Cabinet approves three new corridors as part of Delhi Metro’s Phase V (A) Project

December 24th, 03:25 pm

The Union Cabinet approved three new corridors - 1. R.K Ashram Marg to Indraprastha (9.913 Kms), 2. Aerocity to IGD Airport T-1 (2.263 kms) 3. Tughlakabad to Kalindi Kunj (3.9 kms) as part of Delhi Metro’s Phase – V(A) project consisting of 16.076 kms which will further enhance connectivity within the national capital. Total project cost of Delhi Metro’s Phase – V(A) project is Rs.12014.91 crore, which will be sourced from Government of India, Government of Delhi, and international funding agencies.

ಯು.ಇ.ಆರ್-II ಮತ್ತು ದ್ವಾರಕಾ ಎಕ್ಸ್‌ಪ್ರೆಸ್‌ವೇಯ ದೆಹಲಿ ವಿಭಾಗದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಇಂಗ್ಲೀಷ್ ಅನುವಾದ

August 17th, 12:45 pm

ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ನಿತಿನ್ ಗಡ್ಕರಿ ಜೀ, ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಜೀ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಜೀ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಜೀ, ಕೇಂದ್ರ ಸಚಿವ ಸಂಪುಟದಲ್ಲಿರುವ ನನ್ನ ಸಹೋದ್ಯೋಗಿಗಳಾದ ಅಜಯ್ ತಮ್ತಾ ಜೀ, ಹರ್ಷ ಮಲ್ಹೋತ್ರಾ ಜೀ, ದೆಹಲಿ ಮತ್ತು ಹರಿಯಾಣದ ಸಂಸದರು, ಉಪಸ್ಥಿತರಿರುವ ಸಚಿವರು, ಇತರ ಜನಪ್ರತಿನಿಧಿಗಳು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ,

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 11,000 ಕೋಟಿ ರೂಪಾಯಿ ಮೌಲ್ಯದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು

August 17th, 12:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೆಹಲಿಯ ರೋಹಿಣಿಯಲ್ಲಿ ಸುಮಾರು 11,000 ಕೋಟಿ ರೂ.ಗಳ ಒಟ್ಟಾರೆ ವೆಚ್ಚದ ಎರಡು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಉದ್ಘಾಟಿಸಿದರು. ಸಭಿಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು ಕಾರ್ಯಕ್ರಮ ನಡೆಯುತ್ತಿರುವ ಸ್ಥಳದ ಮಹತ್ವವನ್ನು ಒತ್ತಿ ಹೇಳಿದರು. ಉದ್ಘಾಟಿಸಲಾದ ʻಎಕ್ಸ್‌ಪ್ರೆಸ್‌ ಹೆದ್ದಾರಿʼಯ ಹೆಸರು ದ್ವಾರಕಾ ಆಗಿರುವುದು ಮತ್ತು ಕಾರ್ಯಕ್ರಮವನ್ನು ರೋಹಿಣಿಯಲ್ಲಿ ನಡೆಸಲಾಗುತ್ತಿರುವುದು ವಿಶೇಷ ಎಂದು ಹೇಳಿದರು. ಕೃಷ್ಣ ಜನ್ಮಾಷ್ಟಮಿಯ ಹಬ್ಬದ ಉತ್ಸಾಹವನ್ನು ಎತ್ತಿ ತೋರಿದ ಪ್ರಧಾನಮಂತ್ರಿ ಮೋದಿ ಸ್ವತಃ ತಾವು ಸಹ ದ್ವಾರಕಾಧೀಶನ ಭೂಮಿಯಿಂದ ಬಂದವರು ಎಂಬ ಕಾಕತಾಳೀಯತೆಯ ಬಗ್ಗೆ ಗಮನ ಸೆಳೆದರು. ಇಡೀ ವಾತಾವರಣವು ಭಗವಾನ್ ಕೃಷ್ಣನ ಸಾರದಿಂದ ಆಳವಾಗಿ ಆವರಿಸಿದೆ ಎಂದು ಪ್ರಧಾನಮಂತ್ರಿ ಗಮನಿಸಿದರು.

ನವದೆಹಲಿಯಲ್ಲಿ ಸಂಸತ್‌ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾದ ಫ್ಲ್ಯಾಟ್‌ಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

August 11th, 11:00 am

ಶ್ರೀ ಓಂ ಬಿರ್ಲಾ ಜೀ, ಮನೋಹರ್‌ ಲಾಲ್‌ ಜೀ, ಕಿರಣ್‌ ರಿಜಿಜು ಜೀ, ಮಹೇಶ್‌ ಶರ್ಮಾ ಜೀ, ಎಲ್ಲಗೌರವಾನ್ವಿತ ಸಂಸತ್‌ ಸದಸ್ಯರು, ಲೋಕಸಭೆಯ ಪ್ರಧಾನ ಕಾರ್ಯದರ್ಶಿ, ಮಹಿಳೆಯರೇ ಮತ್ತು ಮಹನೀಯರೇ!

ನವದೆಹಲಿಯಲ್ಲಿ ಸಂಸದರಿಗಾಗಿ ಹೊಸದಾಗಿ ನಿರ್ಮಿಸಲಾದ ವಸತಿ ಸಮುಚ್ಚಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು

August 11th, 10:30 am

ನವದೆಹಲಿಯ ಬಾಬಾ ಖರಕ್ ಸಿಂಗ್ ಮಾರ್ಗದಲ್ಲಿ ಸಂಸತ್ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾದ 184 ಟೈಪ್-VII ಬಹುಮಹಡಿ ವಸತಿ ಸಮುಚ್ಚಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಕರ್ತವ್ಯ ಪಥದಲ್ಲಿರುವ ಕರ್ತವ್ಯ ಭವನ ಎಂದು ಕರೆಯಲಾಗುವ ಸಾಮಾನ್ಯ ಕೇಂದ್ರ ಸಚಿವಾಲಯವನ್ನು ಇತ್ತೀಚೆಗೆ ಉದ್ಘಾಟಿಸಿದೆ ಮತ್ತು ಇಂದು ಸಂಸದರಿಗಾಗಿ ಹೊಸದಾಗಿ ನಿರ್ಮಿಸಲಾದ ವಸತಿ ಸಮುಚ್ಚಯವನ್ನು ಉದ್ಘಾಟಿಸುವ ಅವಕಾಶ ದೊರೆತಿದೆ ಎಂದು ಹೇಳಿದರು. ಭಾರತದ ನಾಲ್ಕು ಮಹಾ ನದಿಗಳಾದ ಕೃಷ್ಣಾ, ಗೋದಾವರಿ, ಕೋಸಿ ಮತ್ತು ಹೂಗ್ಲಿ ಹೆಸರುಗಳನ್ನು ಸಮುಚ್ಚಯದ ನಾಲ್ಕು ಗೋಪುರಗಳಿಗೆ ಇಡಲಾಗಿದೆ. ಲಕ್ಷಾಂತರ ಜನರಿಗೆ ಬದುಕು ನೀಡುವ ಈ ನದಿಗಳು ಈಗ ಸಾರ್ವಜನಿಕ ಪ್ರತಿನಿಧಿಗಳ ಜೀವನದಲ್ಲಿ ಹೊಸ ಸಂತೋಷದ ಅಲೆಯನ್ನು ತರುತ್ತವೆ ಎಂದು ಅವರು ಹೇಳಿದರು. ನದಿಗಳಿಗೆ ಹೆಸರಿಡುವ ಸಂಪ್ರದಾಯವು ದೇಶವನ್ನು ಏಕತೆಯ ಎಳೆಯಲ್ಲಿ ಬಂಧಿಸುತ್ತದೆ ಎಂದು ಅವರು ಹೇಳಿದರು. ಈ ಹೊಸ ಸಮುಚ್ಚಯವು ದೆಹಲಿಯಲ್ಲಿ ಸಂಸದರ ಜೀವನವನ್ನು ಇನ್ನಷ್ಟು ಸುಲಭಗೊಳಿಸುತ್ತದೆ. ದೆಹಲಿಯಲ್ಲಿ ಸಂಸದರಿಗೆ ಸರ್ಕಾರಿ ವಸತಿ ಸೌಕರ್ಯಗಳು ಈಗ ಹೆಚ್ಚಾಗಲಿವೆ ಎಂದು ಅವರು ಹೇಳಿದರು. ಪ್ರಧಾನಮಂತ್ರಿಯವರು ಎಲ್ಲಾ ಸಂಸದರನ್ನು ಅಭಿನಂದಿಸಿದರು ಮತ್ತು ವಸತಿ ಸಮುಚ್ಚಯ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್ ಗಳು ಮತ್ತು ಕಾರ್ಮಿಕರನ್ನು ಶ್ಲಾಘಿಸಿದರು. ಯೋಜನೆಯನ್ನು ಪೂರ್ಣಗೊಳಿಸುವಲ್ಲಿ ಅವರ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಅವರು ಶ್ಲಾಘಿಸಿದರು.

ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನ ಉದ್ಘಾಟನಾ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 06th, 07:00 pm

ಕೇಂದ್ರ ಸಚಿವ ಸಂಪುಟದ ನನ್ನೆಲ್ಲಾ ಸಹೋದ್ಯೋಗಿಗಳೆ, ಇಲ್ಲಿ ಉಪಸ್ಥಿತರಿರುವ ಗೌರವಾನ್ವಿತ ಸಂಸತ್ ಸದಸ್ಯರೆ, ಎಲ್ಲಾ ಸರ್ಕಾರಿ ನೌಕರರೆ, ಇತರೆ ಗಣ್ಯ ಅತಿಥಿಗಳೆ, ಮಹಿಳೆಯರೆ ಮತ್ತು ಮಹನೀಯರೆ!

ನವದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು

August 06th, 06:30 pm

ನವದೆಹಲಿಯ ಕರ್ತವ್ಯ ಪಥದಲ್ಲಿ ಇಂದು ಕರ್ತವ್ಯ ಭವನ-3 ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕ್ರಾಂತಿಯ ಮಾಸವಾದ ಆಗಸ್ಟ್, ಆಗಸ್ಟ್ 15 ಕ್ಕೆ ಮುನ್ನವೇ ಮತ್ತೊಂದು ಐತಿಹಾಸಿಕ ಮೈಲಿಗಲ್ಲನ್ನು ತಂದಿದೆ ಎಂದು ಹೇಳಿದರು. ಆಧುನಿಕ ಭಾರತ ನಿರ್ಮಾಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಧನೆಗಳಿಗೆ ಭಾರತ ಸಾಕ್ಷಿಯಾಗುತ್ತಿದೆ ಎಂದು ಅವರು ಹೇಳಿದರು. ನವದೆಹಲಿಯ ಇತ್ತೀಚಿನ ಮೂಲಸೌಕರ್ಯಗಳಾದ ಕರ್ತವ್ಯ ಪಥ, ಹೊಸ ಸಂಸತ್ತು ಕಟ್ಟಡ, ಹೊಸ ರಕ್ಷಣಾ ಕಚೇರಿಗಳ ಸಂಕೀರ್ಣ, ಭಾರತ ಮಂಟಪ, ಯಶೋಭೂಮಿ, ಹುತಾತ್ಮರಿಗೆ ಸಮರ್ಪಿತವಾದ ರಾಷ್ಟ್ರೀಯ ಯುದ್ಧ ಸ್ಮಾರಕ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆ ಮತ್ತು ಕರ್ತವ್ಯ ಭವನದ ನಿರ್ಮಾಣ ಮುಂತಾದದವುಗಳನ್ನು ಪಟ್ಟಿಮಾಡಿದರು. ಇವು ಕೇವಲ ಹೊಸ ಕಟ್ಟಡಗಳು ಅಥವಾ ಸಾಮಾನ್ಯ ಮೂಲಸೌಕರ್ಯಗಳಲ್ಲ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿ , ಅಮೃತ ಕಾಲದಲ್ಲಿ, ಅಭಿವೃದ್ಧಿ ಹೊಂದಿದ ಭಾರತವನ್ನು ರೂಪಿಸುವ ನೀತಿಗಳನ್ನು ಈ ಕಟ್ಟಡಗಳಲ್ಲಿ ರೂಪಿಸಲಾಗುತ್ತಿದೆ ಮತ್ತು ಮುಂಬರುವ ದಶಕಗಳಲ್ಲಿ, ರಾಷ್ಟ್ರದ ದಿಕ್ಕನ್ನು ಈ ಸಂಸ್ಥೆಗಳು ನಿರ್ಧರಿಸುತ್ತವೆ ಎಂದು ಹೇಳಿದರು. ಕರ್ತವ್ಯ ಭವನದ ಉದ್ಘಾಟನೆಗಾಗಿ ಎಲ್ಲಾ ನಾಗರಿಕರನ್ನು ಅಭಿನಂದಿಸಿದ ಅವರು, ಅದರ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್‌ ಗಳು ಮತ್ತು ಕಾರ್ಮಿಕರಿಗೆ ಕೃತಜ್ಞತೆ ಸಲ್ಲಿಸಿದರು.

ಪ್ರಧಾನಮಂತ್ರಿ ಅವರಿಂದ ಕರ್ತವ್ಯ ಭವನ ರಾಷ್ಟ್ರಕ್ಕೆ ಸಮರ್ಪಣೆ

August 06th, 12:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕರ್ತವ್ಯ ಭವನವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಇದು ಸಾರ್ವಜನಿಕ ಸೇವೆಗೆ ಇರುವ ಅಚಲ ಬದ್ಧತೆ ಮತ್ತು ನಿರಂತರ ಪ್ರಯತ್ನದ ಸಂಕೇತ ಎಂದು ಬಣ್ಣಿಸಿದರು.

ಆಗಸ್ಟ್ 6 ರಂದು ಕರ್ತವ್ಯ ಭವನ ಉದ್ಘಾಟಿಸಲಿರುವ ಪ್ರಧಾನಮಂತ್ರಿ

August 04th, 05:44 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 6 ರಂದು ಮಧ್ಯಾಹ್ನ 12:15ರ ಸುಮಾರಿಗೆ ದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನಕ್ಕೆ ಭೇಟಿ ನೀಡಿ ಅದನ್ನು ಉದ್ಘಾಟಿಸಲಿದ್ದಾರೆ. ನಂತರ, ಪ್ರಧಾನ ಮಂತ್ರಿಗಳು ಸಂಜೆ 6:30ರ ಸುಮಾರಿಗೆ ಕರ್ತವ್ಯ ಪಥದ ಕುರಿತು ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.