ಗುಜರಾತ್ನ ಭಾವನಗರದಲ್ಲಿ 'ಸಮುದ್ರ ಸೇ ಸಮೃದ್ಧಿ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
September 20th, 11:00 am
ಗುಜರಾತ್ನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಸರ್ಬಾನಂದ ಸೋನೋವಾಲ್ ಜಿ, ಸಿ.ಆರ್. ಪಾಟೀಲ್, ಮನ್ಸುಖ್ಭಾಯಿ ಮಾಂಡವಿಯಾ, ಶಾಂತನು ಠಾಕೂರ್, ನಿಮುಬೆನ್ ಬಂಭಾನಿಯಾ, ದೇಶಾದ್ಯಂತ 40ಕ್ಕೂ ಹೆಚ್ಚು ಸ್ಥಳಗಳಿಂದ ಈ ಕಾರ್ಯಕ್ರಮಕ್ಕೆ ಸಂಪರ್ಕ ಹೊಂದಿರುವ ಗಣ್ಯರೆ, ಎಲ್ಲಾ ಪ್ರಮುಖ ಬಂದರುಗಳೊಂದಿಗೆ ಸಂಪರ್ಕ ಹೊಂದಿರುವ ವಿವಿಧ ರಾಜ್ಯಗಳ ಸಚಿವರೆ, ಹಿರಿಯ ಅಧಿಕಾರಿಗಳೆ, ಇತರೆ ಗಣ್ಯ ಅತಿಥಿಗಳೆ ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೆ, ನಾನು ನಿಮ್ಮೆಲ್ಲರಿಗೂ ಶುಭಾಶಯಗಳನ್ನು ಕೋರುತ್ತೇನೆ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ನ ಭಾವನಗರದಲ್ಲಿ 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿದರು
September 20th, 10:30 am
ಗುಜರಾತ್ನ ಭಾವನಗರದಲ್ಲಿ ಇಂದು 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 'ಸಮುದ್ರದಿಂದ ಸಮೃದ್ಧಿ' ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಎಲ್ಲಾ ಗಣ್ಯರು ಮತ್ತು ಜನರನ್ನು ಸ್ವಾಗತಿಸಿದರು. ಸೆಪ್ಟೆಂಬರ್ 17 ರಂದು ತಮಗೆ ಕಳುಹಿಸಲಾದ ಹುಟ್ಟುಹಬ್ಬದ ಶುಭಾಶಯಗಳನ್ನು ಸ್ವೀಕರಿಸಿದ ಪ್ರಧಾನಮಂತ್ರಿ, ಜನರಿಂದ ಪಡೆದ ಪ್ರೀತಿಯು ಶಕ್ತಿಯ ದೊಡ್ಡ ಮೂಲವಾಗಿದೆ ಎಂದು ಹೇಳಿದರು, ರಾಷ್ಟ್ರವು ವಿಶ್ವಕರ್ಮ ಜಯಂತಿಯಿಂದ ಗಾಂಧಿ ಜಯಂತಿಯವರೆಗೆ, ಅಂದರೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸೇವಾ ಪಖ್ವಾಡವನ್ನು ಆಚರಿಸುತ್ತಿದೆ ಎಂದು ಅವರು ಎತ್ತಿ ತೋರಿಸಿದರು. ಕಳೆದ 2-3 ದಿನಗಳಲ್ಲಿ ಗುಜರಾತ್ನಲ್ಲಿ ಹಲವಾರು ಸೇವಾ-ಆಧಾರಿತ ಚಟುವಟಿಕೆಗಳು ನಡೆದಿವೆ ಎಂದು ಅವರು ಹೇಳಿದರು. ನೂರಾರು ಸ್ಥಳಗಳಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸಲಾಗಿದೆ, ಇಲ್ಲಿಯವರೆಗೆ ಒಂದು ಲಕ್ಷ ವ್ಯಕ್ತಿಗಳು ರಕ್ತದಾನ ಮಾಡಿದ್ದಾರೆ ಎಂಬುದರತ್ತ ಪ್ರಧಾನಮಂತ್ರಿ ಗಮನ ಸೆಳೆದರು. ಹಲವಾರು ನಗರಗಳಲ್ಲಿ ಸ್ವಚ್ಛತಾ ಅಭಿಯಾನಗಳನ್ನು ನಡೆಸಲಾಗಿದ್ದು, ಲಕ್ಷಾಂತರ ನಾಗರಿಕರು ಸಕ್ರಿಯವಾಗಿ ಭಾಗವಹಿಸಿದ್ದಾರೆ ಎಂದು ಅವರು ಹೇಳಿದರು. ರಾಜ್ಯಾದ್ಯಂತ 30,000 ಕ್ಕೂ ಹೆಚ್ಚು ಆರೋಗ್ಯ ಶಿಬಿರಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರಿಗೆ ಮತ್ತು ವಿಶೇಷವಾಗಿ ಮಹಿಳೆಯರಿಗೆ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ ಎಂದು ಶ್ರೀ ಮೋದಿ ಮಾಹಿತಿ ನೀಡಿದರು. ದೇಶಾದ್ಯಂತ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರಿಗೂ ಅವರು ತಮ್ಮ ಮೆಚ್ಚುಗೆ ಮತ್ತು ಕೃತಜ್ಞತೆಯನ್ನು ವ್ಯಕ್ತಪಡಿಸಿದರು.ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ-2023 ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
October 17th, 11:10 am
3ನೇ ಆವೃತ್ತಿಯ ಜಾಗತಿಕ ಸಾಗರ ಇಂಡಿಯಾ ಶೃಂಗಸಭೆಗೆ ನಾನು ನಿಮ್ಮೆಲ್ಲರನ್ನು ಸ್ವಾಗತಿಸುತ್ತೇನೆ. ಈ ಹಿಂದೆ ನಾವು 2021ರಲ್ಲಿ ಭೇಟಿಯಾದಾಗ, ಇಡೀ ಜಗತ್ತು ಕೊರೊನಾ ಸೃಷ್ಟಿಸಿದ ಅನಿಶ್ಚಿಯದ ಬಂಧಿಯಾಗಿದ್ದೆವು. ಕೊರೊನಾ ನಂತರದ ಜಗತ್ತು ಹೇಗಿರುತ್ತದೆ ಎಂದು ಯಾರೂ ತಿಳಿದಿರಲಿಲ್ಲ. ಆದರೆ ಇಂದು ಹೊಸ ವಿಶ್ವ ಕ್ರಮವು ರೂಪುಗೊಳ್ಳುತ್ತಿದೆ. ಬದಲಾಗುತ್ತಿರುವ ಈ ವಿಶ್ವ ಕ್ರಮದಲ್ಲಿ ಇಡೀ ಜಗತ್ತು ಹೊಸ ಆಶಯಗಳೊಂದಿಗೆ ಭಾರತದತ್ತ ನೋಡುತ್ತಿದೆ. ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ವಿಶ್ವದಲ್ಲಿ ಭಾರತದ ಆರ್ಥಿಕತೆಯು ನಿರಂತರವಾಗಿ ಬಲಗೊಳ್ಳುತ್ತಿದೆ. ಭಾರತವು ವಿಶ್ವದ ಅಗ್ರ 3 ಆರ್ಥಿಕ ಶಕ್ತಿಗಳಲ್ಲಿ ಒಂದಾಗುವ ದಿನ ದೂರವಿಲ್ಲ. ಜಗತ್ತಿನ ಗರಿಷ್ಠ ವ್ಯಾಪಾರವು ಸಮುದ್ರ ಮಾರ್ಗಗಳ ಮೂಲಕ ನಡೆಯುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಕೊರೊನಾ ನಂತರದ ಜಗತ್ತಿನಲ್ಲಿ, ಇಂದು ಜಗತ್ತಿಗೆ ವಿಶ್ವಾಸಾರ್ಹ ಮತ್ತು ಸ್ಥಿಹೊಂದಾಣಿಕೆಯ ಪೂರೈಕೆ ಸರಪಳಿಗಳ ಅಗತ್ಯವಿದೆ. ಆದ್ದರಿಂದಲೇ ಜಾಗತಿಕ ಸಾಗರ ಇಂಡಿಯಾ ಶೃಂಗಸಭೆಯ ಈ ಆವೃತ್ತಿಯು ಹೆಚ್ಚು ಪ್ರಸ್ತುತವಾಗಿದೆ ಮತ್ತು ಮಹತ್ವಪೂರ್ಣದ್ದಾಗಿದೆ.ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ 2023; ಪ್ರಧಾನಿ ಉದ್ಘಾಟನೆ
October 17th, 10:44 am
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಂಬೈನಲ್ಲಿಂದು “ಜಾಗತಿಕ ಸಾಗರ ಇಂಡಿಯಾ ಶೃಂಗಸಭೆ 2023”ರ 3ನೇ ಆವೃತ್ತಿಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಭಾರತೀಯ ಕಡಲ ನೀಲಿ ಆರ್ಥಿಕತೆಯ ನೀಲನಕ್ಷೆಯಾದ ‘ಅಮೃತ ಕಾಲದ ಮುನ್ನೋಟ 2047’ ಅನ್ನು ಸಹ ಪ್ರಧಾನಿ ಅನಾವರಣಗೊಳಿಸಿದರು. ಈ ಭವಿಷ್ಯದ ಯೋಜನೆಗಳಿಗೆ ಅನುಗುಣವಾಗಿ, ಪ್ರಧಾನ ಮಂತ್ರಿ ಅವರು ನೀಲನಕ್ಷೆ ಅನಾವರಣಗೊಳಿಸಿದರು, ರಾಷ್ಟ್ರಕ್ಕೆ ಸಮರ್ಪಿಸಿದರು. ಭಾರತೀಯ ಕಡಲ ನೀಲಿ ಆರ್ಥಿಕತೆಗಾಗಿ 'ಅಮೃತ ಕಾಲದ ಮುನ್ನೋಟ 2047'ರೊಂದಿಗೆ ರೂಪಿಸಲಾದ ಸುಮಾರು 23,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ನೆರವೇರಿಸಿದರು. ದೇಶದ ಸಾಗರ ವಲಯದಲ್ಲಿ ಹೂಡಿಕೆ ಆಕರ್ಷಿಸಲು ಈ ಶೃಂಗಸಭೆಯು ಅತ್ಯುತ್ತಮ ವೇದಿಕೆ ಒದಗಿಸುತ್ತದೆ.ಭಾರತ ಸಾಗರಯಾನ ಶೃಂಗಸಭೆ 2021 ಉದ್ಘಾಟಿಸಿದ ಪ್ರಧಾನಿ
March 02nd, 11:00 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಭಾರತ ಸಾಗರಯಾನ ಶೃಂಗಸಭೆ-2021’ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡೆನ್ಮಾರ್ಕ್ನ ಸಾರಿಗೆ ಸಚಿವ ಬೆನ್ನಿ ಎಂಗ್ಲೆಬ್ರೆಕ್ಟ್, ಗುಜರಾತ್ ಮತ್ತು ಆಂಧ್ರಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಮನ್ಸುಖ್ ಮಾಂಡವಿಯಾ ಉಪಸ್ಥಿತರಿದ್ದರು.ಭಾರತ ಸಾಗರಯಾನ ಶೃಂಗಸಭೆ 2021 ಉದ್ಘಾಟಿಸಿದ ಪ್ರಧಾನಿ
March 02nd, 10:59 am
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ʻಭಾರತ ಸಾಗರಯಾನ ಶೃಂಗಸಭೆ-2021’ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡೆನ್ಮಾರ್ಕ್ನ ಸಾರಿಗೆ ಸಚಿವ ಬೆನ್ನಿ ಎಂಗ್ಲೆಬ್ರೆಕ್ಟ್, ಗುಜರಾತ್ ಮತ್ತು ಆಂಧ್ರಪ್ರದೇಶ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಮನ್ಸುಖ್ ಮಾಂಡವಿಯಾ ಉಪಸ್ಥಿತರಿದ್ದರು.ಸಾಮಾಜಿಕ ಮಾಧ್ಯಮ ಕಾರ್ನರ್ 11 ಜನವರಿ 2018
January 11th, 08:01 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !