ಪ್ಯಾರಿಸ್ನಲ್ಲಿ ನಡೆದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಶೃಂಗಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಡಿದ ಭಾಷಣದ ಕನ್ನಡ ಪಠ್ಯ
September 10th, 02:50 pm
ಫ್ರಾನ್ಸ್ ದೇಶದ ಪ್ಯಾರಿಸ್ ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಶೃಂಗಸಭೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಉದ್ದೇಶಿಸಿ ಮಾತನಾಡಿದರು. ಸಕಾಲಿಕ ಉಪಕ್ರಮವನ್ನು ಕೈಗೊಂಡು ಪ್ರೀತಿಯ ಆಹ್ವಾನ ನೀಡಿದ್ದಕ್ಕಾಗಿ ಪ್ರಧಾನಮಂತ್ರಿಯವರು ಫ್ರಾನ್ಸ್ ಅಧ್ಯಕ್ಷರಾದ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಧನ್ಯವಾದ ತಿಳಿಸಿದರು. ಈ ಐತಿಹಾಸಿಕ ಸಮಾವೇಶದಲ್ಲಿ ಭಾಗವಹಿಸಲು ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿ, ಮೊದಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ಶೃಂಗಸಭೆಯ ಭಾಗವಾಗಲು ನನಗೆ ಸಂತೋಷವಾಗಿದೆ ಎಂದು ಹೇಳಿದರು.ಫ್ರಾನ್ಸ್ ದೇಶದ ಪ್ಯಾರಿಸ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಶೃಂಗಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
September 10th, 02:45 pm
ಫ್ರಾನ್ಸ್ ದೇಶದ ಪ್ಯಾರಿಸ್ ನಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಶೃಂಗಸಭೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಉದ್ದೇಶಿಸಿ ಮಾತನಾಡಿದರು. ಸಕಾಲಿಕ ಉಪಕ್ರಮವನ್ನು ಕೈಗೊಂಡು ಪ್ರೀತಿಯ ಆಹ್ವಾನ ನೀಡಿದ್ದಕ್ಕಾಗಿ ಪ್ರಧಾನಮಂತ್ರಿಯವರು ಫ್ರಾನ್ಸ್ ಅಧ್ಯಕ್ಷರಾದ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಧನ್ಯವಾದ ತಿಳಿಸಿದರು. ಈ ಐತಿಹಾಸಿಕ ಸಮಾವೇಶದಲ್ಲಿ ಭಾಗವಹಿಸಲು ಸಂತಸ ವ್ಯಕ್ತಪಡಿಸಿದ ಶ್ರೀ ಮೋದಿ, ಮೊದಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ಶೃಂಗಸಭೆಯ ಭಾಗವಾಗಲು ನನಗೆ ಸಂತೋಷವಾಗಿದೆ ಎಂದು ಹೇಳಿದರು.EOS-05 ಉಪಗ್ರಹ ಹೊತ್ತ GSLV-F17 ರಾಕೆಟ್ ನ ಯಶಸ್ವಿ ಉಡಾವಣೆಗಾಗಿ ಇಸ್ರೋವನ್ನು ಶ್ಲಾಘಿಸಿದ ಪ್ರಧಾನಮಂತ್ರಿ
September 04th, 10:35 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಸ್ರೋ ಇಂದು ಮತ್ತೊಂದು ಮಹತ್ವದ ಸಾಧನೆಯನ್ನು ಮಾಡಿದೆ ಎಂದು ಶ್ಲಾಘಿಸಿದ್ದಾರೆ ಹಾಗೂ ಇದು ರಾಷ್ಟ್ರಕ್ಕೆ ಹೆಮ್ಮೆಯ ಕ್ಷಣ ಎಂದು ಬಣ್ಣಿಸಿದ್ದಾರೆ.ರಾಷ್ಟ್ರೀಯ ಬಾಹ್ಯಾಕಾಶ ದಿನದ ನಿಮಿತ್ತ ಪ್ರಧಾನಮಂತ್ರಿ ಶುಭಾಶಯ
August 23rd, 10:50 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಶುಭಾಶಯ ಕೋರಿದ್ದಾರೆ.ಫಲಿತಾಂಶಗಳ ಪಟ್ಟಿ: ಪ್ರಧಾನ ಮಂತ್ರಿಯವರ ಫ್ರಾನ್ಸ್ ಭೇಟಿ
June 14th, 09:32 pm
ಭಾರತ-ಫ್ರಾನ್ಸ್ ನಾವೀನ್ಯತೆ ಮಾರ್ಗಸೂಚಿ 2030 ಅಳವಡಿಕೆನಾರ್ವೆ ಪ್ರಧಾನಮಂತ್ರಿ ಜತೆ ಜಂಟಿ ಪತ್ರಿಕಾ ಹೇಳಿಕೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಪತ್ರಿಕಾ ಅವರ ಹೇಳಿಕೆ
May 18th, 04:44 pm
ಕಳೆದ ವರ್ಷ ನಾನು ನಾರ್ವೆಗೆ ಭೇಟಿ ನೀಡಬೇಕಿತ್ತು, ಆದರೆ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದಾಗಿ ಪ್ರವಾಸ ಮುಂದೂಡಬೇಕಾಯಿತು. ಆ ಕಷ್ಟದ ಸಮಯದಲ್ಲಿ, ಭಯೋತ್ಪಾದನೆಯ ವಿರುದ್ಧ ನಾರ್ವೆ ಭಾರತದೊಂದಿಗೆ ಸದೃಢವಾಗಿ ನಿಂತಿತು. ಇದು ನಮ್ಮ ಸ್ನೇಹದ ಬಲವನ್ನು ಪ್ರತಿಬಿಂಬಿಸುತ್ತದೆ. ಇಂದು ನಾನು ನಾರ್ವೆಗೆ ಭೇಟಿ ನೀಡಿರುವಾಗ ಆ ಬೆಂಬಲ ಮತ್ತು ಒಗ್ಗಟ್ಟಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ.ಭಾರತ-ಕೆನಡಾ ನಾಯಕರ ಜಂಟಿ ಹೇಳಿಕೆ
March 02nd, 05:05 pm
ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಮಂತ್ರಣದ ಮೇರೆಗೆ, ಕೆನಡಾದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು 2026 ರ ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿ ಶ್ರೀ ಮಾರ್ಕ್ ಕಾರ್ನೆ ಅವರು ಕೆನಡಾದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಮತ್ತು 2018 ರ ನಂತರ ಕೆನಡಾದ ಪ್ರಧಾನ ಮಂತ್ರಿಯೊಬ್ಬರು ಭಾರತಕ್ಕೆ ನೀಡಿದ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಪ್ರಧಾನಮಂತ್ರಿ ಕಾರ್ನೆ ಅವರೊಂದಿಗೆ ಹಿರಿಯ ಸಚಿವರು, ಪ್ರಾಂತೀಯ ನಾಯಕರು ಮತ್ತು ಪ್ರಮುಖ ಸಿಇಒಗಳನ್ನು ಒಳಗೊಂಡ ಕೆನಡಾದ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.ಭಾರತ - ಇಸ್ರೇಲ್ ಜಂಟಿ ಹೇಳಿಕೆ
February 26th, 07:44 pm
ಭಾರತ ಮತ್ತು ಇಸ್ರೇಲ್ ನಡುವಿನ ಆತ್ಮೀಯತೆ, ಸದ್ಭಾವನೆ ಮತ್ತು ಆಳವಾದ ಕಾರ್ಯತಂತ್ರದ ಬಾಂಧವ್ಯವನ್ನು ಗೌರವಿಸಿ, ಇಸ್ರೇಲ್ ಪ್ರಧಾನಮಂತ್ರಿ ಶ್ರೀ ಬೆಂಜಮಿನ್ ನೆತನ್ಯಾಹು ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 25 ರಿಂದ 26 ರವರೆಗೆ ಇಸ್ರೇಲ್ ಗೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿಯವರೊಂದಿಗೆ ಹಿರಿಯ ಸಚಿವರು ಮತ್ತು ಅಧಿಕಾರಿಗಳನ್ನೊಳಗೊಂಡ ಉನ್ನತ ಮಟ್ಟದ ನಿಯೋಗವು ಆಗಮಿಸಿತ್ತು.ಭಾರತ-ಫ್ರಾನ್ಸ್ ಜಂಟಿ ಹೇಳಿಕೆ
February 18th, 08:10 am
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ, ಫ್ರೆಂಚ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು 2026ರ ಫೆಬ್ರವರಿ 17 ರಿಂದ 19 ರವರೆಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದರು ಮತ್ತು ʻಕೃತಕ ಬುದ್ಧಿಮತ್ತೆ ಪರಿಣಾಮ ಶೃಂಗಸಭೆ-2026ʼರಲ್ಲಿ ಭಾಗವಹಿಸಿದರು. ಭೇಟಿಯ ಸಮಯದಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಫೆಬ್ರವರಿ 17ರಂದು ಮುಂಬೈನಲ್ಲಿ ʻಭಾರತ-ಫ್ರಾನ್ಸ್ ನಾವೀನ್ಯತೆಯ ವರ್ಷ-2026ʼ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಇದು ಅಧ್ಯಕ್ಷ ಮ್ಯಾಕ್ರನ್ ಅವರ 4ನೇ ಭಾರತ ಭೇಟಿಯಾಗಿದ್ದು, ಫೆಬ್ರವರಿ 2025ರಲ್ಲಿ ಪ್ರಧಾನಿ ಮೋದಿಯವರ ಫ್ರಾನ್ಸ್ ಭೇಟಿಯ ನಂತರ ಇದು ನೆರವೇರಿದೆ.ವಿಕಸಿತ ಭಾರತ ಯುವ ನಾಯಕರ ಸಂವಾದ-2026ರ ಸಮಾರೋಪ ಕಲಾಪ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
January 12th, 06:45 pm
ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳೆ, ಎಲ್ಲಾ ಸಂಸತ್ ಸದಸ್ಯರೆ, ವಿಕಸಿತ ಭಾರತ ಯುವ ನಾಯಕರ ಸ್ಪರ್ಧೆಯ ವಿಜೇತರೆ, ಇತರೆ ಗಣ್ಯರೆ ಮತ್ತು ವಿದೇಶದಿಂದ ಮತ್ತು ದೇಶದೆಲ್ಲೆಡೆಯಿಂದ ಇಲ್ಲಿಗೆ ಬಂದಿರುವ ನನ್ನ ಯುವ ಸ್ನೇಹಿತರೆ, ನೀವೆಲ್ಲರೂ ಇಲ್ಲಿ ಹೊಸ ಅನುಭವ ಪಡೆದಿರಬೇಕು. ನಿಮಗೆ ದಣಿವಾಗಿರಬೇಕು? ನೀವು 2 ದಿನಗಳ ಕಾರ್ಯಕ್ರಮದಲ್ಲಿ ತೊಡಗಿದ್ದೀರಿ, ಆದ್ದರಿಂದ ಮತ್ತೊಮ್ಮೆ ಕೇಳಲು ನಿಮಗೆ ಆಯಾಸವಾಗುತ್ತಿರಬಹುದು? ನಾನು ಮೊದಲು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ, ನಿಮ್ಮಲ್ಲಿ ಹಲವರು ಜನಿಸಿರಲಿಲ್ಲ ಎಂದು ನಾನು ನಂಬುತ್ತೇನೆ. 2014ರಲ್ಲಿ ನಾನು ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ, ನಿಮ್ಮಲ್ಲಿ ಹೆಚ್ಚಿನವರು ಇನ್ನೂ ಮಕ್ಕಳಾಗಿದ್ದಿರಿ. ಆದರೆ ನಾನು ಮುಖ್ಯಮಂತ್ರಿಯೇ ಆಗಿದ್ದಿರಲಿ ಅಥವಾ ಈಗ ಪ್ರಧಾನಮಂತ್ರಿಯೇ ಆಗಿರಲಿ, ನಾನು ಯಾವಾಗಲೂ ಯುವ ಪೀಳಿಗೆಯ ಮೇಲೆ ಅಪಾರ ನಂಬಿಕೆ ಹೊಂದಿದ್ದೇನೆ. ನಾನು ಯಾವಾಗಲೂ ನಿಮ್ಮ ಸಾಮರ್ಥ್ಯ ಮತ್ತು ನಿಮ್ಮ ಪ್ರತಿಭೆಯಿಂದ ಅದ್ಭುತ ಶಕ್ತಿ ಪಡೆದುಕೊಂಡಿದ್ದೇನೆ. ಇಂದು ನೀವು ಅಭಿವೃದ್ಧಿ ಹೊಂದಿದ ಭಾರತ ನಿರ್ಮಿಸುವ ಧ್ಯೇಯದ ಮೇಲೆ ನಿಯಂತ್ರಣ ಹೊಂದಿದ್ದೀರಿ ಎಂದು ನಾನು ನೋಡುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಕಸಿತ ಭಾರತ ಯುವ ನಾಯಕರ ಸಂವಾದ 2026 ಅನ್ನು ಉದ್ದೇಶಿಸಿ ಮಾತನಾಡಿದರು
January 12th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ 'ವಿಕಸಿತ ಭಾರತ ಯುವ ನಾಯಕರ ಸಂವಾದ 2026'ರ ಸಮಾರೋಪ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿಯವರು, ತಾವು ಮೊದಲು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದಾಗ ಇಂದಿನ ಅನೇಕ ಯುವ ನಾಗರಿಕರು ಇನ್ನೂ ಜನಿಸಿರಲಿಲ್ಲ ಮತ್ತು 2014ರಲ್ಲಿ ತಾವು ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗ ಅವರಲ್ಲಿ ಹೆಚ್ಚಿನವರು ಇನ್ನೂ ಮಕ್ಕಳಾಗಿದ್ದರು ಎಂದು ಹೇಳಿದರು. ಇಷ್ಟು ಕಾಲ ಉರುಳಿದರೂ ಸಹ, ಯುವ ಪೀಳಿಗೆಯ ಮೇಲೆ ತಮಗಿರುವ ಭರವಸೆ ಎಂದಿಗೂ ಕುಗ್ಗಿಲ್ಲ ಮತ್ತು ಅದು ಅಚಲವಾಗಿದೆ ಎಂದು ಅವರು ಒತ್ತಿಹೇಳಿದರು. ನಿಮ್ಮ ಸಾಮರ್ಥ್ಯ, ನಿಮ್ಮ ಪ್ರತಿಭೆ - ನಾನು ಯಾವಾಗಲೂ ನಿಮ್ಮಿಂದ ಶಕ್ತಿಯನ್ನು ಪಡೆದಿದ್ದೇನೆ. ಮತ್ತು ಇಂದು ನೋಡಿ, ನೀವೆಲ್ಲರೂ ವಿಕಸಿತ ಭಾರತದ ಗುರಿಯ ಲಗಾಮನ್ನು ಹಿಡಿದಿದ್ದೀರಿ ಎಂದು ಶ್ರೀ ಮೋದಿ ಹೇಳಿದರು.ಪ್ರಧಾನಮಂತ್ರಿ ಅವರು ಎಲ್ವಿಎಂ3-ಎಂ6 ಮೂಲಕ ಬ್ಲೂಬರ್ಡ್ ಬ್ಲಾಕ್-2 ಯಶಸ್ವಿ ಉಡಾವಣೆಗಾಗಿ ಬಾಹ್ಯಾಕಾಶ ವಿಜ್ಞಾನಿಗಳು ಮತ್ತು ಇಂಜಿನಿಯರ್ಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ
December 24th, 10:04 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ವಿಎಂ3-ಎಂ6 ಉಡಾವಣಾ ವಾಹನದ ಮೂಲಕ 'ಬ್ಲೂಬರ್ಡ್ ಬ್ಲಾಕ್-2' (BlueBird Block-2) ಉಪಗ್ರಹವನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಬಾಹ್ಯಾಕಾಶ ವಿಜ್ಞಾನಿಗಳು ಮತ್ತು ಇಂಜಿನಿಯರ್ಗಳನ್ನು ಅಭಿನಂದಿಸಿದ್ದಾರೆ. ಬ್ಲೂಬರ್ಡ್ ಬ್ಲಾಕ್-2 ಅಮೆರಿಕದ ಒಂದು ಬಾಹ್ಯಾಕಾಶ ನೌಕೆಯಾಗಿದ್ದು, ಇದು ಭಾರತದಿಂದ ಉದ್ದೇಶಿತ ಕಕ್ಷೆಗೆ ಉಡಾವಣೆಗೊಂಡ ಅತ್ಯಂತ ಭಾರವಾದ ಉಪಗ್ರಹವಾಗಿದೆ. ಇದು ಭಾರತದ ಬಾಹ್ಯಾಕಾಶ ಪಯಣದಲ್ಲಿ ಹೆಮ್ಮೆಯ ಮೈಲಿಗಲ್ಲಾಗಿದೆ ಮತ್ತು ಆತ್ಮನಿರ್ಭರ ಭಾರತದ ಕಡೆಗಿನ ನಮ್ಮ ಪ್ರಯತ್ನಗಳ ಪ್ರತಿಬಿಂಬವಾಗಿದೆ ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ.ಓಮನ್ನಲ್ಲಿ ಭಾರತೀಯ ವಿದ್ಯಾರ್ಥಿಗಳು ಮತ್ತು ಸಮುದಾಯ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
December 18th, 12:32 pm
ನಿಮ್ಮೆಲ್ಲರ ಯೌವನದ ಉತ್ಸಾಹ ಮತ್ತು ಚೈತನ್ಯವು ಇಲ್ಲಿನ ವಾತಾವರಣವನ್ನು ನಿಜವಾಗಿಯೂ ಚೈತನ್ಯಗೊಳಿಸಿದೆ. ಈ ಸಭಾಂಗಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗದ ಕಾರಣಕ್ಕೆ ಹತ್ತಿರದ ಸಭಾಂಗಣದಲ್ಲಿ ಕುಳಿತು ಪರದೆಗಳಲ್ಲಿ ನೇರ ಪ್ರಸಾರದ ಕಾರ್ಯಕ್ರಮ ವೀಕ್ಷಿಸುತ್ತಿರುವ ಎಲ್ಲಾ ಸಹೋದರ ಸಹೋದರಿಯರನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇಲ್ಲಿಯವರೆಗೆ ಬಂದಿದ್ದರೂ ಸಭಾಂಗಣಕ್ಕೆ ಪ್ರವೇಶಿಸಲು ಸಾಧ್ಯವಾಗದ ಅವರಿಗೆ ಹೇಗೆ ಅನಿಸುತ್ತಿರಬಹುದು ಎಂಬುದನ್ನು ನೀವೇ ಊಹಿಸಬಹುದು.ಒಮಾನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
December 18th, 12:31 pm
ಪ್ರಧಾನಮಂತ್ರಿ ಅವರು ಇಂದು ಮಸ್ಕತ್ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ವಿವಿಧ ಭಾರತೀಯ ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಓಮನ್ ನಲ್ಲಿ ಭಾರತೀಯ ಶಾಲೆಗಳು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷವು ಅಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ವಿಶೇಷವಾಗಿದೆ.'ಮನ್ ಕಿ ಬಾತ್' ಜನರ ಸಾಮೂಹಿಕ ಪ್ರಯತ್ನಗಳನ್ನು ಸಾರ್ವಜನಿಕರಿಗೆ ತಿಳಿಸಲು ಅತ್ಯುತ್ತಮ ವೇದಿಕೆಯಾಗಿದೆ: ಪ್ರಧಾನಿ ಮೋದಿ
November 30th, 11:30 am
ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನ ದಿನಾಚರಣೆ, ವಂದೇ ಮಾತರಂನ 150 ನೇ ವಾರ್ಷಿಕೋತ್ಸವ, ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ, ಐಎನ್ಎಸ್ 'ಮಹೆ' ಸೇರ್ಪಡೆ ಮತ್ತು ಕುರುಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ ಸೇರಿದಂತೆ ನವೆಂಬರ್ ತಿಂಗಳ ಪ್ರಮುಖ ಘಟನೆಗಳನ್ನು ಹೈಲೈಟ್ ಮಾಡಿದರು. ದಾಖಲೆಯ ಆಹಾರ ಧಾನ್ಯ ಮತ್ತು ಜೇನುತುಪ್ಪ ಉತ್ಪಾದನೆ, ಭಾರತದ ಕ್ರೀಡಾ ಯಶಸ್ಸುಗಳು, ವಸ್ತು ಸಂಗ್ರಹಾಲಯಗಳು ಮತ್ತು ನೈಸರ್ಗಿಕ ಕೃಷಿಯಂತಹ ಹಲವಾರು ಪ್ರಮುಖ ವಿಷಯಗಳನ್ನು ಸಹ ಅವರು ಸ್ಪರ್ಶಿಸಿದರು. ಎಲ್ಲರೂ ಕಾಶಿ-ತಮಿಳು ಸಂಗಮದ ಭಾಗವಾಗಬೇಕೆಂದು ಪ್ರಧಾನಿ ಒತ್ತಾಯಿಸಿದರು.ಸ್ಕೈರೂಟ್ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ವಿಸಿ ಮೂಲಕ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
November 27th, 11:01 am
ನನ್ನ ಸಚಿವ ಸಂಪುಟದ ಸಹೋದ್ಯೋಗಿಗಳಾದ ಶ್ರೀ ಜಿ. ಕಿಶನ್ ರೆಡ್ಡಿ ಜೀ; ಆಂಧ್ರಪ್ರದೇಶದ ಕೈಗಾರಿಕಾ ಸಚಿವರಾದ ಶ್ರೀ ಟಿ. ಜಿ. ಭರತ್ ಜೀ; ಇನ್ ಸ್ಪೇಸ್ ಅಧ್ಯಕ್ಷರಾದ ಶ್ರೀ ಪವನ್ ಗೋಯೆಂಕಾ ಜೀ; ಸ್ಕೈರೂಟ್ ತಂಡ; ಇತರ ಗಣ್ಯರು; ಮಹಿಳೆಯರೇ ಮತ್ತು ಮಹನೀಯರೇ!ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹೈದರಾಬಾದ್ನ ಸ್ಕೈರೂಟ್ನ ಇನ್ಫಿನಿಟಿ ಕ್ಯಾಂಪಸ್ ಉದ್ಘಾಟನೆ
November 27th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ತೆಲಂಗಾಣದ ಹೈದರಾಬಾದ್ನಲ್ಲಿರುವ ಸ್ಕೈರೂಟ್ನ ಇನ್ಫಿನಿಟಿ ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಂದು ದೇಶವು ಬಾಹ್ಯಾಕಾಶ ಕ್ಷೇತ್ರದಲ್ಲಿ ಅಭೂತಪೂರ್ವ ಅವಕಾಶವನ್ನು ಕಾಣುತ್ತಿದೆ ಎಂದು ಹೇಳಿದರು. ಮತ್ತು ಖಾಸಗಿ ವಲಯವು ಎತ್ತರಕ್ಕೆ ಹಾರಾಡುತ್ತಿರುವುದರಿಂದ ಭಾರತದ ಬಾಹ್ಯಾಕಾಶ ಪೂರಕ ವ್ಯವಸ್ಥೆಯು ಭಾರಿ ಏರಿಕೆಯನ್ನು ಕಂಡಿದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿದರು. ಸ್ಕೈರೂಟ್ನ ಇನ್ಫಿನಿಟಿ ಕ್ಯಾಂಪಸ್ ಭಾರತದ ಹೊಸ ಚಿಂತನೆ, ನಾವೀನ್ಯತೆ ಮತ್ತು ಯುವ ಶಕ್ತಿಯನ್ನು ಪ್ರತಿಬಿಂಬಿಸುತ್ತದೆ ಮತ್ತು ದೇಶದ ಯುವಕರ ನಾವೀನ್ಯತೆ, ಅಪಾಯ ಎದುರಿಸುವ ಸಾಮರ್ಥ್ಯ ಮತ್ತು ಉದ್ಯಮಶೀಲತೆ ಹೊಸ ಎತ್ತರವನ್ನು ತಲುಪುತ್ತಿದೆ ಎಂದು ಅವರು ಒತ್ತಿ ಹೇಳಿದರು.ಐಸಿಸಿ ಮಹಿಳಾ ವಿಶ್ವಕಪ್ ಚಾಂಪಿಯನ್ಗಳೊಂದಿಗೆ ಪ್ರಧಾನಮಂತ್ರಿ ಅವರ ಸಂವಾದ
November 06th, 10:15 am
ಗೌರವಾನ್ವಿತ ಪ್ರಧಾನಮಂತ್ರಿಗಳೇ, ತುಂಬು ಧನ್ಯವಾದಗಳು. ನಾವು ಇಲ್ಲಿರುವುದಕ್ಕೆ ನಮಗೆ ಅಪಾರ ಗೌರವ ಮತ್ತು ಸೌಭಾಗ್ಯ ತಂದಿದೆ ಎಂದು ನಾನು ಭಾವಿಸುತ್ತೇನೆ. ನಾನು ನಿಮಗೆ ಒಂದು ಅಭಿಯಾನದ ಬಗ್ಗೆ ಹೇಳಲು ಬಯಸುತ್ತೇನೆ. ಈ ಹೆಣ್ಣು ಮಕ್ಕಳು ಅದ್ಭುತಗಳನ್ನೇ ಮಾಡಿದ್ದಾರೆ, ನಿಜವಾಗಿಯೂ ಅದ್ಭುತ. ಕಳೆದ 2 ವರ್ಷಗಳಿಂದ, ಅವರು ತುಂಬಾ ಶ್ರಮ ಹಾಕಿದ್ದಾರೆ. ಅಪಾರ ಪ್ರಯತ್ನವನ್ನು ತೋರಿಸಿದ್ದಾರೆ. ಪ್ರತಿ ಅಭ್ಯಾಸ ಅವಧಿಯಲ್ಲೂ, ಅವರು ಪೂರ್ಣ ಗಮನ ಮತ್ತು ಶಕ್ತಿ ಹಾಕಿ ಆಡಿದರು. ಅವರ ಕಠಿಣ ಪರಿಶ್ರಮ ನಿಜವಾಗಿಯೂ ಫಲ ನೀಡಿದೆ ಎಂದು ನಾನು ಹೇಳುತ್ತೇನೆ.ಐಸಿಸಿ ಮಹಿಳಾ ವಿಶ್ವಕಪ್ 2025 ಚಾಂಪಿಯನ್ಗಳೊಂದಿಗೆ ಪ್ರಧಾನಮಂತ್ರಿ ಸಂವಾದ
November 06th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ ಮಾರ್ಗದ ನಂಬರ್ 7ರಲ್ಲಿ ಐಸಿಸಿ ಮಹಿಳಾ ವಿಶ್ವಕಪ್ 2025 ಚಾಂಪಿಯನ್ ಗಳೊಂದಿಗೆ ಸಂವಾದ ನಡೆಸಿದರು. 2025ರ ನವೆಂಬರ್ 2ರಂದು ರಾತ್ರಿ ನಡೆದ ಫೈನಲ್ಸ್ ನಲ್ಲಿ ಭಾರತ ತಂಡ ದಕ್ಷಿಣಾ ಆಫ್ರಿಕಾ ವಿರುದ್ಧ ಗೆಲುವು ಸಾಧಿಸಿತು. ದೇವ ದೀಪಾವಳಿ ಮತ್ತು ಗುರುಪುರಬ್ ಎರಡನ್ನೂ ಗುರುತಿಸುವ ಈ ದಿನವು ಬಹಳ ಮಹತ್ವದ ದಿನವಾಗಿದೆ ಎಂದು ಪ್ರಧಾನಮಂತ್ರಿಹೇಳಿದರು ಮತ್ತು ಹಾಜರಿದ್ದ ಎಲ್ಲಾ ಆಟಗಾರ್ತಿಯರಿಗೂ ಶುಭ ಕೋರಿದರು.ಉದಯೋನ್ಮುಖ ವಿಜ್ಞಾನ, ತಂತ್ರಜ್ಞಾನ ಮತ್ತು ನಾವೀನ್ಯತೆ ಸಮಾವೇಶ-2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 03rd, 11:00 am
ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಜಿತೇಂದ್ರ ಸಿಂಗ್ ಜಿ, ಪ್ರಧಾನ ವೈಜ್ಞಾನಿಕ ಸಲಹೆಗಾರ ಅಜಯ್ ಕುಮಾರ್ ಸೂದ್, ನೊಬೆಲ್ ಪ್ರಶಸ್ತಿ ವಿಜೇತ ಸರ್ ಆಂಡ್ರೆ ಗೀಮ್ ಅವರು ನಮ್ಮೊಂದಿಗೆ ಉಪಸ್ಥಿತರಿದ್ದಾರೆ, ಇಲ್ಲಿರುವ ಎಲ್ಲಾ ವಿಜ್ಞಾನಿಗಳೆ, ಅನುಶೋಧಕರೆ, ಶೈಕ್ಷಣಿಕ ಕ್ಷೇತ್ರದ ಗಣ್ಯರೆ, ಭಾರತ ಮತ್ತು ವಿದೇಶಗಳಿಂದ ಆಗಮಿಸಿರುವ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!