತಗಳಲ್ಲಿ ಕಾರ್ಯನಿರ್ವಹಿಸಲು ಆರಂಭಿಸಿತು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಒಂದೆಡೆ, ನಾವು ಏಕ-ಬಳಕೆಯ ಪ್ಲಾಸ್ಟಿಕ್ ಅನ್ನು ನಿಷೇಧಿಸಿದ್ದೇವೆ, ಮತ್ತೊಂದೆಡೆ, ಪ್ಲಾಸ್ಟಿಕ್ ತ್ಯಾಜ್ಯ ಸಂಸ್ಕರಣೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅವರು ಹೇಳಿದರು. ಆ ಕಾರಣದಿಂದಾಗಿ, ಭಾರತದಲ್ಲಿ ಉತ್ಪಾದನೆಯಾಗುವ ಒಟ್ಟು ವಾರ್ಷಿಕ ಪ್ಲಾಸ್ಟಿಕ್ ತ್ಯಾಜ್ಯದ ಶೇಕಡ 75 ರಷ್ಟಿರುವ ಸುಮಾರು 30 ಲಕ್ಷ ಟನ್ ಪ್ಲಾಸ್ಟಿಕ್ ಪ್ಯಾಕೇಜಿಂಗ್ ಅನ್ನು ಭಾರತದಲ್ಲಿ ಕಡ್ಡಾಯವಾಗಿ ಮರುಬಳಕೆ ಮಾಡಲಾಗುತ್ತಿದೆ ಮತ್ತು ಸುಮಾರು 10 ಸಾವಿರ ಉತ್ಪಾದಕರು, ಆಮದುದಾರರು ಮತ್ತು ಬ್ರ್ಯಾಂಡ್ಗಳು ಬಂದಿವೆ ಇದರ ವ್ಯಾಪ್ತಿಗೆ ಬಂದಿವೆ ಎಂದು ಪ್ರಧಾನಿ ಹೇಳಿದರು.