Prime Minister pays tribute to Bhagat Singh, Rajguru, and Sukhdev on Shaheed Diwas

March 23rd, 08:29 am

On the occasion of Shaheed Diwas, PM Modi paid rich tributes to the great freedom fighters Bhagat Singh, Rajguru and Sukhdev. Lauding their bravery, he observed that the martyrdom of these iconic heroes for the nation remains deeply etched in India's collective memory. He highlighted that they chose the path of sacrifice with conviction, placing the nation above their own lives..

Prime Minister pays tribute to Dr. Ram Manohar Lohia on his birth anniversary

March 23rd, 08:01 am

Prime Minister Shri Narendra Modi today paid rich tributes to the legendary socialist leader and thinker, Dr. Ram Manohar Lohia, on the occasion of his birth anniversary.

PM Modi addresses an enthusiastic public rally in Madurai, Tamil Nadu

March 01st, 04:30 pm

PM Modi addressed a massive public rally in Madurai, beginning his speech with deep reverence for Tamil Nadu’s spiritual heritage. He said he had just visited Tirupparankundram and received the darshan of Bhagwan Murugan, describing it as a truly pine experience. He said he prayed for the prosperity of Tamil Nadu and the entire nation.

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

February 19th, 08:48 am

ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಈ ದಾರ್ಶನಿಕ ನಾಯಕ, ಅಸಾಧಾರಣ ಆಡಳಿತಗಾರ, ಕಾರ್ಯತಂತ್ರದ ಚಿಂತಕ ಮತ್ತು ಸ್ವರಾಜ್ಯದ ಪ್ರತಿಪಾದಕರಿಗೆ ಗೌರವ ನಮನ ಸಲ್ಲಿಸಿದರು.

ರಾಜ್‌ಘಾಟ್ ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು

January 30th, 01:54 pm

ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಪುಣ್ಯತಿಥಿಯಂದು ಇಂದು ರಾಜ್‌ಘಾಟ್ ನಲ್ಲಿ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಬಾಪು ಅವರ ಕಾಲಾತೀತ ಆದರ್ಶಗಳು ನಮ್ಮ ರಾಷ್ಟ್ರದ ಪ್ರಯಾಣಕ್ಕೆ ಮಾರ್ಗದರ್ಶನ ನೀಡುತ್ತಿವೆ ಎಂದು ಶ್ರೀ ಮೋದಿ ಅವರು ಹೇಳಿದರು. ನ್ಯಾಯ, ಸಾಮರಸ್ಯ ಮತ್ತು ಮಾನವೀಯತೆಯ ಸೇವೆಯಲ್ಲಿ ಬೇರೂರಿರುವ ಭಾರತವನ್ನು ನಿರ್ಮಿಸಲು ಮತ್ತು ಅವರ ತತ್ವಗಳಿಗೆ ನಮ್ಮ ಬದ್ಧತೆಯನ್ನು ನಾವು ಪುನರುಚ್ಚರಿಸುತ್ತೇವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು.

ಸಾವಿತ್ರಿಬಾಯಿ ಫುಲೆ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ

January 03rd, 08:07 am

ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೇವೆ ಮತ್ತು ಶಿಕ್ಷಣದ ಮೂಲಕ ಸಮಾಜದ ಪರಿವರ್ತನೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಪ್ರವರ್ತಕ ಸಮಾಜ ಸುಧಾರಕರನ್ನು ಸ್ಮರಿಸಿದರು.

ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

November 25th, 04:40 pm

ಹರಿಯಾಣ ರಾಜ್ಯಪಾಲರಾದ ಆಶಿಮ್ ಘೋಷ್ ಜಿ, ಜನಪ್ರಿಯ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜಿ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಮನೋಹರ್ ಲಾಲ್ ಜಿ, ರಾವ್ ಇಂದರ್ಜಿತ್ ಸಿಂಗ್ ಜಿ, ಕೃಷನ್ ಪಾಲ್ ಜಿ, ಹರಿಯಾಣ ಎಸ್‌ಜಿಪಿಸಿ ಅಧ್ಯಕ್ಷ ಜಗದೀಶ್ ಸಿಂಗ್ ಜಿಂದಾ ಜಿ, ಇತರೆ ಗಣ್ಯರೆ, ಮಹಿಳೆಯರೆ ಮತ್ತು ಮಹನೀಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹರಿಯಾಣದ ಕುರುಕ್ಷೇತ್ರದಲ್ಲಿ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು

November 25th, 04:38 pm

ಹರಿಯಾಣದ ಕುರುಕ್ಷೇತ್ರದಲ್ಲಿ ಇಂದು ನಡೆದ ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಹುತಾತ್ಮ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಇಂದು ಭಾರತದ ಪರಂಪರೆಯ ಮಹತ್ವದ ಸಂಗಮವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು. ತಾವು ಬೆಳಿಗ್ಗೆ ರಾಮಾಯಣ ನಗರವಾದ ಅಯೋಧ್ಯೆಯಲ್ಲಿ ಮತ್ತು ಈಗ ಗೀತಾ ನಗರವಾದ ಕುರುಕ್ಷೇತ್ರದಲ್ಲಿರುವುದಾಗಿ ಅವರು ಉಲ್ಲೇಖಿಸಿದರು. ಶ್ರೀ ಗುರು ತೇಜ್ ಬಹದ್ದೂರ್ ಅವರ 350 ನೇ ಹುತಾತ್ಮ ದಿನಾಚರಣೆಯ ಸಂದರ್ಭದಲ್ಲಿ ಎಲ್ಲರೂ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಸಂತರು ಮತ್ತು ಗಣ್ಯರ ಉಪಸ್ಥಿತಿಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು ಮತ್ತು ಎಲ್ಲರಿಗೂ ಗೌರವದಿಂದ ನಮಸ್ಕರಿಸಿದರು.

ಹೊಸದಿಲ್ಲಿಯಲ್ಲಿ ಕಾನೂನು ನೆರವು ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವಿಕೆ ಕುರಿತ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ

November 08th, 05:33 pm

ಸಿಜೆಐ ಶ್ರೀ ಬಿ ಆರ್ ಗವಾಯಿ ಜೀ, ನ್ಯಾಯಮೂರ್ತಿ ಸೂರ್ಯ ಕಾಂತ್ ಜೀ, ನ್ಯಾಯಮೂರ್ತಿ ವಿಕ್ರಮ್ ನಾಥ್ ಜೀ, ಕೇಂದ್ರದಲ್ಲಿ ನನ್ನ ಸಹೋದ್ಯೋಗಿ ಅರ್ಜುನ್ ರಾಮ್ ಮೇಘವಾಲ್ ಜೀ, ಸುಪ್ರೀಂ ಕೋರ್ಟ್‌ನ ಇತರ ಗೌರವಾನ್ವಿತ ನ್ಯಾಯಮೂರ್ತಿಗಳು, ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು, ಹಾಗು ಮಹಿಳೆಯರೇ ಮತ್ತು ಮಹನೀಯರೇ,

"ಕಾನೂನು ನೆರವು ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವುದು" ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

November 08th, 05:00 pm

ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ಇಂದು ನಡೆದ ಕಾನೂನು ನೆರವು ವಿತರಣಾ ಕಾರ್ಯವಿಧಾನಗಳನ್ನು ಬಲಪಡಿಸುವುದು ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶ್ರೀ ಮೋದಿ ಅವರು, ಈ ಮಹತ್ವದ ಸಂದರ್ಭದಲ್ಲಿ ನೆರೆದಿರುವ ನಿಮ್ಮೆಲ್ಲರ ನಡುವೆ ಇರುವುದು ನಿಜವಾಗಿಯೂ ವಿಶೇಷವಾದದ್ದು ಎಂದು ಹೇಳಿದರು. ಕಾನೂನು ನೆರವು ವಿತರಣಾ ವ್ಯವಸ್ಥೆಯನ್ನು ಬಲಪಡಿಸುವುದು ಮತ್ತು ಕಾನೂನು ಸೇವಾ ದಿನಕ್ಕೆ ಸಂಬಂಧಿಸಿದ ಕಾರ್ಯಕ್ರಮವು ಭಾರತದ ನ್ಯಾಯಾಂಗ ವ್ಯವಸ್ಥೆಗೆ ಹೊಸ ಶಕ್ತಿಯನ್ನು ನೀಡುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. 20ನೇ ರಾಷ್ಟ್ರೀಯ ಸಮ್ಮೇಳನಕ್ಕೆ ಪ್ರಧಾನಮಂತ್ರಿ ಅವರು ಎಲ್ಲರಿಗೂ ಶುಭ ಹಾರೈಸಿದರು. ಅಲ್ಲದೆ, ಉಪಸ್ಥಿತರಿದ್ದ ಗಣ್ಯರು, ನ್ಯಾಯಾಂಗದ ಸದಸ್ಯರು ಹಾಗೂ ಕಾನೂನು ಸೇವಾ ಪ್ರಾಧಿಕಾರಗಳ ಪ್ರತಿನಿಧಿಗಳಿಗೆ ಅವರು ಶುಭಾಶಯ ಕೋರಿದರು.

ಶ್ರೀ ಗುರು ಗೋಬಿಂದ್ ಸಿಂಗ್ ಮತ್ತು ಮಾತಾ ಸಾಹಿಬ್ ಕೌರ್ ಅವರ ಅತ್ಯಂತ ಪುಣ್ಯಮಯ ಮತ್ತು ಅಮೂಲ್ಯವಾದ ಪವಿತ್ರ 'ಜೋರೆ ಸಾಹಿಬ್' ನ ಸುರಕ್ಷತೆ ಮತ್ತು ಸೂಕ್ತ ಪ್ರದರ್ಶನಕ್ಕೆ ಸಂಬಂಧಿಸಿದ ಶಿಫಾರಸ್ಸು ಸಲ್ಲಿಸಿರುವ ಸಿಖ್ ನಿಯೋಗದ ಗಣ್ಯರು ಮತ್ತು ಕೌಶಲ್ಯಯುತ ಸದಸ್ಯರಿಗೆ ಪ್ರಧಾನಮಂತ್ರಿ ಸ್ವಾಗತ

September 19th, 04:28 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಿಖ್ ನಿಯೋಗದ ಗಣ್ಯರು ಮತ್ತು ಕೌಶಲ್ಯಯುತ ಸದಸ್ಯರನ್ನು ಬರಮಾಡಿಕೊಂಡರು. ಅವರು ಶ್ರೀ ಗುರು ಗೋವಿಂದ ಸಿಂಗ್ ಮತ್ತು ಮಾತಾ ಸಾಹಿಬ್ ಕೌರ್ ಅವರ ಅತ್ಯಂತ ಪುಣ್ಯ ಮತ್ತು ಅಮೂಲ್ಯವಾದ ಪವಿತ್ರ 'ಜೋರ್ ಸಾಹಿಬ್' ನ ಸುರಕ್ಷತೆ ಮತ್ತು ಸೂಕ್ತ ಪ್ರದರ್ಶನಕ್ಕೆ ಸಂಬಂಧಿಸಿದಂತೆ ತಮ್ಮ ಶಿಫಾರಸುಗಳನ್ನು ಸಲ್ಲಿಸಿದರು. ಸಿಖ್ ಇತಿಹಾಸದ ಭವ್ಯ ಭಾಗವಾಗಿರುವ 'ಜೋರ್ ಸಾಹಿಬ್' ಆಧ್ಯಾತ್ಮಿಕವಾಗಿ ಪ್ರಮುಖವಾಗಿರುವಷ್ಟೇ ನಮ್ಮ ರಾಷ್ಟ್ರದ ಸಾಂಸ್ಕೃತಿಕ ಚೈತನ್ಯದ ಅಂಗವಾಗಿರುವ ಪವಿತ್ರ ಅವಶೇಷಗಳು ಸಹ ಮಹತ್ವದ್ದಾಗಿವೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. ಶ್ರೀ ಗುರು ಗೋವಿಂದ ಸಿಂಗ್ ಅವರು ತೋರಿದ ಶೌರ್ಯ, ಸದಾಚಾರ, ನ್ಯಾಯ ಮತ್ತು ಸಾಮಾಜಿಕ ಸಾಮರಸ್ಯದ ಮಾರ್ಗವನ್ನು ಅನುಸರಿಸಲು ಪವಿತ್ರ ಅವಶೇಷಗಳು ಭವಿಷ್ಯದ ಪೀಳಿಗೆಗೆ ಸ್ಫೂರ್ತಿ ನೀಡುತ್ತವೆ ಎಂದು ಶ್ರೀ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಗುಜರಾತ್‌ನ ಅಹಮದಾಬಾದ್‌ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 25th, 06:42 pm

ಇಂದು, ನೀವೆಲ್ಲರೂ ನಿಜವಾಗಿಯೂ ಉತ್ತಮ ವಾತಾವರಣ ಸೃಷ್ಟಿಸಿದ್ದೀರಿ. ಈ ಲಕ್ಷಾಂತರ ಜನರ ಪ್ರೀತಿ ಮತ್ತು ಆಶೀರ್ವಾದ ಪಡೆಯಲು ನಾನು ಎಷ್ಟು ಅದೃಷ್ಟಶಾಲಿ ಎಂದು ನಾನು ಅನೇಕ ಬಾರಿ ಭಾವಿಸಿದ್ದೇನೆ. ನಾನು ನಿಮಗೆ ಎಷ್ಟೇ ಧನ್ಯವಾದ ಹೇಳಿದರೂ ಅದು ಎಂದಿಗೂ ಮುಗಿಯುವುದಿಲ್ಲ. ನೋಡಿ, ಅಲ್ಲಿ ಸ್ವಲ್ಪ ನರೇಂದ್ರ ನಿಂತಿದ್ದಾನೆ!

ಗುಜರಾತಿನ ಅಹಮದಾಬಾದ್‌ ನಲ್ಲಿ 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಘಾಟನೆ, ಶಿಲಾನ್ಯಾಸ ಮತ್ತು ಲೋಕಾರ್ಪಣೆ ನೆರವೇರಿಸಿದರು

August 25th, 06:15 pm

ಗುಜರಾತಿನ ಅಹಮದಾಬಾದ್‌ ನಲ್ಲಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 5,400 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ, ಲೋಕಾರ್ಪಣೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ, ಇಡೀ ರಾಷ್ಟ್ರವು ಪ್ರಸ್ತುತ ಗಣೇಶೋತ್ಸವದ ಉತ್ಸಾಹದಲ್ಲಿ ಮುಳುಗಿದೆ ಎಂದು ಹೇಳಿದರು. ಗಣಪತಿ ಬಪ್ಪಾ ಆಶೀರ್ವಾದದೊಂದಿಗೆ, ಇಂದು ಗುಜರಾತಿನ ಪ್ರಗತಿಗೆ ಸಂಬಂಧಿಸಿದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಶುಭಾರಂಭ ಮಾಡಲಾಗಿದೆ. ಜನರ ಪಾದಾರವಿಂದಗಳಿಗೆ ಹಲವಾರು ಯೋಜನೆಗಳನ್ನು ಅರ್ಪಿಸುವ ಸೌಭಾಗ್ಯ ತಮಗೆ ದೊರೆತಿದೆ ಎಂದು ಅವರು ಹೇಳಿದರು ಮತ್ತು ಈ ಅಭಿವೃದ್ಧಿ ಉಪಕ್ರಮಗಳಿಗಾಗಿ ಎಲ್ಲಾ ನಾಗರಿಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.

ನಮೀಬಿಯಾದ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

July 09th, 08:14 pm

ಪ್ರಜಾಪ್ರಭುತ್ವದ ತಾಯಿ ಎನಿಸಿದ ದೇಶದ ಪ್ರತಿನಿಧಿಯಾಗಿ ನಾನು ನಿಮ್ಮ ಮುಂದೆ ನಿಂತಿದ್ದೇನೆ. ನಾನು ನನ್ನೊಂದಿಗೆ 140 ಕೋಟಿ ಭಾರತೀಯರ ಆತ್ಮೀಯ ಶುಭಾಶಯಗಳನ್ನು ತಂದಿದ್ದೇನೆ.

Prime Minister addresses the Namibian Parliament

July 09th, 08:00 pm

PM Modi addressed the Parliament of Namibia and expressed gratitude to the people of Namibia for conferring upon him their highest national honour. Recalling the historic ties and shared struggle for freedom between the two nations, he paid tribute to Dr. Sam Nujoma, the founding father of Namibia. He also called for enhanced people-to-people exchanges between the two countries.

ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿಯ ಕುರಿತು ಜಂಟಿ ಹೇಳಿಕೆ

July 05th, 09:02 am

ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯದ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಕಮಲಾ ಪರ್ಸಾದ್-ಬಿಸೆಸ್ಸಾರ್ ಅವರ ಆಹ್ವಾನದ ಮೇರೆಗೆ, ಜುಲೈ 3 ರಿಂದ 4, 2025 ರವರೆಗೆ ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು.

ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ʻಪ್ರಗತಿʼ ಸಭೆ

May 28th, 09:10 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೊದಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒಳಗೊಂಡ ಐಸಿಟಿ ಆಧಾರಿತ ಬಹು-ಮಾದರಿ ವೇದಿಕೆಯಾದ ʻಪ್ರಗತಿʼ (ಪಿ.ಆರ್.ಎ.ಜಿ.ಎ.ಟಿ.ಐ.) ಸಭೆಯ ಅಧ್ಯಕ್ಷತೆ ವಹಿಸಿದ್ದರು.

ತಿರುವಳ್ಳುವರ್ ದಿನದಂದು, ನಮ್ಮ ನಾಡಿನ ಶ್ರೇಷ್ಠ ತತ್ವಜ್ಞಾನಿಗಳು, ಕವಿಗಳು ಮತ್ತು ಚಿಂತಕರಲ್ಲಿ ಒಬ್ಬರಾದ ಧೀಮಂತ ತಿರುವಳ್ಳುವರ್ ಅವರನ್ನು ನಾವು ಸ್ಮರಿಸುತ್ತೇವೆ: ಪ್ರಧಾನಮಂತ್ರಿ

January 15th, 12:37 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಿರುವಳ್ಳುವರ್ ದಿನದಂದು ತಮಿಳಿನ ಮಹಾನ್ ತತ್ವಜ್ಞಾನಿ, ಕವಿ ಮತ್ತು ಚಿಂತಕರಾದ ತಿರುವಳ್ಳುವರ್ ಅವರನ್ನು ಸ್ಮರಿಸಿದ್ದಾರೆ. ಧೀಮಂತ ತಿರುವಳ್ಳವರ್ ಅವರ ವಚನ/ಪದ್ಯಗಳು ತಮಿಳು ಸಂಸ್ಕೃತಿಯ ಸಾರ ಮತ್ತು ನಮ್ಮ ತಾತ್ವಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ.

ಶ್ರೀ ಗುರು ತೇಜ್ ಬಹದ್ದೂರ್ ಅವರ ಹುತಾತ್ಮ ದಿನದಂದು ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ

December 06th, 08:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಶ್ರೀ ಗುರು ತೇಜ್ ಬಹದ್ದೂರ್ ಅವರ ಹುತಾತ್ಮ ದಿನದಂದು ಅವರಿಗೆ ಗೌರವ ನಮನ ಸಲ್ಲಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ನ್ಯಾಯ, ಸಮಾನತೆ ಮತ್ತು ಮಾನವೀಯತೆಯ ರಕ್ಷಣೆಯ ಮೌಲ್ಯಗಳಿಗಾಗಿ ಶ್ರೀ ಗುರು ತೇಜ್ ಬಹದ್ದೂರ್ ಜೀ ಅವರ ಸಾಟಿಯಿಲ್ಲದ ಧೈರ್ಯ ಮತ್ತು ತ್ಯಾಗವನ್ನು ಸ್ಮರಿಸಿದರು.

ಮೂರು ಹೊಸ ಕ್ರಿಮಿನಲ್ ಕಾನೂನುಗಳ ಯಶಸ್ವಿ ಅನುಷ್ಠಾನವನ್ನು ಚಂಡೀಗಢದಲ್ಲಿ ರಾಷ್ಟ್ರಕ್ಕೆ ಸಮರ್ಪಿಸಲಿರುವ ಪ್ರಧಾನಮಂತ್ರಿ ಮೋದಿ

December 02nd, 07:05 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೂರು ಪರಿವರ್ತಕ ಹೊಸ ಕ್ರಿಮಿನಲ್ ಕಾನೂನುಗಳಾದ - ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮಗಳ ಯಶಸ್ವಿ ಅನುಷ್ಠಾನವನ್ನು 2024ರ ಡಿಸೆಂಬರ್ 3 ರಂದು ಮಧ್ಯಾಹ್ನ 12 ಗಂಟೆಗೆ ಚಂಡೀಗಢದಲ್ಲಿ ದೇಶಕ್ಕೆ ಸಮರ್ಪಿಸಲಿದ್ದಾರೆ.