ಕಾರ್ತಿಕ ಪೂರ್ಣಿಮೆ ಮತ್ತು ದೇವ ದೀಪಾವಳಿ ಪ್ರಯುಕ್ತ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ

November 05th, 10:08 am

ಇಂದು ಕಾರ್ತಿಕ ಪೂರ್ಣಿಮೆ ಮತ್ತು ದೇವ ದೀಪಾವಳಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಗೆ ಸಂಬಂಧಿಸಿದ ಈ ದೈವಿಕ ಗಳಿಗೆಯು ಎಲ್ಲರಿಗೂ ಸಂತೋಷ, ಶಾಂತಿ, ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ. ಪವಿತ್ರ ಸ್ನಾನ, ದಾನ, ಆರತಿ ಮತ್ತು ಪೂಜೆಯೊಂದಿಗೆ ಸಂಬಂಧಿಸಿದ ನಮ್ಮ ಪವಿತ್ರ ಸಂಪ್ರದಾಯವು ಪ್ರತಿಯೊಬ್ಬರ ಜೀವನವನ್ನು ಬೆಳಗಿಸಲಿ ಎಂದು ಶ್ರೀ ಮೋದಿ ಆಶಯ ವ್ಯಕ್ತಪಡಿಸಿದ್ದಾರೆ.