ಜಪಾನ್ ರಕ್ಷಣಾ ಸಚಿವರಿಂದ ಪ್ರಧಾನಮಂತ್ರಿ ಮೋದಿ ಭೇಟಿ

August 20th, 09:04 pm

ಪ್ರಸ್ತುತ ಭಾರತಕ್ಕೆ ಅಧಿಕೃತ ಭೇಟಿಯಲ್ಲಿರುವ ಜಪಾನ್ ರಕ್ಷಣಾ ಸಚಿವರಾದ ಶ್ರೀ ಶಿಂಜಿರೊ ಕೊಯಿಜುಮಿ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಫಲಿತಾಂಶಗಳ ಪಟ್ಟಿ: 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಗಾಗಿ ಜಪಾನ್ ಪ್ರಧಾನಮಂತ್ರಿಯವರ ಭಾರತ ಭೇಟಿ

July 02nd, 10:39 pm

ಸೆಮಿಕಂಡಕ್ಟರ್‌ಗಳು, ನಿರ್ಣಾಯಕ ಖನಿಜಗಳು, ಕೃತಕ ಬುದ್ಧಿಮತ್ತೆ, ಶುದ್ಧ ಇಂಧನ ಮತ್ತು ಔಷಧಗಳು ಸೇರಿದಂತೆ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಜಂಟಿ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸಲು ಯೋಜನೆ ಆಧಾರಿತ ಸಹಯೋಗವನ್ನು ಉತ್ತೇಜಿಸುತ್ತದೆ. ಭಾರತ-ಜಪಾನ್‌ ಫ್ಯಾಕ್ಟ್ ಶೀಟ್‌ 2.0 ಈ ನಿರ್ಣಾಯಕ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಭಾರತ-ಜಪಾನ್‌ ಜಿ2ಜಿ ಮತ್ತು ಬಿ 2 ಬಿ ಕಾರ್ಯಕ್ರಮಗಳನ್ನು ಸೆರೆಹಿಡಿಯುತ್ತದೆ.

16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯ ಚರ್ಚೆ ಕುರಿತು ಜಂಟಿ ಹೇಳಿಕೆ

July 02nd, 10:22 pm

ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಜಪಾನ್ ಪ್ರಧಾನಮಂತ್ರಿ ಶ್ರೀಮತಿ ತಕೈಚಿ ಸಾನೆ ಅವರು 2026 ಜುಲೈ 1-3ರ ವರೆಗೆ 16ನೇ ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದರು. ಪ್ರಧಾನಿ ತಕೈಚಿ ಅವರೊಂದಿಗೆ ಹಿರಿಯ ಅಧಿಕಾರಿಗಳು, ಸಿಇಒಗಳು ಮತ್ತು ಉದ್ಯಮ ವಲಯದ ದಿಗ್ಗಜರು ಸೇರಿದಂತೆ ಉನ್ನತ ಮಟ್ಟದ ನಿಯೋಗ ಆಗಮಿಸಿತ್ತು. ಇದು ಜಪಾನ್ ಪ್ರಧಾನಿ ತಕೈಚಿ ಅವರು ಭಾರತಕ್ಕೆ ನೀಡಿದ ಚೊಚ್ಚಲ ಅಧಿಕೃತ ಭೇಟಿಯಾಗಿತ್ತು.

ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಕ್ಷೇತ್ರದಲ್ಲಿ ಸಹಕಾರ ಕುರಿತು ಭಾರತ-ಜಪಾನ್ ಜಂಟಿ ಹೇಳಿಕೆ

July 02nd, 10:14 pm

ಭಾರತದ ಪ್ರಧಾನ ಮಂತ್ರಿ ಮತ್ತು ಜಪಾನ್ ಪ್ರಧಾನಮಂತ್ರಿ ಅವರು ಕೃತಕ ಬುದ್ಧಿಮತ್ತೆ(ಎಐ)ಯು ಆರ್ಥಿಕತೆಗಳು, ಸಮಾಜಗಳು, ವಿಜ್ಞಾನ ಮತ್ತು ತಂತ್ರಜ್ಞಾನ, ಕೈಗಾರಿಕೆ ಮತ್ತು ಉದ್ಯಮ ವ್ಯವಹಾರ, ಆಡಳಿತ ಮತ್ತು ಭದ್ರತೆಯನ್ನು ಪರಿವರ್ತಿಸುತ್ತಿರುವ ಯುಗ-ವ್ಯಾಖ್ಯಾನಿಸುವ ಸಾಮಾನ್ಯ ಉದ್ದೇಶದ ತಂತ್ರಜ್ಞಾನವಾಗಿದೆ ಎಂದು ಒಪ್ಪಿಕೊಂಡರು. ಎಐನ ವಿನ್ಯಾಸ, ಅಭಿವೃದ್ಧಿ, ನಿಯೋಜನೆ ಮತ್ತು ಆಡಳಿತದಲ್ಲಿ ಇಂದು ಮಾಡಿದ ಆಯ್ಕೆಗಳು ನಾವೀನ್ಯತೆ, ಸಾಮಾಜಿಕ ಕಲ್ಯಾಣ, ಆರ್ಥಿಕ ಭದ್ರತೆ ಮತ್ತು ಅಂತಾರಾಷ್ಟ್ರೀಯ ಕ್ರಮಕ್ಕೆ ದೀರ್ಘಕಾಲೀನ ಪರಿಣಾಮಗಳನ್ನು ಬೀರುತ್ತವೆ ಎಂದು ಅವರು ಗುರುತಿಸಿದರು. ಈ ತಿಳಿವಳಿಕೆಯ ಆಧಾರದ ಮೇಲೆ ಎಐ ಕ್ಷೇತ್ರದಲ್ಲಿ ಎರಡೂ ದೇಶಗಳ ಹೊಂದಾಣಿಕೆ ಮತ್ತು ಸ್ಪರ್ಧಾತ್ಮಕತೆಯನ್ನು ಪರಸ್ಪರ ಹೆಚ್ಚಿಸಲು, ಎರಡೂ ದೇಶಗಳಲ್ಲಿ ನಾವೀನ್ಯತೆ ಮತ್ತು ಬೆಳವಣಿಗೆಯನ್ನು ತರಲು, ಸುರಕ್ಷಿತ, ಸುಭದ್ರ, ವಿಶ್ವಾಸಾರ್ಹ, ಎಲ್ಲರನ್ನೂ ಒಳಗೊಂಡ, ಮಾನವ-ಕೇಂದ್ರಿತ, ಸುಸ್ಥಿರ, ಜವಾಬ್ದಾರಿಯುತ ಮತ್ತು ನಾವೀನ್ಯತೆ-ಆಧಾರಿತ ಎಐ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲು ಅಗತ್ಯವಾದ ಸಹಕಾರ ಮುಂದುವರಿಸಲು ಉಭಯ ನಾಯಕರು ಒಪ್ಪಿಕೊಂಡರು.

ಇಂಧನ ಚೇತರಿಕೆಯ ಕುರಿತು ಭಾರತ ಗಣರಾಜ್ಯದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಹಾಗೂ ಜಪಾನ್ ನ ಆರ್ಥಿಕತೆ, ವ್ಯಾಪಾರ ಮತ್ತು ಕೈಗಾರಿಕಾ ಸಚಿವಾಲಯದ ನಡುವಿನ ಜಂಟಿ ಹೇಳಿಕೆ

July 02nd, 10:04 pm

ಜುಲೈ 2, 2026 ರಂದು, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಜಪಾನ್ ದೇಶದ ಗೌರವಾನ್ವಿತ ಪ್ರಧಾನಮಂತ್ರಿ ಟಕೈಚಿ ಸನಾಯೆ ಅವರು ಭಾರತದ ನವದೆಹಲಿಯಲ್ಲಿ ಭೇಟಿಯಾದರು. ಪ್ರಸ್ತುತ ಭೌಗೋಳಿಕ ರಾಜಕೀಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಏಷ್ಯಾದ ಜವಾಬ್ದಾರಿಯುತ ಶಕ್ತಿಗಳು ಮತ್ತು ಪ್ರಮುಖ ಇಂಧನ ಬಳಕೆಯ ದೇಶಗಳಾಗಿ ಜಂಟಿಯಾಗಿ ಇಂಧನ ಚೇತರಿಕೆಯನ್ನು ಬಲಪಡಿಸಲು ಒಟ್ಟಾಗಿ ಕೆಲಸ ಮಾಡುವ ತಮ್ಮ ಜಂಟಿ ಸಂಕಲ್ಪದ ಆಶಯವನ್ನು ವ್ಯಕ್ತಪಡಿಸಿದರು.

ಭಾರತ-ಜಪಾನ್ ಉದ್ಯಮ ವ್ಯಾಪಾರ ವೇದಿಕೆ ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ

July 02nd, 03:35 pm

ಭಾರತ-ಜಪಾನ್ ಸಂಬಂಧ ನಿಜಕ್ಕೂ ವಿಶೇಷವಾದದ್ದು.

ಜಪಾನ್‌ ಪ್ರಧಾನಮಂತ್ರಿ ಅವರೊಂದಿಗೆ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

July 02nd, 01:30 pm

ಕಳೆದ ಹಲವು ದಶಕಗಳಿಂದೀಚೆಗೆ ಜಪಾನ್‌ ಭಾರತದ ಪ್ರಗತಿಗಾಥೆಯಲ್ಲಿ ಪ್ರಮುಖ ಪಾಲುದಾರನಾಗಿ ಮಾರ್ಪಟ್ಟಿದೆ. ಆಟೋಮೊಬೈಲ್ಸ್‌ನಿಂದ ಹಿಡಿದು ಎಲೆಕ್ಟ್ರಾನಿಕ್ಸ್‌ ವರೆಗೆ, ಸ್ನೇಹ ಮತ್ತು ವಿಶ್ವಾಸದ ಅಮೂಲ್ಯವಾಗಿದೆ.

ವಿಶ್ವದ ಎಲ್ಲಾ ನಾಯಕರು ಮತ್ತು ನಾಗರಿಕರ ಆತ್ಮೀಯ ಹಾಗೂ ಹೃತ್ಪೂರ್ವಕವಾದ ಶುಭಾಶಯಗಳಿಗೆ ಪ್ರಧಾನಮಂತ್ರಿಯವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ

June 10th, 11:50 pm

ಪ್ರಧಾನಮಂತ್ರಿಯವರು ವಿಶ್ವದ ಎಲ್ಲಾ ನಾಯಕರು ಮತ್ತು ಎಲ್ಲಾ ವರ್ಗದ ಜನರಿಗೆ ಅವರ ಆತ್ಮೀಯ ಶುಭಾಶಯಗಳು ಮತ್ತು ಅಭಿನಂದನಾ ಸಂದೇಶಗಳಿಗಾಗಿ ತಮ್ಮ ಹೃತ್ಪೂರ್ವಕವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಶುಭಾಶಯಗಳಿಂದ ತೀವ್ರವಾಗಿ ಪ್ರಭಾವಿತರಾದ ಅವರು, ಭಾರತಕ್ಕೆ ಸೇವೆ ಸಲ್ಲಿಸುವುದು ಮತ್ತು ರಾಷ್ಟ್ರದ ಅಭಿವೃದ್ಧಿಯ ಹಾದಿಯಲ್ಲಿ ಕೊಡುಗೆ ನೀಡುವುದು ತಮ್ಮ ಒಂದು ಸೌಭಾಗ್ಯ ಎಂದು ಹೇಳಿದರು. ಜನರ ನಂಬಿಕೆಯೇ ತಮ್ಮ ಶಕ್ತಿಯ ದೊಡ್ಡ ಮೂಲ ಎಂದು ಒತ್ತಿ ಹೇಳಿದ ಪ್ರಧಾನಿಯವರು, ವಿಕಸಿತ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸಲು, 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ಭಾರತದ ಜಾಗತಿಕ ಪಾಲುದಾರಿಕೆಗಳನ್ನು ಮತ್ತಷ್ಟು ಬಲಪಡಿಸಲು ಇನ್ನೂ ಹೆಚ್ಚಿನ ಸಮರ್ಪಣೆಯೊಂದಿಗೆ ಕೆಲಸ ಮಾಡುವ ತಮ್ಮ ಸಂಪೂರ್ಣ ಬದ್ಧತೆಯನ್ನು ಪುನರುಚ್ಚರಿಸಿದರು.

ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿದ ಜಪಾನ್ ವಿದೇಶಾಂಗ ವ್ಯವಹಾರಗಳ ಸಚಿವರು

May 26th, 08:13 pm

ಜಪಾನ್‌ನ ವಿದೇಶಾಂಗ ವ್ಯವಹಾರಗಳ ಸಚಿವರಾದ ಶ್ರೀ ತೋಶಿಮಿಟ್ಸು ಮೊಟೆಗಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಫೆಬ್ರವರಿ 16ರಂದು ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ಅನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ

February 15th, 02:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2026ರ ಫೆಬ್ರವರಿ 16ರಂದು ಸಂಜೆ 5 ಗಂಟೆಗೆ ನವದೆಹಲಿಯ ಭಾರತ್ ಮಂಟಪದಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ ಪೋ 2026 ಅನ್ನು ಉದ್ಘಾಟಿಸಲಿದ್ದಾರೆ.

ಜಪಾನ್ ನ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಸನೈ ಟಕೈಚಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

February 08th, 09:34 pm

ಜಪಾನ್ ನ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಘನತೆವೆತ್ತ ಸನೈ ತಕೈಚಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಅವರ ಉತ್ತರ

February 05th, 05:35 pm

ವಂದನಾ ನಿರ್ಣಯಕ್ಕೆ ಬೆಂಬಲವಾಗಿ ಈ ಸದನದ ಮುಂದೆ ನನ್ನ ಭಾವನೆಗಳನ್ನು ಮಂಡಿಸುವುದು ನನ್ನ ಸೌಭಾಗ್ಯವೇ ಸರಿ.

ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಉತ್ತರ

February 05th, 05:00 pm

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ರಾಜ್ಯಸಭೆಯಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರಿಸಿದರು. ಸದನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ರಾಷ್ಟ್ರಪತಿಗಳ ಭಾಷಣಕ್ಕೆ ಕೃತಜ್ಞತೆ ಸಲ್ಲಿಸುತ್ತಾ, ವಂದನಾ ನಿರ್ಣಯವನ್ನು ಬೆಂಬಲಿಸಿ ತಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಸೌಭಾಗ್ಯ ತಮಗೆ ಸಿಕ್ಕಿದೆ ಎಂದು ಹೇಳಿದರು. ಕಳೆದ ವರ್ಷದಲ್ಲಿ ಅಭಿವೃದ್ಧಿ ಹೊಂದಿದ ಭಾರತದತ್ತ ಸಾಗುವ ಪ್ರಯಾಣದಲ್ಲಿ ತ್ವರಿತ ಪ್ರಗತಿಯಾಗಿದ್ದು, ಪ್ರತಿಯೊಂದು ವಲಯದಲ್ಲಿ ಮತ್ತು ಸಮಾಜದ ಎಲ್ಲಾ ವರ್ಗಗಳಲ್ಲಿ ಪರಿವರ್ತನೆ ಗೋಚರಿಸುತ್ತಿದೆ, ರಾಷ್ಟ್ರವು ಸರಿಯಾದ ದಿಕ್ಕಿನಲ್ಲಿ ಹೆಚ್ಚಿನ ವೇಗದಲ್ಲಿ ಮುಂದುವರಿಯುತ್ತಿದೆ ಎಂದು ಹೇಳಿದರು. ರಾಷ್ಟ್ರಪತಿಗಳು ಈ ವಿಷಯಗಳನ್ನು ಸೂಕ್ಷ್ಮತೆ ಮತ್ತು ಸ್ಪಷ್ಟತೆಯೊಂದಿಗೆ ಪ್ರಸ್ತುತಪಡಿಸಿದ್ದಾರೆ ಎಂಬುದನ್ನೂ ಶ್ರೀ ಮೋದಿ ಉಲ್ಲೇಖಿಸಿದರು.

ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷ(ಕಳೇಬರ)ಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನದ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 03rd, 12:00 pm

ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಗಜೇಂದ್ರ ಸಿಂಗ್ ಶೇಖಾವತ್ ಜಿ, ಕಿರಣ್ ರಿಜಿಜು ಜಿ, ರಾಮದಾಸ್ ಅಠಾವಳೆ ಜಿ, ದೆಹಲಿಯ ಮುಖ್ಯಮಂತ್ರಿ ರಾವ್ ಇಂದರ್ಜಿತ್ ಜಿ, ದೆಹಲಿಯ ಎಲ್ಲಾ ಸಚಿವರೆ, ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಶ್ರೀ ಸಕ್ಸೇನಾ ಜಿ, ಗೌರವಾನ್ವಿತ ರಾಜತಾಂತ್ರಿಕ ಸದಸ್ಯರೆ, ಬೌದ್ಧ ವಿದ್ವಾಂಸರು, ಧಮ್ಮ ಅನುಯಾಯಿಗಳು, ಮಹಿಳೆಯರೆ ಮತ್ತು ಮಹನೀಯರೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಭವ್ಯ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು

January 03rd, 11:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ರಾಯ್ ಪಿತೋರಾ ಸಾಂಸ್ಕೃತಿಕ ಸಂಕೀರ್ಣದಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ದಿ ಲೈಟ್ ಅಂಡ್ ದಿ ಲೋಟಸ್: ರೆಲಿಕ್ಸ್ ಆಫ್ ದಿ ಅವೇಕನ್ಡ್ ಒನ್ ಎಂಬ ಹೆಸರಿನ ಬೃಹತ್ ಅಂತಾರಾಷ್ಟ್ರೀಯ ಪ್ರದರ್ಶನವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ನೂರ ಇಪ್ಪತ್ತೈದು ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ, ಭಾರತದ ಪರಂಪರೆ ಮತ್ತು ಸಾಂಸ್ಕೃತಿಕ ಆಸ್ತಿ ಇಂದು ಮರಳಿ ಬಂದಿದೆ, ಎಂದು ಹರ್ಷ ವ್ಯಕ್ತಪಡಿಸಿದರು. ಇಂದಿನಿಂದ ಭಾರತದ ಜನತೆ ಭಗವಾನ್ ಬುದ್ಧನ ಈ ಪವಿತ್ರ ಅವಶೇಷಗಳನ್ನು ದರ್ಶಿಸಲು ಮತ್ತು ಅವರ ಆಶೀರ್ವಾದವನ್ನು ಪಡೆಯಲು ಸಾಧ್ಯವಾಗಲಿದೆ ಎಂದು ಅವರು ಒತ್ತಿ ಹೇಳಿದರು. ಈ ಮಂಗಳಕರ ಸಂದರ್ಭದಲ್ಲಿ ಉಪಸ್ಥಿತರಿದ್ದ ಎಲ್ಲಾ ಅತಿಥಿಗಳನ್ನು ಶ್ರೀ ಮೋದಿ ಅವರು ಸ್ವಾಗತಿಸಿ, ಶುಭಾಶಯಗಳನ್ನು ಕೋರಿದರು. ಬೌದ್ಧ ಪರಂಪರೆಯ ಭಿಕ್ಷುಗಳು ಮತ್ತು ಧರ್ಮಾಚಾರ್ಯರ ಉಪಸ್ಥಿತಿಯನ್ನು ಶ್ಲಾಘಿಸಿದ ಅವರು, ಅವರ ಸಮ್ಮುಖವು ಈ ಕಾರ್ಯಕ್ರಮಕ್ಕೆ ಹೊಸ ಚೈತನ್ಯವನ್ನು ನೀಡಿದೆ ಎಂದು ಗೌರವಪೂರ್ವಕವಾಗಿ ತಿಳಿಸಿದರು. 2026ರ ವರ್ಷದ ಆರಂಭದಲ್ಲಿಯೇ ನಡೆಯುತ್ತಿರುವ ಈ ಮಂಗಳಕರ ಆಚರಣೆಯು ಅತ್ಯಂತ ಸ್ಪೂರ್ತಿದಾಯಕವಾಗಿದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಭಗವಾನ್ ಬುದ್ಧನ ಆಶೀರ್ವಾದದೊಂದಿಗೆ, 2026ನೇ ವರ್ಷವು ಇಡೀ ಜಗತ್ತಿಗೆ ಶಾಂತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಯುಗವನ್ನು ತರಲಿ ಎಂದು ಅವರು ಹಾರೈಸಿದರು.

ಜೋಹಾನ್ಸ್‌ಬರ್ಗ್‌ ನಲ್ಲಿ ನಡೆದ ಜಿ-20 ನಾಯಕರ ಶೃಂಗಸಭೆಯ ನೇಪಥ್ಯದಲ್ಲಿ ಜಪಾನ್ ಪ್ರಧಾನಮಂತ್ರಿ ಅವರನ್ನು ಭೇಟಿಯಾದ ಪ್ರಧಾನಮಂತ್ರಿ

November 23rd, 09:46 pm

ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ ನಲ್ಲಿ ನಡೆದ ಜಿ-20 ನಾಯಕರ ಶೃಂಗಸಭೆಯ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್ ಪ್ರಧಾನಮಂತ್ರಿ ಘನತೆವೆತ್ತ ಸಾನೇ ತಕೈಚಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಅಕ್ಟೋಬರ್ 29, 2025 ರಂದು ದೂರವಾಣಿ ಕರೆ ಮಾಡಿದ ನಂತರ ಪ್ರಧಾನಮಂತ್ರಿ ತಕೈಚಿ ಅವರೊಂದಿಗಿನ ಪ್ರಧಾನಮಂತ್ರಿ ಅವರ ಮೊದಲ ಮುಖಾಮುಖಿ ಸಭೆ ಇದಾಗಿದೆ.

ಜಪಾನ್ ಪ್ರಧಾನಮಂತ್ರಿ ಗೌರವಾನ್ವಿತ ಸನೇ ತಕೈಚಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ; ಭಾರತ-ಜಪಾನ್ ವಿಶೇಷ ಕಾರ್ಯತಾಂತ್ರಿಕ ಮತ್ತು ಜಾಗತಿಕ ಸಹಭಾಗಿತ್ವ ಮತ್ತಷ್ಟು ಮುಂದುವರಿಸುವ ಬಗ್ಗೆ ಚರ್ಚೆ

October 29th, 01:14 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಪಾನ್ ಪ್ರಧಾನಮಂತ್ರಿ ಗೌರವಾನ್ವಿತ ಸನೇ ತಕೈಚಿ ಅವರೊಂದಿಗೆ ಆತ್ಮೀಯ ಮಾತುಕತೆ ನಡೆಸಿದರು.

ಜಪಾನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಘನತೆವೆತ್ತ ಶ್ರೀಮತಿ ಸನೈ ಟಕೈಚಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

October 21st, 11:24 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಪಾನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾದ ಘನತೆವೆತ್ತ ಶ್ರೀಮತಿ ಸನೆ ತಕೈಚಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಂದೇಶದಲ್ಲಿ ಭಾರತ-ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಬದ್ಧತೆಯನ್ನು ವ್ಯಕ್ತಪಡಿಸಿದ್ದಾರೆ.

ಪ್ರಧಾನಮಂತ್ರಿ ಅವರಿಂದ ಅಕ್ಟೋಬರ್ 8ರಂದು 9ನೇ ಆವೃತ್ತಿಯ ಇಂಡಿಯನ್ ಮೊಬೈಲ್ ಕಾಂಗ್ರೆಸ್ ಉದ್ಘಾಟನೆ

October 07th, 10:27 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯ ಯಶೋಭೂಮಿಯಲ್ಲಿ 2025ರ ಅಕ್ಟೋಬರ್‌ 8ರಂದು ಏಷ್ಯಾದ ಅತಿದೊಡ್ಡ ದೂರಸಂಪರ್ಕ, ಮಾಧ್ಯಮ ಮತ್ತು ತಂತ್ರಜ್ಞಾನ ಕಾರ್ಯಕ್ರಮ ಇಂಡಿಯಾ ಮೊಬೈಲ್ ಕಾಂಗ್ರೆಸ್ (ಐಎಂಸಿ)ಯ 9ನೇ ಆವೃತ್ತಿಯನ್ನು ಉದ್ಘಾಟಿಸಲಿದ್ದಾರೆ.

ನವದೆಹಲಿಯಲ್ಲಿ ಜ್ಞಾನ ಭಾರತಂ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

September 12th, 04:54 pm

ಇಂದು ವಿಜ್ಞಾನ ಭವನವು ಭಾರತದ ಸುವರ್ಣ ಗತಕಾಲದ ಪುನರುಜ್ಜೀವನಕ್ಕೆ ಸಾಕ್ಷಿಯಾಗಿದೆ. ಕೆಲವು ದಿನಗಳ ಹಿಂದೆ, ನಾನು ಜ್ಞಾನ ಭಾರತಂ ಮಿಷನ್ ಅನ್ನು ಘೋಷಿಸಿದೆ. ಇಂದು ಇಷ್ಟು ಕಡಿಮೆ ಸಮಯದಲ್ಲಿ ನಾವು ಜ್ಞಾನ ಭಾರತಂ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸುತ್ತಿದ್ದೇವೆ. ಇದಕ್ಕೆ ಸಂಬಂಧಿಸಿದ ಪೋರ್ಟಲ್ ಅನ್ನು ಸಹ ಇತ್ತೀಚೆಗೆ ಪ್ರಾರಂಭಿಸಲಾಗಿದೆ. ಇದು ಸರ್ಕಾರಿ ಅಥವಾ ಶೈಕ್ಷಣಿಕ ಘಟನೆಯಲ್ಲ; ಜ್ಞಾನ ಭಾರತಂ ಆಂದೋಲನ ಭಾರತದ ಸಂಸ್ಕೃತಿ, ಸಾಹಿತ್ಯ ಮತ್ತು ಪ್ರಜ್ಞೆಯ ಘೋಷಣೆಯಾಗಲಿದೆ. ಸಾವಿರಾರು ತಲೆಮಾರುಗಳ ಆಲೋಚನೆಗಳು ಮತ್ತು ಚಿಂತನೆಗಳು, ಭಾರತದ ಮಹಾನ್ ಸಂತರು ಮತ್ತು ವಿದ್ವಾಂಸರ ಬುದ್ಧಿವಂತಿಕೆ ಮತ್ತು ಸಂಶೋಧನೆ, ನಮ್ಮ ಜ್ಞಾನ ಸಂಪ್ರದಾಯಗಳು, ನಮ್ಮ ವೈಜ್ಞಾನಿಕ ಪರಂಪರೆ, ನಾವು ಜ್ಞಾನ ಭಾರತಂ ಮಿಷನ್ ಮೂಲಕ ಅವುಗಳನ್ನು ಡಿಜಿಟಲೀಕರಣಗೊಳಿಸಲಿದ್ದೇವೆ. ಈ ಆಂದೋಲನಕ್ಕಾಗಿ ನಾನು ಎಲ್ಲಾ ದೇಶವಾಸಿಗಳನ್ನು ಅಭಿನಂದಿಸುತ್ತೇನೆ. ಜ್ಞಾನ ಭಾರತಂನ ಇಡೀ ತಂಡಕ್ಕೆ ಮತ್ತು ಸಂಸ್ಕೃತಿ ಸಚಿವಾಲಯಕ್ಕೆ ನಾನು ಶುಭ ಹಾರೈಸುತ್ತೇನೆ.