DMK is the biggest enemy of Tamil Nadu’s culture: PM Modi in Madhuranthakam

January 23rd, 03:15 pm

PM Modi addressed a public rally in Madhuranthakam, Tamil Nadu, where he said the people of the state had given the DMK a clear mandate twice, but the party betrayed the trust of the people. He added DMK made many promises but delivered zero results, adding that people are now calling it a CMC government, one that promotes corruption, mafia, and crime.

Tamil Nadu shows massive support for NDA at PM Modi’s Madhuranthakam rally

January 23rd, 03:00 pm

PM Modi addressed a public rally in Madhuranthakam, Tamil Nadu, where he said the people of the state had given the DMK a clear mandate twice, but the party betrayed the trust of the people. He added DMK made many promises but delivered zero results, adding that people are now calling it a CMC government, one that promotes corruption, mafia, and crime.

ನವದೆಹಲಿಯಲ್ಲಿ ನಡೆದ ಪೊಂಗಲ್ ಆಚರಣೆಯಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

January 14th, 11:00 am

ಇಂದು ಪೊಂಗಲ್ ನಿಜವಾಗಿಯೂ ಜಾಗತಿಕ ಹಬ್ಬವಾಗಿ ಮಾರ್ಪಟ್ಟಿದೆ. ಪ್ರಪಂಚದಾದ್ಯಂತ, ತಮಿಳು ಸಮುದಾಯ ಮತ್ತು ತಮಿಳು ಸಂಸ್ಕೃತಿಯನ್ನು ಪ್ರೀತಿಸುವವರು ಇದನ್ನು ಬಹಳ ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ನಾನು ಅವರಲ್ಲಿ ಒಬ್ಬನಾಗಿದ್ದೇನೆ. ಈ ವಿಶೇಷ ಹಬ್ಬವನ್ನು ಆಚರಿಸಲು ನಿಮ್ಮೊಂದಿಗೆ ಕೈಜೋಡಿಸುವುದು ನನ್ನ ಸೌಭಾಗ್ಯವಾಗಿದೆ. ತಮಿಳು ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವವಾಗಿದೆ. ಇದು ನಮ್ಮ ರೈತರು, ಭೂಮಿ ಮತ್ತು ಸೂರ್ಯನ ಬಗ್ಗೆ ಕೃತಜ್ಞತೆಯನ್ನು ಸಾಕಾರಗೊಳಿಸುತ್ತದೆ. ಇದು ಪ್ರಕೃತಿ, ಕುಟುಂಬ ಮತ್ತು ಸಮಾಜದೊಂದಿಗೆ ಸಾಮರಸ್ಯದ ಮಹತ್ವವನ್ನು ನಮಗೆ ಕಲಿಸುತ್ತದೆ. ಈ ಸಮಯದಲ್ಲಿ, ಭಾರತದ ಇತರ ಪ್ರದೇಶಗಳು ಸಹ ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಹೆಚ್ಚಿನವುಗಳಲ್ಲಿ ಮುಳುಗಿರುತ್ತವೆ. ಪೊಂಗಲ್ ಮತ್ತು ಈ ಎಲ್ಲಾ ಹಬ್ಬಗಳಲ್ಲಿ ನಾನು ಭಾರತ ಮತ್ತು ಪ್ರಪಂಚದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

ನವದೆಹಲಿಯಲ್ಲಿ ಪೊಂಗಲ್ ಆಚರಣೆಯನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

January 14th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನವದೆಹಲಿಯಲ್ಲಿಂದು ನಡೆದ ಪೊಂಗಲ್ ಆಚರಣೆಯನ್ನುದ್ದೇಶಿಸಿ ಮಾತನಾಡಿದರು. ತಮಿಳಿನಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದ ಶ್ರೀ ನರೇಂದ್ರ ಮೋದಿ, ”ಪೊಂಗಲ್ ಇಂದು ಜಾಗತಿಕ ಹಬ್ಬವಾಗಿದೆ’’ ಎಂದು ಒತ್ತಿ ಹೇಳಿದರು. ಈ ಹಬ್ಬವನ್ನು ತಮಿಳು ಸಮುದಾಯಗಳು ಮತ್ತು ಪ್ರಪಂಚದಾದ್ಯಂತ ತಮಿಳು ಸಂಸ್ಕೃತಿಯನ್ನು ಪಾಲಿಸುವವರು ಉತ್ಸಾಹದಿಂದ ಆಚರಿಸುತ್ತಾರೆ ಮತ್ತು ತಾವೂ ಅವರಲ್ಲಿ ಒಬ್ಬರು ಎಂದು ಹೇಳಿದರು. ಈ ವಿಶೇಷ ಹಬ್ಬವನ್ನು ಎಲ್ಲರ ಜೊತೆ ಸೇರಿ ಆಚರಿಸುವುದು ತಮ್ಮ ಅದೃಷ್ಟ ಎಂದು ಅವರು ಹೇಳಿದರು. ತಮಿಳು ಜನರ ಜೀವನದಲ್ಲಿ, ಪೊಂಗಲ್ ಒಂದು ಆಹ್ಲಾದಕರ ಅನುಭವದಂತೆ, ರೈತರು, ಭೂಮಿ ಮತ್ತು ಸೂರ್ಯನ ಶ್ರಮಕ್ಕೆ ಕೃತಜ್ಞತೆ ಸಲ್ಲಿಸುವುದನ್ನು ಸಾಕಾರಗೊಳಿಸುತ್ತದೆ ಮತ್ತು ಪ್ರಕೃತಿ, ಕುಟುಂಬ ಮತ್ತು ಸಮಾಜದಲ್ಲಿ ಸಮತೋಲನದತ್ತ ನಮಗೆ ಮಾರ್ಗದರ್ಶನ ನೀಡುತ್ತದೆ ಎಂದು ಪ್ರಧಾನಮಂತ್ರಿ ಉಲ್ಲೇಖಿಸಿದರು. ಇದೇ ವೇಳೆ ದೇಶದ ವಿವಿಧ ಭಾಗಗಳು ಲೋಹ್ರಿ, ಮಕರ ಸಂಕ್ರಾಂತಿ, ಮಾಘ ಬಿಹು ಮತ್ತು ಇತರ ಹಬ್ಬಗಳ ಆಚರಣೆಯಲ್ಲಿ ಮುಳುಗಿವೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಪೊಂಗಲ್ ಹಬ್ಬದಂದು ಭಾರತ ಮತ್ತು ವಿಶ್ವದಾದ್ಯಂತದ ಎಲ್ಲಾ ತಮಿಳು ಸಹೋದರ ಸಹೋದರಿಯರಿಗೆ ಅವರು ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು ಮತ್ತು ಇತರೆ ಎಲ್ಲಾ ಹಬ್ಬಗಳಿಗೆ ಶುಭ ಕೋರಿದರು.

ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

January 04th, 01:00 pm

ಉತ್ತರ ಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿ, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಜಿ, ಉತ್ತರ ಪ್ರದೇಶದ ಸಚಿವರಾದ ಸಹೋದರ ರವೀಂದ್ರ ಜೈಸ್ವಾಲ್ ಜಿ, ದಯಾಶಂಕರ್ ಜಿ, ಗಿರೀಶ್ ಯಾದವ್ ಜಿ, ಬನಾರಸ್ ಮೇಯರ್ ಅಶೋಕ್ ತಿವಾರಿ ಜಿ, ಇತರೆ ಜನಪ್ರತಿನಿಧಿಗಳೆ, ವಾಲಿಬಾಲ್ ಸಂಘಟನೆಯ ಎಲ್ಲಾ ಪದಾಧಿಕಾರಿಗಳೆ, ದೇಶಾದ್ಯಂತ ಬಂದಿರುವ ಆಟಗಾರರೆ ಮತ್ತು ಕಾಶಿಯ ನನ್ನ ಕುಟುಂಬ ಸದಸ್ಯರೆಲ್ಲರಿಗೂ ನಮಸ್ಕಾರ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಾರಣಾಸಿಯಲ್ಲಿ ʻ72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿʼಯನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ಉದ್ಘಾಟಿಸಿದರು

January 04th, 12:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ 72ನೇ ರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ವಾರಣಾಸಿಯ ಸಂಸತ್ ಸದಸ್ಯನಾಗಿ, ಎಲ್ಲಾ ಆಟಗಾರರನ್ನು ಸ್ವಾಗತಿಸಲು ಮತ್ತು ಅಭಿನಂದಿಸಲು ಸಂತಸವಾಗುತ್ತಿದೆ ಎಂದು ಹೇಳಿದರು. ರಾಷ್ಟ್ರೀಯ ವಾಲಿಬಾಲ್ ಚಾಂಪಿಯನ್‌ಶಿಪ್ ಇಂದಿನಿಂದ ವಾರಣಾಸಿಯಲ್ಲಿ ಪ್ರಾರಂಭವಾಗುತ್ತಿದೆ. ಆಟಗಾರರು ಅಪಾರ ಕಠಿಣ ಪರಿಶ್ರಮದ ಬಳಿಕ ಈ ರಾಷ್ಟ್ರೀಯ ಪಂದ್ಯಾವಳಿಯನ್ನು ತಲುಪಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ವಾರಣಾಸಿಯ ಮೈದಾನದಲ್ಲಿ ಅವರ ಪ್ರಯತ್ನಗಳನ್ನು ಪರೀಕ್ಷಿಗೆ ಒಡ್ಡಲಾಗುವುದು ಎಂದು ಪ್ರಧಾನಮಂತ್ರಿ ಒತ್ತಿ ಹೇಳಿದರು. ದೇಶದ 28 ರಾಜ್ಯಗಳ ತಂಡಗಳು ಒಟ್ಟುಗೂಡಿ ʻಏಕ ಭಾರತ, ಶ್ರೇಷ್ಠ ಭಾರತʼದ ಸುಂದರ ಚಿತ್ರಣವನ್ನು ಪ್ರಸ್ತುತಪಡಿಸಿವೆ ಎಂದು ಅವರು ಹೇಳಿದರು. ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ಆಟಗಾರರಿಗೆ ಪ್ರಧಾನಮಂತ್ರಿಯವರು ತಮ್ಮ ಶುಭಾಶಯಗಳನ್ನು ತಿಳಿಸಿದರು.

'ವಿಕಸಿತ್ ಭಾರತ'ದ ಸಂಕಲ್ಪ ಖಂಡಿತವಾಗಿಯೂ ಈಡೇರುತ್ತದೆ: ಪ್ರಧಾನಿ ಮೋದಿ ಮನ್ ಕಿ ಬಾತ್ ನಲ್ಲಿ

December 28th, 11:30 am

ವರ್ಷದ ಕೊನೆಯ ಮನ್ ಕಿ ಬಾತ್ ಸಂಚಿಕೆಯಲ್ಲಿ, ಪ್ರಧಾನಿ ಮೋದಿ 2025 ರಲ್ಲಿ ಭಾರತವು ರಾಷ್ಟ್ರೀಯ ಭದ್ರತೆ, ಕ್ರೀಡೆ, ವಿಜ್ಞಾನ ಪ್ರಯೋಗಾಲಯಗಳು ಮತ್ತು ಜಾಗತಿಕ ವೇದಿಕೆಗಳಲ್ಲಿ ತನ್ನ ಛಾಪು ಮೂಡಿಸಿದೆ ಎಂದು ಹೇಳಿದರು. 2026 ರಲ್ಲಿ ಹೊಸ ಸಂಕಲ್ಪಗಳೊಂದಿಗೆ ದೇಶವು ಮುಂದುವರಿಯಲು ಸಿದ್ಧವಾಗಿದೆ ಎಂದು ಅವರು ಆಶಿಸಿದರು. ವಿಕ್ಷಿತ್ ಭಾರತ್ ಯುವ ನಾಯಕರ ಸಂವಾದ, ರಸಪ್ರಶ್ನೆ ಸ್ಪರ್ಧೆ, ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2025 ಮತ್ತು ಫಿಟ್ ಇಂಡಿಯಾ ಆಂದೋಲನದಂತಹ ಯುವ ಕೇಂದ್ರಿತ ಉಪಕ್ರಮಗಳನ್ನು ಸಹ ಪ್ರಧಾನಿ ಎತ್ತಿ ತೋರಿಸಿದರು.

ಕಾಶಿ ತಮಿಳು ಸಂಗಮಕ್ಕೆ ಶುಭಾಶಯಗಳನ್ನು ಕೋರಿದ ಪ್ರಧಾನಮಂತ್ರಿ

December 02nd, 07:02 pm

ಇಂದಿನಿಂದ ಆರಂಭವಾಗಲಿರುವ ಕಾಶಿ ತಮಿಳು ಸಂಗಮಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ. ಈ ವೈಬ್ರೆಂಟ್‌ ಕಾರ್ಯಕ್ರಮವು ಏಕ್ ಭಾರತ್, ಶ್ರೇಷ್ಠ ಭಾರತ್’ ನ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. “ಸಂಗಮಕ್ಕೆ ಬರುವ ಎಲ್ಲರಿಗೂ ಕಾಶಿಯಲ್ಲಿ ಆಹ್ಲಾದಕರ ಮತ್ತು ಸ್ಮರಣೀಯ ವಾಸ್ತವ್ಯವಿರಲಿ ಎಂದು ನಾನು ಬಯಸುತ್ತೇನೆ..!’’ ಎಂದು ಶ್ರೀ ನರೇಂದ್ರ ಮೋದಿ ತಿಳಿಸಿದ್ದಾರೆ.

“ಸಾಂಸ್ಕೃತಿಕ ರಥದಲ್ಲಿ GenZ ಕೆಟಿಎಸ್ 4.0ನತ್ತ” ಪಯಣ ತಮಿಳುನಾಡಿನಿಂದ ಕಾಶಿಗೆ ಯುವ ಜನತೆಯ ಪಯಣ ‘ಸಾಂಸ್ಕೃತಿಕ ಆನಂದದ ಪ್ರಯಾಣ’ವಾಗಿ ಮಾರ್ಪಾಡು

November 30th, 06:56 pm

ಡಿಸೆಂಬರ್ 2ರಿಂದ ಆರಂಭವಾಗಲಿರುವ ಕಾಶಿ ತಮಿಳು ಸಂಗಮ 4.0ಗೆ ಜೆಡ್ ಪೀಳಿಗೆ GenZಯಲ್ಲಿ ಅತ್ಯುತ್ಸಾಹದ ಅಲೆ ಕಂಡುಬರುತ್ತಿದೆ. ಈ ಕಾರ್ಯಕ್ರಮ ಕಾಶಿ ಮತ್ತು ತಮಿಳುನಾಡಿನ ನಡುವಿನ ಪ್ರಾಚೀನ ಸಾಂಸ್ಕೃತಿಕ ಮತ್ತು ಭಾಷಾ ಬಾಂಧವ್ಯಗಳನ್ನು ಬೆಸೆಯಲು ಯುವಜನತೆಯಲ್ಲಿ ಸಕ್ರಿಯ ಶಕ್ತಿತುಂಬಿ ಅವರನ್ನು ಬೆಸೆಯುವ ಉದ್ದೇಶ ಹೊಂದಿದೆ.

'ಮನ್ ಕಿ ಬಾತ್' ಜನರ ಸಾಮೂಹಿಕ ಪ್ರಯತ್ನಗಳನ್ನು ಸಾರ್ವಜನಿಕರಿಗೆ ತಿಳಿಸಲು ಅತ್ಯುತ್ತಮ ವೇದಿಕೆಯಾಗಿದೆ: ಪ್ರಧಾನಿ ಮೋದಿ

November 30th, 11:30 am

ಈ ತಿಂಗಳ ಮನ್ ಕಿ ಬಾತ್ ನಲ್ಲಿ, ಪ್ರಧಾನಿ ಮೋದಿ ಅವರು ಸಂವಿಧಾನ ದಿನಾಚರಣೆ, ವಂದೇ ಮಾತರಂನ 150 ನೇ ವಾರ್ಷಿಕೋತ್ಸವ, ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ, ಐಎನ್ಎಸ್ 'ಮಹೆ' ಸೇರ್ಪಡೆ ಮತ್ತು ಕುರುಕ್ಷೇತ್ರದಲ್ಲಿ ಅಂತರರಾಷ್ಟ್ರೀಯ ಗೀತಾ ಮಹೋತ್ಸವ ಸೇರಿದಂತೆ ನವೆಂಬರ್ ತಿಂಗಳ ಪ್ರಮುಖ ಘಟನೆಗಳನ್ನು ಹೈಲೈಟ್ ಮಾಡಿದರು. ದಾಖಲೆಯ ಆಹಾರ ಧಾನ್ಯ ಮತ್ತು ಜೇನುತುಪ್ಪ ಉತ್ಪಾದನೆ, ಭಾರತದ ಕ್ರೀಡಾ ಯಶಸ್ಸುಗಳು, ವಸ್ತು ಸಂಗ್ರಹಾಲಯಗಳು ಮತ್ತು ನೈಸರ್ಗಿಕ ಕೃಷಿಯಂತಹ ಹಲವಾರು ಪ್ರಮುಖ ವಿಷಯಗಳನ್ನು ಸಹ ಅವರು ಸ್ಪರ್ಶಿಸಿದರು. ಎಲ್ಲರೂ ಕಾಶಿ-ತಮಿಳು ಸಂಗಮದ ಭಾಗವಾಗಬೇಕೆಂದು ಪ್ರಧಾನಿ ಒತ್ತಾಯಿಸಿದರು.

ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಆರ್ಯ ಮಹಾಸಮ್ಮೇಳನ 2025 ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 31st, 07:00 pm

ಮೊದಲಿಗೆ, ತಡವಾಗಿ ಬಂದಿದ್ದಕ್ಕಾಗಿ ನಾನುನಿಮ್ಮೆಲ್ಲರ ಕ್ಷಮೆ ಯಾಚಿಸುತ್ತೇನೆ. ಇಂದು ಸರ್ದಾರ್ ಸಾಹೇಬ್ ಅವರ 150ನೇ ಜನ್ಮ ದಿನಾಚರಣೆ. ಏಕ್ತಾ ನಗರದಲ್ಲಿರುವ ಏಕತಾ ಪ್ರತಿಮೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಆ ಕಾರ್ಯಕ್ರಮದಿಂದಾಗಿ, ನಾನು ಇಲ್ಲಿಗೆ ತಲುಪಲು ವಿಳಂಬವಾಯಿತು. ಸಮಯಕ್ಕೆ ಸರಿಯಾಗಿ ಆಗಮಿಸಲು ಮತ್ತು ಅದಕ್ಕಾಗಿ ನಿಮ್ಮ ಕ್ಷಮೆ ಕೇಳಲು ಸಾಧ್ಯವಾಗದಿದ್ದಕ್ಕೆ ನಾನು ನಿಜವಾಗಿಯೂ ವಿಷಾದಿಸುತ್ತೇನೆ. ಆರಂಭದಲ್ಲಿ ನಾವು ಕೇಳಿದ ಮಂತ್ರಗಳ ಶಕ್ತಿ ಮತ್ತು ಚೈತನ್ಯವನ್ನು ಇನ್ನೂ ನಾವೆಲ್ಲರೂ ಅನುಭವಿಸುತ್ತಿದ್ದೇವೆ. ನಿಮ್ಮೊಂದಿಗೆ ಬರಲು ಅವಕಾಶ ಸಿಕ್ಕಾಗಲೆಲ್ಲಾ ಇದು ನನಗೆ ದೈವಿಕ ಮತ್ತು ಅಸಾಧಾರಣ ಅನುಭವವಾಗಿದೆ. ಇದು ಸ್ವಾಮಿ ದಯಾನಂದ ಜಿ ಅವರ ಆಶೀರ್ವಾದ, ಇದು ಅವರ ಆದರ್ಶಗಳಿಗೆ ನಮ್ಮ ಸಾಮೂಹಿಕ ಗೌರವ, ಮತ್ತು ನಿಮ್ಮೆಲ್ಲ ಚಿಂತಕರೊಂದಿಗಿನ ನನ್ನ ದಶಕಗಳ ವೈಯಕ್ತಿಕ ಬಾಂಧವ್ಯದ ಪರಿಣಾಮವಾಗಿ ನಾನು ನಿಮ್ಮೊಂದಿಗೆ ಇರಲು ಅವಕಾಶ ಪಡೆದಿದ್ದೇನೆ. ನಾನು ನಿಮ್ಮನ್ನು ಭೇಟಿಯಾದಾಗ ಮತ್ತು ಅವರೊಂದಿಗೆ ಮಾತನಾಡುವಾಗಲೆಲ್ಲಾ ನಾನು ಒಂದು ಅನನ್ಯ ಶಕ್ತಿ ಮತ್ತು ಸ್ಫೂರ್ತಿಯಿಂದ ತುಂಬಿದ್ದೇನೆ. ಇದೇ ರೀತಿಯ 9 ಸಭಾಂಗಣಗಳನ್ನು ಸ್ಥಾಪಿಸಲಾಗಿದೆ ಎಂಬುದು ನನಗೆ ತಿಳಿದುಬಂದಿದೆ. ಅಲ್ಲಿ ನಮ್ಮ ಎಲ್ಲಾ ಆರ್ಯ ಸಮಾಜದ ಸದಸ್ಯರು ವೀಡಿಯೊ ಲಿಂಕ್ ಮೂಲಕ ಈ ಕಾರ್ಯಕ್ರಮ ವೀಕ್ಷಿಸುತ್ತಿದ್ದಾರೆ. ನಾನು ಅವರನ್ನು ನೋಡಲು ಸಾಧ್ಯವಾಗದಿದ್ದರೂ, ನಾನು ಇಲ್ಲಿಂದ ಅವರಿಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.

ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

October 31st, 09:00 am

ಸರ್ದಾರ್ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಐತಿಹಾಸಿಕ ಸಂದರ್ಭ, ಏಕತಾನಗರದಲ್ಲಿ ಈ ಶುಭ ಬೆಳಗ್ಗೆ, ಈ ವಿಹಂಗಮ ನೋಟ, ಸರ್ದಾರ್ ಸಾಹೇಬರ ಪಾದಗಳ ಬಳಿ ನಮ್ಮ ಉಪಸ್ಥಿತಿಯ ಮೂಲಕ ಇಂದು ನಾವೆಲ್ಲರೂ ಒಂದು ಮಹಾನ್ ಕ್ಷಣಕ್ಕೆ ಸಾಕ್ಷಿಯಾಗುತ್ತಿದ್ದೇವೆ. ದೇಶಾದ್ಯಂತ ನಡೆಯುತ್ತಿರುವ ಏಕತಾ ಓಟ, ಕೋಟ್ಯಂತರ ಭಾರತೀಯರ ಉತ್ಸಾಹ, ನಾವು ಹೊಸ ಭಾರತದ ಸಂಕಲ್ಪವನ್ನು ನೇರವಾಗಿ ಅನುಭವಿಸುತ್ತಿದ್ದೇವೆ. ನಿನ್ನೆ ಸಂಜೆ ನಡೆದ ಅದ್ಭುತ ಪ್ರಸ್ತುತಿ ಸೇರಿದಂತೆ ಇತ್ತೀಚೆಗೆ ಇಲ್ಲಿ ನಡೆದ ಕಾರ್ಯಕ್ರಮಗಳು ಭೂತಕಾಲದ ಸಂಪ್ರದಾಯ, ವರ್ತಮಾನದ ಕಠಿಣ ಪರಿಶ್ರಮ, ಶೌರ್ಯ ಮತ್ತು ಭವಿಷ್ಯದ ಸಾಧನೆಗಳ ಒಂದು ನೋಟವನ್ನು ಹೊಂದಿದ್ದವು. ಸರ್ದಾರ್ ಸಾಹೇಬರ 150ನೇ ಜನ್ಮ ದಿನಾಚರಣೆ ಸ್ಮರಣಾರ್ಥವಾಗಿ, ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಸರ್ದಾರ್ ಸಾಹೇಬರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿವಸ್(ರಾಷ್ಟ್ರೀಯ ಏಕತಾ ದಿನ)ದಂದು ಎಲ್ಲಾ 140 ಕೋಟಿ ದೇಶವಾಸಿಗಳಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು ಮತ್ತು ಧನ್ಯವಾದಗಳನ್ನು ಸಲ್ಲಿಸುತ್ತೇನೆ.

ಗುಜರಾತ್‌ ನ ಕೆವಾಡಿಯಾದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು

October 31st, 08:44 am

ಗುಜರಾತ್ ನ ಕೆವಾಡಿಯಾದಲ್ಲಿ ಇಂದು ನಡೆದ ರಾಷ್ಟ್ರೀಯ ಏಕತಾ ದಿನ ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಾತನಾಡಿದರು. ಸರ್ದಾರ್ ಪಟೇಲ್ ಅವರ 150ನೇ ಜಯಂತಿಯು ಒಂದು ಐತಿಹಾಸಿಕ ಸಂದರ್ಭವಾಗಿದೆ ಎಂದು ಅವರು ಹೇಳಿದರು. ಏಕತಾ ನಗರದ ಮುಂಜಾವು ದೈವಿಕ ಮತ್ತು ಸುಂದರ ಎಂದು ಬಣ್ಣಿಸಿದ ಶ್ರೀ ಮೋದಿ, ಸರ್ದಾರ್ ಪಟೇಲ್ ಅವರ ಪಾದಗಳ ಬಳಿ ನೆರೆದ ಜನಸಮೂಹವನ್ನು ಉಲ್ಲೇಖಿಸಿದರು ಮತ್ತು ದೇಶವು ಬಹಳ ಮಹತ್ವದ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ ಎಂದು ಹೇಳಿದರು. ದೇಶಾದ್ಯಂತ ನಡೆದ ಏಕತಾ ಓಟ ಮತ್ತು ಲಕ್ಷಾಂತರ ಭಾರತೀಯರ ಉತ್ಸಾಹಭರಿತ ಭಾಗವಹಿಸುವಿಕೆಯನ್ನು ಅವರು ಎತ್ತಿ ತೋರಿಸಿದರು, ನವ ಭಾರತಕ್ಕಾಗಿ ಸಂಕಲ್ಪವು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಒತ್ತಿ ಹೇಳಿದರು. ಹಿಂದೆ ನಡೆದ ಕಾರ್ಯಕ್ರಮಗಳು ಮತ್ತು ನಿನ್ನೆ ಸಂಜೆ ನಡೆದ ಗಮನಾರ್ಹ ಪ್ರಸ್ತುತಿಯನ್ನು ಉಲ್ಲೇಖಿಸಿದ ಪ್ರಧಾನಮಂತ್ರಿ, ಹಿಂದಿನ ಸಂಪ್ರದಾಯಗಳು, ಇಂದಿನ ಕಠಿಣ ಪರಿಶ್ರಮ ಮತ್ತು ಶೌರ್ಯ ಮತ್ತು ಭವಿಷ್ಯದ ಸಾಧನೆಗಳನ್ನು ಇವುಗಳು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು. ಸರ್ದಾರ್ ಪಟೇಲ್ ಅವರ 150 ನೇ ಜಯಂತಿಯ ಸ್ಮರಣಾರ್ಥ ನಾಣ್ಯ ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು. ಸರ್ದಾರ್ ಪಟೇಲ್ ಅವರ ಜನ್ಮ ದಿನಾಚರಣೆ ಮತ್ತು ರಾಷ್ಟ್ರೀಯ ಏಕತಾ ದಿನದ ಸಂದರ್ಭದಲ್ಲಿ ದೇಶದ 140 ಕೋಟಿ ನಾಗರಿಕರಿಗೆ ಪ್ರಧಾನಮಂತ್ರಿಯವರು ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದರು.

ಉತ್ತರ ಪ್ರದೇಶದ ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

August 02nd, 11:30 am

ನಮಃ ಪಾರ್ವತಿ ಪತಯೇ, ಹರ್ ಹರ್ ಮಹಾದೇವ, ಪವಿತ್ರ ಶ್ರಾವಣ ಮಾಸದ ಇಂದು, ಕಾಶಿಯ ನನ್ನ ಕುಟುಂಬ ಸದಸ್ಯರನ್ನು ಭೇಟಿಯಾಗುವ ಅವಕಾಶ ನನಗೆ ಸಿಕ್ಕಿದೆ. ಕಾಶಿಯ ಪ್ರತಿಯೊಬ್ಬ ಕುಟುಂಬ ಸದಸ್ಯರಿಗೂ ನಾನು ನಮಸ್ಕರಿಸುತ್ತೇನೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು

August 02nd, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರಾವಣ ಮಾಸದ ಶುಭಸಂದರ್ಭದಲ್ಲಿ ವಾರಾಣಸಿಯ ಜನರನ್ನು ಭೇಟಿಯಾಗುತ್ತಿರುವ ಬಗ್ಗೆ ತಮ್ಮ ಹೃತ್ಪೂರ್ವಕ ಭಾವನೆಗಳನ್ನು ವ್ಯಕ್ತಪಡಿಸಿದರು. ವಾರಾಣಸಿಯ ಜನರೊಂದಿಗಿನ ತಮ್ಮ ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ, ನಗರದ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ಗೌರವಯುತ ಶುಭಾಶಯಗಳನ್ನು ತಿಳಿಸಿದರು. ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ದೇಶಾದ್ಯಂತದ ರೈತರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕ ಸಾಧಿಸಿದ್ದಕ್ಕೆ ಶ್ರೀ ಮೋದಿ ತೃಪ್ತಿ ವ್ಯಕ್ತಪಡಿಸಿದರು.

ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ ಆದಿ ತಿರುವಥಿರೈ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 27th, 12:30 pm

ಅತ್ಯಂತ ಗೌರವಾನ್ವಿತ ಆಧೀನಂ ಮಠಾಧೀಶಗನ್ (ಮುಖ್ಯಸ್ಥರೆ), ಚಿನ್ಮಯ ಮಿಷನ್ ಸ್ವಾಮಿಗಳೆ, ತಮಿಳುನಾಡು ರಾಜ್ಯಪಾಲರಾದ ಆರ್ ಎನ್ ರವಿ ಜಿ, ನನ್ನ ಸಂಪುಟ ಸಹೋದ್ಯೋಗಿ ಡಾ. ಎಲ್ ಮುರುಗನ್ ಜಿ, ಸ್ಥಳೀಯ ಸಂಸದರಾದ ತಿರುಮ-ವಲವನ್ ಜಿ, ವೇದಿಕೆಯಲ್ಲಿರುವ ತಮಿಳುನಾಡು ಸಚಿವರೆ, ಸಂಸತ್ತಿನ ನನ್ನ ಸಹೋದ್ಯೋಗಿ ಶ್ರೀ ಇಳಯರಾಜ ಜಿ, ಇಲ್ಲಿ ನೆರೆದಿರುವ ಎಲ್ಲಾ ಭಕ್ತರೆ, ವಿದ್ಯಾರ್ಥಿಗಳೆ, ಸಹೋದರ ಸಹೋದರಿಯರೆ! ನಮಃ ಶಿವಾಯ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ಗಂಗೈಕೊಂಡ ಚೋಳಪುರಂನಲ್ಲಿ ʻಆದಿ ತಿರುವಥಿರೈʼ ಉತ್ಸವ ಉದ್ದೇಶಿಸಿ ಮಾತನಾಡಿದರು

July 27th, 12:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ಗಂಗೈಕೊಂಡ ಚೋಳಪುರಂ ದೇವಸ್ಥಾನದಲ್ಲಿ `ಆದಿ ತಿರುವಥಿರೈ' ಉತ್ಸವ ಉದ್ದೇಶಿಸಿ ಮಾತನಾಡಿದರು. ಸರ್ವಶಕ್ತನಾದ ಶಿವನಿಗೆ ನಮಿಸುತ್ತಾ, ರಾಜ ರಾಜ ಚೋಳನ ಪವಿತ್ರ ಭೂಮಿಯಲ್ಲಿ ದೈವಿಕ ಶಿವದರ್ಶನದ ಮೂಲಕ ಅನುಭವಿಸಿದ ಆಳವಾದ ಆಧ್ಯಾತ್ಮಿಕ ಶಕ್ತಿಯ ಬಗ್ಗೆ ಮಾತನಾಡಿದರು. ಶ್ರೀ ಇಳಯರಾಜಾ ಅವರ ಸಂಗೀತ ಮತ್ತು ಒಥುವರರ ಪವಿತ್ರ ಪಠಣದೊಂದಿಗೆ, ಆಧ್ಯಾತ್ಮಿಕ ವಾತಾವರಣವು ಆತ್ಮವನ್ನು ಆಳವಾಗಿ ಪ್ರಭಾವಿಸಿದೆ ಎಂದು ಶ್ರೀ ಮೋದಿ ಹೇಳಿದರು.

ತಮಿಳುನಾಡಿನ ತೂತುಕುಡಿಯಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಮಾರಂಭ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ

July 26th, 08:16 pm

ತಮಿಳುನಾಡು ರಾಜ್ಯಪಾಲರಾದ ಗೌರವಾನ್ವಿತ ಆರ್.ಎನ್. ರವಿ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಕಿಂಜರಾಪು ರಾಮಮೋಹನ್ ನಾಯ್ಡು ಜಿ, ಡಾ. ಎಲ್. ಮುರುಗನ್ ಜಿ, ತಮಿಳುನಾಡು ಸಚಿವರಾದ ತಂಗಂ ತೆನ್ನರಸು ಜಿ, ಡಾ. ಟಿ.ಆರ್.ಬಿ. ರಾಜಾ ಜಿ, ಪಿ. ಗೀತಾ ಜೀವನ್ ಜಿ, ಅನಿತಾ ಆರ್. ರಾಧಾಕೃಷ್ಣನ್ ಜಿ, ಸಂಸದೆ ಕನಿಮೊಳಿ ಜಿ, ತಮಿಳುನಾಡು ಬಿಜೆಪಿ ಅಧ್ಯಕ್ಷರು ಮತ್ತು ನಮ್ಮ ಶಾಸಕರಾದ ನಾಯನಾರ್ ನಾಗೇಂದ್ರನ್ ಜಿ, ಮತ್ತು ತಮಿಳುನಾಡಿನ ನನ್ನ ಸಹೋದರ ಸಹೋದರಿಯರೆ!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು

July 26th, 07:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಮಿಳುನಾಡಿನ ತೂತುಕುಡಿಯಲ್ಲಿ ₹4800 ಕೋಟಿಗೂ ಹೆಚ್ಚು ಮೌಲ್ಯದ ದೇಶದ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಲೋಕಾರ್ಪಣೆ ಮಾಡಿದರು. ಪ್ರಾದೇಶಿಕ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುವ, ಸಾರಿಗೆ ಸೌಲಭ್ಯದ ದಕ್ಷತೆಯನ್ನು ಹೆಚ್ಚಿಸುವ, ಶುದ್ಧ ಇಂಧನ ಮೂಲಸೌಕರ್ಯವನ್ನು ಬಲಪಡಿಸುವ ಹಾಗು ತಮಿಳುನಾಡಿನಾದ್ಯಂತ ನಾಗರಿಕರ ಜೀವನ ಮಟ್ಟವನ್ನು ಸುಧಾರಿಸುವ ಬಹು ವಲಯಗಳಲ್ಲಿ ಪ್ರಮುಖವಾದ ಯೋಜನೆಗಳ ಸರಣಿ ಇದಾಗಿದೆ. ಕಾರ್ಗಿಲ್ ವಿಜಯ ದಿವಸದ ಸಂದರ್ಭದಲ್ಲಿ, ಶ್ರೀ ಮೋದಿ ಕಾರ್ಗಿಲ್ ನ ವೀರ ಸೇನಾನಿಗಳಿಗೆ ಗೌರವ ಸಲ್ಲಿಸಿದರು ಮತ್ತು ವೀರ ಯೋಧರಿಗೆ ನಮನ ಸಲ್ಲಿಸಿದರು ಮತ್ತು ರಾಷ್ಟ್ರಕ್ಕಾಗಿ ಬೆಲೆಕಟ್ಟಲಾಗದ ತ್ಯಾಗ ಮಾಡಿದ ಹುತಾತ್ಮರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದರು.

ವಾರಣಾಸಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ/ ಉದ್ಘಾಟನೆ ಸಂದರ್ಭದಲ್ಲಿ ಪ್ರಧಾನಮಂತ್ರಿಯ ಅವರ ಭಾಷಣ

April 11th, 11:00 am

ವೇದಿಕೆಯಲ್ಲಿ ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್‌ ಪಟೇಲ್‌; ಮುಖ್ಯಮಂತ್ರಿ, ಗೌರವಾನ್ವಿತ ಶ್ರೀ ಯೋಗಿ ಆದಿತ್ಯನಾಥ್‌; ಉಪ ಮುಖ್ಯಮಂತ್ರಿಗಳಾದ ಕೇಶವ್‌ ಪ್ರಸಾದ್‌ ಮೌರ್ಯ ಮತ್ತು ಬ್ರಜೇಶ್‌ ಪಾಠಕ್‌; ಹಾಜರಿದ್ದ ಗೌರವಾನ್ವಿತ ಮಂತ್ರಿಗಳು; ಇತರ ಸಾರ್ವಜನಿಕ ಪ್ರತಿನಿಧಿಗಳು; ಬನಾಸ್‌ ಡೈರಿಯ ಅಧ್ಯಕ್ಷ ಶಂಕರ್‌ ಭಾಯ್‌ ಚೌಧರಿ; ಮತ್ತು ತಮ್ಮ ಆಶೀರ್ವಾದವನ್ನು ಅರ್ಪಿಸಲು ಇಷ್ಟು ದೊಡ್ಡ ಸಂಖ್ಯೆಯಲ್ಲಿಇಲ್ಲಿ ನೆರೆದಿರುವ ನನ್ನ ಪ್ರೀತಿಯ ಕುಟುಂಬ ಸದಸ್ಯರೆಲ್ಲರೂ- ನಮ್ಮ ಕಾಶಿ ಕುಟುಂಬದ ಪ್ರೀತಿಯ ಜನರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳು. ಈ ಸಂದರ್ಭದಲ್ಲಿ ನಾನು ವಿನಮ್ರತೆಯಿಂದ ನಿಮ್ಮ ಆಶೀರ್ವಾದವನ್ನು ಕೋರುತ್ತೇನೆ. ಈ ಅಗಾಧ ಪ್ರೀತಿಗೆ ನಾನು ನಿಜವಾಗಿಯೂ ಋುಣಿಯಾಗಿದ್ದೇನೆ. ಕಾಶಿ ನನ್ನದು, ನಾನು ಕಾಶಿಗೆ ಸೇರಿದವನು.